Homeಚಳವಳಿಕಾರ್ಮಿಕರು, ರೈತರ ಬದುಕಿನೊಂದಿಗೆ ಚೆಲ್ಲಾಟವಾಡದಿರಿ: ಕಾರ್ಮಿಕ ಮುಖಂಡರ ಒತ್ತಾಯ

ಕಾರ್ಮಿಕರು, ರೈತರ ಬದುಕಿನೊಂದಿಗೆ ಚೆಲ್ಲಾಟವಾಡದಿರಿ: ಕಾರ್ಮಿಕ ಮುಖಂಡರ ಒತ್ತಾಯ

ರೈತ ಹಾಗೂ ದುಡಿಯುವ ಜನರ ಬದುಕನ್ನು ಅತಂತ್ರಗೊಳಿಸುವ ಕಾರ್ಮಿಕ ಕಾಯ್ದೆಗಳ ತಿದ್ದುಪಡಿ ಮತ್ತು ಎಪಿಎಂಸಿ ಕಾಯ್ದೆಗೆ ತಿದ್ದುಪಡಿಯಂತಹ ಕೇಂದ್ರದ ಪ್ರಸ್ತಾಪಗಳಿಗೆ ಒಪ್ಪದೆ, ಅವುಗಳನ್ನು ಕೈ ಬಿಡಬೇಕು ಎಂದು ಹತ್ತಾರು ಸಂಘಟನೆಗಳು ಮುಖ್ಯಮಂತ್ರಿಗಳನ್ನು ಒತ್ತಾಯಿಸಿವೆ.

- Advertisement -
- Advertisement -

ಮುಖ್ಯಮಂತ್ರಿಗಳೇ ಕೇಂದ್ರದ ಒತ್ತಡಕ್ಕೆ ಮಣಿದು ಕಾರ್ಮಿಕರು ಹಾಗೂ ರೈತರ ಬದುಕಿನ ಜೊತೆ ಚೆಲ್ಲಾಟವಾಡದಿರಿ ಎಂದು ರೈತ ಹಾಗೂ ಕಾರ್ಮಿಕ ಮುಖಂಡರು ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ಅವರನ್ನು ಒತ್ತಾಯಿಸಿದ್ದಾರೆ.

ಕಾರ್ಮಿಕ ಸಂಘಟನೆ, ರೈತ ಸಂಘಟನೆ ಹಾಗೂ ಪ್ರಗತಿಪರ ಸಂಘಟನೆಗಳು ಜಂಟಿ ಪತ್ರಿಕಾ ಹೇಳಿಕೆ ನೀಡಿದ್ದು, ರೈತ ಹಾಗೂ ದುಡಿಯುವ ಜನರ ಬದುಕನ್ನು ಅತಂತ್ರಗೊಳಿಸುವ ಕಾರ್ಮಿಕ ಕಾಯ್ದೆಗಳ ತಿದ್ದುಪಡಿ ಮತ್ತು ಎಪಿಎಂಸಿ ಕಾಯ್ದೆಗೆ ತಿದ್ದುಪಡಿಯಂತಹ ಕೇಂದ್ರದ ಪ್ರಸ್ತಾಪಗಳಿಗೆ ಒಪ್ಪದೆ, ಅವುಗಳನ್ನು ಕೈ ಬಿಡಬೇಕು ಎಂದು ಹತ್ತಾರು ಸಂಘಟನೆಗಳು ಮುಖ್ಯಮಂತ್ರಿಗಳನ್ನು ಒತ್ತಾಯಿಸಿವೆ.

