Homeಮುಖಪುಟ"ನನ್ನನ್ನು ಈ ರೀತಿ ಅವಮಾನಿಸಬೇಡಿ": ಪಿಎಂ ಜೊತೆಗಿನ ಭೇಟಿ ನಂತರ ಮಮತಾ ಅಸಮಾಧಾನ

“ನನ್ನನ್ನು ಈ ರೀತಿ ಅವಮಾನಿಸಬೇಡಿ”: ಪಿಎಂ ಜೊತೆಗಿನ ಭೇಟಿ ನಂತರ ಮಮತಾ ಅಸಮಾಧಾನ

- Advertisement -
- Advertisement -

ಯಾಸ್ ಚಂಡಮಾರುತದಿಂದ ಉಂಟಾದ ಹಾನಿಯನ್ನು ಪರಿಶೀಲಿಸುವ ಸಭೆಯೊಂದರ ಕುರಿತಂತೆ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಪ್ರಧಾನಿ ನರೇಂದ್ರ ಮೋದಿ ಅವರ ಸರ್ಕಾರದ ವಿರುದ್ಧ “ನನ್ನನ್ನು ಈ ರೀತಿ ಅವಮಾನಿಸಬೇಡಿ” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಪ್ರಧಾನಿ ಅವರ ಕಚೇರಿ “ನಕಲಿ, ಏಕಪಕ್ಷೀಯ, ಪಕ್ಷಪಾತದ ಸುದ್ದಿ”ಯನ್ನು ಮಾಧ್ಯಮಗಳಿಗೆ ಒದಗಿಸಿದೆ ಎಂದು ಅವರು ಅಪಾದಿಸಿದ್ದಾರೆ.

“ನನ್ನನ್ನು ಈ ರೀತಿ ಅವಮಾನಿಸಬೇಡಿ. ನಮಗೆ ಭರ್ಜರಿ ಗೆಲುವು ಸಿಕ್ಕಿದೆ, ಅದಕ್ಕಾಗಿಯೇ ನೀವು ಈ ರೀತಿ ವರ್ತಿಸುತ್ತಿದ್ದೀರಾ? ನೀವು ಎಲ್ಲವನ್ನೂ ಪ್ರಯತ್ನಿಸಿದ್ದೀರಿ ಮತ್ತು ಸೋತಿದ್ದೀರಿ. ಪ್ರತಿದಿನ ನಮ್ಮೊಂದಿಗೆ ಯಾಕೆ ಜಗಳವಾಡುತ್ತಿದ್ದೀರಿ?” ಎಂದು ಸುದ್ದಿಗೋಷ್ಠಿಯಲ್ಲಿ ಹೇಳಿದ ಅವರು, ವಿಷಯ, ಇಶ್ಯೂಗಳ ಕುರಿತು ನೇರವಾಗಿ ಸಂವಹನ ಮಾಡಿ ಎಂದು ಸಲಹೆ ನೀಡಿದರು.

ಕೇಂದ್ರವು ತನ್ನ ಉನ್ನತ ಅಧಿಕಾರಿಯನ್ನು ದೆಹಲಿಗೆ ಮರಳುವಂತೆ ಆದೇಶಿಸಿದ್ದು ಮಮತಾ ಅವರ ಆಕ್ರೋಶಕ್ಕೆ ಕಾರಣವಾಗಿದೆ. ಮಮತಾ ಅವರು ಪ್ರಧಾನಿ ನೇತೃತ್ವದ ಸಭೆಗೆ ಗೈರು ಹಾಜರಾಗಿದ್ದಾರೆ ಮತ್ತು ಅವರ ಖಾಲಿ ಸ್ಥಾನವನ್ನು ತೋರಿಸುವ ಫೋಟೋಗಳನ್ನು ಬಿಜೆಪಿ ಸಾಮಾಜಿಕ ಮಾಧ್ಯಮದಲ್ಲಿ ಪ್ಲಾಂಟ್ ಮಾಡಿದೆ ಎಂದು ಕೆಲವು ಮೂಲಗಳು ತಿಳಿಸಿವೆ.

