Homeಆರೋಗ್ಯಭಯಪಡಬೇಕಿಲ್ಲ, ಇದು ಕೇವಲ ಜ್ವರದಂತೆ ಅಷ್ಟೇ: ಕೊರೊನಾ ವೈರಸ್‌ನಿಂದ ಗುಣಮುಖನಾದವನ ಅನುಭವ

ಭಯಪಡಬೇಕಿಲ್ಲ, ಇದು ಕೇವಲ ಜ್ವರದಂತೆ ಅಷ್ಟೇ: ಕೊರೊನಾ ವೈರಸ್‌ನಿಂದ ಗುಣಮುಖನಾದವನ ಅನುಭವ

- Advertisement -
- Advertisement -

ಕೊರೊನಾ ವೈರಸ್‌ ಬಗ್ಗೆ ಭಯಪಡಬೇಕಾಗಿಲ್ಲ. ಆರೋಗ್ಯವಂತ ವ್ಯಕ್ತಿಗಳಿಗೆ ಚಿಕಿತ್ಸೆಯು ತುಂಬಾ ಸುಗಮವಾಗಿರುತ್ತದೆ ಎಂದು ದೆಹಲಿಯಲ್ಲಿ ಕೊರೊನಾ ಬಾಧಿತನಾಗಿ ಚೇತರಿಸಿಕೊಂಡ 45 ವರ್ಷದ ಉದ್ಯಮಿಯೊಬ್ಬರು ತಿಳಿಸಿದ್ದಾರೆ.

ದೆಹಲಿಯ ಸಫ್ದರ್‌ ಜಂಗ್ ಆಸ್ಪತ್ರೆಯಲ್ಲಿ ಕಳೆದ ಎರಡು ವಾರಗಳಿಂದ ಚಿಕಿತ್ಸೆ ಪಡೆಯುತ್ತಿದ್ದ ಅವರು, ಅಲ್ಲಿನ ಸೌಲಭ್ಯಗಳನ್ನು ಶ್ಲಾಘಿಸಿದ್ದಾರೆ. “ಭಯಪಡುವ ಅಗತ್ಯವಿಲ್ಲ. ಇದು ಸಾಮಾನ್ಯ ಜ್ವರದಂತೆ. ಆರೋಗ್ಯವಂತ ವ್ಯಕ್ತಿಯು ವೈದ್ಯರನ್ನು ತಲುಪಿದರೆ, ಸುಲಭದಲ್ಲಿ ಗುಣಪಡಿಸಬಹುದು. ನಮ್ಮ ಆರೋಗ್ಯ ವ್ಯವಸ್ಥೆಯು ಉತ್ತಮವಾಗಿದೆ ಎಂದಿದ್ದಾರೆ.

ಭಾನುವಾರದಂದು ಆಸ್ಪತ್ರೆಯಿಂದ ಸಂಪೂರ್ಣ ಗುಣಮುಖರಾಗಿ ಬಿಡುಗಡೆಯಾದ ಅವರು ತಮ್ಮ ಅನುಭವವನ್ನು ವಿವರಿಸುತ್ತಾ, ಆಸ್ಪತ್ರೆಯ ವೈದ್ಯರ ತಂಡವು ತುಂಬಾ ಧೈರ್ಯ ತುಂಬಿದೆ. ಇನ್ನೂ 14 ದಿನಗಳ ಕಾಲ ಮನೆಯಲ್ಲಿಯೇ ಇರಲು ಸೂಚಿಸಲಾಗಿದೆ ಎಂದು ಹೇಳಿದ್ದಾರೆ.

