Homeಕರ್ನಾಟಕಗಾಂಧಿ ವಿಚಾರಗಳನ್ನು ಮುನ್ನಡೆಸುವ ಕೆಲಸ ಮುದುಕರಿಗೆ ಬಿಡಬೇಡಿ, ಯುವಜನರು ಕೈಗೆತ್ತಿಕೊಳ್ಳಿ: ಹೆಗ್ಗೋಡು ಪ್ರಸನ್ನ

ಗಾಂಧಿ ವಿಚಾರಗಳನ್ನು ಮುನ್ನಡೆಸುವ ಕೆಲಸ ಮುದುಕರಿಗೆ ಬಿಡಬೇಡಿ, ಯುವಜನರು ಕೈಗೆತ್ತಿಕೊಳ್ಳಿ: ಹೆಗ್ಗೋಡು ಪ್ರಸನ್ನ

- Advertisement -
- Advertisement -

(ಮಂಡ್ಯದ ಗಾಂಧಿಭವನದಲ್ಲಿ ನಡೆದ ‘ಗಾಂಧಿಯೆಡೆಗೆ ನಮ್ಮ ನಡಿಗೆ’ ಕಾರ್ಯಕ್ರಮದಲ್ಲಿ “ಇಂದಿಗೆ ಅನಿವಾರ್ಯವಾಗಿರುವ ಗಾಂಧಿ ಮತ್ತು ಅವರ ಆರ್ಥಿಕ ಚಿಂತನೆ’ ವಿಷಯದ ಕುರಿತು ಹೆಗ್ಗೋಡು ಪ್ರಸನ್ನರವರು ಮಾಡಿದ ಭಾಷಣದ ಪೂರ್ಣಪಾಠ ಇಲ್ಲಿದೆ.)

ಮಹಾತ್ಮ ಗಾಂಧಿಯವರನ್ನು ಸ್ಪಷ್ಟವಾಗಿ ಅರಿತುಕೊಳ್ಳುವುದು ಈ ಪಾದಯಾತ್ರೆಯ ಉದ್ದೇಶ ಎಂದು ಸ್ಪಷ್ಟವಾಗಿ ಹೇಳಿದ್ದೀರಿ. ಕೆಲವರು ಪುಸ್ತಕ ಓದುವುದರ ಮತ್ತು ಬೌದ್ಧಿಕ ಚರ್ಚೆಯ ಮೂಲಕ ಗಾಂಧಿಯವರನ್ನು ಅರ್ಥಮಾಡಿಕೊಳ್ಳಬಹುದು ಎನ್ನುತ್ತಿದ್ದಾರೆ. ಆದರೆ ಅದು ತಪ್ಪು ಕಲ್ಪನೆಯಾಗಿದೆ.

ಜನರ ಬಳಿಗೆ ಹೋಗುವ ಪಾದಯಾತ್ರೆಯೇ ಉತ್ತಮ ಮಾರ್ಗ. ಅದೇ ಅರಿವು. ಅಲ್ಲಿ ನಿಧಾನವಾಗಿ ನಡೆಯುತ್ತೇವೆ. ಅಲ್ಲಿನ ಗ್ರಾಮ, ಮನುಷ್ಯರು, ಇಡೀ ಹಳ್ಳಿಯ ಪರಿಸರ ಅನುಭವಕ್ಕೆ ಬರುತ್ತದೆ‌. ಆದರೆ ಇಂದು ಅನುಭವವೇ ಕಾಣೆಯಾಗಿದೆ. ಎಲ್ಲವೂ ನಮಗೆ ಕೇವಲ ಮಾಹಿತಿಯಾಗಿ ದೊರೆಯುತ್ತದೆ. ಕೇವಲ ಮಾಹಿತಿ ಅಥವಾ ಜ್ಞಾನದಿಂದ ಚಳವಳಿ, ಸಮಾಜ ಕಟ್ಟಲು ಆಗುವುದಿಲ್ಲ ಎಂದು ಗಾಂಧಿಜಿಯವರು ಹೇಳಿದ್ದರು..