ಮಮತಾ ಪ್ರಧಾನಿ ಅವರೊಂದಿಗೆ ವಿಮಾನ ನಿಲ್ದಾಣದಲ್ಲಿ 15 ನಿಮಿಷಗಳ ತ್ವರಿತ ಸಂವಾದ ನಡೆಸಿದರು ಮತ್ತು ಪರಿಶೀಲನಾ ಸಭೆಯಲ್ಲಿ ಭಾಗವಹಿಸಲಿಲ್ಲ ಎಂದು ಕೇಂದ್ರ ಸರ್ಕಾರ ಹೇಳಿದೆ.
ಮೊದಲೇ ಘೋಷಿಸಿದ್ದಂತೆ ಚಂಡಮಾರುತ ಪೀಡಿತ ಕರಾವಳಿಯ ಪ್ರದೇಶಕ್ಕೆ ಭೇಟಿ ನೀಡುವ ಕಾರ್ಯಕ್ರಮದ ಕಾರಣಕ್ಕಾಗಿ ಮುಖ್ಯಮಂತ್ರಿ ಅವರು ಹೊರಡುವ ಮೊದಲು ಪ್ರಧಾನಮಂತ್ರಿಯ ಅನುಮತಿಯನ್ನು ಕೇಳಿದರು ಎಂದು ಬಂಗಾಳ ಸರ್ಕಾರದ ಮೂಲಗಳು ತಿಳಿಸಿವೆ.

“ನಾನು ಚಂಡಮಾರುತ ಪೀಡಿತ ಪ್ರದೇಶಗಳಿಗೆ ಭೇಟಿ ನೀಡುವ ಯೋಜನೆಗಳನ್ನು ರೂಪಿಸಿದ್ದೆ. ಯಾಸ್ ಚಂಡಮಾರುತದಿಂದ ಉಂಟಾದ ಹಾನಿಯನ್ನು ನೋಡಲು ನಾನು ಸಾಗರ್ ಮತ್ತು ದಿಘಾಕ್ಕೆ ಪ್ರಯಾಣಿಸಬೇಕಾಗಿತ್ತು. ನನ್ನ ಎಲ್ಲಾ ಯೋಜನೆಗಳನ್ನು ಸಿದ್ಧಪಡಿಸಲಾಗಿತ್ತು. ನಂತರ ಇದ್ದಕ್ಕಿದ್ದಂತೆ ಚಂಡಮಾರುತದ ನಂತರದ ಪರಿಸ್ಥಿತಿಯನ್ನು ನಿರ್ಣಯಿಸಲು ಬಂಗಾಳಕ್ಕೆ ಪ್ರಧಾನಿ ಭೇಟಿ ನೀಡಲಿದ್ದಾರೆ ಎಂಬ ಕರೆ ಬಂದಿತು’ ಎಂದು ಮಮತಾ ಬ್ಯಾನರ್ಜಿ ಹೇಳಿದರು.

‘ರಾಜಕೀಯ ವೈರತ್ವ ಸಾಧಿಸಲು ಮಾತ್ರ ಪ್ರಧಾನಮಂತ್ರಿ ಸಭೆ ಕರೆದಿದ್ದಾರೆ. ಅವರ ಬಿಜೆಪಿಯನ್ನು ಒಳಗೊಂಡಿರುವ ಪ್ರತಿಪಕ್ಷಗಳನ್ನು ಆಹ್ವಾನಿಸಿದ್ದಾರೆ ಮತ್ತು ಗವರ್ನರ್ ಜಗದೀಪ್ ಧಂಕರ್ ಅವರನ್ನೂ ಕರೆದಿದ್ದಾರೆ. ಇತ್ತೀಚೆಗೆ ಅವರು ಗುಜರಾತ್ ಮತ್ತು ಒಡಿಶಾದಲ್ಲಿ ನಡೆಸಿದ ಚಂಡಮಾರುತ ಪರಿಶೀಲನಾ ಸಭೆಗಳಲ್ಲಿ ಹೀಗೆ ವರ್ತಿಸಿರಲಿಲ್ಲ’ ಎಂದು ಮಮತಾ ದೂರಿದ್ದಾರೆ.

ಪ್ರಧಾನಿ ಮತ್ತು ರಾಜ್ಯಪಾಲರನ್ನು 30 ನಿಮಿಷಗಳ ಕಾಲ ಕಾಯುವಂತೆ ಮಾಡಿದೆ ಎಂಬ ಕೇಂದ್ರ ಸರ್ಕಾರದ ಹೇಳಿಕೆಯನ್ನು ಅಲ್ಲಗಳೆದಿರುವ ಮಮತಾ ಬ್ಯಾನರ್ಜಿ, ಪ್ರಧಾನಿ ಮೋದಿಯವರನ್ನು ಭೇಟಿಯಾಗಲು ತಾನೇ 20 ನಿಮಿಷಗಳ ಕಾಲ ಕಾಯಬೇಕಾಗಿತು ಎಂದಿದ್ದಾರೆ.

