Homeಚಳವಳಿಕಾರ್ಮಿಕರು, ರೈತರ ಬದುಕಿನೊಂದಿಗೆ ಚೆಲ್ಲಾಟವಾಡದಿರಿ: ಕಾರ್ಮಿಕ ಮುಖಂಡರ ಒತ್ತಾಯ

ಕಾರ್ಮಿಕರು, ರೈತರ ಬದುಕಿನೊಂದಿಗೆ ಚೆಲ್ಲಾಟವಾಡದಿರಿ: ಕಾರ್ಮಿಕ ಮುಖಂಡರ ಒತ್ತಾಯ

ರೈತ ಹಾಗೂ ದುಡಿಯುವ ಜನರ ಬದುಕನ್ನು ಅತಂತ್ರಗೊಳಿಸುವ ಕಾರ್ಮಿಕ ಕಾಯ್ದೆಗಳ ತಿದ್ದುಪಡಿ ಮತ್ತು ಎಪಿಎಂಸಿ ಕಾಯ್ದೆಗೆ ತಿದ್ದುಪಡಿಯಂತಹ ಕೇಂದ್ರದ ಪ್ರಸ್ತಾಪಗಳಿಗೆ ಒಪ್ಪದೆ, ಅವುಗಳನ್ನು ಕೈ ಬಿಡಬೇಕು ಎಂದು ಹತ್ತಾರು ಸಂಘಟನೆಗಳು ಮುಖ್ಯಮಂತ್ರಿಗಳನ್ನು ಒತ್ತಾಯಿಸಿವೆ.

- Advertisement -
- Advertisement -

ಮುಖ್ಯಮಂತ್ರಿಗಳೇ ಕೇಂದ್ರದ ಒತ್ತಡಕ್ಕೆ ಮಣಿದು ಕಾರ್ಮಿಕರು ಹಾಗೂ ರೈತರ ಬದುಕಿನ ಜೊತೆ ಚೆಲ್ಲಾಟವಾಡದಿರಿ ಎಂದು ರೈತ ಹಾಗೂ ಕಾರ್ಮಿಕ ಮುಖಂಡರು ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ಅವರನ್ನು ಒತ್ತಾಯಿಸಿದ್ದಾರೆ.

ಕಾರ್ಮಿಕ ಸಂಘಟನೆ, ರೈತ ಸಂಘಟನೆ ಹಾಗೂ ಪ್ರಗತಿಪರ ಸಂಘಟನೆಗಳು ಜಂಟಿ ಪತ್ರಿಕಾ ಹೇಳಿಕೆ ನೀಡಿದ್ದು, ರೈತ ಹಾಗೂ ದುಡಿಯುವ ಜನರ ಬದುಕನ್ನು ಅತಂತ್ರಗೊಳಿಸುವ ಕಾರ್ಮಿಕ ಕಾಯ್ದೆಗಳ ತಿದ್ದುಪಡಿ ಮತ್ತು ಎಪಿಎಂಸಿ ಕಾಯ್ದೆಗೆ ತಿದ್ದುಪಡಿಯಂತಹ ಕೇಂದ್ರದ ಪ್ರಸ್ತಾಪಗಳಿಗೆ ಒಪ್ಪದೆ, ಅವುಗಳನ್ನು ಕೈ ಬಿಡಬೇಕು ಎಂದು ಹತ್ತಾರು ಸಂಘಟನೆಗಳು ಮುಖ್ಯಮಂತ್ರಿಗಳನ್ನು ಒತ್ತಾಯಿಸಿವೆ.

ರೈತ ಹಾಗೂ ಕಾರ್ಮಿಕ ಸಂಘಟನೆಗಳು ಜೊತೆಗೂಡಿ ಕೇಂದ್ರ ಸರ್ಕಾರದ ವಿರುದ್ದ ಮೇ 20 ರಿಂದ 27ರ ತನಕ “ಶ್ರಮಿಕ ಹಕ್ಕು ಅಭಿಯಾನ”ವನ್ನು ಹಮ್ಮಿಕೊಂಡಿದ್ದು, ಮೇ 22 ರಂದು ಅಖಿಲ ಭಾರತ ಕಾರ್ಮಿಕರ ಹೋರಾಟ ಮತ್ತು ಮೇ 27ರಂದು ಅಖಿಲ ಭಾರತ ರೈತರ ಹೋರಾಟಗಳು ನಡೆಯಲಿದೆ ಎಂದು ಹೇಳಿಕೆಯಲ್ಲಿ ತಿಳಿಸಲಾಗಿದೆ.


