Homeಆರೋಗ್ಯಭಯಪಡಬೇಕಿಲ್ಲ, ಇದು ಕೇವಲ ಜ್ವರದಂತೆ ಅಷ್ಟೇ: ಕೊರೊನಾ ವೈರಸ್‌ನಿಂದ ಗುಣಮುಖನಾದವನ ಅನುಭವ

ಭಯಪಡಬೇಕಿಲ್ಲ, ಇದು ಕೇವಲ ಜ್ವರದಂತೆ ಅಷ್ಟೇ: ಕೊರೊನಾ ವೈರಸ್‌ನಿಂದ ಗುಣಮುಖನಾದವನ ಅನುಭವ

- Advertisement -
- Advertisement -

ಕೊರೊನಾ ವೈರಸ್‌ ಬಗ್ಗೆ ಭಯಪಡಬೇಕಾಗಿಲ್ಲ. ಆರೋಗ್ಯವಂತ ವ್ಯಕ್ತಿಗಳಿಗೆ ಚಿಕಿತ್ಸೆಯು ತುಂಬಾ ಸುಗಮವಾಗಿರುತ್ತದೆ ಎಂದು ದೆಹಲಿಯಲ್ಲಿ ಕೊರೊನಾ ಬಾಧಿತನಾಗಿ ಚೇತರಿಸಿಕೊಂಡ 45 ವರ್ಷದ ಉದ್ಯಮಿಯೊಬ್ಬರು ತಿಳಿಸಿದ್ದಾರೆ.

ದೆಹಲಿಯ ಸಫ್ದರ್‌ ಜಂಗ್ ಆಸ್ಪತ್ರೆಯಲ್ಲಿ ಕಳೆದ ಎರಡು ವಾರಗಳಿಂದ ಚಿಕಿತ್ಸೆ ಪಡೆಯುತ್ತಿದ್ದ ಅವರು, ಅಲ್ಲಿನ ಸೌಲಭ್ಯಗಳನ್ನು ಶ್ಲಾಘಿಸಿದ್ದಾರೆ. “ಭಯಪಡುವ ಅಗತ್ಯವಿಲ್ಲ. ಇದು ಸಾಮಾನ್ಯ ಜ್ವರದಂತೆ. ಆರೋಗ್ಯವಂತ ವ್ಯಕ್ತಿಯು ವೈದ್ಯರನ್ನು ತಲುಪಿದರೆ, ಸುಲಭದಲ್ಲಿ ಗುಣಪಡಿಸಬಹುದು. ನಮ್ಮ ಆರೋಗ್ಯ ವ್ಯವಸ್ಥೆಯು ಉತ್ತಮವಾಗಿದೆ ಎಂದಿದ್ದಾರೆ.

ಭಾನುವಾರದಂದು ಆಸ್ಪತ್ರೆಯಿಂದ ಸಂಪೂರ್ಣ ಗುಣಮುಖರಾಗಿ ಬಿಡುಗಡೆಯಾದ ಅವರು ತಮ್ಮ ಅನುಭವವನ್ನು ವಿವರಿಸುತ್ತಾ, ಆಸ್ಪತ್ರೆಯ ವೈದ್ಯರ ತಂಡವು ತುಂಬಾ ಧೈರ್ಯ ತುಂಬಿದೆ. ಇನ್ನೂ 14 ದಿನಗಳ ಕಾಲ ಮನೆಯಲ್ಲಿಯೇ ಇರಲು ಸೂಚಿಸಲಾಗಿದೆ ಎಂದು ಹೇಳಿದ್ದಾರೆ.

“ನಾನು ಫೆಬ್ರವರಿ 25ರಂದು ಯುರೋಪಿನಿಂದ ಮರಳಿದೆ ಮತ್ತು ಮರುದಿನ ನನಗೆ ಜ್ವರ ಬಂತು. ವೈದ್ಯರ ಬಳಿಗೆ ಹೋದೆ. ಇದು ಗಂಟಲಿನ ಸೋಂಕು ಎಂದು ಹೇಳಿದ ಅವರು ನನಗೆ ಮೂರು ದಿನಗಳ ಕಾಲ ಔಷಧಿ ನೀಡಿದರು. ನಾನು 28 ರಂದು ಚೇತರಿಸಿಕೊಂಡೆ. ಆದರೆ 29 ರಂದು ಮತ್ತೆ ಜ್ವರ ಬಂತು. ಆಗ ನಾನು ರಾಮ್ ಮನೋಹರ್ ಲೋಹಿಯಾ ಆಸ್ಪತ್ರೆಗೆ ಹೋದೆ. ಮಾರ್ಚ್ 1 ರಂದು ಕೊರೊನಾ ಪರೀಕ್ಷೆ ಮಾಡಿಸಿದಾಗ ಅದು ಇರುವುದು ಖಚಿತವಾಯಿತು” ಎಂದು ಅವರು ಹೇಳಿದರು.