ಬಸವಣ್ಣ, ಕಬೀರ, ಅಲ್ಲಮನ ರೀತಿಯಲ್ಲಿಯೇ ಗಾಂಧಿಯನ್ನು ಸಹ ಒಬ್ಬ ಸಂತನಾಗಿ ಇಲ್ಲವೇ ರಾಜಕಾರಣಿಯಾಗಿ ನೋಡುವ ಪ್ರವೃತ್ತಿ ನಮ್ಮಲ್ಲಿ ಬೆಳೆದುಬಂದಿದೆ. ಅದರೆ ಅವರ ಕೆಲಸದ ಬುನಾದಿ ಅವರ ಆರ್ಥಿಕ ಕಾರ್ಯಕ್ರಮವಾಗಿದೆ. ಅದನ್ನು ಗ್ರಾಮ ಸ್ವರಾಜ್ಯ ಎಂದು ಕರದಿದ್ದರು. ಆದರೆ ಅದನ್ನು ಸಮಗ್ರವಾಗಿ ಮಾಡಲು ರಾಜಕೀಯ ಚಳವಳಿಯ ಕಾರಣಗಳಿಗಾಗಿ ಗಾಂಧಿಯವರಿಗೆ ಸಮಯ ಸಿಗಲಿಲ್ಲ.

ನಾಳೆ ಯಾರಿಗೆ ಬರಬೇಕು ಸ್ವತಂತ್ರ? ಎಂದು ಗಾಂಧಿ ಕೇಳಿದ್ದರು‌. ಸಾಮಾನ್ಯ ಜನರಿಗೆ, ಬಡಜನರಿಗೆ ಸ್ವಾತಂತ್ರ್ಯ ಸಿಗಬೇಕು. ಆದರೆ ಅವರಿಗೆ ಅದರ ಕಲ್ಪನೆ ಸಹ ಇಲ್ಲ. ಅವರ ಹಕ್ಕುಗಳ ಪರಿಚಯವಿಲ್ಲ. ಅವರಿಗೆ ಜಾತಿವಿನಾಶದ, ಲಿಂಗತಾರತಮ್ಯ, ಆರೋಗ್ಯ ಶಿಕ್ಷಣದ ಅರಿವಿಲ್ಲ‌. ನಾವು ಇದರ ಪರಿಚಯ ಮಾಡಿಕೊಡಬೇಕು..

ಎಲ್ಲಾ ರಚನಾತ್ಮಕ ಕೆಲಸಗಳನ್ನು ಬದಿಗೊತ್ತಿ ನಾವು ಕೇವಲ ಕಾನೂನಾತ್ಮಕ ಕೆಲಸಗಳನ್ನು ಮಾತ್ರ ಮಾಡಿದ್ದೇವೆ. ನಾವು ಮಾಡಿರುವ ಕಾನೂನುಗಳಲ್ಲಿ ಕಾಲುಭಾಗ ಜಾರಿಗ ಬಂದಿದ್ದರೂ ಸಹ ಭಾರತ ಸಮಾಜವಾದಿ ರಾಷ್ಟ್ರವಾಗುತ್ತಿತ್ತು. ಆದರೆ ಇಂದು ಭ್ರಷ್ಟಾಚಾರದ ದೇಶವಾಗುತ್ತಿದೆ.

ಇಂತಹ ಸಂಕಟದ ಸಮಯದಲ್ಲಿ ರಚನಾತ್ಮಕ ಚಳವಳಿ ಕಡೆಗೆ ಹೋಗಬೇಕಿದೆ. ನಮ್ಮ ಹಳ್ಳಿ ಜನರಿಗೆ ಮಳೆ ಬೆಳೆ ಸರಿಯಾಗಿ ಆಗುತ್ತಿಲ್ಲ, ಶೆಕೆಯಾಗುತ್ತಿದೆ, ಉದ್ಯೋಗವಿಲ್ಲ.. ಎನ್ನುವುದು ಮಾತ್ರ ಗೊತ್ತಿದೆ. ಆದರೆ ಕರಾಳ ದಿನಗಳ ಕಲ್ಪನೆ ಅವರಿಗಿಲ್ಲ.