ರೈತ ಹಾಗೂ ಕಾರ್ಮಿಕ ಸಂಘಟನೆಗಳು ಜೊತೆಗೂಡಿ ಕೇಂದ್ರ ಸರ್ಕಾರದ ವಿರುದ್ದ ಮೇ 20 ರಿಂದ 27ರ ತನಕ “ಶ್ರಮಿಕ ಹಕ್ಕು ಅಭಿಯಾನ”ವನ್ನು ಹಮ್ಮಿಕೊಂಡಿದ್ದು, ಮೇ 22 ರಂದು ಅಖಿಲ ಭಾರತ ಕಾರ್ಮಿಕರ ಹೋರಾಟ ಮತ್ತು ಮೇ 27ರಂದು ಅಖಿಲ ಭಾರತ ರೈತರ ಹೋರಾಟಗಳು ನಡೆಯಲಿದೆ ಎಂದು ಹೇಳಿಕೆಯಲ್ಲಿ ತಿಳಿಸಲಾಗಿದೆ.


ಓದಿ: ಕಾರ್ಮಿಕ ಕಾಯ್ದೆ ತಿದ್ದುಪಡಿಗಿದೆ ಹುನ್ನಾರದ ಇತಿಹಾಸ : ಎಸ್‌. ಬಾಲನ್


ಪತ್ರಿಕಾ ಹೇಳಿಕೆಯಲ್ಲಿ, “ಕೊರೋನಾ ಪಿಡುಗಿನ ಸಂಕಷ್ಟಗಳಿಂದ ಈಗಾಗಲೇ ದುಡಿಯುವ ಜನರು ತತ್ತರಿಸಿಹೋಗಿದ್ದರೆ. ವಲಸೆ ಕಾರ್ಮಿಕರ ಕಣ್ಣೀರು ನಿಮ್ಮ ಕಣ್ಣಿಗೆ ಬಿದ್ದಿದೆಯೋ ಇಲ್ಲವೋ ಗೊತ್ತಿಲ್ಲ. ಸರಿಯಾದ ಊಟವಿಲ್ಲದ ಮಕ್ಕಳ ಆಕ್ರಂದನವಾದರೂ ಕೇಳಿಸಿರಬೇಕು. ಕೋಟ್ಯಾಂತರ ಕೈಗಳು ಕೆಲಸವಿಲ್ಲದೆ ಕೂತಿವೆ. ಮನೆಮಂದಿಗೆ ಸಾಕಾಗುವಷ್ಟು ಆಹಾರ ಬಹುಪಾಲು ದುಡಿಯುವ ಜನರ ಮನೆಗಳಲ್ಲಿ ಇಲ್ಲ. ಸಮಗ್ರ ಆಹಾರ ಸಾಮಗ್ರಿ ಕಿಟ್ ಕೊಡಿಯೆಂದರೆ, ಸರ್ಕಾರ ಮದ್ಯದ ಅಂಗಡಿಗಳನ್ನು ತೆರೆದು ಜನರ ಇದ್ದಬದ್ದ ಹಣವನ್ನೂ ಬಾಚಲು ಅವಕಾಶ ಮಾಡಿಕೊಟ್ಟಿದೆ” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇಂತಹಾ ಪರಿಸ್ಥಿತಿಯಲ್ಲಿ ಗಾಯದ ಮೇಲೆ ಬರೆ ಎಳೆದಂತೆ ಕಾರ್ಮಿಕರ ಹಾಗೂ ರೈತರ ಹಿತಕಾಯಲು ಇದ್ದ ಕಾನೂನುಗಳನ್ನು ಕಿತ್ತು ಕಾರ್ಪೊರೇಟ್ ಶಕ್ತಿಗಳ ದರೋಡೆಗೆ ಅವಕಾಶ ಮಾಡಿಕೊಡುವ ನೀತಿಗಳನ್ನು ಕೇಂದ್ರ ಸರ್ಕಾರ ಪ್ರಸ್ತಾಪಿಸುತ್ತಿದೆ. ಕಾರ್ಮಿಕರ ದುಡಿಮೆಯ ಅವಧಿಯನ್ನು ಹೆಚ್ಚಿಸಿ, ಕಾರ್ಮಿಕರ ಹಿತ ರಕ್ಷಿಸಲು ಇದ್ದ ಕಾನೂನುಗಳನ್ನು ರದ್ದುಗೊಳಿಸುವ ಪ್ರಕ್ರಿಯೆ ದೇಶದಾದ್ಯಂತ ಈಗಾಗಲೇ ಪ್ರಾರಂಭವಾಗಿದೆ. ಇದಲ್ಲದೆ ಕೃಷಿ ಯೋಗ್ಯ ಭೂಮಿಯನ್ನು ಕಾರ್ಪೊರೇಟ್ ಶಕ್ತಿಗಳಿಗೆ ಪರಭಾರೆ ಮಾಡಲು ಗೇಣಿ ನೀತಿಯಲ್ಲಿ, ಕೃಷಿ ಭೂಮಿಯ ಖರೀದಿಯ ನಿಯಮಗಳಲ್ಲಿ ಬದಲಾವಣೆ ತರುತ್ತಿರುವುದಲ್ಲದೆ, ರೈತರ ಬೆಳೆಗೆ ಒಂದಷ್ಟಾದರೂ ಬೆಲೆ ಸುರಕ್ಷತೆಯನ್ನು ಕೊಡುತ್ತಿದ್ದ ಎಪಿಎಂಸಿಯನ್ನು ದುರ್ಬಲಗೊಳಿಸುವ ನೀತಿಯೂ ನಿಮ್ಮ ಮುಂದಿದೆ.” ಎಂದು ಕಿಡಿಕಾರಿದ್ದಾರೆ.


