Homeಚಳವಳಿಕಾರ್ಮಿಕರು, ರೈತರ ಬದುಕಿನೊಂದಿಗೆ ಚೆಲ್ಲಾಟವಾಡದಿರಿ: ಕಾರ್ಮಿಕ ಮುಖಂಡರ ಒತ್ತಾಯ

ಕಾರ್ಮಿಕರು, ರೈತರ ಬದುಕಿನೊಂದಿಗೆ ಚೆಲ್ಲಾಟವಾಡದಿರಿ: ಕಾರ್ಮಿಕ ಮುಖಂಡರ ಒತ್ತಾಯ

ರೈತ ಹಾಗೂ ದುಡಿಯುವ ಜನರ ಬದುಕನ್ನು ಅತಂತ್ರಗೊಳಿಸುವ ಕಾರ್ಮಿಕ ಕಾಯ್ದೆಗಳ ತಿದ್ದುಪಡಿ ಮತ್ತು ಎಪಿಎಂಸಿ ಕಾಯ್ದೆಗೆ ತಿದ್ದುಪಡಿಯಂತಹ ಕೇಂದ್ರದ ಪ್ರಸ್ತಾಪಗಳಿಗೆ ಒಪ್ಪದೆ, ಅವುಗಳನ್ನು ಕೈ ಬಿಡಬೇಕು ಎಂದು ಹತ್ತಾರು ಸಂಘಟನೆಗಳು ಮುಖ್ಯಮಂತ್ರಿಗಳನ್ನು ಒತ್ತಾಯಿಸಿವೆ.

- Advertisement -
- Advertisement -

ಮುಖ್ಯಮಂತ್ರಿಗಳೇ ಕೇಂದ್ರದ ಒತ್ತಡಕ್ಕೆ ಮಣಿದು ಕಾರ್ಮಿಕರು ಹಾಗೂ ರೈತರ ಬದುಕಿನ ಜೊತೆ ಚೆಲ್ಲಾಟವಾಡದಿರಿ ಎಂದು ರೈತ ಹಾಗೂ ಕಾರ್ಮಿಕ ಮುಖಂಡರು ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ಅವರನ್ನು ಒತ್ತಾಯಿಸಿದ್ದಾರೆ.

ಕಾರ್ಮಿಕ ಸಂಘಟನೆ, ರೈತ ಸಂಘಟನೆ ಹಾಗೂ ಪ್ರಗತಿಪರ ಸಂಘಟನೆಗಳು ಜಂಟಿ ಪತ್ರಿಕಾ ಹೇಳಿಕೆ ನೀಡಿದ್ದು, ರೈತ ಹಾಗೂ ದುಡಿಯುವ ಜನರ ಬದುಕನ್ನು ಅತಂತ್ರಗೊಳಿಸುವ ಕಾರ್ಮಿಕ ಕಾಯ್ದೆಗಳ ತಿದ್ದುಪಡಿ ಮತ್ತು ಎಪಿಎಂಸಿ ಕಾಯ್ದೆಗೆ ತಿದ್ದುಪಡಿಯಂತಹ ಕೇಂದ್ರದ ಪ್ರಸ್ತಾಪಗಳಿಗೆ ಒಪ್ಪದೆ, ಅವುಗಳನ್ನು ಕೈ ಬಿಡಬೇಕು ಎಂದು ಹತ್ತಾರು ಸಂಘಟನೆಗಳು ಮುಖ್ಯಮಂತ್ರಿಗಳನ್ನು ಒತ್ತಾಯಿಸಿವೆ.

ರೈತ ಹಾಗೂ ಕಾರ್ಮಿಕ ಸಂಘಟನೆಗಳು ಜೊತೆಗೂಡಿ ಕೇಂದ್ರ ಸರ್ಕಾರದ ವಿರುದ್ದ ಮೇ 20 ರಿಂದ 27ರ ತನಕ “ಶ್ರಮಿಕ ಹಕ್ಕು ಅಭಿಯಾನ”ವನ್ನು ಹಮ್ಮಿಕೊಂಡಿದ್ದು, ಮೇ 22 ರಂದು ಅಖಿಲ ಭಾರತ ಕಾರ್ಮಿಕರ ಹೋರಾಟ ಮತ್ತು ಮೇ 27ರಂದು ಅಖಿಲ ಭಾರತ ರೈತರ ಹೋರಾಟಗಳು ನಡೆಯಲಿದೆ ಎಂದು ಹೇಳಿಕೆಯಲ್ಲಿ ತಿಳಿಸಲಾಗಿದೆ.


