Homeಮುಖಪುಟ"ನನ್ನನ್ನು ಈ ರೀತಿ ಅವಮಾನಿಸಬೇಡಿ": ಪಿಎಂ ಜೊತೆಗಿನ ಭೇಟಿ ನಂತರ ಮಮತಾ ಅಸಮಾಧಾನ

“ನನ್ನನ್ನು ಈ ರೀತಿ ಅವಮಾನಿಸಬೇಡಿ”: ಪಿಎಂ ಜೊತೆಗಿನ ಭೇಟಿ ನಂತರ ಮಮತಾ ಅಸಮಾಧಾನ

- Advertisement -
- Advertisement -

ಯಾಸ್ ಚಂಡಮಾರುತದಿಂದ ಉಂಟಾದ ಹಾನಿಯನ್ನು ಪರಿಶೀಲಿಸುವ ಸಭೆಯೊಂದರ ಕುರಿತಂತೆ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಪ್ರಧಾನಿ ನರೇಂದ್ರ ಮೋದಿ ಅವರ ಸರ್ಕಾರದ ವಿರುದ್ಧ “ನನ್ನನ್ನು ಈ ರೀತಿ ಅವಮಾನಿಸಬೇಡಿ” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಪ್ರಧಾನಿ ಅವರ ಕಚೇರಿ “ನಕಲಿ, ಏಕಪಕ್ಷೀಯ, ಪಕ್ಷಪಾತದ ಸುದ್ದಿ”ಯನ್ನು ಮಾಧ್ಯಮಗಳಿಗೆ ಒದಗಿಸಿದೆ ಎಂದು ಅವರು ಅಪಾದಿಸಿದ್ದಾರೆ.

“ನನ್ನನ್ನು ಈ ರೀತಿ ಅವಮಾನಿಸಬೇಡಿ. ನಮಗೆ ಭರ್ಜರಿ ಗೆಲುವು ಸಿಕ್ಕಿದೆ, ಅದಕ್ಕಾಗಿಯೇ ನೀವು ಈ ರೀತಿ ವರ್ತಿಸುತ್ತಿದ್ದೀರಾ? ನೀವು ಎಲ್ಲವನ್ನೂ ಪ್ರಯತ್ನಿಸಿದ್ದೀರಿ ಮತ್ತು ಸೋತಿದ್ದೀರಿ. ಪ್ರತಿದಿನ ನಮ್ಮೊಂದಿಗೆ ಯಾಕೆ ಜಗಳವಾಡುತ್ತಿದ್ದೀರಿ?” ಎಂದು ಸುದ್ದಿಗೋಷ್ಠಿಯಲ್ಲಿ ಹೇಳಿದ ಅವರು, ವಿಷಯ, ಇಶ್ಯೂಗಳ ಕುರಿತು ನೇರವಾಗಿ ಸಂವಹನ ಮಾಡಿ ಎಂದು ಸಲಹೆ ನೀಡಿದರು.

ಕೇಂದ್ರವು ತನ್ನ ಉನ್ನತ ಅಧಿಕಾರಿಯನ್ನು ದೆಹಲಿಗೆ ಮರಳುವಂತೆ ಆದೇಶಿಸಿದ್ದು ಮಮತಾ ಅವರ ಆಕ್ರೋಶಕ್ಕೆ ಕಾರಣವಾಗಿದೆ. ಮಮತಾ ಅವರು ಪ್ರಧಾನಿ ನೇತೃತ್ವದ ಸಭೆಗೆ ಗೈರು ಹಾಜರಾಗಿದ್ದಾರೆ ಮತ್ತು ಅವರ ಖಾಲಿ ಸ್ಥಾನವನ್ನು ತೋರಿಸುವ ಫೋಟೋಗಳನ್ನು ಬಿಜೆಪಿ ಸಾಮಾಜಿಕ ಮಾಧ್ಯಮದಲ್ಲಿ ಪ್ಲಾಂಟ್ ಮಾಡಿದೆ ಎಂದು ಕೆಲವು ಮೂಲಗಳು ತಿಳಿಸಿವೆ.

