Homeಮುಖಪುಟ"ನನ್ನನ್ನು ಈ ರೀತಿ ಅವಮಾನಿಸಬೇಡಿ": ಪಿಎಂ ಜೊತೆಗಿನ ಭೇಟಿ ನಂತರ ಮಮತಾ ಅಸಮಾಧಾನ

“ನನ್ನನ್ನು ಈ ರೀತಿ ಅವಮಾನಿಸಬೇಡಿ”: ಪಿಎಂ ಜೊತೆಗಿನ ಭೇಟಿ ನಂತರ ಮಮತಾ ಅಸಮಾಧಾನ

- Advertisement -
- Advertisement -

ಯಾಸ್ ಚಂಡಮಾರುತದಿಂದ ಉಂಟಾದ ಹಾನಿಯನ್ನು ಪರಿಶೀಲಿಸುವ ಸಭೆಯೊಂದರ ಕುರಿತಂತೆ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಪ್ರಧಾನಿ ನರೇಂದ್ರ ಮೋದಿ ಅವರ ಸರ್ಕಾರದ ವಿರುದ್ಧ “ನನ್ನನ್ನು ಈ ರೀತಿ ಅವಮಾನಿಸಬೇಡಿ” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಪ್ರಧಾನಿ ಅವರ ಕಚೇರಿ “ನಕಲಿ, ಏಕಪಕ್ಷೀಯ, ಪಕ್ಷಪಾತದ ಸುದ್ದಿ”ಯನ್ನು ಮಾಧ್ಯಮಗಳಿಗೆ ಒದಗಿಸಿದೆ ಎಂದು ಅವರು ಅಪಾದಿಸಿದ್ದಾರೆ.

“ನನ್ನನ್ನು ಈ ರೀತಿ ಅವಮಾನಿಸಬೇಡಿ. ನಮಗೆ ಭರ್ಜರಿ ಗೆಲುವು ಸಿಕ್ಕಿದೆ, ಅದಕ್ಕಾಗಿಯೇ ನೀವು ಈ ರೀತಿ ವರ್ತಿಸುತ್ತಿದ್ದೀರಾ? ನೀವು ಎಲ್ಲವನ್ನೂ ಪ್ರಯತ್ನಿಸಿದ್ದೀರಿ ಮತ್ತು ಸೋತಿದ್ದೀರಿ. ಪ್ರತಿದಿನ ನಮ್ಮೊಂದಿಗೆ ಯಾಕೆ ಜಗಳವಾಡುತ್ತಿದ್ದೀರಿ?” ಎಂದು ಸುದ್ದಿಗೋಷ್ಠಿಯಲ್ಲಿ ಹೇಳಿದ ಅವರು, ವಿಷಯ, ಇಶ್ಯೂಗಳ ಕುರಿತು ನೇರವಾಗಿ ಸಂವಹನ ಮಾಡಿ ಎಂದು ಸಲಹೆ ನೀಡಿದರು.

ಕೇಂದ್ರವು ತನ್ನ ಉನ್ನತ ಅಧಿಕಾರಿಯನ್ನು ದೆಹಲಿಗೆ ಮರಳುವಂತೆ ಆದೇಶಿಸಿದ್ದು ಮಮತಾ ಅವರ ಆಕ್ರೋಶಕ್ಕೆ ಕಾರಣವಾಗಿದೆ. ಮಮತಾ ಅವರು ಪ್ರಧಾನಿ ನೇತೃತ್ವದ ಸಭೆಗೆ ಗೈರು ಹಾಜರಾಗಿದ್ದಾರೆ ಮತ್ತು ಅವರ ಖಾಲಿ ಸ್ಥಾನವನ್ನು ತೋರಿಸುವ ಫೋಟೋಗಳನ್ನು ಬಿಜೆಪಿ ಸಾಮಾಜಿಕ ಮಾಧ್ಯಮದಲ್ಲಿ ಪ್ಲಾಂಟ್ ಮಾಡಿದೆ ಎಂದು ಕೆಲವು ಮೂಲಗಳು ತಿಳಿಸಿವೆ.

