Homeಚಳವಳಿಕಾರ್ಮಿಕರು, ರೈತರ ಬದುಕಿನೊಂದಿಗೆ ಚೆಲ್ಲಾಟವಾಡದಿರಿ: ಕಾರ್ಮಿಕ ಮುಖಂಡರ ಒತ್ತಾಯ

ಕಾರ್ಮಿಕರು, ರೈತರ ಬದುಕಿನೊಂದಿಗೆ ಚೆಲ್ಲಾಟವಾಡದಿರಿ: ಕಾರ್ಮಿಕ ಮುಖಂಡರ ಒತ್ತಾಯ

ರೈತ ಹಾಗೂ ದುಡಿಯುವ ಜನರ ಬದುಕನ್ನು ಅತಂತ್ರಗೊಳಿಸುವ ಕಾರ್ಮಿಕ ಕಾಯ್ದೆಗಳ ತಿದ್ದುಪಡಿ ಮತ್ತು ಎಪಿಎಂಸಿ ಕಾಯ್ದೆಗೆ ತಿದ್ದುಪಡಿಯಂತಹ ಕೇಂದ್ರದ ಪ್ರಸ್ತಾಪಗಳಿಗೆ ಒಪ್ಪದೆ, ಅವುಗಳನ್ನು ಕೈ ಬಿಡಬೇಕು ಎಂದು ಹತ್ತಾರು ಸಂಘಟನೆಗಳು ಮುಖ್ಯಮಂತ್ರಿಗಳನ್ನು ಒತ್ತಾಯಿಸಿವೆ.

- Advertisement -
- Advertisement -

ಮುಖ್ಯಮಂತ್ರಿಗಳೇ ಕೇಂದ್ರದ ಒತ್ತಡಕ್ಕೆ ಮಣಿದು ಕಾರ್ಮಿಕರು ಹಾಗೂ ರೈತರ ಬದುಕಿನ ಜೊತೆ ಚೆಲ್ಲಾಟವಾಡದಿರಿ ಎಂದು ರೈತ ಹಾಗೂ ಕಾರ್ಮಿಕ ಮುಖಂಡರು ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ಅವರನ್ನು ಒತ್ತಾಯಿಸಿದ್ದಾರೆ.

ಕಾರ್ಮಿಕ ಸಂಘಟನೆ, ರೈತ ಸಂಘಟನೆ ಹಾಗೂ ಪ್ರಗತಿಪರ ಸಂಘಟನೆಗಳು ಜಂಟಿ ಪತ್ರಿಕಾ ಹೇಳಿಕೆ ನೀಡಿದ್ದು, ರೈತ ಹಾಗೂ ದುಡಿಯುವ ಜನರ ಬದುಕನ್ನು ಅತಂತ್ರಗೊಳಿಸುವ ಕಾರ್ಮಿಕ ಕಾಯ್ದೆಗಳ ತಿದ್ದುಪಡಿ ಮತ್ತು ಎಪಿಎಂಸಿ ಕಾಯ್ದೆಗೆ ತಿದ್ದುಪಡಿಯಂತಹ ಕೇಂದ್ರದ ಪ್ರಸ್ತಾಪಗಳಿಗೆ ಒಪ್ಪದೆ, ಅವುಗಳನ್ನು ಕೈ ಬಿಡಬೇಕು ಎಂದು ಹತ್ತಾರು ಸಂಘಟನೆಗಳು ಮುಖ್ಯಮಂತ್ರಿಗಳನ್ನು ಒತ್ತಾಯಿಸಿವೆ.

ರೈತ ಹಾಗೂ ಕಾರ್ಮಿಕ ಸಂಘಟನೆಗಳು ಜೊತೆಗೂಡಿ ಕೇಂದ್ರ ಸರ್ಕಾರದ ವಿರುದ್ದ ಮೇ 20 ರಿಂದ 27ರ ತನಕ “ಶ್ರಮಿಕ ಹಕ್ಕು ಅಭಿಯಾನ”ವನ್ನು ಹಮ್ಮಿಕೊಂಡಿದ್ದು, ಮೇ 22 ರಂದು ಅಖಿಲ ಭಾರತ ಕಾರ್ಮಿಕರ ಹೋರಾಟ ಮತ್ತು ಮೇ 27ರಂದು ಅಖಿಲ ಭಾರತ ರೈತರ ಹೋರಾಟಗಳು ನಡೆಯಲಿದೆ ಎಂದು ಹೇಳಿಕೆಯಲ್ಲಿ ತಿಳಿಸಲಾಗಿದೆ.