ಓದಿ: ಕಾರ್ಮಿಕ ಕಾಯ್ದೆ ತಿದ್ದುಪಡಿಗಿದೆ ಹುನ್ನಾರದ ಇತಿಹಾಸ : ಎಸ್‌. ಬಾಲನ್


ಪತ್ರಿಕಾ ಹೇಳಿಕೆಯಲ್ಲಿ, “ಕೊರೋನಾ ಪಿಡುಗಿನ ಸಂಕಷ್ಟಗಳಿಂದ ಈಗಾಗಲೇ ದುಡಿಯುವ ಜನರು ತತ್ತರಿಸಿಹೋಗಿದ್ದರೆ. ವಲಸೆ ಕಾರ್ಮಿಕರ ಕಣ್ಣೀರು ನಿಮ್ಮ ಕಣ್ಣಿಗೆ ಬಿದ್ದಿದೆಯೋ ಇಲ್ಲವೋ ಗೊತ್ತಿಲ್ಲ. ಸರಿಯಾದ ಊಟವಿಲ್ಲದ ಮಕ್ಕಳ ಆಕ್ರಂದನವಾದರೂ ಕೇಳಿಸಿರಬೇಕು. ಕೋಟ್ಯಾಂತರ ಕೈಗಳು ಕೆಲಸವಿಲ್ಲದೆ ಕೂತಿವೆ. ಮನೆಮಂದಿಗೆ ಸಾಕಾಗುವಷ್ಟು ಆಹಾರ ಬಹುಪಾಲು ದುಡಿಯುವ ಜನರ ಮನೆಗಳಲ್ಲಿ ಇಲ್ಲ. ಸಮಗ್ರ ಆಹಾರ ಸಾಮಗ್ರಿ ಕಿಟ್ ಕೊಡಿಯೆಂದರೆ, ಸರ್ಕಾರ ಮದ್ಯದ ಅಂಗಡಿಗಳನ್ನು ತೆರೆದು ಜನರ ಇದ್ದಬದ್ದ ಹಣವನ್ನೂ ಬಾಚಲು ಅವಕಾಶ ಮಾಡಿಕೊಟ್ಟಿದೆ” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇಂತಹಾ ಪರಿಸ್ಥಿತಿಯಲ್ಲಿ ಗಾಯದ ಮೇಲೆ ಬರೆ ಎಳೆದಂತೆ ಕಾರ್ಮಿಕರ ಹಾಗೂ ರೈತರ ಹಿತಕಾಯಲು ಇದ್ದ ಕಾನೂನುಗಳನ್ನು ಕಿತ್ತು ಕಾರ್ಪೊರೇಟ್ ಶಕ್ತಿಗಳ ದರೋಡೆಗೆ ಅವಕಾಶ ಮಾಡಿಕೊಡುವ ನೀತಿಗಳನ್ನು ಕೇಂದ್ರ ಸರ್ಕಾರ ಪ್ರಸ್ತಾಪಿಸುತ್ತಿದೆ. ಕಾರ್ಮಿಕರ ದುಡಿಮೆಯ ಅವಧಿಯನ್ನು ಹೆಚ್ಚಿಸಿ, ಕಾರ್ಮಿಕರ ಹಿತ ರಕ್ಷಿಸಲು ಇದ್ದ ಕಾನೂನುಗಳನ್ನು ರದ್ದುಗೊಳಿಸುವ ಪ್ರಕ್ರಿಯೆ ದೇಶದಾದ್ಯಂತ ಈಗಾಗಲೇ ಪ್ರಾರಂಭವಾಗಿದೆ. ಇದಲ್ಲದೆ ಕೃಷಿ ಯೋಗ್ಯ ಭೂಮಿಯನ್ನು ಕಾರ್ಪೊರೇಟ್ ಶಕ್ತಿಗಳಿಗೆ ಪರಭಾರೆ ಮಾಡಲು ಗೇಣಿ ನೀತಿಯಲ್ಲಿ, ಕೃಷಿ ಭೂಮಿಯ ಖರೀದಿಯ ನಿಯಮಗಳಲ್ಲಿ ಬದಲಾವಣೆ ತರುತ್ತಿರುವುದಲ್ಲದೆ, ರೈತರ ಬೆಳೆಗೆ ಒಂದಷ್ಟಾದರೂ ಬೆಲೆ ಸುರಕ್ಷತೆಯನ್ನು ಕೊಡುತ್ತಿದ್ದ ಎಪಿಎಂಸಿಯನ್ನು ದುರ್ಬಲಗೊಳಿಸುವ ನೀತಿಯೂ ನಿಮ್ಮ ಮುಂದಿದೆ.” ಎಂದು ಕಿಡಿಕಾರಿದ್ದಾರೆ.


