Homeಆರೋಗ್ಯಭಯಪಡಬೇಕಿಲ್ಲ, ಇದು ಕೇವಲ ಜ್ವರದಂತೆ ಅಷ್ಟೇ: ಕೊರೊನಾ ವೈರಸ್‌ನಿಂದ ಗುಣಮುಖನಾದವನ ಅನುಭವ

ಭಯಪಡಬೇಕಿಲ್ಲ, ಇದು ಕೇವಲ ಜ್ವರದಂತೆ ಅಷ್ಟೇ: ಕೊರೊನಾ ವೈರಸ್‌ನಿಂದ ಗುಣಮುಖನಾದವನ ಅನುಭವ

- Advertisement -
- Advertisement -

ಕೊರೊನಾ ವೈರಸ್‌ ಬಗ್ಗೆ ಭಯಪಡಬೇಕಾಗಿಲ್ಲ. ಆರೋಗ್ಯವಂತ ವ್ಯಕ್ತಿಗಳಿಗೆ ಚಿಕಿತ್ಸೆಯು ತುಂಬಾ ಸುಗಮವಾಗಿರುತ್ತದೆ ಎಂದು ದೆಹಲಿಯಲ್ಲಿ ಕೊರೊನಾ ಬಾಧಿತನಾಗಿ ಚೇತರಿಸಿಕೊಂಡ 45 ವರ್ಷದ ಉದ್ಯಮಿಯೊಬ್ಬರು ತಿಳಿಸಿದ್ದಾರೆ.

ದೆಹಲಿಯ ಸಫ್ದರ್‌ ಜಂಗ್ ಆಸ್ಪತ್ರೆಯಲ್ಲಿ ಕಳೆದ ಎರಡು ವಾರಗಳಿಂದ ಚಿಕಿತ್ಸೆ ಪಡೆಯುತ್ತಿದ್ದ ಅವರು, ಅಲ್ಲಿನ ಸೌಲಭ್ಯಗಳನ್ನು ಶ್ಲಾಘಿಸಿದ್ದಾರೆ. “ಭಯಪಡುವ ಅಗತ್ಯವಿಲ್ಲ. ಇದು ಸಾಮಾನ್ಯ ಜ್ವರದಂತೆ. ಆರೋಗ್ಯವಂತ ವ್ಯಕ್ತಿಯು ವೈದ್ಯರನ್ನು ತಲುಪಿದರೆ, ಸುಲಭದಲ್ಲಿ ಗುಣಪಡಿಸಬಹುದು. ನಮ್ಮ ಆರೋಗ್ಯ ವ್ಯವಸ್ಥೆಯು ಉತ್ತಮವಾಗಿದೆ ಎಂದಿದ್ದಾರೆ.

ಭಾನುವಾರದಂದು ಆಸ್ಪತ್ರೆಯಿಂದ ಸಂಪೂರ್ಣ ಗುಣಮುಖರಾಗಿ ಬಿಡುಗಡೆಯಾದ ಅವರು ತಮ್ಮ ಅನುಭವವನ್ನು ವಿವರಿಸುತ್ತಾ, ಆಸ್ಪತ್ರೆಯ ವೈದ್ಯರ ತಂಡವು ತುಂಬಾ ಧೈರ್ಯ ತುಂಬಿದೆ. ಇನ್ನೂ 14 ದಿನಗಳ ಕಾಲ ಮನೆಯಲ್ಲಿಯೇ ಇರಲು ಸೂಚಿಸಲಾಗಿದೆ ಎಂದು ಹೇಳಿದ್ದಾರೆ.

“ನಾನು ಫೆಬ್ರವರಿ 25ರಂದು ಯುರೋಪಿನಿಂದ ಮರಳಿದೆ ಮತ್ತು ಮರುದಿನ ನನಗೆ ಜ್ವರ ಬಂತು. ವೈದ್ಯರ ಬಳಿಗೆ ಹೋದೆ. ಇದು ಗಂಟಲಿನ ಸೋಂಕು ಎಂದು ಹೇಳಿದ ಅವರು ನನಗೆ ಮೂರು ದಿನಗಳ ಕಾಲ ಔಷಧಿ ನೀಡಿದರು. ನಾನು 28 ರಂದು ಚೇತರಿಸಿಕೊಂಡೆ. ಆದರೆ 29 ರಂದು ಮತ್ತೆ ಜ್ವರ ಬಂತು. ಆಗ ನಾನು ರಾಮ್ ಮನೋಹರ್ ಲೋಹಿಯಾ ಆಸ್ಪತ್ರೆಗೆ ಹೋದೆ. ಮಾರ್ಚ್ 1 ರಂದು ಕೊರೊನಾ ಪರೀಕ್ಷೆ ಮಾಡಿಸಿದಾಗ ಅದು ಇರುವುದು ಖಚಿತವಾಯಿತು” ಎಂದು ಅವರು ಹೇಳಿದರು.

