Homeಚಳವಳಿಕಾರ್ಮಿಕರು, ರೈತರ ಬದುಕಿನೊಂದಿಗೆ ಚೆಲ್ಲಾಟವಾಡದಿರಿ: ಕಾರ್ಮಿಕ ಮುಖಂಡರ ಒತ್ತಾಯ

ಕಾರ್ಮಿಕರು, ರೈತರ ಬದುಕಿನೊಂದಿಗೆ ಚೆಲ್ಲಾಟವಾಡದಿರಿ: ಕಾರ್ಮಿಕ ಮುಖಂಡರ ಒತ್ತಾಯ

ರೈತ ಹಾಗೂ ದುಡಿಯುವ ಜನರ ಬದುಕನ್ನು ಅತಂತ್ರಗೊಳಿಸುವ ಕಾರ್ಮಿಕ ಕಾಯ್ದೆಗಳ ತಿದ್ದುಪಡಿ ಮತ್ತು ಎಪಿಎಂಸಿ ಕಾಯ್ದೆಗೆ ತಿದ್ದುಪಡಿಯಂತಹ ಕೇಂದ್ರದ ಪ್ರಸ್ತಾಪಗಳಿಗೆ ಒಪ್ಪದೆ, ಅವುಗಳನ್ನು ಕೈ ಬಿಡಬೇಕು ಎಂದು ಹತ್ತಾರು ಸಂಘಟನೆಗಳು ಮುಖ್ಯಮಂತ್ರಿಗಳನ್ನು ಒತ್ತಾಯಿಸಿವೆ.

- Advertisement -
- Advertisement -

ಮುಖ್ಯಮಂತ್ರಿಗಳೇ ಕೇಂದ್ರದ ಒತ್ತಡಕ್ಕೆ ಮಣಿದು ಕಾರ್ಮಿಕರು ಹಾಗೂ ರೈತರ ಬದುಕಿನ ಜೊತೆ ಚೆಲ್ಲಾಟವಾಡದಿರಿ ಎಂದು ರೈತ ಹಾಗೂ ಕಾರ್ಮಿಕ ಮುಖಂಡರು ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ಅವರನ್ನು ಒತ್ತಾಯಿಸಿದ್ದಾರೆ.

ಕಾರ್ಮಿಕ ಸಂಘಟನೆ, ರೈತ ಸಂಘಟನೆ ಹಾಗೂ ಪ್ರಗತಿಪರ ಸಂಘಟನೆಗಳು ಜಂಟಿ ಪತ್ರಿಕಾ ಹೇಳಿಕೆ ನೀಡಿದ್ದು, ರೈತ ಹಾಗೂ ದುಡಿಯುವ ಜನರ ಬದುಕನ್ನು ಅತಂತ್ರಗೊಳಿಸುವ ಕಾರ್ಮಿಕ ಕಾಯ್ದೆಗಳ ತಿದ್ದುಪಡಿ ಮತ್ತು ಎಪಿಎಂಸಿ ಕಾಯ್ದೆಗೆ ತಿದ್ದುಪಡಿಯಂತಹ ಕೇಂದ್ರದ ಪ್ರಸ್ತಾಪಗಳಿಗೆ ಒಪ್ಪದೆ, ಅವುಗಳನ್ನು ಕೈ ಬಿಡಬೇಕು ಎಂದು ಹತ್ತಾರು ಸಂಘಟನೆಗಳು ಮುಖ್ಯಮಂತ್ರಿಗಳನ್ನು ಒತ್ತಾಯಿಸಿವೆ.

ರೈತ ಹಾಗೂ ಕಾರ್ಮಿಕ ಸಂಘಟನೆಗಳು ಜೊತೆಗೂಡಿ ಕೇಂದ್ರ ಸರ್ಕಾರದ ವಿರುದ್ದ ಮೇ 20 ರಿಂದ 27ರ ತನಕ “ಶ್ರಮಿಕ ಹಕ್ಕು ಅಭಿಯಾನ”ವನ್ನು ಹಮ್ಮಿಕೊಂಡಿದ್ದು, ಮೇ 22 ರಂದು ಅಖಿಲ ಭಾರತ ಕಾರ್ಮಿಕರ ಹೋರಾಟ ಮತ್ತು ಮೇ 27ರಂದು ಅಖಿಲ ಭಾರತ ರೈತರ ಹೋರಾಟಗಳು ನಡೆಯಲಿದೆ ಎಂದು ಹೇಳಿಕೆಯಲ್ಲಿ ತಿಳಿಸಲಾಗಿದೆ.


