Homeಮುಖಪುಟ"ನನ್ನನ್ನು ಈ ರೀತಿ ಅವಮಾನಿಸಬೇಡಿ": ಪಿಎಂ ಜೊತೆಗಿನ ಭೇಟಿ ನಂತರ ಮಮತಾ ಅಸಮಾಧಾನ

“ನನ್ನನ್ನು ಈ ರೀತಿ ಅವಮಾನಿಸಬೇಡಿ”: ಪಿಎಂ ಜೊತೆಗಿನ ಭೇಟಿ ನಂತರ ಮಮತಾ ಅಸಮಾಧಾನ

- Advertisement -
- Advertisement -

ಯಾಸ್ ಚಂಡಮಾರುತದಿಂದ ಉಂಟಾದ ಹಾನಿಯನ್ನು ಪರಿಶೀಲಿಸುವ ಸಭೆಯೊಂದರ ಕುರಿತಂತೆ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಪ್ರಧಾನಿ ನರೇಂದ್ರ ಮೋದಿ ಅವರ ಸರ್ಕಾರದ ವಿರುದ್ಧ “ನನ್ನನ್ನು ಈ ರೀತಿ ಅವಮಾನಿಸಬೇಡಿ” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಪ್ರಧಾನಿ ಅವರ ಕಚೇರಿ “ನಕಲಿ, ಏಕಪಕ್ಷೀಯ, ಪಕ್ಷಪಾತದ ಸುದ್ದಿ”ಯನ್ನು ಮಾಧ್ಯಮಗಳಿಗೆ ಒದಗಿಸಿದೆ ಎಂದು ಅವರು ಅಪಾದಿಸಿದ್ದಾರೆ.

“ನನ್ನನ್ನು ಈ ರೀತಿ ಅವಮಾನಿಸಬೇಡಿ. ನಮಗೆ ಭರ್ಜರಿ ಗೆಲುವು ಸಿಕ್ಕಿದೆ, ಅದಕ್ಕಾಗಿಯೇ ನೀವು ಈ ರೀತಿ ವರ್ತಿಸುತ್ತಿದ್ದೀರಾ? ನೀವು ಎಲ್ಲವನ್ನೂ ಪ್ರಯತ್ನಿಸಿದ್ದೀರಿ ಮತ್ತು ಸೋತಿದ್ದೀರಿ. ಪ್ರತಿದಿನ ನಮ್ಮೊಂದಿಗೆ ಯಾಕೆ ಜಗಳವಾಡುತ್ತಿದ್ದೀರಿ?” ಎಂದು ಸುದ್ದಿಗೋಷ್ಠಿಯಲ್ಲಿ ಹೇಳಿದ ಅವರು, ವಿಷಯ, ಇಶ್ಯೂಗಳ ಕುರಿತು ನೇರವಾಗಿ ಸಂವಹನ ಮಾಡಿ ಎಂದು ಸಲಹೆ ನೀಡಿದರು.

ಕೇಂದ್ರವು ತನ್ನ ಉನ್ನತ ಅಧಿಕಾರಿಯನ್ನು ದೆಹಲಿಗೆ ಮರಳುವಂತೆ ಆದೇಶಿಸಿದ್ದು ಮಮತಾ ಅವರ ಆಕ್ರೋಶಕ್ಕೆ ಕಾರಣವಾಗಿದೆ. ಮಮತಾ ಅವರು ಪ್ರಧಾನಿ ನೇತೃತ್ವದ ಸಭೆಗೆ ಗೈರು ಹಾಜರಾಗಿದ್ದಾರೆ ಮತ್ತು ಅವರ ಖಾಲಿ ಸ್ಥಾನವನ್ನು ತೋರಿಸುವ ಫೋಟೋಗಳನ್ನು ಬಿಜೆಪಿ ಸಾಮಾಜಿಕ ಮಾಧ್ಯಮದಲ್ಲಿ ಪ್ಲಾಂಟ್ ಮಾಡಿದೆ ಎಂದು ಕೆಲವು ಮೂಲಗಳು ತಿಳಿಸಿವೆ.