“ಪ್ರಾಮಾಣಿಕವಾಗಿ, ನನಗೆ ಸೋಂಕು ತಗುಲಿದೆ ಎಂದು ಅವರು ಹೇಳಿದ ಸಮಯದಲ್ಲಿ ಮಾತ್ರ ಇದು ಕಷ್ಟವೆನಿಸಿತ್ತು. ಆದರೆ ಮರುದಿನ ನನ್ನನ್ನು ಸ್ಥಳಾಂತರಿಸಿದ ಸಫ್ದರ್ ಜಂಗ್‌ ವೈದ್ಯರ ತಂಡವು ನನ್ನನ್ನು ನೋಡಲು ಬಂದಾಗ, ಅವರು ನನ್ನನ್ನು ತುಂಬಾ ಆರಾಮದಾಯಕವಾಗಿಸಿದರು ‘ಇದು ಗುಣಪಡಿಸಬಹುದು , ನೀವು ಆರೋಗ್ಯವಂತ ವ್ಯಕ್ತಿ ಮತ್ತು ಅದು ಕೇವಲ ಶೀತ ಮತ್ತು ಕೆಮ್ಮು ಇದ್ದಷ್ಟೇ ಮಾತ್ರ. ಹಾಗಾಗಿ ಅದು ಹೋಗುತ್ತದೆ. ಇದು ಸಾಮಾನ್ಯ ಶೀತ ಮತ್ತು ಕೆಮ್ಮುಗಿಂತ ಸ್ವಲ್ಪ ಹೆಚ್ಚು ಸಮಯ ತೆಗೆದುಕೊಳ್ಳುತ್ತದೆ ‘ಎಂದು ಅವರು ಹೇಳಿದರು.

“ನಾನು ವೈದ್ಯನಲ್ಲ. ಆದರೆ ಇದು ಸಾಮಾನ್ಯ ಶೀತ ಮತ್ತು ಕೆಮ್ಮುಗಿಂತ ಸ್ವಲ್ಪ ಭಿನ್ನವಾಗಿತ್ತು. ನಾನು ಸಫ್ದರ್ಜಂಗ್‌ನ ಪ್ರತ್ಯೇಕ ವಾರ್ಡ್‌ನಲ್ಲಿದ್ದೆ, ಇದಕ್ಕಾಗಿ ಭಾರತ ಸರ್ಕಾರವು ಕಲ್ಪಿಸಿರುವ ಸೌಲಭ್ಯಗಳು ತುಂಬಾ ಉತ್ತಮವಾಗಿವೆ, ಇದು ನಾನು ನೋಡಿದ ಅತ್ಯುತ್ತಮವಾದ ಆಸ್ಪತ್ರೆಯಾಗಿದೆ. ನಾನು ಸ್ನಾನಗೃಹದೊಂದಿಗೆ ಖಾಸಗಿ ಕೋಣೆಯನ್ನು ಹೊಂದಿದ್ದೆ” ಎಂದು ಅವರು ಹೇಳಿದರು.

ನಗರದಲ್ಲಿ ವರದಿಯಾದ ಏಳು ಸಕಾರಾತ್ಮಕ ಪ್ರಕರಣಗಳಲ್ಲಿ ದೆಹಲಿ ನಿವಾಸಿಯೂ ಸೇರಿದ್ದಾರೆ. ಈ ಪೈಕಿ ಈ ಹಿಂದೆ COVID-19 ಖಾಯಿಲೆ ಇದೆಯೆಂದು ಪರೀಕ್ಷೆಯಿಂದ ಖಚಿತವಾಗಿ ಆಸ್ಪತ್ರೆಗಳಿಗೆ ದಾಖಲಾಗಿರುವ ಇಬ್ಬರು ವ್ಯಕ್ತಿಗಳು ಗುಣಮುಖರಾಗಿದ್ದು ಚಿಕಿತ್ಸೆಯ ನಂತರ ಬಿಡುಗಡೆ ಮಾಡಲಾಗಿದೆ ಎಂದು ದೆಹಲಿ ಆರೋಗ್ಯ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...