Homeಮುಖಪುಟಮಲ್ಲಿಕಾರ್ಜುನ ಖರ್ಗೆ ಸಮ್ಮುಖದಲ್ಲಿ ಕಾಂಗ್ರೆಸ್ ಸೇರಿದ ಹಿಸಾರ್ ಬಿಜೆಪಿ ಸಂಸದ ಬ್ರಿಜೇಂದ್ರ ಸಿಂಗ್

ಮಲ್ಲಿಕಾರ್ಜುನ ಖರ್ಗೆ ಸಮ್ಮುಖದಲ್ಲಿ ಕಾಂಗ್ರೆಸ್ ಸೇರಿದ ಹಿಸಾರ್ ಬಿಜೆಪಿ ಸಂಸದ ಬ್ರಿಜೇಂದ್ರ ಸಿಂಗ್

- Advertisement -
- Advertisement -

ಸಂಸದ ಬ್ರಿಜೇಂದ್ರ ಸಿಂಗ್ ಭಾನುವಾರ ಭಾರತೀಯ ಜನತಾ ಪಕ್ಷದ (ಬಿಜೆಪಿ) ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದು, ನನ್ನ ನಿರ್ಧಾರದ ಹಿಂದೆ ‘ಬಲವಾದ ರಾಜಕೀಯ ಕಾರಣಗಳಿವೆ’ ಎಂದು ಹೇಳಿದ್ದಾರೆ.

ಕಾಂಗ್ರೆಸ್‌ ಮುಖ್ಯಸ್ಥ ಮಲ್ಲಿಕಾರ್ಜುನ ಖರ್ಗೆ ಸಮ್ಮುಖದಲ್ಲಿ ಕಾಂಗ್ರೆಸ್ ಸೇರಿದ ಅವರು, ‘ಬಲವಾದ ರಾಜಕೀಯ ಕಾರಣಗಳಿಂದ ನಾನು ಬಿಜೆಪಿಯ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದೇನೆ. ನನಗೆ ಸೇವೆ ಸಲ್ಲಿಸಲು ಅವಕಾಶ ನೀಡಿದ ಪಕ್ಷಕ್ಕೆ, ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ, ಪ್ರಧಾನಿ ನರೇಂದ್ರ ಮೋದಿ ಮತ್ತು ಅಮಿತ್ ಶಾ ಅವರಿಗೆ ನಾನು ಕೃತಜ್ಞತೆ ಸಲ್ಲಿಸುತ್ತೇನೆ’ ಎಂದು ತಮ್ಮ ಎಕ್ಸ್‌ ಖಾತೆಯಲ್ಲಿ ಬರೆದಿದ್ದಾರೆ.

ಬಿಜೇಂದ್ರ ಸಿಂಗ್ ಪಕ್ಷಕ್ಕೆ ಸೇರ್ಪಡೆಗೊಂಡ ಸಂದರ್ಭದಲ್ಲಿ ಪಕ್ಷದ ಮುಖ್ಯಸ್ಥ ಮಲ್ಲಿಕಾರ್ಜುನ ಖರ್ಗೆ ಅವರ ನಿವಾಸದಲ್ಲಿ ಹಿರಿಯ ಕಾಂಗ್ರೆಸ್ ನಾಯಕರಾದ ಅಜಯ್ ಮಾಕನ್, ಮುಕುಲ್ ವಾಸ್ನಿಕ್ ಮತ್ತು ದೀಪಕ್ ಬಬಾರಿಯಾ ಉಪಸ್ಥಿತರಿದ್ದರು.

‘ಅಕ್ಟೋಬರ್ 2ರಂದು ಜಿಂದ್‌ನಲ್ಲಿ ನಡೆದ ರ್ಯಾಲಿಯಲ್ಲಿ ಹರಿಯಾಣದಲ್ಲಿ ಬಿಜೆಪಿ-ಜೆಜೆಪಿ ಮೈತ್ರಿ ಬಗ್ಗೆ ಪ್ರಸ್ತಾಪಿಸಲಾಯಿತು. ಅದರ ಬಗ್ಗೆ ನಿರ್ಧಾರ ತೆಗೆದುಕೊಳ್ಳಲಾಗಿದೆ ಮತ್ತು ಅದು ಕೂಡ (ಬಿಜೆಪಿ ತೊರೆಯಲು) ಒಂದು ಕಾರಣ’ ಎಂದು ಸಿಂಗ್ ತಿಳಿಸಿದ್ದಾರೆ.

