Homeಮುಖಪುಟಮಲ್ಲಿಕಾರ್ಜುನ ಖರ್ಗೆ ಸಮ್ಮುಖದಲ್ಲಿ ಕಾಂಗ್ರೆಸ್ ಸೇರಿದ ಹಿಸಾರ್ ಬಿಜೆಪಿ ಸಂಸದ ಬ್ರಿಜೇಂದ್ರ ಸಿಂಗ್

ಮಲ್ಲಿಕಾರ್ಜುನ ಖರ್ಗೆ ಸಮ್ಮುಖದಲ್ಲಿ ಕಾಂಗ್ರೆಸ್ ಸೇರಿದ ಹಿಸಾರ್ ಬಿಜೆಪಿ ಸಂಸದ ಬ್ರಿಜೇಂದ್ರ ಸಿಂಗ್

- Advertisement -
- Advertisement -

ಸಂಸದ ಬ್ರಿಜೇಂದ್ರ ಸಿಂಗ್ ಭಾನುವಾರ ಭಾರತೀಯ ಜನತಾ ಪಕ್ಷದ (ಬಿಜೆಪಿ) ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದು, ನನ್ನ ನಿರ್ಧಾರದ ಹಿಂದೆ ‘ಬಲವಾದ ರಾಜಕೀಯ ಕಾರಣಗಳಿವೆ’ ಎಂದು ಹೇಳಿದ್ದಾರೆ.

ಕಾಂಗ್ರೆಸ್‌ ಮುಖ್ಯಸ್ಥ ಮಲ್ಲಿಕಾರ್ಜುನ ಖರ್ಗೆ ಸಮ್ಮುಖದಲ್ಲಿ ಕಾಂಗ್ರೆಸ್ ಸೇರಿದ ಅವರು, ‘ಬಲವಾದ ರಾಜಕೀಯ ಕಾರಣಗಳಿಂದ ನಾನು ಬಿಜೆಪಿಯ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದೇನೆ. ನನಗೆ ಸೇವೆ ಸಲ್ಲಿಸಲು ಅವಕಾಶ ನೀಡಿದ ಪಕ್ಷಕ್ಕೆ, ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ, ಪ್ರಧಾನಿ ನರೇಂದ್ರ ಮೋದಿ ಮತ್ತು ಅಮಿತ್ ಶಾ ಅವರಿಗೆ ನಾನು ಕೃತಜ್ಞತೆ ಸಲ್ಲಿಸುತ್ತೇನೆ’ ಎಂದು ತಮ್ಮ ಎಕ್ಸ್‌ ಖಾತೆಯಲ್ಲಿ ಬರೆದಿದ್ದಾರೆ.

ಬಿಜೇಂದ್ರ ಸಿಂಗ್ ಪಕ್ಷಕ್ಕೆ ಸೇರ್ಪಡೆಗೊಂಡ ಸಂದರ್ಭದಲ್ಲಿ ಪಕ್ಷದ ಮುಖ್ಯಸ್ಥ ಮಲ್ಲಿಕಾರ್ಜುನ ಖರ್ಗೆ ಅವರ ನಿವಾಸದಲ್ಲಿ ಹಿರಿಯ ಕಾಂಗ್ರೆಸ್ ನಾಯಕರಾದ ಅಜಯ್ ಮಾಕನ್, ಮುಕುಲ್ ವಾಸ್ನಿಕ್ ಮತ್ತು ದೀಪಕ್ ಬಬಾರಿಯಾ ಉಪಸ್ಥಿತರಿದ್ದರು.

‘ಅಕ್ಟೋಬರ್ 2ರಂದು ಜಿಂದ್‌ನಲ್ಲಿ ನಡೆದ ರ್ಯಾಲಿಯಲ್ಲಿ ಹರಿಯಾಣದಲ್ಲಿ ಬಿಜೆಪಿ-ಜೆಜೆಪಿ ಮೈತ್ರಿ ಬಗ್ಗೆ ಪ್ರಸ್ತಾಪಿಸಲಾಯಿತು. ಅದರ ಬಗ್ಗೆ ನಿರ್ಧಾರ ತೆಗೆದುಕೊಳ್ಳಲಾಗಿದೆ ಮತ್ತು ಅದು ಕೂಡ (ಬಿಜೆಪಿ ತೊರೆಯಲು) ಒಂದು ಕಾರಣ’ ಎಂದು ಸಿಂಗ್ ತಿಳಿಸಿದ್ದಾರೆ.

