Homeಮುಖಪುಟನನ್ನ ಮೇಲೆಯೂ ವಕೀಲರು ದಾಳಿ ಮಾಡಿದ್ದರು, ಹಾಗಂತ ವಕೀಲರೆಲ್ಲರನ್ನು ದ್ವೇಷಿಸಲಾಗುವುದಿಲ್ಲ: ಕನ್ಹಯ್ಯ

ನನ್ನ ಮೇಲೆಯೂ ವಕೀಲರು ದಾಳಿ ಮಾಡಿದ್ದರು, ಹಾಗಂತ ವಕೀಲರೆಲ್ಲರನ್ನು ದ್ವೇಷಿಸಲಾಗುವುದಿಲ್ಲ: ಕನ್ಹಯ್ಯ

- Advertisement -
- Advertisement -

ವಕೀಲರ ವೇಷದಲ್ಲಿದ್ದ ಕೆಲವು ಗೂಂಡಾಗಳು ಅಂದು ನ್ಯಾಯಾಲಯದ ಆವರಣದಲ್ಲಿ ನನ್ನ ಮತ್ತು ಪತ್ರಕರ್ತರ ಮೇಲೆ ಹಲ್ಲೆ ನಡೆಸಿದಾಗ ಹೆಚ್ಚಿನ ಪೊಲೀಸರು ಅದನ್ನು ಕೈಕಟ್ಟಿ ನೋಡುತ್ತಿದ್ದುದ್ದು ನಿಜ. ಆದರೆ ತಮ್ಮ ಪ್ರಾಣ ಒತ್ತೆ ಇಟ್ಟು ಆ ದಿನ ನನ್ನನ್ನು ರಕ್ಷಿಸಿದ್ದು ಸಹ ಪೊಲೀಸರೇ ಎಂಬುದು ಸಹ ಸತ್ಯ ಎಂದು ವಿದ್ಯಾರ್ಥಿ ನಾಯಕ ಕನ್ಹಯ್ಯ ಕುಮಾರ್‌ ಹೇಳಿದ್ದಾರೆ.

ದೆಹಲಿಯಲ್ಲಿ ನಡೆಯುತ್ತಿರುವ ವಕೀಲರು ಮತ್ತು ಪೊಲೀಸರ ನಡುವಿನ ಘರ್ಷಣೆ ಹಿನ್ನೆಲೆಯಲ್ಲಿ ಸರಣಿ ಟ್ವಿಟ್‌ಗಳನ್ನು ಮಾಡಿರುವ ಅವರು ತಮ್ಮ ಮೇಲೇ ಅಂದು ವಕೀಲರು ನಡೆಸಿದ್ದ ದಾಳಿಯನ್ನು ಸ್ಮರಿಸಿಕೊಂಡಿದ್ದಾರೆ.

ಅಂದು ನನ್ನ ಮೇಲೆ ದಾಳಿ ಮಾಡಿದ ವಕೀಲರ ಮುಖಂಡನಿಗೂ, ಹಾಗೆಯೇ ಸುಮ್ಮನಿದ್ದ ಪೊಲೀಸ್ ಮುಖ್ಯಸ್ಥನಿಗೂ ಸರ್ಕಾರ ಬಹುಮಾನವನ್ನು ನೀಡಿತು. ಆದ್ದರಿಂದ ಇಂದಿಗೂ ನಾವು ಯಾವುದೇ ವೃತ್ತಿಗೆ ವಿರುದ್ಧವಾಗಿಲ್ಲ ಆದರೆ ನ್ಯಾಯದ ಪರವಾಗಿರುತ್ತೇವೆ ಎಂದು ಹೇಳಲು ಬಯಸುತ್ತೇನೆ.

ತನ್ನ ವಯಕ್ತಿಕ ಲಾಭಕ್ಕಾಗಿ ರಾಜಕೀಯವು ಪ್ರತಿ ವೃತ್ತಿಯ ಅಪರಾಧಿಗಳನ್ನು ರಕ್ಷಿಸುತ್ತದೆ ಎಂದು ನನ್ನ ವೈಯಕ್ತಿಕ ಅನುಭವ ಹೇಳುತ್ತದೆ. ಆದ್ದರಿಂದ ಅಪರಾಧದ ವಿರುದ್ಧ ಮಾತನಾಡಿ, ಯಾವುದೇ ವೃತ್ತಿಯ ವಿರುದ್ಧ ಅಲ್ಲ ಎಂದು ಕನ್ಹಯ್ಯ ಕುಮಾರ್‌ ಹೇಳಿದ್ದಾರೆ.