“ಪಿಎಂ-ಸಿಎಂ ಸಭೆ ನಡೆಯಬೇಕಿದ್ದ ಸ್ಥಳವನ್ನು ತಲುಪುವ ಹೊತ್ತಿಗೆ, ಸ್ವಲ್ಪ ಸಮಯದ ಹಿಂದೆ ಪ್ರಧಾನಿ ಅಲ್ಲಿಗೆ ಆಗಮಿಸಿದ್ದರು ಮತ್ತು ಸಭೆ ನಡೆಯುತ್ತಿದೆ ಎಂದು ಅಧಿಕಾರಿಗಳು ನಮಗೆ ಹೇಳಿದರು.. ಹೊರಗೆ ಕಾಯಲು ನಮ್ಮನ್ನು ಕೇಳಲಾಯಿತು, ಸಭೆ ನಡೆಯುತ್ತಿರುವುದರಿಂದ ಈ ಸಮಯದಲ್ಲಿ ಯಾವುದೇ ಪ್ರವೇಶವಿಲ್ಲ ಎಂದರು. ನಾವು ಸ್ವಲ್ಪ ಸಮಯ ತಾಳ್ಮೆಯಿಂದ ಕಾಯುತ್ತಿದ್ದೆವು. ನಂತರ, ನಾವು ಮತ್ತೆ ಕೇಳಿದಾಗ, ಮುಂದಿನ ಒಂದು ಗಂಟೆಯವರೆಗೆ ಯಾರೂ ಪ್ರವೇಶಿಸಲು ಸಾಧ್ಯವಿಲ್ಲ ಎಂದು ನಮಗೆ ತಿಳಿಸಲಾಯಿತು” ಎಂದು ಅವರು ಹೇಳಿದರು.
“ಆಗ ಸಭೆ ಕಾನ್ಫರೆನ್ಸ್ ಹಾಲ್‌ಗೆ ಸ್ಥಳಾಂತರಗೊಂಡಿದೆ ಎಂದು ಯಾರೋ ಹೇಳಿದರು, ಆದ್ದರಿಂದ ಮುಖ್ಯ ಕಾರ್ಯದರ್ಶಿ ಮತ್ತು ನಾನು ಅಲ್ಲಿಗೆ ಹೋಗಲು ನಿರ್ಧರಿಸಿದೆವು. ನಾವು ಅಲ್ಲಿಗೆ ತಲುಪಿದಾಗ, ಪ್ರಧಾನಿ ಗೌರವಾನ್ವಿತ ರಾಜ್ಯಪಾಲರು, ಕೇಂದ್ರ ಮುಖಂಡರು ಮತ್ತು ಕೆಲವು ವಿಪಕ್ಷ ಶಾಸಕರೊಂದಿಗೆ ಸಭೆ ನಡೆಸುತ್ತಿದ್ದರು’ ಎಂದು ಮಮತಾ ದೂರಿದ್ದಾರೆ.

“ಇದು ಸಭೆಯ ಉದ್ದೇಶಕ್ಕೆ ವಿರುದ್ಧವಾಗಿತ್ತು. ಇದು ಕೇವಲ ಪ್ರಧಾನಿ-ಸಿಎಂ ಸಭೆ ಮಾತ್ರ ಎಂದು ಭಾವಿಸಲಾಗಿತ್ತು. ಆದ್ದರಿಂದ, ನಾವು ನಮ್ಮ ವರದಿಯನ್ನು ಪ್ರಧಾನಮಂತ್ರಿಗೆ ಸಲ್ಲಿಸಲು ನಿರ್ಧರಿಸಿದೆವು ಮತ್ತು ನಂತರ ಪ್ರಧಾನ ಮಂತ್ರಿಯ ಅನುಮತಿಯೊಂದಿಗೆ ನಾವು ದಿಘಾಗೆ ಹೋದೆವು. ನಾನು ಮೂರು ಬಾರಿ ಪ್ರಧಾನಮಂತ್ರಿಯ ಅನುಮತಿಯನ್ನು ಕೋರಿದೆ” ಎಂದು ಅವರು ಹೇಳಿದರು.