ಮಮತಾ ಪ್ರಧಾನಿ ಅವರೊಂದಿಗೆ ವಿಮಾನ ನಿಲ್ದಾಣದಲ್ಲಿ 15 ನಿಮಿಷಗಳ ತ್ವರಿತ ಸಂವಾದ ನಡೆಸಿದರು ಮತ್ತು ಪರಿಶೀಲನಾ ಸಭೆಯಲ್ಲಿ ಭಾಗವಹಿಸಲಿಲ್ಲ ಎಂದು ಕೇಂದ್ರ ಸರ್ಕಾರ ಹೇಳಿದೆ.
ಮೊದಲೇ ಘೋಷಿಸಿದ್ದಂತೆ ಚಂಡಮಾರುತ ಪೀಡಿತ ಕರಾವಳಿಯ ಪ್ರದೇಶಕ್ಕೆ ಭೇಟಿ ನೀಡುವ ಕಾರ್ಯಕ್ರಮದ ಕಾರಣಕ್ಕಾಗಿ ಮುಖ್ಯಮಂತ್ರಿ ಅವರು ಹೊರಡುವ ಮೊದಲು ಪ್ರಧಾನಮಂತ್ರಿಯ ಅನುಮತಿಯನ್ನು ಕೇಳಿದರು ಎಂದು ಬಂಗಾಳ ಸರ್ಕಾರದ ಮೂಲಗಳು ತಿಳಿಸಿವೆ.

“ನಾನು ಚಂಡಮಾರುತ ಪೀಡಿತ ಪ್ರದೇಶಗಳಿಗೆ ಭೇಟಿ ನೀಡುವ ಯೋಜನೆಗಳನ್ನು ರೂಪಿಸಿದ್ದೆ. ಯಾಸ್ ಚಂಡಮಾರುತದಿಂದ ಉಂಟಾದ ಹಾನಿಯನ್ನು ನೋಡಲು ನಾನು ಸಾಗರ್ ಮತ್ತು ದಿಘಾಕ್ಕೆ ಪ್ರಯಾಣಿಸಬೇಕಾಗಿತ್ತು. ನನ್ನ ಎಲ್ಲಾ ಯೋಜನೆಗಳನ್ನು ಸಿದ್ಧಪಡಿಸಲಾಗಿತ್ತು. ನಂತರ ಇದ್ದಕ್ಕಿದ್ದಂತೆ ಚಂಡಮಾರುತದ ನಂತರದ ಪರಿಸ್ಥಿತಿಯನ್ನು ನಿರ್ಣಯಿಸಲು ಬಂಗಾಳಕ್ಕೆ ಪ್ರಧಾನಿ ಭೇಟಿ ನೀಡಲಿದ್ದಾರೆ ಎಂಬ ಕರೆ ಬಂದಿತು’ ಎಂದು ಮಮತಾ ಬ್ಯಾನರ್ಜಿ ಹೇಳಿದರು.

‘ರಾಜಕೀಯ ವೈರತ್ವ ಸಾಧಿಸಲು ಮಾತ್ರ ಪ್ರಧಾನಮಂತ್ರಿ ಸಭೆ ಕರೆದಿದ್ದಾರೆ. ಅವರ ಬಿಜೆಪಿಯನ್ನು ಒಳಗೊಂಡಿರುವ ಪ್ರತಿಪಕ್ಷಗಳನ್ನು ಆಹ್ವಾನಿಸಿದ್ದಾರೆ ಮತ್ತು ಗವರ್ನರ್ ಜಗದೀಪ್ ಧಂಕರ್ ಅವರನ್ನೂ ಕರೆದಿದ್ದಾರೆ. ಇತ್ತೀಚೆಗೆ ಅವರು ಗುಜರಾತ್ ಮತ್ತು ಒಡಿಶಾದಲ್ಲಿ ನಡೆಸಿದ ಚಂಡಮಾರುತ ಪರಿಶೀಲನಾ ಸಭೆಗಳಲ್ಲಿ ಹೀಗೆ ವರ್ತಿಸಿರಲಿಲ್ಲ’ ಎಂದು ಮಮತಾ ದೂರಿದ್ದಾರೆ.