ಓದಿ: ಕಾರ್ಮಿಕ ಕಾಯ್ದೆ ತಿದ್ದುಪಡಿಗಿದೆ ಹುನ್ನಾರದ ಇತಿಹಾಸ : ಎಸ್‌. ಬಾಲನ್


ಪತ್ರಿಕಾ ಹೇಳಿಕೆಯಲ್ಲಿ, “ಕೊರೋನಾ ಪಿಡುಗಿನ ಸಂಕಷ್ಟಗಳಿಂದ ಈಗಾಗಲೇ ದುಡಿಯುವ ಜನರು ತತ್ತರಿಸಿಹೋಗಿದ್ದರೆ. ವಲಸೆ ಕಾರ್ಮಿಕರ ಕಣ್ಣೀರು ನಿಮ್ಮ ಕಣ್ಣಿಗೆ ಬಿದ್ದಿದೆಯೋ ಇಲ್ಲವೋ ಗೊತ್ತಿಲ್ಲ. ಸರಿಯಾದ ಊಟವಿಲ್ಲದ ಮಕ್ಕಳ ಆಕ್ರಂದನವಾದರೂ ಕೇಳಿಸಿರಬೇಕು. ಕೋಟ್ಯಾಂತರ ಕೈಗಳು ಕೆಲಸವಿಲ್ಲದೆ ಕೂತಿವೆ. ಮನೆಮಂದಿಗೆ ಸಾಕಾಗುವಷ್ಟು ಆಹಾರ ಬಹುಪಾಲು ದುಡಿಯುವ ಜನರ ಮನೆಗಳಲ್ಲಿ ಇಲ್ಲ. ಸಮಗ್ರ ಆಹಾರ ಸಾಮಗ್ರಿ ಕಿಟ್ ಕೊಡಿಯೆಂದರೆ, ಸರ್ಕಾರ ಮದ್ಯದ ಅಂಗಡಿಗಳನ್ನು ತೆರೆದು ಜನರ ಇದ್ದಬದ್ದ ಹಣವನ್ನೂ ಬಾಚಲು ಅವಕಾಶ ಮಾಡಿಕೊಟ್ಟಿದೆ” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇಂತಹಾ ಪರಿಸ್ಥಿತಿಯಲ್ಲಿ ಗಾಯದ ಮೇಲೆ ಬರೆ ಎಳೆದಂತೆ ಕಾರ್ಮಿಕರ ಹಾಗೂ ರೈತರ ಹಿತಕಾಯಲು ಇದ್ದ ಕಾನೂನುಗಳನ್ನು ಕಿತ್ತು ಕಾರ್ಪೊರೇಟ್ ಶಕ್ತಿಗಳ ದರೋಡೆಗೆ ಅವಕಾಶ ಮಾಡಿಕೊಡುವ ನೀತಿಗಳನ್ನು ಕೇಂದ್ರ ಸರ್ಕಾರ ಪ್ರಸ್ತಾಪಿಸುತ್ತಿದೆ. ಕಾರ್ಮಿಕರ ದುಡಿಮೆಯ ಅವಧಿಯನ್ನು ಹೆಚ್ಚಿಸಿ, ಕಾರ್ಮಿಕರ ಹಿತ ರಕ್ಷಿಸಲು ಇದ್ದ ಕಾನೂನುಗಳನ್ನು ರದ್ದುಗೊಳಿಸುವ ಪ್ರಕ್ರಿಯೆ ದೇಶದಾದ್ಯಂತ ಈಗಾಗಲೇ ಪ್ರಾರಂಭವಾಗಿದೆ. ಇದಲ್ಲದೆ ಕೃಷಿ ಯೋಗ್ಯ ಭೂಮಿಯನ್ನು ಕಾರ್ಪೊರೇಟ್ ಶಕ್ತಿಗಳಿಗೆ ಪರಭಾರೆ ಮಾಡಲು ಗೇಣಿ ನೀತಿಯಲ್ಲಿ, ಕೃಷಿ ಭೂಮಿಯ ಖರೀದಿಯ ನಿಯಮಗಳಲ್ಲಿ ಬದಲಾವಣೆ ತರುತ್ತಿರುವುದಲ್ಲದೆ, ರೈತರ ಬೆಳೆಗೆ ಒಂದಷ್ಟಾದರೂ ಬೆಲೆ ಸುರಕ್ಷತೆಯನ್ನು ಕೊಡುತ್ತಿದ್ದ ಎಪಿಎಂಸಿಯನ್ನು ದುರ್ಬಲಗೊಳಿಸುವ ನೀತಿಯೂ ನಿಮ್ಮ ಮುಂದಿದೆ.” ಎಂದು ಕಿಡಿಕಾರಿದ್ದಾರೆ.