ಮಮತಾ ಪ್ರಧಾನಿ ಅವರೊಂದಿಗೆ ವಿಮಾನ ನಿಲ್ದಾಣದಲ್ಲಿ 15 ನಿಮಿಷಗಳ ತ್ವರಿತ ಸಂವಾದ ನಡೆಸಿದರು ಮತ್ತು ಪರಿಶೀಲನಾ ಸಭೆಯಲ್ಲಿ ಭಾಗವಹಿಸಲಿಲ್ಲ ಎಂದು ಕೇಂದ್ರ ಸರ್ಕಾರ ಹೇಳಿದೆ.
ಮೊದಲೇ ಘೋಷಿಸಿದ್ದಂತೆ ಚಂಡಮಾರುತ ಪೀಡಿತ ಕರಾವಳಿಯ ಪ್ರದೇಶಕ್ಕೆ ಭೇಟಿ ನೀಡುವ ಕಾರ್ಯಕ್ರಮದ ಕಾರಣಕ್ಕಾಗಿ ಮುಖ್ಯಮಂತ್ರಿ ಅವರು ಹೊರಡುವ ಮೊದಲು ಪ್ರಧಾನಮಂತ್ರಿಯ ಅನುಮತಿಯನ್ನು ಕೇಳಿದರು ಎಂದು ಬಂಗಾಳ ಸರ್ಕಾರದ ಮೂಲಗಳು ತಿಳಿಸಿವೆ.

“ನಾನು ಚಂಡಮಾರುತ ಪೀಡಿತ ಪ್ರದೇಶಗಳಿಗೆ ಭೇಟಿ ನೀಡುವ ಯೋಜನೆಗಳನ್ನು ರೂಪಿಸಿದ್ದೆ. ಯಾಸ್ ಚಂಡಮಾರುತದಿಂದ ಉಂಟಾದ ಹಾನಿಯನ್ನು ನೋಡಲು ನಾನು ಸಾಗರ್ ಮತ್ತು ದಿಘಾಕ್ಕೆ ಪ್ರಯಾಣಿಸಬೇಕಾಗಿತ್ತು. ನನ್ನ ಎಲ್ಲಾ ಯೋಜನೆಗಳನ್ನು ಸಿದ್ಧಪಡಿಸಲಾಗಿತ್ತು. ನಂತರ ಇದ್ದಕ್ಕಿದ್ದಂತೆ ಚಂಡಮಾರುತದ ನಂತರದ ಪರಿಸ್ಥಿತಿಯನ್ನು ನಿರ್ಣಯಿಸಲು ಬಂಗಾಳಕ್ಕೆ ಪ್ರಧಾನಿ ಭೇಟಿ ನೀಡಲಿದ್ದಾರೆ ಎಂಬ ಕರೆ ಬಂದಿತು’ ಎಂದು ಮಮತಾ ಬ್ಯಾನರ್ಜಿ ಹೇಳಿದರು.

‘ರಾಜಕೀಯ ವೈರತ್ವ ಸಾಧಿಸಲು ಮಾತ್ರ ಪ್ರಧಾನಮಂತ್ರಿ ಸಭೆ ಕರೆದಿದ್ದಾರೆ. ಅವರ ಬಿಜೆಪಿಯನ್ನು ಒಳಗೊಂಡಿರುವ ಪ್ರತಿಪಕ್ಷಗಳನ್ನು ಆಹ್ವಾನಿಸಿದ್ದಾರೆ ಮತ್ತು ಗವರ್ನರ್ ಜಗದೀಪ್ ಧಂಕರ್ ಅವರನ್ನೂ ಕರೆದಿದ್ದಾರೆ. ಇತ್ತೀಚೆಗೆ ಅವರು ಗುಜರಾತ್ ಮತ್ತು ಒಡಿಶಾದಲ್ಲಿ ನಡೆಸಿದ ಚಂಡಮಾರುತ ಪರಿಶೀಲನಾ ಸಭೆಗಳಲ್ಲಿ ಹೀಗೆ ವರ್ತಿಸಿರಲಿಲ್ಲ’ ಎಂದು ಮಮತಾ ದೂರಿದ್ದಾರೆ.