ಬ್ರಿಜೇಂದ್ರ ಸಿಂಗ್ ಯಾರು?

ಬ್ರಿಜೇಂದ್ರ ಸಿಂಗ್ ಹರಿಯಾಣದ ಹಿಸಾರ್‌ನಿಂದ ಸಂಸದರಾಗಿದ್ದಾರೆ. ಅವರು ಅನೇಕ ಸಂಸದೀಯ ಸಮಿತಿಗಳ ಸದಸ್ಯರೂ ಆಗಿದ್ದಾರೆ. ಬ್ರಿಜೇಂದ್ರ ಸಿಂಗ್ ಅವರು ಮಾಜಿ ಭಾರತೀಯ ಆಡಳಿತ ಸೇವೆ (ಐಎಎಸ್) ಅಧಿಕಾರಿಯಾಗಿದ್ದು, ಅವರು 21 ವರ್ಷಗಳ ಕಾಲ ರಾಷ್ಟ್ರಕ್ಕೆ ಸೇವೆ ಸಲ್ಲಿಸಿದ ನಂತರ ಸ್ವಯಂ ನಿವೃತ್ತಿ ಪಡೆದರು.

1998 ರಲ್ಲಿ, ಅವರು ನಾಗರಿಕ ಸೇವೆಗಳ ಪರೀಕ್ಷೆಯಲ್ಲಿ 9 ನೇ ರ್ಯಾಂಕ್ ಪಡೆದರು. ಬ್ರಿಜೇಂದ್ರ ಸಿಂಗ್ ಜೆಎನ್‌ಯುನಿಂದ ಆಧುನಿಕ ಇತಿಹಾಸದಲ್ಲಿ ಎಂಎ ವ್ಯಾಸಂಗ ಮಾಡಿದ್ದರು. ಇವರು ಹರಿಯಾಣದ ಜಿಂದ್‌ ಮೂಲದವರು. ಅವರು ಮಾಜಿ ಕೇಂದ್ರ ಸಚಿವ ಮತ್ತು ಬಿಜೆಪಿ ನಾಯಕ ಬಿರೇಂದರ್ ಸಿಂಗ್ ಅವರ ಪುತ್ರ. ಅವರು ಜಾಟ್ ಐಕಾನ್ ಛೋಟು ರಾಮ್ ಅವರ ಮರಿ ಮೊಮ್ಮಗ.

ಬ್ರಿಜೇಂದ್ರ ಸಿಂಗ್ ಅವರು 2019 ರಲ್ಲಿ ಚುನಾವಣಾ ಪಾದಾರ್ಪಣೆ ಮಾಡಿದರು. ಅವರ ಪ್ರಚಾರದ ಸಮಯದಲ್ಲಿ, ಅವರು ಸ್ವಜನಪಕ್ಷಪಾತದ ಉತ್ಪನ್ನವಲ್ಲ ಎಂದು ಹೇಳಿದ್ದರು.

