Homeಮುಖಪುಟಮಲ್ಲಿಕಾರ್ಜುನ ಖರ್ಗೆ ಸಮ್ಮುಖದಲ್ಲಿ ಕಾಂಗ್ರೆಸ್ ಸೇರಿದ ಹಿಸಾರ್ ಬಿಜೆಪಿ ಸಂಸದ ಬ್ರಿಜೇಂದ್ರ ಸಿಂಗ್

ಮಲ್ಲಿಕಾರ್ಜುನ ಖರ್ಗೆ ಸಮ್ಮುಖದಲ್ಲಿ ಕಾಂಗ್ರೆಸ್ ಸೇರಿದ ಹಿಸಾರ್ ಬಿಜೆಪಿ ಸಂಸದ ಬ್ರಿಜೇಂದ್ರ ಸಿಂಗ್

- Advertisement -
- Advertisement -

ಸಂಸದ ಬ್ರಿಜೇಂದ್ರ ಸಿಂಗ್ ಭಾನುವಾರ ಭಾರತೀಯ ಜನತಾ ಪಕ್ಷದ (ಬಿಜೆಪಿ) ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದು, ನನ್ನ ನಿರ್ಧಾರದ ಹಿಂದೆ ‘ಬಲವಾದ ರಾಜಕೀಯ ಕಾರಣಗಳಿವೆ’ ಎಂದು ಹೇಳಿದ್ದಾರೆ.

ಕಾಂಗ್ರೆಸ್‌ ಮುಖ್ಯಸ್ಥ ಮಲ್ಲಿಕಾರ್ಜುನ ಖರ್ಗೆ ಸಮ್ಮುಖದಲ್ಲಿ ಕಾಂಗ್ರೆಸ್ ಸೇರಿದ ಅವರು, ‘ಬಲವಾದ ರಾಜಕೀಯ ಕಾರಣಗಳಿಂದ ನಾನು ಬಿಜೆಪಿಯ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದೇನೆ. ನನಗೆ ಸೇವೆ ಸಲ್ಲಿಸಲು ಅವಕಾಶ ನೀಡಿದ ಪಕ್ಷಕ್ಕೆ, ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ, ಪ್ರಧಾನಿ ನರೇಂದ್ರ ಮೋದಿ ಮತ್ತು ಅಮಿತ್ ಶಾ ಅವರಿಗೆ ನಾನು ಕೃತಜ್ಞತೆ ಸಲ್ಲಿಸುತ್ತೇನೆ’ ಎಂದು ತಮ್ಮ ಎಕ್ಸ್‌ ಖಾತೆಯಲ್ಲಿ ಬರೆದಿದ್ದಾರೆ.

ಬಿಜೇಂದ್ರ ಸಿಂಗ್ ಪಕ್ಷಕ್ಕೆ ಸೇರ್ಪಡೆಗೊಂಡ ಸಂದರ್ಭದಲ್ಲಿ ಪಕ್ಷದ ಮುಖ್ಯಸ್ಥ ಮಲ್ಲಿಕಾರ್ಜುನ ಖರ್ಗೆ ಅವರ ನಿವಾಸದಲ್ಲಿ ಹಿರಿಯ ಕಾಂಗ್ರೆಸ್ ನಾಯಕರಾದ ಅಜಯ್ ಮಾಕನ್, ಮುಕುಲ್ ವಾಸ್ನಿಕ್ ಮತ್ತು ದೀಪಕ್ ಬಬಾರಿಯಾ ಉಪಸ್ಥಿತರಿದ್ದರು.

‘ಅಕ್ಟೋಬರ್ 2ರಂದು ಜಿಂದ್‌ನಲ್ಲಿ ನಡೆದ ರ್ಯಾಲಿಯಲ್ಲಿ ಹರಿಯಾಣದಲ್ಲಿ ಬಿಜೆಪಿ-ಜೆಜೆಪಿ ಮೈತ್ರಿ ಬಗ್ಗೆ ಪ್ರಸ್ತಾಪಿಸಲಾಯಿತು. ಅದರ ಬಗ್ಗೆ ನಿರ್ಧಾರ ತೆಗೆದುಕೊಳ್ಳಲಾಗಿದೆ ಮತ್ತು ಅದು ಕೂಡ (ಬಿಜೆಪಿ ತೊರೆಯಲು) ಒಂದು ಕಾರಣ’ ಎಂದು ಸಿಂಗ್ ತಿಳಿಸಿದ್ದಾರೆ.

ಬ್ರಿಜೇಂದ್ರ ಸಿಂಗ್ ಯಾರು?

