Homeಮುಖಪುಟ"ನನ್ನನ್ನು ಈ ರೀತಿ ಅವಮಾನಿಸಬೇಡಿ": ಪಿಎಂ ಜೊತೆಗಿನ ಭೇಟಿ ನಂತರ ಮಮತಾ ಅಸಮಾಧಾನ

“ನನ್ನನ್ನು ಈ ರೀತಿ ಅವಮಾನಿಸಬೇಡಿ”: ಪಿಎಂ ಜೊತೆಗಿನ ಭೇಟಿ ನಂತರ ಮಮತಾ ಅಸಮಾಧಾನ

- Advertisement -
- Advertisement -

ಯಾಸ್ ಚಂಡಮಾರುತದಿಂದ ಉಂಟಾದ ಹಾನಿಯನ್ನು ಪರಿಶೀಲಿಸುವ ಸಭೆಯೊಂದರ ಕುರಿತಂತೆ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಪ್ರಧಾನಿ ನರೇಂದ್ರ ಮೋದಿ ಅವರ ಸರ್ಕಾರದ ವಿರುದ್ಧ “ನನ್ನನ್ನು ಈ ರೀತಿ ಅವಮಾನಿಸಬೇಡಿ” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಪ್ರಧಾನಿ ಅವರ ಕಚೇರಿ “ನಕಲಿ, ಏಕಪಕ್ಷೀಯ, ಪಕ್ಷಪಾತದ ಸುದ್ದಿ”ಯನ್ನು ಮಾಧ್ಯಮಗಳಿಗೆ ಒದಗಿಸಿದೆ ಎಂದು ಅವರು ಅಪಾದಿಸಿದ್ದಾರೆ.

“ನನ್ನನ್ನು ಈ ರೀತಿ ಅವಮಾನಿಸಬೇಡಿ. ನಮಗೆ ಭರ್ಜರಿ ಗೆಲುವು ಸಿಕ್ಕಿದೆ, ಅದಕ್ಕಾಗಿಯೇ ನೀವು ಈ ರೀತಿ ವರ್ತಿಸುತ್ತಿದ್ದೀರಾ? ನೀವು ಎಲ್ಲವನ್ನೂ ಪ್ರಯತ್ನಿಸಿದ್ದೀರಿ ಮತ್ತು ಸೋತಿದ್ದೀರಿ. ಪ್ರತಿದಿನ ನಮ್ಮೊಂದಿಗೆ ಯಾಕೆ ಜಗಳವಾಡುತ್ತಿದ್ದೀರಿ?” ಎಂದು ಸುದ್ದಿಗೋಷ್ಠಿಯಲ್ಲಿ ಹೇಳಿದ ಅವರು, ವಿಷಯ, ಇಶ್ಯೂಗಳ ಕುರಿತು ನೇರವಾಗಿ ಸಂವಹನ ಮಾಡಿ ಎಂದು ಸಲಹೆ ನೀಡಿದರು.

ಕೇಂದ್ರವು ತನ್ನ ಉನ್ನತ ಅಧಿಕಾರಿಯನ್ನು ದೆಹಲಿಗೆ ಮರಳುವಂತೆ ಆದೇಶಿಸಿದ್ದು ಮಮತಾ ಅವರ ಆಕ್ರೋಶಕ್ಕೆ ಕಾರಣವಾಗಿದೆ. ಮಮತಾ ಅವರು ಪ್ರಧಾನಿ ನೇತೃತ್ವದ ಸಭೆಗೆ ಗೈರು ಹಾಜರಾಗಿದ್ದಾರೆ ಮತ್ತು ಅವರ ಖಾಲಿ ಸ್ಥಾನವನ್ನು ತೋರಿಸುವ ಫೋಟೋಗಳನ್ನು ಬಿಜೆಪಿ ಸಾಮಾಜಿಕ ಮಾಧ್ಯಮದಲ್ಲಿ ಪ್ಲಾಂಟ್ ಮಾಡಿದೆ ಎಂದು ಕೆಲವು ಮೂಲಗಳು ತಿಳಿಸಿವೆ.

ಮಮತಾ ಪ್ರಧಾನಿ ಅವರೊಂದಿಗೆ ವಿಮಾನ ನಿಲ್ದಾಣದಲ್ಲಿ 15 ನಿಮಿಷಗಳ ತ್ವರಿತ ಸಂವಾದ ನಡೆಸಿದರು ಮತ್ತು ಪರಿಶೀಲನಾ ಸಭೆಯಲ್ಲಿ ಭಾಗವಹಿಸಲಿಲ್ಲ ಎಂದು ಕೇಂದ್ರ ಸರ್ಕಾರ ಹೇಳಿದೆ.
ಮೊದಲೇ ಘೋಷಿಸಿದ್ದಂತೆ ಚಂಡಮಾರುತ ಪೀಡಿತ ಕರಾವಳಿಯ ಪ್ರದೇಶಕ್ಕೆ ಭೇಟಿ ನೀಡುವ ಕಾರ್ಯಕ್ರಮದ ಕಾರಣಕ್ಕಾಗಿ ಮುಖ್ಯಮಂತ್ರಿ ಅವರು ಹೊರಡುವ ಮೊದಲು ಪ್ರಧಾನಮಂತ್ರಿಯ ಅನುಮತಿಯನ್ನು ಕೇಳಿದರು ಎಂದು ಬಂಗಾಳ ಸರ್ಕಾರದ ಮೂಲಗಳು ತಿಳಿಸಿವೆ.