ಬ್ರಿಜೇಂದ್ರ ಸಿಂಗ್ ಯಾರು?

ಬ್ರಿಜೇಂದ್ರ ಸಿಂಗ್ ಹರಿಯಾಣದ ಹಿಸಾರ್‌ನಿಂದ ಸಂಸದರಾಗಿದ್ದಾರೆ. ಅವರು ಅನೇಕ ಸಂಸದೀಯ ಸಮಿತಿಗಳ ಸದಸ್ಯರೂ ಆಗಿದ್ದಾರೆ. ಬ್ರಿಜೇಂದ್ರ ಸಿಂಗ್ ಅವರು ಮಾಜಿ ಭಾರತೀಯ ಆಡಳಿತ ಸೇವೆ (ಐಎಎಸ್) ಅಧಿಕಾರಿಯಾಗಿದ್ದು, ಅವರು 21 ವರ್ಷಗಳ ಕಾಲ ರಾಷ್ಟ್ರಕ್ಕೆ ಸೇವೆ ಸಲ್ಲಿಸಿದ ನಂತರ ಸ್ವಯಂ ನಿವೃತ್ತಿ ಪಡೆದರು.

1998 ರಲ್ಲಿ, ಅವರು ನಾಗರಿಕ ಸೇವೆಗಳ ಪರೀಕ್ಷೆಯಲ್ಲಿ 9 ನೇ ರ್ಯಾಂಕ್ ಪಡೆದರು. ಬ್ರಿಜೇಂದ್ರ ಸಿಂಗ್ ಜೆಎನ್‌ಯುನಿಂದ ಆಧುನಿಕ ಇತಿಹಾಸದಲ್ಲಿ ಎಂಎ ವ್ಯಾಸಂಗ ಮಾಡಿದ್ದರು. ಇವರು ಹರಿಯಾಣದ ಜಿಂದ್‌ ಮೂಲದವರು. ಅವರು ಮಾಜಿ ಕೇಂದ್ರ ಸಚಿವ ಮತ್ತು ಬಿಜೆಪಿ ನಾಯಕ ಬಿರೇಂದರ್ ಸಿಂಗ್ ಅವರ ಪುತ್ರ. ಅವರು ಜಾಟ್ ಐಕಾನ್ ಛೋಟು ರಾಮ್ ಅವರ ಮರಿ ಮೊಮ್ಮಗ.

ಬ್ರಿಜೇಂದ್ರ ಸಿಂಗ್ ಅವರು 2019 ರಲ್ಲಿ ಚುನಾವಣಾ ಪಾದಾರ್ಪಣೆ ಮಾಡಿದರು. ಅವರ ಪ್ರಚಾರದ ಸಮಯದಲ್ಲಿ, ಅವರು ಸ್ವಜನಪಕ್ಷಪಾತದ ಉತ್ಪನ್ನವಲ್ಲ ಎಂದು ಹೇಳಿದ್ದರು.

‘ನನ್ನನ್ನು ಸ್ವಜನಪಕ್ಷಪಾತದ ಉತ್ಪನ್ನವಾಗಿ ನೋಡಬಾರದು. ನಾನು ಒಂದು ಶತಮಾನಕ್ಕೂ ಹೆಚ್ಚು ಕಾಲ ಅಸ್ತಿತ್ವದಲ್ಲಿದ್ದ ಪ್ರಭಾವಿ ರಾಜಕೀಯ ಕುಟುಂಬದಿಂದ ಬಂದವನು. ಆದರೆ, ನಾನು ಹೋಗಲು ಎಲ್ಲಿಯೂ ಇಲ್ಲದ ಕಾರಣ ನಾನು ಮುಖ್ಯವಾಹಿನಿಯ ರಾಜಕೀಯಕ್ಕೆ ಸೇರುತ್ತಿದ್ದೇನೆ ಎಂದು ಅಲ್ಲ. ನಾನು ತಕ್ಕಮಟ್ಟಿಗೆ ಯಶಸ್ಸನ್ನು ಸಾಧಿಸಿದ ಸ್ವಂತ ಮಾರ್ಗವಾಗಿದೆ’ ಎಂದು ಸಿಂಗ್ 2019 ರ ಲೋಕಸಭೆ ಚುನಾವಣೆಗೆ ಮೊದಲು ತಿಳಿಸಿದ್ದರು.

