Homeಚಳವಳಿಕಾರ್ಮಿಕರು, ರೈತರ ಬದುಕಿನೊಂದಿಗೆ ಚೆಲ್ಲಾಟವಾಡದಿರಿ: ಕಾರ್ಮಿಕ ಮುಖಂಡರ ಒತ್ತಾಯ

ಕಾರ್ಮಿಕರು, ರೈತರ ಬದುಕಿನೊಂದಿಗೆ ಚೆಲ್ಲಾಟವಾಡದಿರಿ: ಕಾರ್ಮಿಕ ಮುಖಂಡರ ಒತ್ತಾಯ

ರೈತ ಹಾಗೂ ದುಡಿಯುವ ಜನರ ಬದುಕನ್ನು ಅತಂತ್ರಗೊಳಿಸುವ ಕಾರ್ಮಿಕ ಕಾಯ್ದೆಗಳ ತಿದ್ದುಪಡಿ ಮತ್ತು ಎಪಿಎಂಸಿ ಕಾಯ್ದೆಗೆ ತಿದ್ದುಪಡಿಯಂತಹ ಕೇಂದ್ರದ ಪ್ರಸ್ತಾಪಗಳಿಗೆ ಒಪ್ಪದೆ, ಅವುಗಳನ್ನು ಕೈ ಬಿಡಬೇಕು ಎಂದು ಹತ್ತಾರು ಸಂಘಟನೆಗಳು ಮುಖ್ಯಮಂತ್ರಿಗಳನ್ನು ಒತ್ತಾಯಿಸಿವೆ.

- Advertisement -
- Advertisement -

ಮುಖ್ಯಮಂತ್ರಿಗಳೇ ಕೇಂದ್ರದ ಒತ್ತಡಕ್ಕೆ ಮಣಿದು ಕಾರ್ಮಿಕರು ಹಾಗೂ ರೈತರ ಬದುಕಿನ ಜೊತೆ ಚೆಲ್ಲಾಟವಾಡದಿರಿ ಎಂದು ರೈತ ಹಾಗೂ ಕಾರ್ಮಿಕ ಮುಖಂಡರು ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ಅವರನ್ನು ಒತ್ತಾಯಿಸಿದ್ದಾರೆ.

ಕಾರ್ಮಿಕ ಸಂಘಟನೆ, ರೈತ ಸಂಘಟನೆ ಹಾಗೂ ಪ್ರಗತಿಪರ ಸಂಘಟನೆಗಳು ಜಂಟಿ ಪತ್ರಿಕಾ ಹೇಳಿಕೆ ನೀಡಿದ್ದು, ರೈತ ಹಾಗೂ ದುಡಿಯುವ ಜನರ ಬದುಕನ್ನು ಅತಂತ್ರಗೊಳಿಸುವ ಕಾರ್ಮಿಕ ಕಾಯ್ದೆಗಳ ತಿದ್ದುಪಡಿ ಮತ್ತು ಎಪಿಎಂಸಿ ಕಾಯ್ದೆಗೆ ತಿದ್ದುಪಡಿಯಂತಹ ಕೇಂದ್ರದ ಪ್ರಸ್ತಾಪಗಳಿಗೆ ಒಪ್ಪದೆ, ಅವುಗಳನ್ನು ಕೈ ಬಿಡಬೇಕು ಎಂದು ಹತ್ತಾರು ಸಂಘಟನೆಗಳು ಮುಖ್ಯಮಂತ್ರಿಗಳನ್ನು ಒತ್ತಾಯಿಸಿವೆ.

