Homeಕರ್ನಾಟಕಕನ್ನಡಿಗರ ಸ್ವಾಭಿಮಾನ ಕೆಣಕಬೇಡಿ, ಪರಿಣಾಮ ನೆಟ್ಟಗಾಗದು; ಅಮೂಲ್ ವಿರುದ್ಧ ಸಿದ್ದರಾಮಯ್ಯ ಗರಂ

ಕನ್ನಡಿಗರ ಸ್ವಾಭಿಮಾನ ಕೆಣಕಬೇಡಿ, ಪರಿಣಾಮ ನೆಟ್ಟಗಾಗದು; ಅಮೂಲ್ ವಿರುದ್ಧ ಸಿದ್ದರಾಮಯ್ಯ ಗರಂ

“ಮೋದಿ ಅವರೇ, ನೀವು ಕರ್ನಾಟಕಕ್ಕೆ ಬರುವುದು ಕನ್ನಡಿಗರಿಗೆ ಕೊಡುವುದಕ್ಕೋ, ಕಿತ್ತುಕೊಳ್ಳುವುದಕ್ಕೋ?”

- Advertisement -
- Advertisement -

‘ನಂದಿನಿ ಉಳಿಸಿ’, ‘ಅಮೂಲ್‌ ವಾಪಸ್ ಕಳಿಸಿ’ ಅಭಿಯಾನ ಬಿರುಸು ಪಡೆದ ಬೆನ್ನಲ್ಲೇ ರಾಜ್ಯ ವಿಧಾನಸಭೆ ವಿರೋಧ ಪಕ್ಷದ ನಾಯಕ, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಪ್ರತಿಕ್ರಿಯಿಸಿದ್ದು, “ಕನ್ನಡಿಗರ ಸ್ವಾಭಿಮಾನ ಕೆಣಕಬೇಡಿ, ಪರಿಣಾಮ ನೆಟ್ಟಗಾಗದು” ಎಂದು  ಎಚ್ಚರಿಸಿದ್ದಾರೆ.

“ಪ್ರಧಾನಿ ನರೇಂದ್ರ ಮೋದಿ ಅವರೇ, ನೀವು ಕರ್ನಾಟಕಕ್ಕೆ ಬರುವುದು ಕನ್ನಡಿಗರಿಗೆ ಕೊಡುವುದಕ್ಕೋ, ಕಿತ್ತುಕೊಳ್ಳುವುದಕ್ಕೋ? ಕನ್ನಡಿಗರು ಕಟ್ಟಿದ್ದ ಬ್ಯಾಂಕು, ಬಂದರು, ವಿಮಾನ ನಿಲ್ದಾಣಗಳನ್ನು ಮುಕ್ಕಿ ತಿಂದಾಯಿತು. ಈಗ ನಮ್ಮ ನಂದಿನಿಯನ್ನು ಮುಕ್ಕಲು ಹೊರಟಿದ್ದೀರಾ?” ಎಂದು ಪ್ರಶ್ನಿಸಿದ್ದಾರೆ.

“ನಮ್ಮ ವಿಜಯಾ ಬ್ಯಾಂಕನ್ನು ನುಂಗಿದ ಬರೋಡಾ ಬ್ಯಾಂಕ್ ಗುಜರಾತ್‌ನದ್ದು, ಬಂದರು, ಏರ್ ಪೋರ್ಟ್ ನುಂಗಿದ್ದ ಅದಾನಿ ಗುಜರಾತ್‌‌ನವರು, ಈಗ ಕೆಎಂಎಫ್ ನುಂಗಲು ಹೊರಟಿರುವ ಅಮುಲ್ ಗುಜರಾತ್‌ನದ್ದು. ಗುಜರಾತಿಗಳಿಗೆ ಕನ್ನಡಿಗರು ಶತ್ರುಗಳಾ?” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

“ಈ ಗುಜರಾತಿ ಆಕ್ರಮಣ ಇನ್ನು ಸಹಿಸಲು ಸಾಧ್ಯ ಇಲ್ಲ. ಕರ್ನಾಟಕದಲ್ಲಿ ಅಮುಲ್ ಉತ್ಪನ್ನಗಳ ಮಾರಾಟವನ್ನು ಗೌರವಪೂರ್ವಕವಾಗಿ ನಿಲ್ಲಿಸಿ. ಕನ್ನಡಿಗರ ನಾಡಪ್ರೇಮ, ಸ್ವಾಭಿಮಾನವನ್ನು ಕೆಣಕಲು ಹೋಗಬೇಡಿ, ಪರಿಣಾಮ ನೆಟ್ಟಗಾಗದು” ಎಂದು ಮುನ್ನೆಚ್ಚರಿಕೆ ನೀಡಿದ್ದಾರೆ.