ಬಿಜೇಂದ್ರ ಸಿಂಗ್ ಅವರು ಜೆಜೆಪಿಯ ದುಷ್ಯಂತ್ ಚೌಟಾಲಾ ಮತ್ತು ಆಗ ಕಾಂಗ್ರೆಸ್‌ನಲ್ಲಿದ್ದ ಭವ್ಯಾ ಬಿಷ್ಣೋಯ್ ಅವರನ್ನು ಸೋಲಿಸಿದರು.

ಕಳೆದ ವರ್ಷ, ಬಿಜೆಪಿ ಸಂಸದ ಬ್ರಿಜ್ ಭೂಷಣ್ ಶರಣ್ ಸಿಂಗ್ ವಿರುದ್ಧ ಲೈಂಗಿಕ ಕಿರುಕುಳ ಆರೋಪದ ಮೇಲೆ ಪ್ರತಿಭಟನೆ ನಡೆಸುತ್ತಿದ್ದ ಕುಸ್ತಿಪಟುಗಳಿಗೆ ಬ್ರಿಜೇಂದ್ರ ಸಿಂಗ್ ಸಾರ್ವಜನಿಕವಾಗಿ ಬೆಂಬಲ ನೀಡಿದ್ದರು. 2022 ರಲ್ಲಿ, ಬ್ರಿಜೇಂದ್ರ ಸಿಂಗ್ ಆಮ್ ಆದ್ಮಿ ಪಕ್ಷವನ್ನು ಸೇರಲು ಯೋಚಿಸುತ್ತಿದ್ದಾರೆ ಎಂಬ ಊಹಾಪೋಹವಿತ್ತು. ಆದರೆ, ನಂತರ ವದಂತಿಗಳನ್ನು ತಳ್ಳಿಹಾಕಿದ ಅವರು, ಪಕ್ಷ ಸೇರುವ ಯೋಚನೆ ಇಲ್ಲ ಎಂದು ಹೇಳಿದ್ದಾರೆ.

‘ಬ್ರಿಜೇಂದ್ರ ಸಿಂಗ್ ಅವರು ಹರಿಯಾಣದಿಂದ ಇಂಡಿಯಾ ತಂಡದ ಭಾಗವಾಗುವುದನ್ನು ನೋಡಲು ಸಂತೋಷವಾಗಿದೆ. ಅವರು ಒಬ್ಬ ನಿಪುಣ ಮಾಜಿ ಅಧಿಕಾರಿ, ಯಶಸ್ವಿ ಸಂಸದ, ಅವರ ಉಪಸ್ಥಿತಿಯು ಖಂಡಿತವಾಗಿಯೂ ಮೈತ್ರಿಗೆ ಮೌಲ್ಯವನ್ನು ನೀಡುತ್ತದೆ’ ಎಂದು ಶಿವಸೇನಾ (ಯುಬಿಟಿ) ನಾಯಕಿ ಪ್ರಿಯಾಂಕಾ ಚತುರ್ವೇದಿ ಅವರು ಎಕ್ಸ್‌ನಲ್ಲಿ ಬರೆದಿದ್ದಾರೆ.