“ಪ್ರಾಮಾಣಿಕವಾಗಿ, ನನಗೆ ಸೋಂಕು ತಗುಲಿದೆ ಎಂದು ಅವರು ಹೇಳಿದ ಸಮಯದಲ್ಲಿ ಮಾತ್ರ ಇದು ಕಷ್ಟವೆನಿಸಿತ್ತು. ಆದರೆ ಮರುದಿನ ನನ್ನನ್ನು ಸ್ಥಳಾಂತರಿಸಿದ ಸಫ್ದರ್ ಜಂಗ್‌ ವೈದ್ಯರ ತಂಡವು ನನ್ನನ್ನು ನೋಡಲು ಬಂದಾಗ, ಅವರು ನನ್ನನ್ನು ತುಂಬಾ ಆರಾಮದಾಯಕವಾಗಿಸಿದರು ‘ಇದು ಗುಣಪಡಿಸಬಹುದು , ನೀವು ಆರೋಗ್ಯವಂತ ವ್ಯಕ್ತಿ ಮತ್ತು ಅದು ಕೇವಲ ಶೀತ ಮತ್ತು ಕೆಮ್ಮು ಇದ್ದಷ್ಟೇ ಮಾತ್ರ. ಹಾಗಾಗಿ ಅದು ಹೋಗುತ್ತದೆ. ಇದು ಸಾಮಾನ್ಯ ಶೀತ ಮತ್ತು ಕೆಮ್ಮುಗಿಂತ ಸ್ವಲ್ಪ ಹೆಚ್ಚು ಸಮಯ ತೆಗೆದುಕೊಳ್ಳುತ್ತದೆ ‘ಎಂದು ಅವರು ಹೇಳಿದರು.

“ನಾನು ವೈದ್ಯನಲ್ಲ. ಆದರೆ ಇದು ಸಾಮಾನ್ಯ ಶೀತ ಮತ್ತು ಕೆಮ್ಮುಗಿಂತ ಸ್ವಲ್ಪ ಭಿನ್ನವಾಗಿತ್ತು. ನಾನು ಸಫ್ದರ್ಜಂಗ್‌ನ ಪ್ರತ್ಯೇಕ ವಾರ್ಡ್‌ನಲ್ಲಿದ್ದೆ, ಇದಕ್ಕಾಗಿ ಭಾರತ ಸರ್ಕಾರವು ಕಲ್ಪಿಸಿರುವ ಸೌಲಭ್ಯಗಳು ತುಂಬಾ ಉತ್ತಮವಾಗಿವೆ, ಇದು ನಾನು ನೋಡಿದ ಅತ್ಯುತ್ತಮವಾದ ಆಸ್ಪತ್ರೆಯಾಗಿದೆ. ನಾನು ಸ್ನಾನಗೃಹದೊಂದಿಗೆ ಖಾಸಗಿ ಕೋಣೆಯನ್ನು ಹೊಂದಿದ್ದೆ” ಎಂದು ಅವರು ಹೇಳಿದರು.

ನಗರದಲ್ಲಿ ವರದಿಯಾದ ಏಳು ಸಕಾರಾತ್ಮಕ ಪ್ರಕರಣಗಳಲ್ಲಿ ದೆಹಲಿ ನಿವಾಸಿಯೂ ಸೇರಿದ್ದಾರೆ. ಈ ಪೈಕಿ ಈ ಹಿಂದೆ COVID-19 ಖಾಯಿಲೆ ಇದೆಯೆಂದು ಪರೀಕ್ಷೆಯಿಂದ ಖಚಿತವಾಗಿ ಆಸ್ಪತ್ರೆಗಳಿಗೆ ದಾಖಲಾಗಿರುವ ಇಬ್ಬರು ವ್ಯಕ್ತಿಗಳು ಗುಣಮುಖರಾಗಿದ್ದು ಚಿಕಿತ್ಸೆಯ ನಂತರ ಬಿಡುಗಡೆ ಮಾಡಲಾಗಿದೆ ಎಂದು ದೆಹಲಿ ಆರೋಗ್ಯ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...