ಓದಿ: ಕಾರ್ಮಿಕ ಕಾಯ್ದೆಗಳಿಗೆ ಅವಸರದ ತಿದ್ದುಪಡಿ ಹಿಂದೆ ದುರುದ್ದೇಶದ ವಾಸನೆಯಿದೆ : ಸಿದ್ದರಾಮಯ್ಯ


ಇಂತಹ ನೀತಿಗಳನ್ನು ತಿರುಚುವ ಕೆಲಸವನ್ನು ಕೂಡಲೇ ಕೈಬಿಡಬೇಕು. ಕಾರ್ಪೊರೇಟ್ ಒತ್ತಡಕ್ಕೆ ಮಣಿಯಬಾರದು, ಕೇಂದ್ರ ಸರ್ಕಾರದ ಪ್ರಸ್ತಾಪವನ್ನು ಒಪ್ಪಬಾರದು. ಕಾರ್ಮಿಕರನ್ನು ಮತ್ತು ರೈತರನ್ನು ಬಲಿಕೊಡುವ ಪ್ರಯತ್ನ ಮಾಡಿದಲ್ಲಿ ಇಡೀ ರಾಜ್ಯದ ತೀವ್ರ ವಿರೋಧವನ್ನು ಖಂಡಿತ ಎದುರಿಸಬೇಕಾಗುತ್ತದೆ ಎಂದು ಸಂಘಟನೆಗಳು ತಮ್ಮ ಪತ್ರಿಕಾ ಹೇಳಿಕೆಯಲ್ಲಿ ಎಚ್ಚರಿಸಿವೆ.

ಪತ್ರಿಕಾ ಹೇಳಿಕೆಗೆ ಟ್ರೇಡ್ ಯೂನಿಯನ್ ಸೆಂಟರ್ ಆಫ್ ಇಂಡಿಯಾದ ಮಾನಸಯ್ಯ, ಭಾರತೀಯ ಫ್ಯಾಸಿಸ್ಟ್ ವಿರೋಧಿ ಒಕ್ಕೂಟದ ಬಾಲನ್, ಗ್ರಾಮೀಣ ಕೂಲಿ ಕಾರ್ಮಿಕರ ಸಂಘಟನೆಯ ಬಸವರಾಜು, ಭೂಮಿ ಮತ್ತು ವಸತಿ ಹಕ್ಕು ವಂಚಿತರ ಹೋರಾಟ ಸಮಿತಿಯ ಕುಮಾರ್ ಸಮತಳ, ಆಹಾರ ಹಕ್ಕು ಸಮಿತಿಯ ಶಾರದಾ ಗೋಪಾಲ್, ಕರ್ನಾಟಕ ರೈತ ಸಂಘಟನೆಯ ಡಿ. ಹೆಚ್. ಪೂಜಾರ್, ಕರ್ನಾಟಕ ಶ್ರಮಿಕ ಶಕ್ತಿಯ ವರದ ರಾಜೇಂದ್ರ, ಕರ್ನಾಟಕ ಜನಶಕ್ತಿಯ ಮಲ್ಲಿಗೆ ಮುಂತಾದವರು ಸಹಿ ಮಾಡಿದ್ದಾರೆ.

ಬಿಬಿಎಂಪಿ ಗುತ್ತಿಗೆ ನೌಕರರ ಯುನಿಯನ್, ರೇಸ್ ಕೋರ್ಸ್ ಯುನಿಯನ್ ಬೆಂಗಳೂರು ಮತ್ತು ಮೈಸೂರು, ಬಿಡಬ್ಲೂಎಸ್‌ಎಸ್‌ಬಿ ಗುತ್ತಿಗೆ ನೌಕರರ ಸಂಘ, ಹೆಚ್‌ಎಎಲ್, ಬಿಇಎಮ್‌ಎಲ್ , ಬಿಹೆಚ್‌ಇಎಲ್ ಗುತ್ತಿಗೆ ನೌಕರರ ಸಂಘ, ಗಣಿ ಮತ್ತು ನಿರ್ಮಾಣ ಕಾರ್ಮಿಕರ ಸಂಘ, ಬಿಎಂಟಿಸಿ ಹಾಗೂ ಕೆಎಸ್ಸಾರ್ಟಿಸಿ ನೌಕರರ ಸಂಘ, ಮೈಕೋ ಬಾಸ್ ಗುತ್ತಿಗೆ ನೌಕರರ ಸಂಘಗಳು ಪ್ರತಭಟನೆಗೆ ಬೆಂಬಲ ಸೂಚಿಸಿವೆ.


ಓದಿ: ವಲಸೆ ಕಾರ್ಮಿಕರ ಸ್ಥಿತಿ ಕರುಣಾಜನಕವಾಗಿದೆ; ಅವರ ಕಷ್ಟ ನಿವಾರಣಗೆ ಕೇಂದ್ರ, ರಾಜ್ಯ ಸರ್ಕಾರಗಳು ಮಾಡಿದ್ದೇನು?: ಮದ್ರಾಸ್ ಹೈಕೋರ್ಟ್ ಪ್ರಶ್ನೆ


ವಿಡಿಯೊ ನೋಡಿ: ಉತ್ತರಪ್ರದೇಶದಿಂದ ಬಿಹಾರಕ್ಕೆ ತೆರಳಲು ರೈಲು ನೋಂದಣಿ ಮಾಡಿಸಲು ಮುಗಿಬಿದ್ದಿರುವ ವಲಸೆ ಕಾರ್ಮಿಕರು.