ಓದಿ: ಕಾರ್ಮಿಕ ಕಾಯ್ದೆ ತಿದ್ದುಪಡಿಗಿದೆ ಹುನ್ನಾರದ ಇತಿಹಾಸ : ಎಸ್‌. ಬಾಲನ್


ಪತ್ರಿಕಾ ಹೇಳಿಕೆಯಲ್ಲಿ, “ಕೊರೋನಾ ಪಿಡುಗಿನ ಸಂಕಷ್ಟಗಳಿಂದ ಈಗಾಗಲೇ ದುಡಿಯುವ ಜನರು ತತ್ತರಿಸಿಹೋಗಿದ್ದರೆ. ವಲಸೆ ಕಾರ್ಮಿಕರ ಕಣ್ಣೀರು ನಿಮ್ಮ ಕಣ್ಣಿಗೆ ಬಿದ್ದಿದೆಯೋ ಇಲ್ಲವೋ ಗೊತ್ತಿಲ್ಲ. ಸರಿಯಾದ ಊಟವಿಲ್ಲದ ಮಕ್ಕಳ ಆಕ್ರಂದನವಾದರೂ ಕೇಳಿಸಿರಬೇಕು. ಕೋಟ್ಯಾಂತರ ಕೈಗಳು ಕೆಲಸವಿಲ್ಲದೆ ಕೂತಿವೆ. ಮನೆಮಂದಿಗೆ ಸಾಕಾಗುವಷ್ಟು ಆಹಾರ ಬಹುಪಾಲು ದುಡಿಯುವ ಜನರ ಮನೆಗಳಲ್ಲಿ ಇಲ್ಲ. ಸಮಗ್ರ ಆಹಾರ ಸಾಮಗ್ರಿ ಕಿಟ್ ಕೊಡಿಯೆಂದರೆ, ಸರ್ಕಾರ ಮದ್ಯದ ಅಂಗಡಿಗಳನ್ನು ತೆರೆದು ಜನರ ಇದ್ದಬದ್ದ ಹಣವನ್ನೂ ಬಾಚಲು ಅವಕಾಶ ಮಾಡಿಕೊಟ್ಟಿದೆ” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇಂತಹಾ ಪರಿಸ್ಥಿತಿಯಲ್ಲಿ ಗಾಯದ ಮೇಲೆ ಬರೆ ಎಳೆದಂತೆ ಕಾರ್ಮಿಕರ ಹಾಗೂ ರೈತರ ಹಿತಕಾಯಲು ಇದ್ದ ಕಾನೂನುಗಳನ್ನು ಕಿತ್ತು ಕಾರ್ಪೊರೇಟ್ ಶಕ್ತಿಗಳ ದರೋಡೆಗೆ ಅವಕಾಶ ಮಾಡಿಕೊಡುವ ನೀತಿಗಳನ್ನು ಕೇಂದ್ರ ಸರ್ಕಾರ ಪ್ರಸ್ತಾಪಿಸುತ್ತಿದೆ. ಕಾರ್ಮಿಕರ ದುಡಿಮೆಯ ಅವಧಿಯನ್ನು ಹೆಚ್ಚಿಸಿ, ಕಾರ್ಮಿಕರ ಹಿತ ರಕ್ಷಿಸಲು ಇದ್ದ ಕಾನೂನುಗಳನ್ನು ರದ್ದುಗೊಳಿಸುವ ಪ್ರಕ್ರಿಯೆ ದೇಶದಾದ್ಯಂತ ಈಗಾಗಲೇ ಪ್ರಾರಂಭವಾಗಿದೆ. ಇದಲ್ಲದೆ ಕೃಷಿ ಯೋಗ್ಯ ಭೂಮಿಯನ್ನು ಕಾರ್ಪೊರೇಟ್ ಶಕ್ತಿಗಳಿಗೆ ಪರಭಾರೆ ಮಾಡಲು ಗೇಣಿ ನೀತಿಯಲ್ಲಿ, ಕೃಷಿ ಭೂಮಿಯ ಖರೀದಿಯ ನಿಯಮಗಳಲ್ಲಿ ಬದಲಾವಣೆ ತರುತ್ತಿರುವುದಲ್ಲದೆ, ರೈತರ ಬೆಳೆಗೆ ಒಂದಷ್ಟಾದರೂ ಬೆಲೆ ಸುರಕ್ಷತೆಯನ್ನು ಕೊಡುತ್ತಿದ್ದ ಎಪಿಎಂಸಿಯನ್ನು ದುರ್ಬಲಗೊಳಿಸುವ ನೀತಿಯೂ ನಿಮ್ಮ ಮುಂದಿದೆ.” ಎಂದು ಕಿಡಿಕಾರಿದ್ದಾರೆ.


