Homeಚಳವಳಿಕಾರ್ಮಿಕರು, ರೈತರ ಬದುಕಿನೊಂದಿಗೆ ಚೆಲ್ಲಾಟವಾಡದಿರಿ: ಕಾರ್ಮಿಕ ಮುಖಂಡರ ಒತ್ತಾಯ

ಕಾರ್ಮಿಕರು, ರೈತರ ಬದುಕಿನೊಂದಿಗೆ ಚೆಲ್ಲಾಟವಾಡದಿರಿ: ಕಾರ್ಮಿಕ ಮುಖಂಡರ ಒತ್ತಾಯ

ರೈತ ಹಾಗೂ ದುಡಿಯುವ ಜನರ ಬದುಕನ್ನು ಅತಂತ್ರಗೊಳಿಸುವ ಕಾರ್ಮಿಕ ಕಾಯ್ದೆಗಳ ತಿದ್ದುಪಡಿ ಮತ್ತು ಎಪಿಎಂಸಿ ಕಾಯ್ದೆಗೆ ತಿದ್ದುಪಡಿಯಂತಹ ಕೇಂದ್ರದ ಪ್ರಸ್ತಾಪಗಳಿಗೆ ಒಪ್ಪದೆ, ಅವುಗಳನ್ನು ಕೈ ಬಿಡಬೇಕು ಎಂದು ಹತ್ತಾರು ಸಂಘಟನೆಗಳು ಮುಖ್ಯಮಂತ್ರಿಗಳನ್ನು ಒತ್ತಾಯಿಸಿವೆ.

- Advertisement -
- Advertisement -

ಮುಖ್ಯಮಂತ್ರಿಗಳೇ ಕೇಂದ್ರದ ಒತ್ತಡಕ್ಕೆ ಮಣಿದು ಕಾರ್ಮಿಕರು ಹಾಗೂ ರೈತರ ಬದುಕಿನ ಜೊತೆ ಚೆಲ್ಲಾಟವಾಡದಿರಿ ಎಂದು ರೈತ ಹಾಗೂ ಕಾರ್ಮಿಕ ಮುಖಂಡರು ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ಅವರನ್ನು ಒತ್ತಾಯಿಸಿದ್ದಾರೆ.

ಕಾರ್ಮಿಕ ಸಂಘಟನೆ, ರೈತ ಸಂಘಟನೆ ಹಾಗೂ ಪ್ರಗತಿಪರ ಸಂಘಟನೆಗಳು ಜಂಟಿ ಪತ್ರಿಕಾ ಹೇಳಿಕೆ ನೀಡಿದ್ದು, ರೈತ ಹಾಗೂ ದುಡಿಯುವ ಜನರ ಬದುಕನ್ನು ಅತಂತ್ರಗೊಳಿಸುವ ಕಾರ್ಮಿಕ ಕಾಯ್ದೆಗಳ ತಿದ್ದುಪಡಿ ಮತ್ತು ಎಪಿಎಂಸಿ ಕಾಯ್ದೆಗೆ ತಿದ್ದುಪಡಿಯಂತಹ ಕೇಂದ್ರದ ಪ್ರಸ್ತಾಪಗಳಿಗೆ ಒಪ್ಪದೆ, ಅವುಗಳನ್ನು ಕೈ ಬಿಡಬೇಕು ಎಂದು ಹತ್ತಾರು ಸಂಘಟನೆಗಳು ಮುಖ್ಯಮಂತ್ರಿಗಳನ್ನು ಒತ್ತಾಯಿಸಿವೆ.

ರೈತ ಹಾಗೂ ಕಾರ್ಮಿಕ ಸಂಘಟನೆಗಳು ಜೊತೆಗೂಡಿ ಕೇಂದ್ರ ಸರ್ಕಾರದ ವಿರುದ್ದ ಮೇ 20 ರಿಂದ 27ರ ತನಕ “ಶ್ರಮಿಕ ಹಕ್ಕು ಅಭಿಯಾನ”ವನ್ನು ಹಮ್ಮಿಕೊಂಡಿದ್ದು, ಮೇ 22 ರಂದು ಅಖಿಲ ಭಾರತ ಕಾರ್ಮಿಕರ ಹೋರಾಟ ಮತ್ತು ಮೇ 27ರಂದು ಅಖಿಲ ಭಾರತ ರೈತರ ಹೋರಾಟಗಳು ನಡೆಯಲಿದೆ ಎಂದು ಹೇಳಿಕೆಯಲ್ಲಿ ತಿಳಿಸಲಾಗಿದೆ.