“ಕೇಂದ್ರ ಸಹಕಾರ ಸಚಿವ ಅಮಿತ್ ಶಾ ಅವರು ಅಮುಲ್ ಜೊತೆ ಕೆಎಂಎಫ್ ವಿಲೀನದ ಪ್ರಸ್ತಾವ ಮಾಡಿದ ದಿನದಿಂದ ನಂದಿನಿ ಹಾಲು ಮತ್ತು ಹಾಲಿನ ಉತ್ಪನ್ನಗಳ ಮೇಲೆ ಪ್ರಹಾರ ಶುರುವಾಗಿದೆ, ಏನಿದು ನಿಮ್ಮ ಕರಾಮತ್ತು?” ಎಂದು ಕೇಳಿದ್ದಾರೆ.

“ಇದ್ದಕ್ಕಿದ್ದ ಹಾಗೆ ಮಾರುಕಟ್ಟೆಯಿಂದ ನಂದಿನಿ ಹಾಲು ಮತ್ತಿತರ ಉತ್ಪನ್ನಗಳು ಮಾಯವಾಗುತ್ತಿವೆ. ಗುಜರಾತ್‌ನಿಂದ ನೀವು ಕಳುಹಿಸುತ್ತಿರುವ ಅಮುಲ್ ಹಾಲು ಮತ್ತು ಉತ್ಪನ್ನಗಳ ಮಾರಾಟದ ಬಿರುಸು ಹೆಚ್ಚಾಗಿದೆ. ಇವೆಲ್ಲವೂ ಸಹಜ ಬೆಳವಣಿಗೆಯೇ?” ಎಂದು ಟೀಕಿಸಿದ್ದಾರೆ.

“ಭರವಸೆ ನೀಡಿದಂತೆ ಯುವಜನರಿಗೆ ವರ್ಷಕ್ಕೆ ಎರಡು ಕೋಟಿ ಉದ್ಯೋಗ ಕೊಡಲಿಲ್ಲ, ಬದಲಿಗೆ ನಮ್ಮ ಬ್ಯಾಂಕು, ಬಂದರು, ವಿಮಾನ ನಿಲ್ದಾಣಗಳಲ್ಲಿನ ಕನ್ನಡಿಗರ ಉದ್ಯೋಗಗಳನ್ನು ಕಿತ್ತುಕೊಂಡಾಯಿತು. ಈಗ ರೈತರ ಹೊಟ್ಟೆಗೆ ಹೊಡೆಯುವ ಹುನ್ನಾರವೇ?” ಎಂದು ಹರಿಹಾಯ್ದಿದ್ದಾರೆ.

“ನಾನು ಮುಖ್ಯಮಂತ್ರಿಯಾಗಿದ್ದಾಗ ಜಾರಿಗೆ ತಂದಿದ್ದ ಕ್ಷೀರಧಾರೆ ಮತ್ತು ಕ್ಷೀರಭಾಗ್ಯ ಯೋಜನೆಗಳು ಅನ್ನಭಾಗ್ಯ ಯೋಜನೆಯ ರೀತಿಯಲ್ಲಿಯೇ ನನಗೆ ಸಂತೃಪ್ತಿ ತಂದ ಯೋಜನೆಗಳು. ಗೋಭಕ್ತಿ ಎಂದರೆ ಗೋಮಾಂಸ ಮಾರಾಟಕ್ಕೆ ಲೈಸೆನ್ಸ್ ಕೊಡುವುದೇ ಮೋದಿ ಜೀ?” ಎಂದು ಕುಟುಕಿದ್ದಾರೆ.