ರೈತ ಹಾಗೂ ಕಾರ್ಮಿಕ ಸಂಘಟನೆಗಳು ಜೊತೆಗೂಡಿ ಕೇಂದ್ರ ಸರ್ಕಾರದ ವಿರುದ್ದ ಮೇ 20 ರಿಂದ 27ರ ತನಕ “ಶ್ರಮಿಕ ಹಕ್ಕು ಅಭಿಯಾನ”ವನ್ನು ಹಮ್ಮಿಕೊಂಡಿದ್ದು, ಮೇ 22 ರಂದು ಅಖಿಲ ಭಾರತ ಕಾರ್ಮಿಕರ ಹೋರಾಟ ಮತ್ತು ಮೇ 27ರಂದು ಅಖಿಲ ಭಾರತ ರೈತರ ಹೋರಾಟಗಳು ನಡೆಯಲಿದೆ ಎಂದು ಹೇಳಿಕೆಯಲ್ಲಿ ತಿಳಿಸಲಾಗಿದೆ.


ಓದಿ: ಕಾರ್ಮಿಕ ಕಾಯ್ದೆ ತಿದ್ದುಪಡಿಗಿದೆ ಹುನ್ನಾರದ ಇತಿಹಾಸ : ಎಸ್‌. ಬಾಲನ್


ಪತ್ರಿಕಾ ಹೇಳಿಕೆಯಲ್ಲಿ, “ಕೊರೋನಾ ಪಿಡುಗಿನ ಸಂಕಷ್ಟಗಳಿಂದ ಈಗಾಗಲೇ ದುಡಿಯುವ ಜನರು ತತ್ತರಿಸಿಹೋಗಿದ್ದರೆ. ವಲಸೆ ಕಾರ್ಮಿಕರ ಕಣ್ಣೀರು ನಿಮ್ಮ ಕಣ್ಣಿಗೆ ಬಿದ್ದಿದೆಯೋ ಇಲ್ಲವೋ ಗೊತ್ತಿಲ್ಲ. ಸರಿಯಾದ ಊಟವಿಲ್ಲದ ಮಕ್ಕಳ ಆಕ್ರಂದನವಾದರೂ ಕೇಳಿಸಿರಬೇಕು. ಕೋಟ್ಯಾಂತರ ಕೈಗಳು ಕೆಲಸವಿಲ್ಲದೆ ಕೂತಿವೆ. ಮನೆಮಂದಿಗೆ ಸಾಕಾಗುವಷ್ಟು ಆಹಾರ ಬಹುಪಾಲು ದುಡಿಯುವ ಜನರ ಮನೆಗಳಲ್ಲಿ ಇಲ್ಲ. ಸಮಗ್ರ ಆಹಾರ ಸಾಮಗ್ರಿ ಕಿಟ್ ಕೊಡಿಯೆಂದರೆ, ಸರ್ಕಾರ ಮದ್ಯದ ಅಂಗಡಿಗಳನ್ನು ತೆರೆದು ಜನರ ಇದ್ದಬದ್ದ ಹಣವನ್ನೂ ಬಾಚಲು ಅವಕಾಶ ಮಾಡಿಕೊಟ್ಟಿದೆ” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇಂತಹಾ ಪರಿಸ್ಥಿತಿಯಲ್ಲಿ ಗಾಯದ ಮೇಲೆ ಬರೆ ಎಳೆದಂತೆ ಕಾರ್ಮಿಕರ ಹಾಗೂ ರೈತರ ಹಿತಕಾಯಲು ಇದ್ದ ಕಾನೂನುಗಳನ್ನು ಕಿತ್ತು ಕಾರ್ಪೊರೇಟ್ ಶಕ್ತಿಗಳ ದರೋಡೆಗೆ ಅವಕಾಶ ಮಾಡಿಕೊಡುವ ನೀತಿಗಳನ್ನು ಕೇಂದ್ರ ಸರ್ಕಾರ ಪ್ರಸ್ತಾಪಿಸುತ್ತಿದೆ. ಕಾರ್ಮಿಕರ ದುಡಿಮೆಯ ಅವಧಿಯನ್ನು ಹೆಚ್ಚಿಸಿ, ಕಾರ್ಮಿಕರ ಹಿತ ರಕ್ಷಿಸಲು ಇದ್ದ ಕಾನೂನುಗಳನ್ನು ರದ್ದುಗೊಳಿಸುವ ಪ್ರಕ್ರಿಯೆ ದೇಶದಾದ್ಯಂತ ಈಗಾಗಲೇ ಪ್ರಾರಂಭವಾಗಿದೆ. ಇದಲ್ಲದೆ ಕೃಷಿ ಯೋಗ್ಯ ಭೂಮಿಯನ್ನು ಕಾರ್ಪೊರೇಟ್ ಶಕ್ತಿಗಳಿಗೆ ಪರಭಾರೆ ಮಾಡಲು ಗೇಣಿ ನೀತಿಯಲ್ಲಿ, ಕೃಷಿ ಭೂಮಿಯ ಖರೀದಿಯ ನಿಯಮಗಳಲ್ಲಿ ಬದಲಾವಣೆ ತರುತ್ತಿರುವುದಲ್ಲದೆ, ರೈತರ ಬೆಳೆಗೆ ಒಂದಷ್ಟಾದರೂ ಬೆಲೆ ಸುರಕ್ಷತೆಯನ್ನು ಕೊಡುತ್ತಿದ್ದ ಎಪಿಎಂಸಿಯನ್ನು ದುರ್ಬಲಗೊಳಿಸುವ ನೀತಿಯೂ ನಿಮ್ಮ ಮುಂದಿದೆ.” ಎಂದು ಕಿಡಿಕಾರಿದ್ದಾರೆ.