ಪ್ರಧಾನಿ ಮತ್ತು ರಾಜ್ಯಪಾಲರನ್ನು 30 ನಿಮಿಷಗಳ ಕಾಲ ಕಾಯುವಂತೆ ಮಾಡಿದೆ ಎಂಬ ಕೇಂದ್ರ ಸರ್ಕಾರದ ಹೇಳಿಕೆಯನ್ನು ಅಲ್ಲಗಳೆದಿರುವ ಮಮತಾ ಬ್ಯಾನರ್ಜಿ, ಪ್ರಧಾನಿ ಮೋದಿಯವರನ್ನು ಭೇಟಿಯಾಗಲು ತಾನೇ 20 ನಿಮಿಷಗಳ ಕಾಲ ಕಾಯಬೇಕಾಗಿತು ಎಂದಿದ್ದಾರೆ.

“ಪಿಎಂ-ಸಿಎಂ ಸಭೆ ನಡೆಯಬೇಕಿದ್ದ ಸ್ಥಳವನ್ನು ತಲುಪುವ ಹೊತ್ತಿಗೆ, ಸ್ವಲ್ಪ ಸಮಯದ ಹಿಂದೆ ಪ್ರಧಾನಿ ಅಲ್ಲಿಗೆ ಆಗಮಿಸಿದ್ದರು ಮತ್ತು ಸಭೆ ನಡೆಯುತ್ತಿದೆ ಎಂದು ಅಧಿಕಾರಿಗಳು ನಮಗೆ ಹೇಳಿದರು.. ಹೊರಗೆ ಕಾಯಲು ನಮ್ಮನ್ನು ಕೇಳಲಾಯಿತು, ಸಭೆ ನಡೆಯುತ್ತಿರುವುದರಿಂದ ಈ ಸಮಯದಲ್ಲಿ ಯಾವುದೇ ಪ್ರವೇಶವಿಲ್ಲ ಎಂದರು. ನಾವು ಸ್ವಲ್ಪ ಸಮಯ ತಾಳ್ಮೆಯಿಂದ ಕಾಯುತ್ತಿದ್ದೆವು. ನಂತರ, ನಾವು ಮತ್ತೆ ಕೇಳಿದಾಗ, ಮುಂದಿನ ಒಂದು ಗಂಟೆಯವರೆಗೆ ಯಾರೂ ಪ್ರವೇಶಿಸಲು ಸಾಧ್ಯವಿಲ್ಲ ಎಂದು ನಮಗೆ ತಿಳಿಸಲಾಯಿತು” ಎಂದು ಅವರು ಹೇಳಿದರು.
“ಆಗ ಸಭೆ ಕಾನ್ಫರೆನ್ಸ್ ಹಾಲ್‌ಗೆ ಸ್ಥಳಾಂತರಗೊಂಡಿದೆ ಎಂದು ಯಾರೋ ಹೇಳಿದರು, ಆದ್ದರಿಂದ ಮುಖ್ಯ ಕಾರ್ಯದರ್ಶಿ ಮತ್ತು ನಾನು ಅಲ್ಲಿಗೆ ಹೋಗಲು ನಿರ್ಧರಿಸಿದೆವು. ನಾವು ಅಲ್ಲಿಗೆ ತಲುಪಿದಾಗ, ಪ್ರಧಾನಿ ಗೌರವಾನ್ವಿತ ರಾಜ್ಯಪಾಲರು, ಕೇಂದ್ರ ಮುಖಂಡರು ಮತ್ತು ಕೆಲವು ವಿಪಕ್ಷ ಶಾಸಕರೊಂದಿಗೆ ಸಭೆ ನಡೆಸುತ್ತಿದ್ದರು’ ಎಂದು ಮಮತಾ ದೂರಿದ್ದಾರೆ.

“ಇದು ಸಭೆಯ ಉದ್ದೇಶಕ್ಕೆ ವಿರುದ್ಧವಾಗಿತ್ತು. ಇದು ಕೇವಲ ಪ್ರಧಾನಿ-ಸಿಎಂ ಸಭೆ ಮಾತ್ರ ಎಂದು ಭಾವಿಸಲಾಗಿತ್ತು. ಆದ್ದರಿಂದ, ನಾವು ನಮ್ಮ ವರದಿಯನ್ನು ಪ್ರಧಾನಮಂತ್ರಿಗೆ ಸಲ್ಲಿಸಲು ನಿರ್ಧರಿಸಿದೆವು ಮತ್ತು ನಂತರ ಪ್ರಧಾನ ಮಂತ್ರಿಯ ಅನುಮತಿಯೊಂದಿಗೆ ನಾವು ದಿಘಾಗೆ ಹೋದೆವು. ನಾನು ಮೂರು ಬಾರಿ ಪ್ರಧಾನಮಂತ್ರಿಯ ಅನುಮತಿಯನ್ನು ಕೋರಿದೆ” ಎಂದು ಅವರು ಹೇಳಿದರು.