“ಹಾಲಿನ ಸಬ್ಸಿಡಿಯನ್ನು ಲೀಟರಿಗೆ 5 ರೂ. ಹೆಚ್ಚಿಸಿ ನಾನು ಕ್ಷೀರಧಾರೆ ಯೋಜನೆ ಜಾರಿಗೊಳಿಸಿದ್ದೆ. ಇದರಿಂದಾಗಿ 20-12-2013 ರಲ್ಲಿ 45 ಲಕ್ಷ ಲೀಟರ್ ಉತ್ಪಾದನೆಯಾಗುತ್ತಿದ್ದ ಹಾಲಿನ ಪ್ರಮಾಣವು 2017 ರ ವೇಳೆಗೆ 73 ಲಕ್ಷ ಲೀಟರಿಗೆ ಏರಿಕೆಯಾಗಿತ್ತು. ಹಾಲು ಹೆಚ್ಚಾಯಿತು ಎಂದು ನಾವು ಖರೀದಿ ಕಡಿಮೆ ಮಾಡಿರಲಿಲ್ಲ. ಹೆಚ್ಚುವರಿ ಹಾಲನ್ನು ಶಾಲಾ ಮಕ್ಕಳಿಗೆ ಉಚಿತವಾಗಿ ನೀಡಲು ಕ್ಷೀರಭಾಗ್ಯ ಯೋಜನೆಯನ್ನು ಜಾರಿಗೊಳಿಸಿದೆವು. ಇದು ಗೋಸಂಪತ್ತು, ರೈತ ಸಂಪತ್ತು ಮತ್ತು ಮಕ್ಕಳ ಸಂಪತ್ತು ಬೆಳೆಸಿದ ನಮ್ಮ ಆಡಳಿತಶೈಲಿ. ನಿಮ್ಮದೇನು?” ಎಂದು ಪ್ರಶ್ನಿಸಿದ್ದಾರೆ.

“ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದ ನಂತರ ಹಾಲಿನ ಸಂಗ್ರಹ ಕಡಿಮೆಯಾಗುತ್ತಿದೆ. 99 ಲಕ್ಷ ಲೀಟರ್ ಸಂಗ್ರಹವಾಗಬೇಕಾಗಿದ್ದ ಕಡೆ ಕೇವಲ 71 ಲಕ್ಷ ಲೀಟರ್ ಸಂಗ್ರಹವಾಗುತ್ತಿದೆ. ಇದು ನೀವು ಮತ್ತು ಅಮಿತ್ ಶಾ ಕೂಡಿ ಕೆಎಂಎಫ್ ವಿರುದ್ಧ ಮಾಡಿರುವ ಷಡ್ಯಂತ್ರವೇ?” ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

“ಕೆಎಂಎಫ್ ಹಾಲು ಖರೀದಿಸುತ್ತಿಲ್ಲ ಎಂದು ಹಳ್ಳಿಗಳಲ್ಲಿ ಪಶುಪಾಲಕರು ಗೋಳಾಡುತ್ತಿದ್ದಾರೆ. ಹಾಲು ಸಂಗ್ರಹದ ಪ್ರಮಾಣ ಕಡಿಮೆಯಾಗಿರುವ ಕಾರಣದಿಂದಾಗಿ ಪ್ರತಿದಿನ ಸುಮಾರು 11 ಕೋಟಿ ರೂಪಾಯಿ ಹಣ ರೈತರ ಕೈತಪ್ಪಿ ಹೋಗುತ್ತಿದೆ. ಇದೇನಾ ನಿಮ್ಮ ರೈತರ ಆದಾಯ ದುಪ್ಟಟ್ಟುಗೊಳಿಸುವ ಯೋಜನೆ?” ಎಂದಿದ್ದಾರೆ.

“ಗುಜರಾತ್ ರಾಜ್ಯದ ಅಮುಲ್ ಪ್ರವೇಶದಿಂದ ನಂದಿನಿಯ ಬೇಡಿಕೆ ಇನ್ನಷ್ಟು ಕುಸಿದು ಕೆಎಂಎಫ್ ಹಾಲಿನ ಸಂಗ್ರಹ ಕಡಿಮೆಯಾಗಲಿದೆ. ಗ್ರಾಮೀಣ ಭಾಗದಲ್ಲಿ ಕೃಷಿಕರ ಪ್ರಮುಖ ಆದಾಯದ ಮೂಲವಾದ ಹೈನುಗಾರಿಕೆಗೆ ಯಾಕೆ ಕಲ್ಲು ಹಾಕುತ್ತಿದ್ದೀರಾ?” ಎಂದು ಗುಡುಗಿದ್ದಾರೆ.