“ನಾನು ಫೆಬ್ರವರಿ 25ರಂದು ಯುರೋಪಿನಿಂದ ಮರಳಿದೆ ಮತ್ತು ಮರುದಿನ ನನಗೆ ಜ್ವರ ಬಂತು. ವೈದ್ಯರ ಬಳಿಗೆ ಹೋದೆ. ಇದು ಗಂಟಲಿನ ಸೋಂಕು ಎಂದು ಹೇಳಿದ ಅವರು ನನಗೆ ಮೂರು ದಿನಗಳ ಕಾಲ ಔಷಧಿ ನೀಡಿದರು. ನಾನು 28 ರಂದು ಚೇತರಿಸಿಕೊಂಡೆ. ಆದರೆ 29 ರಂದು ಮತ್ತೆ ಜ್ವರ ಬಂತು. ಆಗ ನಾನು ರಾಮ್ ಮನೋಹರ್ ಲೋಹಿಯಾ ಆಸ್ಪತ್ರೆಗೆ ಹೋದೆ. ಮಾರ್ಚ್ 1 ರಂದು ಕೊರೊನಾ ಪರೀಕ್ಷೆ ಮಾಡಿಸಿದಾಗ ಅದು ಇರುವುದು ಖಚಿತವಾಯಿತು” ಎಂದು ಅವರು ಹೇಳಿದರು.

“ಪ್ರಾಮಾಣಿಕವಾಗಿ, ನನಗೆ ಸೋಂಕು ತಗುಲಿದೆ ಎಂದು ಅವರು ಹೇಳಿದ ಸಮಯದಲ್ಲಿ ಮಾತ್ರ ಇದು ಕಷ್ಟವೆನಿಸಿತ್ತು. ಆದರೆ ಮರುದಿನ ನನ್ನನ್ನು ಸ್ಥಳಾಂತರಿಸಿದ ಸಫ್ದರ್ ಜಂಗ್‌ ವೈದ್ಯರ ತಂಡವು ನನ್ನನ್ನು ನೋಡಲು ಬಂದಾಗ, ಅವರು ನನ್ನನ್ನು ತುಂಬಾ ಆರಾಮದಾಯಕವಾಗಿಸಿದರು ‘ಇದು ಗುಣಪಡಿಸಬಹುದು , ನೀವು ಆರೋಗ್ಯವಂತ ವ್ಯಕ್ತಿ ಮತ್ತು ಅದು ಕೇವಲ ಶೀತ ಮತ್ತು ಕೆಮ್ಮು ಇದ್ದಷ್ಟೇ ಮಾತ್ರ. ಹಾಗಾಗಿ ಅದು ಹೋಗುತ್ತದೆ. ಇದು ಸಾಮಾನ್ಯ ಶೀತ ಮತ್ತು ಕೆಮ್ಮುಗಿಂತ ಸ್ವಲ್ಪ ಹೆಚ್ಚು ಸಮಯ ತೆಗೆದುಕೊಳ್ಳುತ್ತದೆ ‘ಎಂದು ಅವರು ಹೇಳಿದರು.

“ನಾನು ವೈದ್ಯನಲ್ಲ. ಆದರೆ ಇದು ಸಾಮಾನ್ಯ ಶೀತ ಮತ್ತು ಕೆಮ್ಮುಗಿಂತ ಸ್ವಲ್ಪ ಭಿನ್ನವಾಗಿತ್ತು. ನಾನು ಸಫ್ದರ್ಜಂಗ್‌ನ ಪ್ರತ್ಯೇಕ ವಾರ್ಡ್‌ನಲ್ಲಿದ್ದೆ, ಇದಕ್ಕಾಗಿ ಭಾರತ ಸರ್ಕಾರವು ಕಲ್ಪಿಸಿರುವ ಸೌಲಭ್ಯಗಳು ತುಂಬಾ ಉತ್ತಮವಾಗಿವೆ, ಇದು ನಾನು ನೋಡಿದ ಅತ್ಯುತ್ತಮವಾದ ಆಸ್ಪತ್ರೆಯಾಗಿದೆ. ನಾನು ಸ್ನಾನಗೃಹದೊಂದಿಗೆ ಖಾಸಗಿ ಕೋಣೆಯನ್ನು ಹೊಂದಿದ್ದೆ” ಎಂದು ಅವರು ಹೇಳಿದರು.