ಬಹುಸಂಖ್ಯಾತ ರಾಜಕಾರಣದ ಭಾಗವಾಹಿಯೇ ಘಟನೆ ನಡೆದು ಮೂರು ದಿನಗಳಾದರೂ ಸಹ ಕಾನೂನು ಸಚಿವರಾಗಲೀ ಅಥವಾ ಗೃಹ ಸಚಿವರಾಗಲೀ ಈ ಇಡೀ ವಿಷಯದ ಬಗ್ಗೆ ಯಾವುದೇ ಹೇಳಿಕೆ ನೀಡಿಲ್ಲ ಎಂಬುದು ಸ್ಪಷ್ಟವಾಗಿದೆ.

ಪ್ರತಿ ವೃತ್ತಿಯಲ್ಲೂ ಕೆಲವರು ದೋಷಿಗಳಿರುತ್ತಾರೆ. ಆದರೆ ಅವರ ತಪ್ಪುಗಳ ಆಧಾರದ ಮೇಲೆ ಇಡೀ ವೃತ್ತಿಯನ್ನು ದ್ವೇಷಿಸಲು ಸಾಧ್ಯವಿಲ್ಲ. ಪ್ರಚೋದನಾಕಾರಿ ಮಾಧ್ಯಮ ಮತ್ತು ರಾಜಕೀಯ ವ್ಯಕ್ತಿಗಳ ಲಾಭಕ್ಕಾಗಿ ಕೆಲವು ವಕೀಲರು ನನ್ನ ಮೇಲೆ ಹಲ್ಲೆ ನಡೆಸಿದ್ದರು ಎಂಬುದು ನಿಜ, ಆದರೆ ಇದರ ಆಧಾರದ ಮೇಲೆ ಇಡೀ ವಕೀಲಿ ವೃತ್ತಿಯನ್ನು ದೂರಲು ಸಾಧ್ಯವಿಲ್ಲ.

ದೆಹಲಿಯಲ್ಲಿ ಪೊಲೀಸರು ಮತ್ತು ವಕೀಲರ ನಡುವೆ ನಡೆಯುತ್ತಿರುವ ಸಂಘರ್ಷವೂ ಒಂದನ್ನು ಮತ್ತೆ ಸಾಬೀತುಪಡಿಸಿದೆ. ಅದೆಂದರೆ ಕಾನೂನು ಮತ್ತು ಸುವ್ಯವಸ್ಥೆಯನ್ನು ಈಗಲಾದರೂ ನಾವು ಸರಿಪಡಿಸದಿದ್ದರೆ ನಾಳೆ ಯಾರ ಪ್ರಾಣ ಬೇಕಾದರೂ ಹೋಗುವ ಸಂಭವವಿದೆ.

ಈ ಇಡೀ ಪ್ರಕರಣದಲ್ಲಿ ಅದು ಪೋಲಿಸ್ ಆಗಿರಲಿ ಅಥವಾ ವಕೀಲರಾಗಲಿ ಯಾರು ಕಾನೂನು ಉಲ್ಲಂಘಿಸಿದ್ದರೂ, ಅವರ ಮೇಲೆ ತಕ್ಷಣ ಕ್ರಮ ತೆಗೆದುಕೊಳ್ಳಬೇಕು. ಆದರೆ ದುಃಖಕರವೆಂದರೆ ನಮ್ಮ ದೇಶದ ರಾಜಕಾರಣವು ಕಾನೂನು ತನ್ನ ಕೆಲಸವನ್ನು ನ್ಯಾಯಯುತವಾಗಿ ಮಾಡಲು ಬಿಡುತ್ತಿಲ್ಲ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರ್ನಾಟಕ ಸಚಿವ ಸಂಪುಟ ವಿಸ್ತರಣೆ: ನೂತನ ಸಚಿವರ ಪಟ್ಟಿಗೆ ವರಿಷ್ಠರ ಅನುಮೋದನೆ: ಇಂದು ಸಂಜೆ 4:05 ಕ್ಕೆ ಪ್ರಮಾಣ ವಚನ

ಬಹುನಿರೀಕ್ಷಿತ ಕರ್ನಾಟಕ ರಾಜ್ಯ ಸಚಿವ ಸಂಪುಟ ವಿಸ್ತರಣೆಗೆ ಕೊನೆಗೂ ಮುಹೂರ್ತ ನಿಗದಿಯಾಗಿದ್ದು, ಕಾಂಗ್ರೆಸ್ ಹೈಕಮಾಂಡ್ ನೂತನ ಸಚಿವರ ಪಟ್ಟಿಗೆ ಅಧಿಕೃತ ಅನುಮೋದನೆ ನೀಡಿದೆ. ಇದರೊಂದಿಗೆ ಕಳೆದ ಕೆಲವು ದಿನಗಳಿಂದ ರಾಜ್ಯ ರಾಜಕಾರಣದಲ್ಲಿ ತೀವ್ರ...

ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ಪ್ರಕರಣ : WFI ಮಾಜಿ ಅಧ್ಯಕ್ಷ ಬ್ರಿಜ್ ಭೂಷಣ್‌ ಸಿಂಗ್‌ ಖುಲಾಸೆ

ದೆಹಲಿ ನ್ಯಾಯಾಲಯವು ಸೋಮವಾರ (ಆ.3) ಭಾರತೀಯ ಕುಸ್ತಿ ಫೆಡರೇಶನ್ (WFI) ಮಾಜಿ ಅಧ್ಯಕ್ಷ ಮತ್ತು ಬಿಜೆಪಿ ನಾಯಕ ಬ್ರಿಜ್ ಭೂಷಣ್ ಸಿಂಗ್ ಅವರನ್ನು ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಪ್ರಕರಣದಿಂದ...

ಪ್ರಶ್ನೆ ಪತ್ರಿಕೆ ಸೋರಿಕೆ : ಫಾಸ್ಟ್‌ ಟ್ರ್ಯಾಕ್ ಕೋರ್ಟ್ ನ್ಯಾಯಾಧೀಶೆ ಒಂದೇ ವಾರದಲ್ಲಿ ವರ್ಗಾವಣೆ

ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಗಳ ವಿಚಾರಣೆಗಾಗಿ ಸ್ಥಾಪಿಸಲಾದ ತ್ವರಿತಗತಿ (ಫಾಸ್ಟ್‌ ಟ್ರ್ಯಾಕ್) ನ್ಯಾಯಾಲಯದ ನೇತೃತ್ವ ವಹಿಸಲು ನೇಮಕಗೊಂಡ ಕೇವಲ ಒಂದು ವಾರದ ನಂತರ, ದೆಹಲಿ ಹೈಕೋರ್ಟ್ ಶನಿವಾರ (ಆಗಸ್ಟ್ 1) ವಿಶೇಷ ನ್ಯಾಯಾಧೀಶರಾದ...

ಶ್ರೀಲಂಕಾ | 2019ರ ಈಸ್ಟರ್ ಬಾಂಬ್ ಸ್ಫೋಟ ಪ್ರಕರಣ: ಇಬ್ಬರು ಮಾಜಿ ಅಧಿಕಾರಿಗಳಿಗೆ ಮರಣದಂಡನೆ ವಿಧಿಸಿದ ಕೋರ್ಟ್

ಬರೋಬ್ಬರಿ 260ಕ್ಕೂ ಹೆಚ್ಚು ಜನರ ಸಾವಿಗೆ ಕಾರಣವಾಗಿದ್ದ 2019ರ ಶ್ರೀಲಂಕಾದ 'ಈಸ್ಟರ್ ಸಂಡೇ' ಬಾಂಬ್ ಸ್ಫೋಟ ಪ್ರಕರಣದಲ್ಲಿ ಕ್ರಿಮಿನಲ್ ನಿರ್ಲಕ್ಷ್ಯ ಆರೋಪ ಸಾಬೀತಾದ ಹಿನ್ನೆಲೆ, ಪೊಲೀಸ್ ಮಾಜಿ ಮುಖ್ಯಸ್ಥ ಮತ್ತು ರಕ್ಷಣಾ ಸಚಿವಾಲಯದ...

ಅಮೆರಿಕ ಓದಿಗೆ ಎಲ್ಲಿಂದ ಬಂತು ಹಣ? CJP ಸ್ಥಾಪಕ ಅಭಿಜೀತ್ ದೀಪ್ಕೆ ತಂದೆಯ ಆಸ್ತಿ ತನಿಖೆಗೆ RTI ಕಾರ್ಯಕರ್ತ ಆಗ್ರಹ

ಕಾಕ್ರೋಚ್ ಜನತಾ ಪಾರ್ಟಿ (CJP) ಸ್ಥಾಪಕ ಅಭಿಜೀತ್ ದೀಪ್ಕೆ ಅವರ ತಂದೆ, ಮಹಾರಾಷ್ಟ್ರ ಸರ್ಕಾರದ ನಿವೃತ್ತ ಉದ್ಯೋಗಿ ಭಗವಾನ್‌ರಾವ್ ದೀಪ್ಕೆ ಅವರ ಆದಾಯ ಮತ್ತು ಅಕ್ರಮ ಆಸ್ತಿ ಗಳಿಕೆ ಕುರಿತು ಸಮಗ್ರ ತನಿಖೆ...