“ಬಿಜೆಪಿ ಅಧಿಕಾರಕ್ಕೆ ಬಂದ ನಂತರ ಸಬರ್ವಾಲ್‌ಗಳು, ಬಿಂದ್ರಾಗಳು, ಜೈನ್‌ಗಳು, ಶರ್ಮಾಗಳ ಬೀಫ್ ರಫ್ತು ಪ್ರಮಾಣ ಸಾವಿರಾರು ಕೋಟಿಗಳಿಗೆ ಏರಿಕೆಯಾಗಿರುವುದಾಗಿ ವರದಿಗಳಿವೆ. ಇವರ ಮೇಲಿರುವ ಕೃಪಕಟಾಕ್ಷ ಯಾರದ್ದು?” ಎಂದು ಕೇಳಿದ್ದಾರೆ.

ಇದನ್ನೂ ಓದಿರಿ: ಸಾಮಾಜಿಕ ಮಾಧ್ಯಮದಲ್ಲಿ ‘#AmulGoback, #SaveKMF’ ಹ್ಯಾಶ್‌ಟ್ಯಾಗ್‌ ಟ್ರೆಂಡ್

“ನಮ್ಮ ಸರ್ಕಾರ ಐದು ವರ್ಷಗಳಲ್ಲಿ 1,356 ಕೋಟಿ ರೂಪಾಯಿಗಳನ್ನು ಹಾಲಿನ ಸಬ್ಸಿಡಿ ರೂಪದಲ್ಲಿ ರೈತರಿಗೆ ಕೊಟ್ಟಿತ್ತು. ಆದರೆ ಬಿಜೆಪಿ ಸರ್ಕಾರ 2020 -21 ರಲ್ಲಿ 1,186 ಕೋಟಿ ಖರ್ಚು ಮಾಡಿದ್ದರೆ 2023-24ಕ್ಕೆ ಕೇವಲ 1,200 ಕೋಟಿ ರೂ.ಗಳನ್ನು ಬಜೆಟ್ನಲ್ಲಿ ಒದಗಿಸಿ ಅನ್ಯಾಯ ಮಾಡಿದೆ” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

“ಕಳೆದ 5 ವರ್ಷಗಳಲ್ಲಿ ಪಶು ಆಹಾರದ ಬೆಲೆಗಳು ಮೂರು ಪಟ್ಟು ಹೆಚ್ಚಾಗಿವೆ. 2017-18ರಲ್ಲಿ 49 ಕೆ.ಜಿ ಬೂಸಾದ ಬೆಲೆ 450 ರೂ. ಇದ್ದದ್ದು ಈಗ 1,350 ರೂ.ಗಳಿಗೆ ಏರಿಕೆಯಾಗಿದೆ. 30 ಕೆಜಿ ಹಿಂಡಿಯ ಬೆಲೆ 400 ರೂ.ಗಳಿಂದ 1,500 ಕ್ಕೇ ಏರಿದೆ” ಎಂದು ವಿಷಾದಿಸಿದ್ದಾರೆ.