ಓದಿ: ಕಾರ್ಮಿಕ ಕಾಯ್ದೆಗಳಿಗೆ ಅವಸರದ ತಿದ್ದುಪಡಿ ಹಿಂದೆ ದುರುದ್ದೇಶದ ವಾಸನೆಯಿದೆ : ಸಿದ್ದರಾಮಯ್ಯ


ಇಂತಹ ನೀತಿಗಳನ್ನು ತಿರುಚುವ ಕೆಲಸವನ್ನು ಕೂಡಲೇ ಕೈಬಿಡಬೇಕು. ಕಾರ್ಪೊರೇಟ್ ಒತ್ತಡಕ್ಕೆ ಮಣಿಯಬಾರದು, ಕೇಂದ್ರ ಸರ್ಕಾರದ ಪ್ರಸ್ತಾಪವನ್ನು ಒಪ್ಪಬಾರದು. ಕಾರ್ಮಿಕರನ್ನು ಮತ್ತು ರೈತರನ್ನು ಬಲಿಕೊಡುವ ಪ್ರಯತ್ನ ಮಾಡಿದಲ್ಲಿ ಇಡೀ ರಾಜ್ಯದ ತೀವ್ರ ವಿರೋಧವನ್ನು ಖಂಡಿತ ಎದುರಿಸಬೇಕಾಗುತ್ತದೆ ಎಂದು ಸಂಘಟನೆಗಳು ತಮ್ಮ ಪತ್ರಿಕಾ ಹೇಳಿಕೆಯಲ್ಲಿ ಎಚ್ಚರಿಸಿವೆ.

ಪತ್ರಿಕಾ ಹೇಳಿಕೆಗೆ ಟ್ರೇಡ್ ಯೂನಿಯನ್ ಸೆಂಟರ್ ಆಫ್ ಇಂಡಿಯಾದ ಮಾನಸಯ್ಯ, ಭಾರತೀಯ ಫ್ಯಾಸಿಸ್ಟ್ ವಿರೋಧಿ ಒಕ್ಕೂಟದ ಬಾಲನ್, ಗ್ರಾಮೀಣ ಕೂಲಿ ಕಾರ್ಮಿಕರ ಸಂಘಟನೆಯ ಬಸವರಾಜು, ಭೂಮಿ ಮತ್ತು ವಸತಿ ಹಕ್ಕು ವಂಚಿತರ ಹೋರಾಟ ಸಮಿತಿಯ ಕುಮಾರ್ ಸಮತಳ, ಆಹಾರ ಹಕ್ಕು ಸಮಿತಿಯ ಶಾರದಾ ಗೋಪಾಲ್, ಕರ್ನಾಟಕ ರೈತ ಸಂಘಟನೆಯ ಡಿ. ಹೆಚ್. ಪೂಜಾರ್, ಕರ್ನಾಟಕ ಶ್ರಮಿಕ ಶಕ್ತಿಯ ವರದ ರಾಜೇಂದ್ರ, ಕರ್ನಾಟಕ ಜನಶಕ್ತಿಯ ಮಲ್ಲಿಗೆ ಮುಂತಾದವರು ಸಹಿ ಮಾಡಿದ್ದಾರೆ.

ಬಿಬಿಎಂಪಿ ಗುತ್ತಿಗೆ ನೌಕರರ ಯುನಿಯನ್, ರೇಸ್ ಕೋರ್ಸ್ ಯುನಿಯನ್ ಬೆಂಗಳೂರು ಮತ್ತು ಮೈಸೂರು, ಬಿಡಬ್ಲೂಎಸ್‌ಎಸ್‌ಬಿ ಗುತ್ತಿಗೆ ನೌಕರರ ಸಂಘ, ಹೆಚ್‌ಎಎಲ್, ಬಿಇಎಮ್‌ಎಲ್ , ಬಿಹೆಚ್‌ಇಎಲ್ ಗುತ್ತಿಗೆ ನೌಕರರ ಸಂಘ, ಗಣಿ ಮತ್ತು ನಿರ್ಮಾಣ ಕಾರ್ಮಿಕರ ಸಂಘ, ಬಿಎಂಟಿಸಿ ಹಾಗೂ ಕೆಎಸ್ಸಾರ್ಟಿಸಿ ನೌಕರರ ಸಂಘ, ಮೈಕೋ ಬಾಸ್ ಗುತ್ತಿಗೆ ನೌಕರರ ಸಂಘಗಳು ಪ್ರತಭಟನೆಗೆ ಬೆಂಬಲ ಸೂಚಿಸಿವೆ.