“ಪ್ರಧಾನಮಂತ್ರಿ ತಮ್ಮ ಅಹಂಕಾರವನ್ನು ಶಮನಗೊಳಿಸಿದರೆ ಅವರ ಪಾದಗಳನ್ನು ಮುಟ್ಟಲು ಸಿದ್ಧ’ ಎಂದು ಮಮತಾ ಹೇಳಿದರು. ಏಕೆಂದರೆ ಬಂಗಾಳದ ಜನರಿಗೆ ಉತ್ತಮವಾದದ್ದನ್ನು ನೀಡಲು ಬಯಸಿದ್ದೇನೆ ಎಂದ ಅವರು, ಮುಖ್ಯ ಕಾರ್ಯದರ್ಶಿ ವರ್ಗಾವಣೆ ಆದೇಶವನ್ನು ಹಿಂತೆಗೆದುಕೊಳ್ಳುವಂತೆ ವಿನಂತಿಸಿದರು ಮತ್ತು ಇದನ್ನು ದೇಶಾದ್ಯಂತದ ಅಧಿಕಾರಿಗಳಿಗೆ ಮಾಡಿದ ಅವಮಾನ ಎಂದು ಕರೆದರು.

ಏಪ್ರಿಲ್-ಮೇ ವಿಧಾನಸಭಾ ಚುನಾವಣೆಯ ನಂತರ ಶುಕ್ರವಾರ ನಡೆದ ಪ್ರಧಾನ ಮಂತ್ರಿ ಮೋದಿ ಮತ್ತು ಮಮತಾ ಬ್ಯಾನರ್ಜಿ ನಡುವೆ ನಡೆದ ಮೊದಲ ಮುಖಾಮುಖಿಯಾಗಿದೆ.


ಇದನ್ನೂ ಓದಿ: ಎನ್‌ಟಿಆರ್‌ 98 ನೇ ಜನ್ಮದಿನ ಮತ್ತು ಕಮರುತ್ತಿರುವ ತೆಲಗು ದೇಶಂ ಪಕ್ಷದ ಮರುಸಂಘಟನೆಯ ಕನಸು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿಯಿದೆ : ಅಖಿಲೇಶ್ ಯಾದವ್ ವ್ಯಂಗ್ಯ

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ವ್ಯಂಗ್ಯವಾಡಿದ್ದಾರೆ. ಬಿಜೆಪಿ ನಾಯಕರು ಹಾಗೂ ಅವರ ಸಹವರ್ತಿಗಳ ಭ್ರಷ್ಟಾಚಾರ ಮತ್ತು ದುರ್ನಡತೆಯ ಪ್ರಕರಣಗಳು...

ಅಂತರ್ಧರ್ಮೀಯ ‘ಲಿವ್-ಇನ್’ ಸಂಬಂಧ ಅಪರಾಧವಲ್ಲ: ಅಲಹಾಬಾದ್ ಹೈಕೋರ್ಟ್

ಅಂತರ್ಧರ್ಮೀಯ ಲಿವ್-ಇನ್ ಸಂಬಂಧವನ್ನು ನಿಷೇಧಿಸಲಾಗಿಲ್ಲ ಅಥವಾ ಯಾವುದೇ ಕಾನೂನಿನ ಅಡಿಯಲ್ಲಿ ಅಪರಾಧವಲ್ಲಎಂದು ತೀರ್ಪು ನೀಡಿರುವ ಅಲಹಾಬಾದ್ ಹೈಕೋರ್ಟ್, ಮಹಿಳೆಯ ಕುಟುಂಬದಿಂದ ಬೆದರಿಕೆ ಎದುರಿಸುತ್ತಿರುವ ದಂಪತಿಗಳಿಗೆ ರಕ್ಷಣೆ ನೀಡಿದೆ. ಸೋನ್‌ಭದ್ರಾದ ಕಾಜಲ್ ಪ್ರಜಾಪತಿ ಮತ್ತು ಅವರ...

‘ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧಗೊಳಿಸಬೇಕು’; ರಾಜ್ಯಸಭೆಯಲ್ಲಿ ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯ

ಭಾರತದಲ್ಲಿ ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧ ಹಕ್ಕನ್ನಾಗಿ ಮಾಡಲು, ಹಂಚಿಕೆಯ ಆರೈಕೆ ಜವಾಬ್ದಾರಿಗಳನ್ನು ಒತ್ತಿಹೇಳಲು ಕಾನೂನನ್ನು ಜಾರಿಗೆ ತರಬೇಕೆಂದು ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯಿಸಿದ್ದಾರೆ. ರಾಜ್ಯಸಭೆಯಲ್ಲಿ ಮಾತನಾಡಿದ ಅವರು, ತಂದೆ ಉದ್ಯೋಗ...