ಮಮತಾ ಪ್ರಧಾನಿ ಅವರೊಂದಿಗೆ ವಿಮಾನ ನಿಲ್ದಾಣದಲ್ಲಿ 15 ನಿಮಿಷಗಳ ತ್ವರಿತ ಸಂವಾದ ನಡೆಸಿದರು ಮತ್ತು ಪರಿಶೀಲನಾ ಸಭೆಯಲ್ಲಿ ಭಾಗವಹಿಸಲಿಲ್ಲ ಎಂದು ಕೇಂದ್ರ ಸರ್ಕಾರ ಹೇಳಿದೆ.
ಮೊದಲೇ ಘೋಷಿಸಿದ್ದಂತೆ ಚಂಡಮಾರುತ ಪೀಡಿತ ಕರಾವಳಿಯ ಪ್ರದೇಶಕ್ಕೆ ಭೇಟಿ ನೀಡುವ ಕಾರ್ಯಕ್ರಮದ ಕಾರಣಕ್ಕಾಗಿ ಮುಖ್ಯಮಂತ್ರಿ ಅವರು ಹೊರಡುವ ಮೊದಲು ಪ್ರಧಾನಮಂತ್ರಿಯ ಅನುಮತಿಯನ್ನು ಕೇಳಿದರು ಎಂದು ಬಂಗಾಳ ಸರ್ಕಾರದ ಮೂಲಗಳು ತಿಳಿಸಿವೆ.

“ನಾನು ಚಂಡಮಾರುತ ಪೀಡಿತ ಪ್ರದೇಶಗಳಿಗೆ ಭೇಟಿ ನೀಡುವ ಯೋಜನೆಗಳನ್ನು ರೂಪಿಸಿದ್ದೆ. ಯಾಸ್ ಚಂಡಮಾರುತದಿಂದ ಉಂಟಾದ ಹಾನಿಯನ್ನು ನೋಡಲು ನಾನು ಸಾಗರ್ ಮತ್ತು ದಿಘಾಕ್ಕೆ ಪ್ರಯಾಣಿಸಬೇಕಾಗಿತ್ತು. ನನ್ನ ಎಲ್ಲಾ ಯೋಜನೆಗಳನ್ನು ಸಿದ್ಧಪಡಿಸಲಾಗಿತ್ತು. ನಂತರ ಇದ್ದಕ್ಕಿದ್ದಂತೆ ಚಂಡಮಾರುತದ ನಂತರದ ಪರಿಸ್ಥಿತಿಯನ್ನು ನಿರ್ಣಯಿಸಲು ಬಂಗಾಳಕ್ಕೆ ಪ್ರಧಾನಿ ಭೇಟಿ ನೀಡಲಿದ್ದಾರೆ ಎಂಬ ಕರೆ ಬಂದಿತು’ ಎಂದು ಮಮತಾ ಬ್ಯಾನರ್ಜಿ ಹೇಳಿದರು.

‘ರಾಜಕೀಯ ವೈರತ್ವ ಸಾಧಿಸಲು ಮಾತ್ರ ಪ್ರಧಾನಮಂತ್ರಿ ಸಭೆ ಕರೆದಿದ್ದಾರೆ. ಅವರ ಬಿಜೆಪಿಯನ್ನು ಒಳಗೊಂಡಿರುವ ಪ್ರತಿಪಕ್ಷಗಳನ್ನು ಆಹ್ವಾನಿಸಿದ್ದಾರೆ ಮತ್ತು ಗವರ್ನರ್ ಜಗದೀಪ್ ಧಂಕರ್ ಅವರನ್ನೂ ಕರೆದಿದ್ದಾರೆ. ಇತ್ತೀಚೆಗೆ ಅವರು ಗುಜರಾತ್ ಮತ್ತು ಒಡಿಶಾದಲ್ಲಿ ನಡೆಸಿದ ಚಂಡಮಾರುತ ಪರಿಶೀಲನಾ ಸಭೆಗಳಲ್ಲಿ ಹೀಗೆ ವರ್ತಿಸಿರಲಿಲ್ಲ’ ಎಂದು ಮಮತಾ ದೂರಿದ್ದಾರೆ.