ಪ್ರಧಾನಿ ಮತ್ತು ರಾಜ್ಯಪಾಲರನ್ನು 30 ನಿಮಿಷಗಳ ಕಾಲ ಕಾಯುವಂತೆ ಮಾಡಿದೆ ಎಂಬ ಕೇಂದ್ರ ಸರ್ಕಾರದ ಹೇಳಿಕೆಯನ್ನು ಅಲ್ಲಗಳೆದಿರುವ ಮಮತಾ ಬ್ಯಾನರ್ಜಿ, ಪ್ರಧಾನಿ ಮೋದಿಯವರನ್ನು ಭೇಟಿಯಾಗಲು ತಾನೇ 20 ನಿಮಿಷಗಳ ಕಾಲ ಕಾಯಬೇಕಾಗಿತು ಎಂದಿದ್ದಾರೆ.

“ಪಿಎಂ-ಸಿಎಂ ಸಭೆ ನಡೆಯಬೇಕಿದ್ದ ಸ್ಥಳವನ್ನು ತಲುಪುವ ಹೊತ್ತಿಗೆ, ಸ್ವಲ್ಪ ಸಮಯದ ಹಿಂದೆ ಪ್ರಧಾನಿ ಅಲ್ಲಿಗೆ ಆಗಮಿಸಿದ್ದರು ಮತ್ತು ಸಭೆ ನಡೆಯುತ್ತಿದೆ ಎಂದು ಅಧಿಕಾರಿಗಳು ನಮಗೆ ಹೇಳಿದರು.. ಹೊರಗೆ ಕಾಯಲು ನಮ್ಮನ್ನು ಕೇಳಲಾಯಿತು, ಸಭೆ ನಡೆಯುತ್ತಿರುವುದರಿಂದ ಈ ಸಮಯದಲ್ಲಿ ಯಾವುದೇ ಪ್ರವೇಶವಿಲ್ಲ ಎಂದರು. ನಾವು ಸ್ವಲ್ಪ ಸಮಯ ತಾಳ್ಮೆಯಿಂದ ಕಾಯುತ್ತಿದ್ದೆವು. ನಂತರ, ನಾವು ಮತ್ತೆ ಕೇಳಿದಾಗ, ಮುಂದಿನ ಒಂದು ಗಂಟೆಯವರೆಗೆ ಯಾರೂ ಪ್ರವೇಶಿಸಲು ಸಾಧ್ಯವಿಲ್ಲ ಎಂದು ನಮಗೆ ತಿಳಿಸಲಾಯಿತು” ಎಂದು ಅವರು ಹೇಳಿದರು.
“ಆಗ ಸಭೆ ಕಾನ್ಫರೆನ್ಸ್ ಹಾಲ್‌ಗೆ ಸ್ಥಳಾಂತರಗೊಂಡಿದೆ ಎಂದು ಯಾರೋ ಹೇಳಿದರು, ಆದ್ದರಿಂದ ಮುಖ್ಯ ಕಾರ್ಯದರ್ಶಿ ಮತ್ತು ನಾನು ಅಲ್ಲಿಗೆ ಹೋಗಲು ನಿರ್ಧರಿಸಿದೆವು. ನಾವು ಅಲ್ಲಿಗೆ ತಲುಪಿದಾಗ, ಪ್ರಧಾನಿ ಗೌರವಾನ್ವಿತ ರಾಜ್ಯಪಾಲರು, ಕೇಂದ್ರ ಮುಖಂಡರು ಮತ್ತು ಕೆಲವು ವಿಪಕ್ಷ ಶಾಸಕರೊಂದಿಗೆ ಸಭೆ ನಡೆಸುತ್ತಿದ್ದರು’ ಎಂದು ಮಮತಾ ದೂರಿದ್ದಾರೆ.

“ಇದು ಸಭೆಯ ಉದ್ದೇಶಕ್ಕೆ ವಿರುದ್ಧವಾಗಿತ್ತು. ಇದು ಕೇವಲ ಪ್ರಧಾನಿ-ಸಿಎಂ ