Homeಆರೋಗ್ಯಭಯಪಡಬೇಕಿಲ್ಲ, ಇದು ಕೇವಲ ಜ್ವರದಂತೆ ಅಷ್ಟೇ: ಕೊರೊನಾ ವೈರಸ್‌ನಿಂದ ಗುಣಮುಖನಾದವನ ಅನುಭವ

ಭಯಪಡಬೇಕಿಲ್ಲ, ಇದು ಕೇವಲ ಜ್ವರದಂತೆ ಅಷ್ಟೇ: ಕೊರೊನಾ ವೈರಸ್‌ನಿಂದ ಗುಣಮುಖನಾದವನ ಅನುಭವ

- Advertisement -
- Advertisement -

ಕೊರೊನಾ ವೈರಸ್‌ ಬಗ್ಗೆ ಭಯಪಡಬೇಕಾಗಿಲ್ಲ. ಆರೋಗ್ಯವಂತ ವ್ಯಕ್ತಿಗಳಿಗೆ ಚಿಕಿತ್ಸೆಯು ತುಂಬಾ ಸುಗಮವಾಗಿರುತ್ತದೆ ಎಂದು ದೆಹಲಿಯಲ್ಲಿ ಕೊರೊನಾ ಬಾಧಿತನಾಗಿ ಚೇತರಿಸಿಕೊಂಡ 45 ವರ್ಷದ ಉದ್ಯಮಿಯೊಬ್ಬರು ತಿಳಿಸಿದ್ದಾರೆ.

ದೆಹಲಿಯ ಸಫ್ದರ್‌ ಜಂಗ್ ಆಸ್ಪತ್ರೆಯಲ್ಲಿ ಕಳೆದ ಎರಡು ವಾರಗಳಿಂದ ಚಿಕಿತ್ಸೆ ಪಡೆಯುತ್ತಿದ್ದ ಅವರು, ಅಲ್ಲಿನ ಸೌಲಭ್ಯಗಳನ್ನು ಶ್ಲಾಘಿಸಿದ್ದಾರೆ. “ಭಯಪಡುವ ಅಗತ್ಯವಿಲ್ಲ. ಇದು ಸಾಮಾನ್ಯ ಜ್ವರದಂತೆ. ಆರೋಗ್ಯವಂತ ವ್ಯಕ್ತಿಯು ವೈದ್ಯರನ್ನು ತಲುಪಿದರೆ, ಸುಲಭದಲ್ಲಿ ಗುಣಪಡಿಸಬಹುದು. ನಮ್ಮ ಆರೋಗ್ಯ ವ್ಯವಸ್ಥೆಯು ಉತ್ತಮವಾಗಿದೆ ಎಂದಿದ್ದಾರೆ.

ಭಾನುವಾರದಂದು ಆಸ್ಪತ್ರೆಯಿಂದ ಸಂಪೂರ್ಣ ಗುಣಮುಖರಾಗಿ ಬಿಡುಗಡೆಯಾದ ಅವರು ತಮ್ಮ ಅನುಭವವನ್ನು ವಿವರಿಸುತ್ತಾ, ಆಸ್ಪತ್ರೆಯ ವೈದ್ಯರ ತಂಡವು ತುಂಬಾ ಧೈರ್ಯ ತುಂಬಿದೆ. ಇನ್ನೂ 14 ದಿನಗಳ ಕಾಲ ಮನೆಯಲ್ಲಿಯೇ ಇರಲು ಸೂಚಿಸಲಾಗಿದೆ ಎಂದು ಹೇಳಿದ್ದಾರೆ.

“ನಾನು ಫೆಬ್ರವರಿ 25ರಂದು ಯುರೋಪಿನಿಂದ ಮರಳಿದೆ ಮತ್ತು ಮರುದಿನ ನನಗೆ ಜ್ವರ ಬಂತು. ವೈದ್ಯರ ಬಳಿಗೆ ಹೋದೆ. ಇದು ಗಂಟಲಿನ ಸೋಂಕು ಎಂದು ಹೇಳಿದ ಅವರು ನನಗೆ ಮೂರು ದಿನಗಳ ಕಾಲ ಔಷಧಿ ನೀಡಿದರು. ನಾನು 28 ರಂದು ಚೇತರಿಸಿಕೊಂಡೆ. ಆದರೆ 29 ರಂದು ಮತ್ತೆ ಜ್ವರ ಬಂತು. ಆಗ ನಾನು ರಾಮ್ ಮನೋಹರ್ ಲೋಹಿಯಾ ಆಸ್ಪತ್ರೆಗೆ ಹೋದೆ. ಮಾರ್ಚ್ 1 ರಂದು ಕೊರೊನಾ ಪರೀಕ್ಷೆ ಮಾಡಿಸಿದಾಗ ಅದು ಇರುವುದು ಖಚಿತವಾಯಿತು” ಎಂದು ಅವರು ಹೇಳಿದರು.

“ಪ್ರಾಮಾಣಿಕವಾಗಿ, ನನಗೆ ಸೋಂಕು ತಗುಲಿದೆ ಎಂದು ಅವರು ಹೇಳಿದ ಸಮಯದಲ್ಲಿ ಮಾತ್ರ ಇದು ಕಷ್ಟವೆನಿಸಿತ್ತು. ಆದರೆ ಮರುದಿನ ನನ್ನನ್ನು ಸ್ಥಳಾಂತರಿಸಿದ ಸಫ್ದರ್ ಜಂಗ್‌ ವೈದ್ಯರ ತಂಡವು ನನ್ನನ್ನು ನೋಡಲು ಬಂದಾಗ, ಅವರು ನನ್ನನ್ನು ತುಂಬಾ ಆರಾಮದಾಯಕವಾಗಿಸಿದರು ‘ಇದು ಗುಣಪಡಿಸಬಹುದು , ನೀವು ಆರೋಗ್ಯವಂತ ವ್ಯಕ್ತಿ ಮತ್ತು ಅದು ಕೇವಲ ಶೀತ ಮತ್ತು ಕೆಮ್ಮು ಇದ್ದಷ್ಟೇ ಮಾತ್ರ. ಹಾಗಾಗಿ ಅದು ಹೋಗುತ್ತದೆ. ಇದು ಸಾಮಾನ್ಯ ಶೀತ ಮತ್ತು ಕೆಮ್ಮುಗಿಂತ ಸ್ವಲ್ಪ ಹೆಚ್ಚು ಸಮಯ ತೆಗೆದುಕೊಳ್ಳುತ್ತದೆ ‘ಎಂದು ಅವರು ಹೇಳಿದರು.

“ನಾನು ವೈದ್ಯನಲ್ಲ. ಆದರೆ ಇದು ಸಾಮಾನ್ಯ ಶೀತ ಮತ್ತು ಕೆಮ್ಮುಗಿಂತ ಸ್ವಲ್ಪ ಭಿನ್ನವಾಗಿತ್ತು. ನಾನು ಸಫ್ದರ್ಜಂಗ್‌ನ ಪ್ರತ್ಯೇಕ ವಾರ್ಡ್‌ನಲ್ಲಿದ್ದೆ, ಇದಕ್ಕಾಗಿ ಭಾರತ ಸರ್ಕಾರವು ಕಲ್ಪಿಸಿರುವ ಸೌಲಭ್ಯಗಳು ತುಂಬಾ ಉತ್ತಮವಾಗಿವೆ, ಇದು ನಾನು ನೋಡಿದ ಅತ್ಯುತ್ತಮವಾದ ಆಸ್ಪತ್ರೆಯಾಗಿದೆ. ನಾನು ಸ್ನಾನಗೃಹದೊಂದಿಗೆ ಖಾಸಗಿ ಕೋಣೆಯನ್ನು ಹೊಂದಿದ್ದೆ” ಎಂದು ಅವರು ಹೇಳಿದರು.

ನಗರದಲ್ಲಿ ವರದಿಯಾದ ಏಳು ಸಕಾರಾತ್ಮಕ ಪ್ರಕರಣಗಳಲ್ಲಿ ದೆಹಲಿ ನಿವಾಸಿಯೂ ಸೇರಿದ್ದಾರೆ. ಈ ಪೈಕಿ ಈ ಹಿಂದೆ COVID-19 ಖಾಯಿಲೆ ಇದೆಯೆಂದು ಪರೀಕ್ಷೆಯಿಂದ ಖಚಿತವಾಗಿ ಆಸ್ಪತ್ರೆಗಳಿಗೆ ದಾಖಲಾಗಿರುವ ಇಬ್ಬರು ವ್ಯಕ್ತಿಗಳು ಗುಣಮುಖರಾಗಿದ್ದು ಚಿಕಿತ್ಸೆಯ ನಂತರ ಬಿಡುಗಡೆ ಮಾಡಲಾಗಿದೆ ಎಂದು ದೆಹಲಿ ಆರೋಗ್ಯ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...