ನಗರದಲ್ಲಿ ವರದಿಯಾದ ಏಳು ಸಕಾರಾತ್ಮಕ ಪ್ರಕರಣಗಳಲ್ಲಿ ದೆಹಲಿ ನಿವಾಸಿಯೂ ಸೇರಿದ್ದಾರೆ. ಈ ಪೈಕಿ ಈ ಹಿಂದೆ COVID-19 ಖಾಯಿಲೆ ಇದೆಯೆಂದು ಪರೀಕ್ಷೆಯಿಂದ ಖಚಿತವಾಗಿ ಆಸ್ಪತ್ರೆಗಳಿಗೆ ದಾಖಲಾಗಿರುವ ಇಬ್ಬರು ವ್ಯಕ್ತಿಗಳು ಗುಣಮುಖರಾಗಿದ್ದು ಚಿಕಿತ್ಸೆಯ ನಂತರ ಬಿಡುಗಡೆ ಮಾಡಲಾಗಿದೆ ಎಂದು ದೆಹಲಿ ಆರೋಗ್ಯ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದಲಿತ ವಿದ್ಯಾರ್ಥಿನಿ ಕೊಲೆ ಪ್ರಕರಣ: ಪ್ರತಿಭಟನಾಕಾರರ ಮೇಲೆ ಪೊಲೀಸ್ ಲಾಠಿಚಾರ್ಜ್; ಯೋಗಿ ಸರ್ಕಾರದ ವಿರುದ್ಧ ತೀವ್ರ ಆಕ್ರೋಶ

ನವದೆಹಲಿ: ಜುಲೈ 8 ರಂದು ಮೀರತ್‌ನಲ್ಲಿ ನಡೆದ ದಲಿತ ವಿದ್ಯಾರ್ಥಿನಿಯ ಹತ್ಯೆಯನ್ನು ಖಂಡಿಸಿ ಪ್ರತಿಭಟನೆ ನಡೆಸುತ್ತಿದ್ದ ದಲಿತ ಕಾರ್ಯಕರ್ತರು ಮತ್ತು ಮೃತರ ಕುಟುಂಬ ಸದಸ್ಯರ ಮೇಲೆ ಉತ್ತರ ಪ್ರದೇಶ ಪೊಲೀಸರು ಭೀಕರ ಹಲ್ಲೆ,...

ಒಮಾನ್ ಕರಾವಳಿಯಲ್ಲಿ ಮತ್ತೊಂದು ಹಡಗಿನ ಮೇಲೆ ದಾಳಿ: ಭಾರತೀಯ ಪ್ರಜೆ ನಾಪತ್ತೆ, 10 ಜನರ ರಕ್ಷಣೆ: ವಿದೇಶಾಂಗ ಸಚಿವಾಲಯ ಮಾಹಿತಿ

ನವದೆಹಲಿ: ಜುಲೈ 12 ರಂದು ಒಮಾನ್ ಕರಾವಳಿಯ ಅಂತರರಾಷ್ಟ್ರೀಯ ಜಲಮಾರ್ಗದಲ್ಲಿ ಸಾಗುತ್ತಿದ್ದ ‘ಜಿಎಫ್‌ಎಸ್ ಗ್ಯಾಲಕ್ಸಿ’ (GFS Galaxy) ಎಂಬ ವಾಣಿಜ್ಯ ಹಡಗಿನ ಮೇಲೆ ನಡೆದ ದಾಳಿಯನ್ನು ಭಾರತ ಸರ್ಕಾರ ತೀವ್ರವಾಗಿ ಖಂಡಿಸಿದೆ. ಭೀಕರ...