“ರಾಜ್ಯದ ಬಿಜೆಪಿ ಸರ್ಕಾರ ಸರ್ಕಾರಿ ಕಾವಲು ಜಮೀನುಗಳನ್ನು, ಡಿನೋಟಿಫೈ ಮಾಡಿ ಉಳ್ಳವರಿಗೆ, ಆರ್‌ಎಸ್‌ಎಸ್ ನವರಿಗೆ, ಬಂಡವಾಳಿಗರಿಗೆ ಹಂಚಲು ಪ್ರಾರಂಭಿಸಿದೆ. ಟಿಪ್ಪುಸುಲ್ತಾನನ ದೂರದೃಷ್ಟಿಯ ಫಲವಾದ ಲಕ್ಷಾಂತರ ಎಕರೆ ವಿಸ್ತೀರ್ಣದ ಅಮೃತ್ ಮಹಲ್ ಕಾವಲು ಪ್ರದೇಶ ಮಾಯವಾಗುತ್ತಿರುವುದು ಯಾರಿಂದ? ಆರ್‌ಎಸ್‌ಎಸ್‌ಗೆ ಸರ್ಕಾರಿ ಜಮೀನುಗಳನ್ನು ಮನಸೋ ಇಚ್ಛೆ ನೀಡಲಾಗುತ್ತಿದೆ. ನಮ್ಮ ರೈತರ ಜಾನುವಾರುಗಳಿಗೆ ಮೇಯಲು ಜಾಗ ಇಲ್ಲದಂತಾಗಿದೆ. ಇದನ್ನು ಕೂಡಲೆ ನಿಲ್ಲಿಸಿ ರಾಜ್ಯದಲ್ಲಿರುವ ಎಲ್ಲ ಮೇವಿನ ಕ್ಷೇತ್ರಗಳನ್ನು ಉಳಿಸಬೇಕು” ಎಂದು ಒತ್ತಾಯಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಲಯಾಳಂ ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಶ್ರೀನಿವಾಸನ್ ನಿಧನ

ಮಲಯಾಳಂ ಚಿತ್ರರಂಗದ ಹಿರಿಯ ನಟ, ಚಿತ್ರಕಥೆಗಾರ, ನಿರ್ದೇಶಕ ಹಾಗೂ ನಿರ್ಮಾಪಕ ಶ್ರೀನಿವಾಸನ್ ಶನಿವಾರ (ಡಿ.20) ನಿಧನರಾದರು. ಅವರಿಗೆ 69 ವರ್ಷ ವಯಸ್ಸಾಗಿತ್ತು. ದೀರ್ಘ ಸಮಯದಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಶ್ರೀನಿವಾಸನ್ ಅವರು, ಚಿಕಿತ್ಸೆ...

ತೆಲಂಗಾಣ: ಆರು ಜನ ಹಿರಿಯರು ಸೇರಿದಂತೆ 41 ಜನ ನಕ್ಸಲ್ ಕಾರ್ಯಕರ್ತರು ಪೊಲೀಸರಿಗೆ ಶರಣು

ದೇಶದಲ್ಲಿ ಮಾವೋವಾದಿ ವಿರೋಧಿ ಕಾರ್ಯಾಚರಣೆಗಳಲ್ಲಿ ಪ್ರಮುಖ ಬೆಳವಣಿಗೆಯಲ್ಲಿ, ಆರು ಜನ ಹಿರಿಯರು ಸೇರಿದಂತೆ 41 ಜನ ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾವೋವಾದಿ) ಕಾರ್ಯಕರ್ತರು ತೆಲಂಗಾಣ ಪೊಲೀಸರ ಮುಂದೆ ಇಂದು ಶರಣಾಗಿದ್ದಾರೆ. ಶರಣಾಗತಿ ಪ್ರಕ್ರಿಯೆಯ...

‘ವೀಸಾ ಅವಧಿ ಮುಗಿಯುವ ಮೊದಲು ಪಾಕ್ ಮಹಿಳೆಯ ಪೌರತ್ವ ಅರ್ಜಿ ಪರಿಗಣಿಸಿ..’; ಕೇಂದ್ರ ಸರ್ಕಾರಕ್ಕೆ ಕರ್ನಾಟಕ ಹೈಕೋರ್ಟ್‌ ಸೂಚನೆ

ಭಾರತದಲ್ಲಿ ವಾಸಿಸುತ್ತಿರುವ ಪಾಕಿಸ್ತಾನಿ ಪ್ರಜೆಯ ಹೊಸ ಪೌರತ್ವ ಅರ್ಜಿಯನ್ನು ಸಕ್ರಿಯವಾಗಿ ಪರಿಗಣಿಸುವ ಜೊತೆಗೆ ಅವರ ದೀರ್ಘಾವಧಿಯ ವೀಸಾ ಅವಧಿ ಮುಗಿಯುವ ಮೊದಲೇ ಪ್ರಕ್ರಿಯೆಯನ್ನು ಪೂರ್ಣಗೊಳಿಸಬೇಕು ಎಂದು, ವಿದೇಶಾಂಗ ಸಚಿವಾಲಯ, ಗೃಹ ಸಚಿವಾಲಯ ಮತ್ತು...