ಒಬ್ಬ ವಿಜ್ಞಾನಿಗಳು ಹೇಳುತ್ತಾರೆ ಇನ್ನ 14 ವರ್ಷದಲ್ಲಿ ನಮ್ಮ ಈ ಅಭಿವೃದ್ಧಿಯ ಮಾದರಿಯನ್ನು ಬದಲಾಯಿಸಬೇಕು. ಅದಕ್ಕಾಗಿ ಹೋರಾಟ ನಡೆಯುತ್ತಿದೆ. ಅದರ ನಾಯಕತ್ವ ವಹಿಸುತ್ತಿರುವುದು ಯುವಜನತೆ.. ಅದರ ನಾಯಕಿ 16 ವರ್ಷದ ಗ್ರೇಟಾ ಥನ್ಬೆರ್ಗ್ ಕರೆಗೆ ಇಡೀ ವಿಶ್ವದ ಯುವಜನತೆ ಸಕರಾತ್ಮಕವಾಗಿ ಸ್ಪಂದಿಸಿದೆ. ಅಹಿಂಸಾತ್ಮಕವಾಗಿ ಗಾಂಧಿ ಮಾದರಿಯಲ್ಲಿ ನಡೆಯುತ್ತಿದ್ದು ನನ್ನ ಭವಿಷ್ಯವನ್ನು ನೀವೇಕೆ ಹಾಳು ಮಡುತ್ತಿದ್ದೀರಿ ಎಂದು ಆ ಹುಡುಗಿ ಪ್ರಶ್ನಿಸುತ್ತಿದ್ದಾಳೆ. ನಮ್ಮ ಮೂರು ಪ್ರಶ್ನೆಗಳಿವೆ.

ಮೊದಲ ಪ್ರಶ್ನೆ: 

ಮೊದಲ ಪ್ರಶ್ನೆ ಉದ್ಯೋಗದ್ದಾಗಿದೆ. ಕಳೆದ ನಾಲ್ಕು ತಿಂಗಳಿಂದ ನಮ್ಮ ದೇಶದಲ್ಲಿ ದಿನಕ್ಕೆ ಮೂರು ಲಕ್ಷ ಉದ್ಯೋಗಗಳು ನಷ್ಟವಾಗುತ್ತಿವೆ. ಹಾಗಾದರೆ ಕಷ್ಟಪಟ್ಟು ಓದುತ್ತಿರುವವರು ಮಣ್ಣು ತಿನ್ನಬೇಕೆ?

ಎರಡನೇ ಪ್ರಶ್ನೆ: 

ಎರಡನೇ ಪ್ರಶ್ನೆ ಪರಿಸರ ನಾಶವಾಗಿದೆ. ತಕ್ಷಣದಲ್ಲಿ ವಿಪರೀತ ಬೆಂಕಿ ಉಳಿಸುವ ಕೆಲಸ ಮಾಡದಿದ್ದರೆ ನಮ್ಮ ಪ್ರಪಂಚ ಖಂಡಿತ ವಾಸಯೋಗ್ಯವಾಗಿ ಉಳಿಯುವುದಿಲ್ಲ. ಇಂದು ಬೆಂಕಿ ಹಚ್ಚುವುದರ ಮೂಲಕ ಮಾತ್ರವೇ ಪ್ರಗತಿಯಾಗುತ್ತಿದೆ ಎಂದು ವಿಜ್ಞಾನಿಯೊಬ್ಬರು ಹೇಳಿದ್ದಾರೆ. ಉದಾಹರಣೆಗೆ ನೀವು ಬೆಂಗಳೂರಿನಿಂದ ದೆಹಲಿಗೆ ವಿಮಾನದಲ್ಲಿ ಹೋದರೆ ಪ್ರತಿಯೊಬ್ಬ 29 ಕೆಜಿ ಕಾರ್ಬನ್ ಡೈಆಕ್ಸೈಡ್ ಅನ್ನು ಪರಿಸರಕ್ಕೆ ಬಿಡುತ್ತಿದ್ದೇವೆ ಎಂಬುದನ್ನು ಮರೆಯಬರದು.

ಮೂರನೇಯದು ಧರ್ಮದ ಪ್ರಶ್ನೆ:

ಇಂದು ರಾಜಕೀಯ ಕಾರಣಗಳಿಗಾಗಿ ಧರ್ಮ ಎನ್ನುವುದೇ ಜನರನ್ನು ಒಡೆಯುವ ಅಸ್ತ್ರ ಆಗಿದೆ. ಮೇಲ್ಜಾತಿಯವರನ್ನು ಮತ್ತಷ್ಟು ಕೊಬ್ಬಿಸಲು ಧರ್ಮ ಕಾರಣವಗುತ್ತಿದೆ. ಧರ್ಮ ಇಂದು ಒಳ್ಳೆಯ ಅಲೋಚನಗಳನ್ನು ಹಿಮ್ಮೆಟ್ಟುಸುವ ಅಸ್ತ್ರವಾಗಿದೆ. ನಿರುದ್ಯೋಗ, ಪರಿಸರ ನಾಶ, ಧರ್ಮದ ದುರ್ಬಳಕೆ ಈ ಮೂರು ವಿಷಯಗಳು ಇಂದು ನಮ್ಮನ್ನು ಬಾಧಿಸುತ್ತಿವೆ.