“ನಾನು ಚಂಡಮಾರುತ ಪೀಡಿತ ಪ್ರದೇಶಗಳಿಗೆ ಭೇಟಿ ನೀಡುವ ಯೋಜನೆಗಳನ್ನು ರೂಪಿಸಿದ್ದೆ. ಯಾಸ್ ಚಂಡಮಾರುತದಿಂದ ಉಂಟಾದ ಹಾನಿಯನ್ನು ನೋಡಲು ನಾನು ಸಾಗರ್ ಮತ್ತು ದಿಘಾಕ್ಕೆ ಪ್ರಯಾಣಿಸಬೇಕಾಗಿತ್ತು. ನನ್ನ ಎಲ್ಲಾ ಯೋಜನೆಗಳನ್ನು ಸಿದ್ಧಪಡಿಸಲಾಗಿತ್ತು. ನಂತರ ಇದ್ದಕ್ಕಿದ್ದಂತೆ ಚಂಡಮಾರುತದ ನಂತರದ ಪರಿಸ್ಥಿತಿಯನ್ನು ನಿರ್ಣಯಿಸಲು ಬಂಗಾಳಕ್ಕೆ ಪ್ರಧಾನಿ ಭೇಟಿ ನೀಡಲಿದ್ದಾರೆ ಎಂಬ ಕರೆ ಬಂದಿತು’ ಎಂದು ಮಮತಾ ಬ್ಯಾನರ್ಜಿ ಹೇಳಿದರು.

‘ರಾಜಕೀಯ ವೈರತ್ವ ಸಾಧಿಸಲು ಮಾತ್ರ ಪ್ರಧಾನಮಂತ್ರಿ ಸಭೆ ಕರೆದಿದ್ದಾರೆ. ಅವರ ಬಿಜೆಪಿಯನ್ನು ಒಳಗೊಂಡಿರುವ ಪ್ರತಿಪಕ್ಷಗಳನ್ನು ಆಹ್ವಾನಿಸಿದ್ದಾರೆ ಮತ್ತು ಗವರ್ನರ್ ಜಗದೀಪ್ ಧಂಕರ್ ಅವರನ್ನೂ ಕರೆದಿದ್ದಾರೆ. ಇತ್ತೀಚೆಗೆ ಅವರು ಗುಜರಾತ್ ಮತ್ತು ಒಡಿಶಾದಲ್ಲಿ ನಡೆಸಿದ ಚಂಡಮಾರುತ ಪರಿಶೀಲನಾ ಸಭೆಗಳಲ್ಲಿ ಹೀಗೆ ವರ್ತಿಸಿರಲಿಲ್ಲ’ ಎಂದು ಮಮತಾ ದೂರಿದ್ದಾರೆ.

ಪ್ರಧಾನಿ ಮತ್ತು ರಾಜ್ಯಪಾಲರನ್ನು 30 ನಿಮಿಷಗಳ ಕಾಲ ಕಾಯುವಂತೆ ಮಾಡಿದೆ ಎಂಬ ಕೇಂದ್ರ ಸರ್ಕಾರದ ಹೇಳಿಕೆಯನ್ನು ಅಲ್ಲಗಳೆದಿರುವ ಮಮತಾ ಬ್ಯಾನರ್ಜಿ, ಪ್ರಧಾನಿ ಮೋದಿಯವರನ್ನು ಭೇಟಿಯಾಗಲು ತಾನೇ 20 ನಿಮಿಷಗಳ ಕಾಲ ಕಾಯಬೇಕಾಗಿತು ಎಂದಿದ್ದಾರೆ.