ಒಡಿಶಾ| ದಲಿತರು ವಾಸಿಸುವ ಪ್ರದೇಶಕ್ಕೆ ಕುಡಿಯುವ ನೀರು-ವಿದ್ಯುತ್ ಸಂಪರ್ಕ ಕಡಿತ

ಒಡಿಶಾದ ಬಲಂಗೀರ್ ಜಿಲ್ಲೆಯಲ್ಲಿ ಜಾತಿ ಆಧಾರಿತ ತಾರತಮ್ಯವಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ. ಆದರೆ, ಗ್ರಾಮದ ಅಧಿಕಾರಿಯೊಬ್ಬರು ಈ ಅಡಚಣೆಗೆ ಸ್ಥಳೀಯ ಕಲಹ ಕಾರಣ ಎಂದು ಆರೋಪಿಸಿದ್ದಾರೆ. ಜಿಲ್ಲೆಯ ತುರೆಕೆಲಾ ಬ್ಲಾಕ್‌ನ ಡುಮೆರ್ಚುವಾನ್ ಗ್ರಾಮದಲ್ಲಿ...

ತಮಿಳುನಾಡು ವಿಧಾನಸಭಾ ಚುನಾವಣೆ: ಡಿಎಂಕೆ ನೇತೃತ್ವದ ಮೈತ್ರಿಕೂಟಕ್ಕೆ ಡಿಎಂಡಿಕೆ ಸೇರ್ಪಡೆ

ಚೆನ್ನೈ: ದಿವಂಗತ ನಟ ವಿಜಯಕಾಂತ್ ಅವರ ದೇಶೀಯ ಮುರ್ಪೋಕ್ಕು ದ್ರಾವಿಡ ಕಳಗಂ (ಡಿಎಂಡಿಕೆ) ಗುರುವಾರ ದ್ರಾವಿಡ ಮುನ್ನೇತ್ರ ಕಳಗಂ ನೇತೃತ್ವದ ಜಾತ್ಯತೀತ ಪ್ರಗತಿಪರ ಒಕ್ಕೂಟ (ಎಸ್‌ಪಿಎ)ವನ್ನು 21ವರ್ಷಗಳ ಅಸ್ತಿತ್ವದ ನಂತರ ಮೊದಲ ಬಾರಿಗೆ...

ಟ್ರಕ್ ಚಾಲಕ ರಸ್ತೆಯಲ್ಲಿ ನಮಾಝ್ ಮಾಡಿದ್ದರಿಂದ ಟ್ರಾಫಿಕ್ ಜಾಮ್ ಎಂದು ಸುಳ್ಳು ಸುದ್ದಿ ಪ್ರಸಾರ : ಝೀ ನ್ಯೂಸ್‌ಗೆ 1 ಲಕ್ಷ ರೂ. ದಂಡ

ಮುಸ್ಲಿಂ ವ್ಯಕ್ತಿಯೊಬ್ಬರು ನಮಾಝ್ ಮಾಡಲು ಹೆದ್ದಾರಿ ಮಧ್ಯೆ ಟ್ರಕ್‌ ನಿಲ್ಲಿಸಿದ್ದರಿಂದ ಟ್ರಾಫಿಕ್ ಜಾಮ್‌ ಉಂಟಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿದ ಝೀ ನ್ಯೂಸ್‌ ಚಾನೆಲ್‌ಗೆ ಸುದ್ದಿ ಪ್ರಸಾರಕರು ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರ(ಎನ್‌ಬಿಡಿಎಸ್‌ಎ)...

ಗುಜರಾತ್‌| ಜಾತಿ ಆಧಾರಿತ ಜಗಳದಲ್ಲಿ ದಲಿತ ಯುವಕನ ಮೇಲೆ ಚಾಕುವಿನಿಂದ ದಾಳಿ

ಶನಿವಾರ ತಡರಾತ್ರಿ ರಾಣಿಪ್‌ನಲ್ಲಿ ನಡೆದ ಸಣ್ಣ ಭಿನ್ನಾಭಿಪ್ರಾಯವೊಂದು ಹಿಂಸಾಚಾರಕ್ಕೆ ತಿರುಗಿದ್ದು, 25 ವರ್ಷದ ದಲಿತ ಯುವಕ ಸಾಹಿಲ್ ವಘೇಲಾ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ. ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಘಟನೆಯು ಈ ಪ್ರದೇಶದಲ್ಲಿ...