ಎಚ್‌ಐವಿ ಪಾಸಿಟಿವ್ ಎಂದು ವಜಾಗೊಳಿಸಲಾದ ಬಿಎಸ್‌ಎಫ್ ಯೋಧನನ್ನು ಮತ್ತೆ ನೇಮಿಸುವಂತೆ ಹೈಕೋರ್ಟ್ ಆದೇಶ

ಜುಲೈ 2017 ರಲ್ಲಿ ಎಚ್‌ಐವಿ ಪಾಸಿಟಿವ್ ಎಂಬ ಕಾರಣಕ್ಕೆ ಸೇವೆಯಿಂದ ವಜಾಗೊಳಿಸಲಾದ ಗಡಿ ಭದ್ರತಾ ಪಡೆಯ ಕಾನ್‌ಸ್ಟೆಬಲ್‌ ಒಬ್ಬರನ್ನು ಮರುನೇಮಕ ಮಾಡುವಂತೆ ದೆಹಲಿ ಹೈಕೋರ್ಟ್ ಆದೇಶಿಸಿದೆ.  ನ್ಯಾಯಮೂರ್ತಿಗಳಾದ ಸಿ ಹರಿಶಂಕರ್ ಮತ್ತು ಓಂ ಪ್ರಕಾಶ್...

ವೈದ್ಯೆ ಬುರ್ಖಾ ಎಳೆದ ನಿತೀಶ್‌ಕುಮಾರ್: ಶ್ರೀನಗರದಲ್ಲಿ ದೂರು ದಾಖಲಿಸಿದ ಇಲ್ತಿಜಾ ಮುಫ್ತಿ

ಪಾಟ್ನಾದಲ್ಲಿ ನಡೆದ ಸರ್ಕಾರಿ ಕಾರ್ಯಕ್ರಮದ ಸಂದರ್ಭದಲ್ಲಿ ಮುಸ್ಲಿಂ ಮಹಿಳಾ ವೈದ್ಯರ ನಿಖಾಬ್ (ಬುರ್ಖಾ) ಎಳೆಯುತ್ತಿರುವುದನ್ನು ತೋರಿಸುವ ವೈರಲ್ ವೀಡಿಯೊದ ಕುರಿತು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ವಿರುದ್ಧ ಎಫ್ಐಆರ್ ದಾಖಲಿಸಲು ಪೀಪಲ್ಸ್ ಡೆಮಾಕ್ರಟಿಕ್...

ಪ್ರಶ್ನೆಗಾಗಿ ಕಾಸು ಪ್ರಕರಣ: ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್‌ ಸಲ್ಲಿಸಲು ಅನುಮತಿಸಿದ್ದ ಲೋಕಪಾಲ್ ಆದೇಶ ರದ್ದು ಪಡಿಸಿದ ದೆಹಲಿ ಹೈಕೋರ್ಟ್

‘ಪ್ರಶ್ನೆಗಾಗಿ ಕಾಸು’ ಪ್ರಕರಣದಲ್ಲಿ ತೃಣಮೂಲ ಕಾಂಗ್ರೆಸ್(ಟಿಎಂಸಿ) ಸಂಸದೆ ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್ ಸಲ್ಲಿಸಲು ಸಿಬಿಐಗೆ ಅನುಮತಿ ನೀಡಿದ್ದ ಲೋಕಪಾಲ್ ಆದೇಶವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ರದ್ದುಗೊಳಿಸಿದೆ. ಇದರಿಂದಾಗಿ ಮೊಯಿತ್ರಾ ಅವರಿಗೆ ಈ...

ಜಮ್ಮು-ಕಾಶ್ಮೀರ: ಪತ್ರಕರ್ತನ ಮೊಬೈಲ್ ಫೋನ್ ವಶಪಡಿಸಿಕೊಂಡ ಪೊಲೀಸರು

ಕಿಶ್ತ್ವಾರ್‌ನಲ್ಲಿನ ವಿದ್ಯುತ್ ಯೋಜನೆಯಲ್ಲಿ ಸ್ವಜನಪಕ್ಷಪಾತ ಮತ್ತು ಭ್ರಷ್ಟಾಚಾರದ ಆರೋಪಗಳ ಕುರಿತು ವರದಿ ಮಾಡುತ್ತಿದ್ದಾಗ, ದಿ ವೈರ್ ಸುದ್ದಿ ಪೋರ್ಟಲ್‌ನ ಪತ್ರಕರ್ತ ಜೆಹಾಂಗೀರ್ ಅಲಿ ಅವರ ಮೊಬೈಲ್ ಫೋನ್ ಅನ್ನು ಬುಧವಾರ (ಡಿಸೆಂಬರ್ 17)...