“ಪ್ರಧಾನಮಂತ್ರಿ ತಮ್ಮ ಅಹಂಕಾರವನ್ನು ಶಮನಗೊಳಿಸಿದರೆ ಅವರ ಪಾದಗಳನ್ನು ಮುಟ್ಟಲು ಸಿದ್ಧ’ ಎಂದು ಮಮತಾ ಹೇಳಿದರು. ಏಕೆಂದರೆ ಬಂಗಾಳದ ಜನರಿಗೆ ಉತ್ತಮವಾದದ್ದನ್ನು ನೀಡಲು ಬಯಸಿದ್ದೇನೆ ಎಂದ ಅವರು, ಮುಖ್ಯ ಕಾರ್ಯದರ್ಶಿ ವರ್ಗಾವಣೆ ಆದೇಶವನ್ನು ಹಿಂತೆಗೆದುಕೊಳ್ಳುವಂತೆ ವಿನಂತಿಸಿದರು ಮತ್ತು ಇದನ್ನು ದೇಶಾದ್ಯಂತದ ಅಧಿಕಾರಿಗಳಿಗೆ ಮಾಡಿದ ಅವಮಾನ ಎಂದು ಕರೆದರು.

ಏಪ್ರಿಲ್-ಮೇ ವಿಧಾನಸಭಾ ಚುನಾವಣೆಯ ನಂತರ ಶುಕ್ರವಾರ ನಡೆದ ಪ್ರಧಾನ ಮಂತ್ರಿ ಮೋದಿ ಮತ್ತು ಮಮತಾ ಬ್ಯಾನರ್ಜಿ ನಡುವೆ ನಡೆದ ಮೊದಲ ಮುಖಾಮುಖಿಯಾಗಿದೆ.


ಇದನ್ನೂ ಓದಿ: ಎನ್‌ಟಿಆರ್‌ 98 ನೇ ಜನ್ಮದಿನ ಮತ್ತು ಕಮರುತ್ತಿರುವ ತೆಲಗು ದೇಶಂ ಪಕ್ಷದ ಮರುಸಂಘಟನೆಯ ಕನಸು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...

ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು ಬಿಸಿಯೂಟ ಯೋಜನೆಯಿಂದ ಹೊರಕ್ಕೆ : ಸಂಸತ್ತಿಗೆ ತಿಳಿಸಿದ ಕೇಂದ್ರ

ಕಳೆದ ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು 'ಪ್ರಧಾನಮಂತ್ರಿ ಪೋಷಣ್ ಯೋಜನೆ'ಯಿಂದ (ಮಧ್ಯಾಹ್ನದ ಬಿಸಿಯೂಟ) ಹೊರ ಬಿದ್ದಿವೆ. 2020-21ರಲ್ಲಿ 11.19 ಲಕ್ಷ ಇದ್ದ ಶಾಲೆಗಳ ಸಂಖ್ಯೆ 2024-25ರಲ್ಲಿ 10.35ಕ್ಕೆ ಕುಸಿದಿದೆ ಎಂದು...

ಭೀಮಾ ಕೋರೆಗಾಂವ್ ಪ್ರಕರಣ: ಗೌತಮ್ ನವಲಖಾಗೆ ಜಾಮೀನಿನ ಮೇಲೆ ದೆಹಲಿಗೆ ತೆರಳಲು ಅನುಮತಿ ನೀಡಿದ ಬಾಂಬೆ ಹೈಕೋರ್ಟ್

ಭೀಮಾ ಕೋರೆಗಾಂವ್ ಯುಎಪಿಎ ಪ್ರಕರಣದಲ್ಲಿ ಜಾಮೀನಿನ ಮೇಲೆ ಹೊರಗಿರುವ ಮಾನವ ಹಕ್ಕುಗಳ ಕಾರ್ಯಕರ್ತ ಗೌತಮ್ ನವಲಖಾ ಅವರಿಗೆ ಪ್ರಕರಣದ ವಿಚಾರಣೆ ನಡೆಯುತ್ತಿರುವಾಗ ನವದೆಹಲಿಯಲ್ಲಿ ವಾಸಿಸಲು ಬಾಂಬೆ ಹೈಕೋರ್ಟ್ ಬುಧವಾರ ಅನುಮತಿ ನೀಡಿದೆ. ಆದಾಗಲೂ, ಮಾನವ...