ಓದಿ: ಕಾರ್ಮಿಕ ಕಾಯ್ದೆ ತಿದ್ದುಪಡಿಗಿದೆ ಹುನ್ನಾರದ ಇತಿಹಾಸ : ಎಸ್‌. ಬಾಲನ್


ಪತ್ರಿಕಾ ಹೇಳಿಕೆಯಲ್ಲಿ, “ಕೊರೋನಾ ಪಿಡುಗಿನ ಸಂಕಷ್ಟಗಳಿಂದ ಈಗಾಗಲೇ ದುಡಿಯುವ ಜನರು ತತ್ತರಿಸಿಹೋಗಿದ್ದರೆ. ವಲಸೆ ಕಾರ್ಮಿಕರ ಕಣ್ಣೀರು ನಿಮ್ಮ ಕಣ್ಣಿಗೆ ಬಿದ್ದಿದೆಯೋ ಇಲ್ಲವೋ ಗೊತ್ತಿಲ್ಲ. ಸರಿಯಾದ ಊಟವಿಲ್ಲದ ಮಕ್ಕಳ ಆಕ್ರಂದನವಾದರೂ ಕೇಳಿಸಿರಬೇಕು. ಕೋಟ್ಯಾಂತರ ಕೈಗಳು ಕೆಲಸವಿಲ್ಲದೆ ಕೂತಿವೆ. ಮನೆಮಂದಿಗೆ ಸಾಕಾಗುವಷ್ಟು ಆಹಾರ ಬಹುಪಾಲು ದುಡಿಯುವ ಜನರ ಮನೆಗಳಲ್ಲಿ ಇಲ್ಲ. ಸಮಗ್ರ ಆಹಾರ ಸಾಮಗ್ರಿ ಕಿಟ್ ಕೊಡಿಯೆಂದರೆ, ಸರ್ಕಾರ ಮದ್ಯದ ಅಂಗಡಿಗಳನ್ನು ತೆರೆದು ಜನರ ಇದ್ದಬದ್ದ ಹಣವನ್ನೂ ಬಾಚಲು ಅವಕಾಶ ಮಾಡಿಕೊಟ್ಟಿದೆ” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇಂತಹಾ ಪರಿಸ್ಥಿತಿಯಲ್ಲಿ ಗಾಯದ ಮೇಲೆ ಬರೆ ಎಳೆದಂತೆ ಕಾರ್ಮಿಕರ ಹಾಗೂ ರೈತರ ಹಿತಕಾಯಲು ಇದ್ದ ಕಾನೂನುಗಳನ್ನು ಕಿತ್ತು ಕಾರ್ಪೊರೇಟ್ ಶಕ್ತಿಗಳ ದರೋಡೆಗೆ ಅವಕಾಶ ಮಾಡಿಕೊಡುವ ನೀತಿಗಳನ್ನು ಕೇಂದ್ರ ಸರ್ಕಾರ ಪ್ರಸ್ತಾಪಿಸುತ್ತಿದೆ. ಕಾರ್ಮಿಕರ ದುಡಿಮೆಯ ಅವಧಿಯನ್ನು ಹೆಚ್ಚಿಸಿ, ಕಾರ್ಮಿಕರ ಹಿತ ರಕ್ಷಿಸಲು ಇದ್ದ ಕಾನೂನುಗಳನ್ನು ರದ್ದುಗೊಳಿಸುವ ಪ್ರಕ್ರಿಯೆ ದೇಶದಾದ್ಯಂತ ಈಗಾಗಲೇ ಪ್ರಾರಂಭವಾಗಿದೆ. ಇದಲ್ಲದೆ ಕೃಷಿ ಯೋಗ್ಯ ಭೂಮಿಯನ್ನು ಕಾರ್ಪೊರೇಟ್ ಶಕ್ತಿಗಳಿಗೆ ಪರಭಾರೆ ಮಾಡಲು ಗೇಣಿ ನೀತಿಯಲ್ಲಿ, ಕೃಷಿ ಭೂಮಿಯ ಖರೀದಿಯ ನಿಯಮಗಳಲ್ಲಿ ಬದಲಾವಣೆ ತರುತ್ತಿರುವುದಲ್ಲದೆ, ರೈತರ ಬೆಳೆಗೆ ಒಂದಷ್ಟಾದರೂ ಬೆಲೆ ಸುರಕ್ಷತೆಯನ್ನು ಕೊಡುತ್ತಿದ್ದ ಎಪಿಎಂಸಿಯನ್ನು ದುರ್ಬಲಗೊಳಿಸುವ ನೀತಿಯೂ ನಿಮ್ಮ ಮುಂದಿದೆ.” ಎಂದು ಕಿಡಿಕಾರಿದ್ದಾರೆ.