ಓದಿ: ಕಾರ್ಮಿಕ ಕಾಯ್ದೆ ತಿದ್ದುಪಡಿಗಿದೆ ಹುನ್ನಾರದ ಇತಿಹಾಸ : ಎಸ್‌. ಬಾಲನ್


ಪತ್ರಿಕಾ ಹೇಳಿಕೆಯಲ್ಲಿ, “ಕೊರೋನಾ ಪಿಡುಗಿನ ಸಂಕಷ್ಟಗಳಿಂದ ಈಗಾಗಲೇ ದುಡಿಯುವ ಜನರು ತತ್ತರಿಸಿಹೋಗಿದ್ದರೆ. ವಲಸೆ ಕಾರ್ಮಿಕರ ಕಣ್ಣೀರು ನಿಮ್ಮ ಕಣ್ಣಿಗೆ ಬಿದ್ದಿದೆಯೋ ಇಲ್ಲವೋ ಗೊತ್ತಿಲ್ಲ. ಸರಿಯಾದ ಊಟವಿಲ್ಲದ ಮಕ್ಕಳ ಆಕ್ರಂದನವಾದರೂ ಕೇಳಿಸಿರಬೇಕು. ಕೋಟ್ಯಾಂತರ ಕೈಗಳು ಕೆಲಸವಿಲ್ಲದೆ ಕೂತಿವೆ. ಮನೆಮಂದಿಗೆ ಸಾಕಾಗುವಷ್ಟು ಆಹಾರ ಬಹುಪಾಲು ದುಡಿಯುವ ಜನರ ಮನೆಗಳಲ್ಲಿ ಇಲ್ಲ. ಸಮಗ್ರ ಆಹಾರ ಸಾಮಗ್ರಿ ಕಿಟ್ ಕೊಡಿಯೆಂದರೆ, ಸರ್ಕಾರ ಮದ್ಯದ ಅಂಗಡಿಗಳನ್ನು ತೆರೆದು ಜನರ ಇದ್ದಬದ್ದ ಹಣವನ್ನೂ ಬಾಚಲು ಅವಕಾಶ ಮಾಡಿಕೊಟ್ಟಿದೆ” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇಂತಹಾ ಪರಿಸ್ಥಿತಿಯಲ್ಲಿ ಗಾಯದ ಮೇಲೆ ಬರೆ ಎಳೆದಂತೆ ಕಾರ್ಮಿಕರ ಹಾಗೂ ರೈತರ ಹಿತಕಾಯಲು ಇದ್ದ ಕಾನೂನುಗಳನ್ನು ಕಿತ್ತು ಕಾರ್ಪೊರೇಟ್ ಶಕ್ತಿಗಳ ದರೋಡೆಗೆ ಅವಕಾಶ ಮಾಡಿಕೊಡುವ ನೀತಿಗಳನ್ನು ಕೇಂದ್ರ ಸರ್ಕಾರ ಪ್ರಸ್ತಾಪಿಸುತ್ತಿದೆ. ಕಾರ್ಮಿಕರ ದುಡಿಮೆಯ ಅವಧಿಯನ್ನು ಹೆಚ್ಚಿಸಿ, ಕಾರ್ಮಿಕರ ಹಿತ ರಕ್ಷಿಸಲು ಇದ್ದ ಕಾನೂನುಗಳನ್ನು ರದ್ದುಗೊಳಿಸುವ ಪ್ರಕ್ರಿಯೆ ದೇಶದಾದ್ಯಂತ ಈಗಾಗಲೇ ಪ್ರಾರಂಭವಾಗಿದೆ. ಇದಲ್ಲದೆ ಕೃಷಿ ಯೋಗ್ಯ ಭೂಮಿಯನ್ನು ಕಾರ್ಪೊರೇಟ್ ಶಕ್ತಿಗಳಿಗೆ ಪರಭಾರೆ ಮಾಡಲು ಗೇಣಿ ನೀತಿಯಲ್ಲಿ, ಕೃಷಿ ಭೂಮಿಯ ಖರೀದಿಯ ನಿಯಮಗಳಲ್ಲಿ ಬದಲಾವಣೆ ತರುತ್ತಿರುವುದಲ್ಲದೆ, ರೈತರ ಬೆಳೆಗೆ ಒಂದಷ್ಟಾದರೂ ಬೆಲೆ ಸುರಕ್ಷತೆಯನ್ನು ಕೊಡುತ್ತಿದ್ದ ಎಪಿಎಂಸಿಯನ್ನು ದುರ್ಬಲಗೊಳಿಸುವ ನೀತಿಯೂ ನಿಮ್ಮ ಮುಂದಿದೆ.” ಎಂದು ಕಿಡಿಕಾರಿದ್ದಾರೆ.