ಕಾರವಾರ ನೌಕಾ ಪ್ರದೇಶದ ಸುತ್ತಮುತ್ತ ಆತಂಕ ಮೂಡಿಸಿದ ‘ಸೀಗಲ್‌’ ಪಕ್ಷಿ; ಚೀನಾ ನಿರ್ಮಿತ ಜಿಪಿಎಸ್ ಸಾಧನ ಪತ್ತೆ

ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಕರಾವಳಿ ಪ್ರದೇಶದ ಬಳಿ, ಸೂಕ್ಷ್ಮ ನೌಕಾ ವಲಯದ ಬಳಿ ಚೀನಾ ನಿರ್ಮಿತ ಜಿಪಿಎಸ್ ಟ್ರ್ಯಾಕಿಂಗ್ ಸಾಧನವೊಂದು 'ಸೀಗಲ್' (ಸಮುದ್ರಹಕ್ಕಿ) ಪಕ್ಷಿಗೆ ಅಳವಡಿಸಿರುವುದು ಕಂಡುಬಂದ ನಂತರ ಭದ್ರತಾ ಸಂಸ್ಥೆಗಳು...

ಅಣು ಶಕ್ತಿಯ ಖಾಸಗೀಕರಣ : ‘ಶಾಂತಿ’ ಮಸೂದೆಗೆ ಲೋಕಸಭೆ ಅಸ್ತು

ಭಾರತದ ಅಣು ವಿದ್ಯುತ್ ಕ್ಷೇತ್ರದಲ್ಲಿ ಖಾಸಗಿ ವಲಯದ ಪ್ರವೇಶಕ್ಕೆ ದಾರಿ ಮಾಡಿಕೊಡುವ, 'ಭಾರತದ ಪ್ರಗತಿಗಾಗಿ ಅಣು ಶಕ್ತಿಯ ಸುಸ್ಥಿರ ಉತ್ಪಾದನೆ (ಎಸ್‌ಎಚ್‌ಎಎನ್‌ಟಿಐ– ಶಾಂತಿ ಮಸೂದೆ) ಮಸೂದೆಯನ್ನು ಲೋಕಸಭೆ ಬುಧವಾರ (ಡಿ.17) ಅಂಗೀಕರಿಸಿತು. ವಿಪಕ್ಷಗಳ ಸದಸ್ಯರು...

ಮಾದಕ ದ್ರವ್ಯ ಸೇವನೆ, ಲೈಂಗಿಕ ಕಿರುಕುಳಕ್ಕೆ 3 ಲಕ್ಷ ರೂ. ದಂಡ ವಸೂಲಿ: ಬೆಂಗಳೂರಿನ ಅಪಾರ್ಟ್‌ಮೆಂಟ್ ಅಸೋಸಿಯೇಷನ್ ​​ವಿರುದ್ಧ ಪ್ರಕರಣ ದಾಖಲು

ಬೆಂಗಳೂರು: ಪಶ್ಚಿಮ ಬೆಂಗಳೂರಿನ ದೊಡ್ಡಬೆಲೆ ಬಳಿಯ ವಸತಿ ಸಂಕೀರ್ಣವೊಂದರ ಅಪಾರ್ಟ್‌ಮೆಂಟ್ ಮಾಲೀಕರ ಸಂಘದ ವಿರುದ್ಧ ಅಪರಾಧ ಚಟುವಟಿಕೆಗಳಲ್ಲಿ ತೊಡಗಿರುವ ನಿವಾಸಿಗಳಿಂದ ದಂಡ ವಸೂಲಿ ಮಾಡಿದ ಮತ್ತು ಅಪರಾಧಗಳನ್ನು ಮುಚ್ಚಿಟ್ಟ ಆರೋಪದ ಮೇಲೆ ಕುಂಬಳಗೋಡು...

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...