ಓದಿ: ಕಾರ್ಮಿಕ ಕಾಯ್ದೆಗಳಿಗೆ ಅವಸರದ ತಿದ್ದುಪಡಿ ಹಿಂದೆ ದುರುದ್ದೇಶದ ವಾಸನೆಯಿದೆ : ಸಿದ್ದರಾಮಯ್ಯ


ಇಂತಹ ನೀತಿಗಳನ್ನು ತಿರುಚುವ ಕೆಲಸವನ್ನು ಕೂಡಲೇ ಕೈಬಿಡಬೇಕು. ಕಾರ್ಪೊರೇಟ್ ಒತ್ತಡಕ್ಕೆ ಮಣಿಯಬಾರದು, ಕೇಂದ್ರ ಸರ್ಕಾರದ ಪ್ರಸ್ತಾಪವನ್ನು ಒಪ್ಪಬಾರದು. ಕಾರ್ಮಿಕರನ್ನು ಮತ್ತು ರೈತರನ್ನು ಬಲಿಕೊಡುವ ಪ್ರಯತ್ನ ಮಾಡಿದಲ್ಲಿ ಇಡೀ ರಾಜ್ಯದ ತೀವ್ರ ವಿರೋಧವನ್ನು ಖಂಡಿತ ಎದುರಿಸಬೇಕಾಗುತ್ತದೆ ಎಂದು ಸಂಘಟನೆಗಳು ತಮ್ಮ ಪತ್ರಿಕಾ ಹೇಳಿಕೆಯಲ್ಲಿ ಎಚ್ಚರಿಸಿವೆ.

ಪತ್ರಿಕಾ ಹೇಳಿಕೆಗೆ ಟ್ರೇಡ್ ಯೂನಿಯನ್ ಸೆಂಟರ್ ಆಫ್ ಇಂಡಿಯಾದ ಮಾನಸಯ್ಯ, ಭಾರತೀಯ ಫ್ಯಾಸಿಸ್ಟ್ ವಿರೋಧಿ ಒಕ್ಕೂಟದ ಬಾಲನ್, ಗ್ರಾಮೀಣ ಕೂಲಿ ಕಾರ್ಮಿಕರ ಸಂಘಟನೆಯ ಬಸವರಾಜು, ಭೂಮಿ ಮತ್ತು ವಸತಿ ಹಕ್ಕು ವಂಚಿತರ ಹೋರಾಟ ಸಮಿತಿಯ ಕುಮಾರ್ ಸಮತಳ, ಆಹಾರ ಹಕ್ಕು ಸಮಿತಿಯ ಶಾರದಾ ಗೋಪಾಲ್, ಕರ್ನಾಟಕ ರೈತ ಸಂಘಟನೆಯ ಡಿ. ಹೆಚ್. ಪೂಜಾರ್, ಕರ್ನಾಟಕ ಶ್ರಮಿಕ ಶಕ್ತಿಯ ವರದ ರಾಜೇಂದ್ರ, ಕರ್ನಾಟಕ ಜನಶಕ್ತಿಯ ಮಲ್ಲಿಗೆ ಮುಂತಾದವರು ಸಹಿ ಮಾಡಿದ್ದಾರೆ.

ಬಿಬಿಎಂಪಿ ಗುತ್ತಿಗೆ ನೌಕರರ ಯುನಿಯನ್, ರೇಸ್ ಕೋರ್ಸ್ ಯುನಿಯನ್ ಬೆಂಗಳೂರು ಮತ್ತು ಮೈಸೂರು, ಬಿಡಬ್ಲೂಎಸ್‌ಎಸ್‌ಬಿ ಗುತ್ತಿಗೆ ನೌಕರರ ಸಂಘ, ಹೆಚ್‌ಎಎಲ್, ಬಿಇಎಮ್‌ಎಲ್ , ಬಿಹೆಚ್‌ಇಎಲ್ ಗುತ್ತಿಗೆ ನೌಕರರ ಸಂಘ, ಗಣಿ ಮತ್ತು ನಿರ್ಮಾಣ ಕಾರ್ಮಿಕರ ಸಂಘ, ಬಿಎಂಟಿಸಿ ಹಾಗೂ ಕೆಎಸ್ಸಾರ್ಟಿಸಿ ನೌಕರರ ಸಂಘ, ಮೈಕೋ ಬಾಸ್ ಗುತ್ತಿಗೆ ನೌಕರರ ಸಂಘಗಳು ಪ್ರತಭಟನೆಗೆ ಬೆಂಬಲ ಸೂಚಿಸಿವೆ.