ಕೇರಳದಲ್ಲಿ ಗುಂಪುಹತ್ಯೆ: ಛತ್ತೀಸ್‌ಗಢ ವಲಸೆ ಕಾರ್ಮಿಕನನ್ನು ‘ಕಳ್ಳ’ ಎಂದು ಥಳಿಸಿ ಕೊಂದ ಗುಂಪು 

ಕೇರಳದ ಪಾಲಕ್ಕಾಡ್ ಜಿಲ್ಲೆಯಲ್ಲಿ ಗುರುವಾರ ಛತ್ತೀಸ್‌ಗಢದಿಂದ ಬಂದ ವಲಸೆ ಕಾರ್ಮಿಕನೊಬ್ಬನನ್ನು ಕಳ್ಳನೆಂದು ಶಂಕಿಸಿ ಗುಂಪೊಂದು ಥಳಿಸಿ ಕೊಂದಿದೆ. ಕೊಲೆಯಾದ ವ್ಯಕ್ತಿಯನ್ನು ರಾಮನಾರಾಯಣ್ ಭಯಾರ್ (31) ಎಂದು ಗುರುತಿಸಲಾಗಿದ್ದು, ಕಳೆದ ಒಂದು ತಿಂಗಳಿನಿಂದ ಪಾಲಕ್ಕಾಡ್‌ನ ಕಾಂಜಿಕೋಡ್‌ನಲ್ಲಿರುವ...

ನೋಯ್ಡಾ ಪೊಲೀಸ್ ಠಾಣೆಯೊಳಗೆ ವಕೀಲೆ ಮೇಲೆ ಲೈಂಗಿಕ ದೌರ್ಜನ್ಯ ಆರೋಪ; ಸಿಸಿಟಿವಿ ದೃಶ್ಯಾವಳಿ ಕೇಳಿದ ಸುಪ್ರೀಂ ಕೋರ್ಟ್

ಮಹಿಳಾ ವಕೀಲೆಯೊಬ್ಬರನ್ನು 14 ಗಂಟೆಗಳ ಕಾಲ ಅಕ್ರಮವಾಗಿ ಬಂಧಿಸಿ ಪೊಲೀಸರು ಲೈಂಗಿಕ ದೌರ್ಜನ್ಯ esgi, ಕಸ್ಟಡಿಯಲ್ಲಿ ಚಿತ್ರಹಿಂಸೆ ನೀಡಿದ ಆರೋಪದ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಸುಪ್ರೀಂ ಕೋಡರ್ಟ್, ಮುಚ್ಚಿದ ಕವರ್‌ನಲ್ಲಿ ಸಿಸಿಟಿವಿ ದೃಶ್ಯಾವಳಿಗಳನ್ನು...

ಹಾಲು ಉತ್ಪಾದಕರಿಗೆ 1 ಲೀಟರ್ ಹಾಲಿನ ಪ್ರೋತ್ಸಾಹಧನ 5 ರಿಂದ 7 ರೂಗೆ ಏರಿಕೆ: ಅಧಿವೇಶನದಲ್ಲಿ ಸಿದ್ದರಾಮಯ್ಯ ಘೋಷಣೆ

ರೈತರ ಹಿತದೃಷ್ಠಿಯಿಂದ 1 ಲೀಟರ್ ಹಾಲಿಗೆ ಪ್ರೋತ್ಸಾಹಧನವನ್ನು 7 ರೂಪಾಯಿಗೆ ಏರಿಕೆ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ಡಿಸೆಂಬರ್ 19ರಂದು ಬೆಳಗಾವಿ ಅಧಿವೇಶನದ ಕೊನೆಯ ದಿನ ಮಾತನಾಡಿದ ಅವರು, ರೈತರಿಗೆ ಹಸುಗಳನ್ನು ಸಾಕಿ...