ಓದಿ: ಕಾರ್ಮಿಕ ಕಾಯ್ದೆಗಳಿಗೆ ಅವಸರದ ತಿದ್ದುಪಡಿ ಹಿಂದೆ ದುರುದ್ದೇಶದ ವಾಸನೆಯಿದೆ : ಸಿದ್ದರಾಮಯ್ಯ


ಇಂತಹ ನೀತಿಗಳನ್ನು ತಿರುಚುವ ಕೆಲಸವನ್ನು ಕೂಡಲೇ ಕೈಬಿಡಬೇಕು. ಕಾರ್ಪೊರೇಟ್ ಒತ್ತಡಕ್ಕೆ ಮಣಿಯಬಾರದು, ಕೇಂದ್ರ ಸರ್ಕಾರದ ಪ್ರಸ್ತಾಪವನ್ನು ಒಪ್ಪಬಾರದು. ಕಾರ್ಮಿಕರನ್ನು ಮತ್ತು ರೈತರನ್ನು ಬಲಿಕೊಡುವ ಪ್ರಯತ್ನ ಮಾಡಿದಲ್ಲಿ ಇಡೀ ರಾಜ್ಯದ ತೀವ್ರ ವಿರೋಧವನ್ನು ಖಂಡಿತ ಎದುರಿಸಬೇಕಾಗುತ್ತದೆ ಎಂದು ಸಂಘಟನೆಗಳು ತಮ್ಮ ಪತ್ರಿಕಾ ಹೇಳಿಕೆಯಲ್ಲಿ ಎಚ್ಚರಿಸಿವೆ.

ಪತ್ರಿಕಾ ಹೇಳಿಕೆಗೆ ಟ್ರೇಡ್ ಯೂನಿಯನ್ ಸೆಂಟರ್ ಆಫ್ ಇಂಡಿಯಾದ ಮಾನಸಯ್ಯ, ಭಾರತೀಯ ಫ್ಯಾಸಿಸ್ಟ್ ವಿರೋಧಿ ಒಕ್ಕೂಟದ ಬಾಲನ್, ಗ್ರಾಮೀಣ ಕೂಲಿ ಕಾರ್ಮಿಕರ ಸಂಘಟನೆಯ ಬಸವರಾಜು, ಭೂಮಿ ಮತ್ತು ವಸತಿ ಹಕ್ಕು ವಂಚಿತರ ಹೋರಾಟ ಸಮಿತಿಯ ಕುಮಾರ್ ಸಮತಳ, ಆಹಾರ ಹಕ್ಕು ಸಮಿತಿಯ ಶಾರದಾ ಗೋಪಾಲ್, ಕರ್ನಾಟಕ ರೈತ ಸಂಘಟನೆಯ ಡಿ. ಹೆಚ್. ಪೂಜಾರ್, ಕರ್ನಾಟಕ ಶ್ರಮಿಕ ಶಕ್ತಿಯ ವರದ ರಾಜೇಂದ್ರ, ಕರ್ನಾಟಕ ಜನಶಕ್ತಿಯ ಮಲ್ಲಿಗೆ ಮುಂತಾದವರು ಸಹಿ ಮಾಡಿದ್ದಾರೆ.