ಓದಿ: ವಲಸೆ ಕಾರ್ಮಿಕರ ಸ್ಥಿತಿ ಕರುಣಾಜನಕವಾಗಿದೆ; ಅವರ ಕಷ್ಟ ನಿವಾರಣಗೆ ಕೇಂದ್ರ, ರಾಜ್ಯ ಸರ್ಕಾರಗಳು ಮಾಡಿದ್ದೇನು?: ಮದ್ರಾಸ್ ಹೈಕೋರ್ಟ್ ಪ್ರಶ್ನೆ


ವಿಡಿಯೊ ನೋಡಿ: ಉತ್ತರಪ್ರದೇಶದಿಂದ ಬಿಹಾರಕ್ಕೆ ತೆರಳಲು ರೈಲು ನೋಂದಣಿ ಮಾಡಿಸಲು ಮುಗಿಬಿದ್ದಿರುವ ವಲಸೆ ಕಾರ್ಮಿಕರು.


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ನಾಸಿಕ್‌| ಅಧಿಕಾರಿಯ ಮೇಜಿನ ಮೇಲೆ ಬೀದಿ ನಾಯಿಗಳನ್ನು ಬಿಟ್ಟ ಪ್ರತಿಭಟನಾಕಾರರು

ಮಹಾರಾಷ್ಟ್ರದ ನಾಸಿಕ್ ಜಿಲ್ಲೆಯ ನಿಫಾದ್ ನಗರ ಪಂಚಾಯತ್ ವ್ಯಾಪ್ತಿಯಲ್ಲಿ ಬೀದಿ ನಾಯಿಗಳ ಹಾವಳಿಯನ್ನು ಖಂಡಿಸಿ ಮತ್ತು ಅಧಿಕಾರಿಗಳ ನಿರ್ಲಕ್ಷ್ಯವನ್ನು ಖಂಡಿಸಿದ ಪ್ರತಿಭಟನಾಕಾರರ ಗುಂಪೊಂದು ನಗರ ಪಂಚಾಯತ್ ಅಧಿಕಾರಿಯ ಮೇಜಿನ ಮೇಲೆ ಬೀದಿ ನಾಯಿಗಳನ್ನು...

ವಿವಾಹಿತೆ ಮೇಲೆ ಅತ್ಯಾಚಾರ ಆರೋಪ : ಬಿಜೆಪಿ ಮಾಜಿ ಶಾಸಕನ ವಿರುದ್ಧ ಎಫ್‌ಐಆರ್

ಗನ್‌ ಪಾಯಿಂಟ್‌ ಇಟ್ಟು ಬೆದರಿಸಿ 22 ವರ್ಷದ ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ ಪ್ರಕರಣದಲ್ಲಿ ಮಹಾರಾಷ್ಟ್ರದ ಬಿಜೆಪಿ ಮಾಜಿ ಶಾಸಕ ಮತ್ತು ವಜಾಗೊಂಡಿರುವ ಪೊಲೀಸ್ ಸಿಬ್ಬಂದಿಯೊಬ್ಬರ ವಿರುದ್ಧ ಗುರುವಾರ (ಸೆ.17)...

ಬ್ರಿಕ್ಸ್ ಶೃಂಗಸಭೆಯಲ್ಲಿ ಸಂಪೂರ್ಣ ಸಸ್ಯಹಾರಿ ಮೆನು; ಶಿವಸೇನೆ ತೀವ್ರ ವಾಗ್ದಾಳಿ

ದೆಹಲಿಯಲ್ಲಿ ನಡೆದ 18ನೇ ಬ್ರಿಕ್ಸ್ ಶೃಂಗಸಭೆಯಲ್ಲಿ ವಿದೇಶಿ ಪ್ರತಿನಿಧಿಗಳಿಗೆ ಕೇವಲ ಸಸ್ಯಹಾರಿ ಆಹಾರವನ್ನು ಬಡಿಸಿರುವುದನ್ನು ಖಂಡಿಸಿರುವ ಶಿವಸೇನೆ (ಯುಬಿಟಿ) ಗುರುವಾರ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದೆ. ಇದು ಅಂತರರಾಷ್ಟ್ರೀಯ ಅತಿಥಿಗಳ ಮೇಲೆ...