ಪ್ರಧಾನಿ ಮತ್ತು ರಾಜ್ಯಪಾಲರನ್ನು 30 ನಿಮಿಷಗಳ ಕಾಲ ಕಾಯುವಂತೆ ಮಾಡಿದೆ ಎಂಬ ಕೇಂದ್ರ ಸರ್ಕಾರದ ಹೇಳಿಕೆಯನ್ನು ಅಲ್ಲಗಳೆದಿರುವ ಮಮತಾ ಬ್ಯಾನರ್ಜಿ, ಪ್ರಧಾನಿ ಮೋದಿಯವರನ್ನು ಭೇಟಿಯಾಗಲು ತಾನೇ 20 ನಿಮಿಷಗಳ ಕಾಲ ಕಾಯಬೇಕಾಗಿತು ಎಂದಿದ್ದಾರೆ.

“ಪಿಎಂ-ಸಿಎಂ ಸಭೆ ನಡೆಯಬೇಕಿದ್ದ ಸ್ಥಳವನ್ನು ತಲುಪುವ ಹೊತ್ತಿಗೆ, ಸ್ವಲ್ಪ ಸಮಯದ ಹಿಂದೆ ಪ್ರಧಾನಿ ಅಲ್ಲಿಗೆ ಆಗಮಿಸಿದ್ದರು ಮತ್ತು ಸಭೆ ನಡೆಯುತ್ತಿದೆ ಎಂದು ಅಧಿಕಾರಿಗಳು ನಮಗೆ ಹೇಳಿದರು.. ಹೊರಗೆ ಕಾಯಲು ನಮ್ಮನ್ನು ಕೇಳಲಾಯಿತು, ಸಭೆ ನಡೆಯುತ್ತಿರುವುದರಿಂದ ಈ ಸಮಯದಲ್ಲಿ ಯಾವುದೇ ಪ್ರವೇಶವಿಲ್ಲ ಎಂದರು. ನಾವು ಸ್ವಲ್ಪ ಸಮಯ ತಾಳ್ಮೆಯಿಂದ ಕಾಯುತ್ತಿದ್ದೆವು. ನಂತರ, ನಾವು ಮತ್ತೆ ಕೇಳಿದಾಗ, ಮುಂದಿನ ಒಂದು ಗಂಟೆಯವರೆಗೆ ಯಾರೂ ಪ್ರವೇಶಿಸಲು ಸಾಧ್ಯವಿಲ್ಲ ಎಂದು ನಮಗೆ ತಿಳಿಸಲಾಯಿತು” ಎಂದು ಅವರು ಹೇಳಿದರು.
“ಆಗ ಸಭೆ ಕಾನ್ಫರೆನ್ಸ್ ಹಾಲ್‌ಗೆ ಸ್ಥಳಾಂತರಗೊಂಡಿದೆ ಎಂದು ಯಾರೋ ಹೇಳಿದರು, ಆದ್ದರಿಂದ ಮುಖ್ಯ ಕಾರ್ಯದರ್ಶಿ ಮತ್ತು ನಾನು ಅಲ್ಲಿಗೆ ಹೋಗಲು ನಿರ್ಧರಿಸಿದೆವು. ನಾವು ಅಲ್ಲಿಗೆ ತಲುಪಿದಾಗ, ಪ್ರಧಾನಿ ಗೌರವಾನ್ವಿತ ರಾಜ್ಯಪಾಲರು, ಕೇಂದ್ರ ಮುಖಂಡರು ಮತ್ತು ಕೆಲವು ವಿಪಕ್ಷ ಶಾಸಕರೊಂದಿಗೆ ಸಭೆ ನಡೆಸುತ್ತಿದ್ದರು’ ಎಂದು ಮಮತಾ ದೂರಿದ್ದಾರೆ.