“ಪಿಎಂ-ಸಿಎಂ ಸಭೆ ನಡೆಯಬೇಕಿದ್ದ ಸ್ಥಳವನ್ನು ತಲುಪುವ ಹೊತ್ತಿಗೆ, ಸ್ವಲ್ಪ ಸಮಯದ ಹಿಂದೆ ಪ್ರಧಾನಿ ಅಲ್ಲಿಗೆ ಆಗಮಿಸಿದ್ದರು ಮತ್ತು ಸಭೆ ನಡೆಯುತ್ತಿದೆ ಎಂದು ಅಧಿಕಾರಿಗಳು ನಮಗೆ ಹೇಳಿದರು.. ಹೊರಗೆ ಕಾಯಲು ನಮ್ಮನ್ನು ಕೇಳಲಾಯಿತು, ಸಭೆ ನಡೆಯುತ್ತಿರುವುದರಿಂದ ಈ ಸಮಯದಲ್ಲಿ ಯಾವುದೇ ಪ್ರವೇಶವಿಲ್ಲ ಎಂದರು. ನಾವು ಸ್ವಲ್ಪ ಸಮಯ ತಾಳ್ಮೆಯಿಂದ ಕಾಯುತ್ತಿದ್ದೆವು. ನಂತರ, ನಾವು ಮತ್ತೆ ಕೇಳಿದಾಗ, ಮುಂದಿನ ಒಂದು ಗಂಟೆಯವರೆಗೆ ಯಾರೂ ಪ್ರವೇಶಿಸಲು ಸಾಧ್ಯವಿಲ್ಲ ಎಂದು ನಮಗೆ ತಿಳಿಸಲಾಯಿತು” ಎಂದು ಅವರು ಹೇಳಿದರು.
“ಆಗ ಸಭೆ ಕಾನ್ಫರೆನ್ಸ್ ಹಾಲ್‌ಗೆ ಸ್ಥಳಾಂತರಗೊಂಡಿದೆ ಎಂದು ಯಾರೋ ಹೇಳಿದರು, ಆದ್ದರಿಂದ ಮುಖ್ಯ ಕಾರ್ಯದರ್ಶಿ ಮತ್ತು ನಾನು ಅಲ್ಲಿಗೆ ಹೋಗಲು ನಿರ್ಧರಿಸಿದೆವು. ನಾವು ಅಲ್ಲಿಗೆ ತಲುಪಿದಾಗ, ಪ್ರಧಾನಿ ಗೌರವಾನ್ವಿತ ರಾಜ್ಯಪಾಲರು, ಕೇಂದ್ರ ಮುಖಂಡರು ಮತ್ತು ಕೆಲವು ವಿಪಕ್ಷ ಶಾಸಕರೊಂದಿಗೆ ಸಭೆ ನಡೆಸುತ್ತಿದ್ದರು’ ಎಂದು ಮಮತಾ ದೂರಿದ್ದಾರೆ.

“ಇದು ಸಭೆಯ ಉದ್ದೇಶಕ್ಕೆ ವಿರುದ್ಧವಾಗಿತ್ತು. ಇದು ಕೇವಲ ಪ್ರಧಾನಿ-ಸಿಎಂ ಸಭೆ ಮಾತ್ರ ಎಂದು ಭಾವಿಸಲಾಗಿತ್ತು. ಆದ್ದರಿಂದ, ನಾವು ನಮ್ಮ ವರದಿಯನ್ನು ಪ್ರಧಾನಮಂತ್ರಿಗೆ ಸಲ್ಲಿಸಲು ನಿರ್ಧರಿಸಿದೆವು ಮತ್ತು ನಂತರ ಪ್ರಧಾನ ಮಂತ್ರಿಯ ಅನುಮತಿಯೊಂದಿಗೆ ನಾವು ದಿಘಾಗೆ ಹೋದೆವು. ನಾನು ಮೂರು ಬಾರಿ ಪ್ರಧಾನಮಂತ್ರಿಯ ಅನುಮತಿಯನ್ನು ಕೋರಿದೆ” ಎಂದು ಅವರು ಹೇಳಿದರು.

“ಪ್ರಧಾನಮಂತ್ರಿ ತಮ್ಮ ಅಹಂಕಾರವನ್ನು ಶಮನಗೊಳಿಸಿದರೆ ಅವರ ಪಾದಗಳನ್ನು ಮುಟ್ಟಲು ಸಿದ್ಧ’ ಎಂದು ಮಮತಾ ಹೇಳಿದರು. ಏಕೆಂದರೆ ಬಂಗಾಳದ ಜನರಿಗೆ ಉತ್ತಮವಾದದ್ದನ್ನು ನೀಡಲು ಬಯಸಿದ್ದೇನೆ ಎಂದ ಅವರು, ಮುಖ್ಯ ಕಾರ್ಯದರ್ಶಿ ವರ್ಗಾವಣೆ ಆದೇಶವನ್ನು ಹಿಂತೆಗೆದುಕೊಳ್ಳುವಂತೆ ವಿನಂತಿಸಿದರು ಮತ್ತು ಇದನ್ನು ದೇಶಾದ್ಯಂತದ ಅಧಿಕಾರಿಗಳಿಗೆ ಮಾಡಿದ ಅವಮಾನ ಎಂದು ಕರೆದರು.

ಏಪ್ರಿಲ್-ಮೇ ವಿಧಾನಸಭಾ ಚುನಾವಣೆಯ ನಂತರ ಶುಕ್ರವಾರ ನಡೆದ ಪ್ರಧಾನ ಮಂತ್ರಿ ಮೋದಿ ಮತ್ತು ಮಮತಾ ಬ್ಯಾನರ್ಜಿ ನಡುವೆ ನಡೆದ ಮೊದಲ ಮುಖಾಮುಖಿಯಾಗಿದೆ.


ಇದನ್ನೂ ಓದಿ: ಎನ್‌ಟಿಆರ್‌ 98 ನೇ ಜನ್ಮದಿನ ಮತ್ತು ಕಮರುತ್ತಿರುವ ತೆಲಗು ದೇಶಂ ಪಕ್ಷದ ಮರುಸಂಘಟನೆಯ ಕನಸು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...