ಬ್ರಿಜೇಂದ್ರ ಸಿಂಗ್ ಹರಿಯಾಣದ ಹಿಸಾರ್‌ನಿಂದ ಸಂಸದರಾಗಿದ್ದಾರೆ. ಅವರು ಅನೇಕ ಸಂಸದೀಯ ಸಮಿತಿಗಳ ಸದಸ್ಯರೂ ಆಗಿದ್ದಾರೆ. ಬ್ರಿಜೇಂದ್ರ ಸಿಂಗ್ ಅವರು ಮಾಜಿ ಭಾರತೀಯ ಆಡಳಿತ ಸೇವೆ (ಐಎಎಸ್) ಅಧಿಕಾರಿಯಾಗಿದ್ದು, ಅವರು 21 ವರ್ಷಗಳ ಕಾಲ ರಾಷ್ಟ್ರಕ್ಕೆ ಸೇವೆ ಸಲ್ಲಿಸಿದ ನಂತರ ಸ್ವಯಂ ನಿವೃತ್ತಿ ಪಡೆದರು.

1998 ರಲ್ಲಿ, ಅವರು ನಾಗರಿಕ ಸೇವೆಗಳ ಪರೀಕ್ಷೆಯಲ್ಲಿ 9 ನೇ ರ್ಯಾಂಕ್ ಪಡೆದರು. ಬ್ರಿಜೇಂದ್ರ ಸಿಂಗ್ ಜೆಎನ್‌ಯುನಿಂದ ಆಧುನಿಕ ಇತಿಹಾಸದಲ್ಲಿ ಎಂಎ ವ್ಯಾಸಂಗ ಮಾಡಿದ್ದರು. ಇವರು ಹರಿಯಾಣದ ಜಿಂದ್‌ ಮೂಲದವರು. ಅವರು ಮಾಜಿ ಕೇಂದ್ರ ಸಚಿವ ಮತ್ತು ಬಿಜೆಪಿ ನಾಯಕ ಬಿರೇಂದರ್ ಸಿಂಗ್ ಅವರ ಪುತ್ರ. ಅವರು ಜಾಟ್ ಐಕಾನ್ ಛೋಟು ರಾಮ್ ಅವರ ಮರಿ ಮೊಮ್ಮಗ.

ಬ್ರಿಜೇಂದ್ರ ಸಿಂಗ್ ಅವರು 2019 ರಲ್ಲಿ ಚುನಾವಣಾ ಪಾದಾರ್ಪಣೆ ಮಾಡಿದರು. ಅವರ ಪ್ರಚಾರದ ಸಮಯದಲ್ಲಿ, ಅವರು ಸ್ವಜನಪಕ್ಷಪಾತದ ಉತ್ಪನ್ನವಲ್ಲ ಎಂದು ಹೇಳಿದ್ದರು.

‘ನನ್ನನ್ನು ಸ್ವಜನಪಕ್ಷಪಾತದ ಉತ್ಪನ್ನವಾಗಿ ನೋಡಬಾರದು. ನಾನು ಒಂದು ಶತಮಾನಕ್ಕೂ ಹೆಚ್ಚು ಕಾಲ ಅಸ್ತಿತ್ವದಲ್ಲಿದ್ದ ಪ್ರಭಾವಿ ರಾಜಕೀಯ ಕುಟುಂಬದಿಂದ ಬಂದವನು. ಆದರೆ, ನಾನು ಹೋಗಲು ಎಲ್ಲಿಯೂ ಇಲ್ಲದ ಕಾರಣ ನಾನು ಮುಖ್ಯವಾಹಿನಿಯ ರಾಜಕೀಯಕ್ಕೆ ಸೇರುತ್ತಿದ್ದೇನೆ ಎಂದು ಅಲ್ಲ. ನಾನು ತಕ್ಕಮಟ್ಟಿಗೆ ಯಶಸ್ಸನ್ನು ಸಾಧಿಸಿದ ಸ್ವಂತ ಮಾರ್ಗವಾಗಿದೆ’ ಎಂದು ಸಿಂಗ್ 2019 ರ ಲೋಕಸಭೆ ಚುನಾವಣೆಗೆ ಮೊದಲು ತಿಳಿಸಿದ್ದರು.

ಬಿಜೇಂದ್ರ ಸಿಂಗ್ ಅವರು ಜೆಜೆಪಿಯ ದುಷ್ಯಂತ್ ಚೌಟಾಲಾ ಮತ್ತು ಆಗ ಕಾಂಗ್ರೆಸ್‌ನಲ್ಲಿದ್ದ ಭವ್ಯಾ ಬಿಷ್ಣೋಯ್ ಅವರನ್ನು ಸೋಲಿಸಿದರು.