“ಇದು ಸಭೆಯ ಉದ್ದೇಶಕ್ಕೆ ವಿರುದ್ಧವಾಗಿತ್ತು. ಇದು ಕೇವಲ ಪ್ರಧಾನಿ-ಸಿಎಂ ಸಭೆ ಮಾತ್ರ ಎಂದು ಭಾವಿಸಲಾಗಿತ್ತು. ಆದ್ದರಿಂದ, ನಾವು ನಮ್ಮ ವರದಿಯನ್ನು ಪ್ರಧಾನಮಂತ್ರಿಗೆ ಸಲ್ಲಿಸಲು ನಿರ್ಧರಿಸಿದೆವು ಮತ್ತು ನಂತರ ಪ್ರಧಾನ ಮಂತ್ರಿಯ ಅನುಮತಿಯೊಂದಿಗೆ ನಾವು ದಿಘಾಗೆ ಹೋದೆವು. ನಾನು ಮೂರು ಬಾರಿ ಪ್ರಧಾನಮಂತ್ರಿಯ ಅನುಮತಿಯನ್ನು ಕೋರಿದೆ” ಎಂದು ಅವರು ಹೇಳಿದರು.

“ಪ್ರಧಾನಮಂತ್ರಿ ತಮ್ಮ ಅಹಂಕಾರವನ್ನು ಶಮನಗೊಳಿಸಿದರೆ ಅವರ ಪಾದಗಳನ್ನು ಮುಟ್ಟಲು ಸಿದ್ಧ’ ಎಂದು ಮಮತಾ ಹೇಳಿದರು. ಏಕೆಂದರೆ ಬಂಗಾಳದ ಜನರಿಗೆ ಉತ್ತಮವಾದದ್ದನ್ನು ನೀಡಲು ಬಯಸಿದ್ದೇನೆ ಎಂದ ಅವರು, ಮುಖ್ಯ ಕಾರ್ಯದರ್ಶಿ ವರ್ಗಾವಣೆ ಆದೇಶವನ್ನು ಹಿಂತೆಗೆದುಕೊಳ್ಳುವಂತೆ ವಿನಂತಿಸಿದರು ಮತ್ತು ಇದನ್ನು ದೇಶಾದ್ಯಂತದ ಅಧಿಕಾರಿಗಳಿಗೆ ಮಾಡಿದ ಅವಮಾನ ಎಂದು ಕರೆದರು.

ಏಪ್ರಿಲ್-ಮೇ ವಿಧಾನಸಭಾ ಚುನಾವಣೆಯ ನಂತರ ಶುಕ್ರವಾರ ನಡೆದ ಪ್ರಧಾನ ಮಂತ್ರಿ ಮೋದಿ ಮತ್ತು ಮಮತಾ ಬ್ಯಾನರ್ಜಿ ನಡುವೆ ನಡೆದ ಮೊದಲ ಮುಖಾಮುಖಿಯಾಗಿದೆ.


ಇದನ್ನೂ ಓದಿ: ಎನ್‌ಟಿಆರ್‌ 98 ನೇ ಜನ್ಮದಿನ ಮತ್ತು ಕಮರುತ್ತಿರುವ ತೆಲಗು ದೇಶಂ ಪಕ್ಷದ ಮರುಸಂಘಟನೆಯ ಕನಸು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...