ಕಾವೇರಿ ವಿಚಾರದಲ್ಲಿ ರಾಜಕೀಯ ಪಕ್ಕಕ್ಕಿಟ್ಟು ರಾಜ್ಯದ ಹಿತ ಕಾಯೋಣ: ಸರ್ವಪಕ್ಷ ಸಭೆಯಲ್ಲಿ ಸಿಎಂ ಡಿ.ಕೆ. ಶಿವಕುಮಾರ್ ಕರೆ

ಕಾವೇರಿ ನದಿ ನೀರು ಹಂಚಿಕೆ ವಿಚಾರವಾಗಿ ಪರಿಸ್ಥಿತಿ ಸುಧಾರಿಸುವ ಲಕ್ಷಣಗಳು ಕಂಡುಬರುತ್ತಿದ್ದು, ನದಿ ನೀರಿನ ಹಂಚಿಕೆಯಲ್ಲಿ ಸೌಹಾರ್ದಯುತವಾಗಿ ಸಮಸ್ಯೆ ನಿವಾರಿಸುವುದೇ ಸರ್ಕಾರದ ಮೊದಲ ಆದ್ಯತೆಯಾಗಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಕಾವೇರಿ...

ಉತ್ತರ ಪ್ರದೇಶ : 33 ವರ್ಷಗಳ ಬಳಿಕ ದೇಶದ್ರೋಹ ಪ್ರಕರಣದಿಂದ ಮುಸ್ಲಿಂ ವ್ಯಕ್ತಿ ಖುಲಾಸೆ

ಪ್ರಾಸಿಕ್ಯೂಷನ್ ಆರೋಪಗಳನ್ನು ಸಾಂದರ್ಭಿಕ ಪುರಾವೆಗಳೊಂದಿಗೆ ಸಾಬೀತುಪಡಿಸಲು ವಿಫಲವಾಗಿದೆ ಮತ್ತು ಆರೋಪಿಯನ್ನು ಕೃತ್ಯಕ್ಕೆ ಲಿಂಕ್ ಮಾಡುವ ಪ್ರಮುಖ ಪುರಾವೆಗಳು ಕಾಣೆಯಾಗಿವೆ ಎಂದು ಅಭಿಪ್ರಾಯಪಟ್ಟ ಲಕ್ನೋದ ವಿಶೇಷ ರಾಷ್ಟ್ರೀಯ ತನಿಖಾ ದಳ (ಎನ್ಐಎ) ನ್ಯಾಯಾಲಯ, ದೇಶದ್ರೋಹ...

‘ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು’ ಎಂಬಂತೆ NTA ಯಿಂದ ₹7.5 ಕೋಟಿಯ ಬೃಹತ್ ಸೆಕ್ಯೂರಿಟಿ ಟೆಂಡರ್

ನೀಟ್ ಪ್ರಶ್ನೆಪತ್ರಿಕೆ ಸೋರಿಕೆಯಾಗಿ, ಅಮಾಯಕ ವಿದ್ಯಾರ್ಥಿಗಳ ಜೀವ-ಭವಿಷ್ಯ ಹಾಳಾದ ಮೇಲೆ, ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು ಎಂಬಂತೆ ಈಗ ಎನ್‌ಟಿಎ (NTA) ₹7.5 ಕೋಟಿ ವೆಚ್ಚದ ಭದ್ರತಾ ಟೆಂಡರ್...

SIR: ನಮೂನೆಯೂ ಇಲ್ಲ, ನೋಟಿಸ್‌ ಇಲ್ಲ ಸ್ವಂತ ಮನೆಯಲ್ಲಿದ್ದವರ ಹೆಸರನ್ನೇ ಅಳಿಸಿಹಾಕಿದ ಚುನಾವಣಾ ಆಯೋಗ

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಒಂದಾದ ಮೇಲೊಂದರಂತೆ ಆತಂಕಕಾರಿ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಮನೆಮನೆಗೆ ತೆರಳಿ ಎನ್ಯುಮರೇಷನ್ ನಮೂನೆ ವಿತರಿಸುವ ಮೊದಲ ಹಂತದ ಪ್ರಕ್ರಿಯೆ...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಅಮಾನತುಗೊಂಡಿದ್ದ ಯುಪಿ ಪೊಲೀಸ್ ಕಾನ್‌ಸ್ಟೇಬಲ್; ಮರುನೇಮಕದ ಬೆನ್ನಲ್ಲೇ ಬಾಲಕಿಯ ಅತ್ಯಾಚಾರ, ಕೊಲೆ!

ಹತ್ತು ವರ್ಷದ ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ, ಆಕೆಯ ಸಾವಿಗೆ ಕಾರಣನಾದ ಆರೋಪದ ಮೇಲೆ ಬಂಧಿತನಾದ ಉತ್ತರ ಪ್ರದೇಶದ ಪೊಲೀಸ್ ಕಾನ್‌ಸ್ಟೇಬಲ್ ಅಭಿಷೇಕ್ ಯಾದವ್‌ನನ್ನು ವೈದ್ಯಕೀಯ ತಪಾಸಣೆಗಾಗಿ ಗೋರಖ್‌ಪುರದ ಜಿಲ್ಲಾಸ್ಪತ್ರೆಗೆ ಕರೆತಂದಾಗ, ಅಲ್ಲಿನ...