Homeಆರೋಗ್ಯಭಯಪಡಬೇಕಿಲ್ಲ, ಇದು ಕೇವಲ ಜ್ವರದಂತೆ ಅಷ್ಟೇ: ಕೊರೊನಾ ವೈರಸ್‌ನಿಂದ ಗುಣಮುಖನಾದವನ ಅನುಭವ

ಭಯಪಡಬೇಕಿಲ್ಲ, ಇದು ಕೇವಲ ಜ್ವರದಂತೆ ಅಷ್ಟೇ: ಕೊರೊನಾ ವೈರಸ್‌ನಿಂದ ಗುಣಮುಖನಾದವನ ಅನುಭವ

- Advertisement -
- Advertisement -

ಕೊರೊನಾ ವೈರಸ್‌ ಬಗ್ಗೆ ಭಯಪಡಬೇಕಾಗಿಲ್ಲ. ಆರೋಗ್ಯವಂತ ವ್ಯಕ್ತಿಗಳಿಗೆ ಚಿಕಿತ್ಸೆಯು ತುಂಬಾ ಸುಗಮವಾಗಿರುತ್ತದೆ ಎಂದು ದೆಹಲಿಯಲ್ಲಿ ಕೊರೊನಾ ಬಾಧಿತನಾಗಿ ಚೇತರಿಸಿಕೊಂಡ 45 ವರ್ಷದ ಉದ್ಯಮಿಯೊಬ್ಬರು ತಿಳಿಸಿದ್ದಾರೆ.

ದೆಹಲಿಯ ಸಫ್ದರ್‌ ಜಂಗ್ ಆಸ್ಪತ್ರೆಯಲ್ಲಿ ಕಳೆದ ಎರಡು ವಾರಗಳಿಂದ ಚಿಕಿತ್ಸೆ ಪಡೆಯುತ್ತಿದ್ದ ಅವರು, ಅಲ್ಲಿನ ಸೌಲಭ್ಯಗಳನ್ನು ಶ್ಲಾಘಿಸಿದ್ದಾರೆ. “ಭಯಪಡುವ ಅಗತ್ಯವಿಲ್ಲ. ಇದು ಸಾಮಾನ್ಯ ಜ್ವರದಂತೆ. ಆರೋಗ್ಯವಂತ ವ್ಯಕ್ತಿಯು ವೈದ್ಯರನ್ನು ತಲುಪಿದರೆ, ಸುಲಭದಲ್ಲಿ ಗುಣಪಡಿಸಬಹುದು. ನಮ್ಮ ಆರೋಗ್ಯ ವ್ಯವಸ್ಥೆಯು ಉತ್ತಮವಾಗಿದೆ ಎಂದಿದ್ದಾರೆ.

ಭಾನುವಾರದಂದು ಆಸ್ಪತ್ರೆಯಿಂದ ಸಂಪೂರ್ಣ ಗುಣಮುಖರಾಗಿ ಬಿಡುಗಡೆಯಾದ ಅವರು ತಮ್ಮ ಅನುಭವವನ್ನು ವಿವರಿಸುತ್ತಾ, ಆಸ್ಪತ್ರೆಯ ವೈದ್ಯರ ತಂಡವು ತುಂಬಾ ಧೈರ್ಯ ತುಂಬಿದೆ. ಇನ್ನೂ 14 ದಿನಗಳ ಕಾಲ ಮನೆಯಲ್ಲಿಯೇ ಇರಲು ಸೂಚಿಸಲಾಗಿದೆ ಎಂದು ಹೇಳಿದ್ದಾರೆ.

“ನಾನು ಫೆಬ್ರವರಿ 25ರಂದು ಯುರೋಪಿನಿಂದ ಮರಳಿದೆ ಮತ್ತು ಮರುದಿನ ನನಗೆ ಜ್ವರ ಬಂತು. ವೈದ್ಯರ ಬಳಿಗೆ ಹೋದೆ. ಇದು ಗಂಟಲಿನ ಸೋಂಕು ಎಂದು ಹೇಳಿದ ಅವರು ನನಗೆ ಮೂರು ದಿನಗಳ ಕಾಲ ಔಷಧಿ ನೀಡಿದರು. ನಾನು 28 ರಂದು ಚೇತರಿಸಿಕೊಂಡೆ. ಆದರೆ 29 ರಂದು ಮತ್ತೆ ಜ್ವರ ಬಂತು. ಆಗ ನಾನು ರಾಮ್ ಮನೋಹರ್ ಲೋಹಿಯಾ ಆಸ್ಪತ್ರೆಗೆ ಹೋದೆ. ಮಾರ್ಚ್ 1 ರಂದು ಕೊರೊನಾ ಪರೀಕ್ಷೆ ಮಾಡಿಸಿದಾಗ ಅದು ಇರುವುದು ಖಚಿತವಾಯಿತು” ಎಂದು ಅವರು ಹೇಳಿದರು.

