Homeಮುಖಪುಟನನ್ನ ಮೇಲೆಯೂ ವಕೀಲರು ದಾಳಿ ಮಾಡಿದ್ದರು, ಹಾಗಂತ ವಕೀಲರೆಲ್ಲರನ್ನು ದ್ವೇಷಿಸಲಾಗುವುದಿಲ್ಲ: ಕನ್ಹಯ್ಯ

ನನ್ನ ಮೇಲೆಯೂ ವಕೀಲರು ದಾಳಿ ಮಾಡಿದ್ದರು, ಹಾಗಂತ ವಕೀಲರೆಲ್ಲರನ್ನು ದ್ವೇಷಿಸಲಾಗುವುದಿಲ್ಲ: ಕನ್ಹಯ್ಯ

- Advertisement -
- Advertisement -

ವಕೀಲರ ವೇಷದಲ್ಲಿದ್ದ ಕೆಲವು ಗೂಂಡಾಗಳು ಅಂದು ನ್ಯಾಯಾಲಯದ ಆವರಣದಲ್ಲಿ ನನ್ನ ಮತ್ತು ಪತ್ರಕರ್ತರ ಮೇಲೆ ಹಲ್ಲೆ ನಡೆಸಿದಾಗ ಹೆಚ್ಚಿನ ಪೊಲೀಸರು ಅದನ್ನು ಕೈಕಟ್ಟಿ ನೋಡುತ್ತಿದ್ದುದ್ದು ನಿಜ. ಆದರೆ ತಮ್ಮ ಪ್ರಾಣ ಒತ್ತೆ ಇಟ್ಟು ಆ ದಿನ ನನ್ನನ್ನು ರಕ್ಷಿಸಿದ್ದು ಸಹ ಪೊಲೀಸರೇ ಎಂಬುದು ಸಹ ಸತ್ಯ ಎಂದು ವಿದ್ಯಾರ್ಥಿ ನಾಯಕ ಕನ್ಹಯ್ಯ ಕುಮಾರ್‌ ಹೇಳಿದ್ದಾರೆ.

ದೆಹಲಿಯಲ್ಲಿ ನಡೆಯುತ್ತಿರುವ ವಕೀಲರು ಮತ್ತು ಪೊಲೀಸರ ನಡುವಿನ ಘರ್ಷಣೆ ಹಿನ್ನೆಲೆಯಲ್ಲಿ ಸರಣಿ ಟ್ವಿಟ್‌ಗಳನ್ನು ಮಾಡಿರುವ ಅವರು ತಮ್ಮ ಮೇಲೇ ಅಂದು ವಕೀಲರು ನಡೆಸಿದ್ದ ದಾಳಿಯನ್ನು ಸ್ಮರಿಸಿಕೊಂಡಿದ್ದಾರೆ.

ಅಂದು ನನ್ನ ಮೇಲೆ ದಾಳಿ ಮಾಡಿದ ವಕೀಲರ ಮುಖಂಡನಿಗೂ, ಹಾಗೆಯೇ ಸುಮ್ಮನಿದ್ದ ಪೊಲೀಸ್ ಮುಖ್ಯಸ್ಥನಿಗೂ ಸರ್ಕಾರ ಬಹುಮಾನವನ್ನು ನೀಡಿತು. ಆದ್ದರಿಂದ ಇಂದಿಗೂ ನಾವು ಯಾವುದೇ ವೃತ್ತಿಗೆ ವಿರುದ್ಧವಾಗಿಲ್ಲ ಆದರೆ ನ್ಯಾಯದ ಪರವಾಗಿರುತ್ತೇವೆ ಎಂದು ಹೇಳಲು ಬಯಸುತ್ತೇನೆ.

ತನ್ನ ವಯಕ್ತಿಕ ಲಾಭಕ್ಕಾಗಿ ರಾಜಕೀಯವು ಪ್ರತಿ ವೃತ್ತಿಯ ಅಪರಾಧಿಗಳನ್ನು ರಕ್ಷಿಸುತ್ತದೆ ಎಂದು ನನ್ನ ವೈಯಕ್ತಿಕ ಅನುಭವ ಹೇಳುತ್ತದೆ. ಆದ್ದರಿಂದ ಅಪರಾಧದ ವಿರುದ್ಧ ಮಾತನಾಡಿ, ಯಾವುದೇ ವೃತ್ತಿಯ ವಿರುದ್ಧ ಅಲ್ಲ ಎಂದು ಕನ್ಹಯ್ಯ ಕುಮಾರ್‌ ಹೇಳಿದ್ದಾರೆ.