ಇದನ್ನೂ ಓದಿ;

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉತ್ತರ ಪ್ರದೇಶ| ದಲಿತ ಕುಟುಂಬದ ಮದುವೆ ಮನೆಯಲ್ಲಿ ಸವರ್ಣಿಯರಿಂದ ಹಲ್ಲೆ; ಬಂದೂಕಿನಿಂದ ಬೆದರಿಕೆ

ಮಾರ್ಚ್ 10 ರಂದು ಉತ್ತರ ಪ್ರದೇಶದ ಲಖಿಂಪುರ ಖೇರಿ ಜಿಲ್ಲೆಯ ಟಿಕುನಿಯಾ ಪೊಲೀಸ್ ಠಾಣೆ ಪ್ರದೇಶದಲ್ಲಿ ಜಾತಿ ಆಧಾರಿತ ಹಿಂಸಾಚಾರದ ತೀವ್ರ ಆತಂಕಕಾರಿ ಘಟನೆ ಬೆಳಕಿಗೆ ಬಂದಿದೆ. 24 ಗಂಟೆಗಳ ಒಳಗೆ ಎಫ್‌ಐಆರ್...

’70 ಲಕ್ಷ ಬಂಗಾಳಿ ಮುಸ್ಲಿಮರನ್ನು ಹೊರದಬ್ಬಲು ಸಾಧ್ಯವಿಲ್ಲ..ಅವರೇ ದೇಶ ಬಿಡುವಂತಹ ಪರಿಸ್ಥಿತಿ ಸೃಷ್ಟಿಸುತ್ತೇವೆ’: ಅಸ್ಸಾಂ ಸಿಎಂ ಹಿಮಂತ ಬಿಸ್ವಾ ಶರ್ಮಾ

ಸುಮಾರು 70 ಲಕ್ಷ 'ಬಂಗಾಳಿ ಮುಸ್ಲಿಮರ'ನ್ನು ಭಾರತದಿಂದ ಹೊರಹಾಕುವುದು 'ಮಾನವೀಯವಾಗಿ ಸಾಧ್ಯವಿಲ್ಲ'. ಹಾಗಾಗಿ, ಅವರಾಗಿಯೇ ದೇಶ ತೊರೆಯುವಂತಹ ಪರಿಸ್ಥಿತಿಯನ್ನು ನಾವು ಸೃಷ್ಟಿಸುತ್ತೇವೆ ಎಂದು ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಹೇಳಿದ್ದಾರೆ. ಈ...

ಮೋದಿಯವರ ವಿದೇಶಾಂಗ ನೀತಿ ಸಂಪೂರ್ಣವಾಗಿ ದಿಕ್ಕು ತಪ್ಪಿದೆ, ನಗೆಪಾಟಲಿಗೆ ಈಡಾಗಿದೆ, ಅನೈತಿಕತೆಯಿಂದ ಕೂಡಿದೆ. ಇದು ಜಗಜ್ಜಾಹೀರಾಗಿದೆ – ಶ್ರೀಪಾದ್‌ ಭಟ್

ತಮ್ಮ ಸ್ಥಳೀಯ ಮತಬ್ಯಾಂಕ್ ರಾಜಕಾರಣದ ಜೊತೆಗೆ ವಿದೇಶಿ ನೀತಿಯನ್ನು ತಳುಕು ಹಾಕುವುದು. ಉದಾಹರಣೆಗೆ ಅಮೆರಿಕ-ಇಸ್ರೇಲ್ ಜಂಟಿಯಾಗಿ ನಡೆಸುತ್ತಿರುವ ಇರಾನ್ ಮೇಲಿನ ಯುದ್ಧದ ಸಮಯದಲ್ಲಿ ಮೋದಿ ನೇತೃತ್ವದ ಸರ್ಕಾರವು ತಾನು ಇರಾನ್ ಪರ ನಿಲುವು ತಾಳಿದರೆ...

ದೆಹಲಿ ಪೊಲೀಸರಿಂದ 10 ಮಂದಿ ಹೋರಾಟಗಾರರ ಅಪಹರಣ ಆರೋಪ : ಹೈಕೋರ್ಟ್‌ಗೆ ಹೇಬಿಯಸ್ ಕಾರ್ಪಸ್ ಅರ್ಜಿ

ಸಿವಿಲ್ ಸೊಸೈಟಿಯ ಹತ್ತು ಮಂದಿ ಹೋರಾಟಗಾರರನ್ನು ದೆಹಲಿ ಪೊಲೀಸರು ಅಪಹರಿಸಿದ್ದಾರೆ ಅಥವಾ ಅಕ್ರಮವಾಗಿ ಬಂಧಿಸಿದ್ದಾರೆ ಎಂದು ಮಾನವ ಹಕ್ಕುಗಳ ಗುಂಪುಗಳು ಆರೋಪಿಸಿವೆ. ಹತ್ತು ಮಂದಿಯನ್ನು ದೆಹಲಿ ಪೊಲೀಸರು ಮತ್ತು ಇತರ ರಾಜ್ಯಗಳ ಏಜೆನ್ಸಿಗಳು ಅಪಹರಿಸಿವೆ...