SIR ಪ್ರಕ್ರಿಯೆಯಲ್ಲಿ ಎಐ ಬಳಕೆ, ಭಾರೀ ಪ್ರಮಾಣದಲ್ಲಿ ಮತದಾರರ ಹೆಸರು ಡಿಲೀಟ್ : ಕಳವಳ ವ್ಯಕ್ತಪಡಿಸಿದ ವಿಶ್ವಸಂಸ್ಥೆಯ ವಿಶೇಷ ವರದಿಗಾರರು

ಭಾರತೀಯ ಚುನಾವಣಾ ಆಯೋಗ (ಇಸಿಐ) ಕೈಗೊಂಡ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯು (ಎಸ್‌ಐಆರ್) ವ್ಯಾಪಕ ಪ್ರಮಾಣದಲ್ಲಿ ಮತದಾರರ ಹೆಸರುಗಳ ಅಳಿಸುವಿಕೆಗೆ ಕಾರಣವಾಗಿದೆ ಮತ್ತು ಇದು ಮುಸ್ಲಿಮರು ಹಾಗೂ ಇತರ ಅಲ್ಪಸಂಖ್ಯಾತ ಸಮುದಾಯಗಳ...

ಮಹಾರಾಷ್ಟ್ರ: ನಂದೂರ್ಬಾರ್‌ನ ಸರ್ಕಾರಿ ಹಾಸ್ಟೆಲ್‌ನಲ್ಲಿ ಕಲುಷಿತ ಆಹಾರ ಸೇವಿಸಿ 40 ವಿದ್ಯಾರ್ಥಿಗಳು ಅಸ್ವಸ್ಥ; ತೀವ್ರಗೊಂಡ ತನಿಖೆ 

ನಂದೂರ್ಬಾರ್ (ಮಹಾರಾಷ್ಟ್ರ): ಮಹಾರಾಷ್ಟ್ರದ ನಂದೂರ್ಬಾರ್ ಜಿಲ್ಲೆಯ ಶಹಾಡಾ ತಾಲೂಕಿನಲ್ಲಿರುವ ಸರ್ಕಾರಿ ಸಮಾಜ ಕಲ್ಯಾಣ ಇಲಾಖೆಯ ವಸತಿನಿಲಯದಲ್ಲಿ ಶಂಕಿತ ವಿಷಪೂರಿತ ಆಹಾರ ಸೇವಿಸಿ ಸುಮಾರು 40 ವಿದ್ಯಾರ್ಥಿಗಳು ತೀವ್ರವಾಗಿ ಅಸ್ವಸ್ಥಗೊಂಡಿರುವ ಕಳವಳಕಾರಿ ಘಟನೆ ವರದಿಯಾಗಿದೆ.  ಹಾಸ್ಟೆಲ್‌ನಲ್ಲಿ...

ಇರಾನ್‌ನ 140 ಸ್ಥಳಗಳನ್ನು ಗುರಿಯಾಗಿಸಿ ಅಮೆರಿಕದಿಂದ ದಾಳಿ : ಬಹ್ರೇನ್, ಕತಾರ್, ಯುಎಇ ಮೇಲೆ ಇರಾನ್‌ನಿಂದ ಪ್ರತಿದಾಳಿ

ಹಾರ್ಮುಝ್ ಜಲಸಂಧಿಯಲ್ಲಿ ಇರಾನ್ ನಡೆಸಿದ ದಾಳಿಯಿಂದಾಗಿ ಸರಕು ಸಾಗಣೆ ಹಡಗೊಂದು ಹೊತ್ತಿ ಉರಿದು, ಅದರಲ್ಲಿದ್ದ ಸಿಬ್ಬಂದಿ ಹಡಗು ಬಿಟ್ಟು ಹೊರಡುವಂತಾಗಿತ್ತು. ಈ ಘಟನೆಯನ್ನು ಖಂಡಿಸಿ ಅಮೆರಿಕ ಭಾನುವಾರ (ಜು.12) ಮುಂಜಾನೆ ಇರಾನ್ ಮೇಲೆ...

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...