ಬಹುಸಂಖ್ಯಾತ ರಾಜಕಾರಣದ ಭಾಗವಾಹಿಯೇ ಘಟನೆ ನಡೆದು ಮೂರು ದಿನಗಳಾದರೂ ಸಹ ಕಾನೂನು ಸಚಿವರಾಗಲೀ ಅಥವಾ ಗೃಹ ಸಚಿವರಾಗಲೀ ಈ ಇಡೀ ವಿಷಯದ ಬಗ್ಗೆ ಯಾವುದೇ ಹೇಳಿಕೆ ನೀಡಿಲ್ಲ ಎಂಬುದು ಸ್ಪಷ್ಟವಾಗಿದೆ.

ಪ್ರತಿ ವೃತ್ತಿಯಲ್ಲೂ ಕೆಲವರು ದೋಷಿಗಳಿರುತ್ತಾರೆ. ಆದರೆ ಅವರ ತಪ್ಪುಗಳ ಆಧಾರದ ಮೇಲೆ ಇಡೀ ವೃತ್ತಿಯನ್ನು ದ್ವೇಷಿಸಲು ಸಾಧ್ಯವಿಲ್ಲ. ಪ್ರಚೋದನಾಕಾರಿ ಮಾಧ್ಯಮ ಮತ್ತು ರಾಜಕೀಯ ವ್ಯಕ್ತಿಗಳ ಲಾಭಕ್ಕಾಗಿ ಕೆಲವು ವಕೀಲರು ನನ್ನ ಮೇಲೆ ಹಲ್ಲೆ ನಡೆಸಿದ್ದರು ಎಂಬುದು ನಿಜ, ಆದರೆ ಇದರ ಆಧಾರದ ಮೇಲೆ ಇಡೀ ವಕೀಲಿ ವೃತ್ತಿಯನ್ನು ದೂರಲು ಸಾಧ್ಯವಿಲ್ಲ.

ದೆಹಲಿಯಲ್ಲಿ ಪೊಲೀಸರು ಮತ್ತು ವಕೀಲರ ನಡುವೆ ನಡೆಯುತ್ತಿರುವ ಸಂಘರ್ಷವೂ ಒಂದನ್ನು ಮತ್ತೆ ಸಾಬೀತುಪಡಿಸಿದೆ. ಅದೆಂದರೆ ಕಾನೂನು ಮತ್ತು ಸುವ್ಯವಸ್ಥೆಯನ್ನು ಈಗಲಾದರೂ ನಾವು ಸರಿಪಡಿಸದಿದ್ದರೆ ನಾಳೆ ಯಾರ ಪ್ರಾಣ ಬೇಕಾದರೂ ಹೋಗುವ ಸಂಭವವಿದೆ.

ಈ ಇಡೀ ಪ್ರಕರಣದಲ್ಲಿ ಅದು ಪೋಲಿಸ್ ಆಗಿರಲಿ ಅಥವಾ ವಕೀಲರಾಗಲಿ ಯಾರು ಕಾನೂನು ಉಲ್ಲಂಘಿಸಿದ್ದರೂ, ಅವರ ಮೇಲೆ ತಕ್ಷಣ ಕ್ರಮ ತೆಗೆದುಕೊಳ್ಳಬೇಕು. ಆದರೆ ದುಃಖಕರವೆಂದರೆ ನಮ್ಮ ದೇಶದ ರಾಜಕಾರಣವು ಕಾನೂನು ತನ್ನ ಕೆಲಸವನ್ನು ನ್ಯಾಯಯುತವಾಗಿ ಮಾಡಲು ಬಿಡುತ್ತಿಲ್ಲ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಾರ್ಖಂಡ್‌ನಲ್ಲಿ ಮತ್ತೊಂದು ಗುಂಪುಹತ್ಯೆ: ದನ ಕಳ್ಳತನದ ಶಂಕೆಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಬುಧವಾರ ದನಗಳನ್ನು ಕದ್ದಿದ್ದಾನೆ ಎಂಬ ಶಂಕೆಯಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಅಪರಿಚಿತ ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪಿಟಿಐ ವರದಿ ಮಾಡಿದೆ. ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ...

ನ್ಯಾಷನಲ್ ಹೆರಾಲ್ಡ್ ಜಾಹೀರಾತು ವಿವಾದ: ಹಣಕಾಸಿನ ದಾಖಲೆ ಕೇಳಿ ಡಿಕೆ ಸಹೋದರರಿಗೆ ನೋಟಿಸ್  

ಕಾಂಗ್ರೆಸ್ ನೇತೃತ್ವದ ಕರ್ನಾಟಕ ಸರ್ಕಾರದಿಂದ ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಬೇರೆ ಯಾವುದೇ ರಾಷ್ಟ್ರೀಯ ದಿನಪತ್ರಿಕೆಗಿಂತ ಹೆಚ್ಚಿನ ಜಾಹೀರಾತು ನಿಧಿ ದೊರೆತಿದೆ ಎಂದು ವರದಿಯಾಗಿದೆ, ಇದು ಸಾರ್ವಜನಿಕ ಹಣದ ಬಳಕೆಯ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ....