“ಪ್ರಾಮಾಣಿಕವಾಗಿ, ನನಗೆ ಸೋಂಕು ತಗುಲಿದೆ ಎಂದು ಅವರು ಹೇಳಿದ ಸಮಯದಲ್ಲಿ ಮಾತ್ರ ಇದು ಕಷ್ಟವೆನಿಸಿತ್ತು. ಆದರೆ ಮರುದಿನ ನನ್ನನ್ನು ಸ್ಥಳಾಂತರಿಸಿದ ಸಫ್ದರ್ ಜಂಗ್‌ ವೈದ್ಯರ ತಂಡವು ನನ್ನನ್ನು ನೋಡಲು ಬಂದಾಗ, ಅವರು ನನ್ನನ್ನು ತುಂಬಾ ಆರಾಮದಾಯಕವಾಗಿಸಿದರು ‘ಇದು ಗುಣಪಡಿಸಬಹುದು , ನೀವು ಆರೋಗ್ಯವಂತ ವ್ಯಕ್ತಿ ಮತ್ತು ಅದು ಕೇವಲ ಶೀತ ಮತ್ತು ಕೆಮ್ಮು ಇದ್ದಷ್ಟೇ ಮಾತ್ರ. ಹಾಗಾಗಿ ಅದು ಹೋಗುತ್ತದೆ. ಇದು ಸಾಮಾನ್ಯ ಶೀತ ಮತ್ತು ಕೆಮ್ಮುಗಿಂತ ಸ್ವಲ್ಪ ಹೆಚ್ಚು ಸಮಯ ತೆಗೆದುಕೊಳ್ಳುತ್ತದೆ ‘ಎಂದು ಅವರು ಹೇಳಿದರು.

“ನಾನು ವೈದ್ಯನಲ್ಲ. ಆದರೆ ಇದು ಸಾಮಾನ್ಯ ಶೀತ ಮತ್ತು ಕೆಮ್ಮುಗಿಂತ ಸ್ವಲ್ಪ ಭಿನ್ನವಾಗಿತ್ತು. ನಾನು ಸಫ್ದರ್ಜಂಗ್‌ನ ಪ್ರತ್ಯೇಕ ವಾರ್ಡ್‌ನಲ್ಲಿದ್ದೆ, ಇದಕ್ಕಾಗಿ ಭಾರತ ಸರ್ಕಾರವು ಕಲ್ಪಿಸಿರುವ ಸೌಲಭ್ಯಗಳು ತುಂಬಾ ಉತ್ತಮವಾಗಿವೆ, ಇದು ನಾನು ನೋಡಿದ ಅತ್ಯುತ್ತಮವಾದ ಆಸ್ಪತ್ರೆಯಾಗಿದೆ. ನಾನು ಸ್ನಾನಗೃಹದೊಂದಿಗೆ ಖಾಸಗಿ ಕೋಣೆಯನ್ನು ಹೊಂದಿದ್ದೆ” ಎಂದು ಅವರು ಹೇಳಿದರು.

ನಗರದಲ್ಲಿ ವರದಿಯಾದ ಏಳು ಸಕಾರಾತ್ಮಕ ಪ್ರಕರಣಗಳಲ್ಲಿ ದೆಹಲಿ ನಿವಾಸಿಯೂ ಸೇರಿದ್ದಾರೆ. ಈ ಪೈಕಿ ಈ ಹಿಂದೆ COVID-19 ಖಾಯಿಲೆ ಇದೆಯೆಂದು ಪರೀಕ್ಷೆಯಿಂದ ಖಚಿತವಾಗಿ ಆಸ್ಪತ್ರೆಗಳಿಗೆ ದಾಖಲಾಗಿರುವ ಇಬ್ಬರು ವ್ಯಕ್ತಿಗಳು ಗುಣಮುಖರಾಗಿದ್ದು ಚಿಕಿತ್ಸೆಯ ನಂತರ ಬಿಡುಗಡೆ ಮಾಡಲಾಗಿದೆ ಎಂದು ದೆಹಲಿ ಆರೋಗ್ಯ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಆರು ಮಕ್ಕಳಿದ್ದರೆ ನೀವು ಮತದಾನದ ಹಕ್ಕನ್ನು ಕಳೆದುಕೊಳ್ಳಬಹುದು: ಮತದಾರರ ಪಟ್ಟಿ ‘ಕ್ಲೀನ್’ ಮಾಡಲು ECI ಹೊಸ ಪ್ಲಾನ್!