ಬಿಬಿಎಂಪಿ ಗುತ್ತಿಗೆ ನೌಕರರ ಯುನಿಯನ್, ರೇಸ್ ಕೋರ್ಸ್ ಯುನಿಯನ್ ಬೆಂಗಳೂರು ಮತ್ತು ಮೈಸೂರು, ಬಿಡಬ್ಲೂಎಸ್‌ಎಸ್‌ಬಿ ಗುತ್ತಿಗೆ ನೌಕರರ ಸಂಘ, ಹೆಚ್‌ಎಎಲ್, ಬಿಇಎಮ್‌ಎಲ್ , ಬಿಹೆಚ್‌ಇಎಲ್ ಗುತ್ತಿಗೆ ನೌಕರರ ಸಂಘ, ಗಣಿ ಮತ್ತು ನಿರ್ಮಾಣ ಕಾರ್ಮಿಕರ ಸಂಘ, ಬಿಎಂಟಿಸಿ ಹಾಗೂ ಕೆಎಸ್ಸಾರ್ಟಿಸಿ ನೌಕರರ ಸಂಘ, ಮೈಕೋ ಬಾಸ್ ಗುತ್ತಿಗೆ ನೌಕರರ ಸಂಘಗಳು ಪ್ರತಭಟನೆಗೆ ಬೆಂಬಲ ಸೂಚಿಸಿವೆ.


ಓದಿ: ವಲಸೆ ಕಾರ್ಮಿಕರ ಸ್ಥಿತಿ ಕರುಣಾಜನಕವಾಗಿದೆ; ಅವರ ಕಷ್ಟ ನಿವಾರಣಗೆ ಕೇಂದ್ರ, ರಾಜ್ಯ ಸರ್ಕಾರಗಳು ಮಾಡಿದ್ದೇನು?: ಮದ್ರಾಸ್ ಹೈಕೋರ್ಟ್ ಪ್ರಶ್ನೆ


ವಿಡಿಯೊ ನೋಡಿ: ಉತ್ತರಪ್ರದೇಶದಿಂದ ಬಿಹಾರಕ್ಕೆ ತೆರಳಲು ರೈಲು ನೋಂದಣಿ ಮಾಡಿಸಲು ಮುಗಿಬಿದ್ದಿರುವ ವಲಸೆ ಕಾರ್ಮಿಕರು.


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉಪಚುನಾವಣೆ : ಬಿಹಾರದ ಬಂಕಿಪುರದಲ್ಲಿ ಪ್ರಶಾಂತ್ ಕಿಶೋರ್‌ಗೆ ಐತಿಹಾಸಿಕ ಗೆಲುವು; ಇನ್ನೆರಡು ಕ್ಷೇತ್ರಗಳು ಕಾಂಗ್ರೆಸ್-ಬಿಜೆಪಿ ಪಾಲು