ಬಿಹಾರ: ಸರ್ಕಾರಿ ಶಾಲಾ ಶಿಕ್ಷಕರಿಗೆ ಬೀದಿ ನಾಯಿಗಳನ್ನು ಎಣಿಸುವ ಹೆಚ್ಚುವರಿ ಕರ್ತವ್ಯ ವಹಿಸಿದ ಪುರಸಭೆ  

ಪಾಟ್ನಾ: ಸುಪ್ರೀಂ ಕೋರ್ಟ್ ಬೀದಿ ನಾಯಿಗಳ ವಿಚಾರದಲ್ಲಿ ಮಹತ್ವದ ಆದೇಶ ನೀಡಿದೆ. ಸಾರ್ವಜನಿಕ ರಸ್ತೆಗಳು, ಬೀದಿಗಳು ಬೀದಿನಾಯಿ ಮುಕ್ತವಾಗಿರಬೇಕು ಎಂದು ಹೇಳಿದೆ. ಆದರೆ ಈ ಆದೇಶ ಸರ್ಕಾರಿ ಶಾಲಾ ಶಿಕ್ಷಕರ ಪಾಲಿಗೆ ದೊಡ್ಡ...

ಮಮತಾ ಬ್ಯಾನರ್ಜಿಯ ರಾಜಕೀಯ ಸಲಹಾ ಸಂಸ್ಥೆ ಐ-ಪ್ಯಾಕ್, ಅದರ ಮುಖ್ಯಸ್ಥ ಪ್ರತೀಕ್ ಜೈನ್ ಮನೆ ಮೇಲೆ ಇಡಿ ದಾಳಿ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ...

ಉತ್ತರಪ್ರದೇಶ: ಕಬ್ಬಿನ ಗದ್ದೆಯಲ್ಲಿ ಸುಟ್ಟ, ಅರೆನಗ್ನ ಮಹಿಳೆಯ ಮೃತದೇಹ ಪತ್ತೆ: ಅತ್ಯಾಚಾರ ಮಾಡಿ ಬೆಂಕಿ ಹಚ್ಚಿರುವ ಶಂಕೆ

ಹಾಪುರ್: ಉತ್ತರ ಪ್ರದೇಶದ ಹಾಪುರ್ ಜಿಲ್ಲೆಯಲ್ಲಿ ಆಘಾತಕಾರಿ ಘಟನೆಯೊಂದು ಬೆಳಕಿಗೆ ಬಂದಿದ್ದು, ಬಹದ್ದೂರ್‌ಗಢ ಪೊಲೀಸ್ ಠಾಣೆ ವ್ಯಾಪ್ತಿಯ ಲಹಾದ್ರಾ ಗ್ರಾಮದ ಇಟ್ಟಿಗೆ ಗೂಡುಗಳ ಹಿಂದಿನ ಕಬ್ಬಿನ ಗದ್ದೆಯಲ್ಲಿ ಸುಮಾರು 30 ವರ್ಷ ವಯಸ್ಸಿನ...

ಗೋಮಾಂಸ ಸೇವನೆ ಶಂಕೆಯಲ್ಲಿ ಮಾನಸಿಕ ಅಸ್ವಸ್ಥ ವ್ಯಕ್ತಿಯ ಮೇಲೆ ಕ್ರೂರ ಹಲ್ಲೆ : ಮೂವರು ದುಷ್ಕರ್ಮಿಗಳ ಬಂಧನ

ಸಾರ್ವಜನಿಕವಾಗಿ ಹಸುವನ್ನು ಕೊಂದು, ಅದರ ಮಾಂಸವನ್ನು ತಿಂದಿದ್ದಾರೆ ಎಂದು ಆರೋಪಿಸಿ ಮಾನಸಿಕ ಅಸ್ವಸ್ಥ ವ್ಯಕ್ತಿ ಮೇಲೆ ಸ್ವಘೋಷಿತ ಗೋರಕ್ಷಕರು ಕ್ರೂರವಾಗಿ ಹಲ್ಲೆ ನಡೆಸಿದ ಘಟನೆ ರಾಜಸ್ಥಾನದ ಝಾಲಾವರ್ ಜಿಲ್ಲೆಯ ಅಕ್ಲೇರಾ ತಾಲೂಕಿನ ಕಿಶನ್‌ಪುರ...