ಓದಿ: ವಲಸೆ ಕಾರ್ಮಿಕರ ಸ್ಥಿತಿ ಕರುಣಾಜನಕವಾಗಿದೆ; ಅವರ ಕಷ್ಟ ನಿವಾರಣಗೆ ಕೇಂದ್ರ, ರಾಜ್ಯ ಸರ್ಕಾರಗಳು ಮಾಡಿದ್ದೇನು?: ಮದ್ರಾಸ್ ಹೈಕೋರ್ಟ್ ಪ್ರಶ್ನೆ


ವಿಡಿಯೊ ನೋಡಿ: ಉತ್ತರಪ್ರದೇಶದಿಂದ ಬಿಹಾರಕ್ಕೆ ತೆರಳಲು ರೈಲು ನೋಂದಣಿ ಮಾಡಿಸಲು ಮುಗಿಬಿದ್ದಿರುವ ವಲಸೆ ಕಾರ್ಮಿಕರು.


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಲೈಂಗಿಕ ದೌರ್ಜನ್ಯ ಆರೋಪ: ಮಲಯಾಳಂ ಚಲನಚಿತ್ರ ನಿರ್ದೇಶಕ ರಂಜಿತ್ ಬಾಲಕೃಷ್ಣನ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ 

ಕೇರಳ: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಾಳಂ ನಿರ್ದೇಶಕ ಮತ್ತು ನಿರ್ಮಾಪಕ ರಂಜಿತ್ ಬಾಲಕೃಷ್ಣನ್ ಅವರನ್ನು ಬುಧವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಪ್ರಸ್ತುತ ಅವರನ್ನು ಎರ್ನಾಕುಲಂ ಸಬ್ ಜೈಲಿನಲ್ಲಿ ಇರಿಸಲಾಗಿದೆ.  ಜನವರಿ...

ಫಾರ್ಮ್–6 ವಿವಾದ : ಕೋಲ್ಕತ್ತಾದ ಚುನಾವಣಾಧಿಕಾರಿ ಕಚೇರಿ ಮುಂದೆ ಟಿಎಂಸಿ -ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ

ಮತದಾರರ ಪಟ್ಟಿಗೆ ಹೊಸದಾಗಿ ಹೆಸರುಗಳನ್ನು ಸೇರಿಸುವ ನಮೂನೆ -6 (ಫಾರ್ಮ್ -6) ವಿಚಾರದಲ್ಲಿ ಕೋಲ್ಕತ್ತಾದ ಮುಖ್ಯ ಚುನಾವಣಾಧಿಕಾರಿ ಕಚೇರಿ ಮುಂದೆ ಮಂಗಳವಾರ (ಮಾ. 31) ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಬಿಜೆಪಿ ಕಾರ್ಯಕರ್ತರ...

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿಯಿದೆ : ಅಖಿಲೇಶ್ ಯಾದವ್ ವ್ಯಂಗ್ಯ

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ವ್ಯಂಗ್ಯವಾಡಿದ್ದಾರೆ. ಬಿಜೆಪಿ ನಾಯಕರು ಹಾಗೂ ಅವರ ಸಹವರ್ತಿಗಳ ಭ್ರಷ್ಟಾಚಾರ ಮತ್ತು ದುರ್ನಡತೆಯ ಪ್ರಕರಣಗಳು...

ಅಂತರ್ಧರ್ಮೀಯ ‘ಲಿವ್-ಇನ್’ ಸಂಬಂಧ ಅಪರಾಧವಲ್ಲ: ಅಲಹಾಬಾದ್ ಹೈಕೋರ್ಟ್

ಅಂತರ್ಧರ್ಮೀಯ ಲಿವ್-ಇನ್ ಸಂಬಂಧವನ್ನು ನಿಷೇಧಿಸಲಾಗಿಲ್ಲ ಅಥವಾ ಯಾವುದೇ ಕಾನೂನಿನ ಅಡಿಯಲ್ಲಿ ಅಪರಾಧವಲ್ಲಎಂದು ತೀರ್ಪು ನೀಡಿರುವ ಅಲಹಾಬಾದ್ ಹೈಕೋರ್ಟ್, ಮಹಿಳೆಯ ಕುಟುಂಬದಿಂದ ಬೆದರಿಕೆ ಎದುರಿಸುತ್ತಿರುವ ದಂಪತಿಗಳಿಗೆ ರಕ್ಷಣೆ ನೀಡಿದೆ. ಸೋನ್‌ಭದ್ರಾದ ಕಾಜಲ್ ಪ್ರಜಾಪತಿ ಮತ್ತು ಅವರ...