ಬಿಜೆಪಿ ಇತರ ರಾಜ್ಯಗಳ ಅಕ್ರಮ ಮತದಾರರನ್ನು ಸೇರಿಸುತ್ತಿದೆ : ಮಮತಾ ಬ್ಯಾನರ್ಜಿ ಆರೋಪ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮಂಗಳವಾರ (ಮಾ.31) ಬಿಜೆಪಿ ಬಿಹಾರ, ರಾಜಸ್ಥಾನ, ಹರಿಯಾಣ ಮತ್ತು ಉತ್ತರ ಪ್ರದೇಶದ ಅಕ್ರಮ ಮತದಾರರನ್ನು ರಾಜ್ಯದ ಮತದಾರರ ಪಟ್ಟಿಯಲ್ಲಿ ಸೇರಿಸಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದರು. ಪಶ್ಚಿಮ...

ಬಿಹಾರ: ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರಕ್ಕೆ ಯತ್ನ; ಹಲ್ಲೆ ಮಾಡಿ ವಿಡಿಯೋ ಹರಿಬಿಟ್ಟ ದುಷ್ಟರು: ಇಬ್ಬರ ಬಂಧನ 

ಬಿಹಾರದ ನಳಂದ ಜಿಲ್ಲೆಯಲ್ಲಿ ನಾಚಿಕೆಗೇಡಿನ ಮತ್ತು ಆತಂಕಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ. ನೂರ್ಸರಾಯ್ ಪೊಲೀಸ್ ಠಾಣೆ ವ್ಯಾಪ್ತಿಯ ಹಳ್ಳಿಯೊಂದರಲ್ಲಿ ಮೂವರು ಪುರುಷರು ವಿವಾಹಿತ ಮಹಿಳೆಯ ಮೇಲೆ ಸಾರ್ವಜನಿಕವಾಗಿ ಸಾಮೂಹಿಕ ಅತ್ಯಾಚಾರಕ್ಕೆ ಯತ್ನಿಸಿದ್ದಾರೆ. ದೌರ್ಜನ್ಯ ವಿರೋಧಿಸಿ...

‘ಹಿಂದುತ್ವ ಉಗ್ರವಾದವನ್ನು ಏಕೆ ನಿರ್ಲಕ್ಷಿಸಬೇಕು..?’; ಸಂಸತ್ತಿನಲ್ಲಿ ಪ್ರಶ್ನಿಸಿದ ರುಹುಲ್ಲಾ ಮೆಹದಿ

"ದೇಶದಲ್ಲಿ ಹೆಚ್ಚುತ್ತಿರುವ ಬಲಪಂಥೀಯ ಉಗ್ರವಾದವನ್ನು ನಿರ್ಲಕ್ಷಿಸಿ ಎಡಪಂಥೀಯ ಬೆದರಿಕೆಗಳ ಮೇಲೆ ಮಾತ್ರ ಗಮನಹರಿಸಲಾಗುತ್ತಿದೆ" ಎಂದು ಲೋಕಸಭೆಯಲ್ಲಿ ಜಮ್ಮು-ಕಾಶ್ಮೀರದ ಶ್ರೀನಗರ ಸಂಸದ ಆಗಾ ಸೈಯದ್ ರುಹುಲ್ಲಾ ಮೆಹದಿ ನರೇಂದ್ರ ಮೋದಿ ನೇತೃತ್ವದ ಸರ್ಕಾರದ ಮೇಲೆ...

ವಿರೋಧದ ನಡುವೆಯೂ ಟ್ರಾನ್ಸ್‌ಜೆಂಡರ್ ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ಅಂಕಿತ

ತೀವ್ರ ವಿರೋಧಗಳ ನಡುವೆಯೂ ಟ್ರಾನ್ಸ್‌ಜೆಂಡರ್‌ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಅಂಕಿತ ಹಾಕಿದ್ದಾರೆ ಎಂದು ಕೇಂದ್ರ ಕಾನೂನು ಸಚಿವಾಲಯ ಸೋಮವಾರ (ಮಾ. 30) ಗೆಜೆಟ್ ಅಧಿಸೂಚನೆಯಲ್ಲಿ...