ಬಿಹಾರದ ಬಂಕಿಪುರ, ಗುಜರಾತ್‌ನ ಮಂಜಲ್‌ಪುರ ಮತ್ತು ಮಧ್ಯಪ್ರದೇಶದ ದಾಟಿಯಾ ವಿಧಾನಸಭಾ ಕ್ಷೇತ್ರಗಳಿಗೆ ಜುಲೈ 30ರಂದು ನಡೆದ ಉಪಚುನಾವಣೆಯ ಫಲಿತಾಂಶ ಸೋಮವಾರ (ಆ.3) ಹೊರಬಿದ್ದಿದ್ದಿದೆ. ಬಿಜೆಪಿಯ ಭದ್ರಕೋಟೆ ಎನಿಸಿಕೊಂಡಿದ್ದ, ಕಳೆದ 31 ವರ್ಷಗಳಿಂದ ಬಿಜೆಪಿಯೇ...

‘ಪಂಕ್ಚರ್-ತಲಾ ಬನಾನೆ ವಾಲೆಗಳೇ ಹೆಚ್ಚು’: ನೀಟ್ ಅಕ್ರಮಗಳ ವಿರುದ್ಧ ಪ್ರತಿಭಟಿಸಿದವರ ವಿರುದ್ಧ ನಾಲಿಗೆ ಹರಿಬಿಟ್ಟ ಬಿಜೆಪಿ ನಾಯಕ ರಮೇಶ್ ಬಿಧು

ದೆಹಲಿಯ ಜಂತರ್ ಮಂತರ್‌ನಲ್ಲಿ ‘ನೀಟ್’ (NEET) ಪರೀಕ್ಷೆಯ ಅಕ್ರಮಗಳ ವಿರುದ್ಧ ಧ್ವನಿಯೆತ್ತಿದ ಯುವಜನತೆ ಮತ್ತು ವಿದ್ಯಾರ್ಥಿಗಳ ಹೋರಾಟವನ್ನು ದಮನ ಮಾಡಲು ಯತ್ನಿಸುತ್ತಿರುವ ಬಿಜೆಪಿ, ಈಗ ಅವರ ವಿರುದ್ಧವೇ ಅತ್ಯಂತ ಕೀಳುಮಟ್ಟದ ಇಸ್ಲಾಮೋಫೋಬಿಕ್ ಮತ್ತು...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಖುಲಾಸೆ : ಇಡೀ ವ್ಯವಸ್ಥೆಯೇ ಬ್ರಿಜ್ ಭೂಷಣ್‌ರನ್ನು ರಕ್ಷಿಸಿತು ಎಂದ ವಿನೇಶ್ ಫೋಗಟ್; ಮೇಲ್ಮನವಿ ಸಲ್ಲಿಸಲು ಮಹಿಳಾ ಕುಸ್ತಿಪಟುಗಳ ನಿರ್ಧಾರ

ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ಎದುರಿಸುತ್ತಿದ್ದ ಭಾರತೀಯ ಕುಸ್ತಿ ಫೆಡರೇಶನ್ (WFI) ಮಾಜಿ ಅಧ್ಯಕ್ಷ ಹಾಗೂ ಬಿಜೆಪಿ ಮಾಜಿ ಸಂಸದ ಬ್ರಿಜ್ ಭೂಷಣ್ ಶರಣ್ ಸಿಂಗ್ ಅವರನ್ನು ದೆಹಲಿಯ ರೋಸ್...

ಕರ್ನಾಟಕದಲ್ಲಿ SIR ಬಿಹಾರ-ಬಂಗಾಳಕ್ಕಿಂತ ಭೀಕರ: ಆಗಸ್ಟ್ 4 ರಂದು ಜನಪರ ಸಂಘಟನೆಗಳಿಂದ ಮಹತ್ವದ ಮಾಧ್ಯಮಗೋಷ್ಠಿ

ಬೆಂಗಳೂರು: ಕರ್ನಾಟಕದಲ್ಲಿ ನಡೆಯುತ್ತಿರುವ ಎಸ್‌ಐಆರ್ (SIR) ಪ್ರಕ್ರಿಯೆಯು ಬಿಹಾರ ಮತ್ತು ಪಶ್ಚಿಮ ಬಂಗಾಳ ರಾಜ್ಯಗಳಿಗಿಂತಲೂ ಅತ್ಯಂತ ಭೀಕರ ರೂಪ ಪಡೆದುಕೊಳ್ಳುತ್ತಿದೆ ಎಂದು 'SIR ವಿರೋಧಿ ಜಾತ್ಯತೀತ ಪಕ್ಷಗಳು ಮತ್ತು ಜನಪರ ಸಂಘಟನೆಗಳ ಒಕ್ಕೂಟ'...