ಓದಿ: ಕಾರ್ಮಿಕ ಕಾಯ್ದೆಗಳಿಗೆ ಅವಸರದ ತಿದ್ದುಪಡಿ ಹಿಂದೆ ದುರುದ್ದೇಶದ ವಾಸನೆಯಿದೆ : ಸಿದ್ದರಾಮಯ್ಯ


ಇಂತಹ ನೀತಿಗಳನ್ನು ತಿರುಚುವ ಕೆಲಸವನ್ನು ಕೂಡಲೇ ಕೈಬಿಡಬೇಕು. ಕಾರ್ಪೊರೇಟ್ ಒತ್ತಡಕ್ಕೆ ಮಣಿಯಬಾರದು, ಕೇಂದ್ರ ಸರ್ಕಾರದ ಪ್ರಸ್ತಾಪವನ್ನು ಒಪ್ಪಬಾರದು. ಕಾರ್ಮಿಕರನ್ನು ಮತ್ತು ರೈತರನ್ನು ಬಲಿಕೊಡುವ ಪ್ರಯತ್ನ ಮಾಡಿದಲ್ಲಿ ಇಡೀ ರಾಜ್ಯದ ತೀವ್ರ ವಿರೋಧವನ್ನು ಖಂಡಿತ ಎದುರಿಸಬೇಕಾಗುತ್ತದೆ ಎಂದು ಸಂಘಟನೆಗಳು ತಮ್ಮ ಪತ್ರಿಕಾ ಹೇಳಿಕೆಯಲ್ಲಿ ಎಚ್ಚರಿಸಿವೆ.

ಪತ್ರಿಕಾ ಹೇಳಿಕೆಗೆ ಟ್ರೇಡ್ ಯೂನಿಯನ್ ಸೆಂಟರ್ ಆಫ್ ಇಂಡಿಯಾದ ಮಾನಸಯ್ಯ, ಭಾರತೀಯ ಫ್ಯಾಸಿಸ್ಟ್ ವಿರೋಧಿ ಒಕ್ಕೂಟದ ಬಾಲನ್, ಗ್ರಾಮೀಣ ಕೂಲಿ ಕಾರ್ಮಿಕರ ಸಂಘಟನೆಯ ಬಸವರಾಜು, ಭೂಮಿ ಮತ್ತು ವಸತಿ ಹಕ್ಕು ವಂಚಿತರ ಹೋರಾಟ ಸಮಿತಿಯ ಕುಮಾರ್ ಸಮತಳ, ಆಹಾರ ಹಕ್ಕು ಸಮಿತಿಯ ಶಾರದಾ ಗೋಪಾಲ್, ಕರ್ನಾಟಕ ರೈತ ಸಂಘಟನೆಯ ಡಿ. ಹೆಚ್. ಪೂಜಾರ್, ಕರ್ನಾಟಕ ಶ್ರಮಿಕ ಶಕ್ತಿಯ ವರದ ರಾಜೇಂದ್ರ, ಕರ್ನಾಟಕ ಜನಶಕ್ತಿಯ ಮಲ್ಲಿಗೆ ಮುಂತಾದವರು ಸಹಿ ಮಾಡಿದ್ದಾರೆ.