ಒಡಿಶಾ| ದಲಿತರು ವಾಸಿಸುವ ಪ್ರದೇಶಕ್ಕೆ ಕುಡಿಯುವ ನೀರು-ವಿದ್ಯುತ್ ಸಂಪರ್ಕ ಕಡಿತ

ಒಡಿಶಾದ ಬಲಂಗೀರ್ ಜಿಲ್ಲೆಯಲ್ಲಿ ಜಾತಿ ಆಧಾರಿತ ತಾರತಮ್ಯವಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ. ಆದರೆ, ಗ್ರಾಮದ ಅಧಿಕಾರಿಯೊಬ್ಬರು ಈ ಅಡಚಣೆಗೆ ಸ್ಥಳೀಯ ಕಲಹ ಕಾರಣ ಎಂದು ಆರೋಪಿಸಿದ್ದಾರೆ. ಜಿಲ್ಲೆಯ ತುರೆಕೆಲಾ ಬ್ಲಾಕ್‌ನ ಡುಮೆರ್ಚುವಾನ್ ಗ್ರಾಮದಲ್ಲಿ...

ತಮಿಳುನಾಡು ವಿಧಾನಸಭಾ ಚುನಾವಣೆ: ಡಿಎಂಕೆ ನೇತೃತ್ವದ ಮೈತ್ರಿಕೂಟಕ್ಕೆ ಡಿಎಂಡಿಕೆ ಸೇರ್ಪಡೆ

ಚೆನ್ನೈ: ದಿವಂಗತ ನಟ ವಿಜಯಕಾಂತ್ ಅವರ ದೇಶೀಯ ಮುರ್ಪೋಕ್ಕು ದ್ರಾವಿಡ ಕಳಗಂ (ಡಿಎಂಡಿಕೆ) ಗುರುವಾರ ದ್ರಾವಿಡ ಮುನ್ನೇತ್ರ ಕಳಗಂ ನೇತೃತ್ವದ ಜಾತ್ಯತೀತ ಪ್ರಗತಿಪರ ಒಕ್ಕೂಟ (ಎಸ್‌ಪಿಎ)ವನ್ನು 21ವರ್ಷಗಳ ಅಸ್ತಿತ್ವದ ನಂತರ ಮೊದಲ ಬಾರಿಗೆ...

ಟ್ರಕ್ ಚಾಲಕ ರಸ್ತೆಯಲ್ಲಿ ನಮಾಝ್ ಮಾಡಿದ್ದರಿಂದ ಟ್ರಾಫಿಕ್ ಜಾಮ್ ಎಂದು ಸುಳ್ಳು ಸುದ್ದಿ ಪ್ರಸಾರ : ಝೀ ನ್ಯೂಸ್‌ಗೆ 1 ಲಕ್ಷ ರೂ. ದಂಡ

ಮುಸ್ಲಿಂ ವ್ಯಕ್ತಿಯೊಬ್ಬರು ನಮಾಝ್ ಮಾಡಲು ಹೆದ್ದಾರಿ ಮಧ್ಯೆ ಟ್ರಕ್‌ ನಿಲ್ಲಿಸಿದ್ದರಿಂದ ಟ್ರಾಫಿಕ್ ಜಾಮ್‌ ಉಂಟಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿದ ಝೀ ನ್ಯೂಸ್‌ ಚಾನೆಲ್‌ಗೆ ಸುದ್ದಿ ಪ್ರಸಾರಕರು ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರ(ಎನ್‌ಬಿಡಿಎಸ್‌ಎ)...

ಗುಜರಾತ್‌| ಜಾತಿ ಆಧಾರಿತ ಜಗಳದಲ್ಲಿ ದಲಿತ ಯುವಕನ ಮೇಲೆ ಚಾಕುವಿನಿಂದ ದಾಳಿ

ಶನಿವಾರ ತಡರಾತ್ರಿ ರಾಣಿಪ್‌ನಲ್ಲಿ ನಡೆದ ಸಣ್ಣ ಭಿನ್ನಾಭಿಪ್ರಾಯವೊಂದು ಹಿಂಸಾಚಾರಕ್ಕೆ ತಿರುಗಿದ್ದು, 25 ವರ್ಷದ ದಲಿತ ಯುವಕ ಸಾಹಿಲ್ ವಘೇಲಾ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ. ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಘಟನೆಯು ಈ ಪ್ರದೇಶದಲ್ಲಿ...