ದೆಹಲಿ ಎಸ್‌ಐಆರ್: ಮತದಾರರ ಪಟ್ಟಿಯಿಂದ ಹೆಸರುಗಳ ಡಿಲೀಟ್ ಪ್ರಶ್ನಿಸಿ ಅರ್ಜಿ; ವಿಚಾರಣೆಗೆ ಸುಪ್ರೀಂ ಕೋರ್ಟ್ ಒಪ್ಪಿಗೆ

ದೆಹಲಿಯಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಅಭಿಯಾನದಡಿ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದನ್ನು ಪ್ರಶ್ನಿಸಿ ಸಲ್ಲಿಕೆಯಾಗಿರುವ ಅರ್ಜಿಯ ವಿಚಾರಣೆಯನ್ನು ಸೆಪ್ಟೆಂಬರ್ 21ರಂದು ನಡೆಸಲು ಸುಪ್ರೀಂ ಕೋರ್ಟ್ ಗುರುವಾರ ಒಪ್ಪಿಗೆ ಸೂಚಿಸಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್...

ಕೇರಳ | ಮಿತಿಗಿಂತ ಹೆಚ್ಚು ಮದ್ಯ ಸಂಗ್ರಹ ಆರೋಪ : ರಿಪೋರ್ಟರ್ ಟಿವಿ ಎಂಡಿ ಆಂಟೋ ಆಗಸ್ಟಿನ್ ಬಂಧನ

ಕೇರಳ ಅಬಕಾರಿ ಇಲಾಖೆಯು ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ವ್ಯವಸ್ಥಾಪಕ ನಿರ್ದೇಶಕ (ಎಂಡಿ) ಆಂಟೋ ಆಗಸ್ಟಿನ್ ಅವರನ್ನು ಗುರುವಾರ (ಸೆ.17) ಮುಂಜಾನೆ ಬಂಧಿಸಿದೆ. ಎರ್ನಾಕುಲಂನಲ್ಲಿರುವ ಸುದ್ದಿ ವಾಹಿನಿಯ ಕಚೇರಿಯಿಂದ ಮುಂಜಾನೆ ಸುಮಾರು...

ದೆಹಲಿ: ಜಾಮೀನು ಸಿಕ್ಕ ಬೆನ್ನಲ್ಲೇ ಸ್ವತಂತ್ರ ಭಾರದ್ವಾಜ್ ವಿಡಿಯೋ ವೈರಲ್; ಷರತ್ತು ಉಲ್ಲಂಘನೆ ಆರೋಪ!

ಜಂತರ್ ಮಂತರ್‌ನಲ್ಲಿ ದಲಿತ ವಿದ್ಯಾರ್ಥಿ ಹೋರಾಟಗಾರ್ತಿ ನಿಶು ಆಜಾದ್ ಅವರ ತಂದೆಯ ಮೇಲೆ ಹಲ್ಲೆ ನಡೆಸಿದ ಆರೋಪದಲ್ಲಿ ಬಂಧಿತರಾಗಿದ್ದ ಹಿಂದುತ್ವ ಪ್ರಭಾವಿ ಸ್ವತಂತ್ರ ಭಾರದ್ವಾಜ್ ಅವರಿಗೆ ದೆಹಲಿ ನ್ಯಾಯಾಲಯ ಮೂರು ವಾರಗಳ ಮಧ್ಯಂತರ...

ಸರ್ಕಾರದ ಹಸ್ತಕ್ಷೇಪದಿಂದ ಕ್ಯಾಂಪಸ್ ನಿರ್ಬಂಧದವರೆಗೆ: ಭಾರತದಲ್ಲಿ ಶೈಕ್ಷಣಿಕ ಸ್ವಾತಂತ್ರ್ಯದ ಕುಸಿತ ಬಯಲಿಗೆಳೆದ ಜಾಗತಿಕ ವರದಿ 

ಭಾರತದಲ್ಲಿ ಶೈಕ್ಷಣಿಕ ಸ್ವಾತಂತ್ರ್ಯವು ತೀವ್ರವಾಗಿ ನಿರ್ಬಂಧಿತವಾಗಿದ್ದು, ಉನ್ನತ ಶಿಕ್ಷಣ ಸಂಸ್ಥೆಗಳ ಮೇಲೆ ಸರ್ಕಾರದ ಹೆಚ್ಚುತ್ತಿರುವ ಹಸ್ತಕ್ಷೇಪ, ಕ್ಯಾಂಪಸ್‌ಗಳಲ್ಲಿ ಶೈಕ್ಷಣಿಕ ಮತ್ತು ರಾಜಕೀಯ ಅಭಿವ್ಯಕ್ತಿಯ ಮೇಲಿನ ನಿರ್ಬಂಧಗಳು, ವಿದ್ವಾಂಸರು ಹಾಗೂ ವಿದ್ಯಾರ್ಥಿಗಳ ವಿರುದ್ಧದ ಕ್ರಮಗಳು...