‘ನನ್ನನ್ನು ಸ್ವಜನಪಕ್ಷಪಾತದ ಉತ್ಪನ್ನವಾಗಿ ನೋಡಬಾರದು. ನಾನು ಒಂದು ಶತಮಾನಕ್ಕೂ ಹೆಚ್ಚು ಕಾಲ ಅಸ್ತಿತ್ವದಲ್ಲಿದ್ದ ಪ್ರಭಾವಿ ರಾಜಕೀಯ ಕುಟುಂಬದಿಂದ ಬಂದವನು. ಆದರೆ, ನಾನು ಹೋಗಲು ಎಲ್ಲಿಯೂ ಇಲ್ಲದ ಕಾರಣ ನಾನು ಮುಖ್ಯವಾಹಿನಿಯ ರಾಜಕೀಯಕ್ಕೆ ಸೇರುತ್ತಿದ್ದೇನೆ ಎಂದು ಅಲ್ಲ. ನಾನು ತಕ್ಕಮಟ್ಟಿಗೆ ಯಶಸ್ಸನ್ನು ಸಾಧಿಸಿದ ಸ್ವಂತ ಮಾರ್ಗವಾಗಿದೆ’ ಎಂದು ಸಿಂಗ್ 2019 ರ ಲೋಕಸಭೆ ಚುನಾವಣೆಗೆ ಮೊದಲು ತಿಳಿಸಿದ್ದರು.

ಬಿಜೇಂದ್ರ ಸಿಂಗ್ ಅವರು ಜೆಜೆಪಿಯ ದುಷ್ಯಂತ್ ಚೌಟಾಲಾ ಮತ್ತು ಆಗ ಕಾಂಗ್ರೆಸ್‌ನಲ್ಲಿದ್ದ ಭವ್ಯಾ ಬಿಷ್ಣೋಯ್ ಅವರನ್ನು ಸೋಲಿಸಿದರು.

ಕಳೆದ ವರ್ಷ, ಬಿಜೆಪಿ ಸಂಸದ ಬ್ರಿಜ್ ಭೂಷಣ್ ಶರಣ್ ಸಿಂಗ್ ವಿರುದ್ಧ ಲೈಂಗಿಕ ಕಿರುಕುಳ ಆರೋಪದ ಮೇಲೆ ಪ್ರತಿಭಟನೆ ನಡೆಸುತ್ತಿದ್ದ ಕುಸ್ತಿಪಟುಗಳಿಗೆ ಬ್ರಿಜೇಂದ್ರ ಸಿಂಗ್ ಸಾರ್ವಜನಿಕವಾಗಿ ಬೆಂಬಲ ನೀಡಿದ್ದರು. 2022 ರಲ್ಲಿ, ಬ್ರಿಜೇಂದ್ರ ಸಿಂಗ್ ಆಮ್ ಆದ್ಮಿ ಪಕ್ಷವನ್ನು ಸೇರಲು ಯೋಚಿಸುತ್ತಿದ್ದಾರೆ ಎಂಬ ಊಹಾಪೋಹವಿತ್ತು. ಆದರೆ, ನಂತರ ವದಂತಿಗಳನ್ನು ತಳ್ಳಿಹಾಕಿದ ಅವರು, ಪಕ್ಷ ಸೇರುವ ಯೋಚನೆ ಇಲ್ಲ ಎಂದು ಹೇಳಿದ್ದಾರೆ.

‘ಬ್ರಿಜೇಂದ್ರ ಸಿಂಗ್ ಅವರು ಹರಿಯಾಣದಿಂದ ಇಂಡಿಯಾ ತಂಡದ ಭಾಗವಾಗುವುದನ್ನು ನೋಡಲು ಸಂತೋಷವಾಗಿದೆ. ಅವರು ಒಬ್ಬ ನಿಪುಣ ಮಾಜಿ ಅಧಿಕಾರಿ, ಯಶಸ್ವಿ ಸಂಸದ, ಅವರ ಉಪಸ್ಥಿತಿಯು ಖಂಡಿತವಾಗಿಯೂ ಮೈತ್ರಿಗೆ ಮೌಲ್ಯವನ್ನು ನೀಡುತ್ತದೆ’ ಎಂದು ಶಿವಸೇನಾ (ಯುಬಿಟಿ) ನಾಯಕಿ ಪ್ರಿಯಾಂಕಾ ಚತುರ್ವೇದಿ ಅವರು ಎಕ್ಸ್‌ನಲ್ಲಿ ಬರೆದಿದ್ದಾರೆ.

ಇದನ್ನೂ ಓದಿ;

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ.​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...