“ನೈರ್ಮಲ್ಯ ಕಾರ್ಮಿಕರು ಕೆಲಸ ಬಿಡಲು ಸಾಧ್ಯವಿಲ್ಲ”: ದೇಶಾದ್ಯಂತ ಪ್ರತಿಭಟನೆಗೆ DASAM ಬೆಂಬಲ, ಉದ್ಯೋಗ ಖಾಯಂಗೊಳಿಸಲು ತೀವ್ರ ಒತ್ತಾಯ

ನವದೆಹಲಿ: ಉದ್ಯೋಗ ಕ್ರಮಬದ್ಧಗೊಳಿಸುವಿಕೆ (ಖಾಯಂಗೊಳಿಸುವುದು), ನ್ಯಾಯಯುತ ವೇತನ, ಸಾಮಾಜಿಕ ಭದ್ರತೆ, ಸುರಕ್ಷಿತ ಕೆಲಸದ ವಾತಾವರಣ ಮತ್ತು ಕೆಲಸದ ಸ್ಥಳದಲ್ಲಿ ಮಾನವ ಘನತೆಯನ್ನು ಎತ್ತಿಹಿಡಿಯುವಂತೆ ಒತ್ತಾಯಿಸಿ ದೇಶದ ನಾನಾ ಭಾಗಗಳಲ್ಲಿ ನೈರ್ಮಲ್ಯ ಕಾರ್ಮಿಕರು ನಡೆಸುತ್ತಿರುವ...

ದ್ವೇಷ ಭಾಷಣ ಪ್ರಕರಣ: ಬಿಜೆಪಿ ನಾಯಕರಾದ ಅನುರಾಗ್‌ ಠಾಕೂರ್‌, ಪರ್ವೇಶ್‌ ವರ್ಮಾಗೆ ಕ್ಲೀನ್ ಚೀಟ್: ಪುನರ್ ಪರಿಶೀಲನಾ ಅರ್ಜಿ ವಜಾಗೊಳಿಸಿದ ಸುಪ್ರೀಂ

ನವದೆಹಲಿ: 2020ರ ದೆಹಲಿಯಲ್ಲಿ ನಡೆದ ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ) ವಿರೋಧಿ ಪ್ರತಿಭಟನೆಗಳ ಸಂದರ್ಭದಲ್ಲಿ ಉದ್ರೇಕಕಾರಿ ಹಾಗೂ ದ್ವೇಷಪೂರಿತ ಭಾಷಣ ಮಾಡಿದ ಆರೋಪ ಹೊತ್ತಿದ್ದ ಬಿಜೆಪಿ ನಾಯಕರಾದ ಅನುರಾಗ್ ಠಾಕೂರ್ ಮತ್ತು ಪರ್ವೇಶ್‌...

ಕರ್ನಾಟಕ ಸಚಿವ ಸಂಪುಟ ವಿಸ್ತರಣೆ: ನೂತನ ಸಚಿವರ ಪಟ್ಟಿಗೆ ವರಿಷ್ಠರ ಅನುಮೋದನೆ: ಇಂದು ಸಂಜೆ 4:05 ಕ್ಕೆ ಪ್ರಮಾಣ ವಚನ