ಈ ದೇಶದ 60% ಕೃಷಿಭೂಮಿಯಲ್ಲಿ ಈಗಲೂ ಮಳೆಯಾಧಾರಿತ ಬೇಸಾಯ ನಡೆಯುತ್ತಿದೆ. ಮೀನುಗಾರಿಗೆ, ಹೈನೋದ್ಯಮ ಇತ್ಯಾದಿಗಳು ಇಂದಿಗೂ ಕೈ ಉತ್ಪಾದನೆಗಳಾಗಿವೆ. ಇದನ್ನು ನಡೆಸುವ ಜನ ಮತ್ತು ಕೌಶಲ್ಯ ನಮಗಿದೆ‌. ಇದನ್ನೆ ಗಾಂಧಿಯವರು ಗ್ರಾಮ ಸ್ವರಾಜ್ಯ ಎಂದಿದ್ದರು. ಅವರು ಸಮಾಜವಾದ, ಪರಿಸರ ರಕ್ಷಣೆ ಮತ್ತು ದುಡಿಯುವುದೇ ಧರ್ಮ ಎಂದು ಮಾತನಾಡಿದ್ದರು. ಈ ಮೂರನ್ನು ಒಟ್ಟಾಗಿ ಸೇರಿಸಿದರೆ ನಮಗೆ ಗಾಂಧಿ ಅರ್ಥವಾಗುತ್ತಾರೆ.

ಎಲ್ಲಾ ಧಾರೆಗಳ ಜನರು ಇಲ್ಲಿ ನೆರದಿದ್ದೀರಿ.. ಪ್ರತ್ಯೇಕತೆ ಕಳಚಿ ಹೋರಾಟ ಮಡಬೇಕಾದ ಪರಿಸ್ಥಿತಿ ಇಂದು ಬಂದಿದೆ. ಅದಕ್ಕೆ ಗಾಂಧಿಜಿಯವರ ವಿಚಾರಧಾರೆಗಳು ನಾಯಕತ್ವ ನೀಡುತ್ತವೆ.

ಏಸುಕ್ರಿಸ್ತ, ರಾಮ, ಬಸವಣ್ಣನವರ ಭಜನೆ ರೀತಿ ಗಾಂಧಿಯವರ ಭಜನೆ ಇಂದು ಬೇಡ. ನಾವು ಶ್ರಮದಾನ ಮಾಡಬೇಕಿದೆ. ಏಕೆಂದರೆ ಈ ದೇಶ ನಡೆಯುತ್ತಿರುವುದೇ ಕೋಟ್ಯಾಂತರ ಶ್ರಮಿಕರ ಶ್ರಮದಿಂದ‌. ಬುದ್ದಿಜೀವಿಗಳು, ವಿಚಾರವಂತರು ಶ್ರಮದಾನ ಮಾಡಿದರೆ ಅಗ ಅದಕ್ಕೆ ಅಪಾರವಾದ ಮಹತ್ವ ಬರುತ್ತದೆ. ಈ ಕೆಲಸ ಮುಂದುವರಿಸಿ, ಗಾಂಧಿಯನ್ನು ಜೀವಂತಗೊಳಿಸಿ, ರಚನಾತ್ಮಕ ಕೆಲಸ ಮುಂದುವರೆಸುವ ಕೆಲಸವನ್ನು ಮುದುಕರಿಗೆ ಬಿಡಬೇಡಿ.. ಯುವಕರೆ ಕೈಗೆತ್ತಿಕೊಳ್ಳಿ.