ಜಿರಳೆ ಜನತಾ ಪಕ್ಷದ ಖಾತೆಗೆ ನಿರ್ಬಂಧ; ದೆಹಲಿ ಹೈಕೋರ್ಟ್‌ನಿಂದ ಕೇಂದ್ರ-ಎಕ್ಸ್‌ಗೆ ನೋಟಿಸ್

ಜಿರಳೆ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ತಮ್ಮ ಸಾಮಾಜಿಕ ಮಾಧ್ಯಮ ಖಾತೆಗಳನ್ನು ನಿರ್ಬಂಧಿಸಿದ್ದನ್ನು ಪ್ರಶ್ನಿಸಿ ಅರ್ಜಿ ಸಲ್ಲಿಸಿದ್ದು, ದೆಹಲಿ ಹೈಕೋರ್ಟ್ (ಮೇ 29) ಕೇಂದ್ರ ಸರ್ಕಾರ ಮತ್ತು ಸಾಮಾಜಿಕ...

“ದಲಿತ ಮುಖ್ಯಮಂತ್ರಿ” ಅರ್ಹರು ಯಾರಿಲ್ಲಿ?

ಸದ್ಯ ಕರ್ನಾಟಕದಲ್ಲಿ ಮುಖ್ಯಮಂತ್ರಿಗಳ ಬದಲಾವಣೆಗೆ ವೇದಿಕೆ ಸಜ್ಜುಗೊಂಡಿದೆ. ಸುಧೀರ್ಘಾವಧಿ ಮುಖ್ಯಮಂತ್ರಿಯಾಗಿ ಅಧಿಕಾರ ನಡೆಸಿದ ಅಹಿಂದ ರಾಜಕಾರಣದ ಕುರಿತು ಮಾತಾಡುತ್ತಿದ್ದ, ಸಮಾಜವಾದಿ ಹಿನ್ನೆಲೆಯ ಸಿದ್ದರಾಮಯ್ಯ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಡಿ.ಕೆ. ಶಿವಕುಮಾರ್‌ ಮುಖ್ಯಮಂತ್ರಿಯಾಗಿ...

‘ನಾನು ಪ್ರೀತಿ-ವಿಶ್ವಾಸಗಳಿಗೆ ತಲೆಬಾಗುವವನೇ ಹೊರತು ಒತ್ತಡ-ಪ್ರಭಾವಗಳಿಗೆ ಒಳಗಾಗುವವನಲ್ಲ’: ವಿದಾಯ ಭಾಷಣದಲ್ಲಿ ಸಿದ್ದರಾಮಯ್ಯ

ಹೈಕಮಾಂಡ್ ಯಾವಾಗ ಸೂಚಿಸುತ್ತದೆಯೋ ಆಗ ರಾಜೀನಾಮೆ ಕೊಡುತ್ತೇನೆ ಎಂದು ಹೇಳಿದ್ದ ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ 2026 ಮೇ 28 ರಂದು ಹೈಕಮಾಂಡ್ ಸೂಚನೆ ಮೇರೆಗೆ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಈ ಮೂಲಕ...

ಪಶ್ಚಿಮ ಬಂಗಾಳ| ಬಕ್ರೀದ್‌ ಹಬ್ಬಕ್ಕೂ ಮುನ್ನ ರೈತರಿಗೆ ಸಂಕಷ್ಟ; ಜಾನುವಾರು ಮಾರುಕಟ್ಟೆಗಳು ನಿರ್ಜನ

ಈದ್ ಅಲ್-ಅಧಾ ಹಬ್ಬದ ಮುನ್ನ ಉತ್ತರ ಬಂಗಾಳದಾದ್ಯಂತ ಜಾನುವಾರು ಮಾರುಕಟ್ಟೆಗಳು ಹೆಚ್ಚಾಗಿ ನಿರ್ಜನವಾಗಿದ್ದವು. ವ್ಯಾಪಾರಿಗಳು ಮತ್ತು ರೈತರು ಜಾನುವಾರು ಮಾರಾಟದ ಮೇಲಿನ ನಿರ್ಬಂಧಗಳಿಂದಾಗಿ ವ್ಯಾಪಾರದಲ್ಲಿ ಪ್ರಮುಖ ಕುಸಿತ ಕಂಡುಬಂದಿದೆ ಎಂದು ಅವಲತ್ತುಕೊಂಡಿದ್ದಾರೆ. ಮಾಲ್ಡಾ...