ಬಿಬಿಎಂಪಿ ಗುತ್ತಿಗೆ ನೌಕರರ ಯುನಿಯನ್, ರೇಸ್ ಕೋರ್ಸ್ ಯುನಿಯನ್ ಬೆಂಗಳೂರು ಮತ್ತು ಮೈಸೂರು, ಬಿಡಬ್ಲೂಎಸ್‌ಎಸ್‌ಬಿ ಗುತ್ತಿಗೆ ನೌಕರರ ಸಂಘ, ಹೆಚ್‌ಎಎಲ್, ಬಿಇಎಮ್‌ಎಲ್ , ಬಿಹೆಚ್‌ಇಎಲ್ ಗುತ್ತಿಗೆ ನೌಕರರ ಸಂಘ, ಗಣಿ ಮತ್ತು ನಿರ್ಮಾಣ ಕಾರ್ಮಿಕರ ಸಂಘ, ಬಿಎಂಟಿಸಿ ಹಾಗೂ ಕೆಎಸ್ಸಾರ್ಟಿಸಿ ನೌಕರರ ಸಂಘ, ಮೈಕೋ ಬಾಸ್ ಗುತ್ತಿಗೆ ನೌಕರರ ಸಂಘಗಳು ಪ್ರತಭಟನೆಗೆ ಬೆಂಬಲ ಸೂಚಿಸಿವೆ.


ಓದಿ: ವಲಸೆ ಕಾರ್ಮಿಕರ ಸ್ಥಿತಿ ಕರುಣಾಜನಕವಾಗಿದೆ; ಅವರ ಕಷ್ಟ ನಿವಾರಣಗೆ ಕೇಂದ್ರ, ರಾಜ್ಯ ಸರ್ಕಾರಗಳು ಮಾಡಿದ್ದೇನು?: ಮದ್ರಾಸ್ ಹೈಕೋರ್ಟ್ ಪ್ರಶ್ನೆ


ವಿಡಿಯೊ ನೋಡಿ: ಉತ್ತರಪ್ರದೇಶದಿಂದ ಬಿಹಾರಕ್ಕೆ ತೆರಳಲು ರೈಲು ನೋಂದಣಿ ಮಾಡಿಸಲು ಮುಗಿಬಿದ್ದಿರುವ ವಲಸೆ ಕಾರ್ಮಿಕರು.


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಫಾರೂಕ್ ಅಬ್ದುಲ್ಲಾರನ್ನು ಕೊಲ್ಲುವುದು ಸರ್ಕಾರದ ಉದ್ದೇಶವೇ?’..ರಾಜ್ಯ ಸಭೆಯಲ್ಲಿ ಖರ್ಗೆ ಪ್ರಶ್ನೆ

ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಹಾಗೂ ನ್ಯಾಷನಲ್ ಕಾನ್ಫರೆನ್ಸ್ (ಎನ್‌ಸಿ) ಪಕ್ಷದ ಮುಖ್ಯಸ್ಥ ಫಾರೂಕ್ ಅಬ್ದುಲ್ಲಾ ಅವರ ಹತ್ಯೆ ಯತ್ನ ವಿಚಾರವನ್ನು ವಿಪಕ್ಷ ಸದಸ್ಯರು ಗುರುವಾರ (ಮಾ.12) ರಾಜ್ಯಸಭೆಯಲ್ಲಿ ಪ್ರಸ್ತಾಪಿಸಿದರು. ಘಟನೆ ಬಗ್ಗೆ...