ಗುಜರಾತ್‌: 34 ಜಿಲ್ಲೆಗಳ ಪೈಕಿ 20 ಜಿಲ್ಲೆಗಳಲ್ಲಿ 2 ಲಕ್ಷಕ್ಕೂ ಹೆಚ್ಚು ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ: ವಿಧಾನಸಭೆಗೆ ಮಾಹಿತಿ ನೀಡಿದ ಸರ್ಕಾರ

ಗಾಂಧಿನಗರ: ರಾಜ್ಯದ 34 ಜಿಲ್ಲೆಗಳ ಪೈಕಿ 20 ಜಿಲ್ಲೆಗಳಲ್ಲಿ 2 ಲಕ್ಷಕ್ಕೂ ಹೆಚ್ಚು ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ ಮತ್ತು ಪರಿಸ್ಥಿತಿಯನ್ನು ಸುಧಾರಿಸಲು ವಿವಿಧ ಕ್ರಮಗಳನ್ನು ತೆಗೆದುಕೊಳ್ಳಲಾಗುತ್ತಿದೆ ಎಂದು ಗುಜರಾತ್ ಸರ್ಕಾರ ಶನಿವಾರ ವಿಧಾನಸಭೆಗೆ...

‘ಉತ್ತರ ಕರ್ನಾಟಕದ ಪ್ರಾದೇಶಿಕ ಅಸಮಾನತೆ ನಿವಾರಿಸಲು ಸರ್ಕಾರ ಬದ್ಧ’: ಮುಖ್ಯಮಂತ್ರಿ ಸಿದ್ದರಾಮಯ್ಯ

ಬಾಗಲಕೋಟೆ: ಉತ್ತರ ಕರ್ನಾಟಕದ ಪ್ರಾದೇಶಿಕ ಅಸಮಾನತೆಯನ್ನು ನಿವಾರಿಸಲು ಸರ್ಕಾರ ಬದ್ಧವಾಗಿದ್ದು, ಕಾಂಗ್ರೆಸ್ ಸರ್ಕಾರ ನುಡಿದಂತೆ ನಡೆಯುವ ಜನರ ಸರ್ಕಾರ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿಪಾದಿಸಿದರು.  ಮಾರ್ಚ್ 14ರಂದು, ಬಾಗಲಕೋಟೆ ವೈದ್ಯಕೀಯ ಮಹಾವಿದ್ಯಾಲಯ ಹಾಗೂ ಸಂಶೋಧನಾ...

ಮಣಿಪುರ ಹಿಂಸಾಚಾರ: ಕಾಮ್ಜಾಂಗ್‌ನಲ್ಲಿ ಇಬ್ಬರು ಕುಕಿ ಪುರುಷರು ಶವವಾಗಿ ಪತ್ತೆ; ಹೆಚ್ಚಿದ ಉದ್ವಿಗ್ನತೆ 

ಮಣಿಪುರದ ಕಾಮ್ಜಾಂಗ್ ಜಿಲ್ಲೆಯಲ್ಲಿ ಬುಧವಾರದಿಂದ ನಾಪತ್ತೆಯಾಗಿದ್ದ ಇಬ್ಬರು ಕುಕಿ ಪುರುಷರು ಗುರುವಾರ ಥವಾಯ್ ಕುಕಿ ಗ್ರಾಮದ ಅರಣ್ಯ ಪ್ರದೇಶದಲ್ಲಿ ಶವವಾಗಿ ಪತ್ತೆಯಾಗಿದ್ದರಿಂದ ಉದ್ವಿಗ್ನತೆ ಹೆಚ್ಚಾಗಿದೆ. ಜಿಲ್ಲೆಯ ಥಾವಾಯಿ ಕುಕಿ ಗ್ರಾಮದ 42 ವರ್ಷದ ಥೇಂಗಿನ್...