ಬಹುನಿರೀಕ್ಷಿತ ಕರ್ನಾಟಕ ರಾಜ್ಯ ಸಚಿವ ಸಂಪುಟ ವಿಸ್ತರಣೆಗೆ ಕೊನೆಗೂ ಮುಹೂರ್ತ ನಿಗದಿಯಾಗಿದ್ದು, ಕಾಂಗ್ರೆಸ್ ಹೈಕಮಾಂಡ್ ನೂತನ ಸಚಿವರ ಪಟ್ಟಿಗೆ ಅಧಿಕೃತ ಅನುಮೋದನೆ ನೀಡಿದೆ. ಇದರೊಂದಿಗೆ ಕಳೆದ ಕೆಲವು ದಿನಗಳಿಂದ ರಾಜ್ಯ ರಾಜಕಾರಣದಲ್ಲಿ ತೀವ್ರ...

ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ಪ್ರಕರಣ : WFI ಮಾಜಿ ಅಧ್ಯಕ್ಷ ಬ್ರಿಜ್ ಭೂಷಣ್‌ ಸಿಂಗ್‌ ಖುಲಾಸೆ

ದೆಹಲಿ ನ್ಯಾಯಾಲಯವು ಸೋಮವಾರ (ಆ.3) ಭಾರತೀಯ ಕುಸ್ತಿ ಫೆಡರೇಶನ್ (WFI) ಮಾಜಿ ಅಧ್ಯಕ್ಷ ಮತ್ತು ಬಿಜೆಪಿ ನಾಯಕ ಬ್ರಿಜ್ ಭೂಷಣ್ ಸಿಂಗ್ ಅವರನ್ನು ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಪ್ರಕರಣದಿಂದ...

ಪ್ರಶ್ನೆ ಪತ್ರಿಕೆ ಸೋರಿಕೆ : ಫಾಸ್ಟ್‌ ಟ್ರ್ಯಾಕ್ ಕೋರ್ಟ್ ನ್ಯಾಯಾಧೀಶೆ ಒಂದೇ ವಾರದಲ್ಲಿ ವರ್ಗಾವಣೆ

ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಗಳ ವಿಚಾರಣೆಗಾಗಿ ಸ್ಥಾಪಿಸಲಾದ ತ್ವರಿತಗತಿ (ಫಾಸ್ಟ್‌ ಟ್ರ್ಯಾಕ್) ನ್ಯಾಯಾಲಯದ ನೇತೃತ್ವ ವಹಿಸಲು ನೇಮಕಗೊಂಡ ಕೇವಲ ಒಂದು ವಾರದ ನಂತರ, ದೆಹಲಿ ಹೈಕೋರ್ಟ್ ಶನಿವಾರ (ಆಗಸ್ಟ್ 1) ವಿಶೇಷ ನ್ಯಾಯಾಧೀಶರಾದ...

ಶ್ರೀಲಂಕಾ | 2019ರ ಈಸ್ಟರ್ ಬಾಂಬ್ ಸ್ಫೋಟ ಪ್ರಕರಣ: ಇಬ್ಬರು ಮಾಜಿ ಅಧಿಕಾರಿಗಳಿಗೆ ಮರಣದಂಡನೆ ವಿಧಿಸಿದ ಕೋರ್ಟ್

ಬರೋಬ್ಬರಿ 260ಕ್ಕೂ ಹೆಚ್ಚು ಜನರ ಸಾವಿಗೆ ಕಾರಣವಾಗಿದ್ದ 2019ರ ಶ್ರೀಲಂಕಾದ 'ಈಸ್ಟರ್ ಸಂಡೇ' ಬಾಂಬ್ ಸ್ಫೋಟ ಪ್ರಕರಣದಲ್ಲಿ ಕ್ರಿಮಿನಲ್ ನಿರ್ಲಕ್ಷ್ಯ ಆರೋಪ ಸಾಬೀತಾದ ಹಿನ್ನೆಲೆ, ಪೊಲೀಸ್ ಮಾಜಿ ಮುಖ್ಯಸ್ಥ ಮತ್ತು ರಕ್ಷಣಾ ಸಚಿವಾಲಯದ...