ಬಿಹಾರ| ದಲಿತ ಯುವಕನ ವಿವಾಹವಾದ ಯುವತಿ; ಮಗಳ ಸಾಂಕೇತಿಕ ಅಂತ್ಯಕ್ರಿಯೆ ನಡೆಸಿದ ಪೋಷಕರು

ತಮ್ಮ 18 ವರ್ಷದ ಮಗಳು ಅಂತರ್ಜಾತಿ ವಿವಾಹವಾಗಿದ್ದಕ್ಕೆ ತೀವ್ರ ಆಕ್ರೋಶ ವ್ಯಕ್ತಪಡಿಸಿರುವ ಪೋಷಕರು, ಆಕೆಗೆ ಸಾಂಕೇತಿಕವಾಗಿ ಅಂತ್ಯಕ್ರಿಯೆ ನಡೆಸಿದ ಘಟನೆ ಬಿಹಾರದ ಪೂರ್ಣಿಯಾದಲ್ಲಿ ಬೆಳಕಿಗೆ ಬಂದಿದೆ. ಯುವತಿಯ ಫೋಟೋವಿರುವ ಪ್ರತಿಕೃತಿಯನ್ನು ಸಿದ್ಧಪಡಿಸಿ ಊರಿನಲ್ಲಿ ಶವಯಾತ್ರೆ...

ಸ್ವಇಚ್ಛೆಯಿಂದ ಇಸ್ಲಾಂ ಸ್ವೀಕಾರ : ಆಯುಷ್ ಮಲಿಕ್‌ರನ್ನು ಗೃಹಬಂಧನದಿಂದ ಬಿಡುಗಡೆಗೊಳಿಸಿದ ಅಲಹಾಬಾದ್ ಹೈಕೋರ್ಟ್

ತಾನು ಸ್ವಇಚ್ಛೆಯಿಂದ ಇಸ್ಲಾಂ ಧರ್ಮವನ್ನು ಸ್ವೀಕರಿಸಿರುವುದಾಗಿ ಮತ್ತು ಆ ನಂತರ ತನ್ನ ತಂದೆಯೇ ತನಗೆ ಬೆದರಿಕೆ ಹಾಕಿ, ಕಾನೂನುಬಾಹಿರವಾಗಿ ಗೃಹಬಂಧನದಲ್ಲಿ ಇರಿಸಿದ್ದರು ಎಂದು ಆರೋಪಿಸಿದ್ದ ಆಯುಷ್ ಮಲಿಕ್ ಎಂಬ 31 ವರ್ಷದ ಯುವಕನನ್ನು...

ಬಿಜ್ನೋರ್‌ನಲ್ಲಿ ಮುಸ್ಲಿಂ ಶಿಕ್ಷಕನ ಗುಂಡಿಕ್ಕಿ ಹತ್ಯೆ: ‘ಲವ್ ಜಿಹಾದ್’ ಆರೋಪ; ವೈಯಕ್ತಿಕ ದ್ವೇಷದ ಬಗ್ಗೆಯೂ ಪೊಲೀಸರಿಂದ ತನಿಖೆ 

ಬಿಜ್ನೋರ್: ಉತ್ತರ ಪ್ರದೇಶದ ಬಿಜ್ನೋರ್ ಜಿಲ್ಲೆಯಲ್ಲಿ 43 ವರ್ಷದ ಮುಸ್ಲಿಂ ಸರ್ಕಾರಿ ಪ್ರಾಥಮಿಕ ಶಾಲಾ ಶಿಕ್ಷಕನೊಬ್ಬರನ್ನು ರೈತನೊಬ್ಬ ಗುಂಡಿಕ್ಕಿ ಹತ್ಯೆ ಮಾಡಿರುವ ಘಟನೆ ನಡೆದಿದೆ. ಶಿಕ್ಷಕ ನೌಶಾದ್ ಅಹ್ಮದ್ ಅವರು ‘ಲವ್ ಜಿಹಾದ್’...