ಗಾಂಧಿಯನ್ನು ಕೇವಲ ಮುದುಕರಿಗೆ ಬಿಡಬೇಡಿ, ಗಾಂಧಿ ವಿಚಾರಧಾರೆಯ ವಾರಸುದಾರರು ಯುವಜನರೆ ಆಗಬೇಕು. ಜೊತೆಗೆ ಗಾಂಧಿಯನ್ನು ಬೋರ್ ಎನಿಸಬಾರದು. ಅದನ್ನು ಅರ್ಥಮಾಡಿಕೊಳ್ಳುವುದು ಕಷ್ಟದ ವಿಷಯವಾಗಿಸಬೇಡಿ..ಗಾಂಧಿ ಸರಳವಾಗಿದ್ದರು, ಇಡೀ ದೇಶ ಸುತ್ತಿದರು, ತಮಾಷೆಗಳನ್ನು ಮಾಡುವ ಚೈತನ್ಯವಾಗಿದ್ದರು ಎಂಬುದನ್ನು ಮರೆಯಬಾರದು.

ಶ್ರಮ ಸಂಸ್ಕತಿಯನ್ನು ಜೀವಂತವುಳಿಸಿ, ಮುಸ್ಲಿಂ ಹೆಣ್ಣು ಮಕ್ಕಳು ಸಹ ಹೊರಬಂದು ದೇಶಕಟ್ಟುವ ಕಲಸ ಮಾಡಬೇಕಿದೆ. ಆ ಮೂಲಕ ಸಮಾಜವನ್ನು ಮತಧರ್ಮ ನಿರಪೇಕ್ಷವನ್ನಾಗಿ ಮಾಡೋಣ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇರಳ: ತಪ್ಪು ಪ್ರಕರಣದಲ್ಲಿ ಪೊಲೀಸರಿಂದ ಚಿತ್ರಹಿಂಸೆ: 29 ವರ್ಷದ ಮುಸ್ಲಿಂ ಯುವಕ ಸಾವು: ಕುಟುಂಬಕ್ಕಿದ್ದ ಒಂದೇ ಆಧಾರ ಕಳೆದುಕೊಂಡ ಪೋಷಕರು

ತಪ್ಪು ಗ್ರಹಿಕೆಯಿಂದ ಪೊಲೀಸ್ ಕಸ್ಟಡಿಗೆ ಪಡೆದ 29 ವರ್ಷದ ಮುಸ್ಲಿಂ ಯುವಕನೋರ್ವ, ಪೊಲೀಸರ ಕಠೋರ ಕಸ್ಟಡಿ ಚಿತ್ರಹಿಂಸೆಯಿಂದಾಗಿ ಪಕ್ಕೆಲುಬು ಮುರಿತಕ್ಕೊಳಗಾಗಿ, ಶ್ವಾಸಕೋಶದ ಸೋಂಕು ತೀವ್ರಗೊಂಡು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿರುವ ಅಮಾನವೀಯ ಹಾಗೂ ಆಘಾತಕಾರಿ...

ಮಾಧ್ಯಮ ತನಿಖಾ ವರದಿಗೆ ಹೆದರಿ ₹ 99 ಲಕ್ಷ ಸಬ್ಸಿಡಿ ವಾಪಸ್ ಮಾಡಿದ ಕೇಂದ್ರ BJP ಸಚಿವ

ತಮ್ಮದೇ ಸಚಿವಾಲಯದ ಯೋಜನೆಯಡಿ ಬರೋಬ್ಬರಿ 99 ಲಕ್ಷ ರೂಪಾಯಿ ಸರ್ಕಾರಿ ಸಬ್ಸಿಡಿ ಪಡೆದು ಸಾರ್ವಜನಿಕರ ಆಕ್ರೋಶಕ್ಕೆ ಗುರಿಯಾಗಿದ್ದ ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ರಾಜ್ಯ ಸಚಿವ ಭಾಗೀರಥ್ ಚೌಧರಿ, ಕೊನೆಗೂ ಆ...