ಕಳೆದ ವರ್ಷ, ಬಿಜೆಪಿ ಸಂಸದ ಬ್ರಿಜ್ ಭೂಷಣ್ ಶರಣ್ ಸಿಂಗ್ ವಿರುದ್ಧ ಲೈಂಗಿಕ ಕಿರುಕುಳ ಆರೋಪದ ಮೇಲೆ ಪ್ರತಿಭಟನೆ ನಡೆಸುತ್ತಿದ್ದ ಕುಸ್ತಿಪಟುಗಳಿಗೆ ಬ್ರಿಜೇಂದ್ರ ಸಿಂಗ್ ಸಾರ್ವಜನಿಕವಾಗಿ ಬೆಂಬಲ ನೀಡಿದ್ದರು. 2022 ರಲ್ಲಿ, ಬ್ರಿಜೇಂದ್ರ ಸಿಂಗ್ ಆಮ್ ಆದ್ಮಿ ಪಕ್ಷವನ್ನು ಸೇರಲು ಯೋಚಿಸುತ್ತಿದ್ದಾರೆ ಎಂಬ ಊಹಾಪೋಹವಿತ್ತು. ಆದರೆ, ನಂತರ ವದಂತಿಗಳನ್ನು ತಳ್ಳಿಹಾಕಿದ ಅವರು, ಪಕ್ಷ ಸೇರುವ ಯೋಚನೆ ಇಲ್ಲ ಎಂದು ಹೇಳಿದ್ದಾರೆ.

‘ಬ್ರಿಜೇಂದ್ರ ಸಿಂಗ್ ಅವರು ಹರಿಯಾಣದಿಂದ ಇಂಡಿಯಾ ತಂಡದ ಭಾಗವಾಗುವುದನ್ನು ನೋಡಲು ಸಂತೋಷವಾಗಿದೆ. ಅವರು ಒಬ್ಬ ನಿಪುಣ ಮಾಜಿ ಅಧಿಕಾರಿ, ಯಶಸ್ವಿ ಸಂಸದ, ಅವರ ಉಪಸ್ಥಿತಿಯು ಖಂಡಿತವಾಗಿಯೂ ಮೈತ್ರಿಗೆ ಮೌಲ್ಯವನ್ನು ನೀಡುತ್ತದೆ’ ಎಂದು ಶಿವಸೇನಾ (ಯುಬಿಟಿ) ನಾಯಕಿ ಪ್ರಿಯಾಂಕಾ ಚತುರ್ವೇದಿ ಅವರು ಎಕ್ಸ್‌ನಲ್ಲಿ ಬರೆದಿದ್ದಾರೆ.

ಇದನ್ನೂ ಓದಿ;

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಿಲಯನ್ಸ್ ಇಂಡಸ್ಟ್ರೀಸ್‌ಗೆ ರೂ. 56.44 ಕೋಟಿ ಸಿಜಿಎಸ್‌ಟಿ ದಂಡ

ಮುಖೇಶ್ ಅಂಬಾನಿ ನೇತೃತ್ವದ ರಿಲಯನ್ಸ್ ಇಂಡಸ್ಟ್ರೀಸ್, ಅಹಮದಾಬಾದ್‌ನ ಸಿಜಿಎಸ್‌ಟಿ ಜಂಟಿ ಆಯುಕ್ತರಿಂದ 56.44 ಕೋಟಿ ರೂ. ದಂಡದ ಆದೇಶವನ್ನು ಸ್ವೀಕರಿಸಿದೆ ಎಂದು ಶುಕ್ರವಾರ ತಿಳಿಸಿದೆ. ನವೆಂಬರ್ 25 ರಂದು ಹೊರಡಿಸಲಾದ ಆದೇಶದಲ್ಲಿ, ಕಂಪನಿಯ ಇನ್‌ಪುಟ್...

ತಮಿಳುನಾಡು| ರಸ್ತೆ ಅಪಘಾತದಲ್ಲಿ ಇಬ್ಬರು ದಲಿತ ಯುವಕರು ಸಾವು; ಜಾತಿ ವೈಷಮ್ಯ ಆರೋಪ

ತಮಿಳುನಾಡಿನ ಧರ್ಮಪುರಿಯಲ್ಲಿ ಬುಧವಾರ ರಾತ್ರಿ ಚಿನ್ನಾರ್ಥಳ್ಳಿ ಕೂಟ್ ರಸ್ತೆಯ ಬಳಿ ಅಪರಿಚಿತ ವಾಹನವೊಂದು ಮೋಟಾರ್ ಸೈಕಲ್‌ಗೆ ಡಿಕ್ಕಿ ಹೊಡೆದ ಪರಿಣಾಮ ಸೊನ್ನಂಪಟ್ಟಿ ಗ್ರಾಮದ ಪರಿಶಿಷ್ಟ ಜಾತಿಗೆ ಸೇರಿದ ಇಬ್ಬರು ಯುವಕರು ಸಾವನ್ನಪ್ಪಿದ್ದಾರೆ ಎಂದು...

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...