ಓದಿ: ಕಾರ್ಮಿಕ ಕಾಯ್ದೆಗಳಿಗೆ ಅವಸರದ ತಿದ್ದುಪಡಿ ಹಿಂದೆ ದುರುದ್ದೇಶದ ವಾಸನೆಯಿದೆ : ಸಿದ್ದರಾಮಯ್ಯ


ಇಂತಹ ನೀತಿಗಳನ್ನು ತಿರುಚುವ ಕೆಲಸವನ್ನು ಕೂಡಲೇ ಕೈಬಿಡಬೇಕು. ಕಾರ್ಪೊರೇಟ್ ಒತ್ತಡಕ್ಕೆ ಮಣಿಯಬಾರದು, ಕೇಂದ್ರ ಸರ್ಕಾರದ ಪ್ರಸ್ತಾಪವನ್ನು ಒಪ್ಪಬಾರದು. ಕಾರ್ಮಿಕರನ್ನು ಮತ್ತು ರೈತರನ್ನು ಬಲಿಕೊಡುವ ಪ್ರಯತ್ನ ಮಾಡಿದಲ್ಲಿ ಇಡೀ ರಾಜ್ಯದ ತೀವ್ರ ವಿರೋಧವನ್ನು ಖಂಡಿತ ಎದುರಿಸಬೇಕಾಗುತ್ತದೆ ಎಂದು ಸಂಘಟನೆಗಳು ತಮ್ಮ ಪತ್ರಿಕಾ ಹೇಳಿಕೆಯಲ್ಲಿ ಎಚ್ಚರಿಸಿವೆ.

ಪತ್ರಿಕಾ ಹೇಳಿಕೆಗೆ ಟ್ರೇಡ್ ಯೂನಿಯನ್ ಸೆಂಟರ್ ಆಫ್ ಇಂಡಿಯಾದ ಮಾನಸಯ್ಯ, ಭಾರತೀಯ ಫ್ಯಾಸಿಸ್ಟ್ ವಿರೋಧಿ ಒಕ್ಕೂಟದ ಬಾಲನ್, ಗ್ರಾಮೀಣ ಕೂಲಿ ಕಾರ್ಮಿಕರ ಸಂಘಟನೆಯ ಬಸವರಾಜು, ಭೂಮಿ ಮತ್ತು ವಸತಿ ಹಕ್ಕು ವಂಚಿತರ ಹೋರಾಟ ಸಮಿತಿಯ ಕುಮಾರ್ ಸಮತಳ, ಆಹಾರ ಹಕ್ಕು ಸಮಿತಿಯ ಶಾರದಾ ಗೋಪಾಲ್, ಕರ್ನಾಟಕ ರೈತ ಸಂಘಟನೆಯ ಡಿ. ಹೆಚ್. ಪೂಜಾರ್, ಕರ್ನಾಟಕ ಶ್ರಮಿಕ ಶಕ್ತಿಯ ವರದ ರಾಜೇಂದ್ರ, ಕರ್ನಾಟಕ ಜನಶಕ್ತಿಯ ಮಲ್ಲಿಗೆ ಮುಂತಾದವರು ಸಹಿ ಮಾಡಿದ್ದಾರೆ.

ಬಿಬಿಎಂಪಿ ಗುತ್ತಿಗೆ ನೌಕರರ ಯುನಿಯನ್, ರೇಸ್ ಕೋರ್ಸ್ ಯುನಿಯನ್ ಬೆಂಗಳೂರು ಮತ್ತು ಮೈಸೂರು, ಬಿಡಬ್ಲೂಎಸ್‌ಎಸ್‌ಬಿ ಗುತ್ತಿಗೆ ನೌಕರರ ಸಂಘ, ಹೆಚ್‌ಎಎಲ್, ಬಿಇಎಮ್‌ಎಲ್ , ಬಿಹೆಚ್‌ಇಎಲ್ ಗುತ್ತಿಗೆ ನೌಕರರ ಸಂಘ, ಗಣಿ ಮತ್ತು ನಿರ್ಮಾಣ ಕಾರ್ಮಿಕರ ಸಂಘ, ಬಿಎಂಟಿಸಿ ಹಾಗೂ ಕೆಎಸ್ಸಾರ್ಟಿಸಿ ನೌಕರರ ಸಂಘ, ಮೈಕೋ ಬಾಸ್ ಗುತ್ತಿಗೆ ನೌಕರರ ಸಂಘಗಳು ಪ್ರತಭಟನೆಗೆ ಬೆಂಬಲ ಸೂಚಿಸಿವೆ.


ಓದಿ: ವಲಸೆ ಕಾರ್ಮಿಕರ ಸ್ಥಿತಿ ಕರುಣಾಜನಕವಾಗಿದೆ; ಅವರ ಕಷ್ಟ ನಿವಾರಣಗೆ ಕೇಂದ್ರ, ರಾಜ್ಯ ಸರ್ಕಾರಗಳು ಮಾಡಿದ್ದೇನು?: ಮದ್ರಾಸ್ ಹೈಕೋರ್ಟ್ ಪ್ರಶ್ನೆ


ವಿಡಿಯೊ ನೋಡಿ: ಉತ್ತರಪ್ರದೇಶದಿಂದ ಬಿಹಾರಕ್ಕೆ ತೆರಳಲು ರೈಲು ನೋಂದಣಿ ಮಾಡಿಸಲು ಮುಗಿಬಿದ್ದಿರುವ ವಲಸೆ ಕಾರ್ಮಿಕರು.


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...