ಕಾಮನ್‌ವೆಲ್ತ್ ಕ್ರೀಡಾಕೂಟ: ಚಿನ್ನದ ಪದಕ ಗೆದ್ದ ಭಾರತದ ಮೊದಲ ಪ್ಯಾರಾ-ಅಥ್ಲೀಟ್ ಶರ್ಮಿಳಾ ಧನ್ಖರ್

ಎರಡು ವರ್ಷವಿದ್ದಾಗ ಪೋಲಿಯೊದಿಂದ ಅಂಗವಿಕಲಳಾಗಿ, ಬಾಲ್ಯದಲ್ಲಿ ದೌರ್ಜನ್ಯಕ್ಕೊಳಗಾದ, ವಿವಾಹದ ಆಘಾತದಿಂದ ಬದುಕುಳಿದ ಮಹಿಳೆ ಶರ್ಮಿಳಾ ಧನ್ಖರ್, ಕಾಮನ್‌ವೆಲ್ತ್ ಕ್ರೀಡಾಕೂಟದಲ್ಲಿ ಚಿನ್ನದ ಪದಕ ಗೆದ್ದ ಭಾರತದ ಮೊದಲ ಪ್ಯಾರಾ-ಅಥ್ಲೀಟ್ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಗ್ಲ್ಯಾಸ್ಗೋದಲ್ಲಿ...

ಬಿಹಾರ: ವಿದ್ಯಾರ್ಥಿಗಳ ವಿರುದ್ಧ ಎಕೆ-47 ರೈಫಲ್ ಬಳಕೆ: ಗುಂಡು ಹಾರಿಸಲು ಆದೇಶಿಸಿದವರ ವಿರುದ್ಧ ತನಿಖೆಗೆ ಮನೋಜ್ ಝಾ ಆಗ್ರಹ; ಸುಪ್ರೀಂ ಮೆಟ್ಟಿಲೇರಿದ ಪ್ರಕರಣ

ನೀಟ್ (NEET) ಪ್ರಶ್ನೆ ಪತ್ರಿಕೆ ಸೋರಿಕೆ ಆರೋಪವನ್ನು ಖಂಡಿಸಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ, ಬಿಹಾರದ ಸಿವಾನ್ ಜಿಲ್ಲೆಯಲ್ಲಿ ಪೊಲೀಸ್ ಸಿಬ್ಬಂದಿಯೊಬ್ಬರು ಎಕೆ-47 ರೈಫಲ್‌ನಿಂದ ಗಾಳಿಯಲ್ಲಿ ಗುಂಡು ಹಾರಿಸುತ್ತಿದ್ದ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್...

ಧರ್ಮೇಂದ್ರ ಪ್ರಧಾನ್ ಖಾತೆ ಬದಲಾವಣೆ ಪ್ರಸ್ತಾವನೆ ತಿರಸ್ಕರಿಸಿದ್ದ ಸಿಜೆಪಿ: ವರದಿ

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಜುಲೈ 25 ರಂದು ಪ್ರಧಾನಿ ನರೇಂದ್ರ ಮೋದಿ ಅವರಿಗೆ ತಮ್ಮ ರಾಜೀನಾಮೆ ಸಲ್ಲಿಸಿದ್ದಾರೆ. ಆದರೆ, ಅದಕ್ಕೂ ಮೊದಲು ಕೇಂದ್ರ ಸರ್ಕಾರವು ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ)...

ಹೈದರಾಬಾದ್| ಎಕ್ಸ್‌ಪ್ರೆಸ್‌ವೇನಲ್ಲಿ ನೇಮಕಾತಿ ಪರೀಕ್ಷೆ ಓಎಂಆರ್ ಹಾಳೆಗಳು ಪತ್ತೆ: ತನಿಖೆಗೆ ಆದೇಶ

ನೇಮಕಾತಿ ಪರೀಕ್ಷೆಯ ಮೂಲ ಆಪ್ಟಿಕಲ್ ಮಾರ್ಕ್ ರೆಕಗ್ನಿಷನ್ (ಒಎಂಆರ್) ಹಾಳೆಗಳು ಹೈದರಾಬಾದ್‌ನ ರಸ್ತೆಬದಿಯಲ್ಲಿ ರಾಶಿ ರಾಶಿಯಾಗಿ ಬಿದ್ದಿರುವುದು ಕಂಡುಬಂದ ನಂತರ ತೆಲಂಗಾಣ ಸಾರ್ವಜನಿಕ ಸೇವಾ ಆಯೋಗ (ಟಿಜಿಪಿಎಸ್‌ಸಿ) ತನಿಖೆಗೆ ಆದೇಶಿಸಿದೆ. 2018 ರ ಹಾಸ್ಟೆಲ್...