56 ಸಾವಿರ ಹುದ್ದೆಗಳ ನೇಮಕಾತಿಯಲ್ಲಿ ಒಳಮೀಸಲಾತಿ ಅನ್ವಯಕ್ಕೆ ಆಗ್ರಹಿಸಿ ಎಡಗೈ ಸಮುದಾಯದಿಂದ ಬೃಹತ್ ಪ್ರತಿಭಟನೆ 

ಸರ್ಕಾರವು ಒಳ ಮೀಸಲಾತಿಯನ್ನು ತಪ್ಪಿಸುವ ಹುನ್ನಾರದಿಂದ ತರಾತುರಿಯಲ್ಲಿ 56,432 ಹುದ್ದೆಗಳ ನೇಮಕಾತಿಗೆ ಆದೇಶ ಹೊರಡಿಸಿದೆ. ನೇಮಕಾತಿಯಲ್ಲಿ ಒಳಮೀಸಲಾತಿ ಅಳವಡಿಸದೆ, ಎಡಗೈ ಸಮುದಾಯಗಳಿಗೆ ಸರ್ಕಾರ ಮತ್ತೆ ವಂಚಿಸುತ್ತಿದೆ ಎಂದು ‘ಒಳಮೀಸಲಾತಿ ಹೋರಾಟ ಸಮಿತಿ’ ಆರೋಪಿಸಿದೆ....

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಸೋಲು

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ವಿರೋಧ ಪಕ್ಷಗಳು ಮಂಡಿಸಿದ್ದ ಅವಿಶ್ವಾಸ ನಿರ್ಣಯವು ಬುಧವಾರ (ಮಾ.11) ಧ್ವನಿ ಮತದ ಮೂಲಕ ತಿರಸ್ಕಾರಗೊಂಡಿದೆ. ಸದನದಲ್ಲಿ ವಿರೋಧ ಪಕ್ಷಗಳ ತೀವ್ರ ಗದ್ದಲ ಮತ್ತು ಘೋಷಣೆಗಳ ನಡುವೆಯೇ ಸ್ಪೀಕರ್...

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...

ಜಾರ್ಖಂಡ್| ಆಂಬ್ಯುಲೆನ್ಸ್ ನಿರಾಕರಿಸಿದ ಆಸ್ಪತ್ರೆ ಸಿಬ್ಬಂದಿ; ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿದ ತಂದೆ

ಆಸ್ಪತ್ರೆ ಸಿಬ್ಬಂದಿ ಆಂಬ್ಯುಲೆನ್ಸ್ ನಿರಾಕರಿಸಿದ್ದರಿಂದ ಕೂಲಿಕಾರ ತಂದೆಯೊಬ್ಬ ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿರುವ ಹೃದಯವಿದ್ರಾವಕ ಘಟನೆಯೊಂದು ಜಾರ್ಖಂಡ್‌ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕಳೆದ ಶನಿವಾರ ನಡೆದಿದೆ ಎನ್ನಲಾದ...

ಮಧುರಾಂತಕಂ ಬಳಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಪೋಕ್ಸೋ ಪ್ರಕರಣದಡಿ ಓರ್ವ ರೌಡಿ ಶೀಟರ್ ಬಂಧನ

ಚೆನ್ನೈ (ಚೆಂಗಲ್ಪಟ್ಟು): ಸೋಮವಾರ ರಾತ್ರಿ ಮಧುರಾಂಟಕಂ ಬಳಿಯ ಜಲಮೂಲದ ದಡದಲ್ಲಿ 14 ವರ್ಷದ ಬಾಲಕಿಯ ಮೇಲೆ ರೌಡಿ ಶೀಟರ್ ಮತ್ತು ಆತನ ಸಹಚರರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ವರದಿಯಾಗಿದೆ. ಪ್ರಕರಣ ಸಂಬಂಧ ಪೋಕ್ಸೋ...