ಉತ್ತರ ಪ್ರದೇಶ | ಮುಸ್ಲಿಮರೊಂದಿಗಿನ ಶಾಂತಿ ಸಭೆಯಲ್ಲಿ ‘ಇರಾನ್‌ಗೆ ಹೋಗಿ’ ಎಂದ ಪೊಲೀಸ್‌ ಅಧಿಕಾರಿ : ತೀವ್ರ ಆಕ್ರೋಶ

ಉತ್ತರ ಪ್ರದೇಶದಲ್ಲಿ ಈದುಲ್ ಫಿತರ್ (ರಂಝಾನ್) ಹಬ್ಬಕ್ಕೆ ಪೂರ್ವಭಾವಿಯಾಗಿ ನಡೆದ ಶಾಂತಿ ಸಭೆಯಲ್ಲಿ ಪೊಲೀಸ್ ಅಧಿಕಾರಿಯೊಬ್ಬರು ನೀಡಿದ ಹೇಳಿಕೆ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಸಂಭಾಲ್ ಜಿಲ್ಲೆಯ ಅಸ್ಮೋಲಿ ಪ್ರದೇಶದಲ್ಲಿ ರಂಝಾನ್ ತಿಂಗಳ ಕೊನೆಯ...

ಪಶ್ಚಿಮ ಏಷ್ಯಾ ಸಂಘರ್ಷ: ಲೆಬನಾನ್‌ನಲ್ಲಿ ಆರೋಗ್ಯ ಕೇಂದ್ರದ ಮೇಲೆ ಇಸ್ರೇಲ್ ದಾಳಿ: ವೈದ್ಯರು, ದಾದಿಯರು ಸೇರಿ 12 ಮಂದಿ ಸಾವು

ದಕ್ಷಿಣ ಲೆಬನಾನ್‌ನಲ್ಲಿರುವ ಆರೋಗ್ಯ ಕೇಂದ್ರದ ಮೇಲೆ ಇಸ್ರೇಲ್ ನಡೆಸಿದ ದಾಳಿಯಲ್ಲಿ 12 ವೈದ್ಯಕೀಯ ಕಾರ್ಯಕರ್ತರು ಸಾವನ್ನಪ್ಪಿದ್ದಾರೆ ಎಂದು ಲೆಬನಾನಿನ ಸಾರ್ವಜನಿಕ ಆರೋಗ್ಯ ಸಚಿವಾಲಯ ವರದಿ ಮಾಡಿದೆ.  ಲೆಬನಾನ್‌ನಾದ್ಯಂತ ಇಸ್ರೇಲಿ ದಾಳಿಯಲ್ಲಿ ಈವರೆಗೂ 103 ಮಕ್ಕಳು...

ವಿಶೇಷ ಸಚಿವ ಸಂಪುಟ ಸಭೆಯಲ್ಲಿ ಒಳಮೀಸಲಾತಿ ಪರ ತೀರ್ಮಾನಕ್ಕೆ ಎಲ್ಲರೂ ಸಹಕರಿಸಿ: ಒಳಮೀಸಲಾತಿ ಹೋರಾಟ ಸಮಿತಿ ಮನವಿ

ಬೆಂಗಳೂರು: ಒಳಮೀಸಲಾತಿ ಜಾರಿ ಮಾಡುವ ಪ್ರಕ್ರಿಯೆಯು ಕೊನೆಯ ಹಂತಕ್ಕೆ ತಲುಪಿದ್ದು, ಇದನ್ನು ಸುಲಲಿತವಾಗಿ ಬಗೆಹರಿಸಿ ಸಾಮಾಜಿಕ ನ್ಯಾಯವನ್ನು ಎತ್ತಿಹಿಡಿಯಲು ಆಗ್ರಹಿಸಿ ಇಂದು (14 ಮಾರ್ಚ್)‌ ನಗರದ ಪ್ರೆಸ್‌ ಕ್ಲಬ್‌ನಲ್ಲಿ ಒಳಮೀಸಲಾತಿ ಹೋರಾಟಗಾರರು...