ಕರೂರ್ ಕಾಲ್ತುಳಿತ ಮೃತರ ಕುಟುಂಬಸ್ಥರಿಗೆ ನೀಡಿದ್ದ ಸರ್ಕಾರಿ ಉದ್ಯೋಗವನ್ನು ರದ್ದುಗೊಳಿಸಿದ ಮದ್ರಾಸ್ ಹೈಕೋರ್ಟ್

ಕರೂರ್ ಕಾಲ್ತುಳಿತ ದುರಂತದಲ್ಲಿ ಮೃತಪಟ್ಟವರ ಕುಟುಂಬಸ್ಥರಿಗೆ ಸರ್ಕಾರಿ ಉದ್ಯೋಗ ನೀಡಿದ್ದ ತಮಿಳುನಾಡು ಸರ್ಕಾರದ ಆದೇಶವನ್ನು ಮದ್ರಾಸ್ ಹೈಕೋರ್ಟ್ ಸೋಮವಾರ ರದ್ದುಗೊಳಿಸಿದೆ. ಈ ನೇಮಕಾತಿಗಳನ್ನು ಪ್ರಶ್ನಿಸಿ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳ (PIL) ವಿಚಾರಣೆ...

ವಿದ್ಯಾರ್ಥಿಗಳ ಬಂಧನ: ಮತ್ತೆ ಪ್ರತಿಭಟನೆಯ ಎಚ್ಚರಿಕೆ ನೀಡಿದ ‘ಕಾಕ್ರೋಚ್ ಜನತಾ ಪಾರ್ಟಿ’

ಪ್ರತಿಭಟನಾಕಾರರ ವಿರುದ್ಧ ಯಾವುದೇ ಪೋಲೀಸ್ ಕ್ರಮ ಕೈಗೊಳ್ಳುವುದಿಲ್ಲ ಎಂಬ ಒಪ್ಪಂದವನ್ನು ಸಂಪೂರ್ಣವಾಗಿ ಉಲ್ಲಂಘಿಸಲಾಗಿದೆ ಎಂದು 'ಕಾಕ್ರೋಚ್ ಜನತಾ ಪಾರ್ಟಿ' (CJP) ರಾಷ್ಟ್ರೀಯ ವಕ್ತಾರ ಅಶುತೋಷ್ ರಂಕಾ ಎಕ್ಸ್ (X) ಸಾಮಾಜಿಕ ಜಾಲತಾಣದ ಪೋಸ್ಟ್‌ನಲ್ಲಿ...

ಜೆನ್ ಝೀ ಪೀಳಿಗೆಯ ಹೋರಾಟ ಮತ್ತು ಮುಂದಿನ ನಡೆ.!

NEET ಪರೀಕ್ಷೆಯ ಅಕ್ರಮ ಹಾಗೂ ಪೇಪರ್ ಸೋರಿಕೆ ವಿರುದ್ಧ 'ಜೆನ್ ಝೀ' (Gen Z) ಯುವ ಸಮೂಹ ನಡೆಸಿದ ಹೋರಾಟವು ಕೇವಲ ಒಂದು ತಾತ್ಕಾಲಿಕ ವಿದ್ಯಾರ್ಥಿ ಹೋರಾಟವಾಗಿ ಉಳಿದಿಲ್ಲ. ಇದು ಪ್ರಭುತ್ವದ ಅಹಂಕಾರವನ್ನು...

ಬಿಹಾರ| ವಿದ್ಯಾರ್ಥಿಗಳ ಪ್ರತಿಭಟನೆಯ ಸಮಯದಲ್ಲಿ ಎಕೆ-47 ಬಳಸಿದ ಪೊಲೀಸ್‌ ಕಾನ್‌ಸ್ಟೆಬಲ್ ಅಮಾನತು

ಬಿಹಾರದ ಸಿವಾನ್ ಜಿಲ್ಲೆಯಲ್ಲಿ ಜುಲೈ 25 ರಂದು ನಡೆದ ವಿದ್ಯಾರ್ಥಿಗಳ ಪ್ರತಿಭಟನೆಯ ಸಮಯದಲ್ಲಿ ಎಕೆ-47 ರೈಫಲ್ ಬಳಸಿರುವ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆದ ನಂತರ ಪೊಲೀಸ್ ಕಾನ್‌ಸ್ಟೆಬಲ್ ಒಬ್ಬರನ್ನು ಅಮಾನತುಗೊಳಿಸಲಾಗಿದೆ ಎಂದು...