ಓದಿ: ಕಾರ್ಮಿಕ ಕಾಯ್ದೆಗಳಿಗೆ ಅವಸರದ ತಿದ್ದುಪಡಿ ಹಿಂದೆ ದುರುದ್ದೇಶದ ವಾಸನೆಯಿದೆ : ಸಿದ್ದರಾಮಯ್ಯ


ಇಂತಹ ನೀತಿಗಳನ್ನು ತಿರುಚುವ ಕೆಲಸವನ್ನು ಕೂಡಲೇ ಕೈಬಿಡಬೇಕು. ಕಾರ್ಪೊರೇಟ್ ಒತ್ತಡಕ್ಕೆ ಮಣಿಯಬಾರದು, ಕೇಂದ್ರ ಸರ್ಕಾರದ ಪ್ರಸ್ತಾಪವನ್ನು ಒಪ್ಪಬಾರದು. ಕಾರ್ಮಿಕರನ್ನು ಮತ್ತು ರೈತರನ್ನು ಬಲಿಕೊಡುವ ಪ್ರಯತ್ನ ಮಾಡಿದಲ್ಲಿ ಇಡೀ ರಾಜ್ಯದ ತೀವ್ರ ವಿರೋಧವನ್ನು ಖಂಡಿತ ಎದುರಿಸಬೇಕಾಗುತ್ತದೆ ಎಂದು ಸಂಘಟನೆಗಳು ತಮ್ಮ ಪತ್ರಿಕಾ ಹೇಳಿಕೆಯಲ್ಲಿ ಎಚ್ಚರಿಸಿವೆ.

ಪತ್ರಿಕಾ ಹೇಳಿಕೆಗೆ ಟ್ರೇಡ್ ಯೂನಿಯನ್ ಸೆಂಟರ್ ಆಫ್ ಇಂಡಿಯಾದ ಮಾನಸಯ್ಯ, ಭಾರತೀಯ ಫ್ಯಾಸಿಸ್ಟ್ ವಿರೋಧಿ ಒಕ್ಕೂಟದ ಬಾಲನ್, ಗ್ರಾಮೀಣ ಕೂಲಿ ಕಾರ್ಮಿಕರ ಸಂಘಟನೆಯ ಬಸವರಾಜು, ಭೂಮಿ ಮತ್ತು ವಸತಿ ಹಕ್ಕು ವಂಚಿತರ ಹೋರಾಟ ಸಮಿತಿಯ ಕುಮಾರ್ ಸಮತಳ, ಆಹಾರ ಹಕ್ಕು ಸಮಿತಿಯ ಶಾರದಾ ಗೋಪಾಲ್, ಕರ್ನಾಟಕ ರೈತ ಸಂಘಟನೆಯ ಡಿ. ಹೆಚ್. ಪೂಜಾರ್, ಕರ್ನಾಟಕ ಶ್ರಮಿಕ ಶಕ್ತಿಯ ವರದ ರಾಜೇಂದ್ರ, ಕರ್ನಾಟಕ ಜನಶಕ್ತಿಯ ಮಲ್ಲಿಗೆ ಮುಂತಾದವರು ಸಹಿ ಮಾಡಿದ್ದಾರೆ.

ಬಿಬಿಎಂಪಿ ಗುತ್ತಿಗೆ ನೌಕರರ ಯುನಿಯನ್, ರೇಸ್ ಕೋರ್ಸ್ ಯುನಿಯನ್ ಬೆಂಗಳೂರು ಮತ್ತು ಮೈಸೂರು, ಬಿಡಬ್ಲೂಎಸ್‌ಎಸ್‌ಬಿ ಗುತ್ತಿಗೆ ನೌಕರರ ಸಂಘ, ಹೆಚ್‌ಎಎಲ್, ಬಿಇಎಮ್‌ಎಲ್ , ಬಿಹೆಚ್‌ಇಎಲ್ ಗುತ್ತಿಗೆ ನೌಕರರ ಸಂಘ, ಗಣಿ ಮತ್ತು ನಿರ್ಮಾಣ ಕಾರ್ಮಿಕರ ಸಂಘ, ಬಿಎಂಟಿಸಿ ಹಾಗೂ ಕೆಎಸ್ಸಾರ್ಟಿಸಿ ನೌಕರರ ಸಂಘ, ಮೈಕೋ ಬಾಸ್ ಗುತ್ತಿಗೆ ನೌಕರರ ಸಂಘಗಳು ಪ್ರತಭಟನೆಗೆ ಬೆಂಬಲ ಸೂಚಿಸಿವೆ.


ಓದಿ: ವಲಸೆ ಕಾರ್ಮಿಕರ ಸ್ಥಿತಿ ಕರುಣಾಜನಕವಾಗಿದೆ; ಅವರ ಕಷ್ಟ ನಿವಾರಣಗೆ ಕೇಂದ್ರ, ರಾಜ್ಯ ಸರ್ಕಾರಗಳು ಮಾಡಿದ್ದೇನು?: ಮದ್ರಾಸ್ ಹೈಕೋರ್ಟ್ ಪ್ರಶ್ನೆ


ವಿಡಿಯೊ ನೋಡಿ: ಉತ್ತರಪ್ರದೇಶದಿಂದ ಬಿಹಾರಕ್ಕೆ ತೆರಳಲು ರೈಲು ನೋಂದಣಿ ಮಾಡಿಸಲು ಮುಗಿಬಿದ್ದಿರುವ ವಲಸೆ ಕಾರ್ಮಿಕರು.


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...