‘ನಿಮ್ಮನ್ನು ನಂಬಿ ಬಂದ ನಕ್ಸಲ್ ಕಾರ್ಯಕರ್ತರಿಗೆ ಕೊಟ್ಟ ಮಾತು ಉಳಿಸಿಕೊಳ್ಳಿ’: ಸಿದ್ದರಾಮಯ್ಯ ಅವರಿಗೆ ಮನವಿ ಮಾಡಿದ ಶಾಂತಿಗಾಗಿ ನಾಗರೀಕ ವೇದಿಕೆ

ಬೆಂಗಳೂರು: ‘ಮುಖ್ಯವಾಹಿನಿಗೆ ಬಂದ ಏಳೂ ಜನ ನಕ್ಸಲೀಯರು ಜೈಲಿನಲ್ಲೇ ಇದ್ದಾರೆ. ಬಹಳ ಸೊರಗಿದ್ದಾರೆ. ತೀವ್ರ ದೈಹಿಕ ಹಾಗೂ ಮಾನಸಿಕ ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ. ಅವರನ್ನು ಹೋಗಿ ಕಾಣುವುದೇ ನಮ್ಮ ಪಾಲಿಗೆ ದೊಡ್ಡ ಹಿಂಸೆಯಾಗಿದೆ ಎಂದು...

ಕೋಗಿಲು ಮನೆಗಳ ನೆಲಸಮ : ಪ್ರತಿಭಟಿಸಿದ ಹೋರಾಟಗಾರರ ಮೇಲೆ ಎಫ್‌ಐಆರ್

ಕೋಗಿಲು ಬಡಾವಣೆಯಲ್ಲಿ ಬಡವರ ಮನೆಗಳ ನೆಲಸಮ ವೇಳೆ ಬಿಗುವಿನ ವಾತಾವರಣ ಸೃಷ್ಟಿಸಿದ್ದಾರೆ ಎಂಬ ಆರೋಪದ ಮೇಲೆ ಹೋರಾಟಗಾರರ ವಿರುದ್ದ ಯಲಹಂಕ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ. ಜನಪರ ವೇದಿಕೆಯ ಮುಖಂಡರಾದ ಗೌರಮ್ಮ ಮತ್ತು ಮನೋಹರ್,...

17 ವರ್ಷದ ಮಹಿಳಾ ಅಥ್ಲೀಟ್ ಮೇಲೆ ಲೈಂಗಿಕ ದೌರ್ಜನ್ಯ ಆರೋಪ: ರಾಷ್ಟ್ರೀಯ ಶೂಟಿಂಗ್ ತರಬೇತುದಾರ ಅಮಾನತು

ಫರಿದಾಬಾದ್‌ನ ಹೋಟೆಲ್‌ನಲ್ಲಿ 17 ವರ್ಷದ ರಾಷ್ಟ್ರಮಟ್ಟದ ಮಹಿಳಾ ಶೂಟರ್ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಹರಿಯಾಣ ಪೊಲೀಸರು ಪ್ರಕರಣ ದಾಖಲಿಸಿದ ನಂತರ ರಾಷ್ಟ್ರೀಯ ಶೂಟಿಂಗ್ ತರಬೇತುದಾರ ಅಂಕುಶ್ ಭಾರದ್ವಾಜ್ ಅವರನ್ನು...

ಸುಪ್ರೀಂ ಕೋರ್ಟ್‌ನಿಂದ ಜಾಮೀನು : ಗುಲ್ಫಿಶಾ ಫಾತಿಮಾ ಸೇರಿದಂತೆ ನಾಲ್ವರು ಜೈಲಿನಿಂದ ಬಿಡುಗಡೆ

ಈಶಾನ್ಯ ದೆಹಲಿಯ 2020ರ ಗಲಭೆ ಪಿತೂರಿ ಆರೋಪದಲ್ಲಿ ಬಂಧಿತರಾಗಿದ್ದ ನಾಲ್ವರು ವಿದ್ಯಾರ್ಥಿ ಹೋರಾಟಗಾರರು ಬುಧವಾರ (ಜ.7) ಜೈಲಿನಿಂದ ಹೊರ ಬಂದಿದ್ದಾರೆ. ಗುಲ್ಫಿಶಾ ಫಾತಿಮಾ, ಮೀರಾನ್ ಹೈದರ್, ಶಿಫಾ ಉರ್ ರೆಹಮಾನ್ ಮತ್ತು ಮೊಹಮ್ಮದ್ ಸಲೀಮ್...