ಮುಸ್ಲಿಂ ಮಹಿಳೆಯರ ವಿರುದ್ಧದ ಷರಿಯಾ ಕಾನೂನಿಗೆ ಏಕರೂಪ ನಾಗರಿಕ ಸಂಹಿತೆ ಪರಿಹಾರ: ಸುಪ್ರೀಂ ಕೋರ್ಟ್

"ಮುಸ್ಲಿಂ ವೈಯಕ್ತಿಕ ಕಾನೂನಿನಡಿಯಲ್ಲಿ ತಾರತಮ್ಯದ ಆನುವಂಶಿಕ ನಿಬಂಧನೆಗಳನ್ನು ಪರಿಹರಿಸಲು ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಅತ್ಯಂತ ಪರಿಣಾಮಕಾರಿ ಪರಿಹಾರ ಎಂದು ಸುಪ್ರೀಂ ಕೋರ್ಟ್ ಮಂಗಳವಾರ (ಮಾ.20) ಹೇಳಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ...

ಮುಂಬೈ: ಬಜೆಟ್ ಅಧಿವೇಶನದ ನಡುವೆ ವಿಧಾನ ಭವನದ ಬಳಿ ವ್ಯಕ್ತಿಯೊಬ್ಬನಿಂದ ಆತ್ಮಹತ್ಯೆಗೆ ಯತ್ನ: ವಶಕ್ಕೆ ಪಡೆದ ಪೊಲೀಸರು

ಮುಂಬೈ: ಮಾರ್ಚ್ 11, ಬುಧವಾರ ಮಹಾರಾಷ್ಟ್ರ ವಿಧಾನ ಭವನದ ಹೊರಗೆ ವ್ಯಕ್ತಿಯೊಬ್ಬರು ಆತ್ಮಾಹುತಿ ಮಾಡಿಕೊಳ್ಳಲು ಯತ್ನಿಸಿರುವುದಾಗಿ ವರದಿಯಾಗಿದೆ. ತಕ್ಷಣವೇ ಮುಂಬೈ ಪೊಲೀಸರು ಆತನನ್ನು ಬಂಧಿಸಿದ್ದಾರೆ.  2026 ರ ಮಹಾರಾಷ್ಟ್ರ ಬಜೆಟ್ ಅಧಿವೇಶನ ವಿಧಾನ ಭವನದಲ್ಲಿ...

ಕೋವಿಡ್ ಲಸಿಕೆ ಕೆಲ ಸಾವುಗಳಿಗೆ ಕಾರಣವಾಗಿದೆ ಎಂದು ಅಧಿಕೃತ ದತ್ತಾಂಶ ತೋರಿಸಿದೆ, ಸರ್ಕಾರ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸಾಧ್ಯವಿಲ್ಲ : ಸುಪ್ರೀಂ ಕೋರ್ಟ್

ಸರ್ಕಾರದ ಅಧೀನದ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯ ಮೂಲಕ ಕೋವಿಡ್ ಲಸಿಕೆಯನ್ನು ವಿತರಿಸಲಾಗಿದೆ. ಕೋವಿಡ್ ಲಸಿಕೆ ಪಡೆದ ಬಳಿಕ ಕೆಲ ಸಾವುಗಳು ಸಂಭವಿಸಿರುವುದನ್ನು ಅಧಿಕೃತ ದತ್ತಾಂಶಗಳೇ ದೃಢಪಡಿಸಿವೆ. ಹೀಗಿರುವಾಗ, ಲಸಿಕೆ ಹಾಕಿಸಿಕೊಂಡ ನಂತರ ಸಾವು...