ಭಾರತದಲ್ಲಿ 'ಆರು ಅಥವಾ ಅದಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿದ್ದಾರೆ' ಎಂಬ ಕಾರಣಕ್ಕೆ ಯಾರಾದರೂ ಮತದಾನದ ಹಕ್ಕನ್ನು ಕಳೆದುಕೊಳ್ಳಲು ಸಾಧ್ಯವೇ? ಮೇಲ್ನೋಟಕ್ಕೆ ಹೌದು ಎನ್ನುವಂತಿದೆ ಉತ್ತರ ಪ್ರದೇಶದ ವಾರಾಣಸಿಯ ಕ್ಯಾಂಟೋನ್ಮೆಂಟ್ ಕ್ಷೇತ್ರದ ಮತದಾರ ಸೋನು...

ಕದನ ವಿರಾಮವೆಂಬ ಕಳ್ಳಾಟ : ಗಾಝಾದಿಂದ ಸಿರಿಯಾವರೆಗೆ ಮುಂದುವರಿದ ಇಸ್ರೇಲ್ ನರಮೇಧ

ಬರೋಬ್ಬರಿ ಎಪ್ಪತ್ತು ಸಾವಿರದಷ್ಟು (ವರದಿಗಳ ಪ್ರಕಾರ 67, 900) ಜನರನ್ನು ಹತ್ಯೆಗೈದು, ಶೇಕಡ 90ರಷ್ಟು ಜನರನ್ನು ನಿರಾಶ್ರಿತರನ್ನಾಗಿ ಮಾಡಿದ ಬಳಿಕ, ಅಕ್ಟೋಬರ್ 10, 2025ರಂದು ಗಾಝಾ ಮೇಲಿನ ಆಕ್ರಮಣಕ್ಕೆ ಸಂಬಂಧಿಸಿದಂತೆ ಇಸ್ರೇಲ್ ಕದನ...

ಚುನಾವಣಾ ಆಯೋಗಕ್ಕೆ ಪೌರತ್ವ ನಿರ್ಧಾರ ಮಾಡುವ ಹಕ್ಕಿದೆಯೇ? SIR ತೀರ್ಪಿನ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ಮೇ 27 ರಂದು 'ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ಮತ್ತು ಭಾರತೀಯ ಚುನಾವಣಾ ಆಯೋಗ (ECI)' ನಡುವಿನ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಚುನಾವಣಾ ಪಟ್ಟಿಗಳ 'ವಿಶೇಷ ತೀವ್ರ ಪರಿಷ್ಕರಣೆ'...

ಮಹಾರಾಷ್ಟ್ರ: 80 ಲಕ್ಷ ಮಹಿಳೆಯರು ‘ಲಡ್ಕಿ ಬಹಿನ್’ ಯೋಜನೆಗೆ ಅನರ್ಹ: ಆರ್ಥಿಕ ಬಿಕ್ಕಟ್ಟಿಗೆ ಸಾಕ್ಷಿ ಎಂದು ವಿಪಕ್ಷಗಳ ಆರೋಪ

ಮುಂಬೈ: ಮಹಾರಾಷ್ಟ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದ 'ಮುಖ್ಯಮಂತ್ರಿ ಮಾಝಿ ಲಡ್ಕಿ ಬಹಿನ್' ಇ-ಕೆವೈಸಿ (e-KYC) ಪ್ರಕ್ರಿಯೆ ಪೂರ್ಣಗೊಳಿಸಲು ನೀಡಿದ್ದ ಗಡುವು ಮುಗಿದಿದ್ದು, ಸುಮಾರು 80 ಲಕ್ಷ ಮಹಿಳೆಯರು ಯೋಜನೆಯಿಂದ ಅನರ್ಹರಾಗಿದ್ದಾರೆ. ರಾಜ್ಯ ಸರ್ಕಾರವು...

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...