ಅತ್ಯಾಚಾರ – ಮಕ್ಕಳ ಮೇಲಿನ ಸಾಮೂಹಿಕ ಲೈಂಗಿಕ ದೌರ್ಜನ್ಯ ಪ್ರಕರಣ: ಸ್ವಯಂ ಘೋಷಿತ ದೇವಮಾನವ ಅಸಾರಾಂ ಖುಲಾಸೆ

ಸ್ವಯಂ ಘೋಷಿತ ದೇವಮಾನವ ಅಸಾರಾಂ ಬಾಪು ಅವರನ್ನು ಭಾರತೀಯ ದಂಡ ಸಂಹಿತೆ, ಪೋಕ್ಸೋ ಕಾಯ್ದೆಯಡಿಯಲ್ಲಿ ಸಾಮೂಹಿಕ ಅತ್ಯಾಚಾರ ಮತ್ತು ಮಕ್ಕಳ ಮೇಲಿನ ಸಾಮೂಹಿಕ ಲೈಂಗಿಕ ದೌರ್ಜನ್ಯಕ್ಕೆ ಸಂಬಂಧಿಸಿದ ಆರೋಪಗಳಿಂದ ಖುಲಾಸೆಗೊಳಿಸಲಾಗಿದೆ. ಮೇ 27...

ಸಿದ್ದರಾಮಯ್ಯ ಅವರ ಮನವೊಲಿಸಿದ ಕಾಂಗ್ರೆಸ್‌ ಹೈಕಮಾಂಡ್; ಮುಖ್ಯಮಂತ್ರಿ ಸ್ಥಾನಕ್ಕೆ ನಾಳೆ ರಾಜೀನಾಮೆ?

ಕರ್ನಾಟಕದ ಮುಖ್ಯಮಂತ್ರಿ ಹುದ್ದೆಯ ಸುತ್ತಲಿನ ತೀವ್ರ ರಾಜಕೀಯ ನಾಟಕವು ಅಂತಿಮವಾಗಿ ನಿರ್ಣಾಯಕ ಹಂತ ತಲುಪಿದೆ. ನವದೆಹಲಿಯಲ್ಲಿ ಕಾಂಗ್ರೆಸ್ ಹೈಕಮಾಂಡ್‌ನ ನಿರಂತರ ಒತ್ತಡ ಮತ್ತು ಮಾತುಕತೆಗಳ ನಂತರ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಲು...

“ಎಚ್.ಎಸ್. ದೊರೆಸ್ವಾಮಿ ಭೌತಿಕವಾಗಿ ಇಲ್ಲದಿದ್ದರೂ ನಮ್ಮನ್ನು ಸದಾ ಪ್ರೇರೇಪಿಸುತ್ತಾರೆ”: ತೀಸ್ತಾ ಸೆಟಲ್ವಾಡ್

ಬೆಂಗಳೂರು: "ಹಿರಿಯ ಸ್ವಾತಂತ್ರ್ಯ ಹೋರಾಟಗಾರ, ದಿ. ಎಚ್.ಎಸ್. ದೊರೆಸ್ವಾಮಿ ಅವರು ದೈಹಿಕವಾಗಿ ನಮ್ಮೊಂದಿಗಿಲ್ಲದಿದ್ದರೂ, ಅವರ ಹೋರಾಟದ ಹಾದಿ ಮತ್ತು ಆದರ್ಶಗಳು ನಮ್ಮನ್ನು ಸದಾ ಪ್ರೇರೇಪಿಸುತ್ತಲೇ ಇರುತ್ತವೆ" ಎಂದು ಪ್ರಮುಖ ಮಾನವ ಹಕ್ಕುಗಳ ಹೋರಾಟಗಾರ್ತಿ...