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...

ಒಡಿಶಾ| ದಲಿತರು ವಾಸಿಸುವ ಪ್ರದೇಶಕ್ಕೆ ಕುಡಿಯುವ ನೀರು-ವಿದ್ಯುತ್ ಸಂಪರ್ಕ ಕಡಿತ

ಒಡಿಶಾದ ಬಲಂಗೀರ್ ಜಿಲ್ಲೆಯಲ್ಲಿ ಜಾತಿ ಆಧಾರಿತ ತಾರತಮ್ಯವಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ. ಆದರೆ, ಗ್ರಾಮದ ಅಧಿಕಾರಿಯೊಬ್ಬರು ಈ ಅಡಚಣೆಗೆ ಸ್ಥಳೀಯ ಕಲಹ ಕಾರಣ ಎಂದು ಆರೋಪಿಸಿದ್ದಾರೆ. ಜಿಲ್ಲೆಯ ತುರೆಕೆಲಾ ಬ್ಲಾಕ್‌ನ ಡುಮೆರ್ಚುವಾನ್ ಗ್ರಾಮದಲ್ಲಿ...

ತಮಿಳುನಾಡು ವಿಧಾನಸಭಾ ಚುನಾವಣೆ: ಡಿಎಂಕೆ ನೇತೃತ್ವದ ಮೈತ್ರಿಕೂಟಕ್ಕೆ ಡಿಎಂಡಿಕೆ ಸೇರ್ಪಡೆ

ಚೆನ್ನೈ: ದಿವಂಗತ ನಟ ವಿಜಯಕಾಂತ್ ಅವರ ದೇಶೀಯ ಮುರ್ಪೋಕ್ಕು ದ್ರಾವಿಡ ಕಳಗಂ (ಡಿಎಂಡಿಕೆ) ಗುರುವಾರ ದ್ರಾವಿಡ ಮುನ್ನೇತ್ರ ಕಳಗಂ ನೇತೃತ್ವದ ಜಾತ್ಯತೀತ ಪ್ರಗತಿಪರ ಒಕ್ಕೂಟ (ಎಸ್‌ಪಿಎ)ವನ್ನು 21ವರ್ಷಗಳ ಅಸ್ತಿತ್ವದ ನಂತರ ಮೊದಲ ಬಾರಿಗೆ...

ಟ್ರಕ್ ಚಾಲಕ ರಸ್ತೆಯಲ್ಲಿ ನಮಾಝ್ ಮಾಡಿದ್ದರಿಂದ ಟ್ರಾಫಿಕ್ ಜಾಮ್ ಎಂದು ಸುಳ್ಳು ಸುದ್ದಿ ಪ್ರಸಾರ : ಝೀ ನ್ಯೂಸ್‌ಗೆ 1 ಲಕ್ಷ ರೂ. ದಂಡ

ಮುಸ್ಲಿಂ ವ್ಯಕ್ತಿಯೊಬ್ಬರು ನಮಾಝ್ ಮಾಡಲು ಹೆದ್ದಾರಿ ಮಧ್ಯೆ ಟ್ರಕ್‌ ನಿಲ್ಲಿಸಿದ್ದರಿಂದ ಟ್ರಾಫಿಕ್ ಜಾಮ್‌ ಉಂಟಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿದ ಝೀ ನ್ಯೂಸ್‌ ಚಾನೆಲ್‌ಗೆ ಸುದ್ದಿ ಪ್ರಸಾರಕರು ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರ(ಎನ್‌ಬಿಡಿಎಸ್‌ಎ)...

ಗುಜರಾತ್‌| ಜಾತಿ ಆಧಾರಿತ ಜಗಳದಲ್ಲಿ ದಲಿತ ಯುವಕನ ಮೇಲೆ ಚಾಕುವಿನಿಂದ ದಾಳಿ

ಶನಿವಾರ ತಡರಾತ್ರಿ ರಾಣಿಪ್‌ನಲ್ಲಿ ನಡೆದ ಸಣ್ಣ ಭಿನ್ನಾಭಿಪ್ರಾಯವೊಂದು ಹಿಂಸಾಚಾರಕ್ಕೆ ತಿರುಗಿದ್ದು, 25 ವರ್ಷದ ದಲಿತ ಯುವಕ ಸಾಹಿಲ್ ವಘೇಲಾ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ. ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಘಟನೆಯು ಈ ಪ್ರದೇಶದಲ್ಲಿ...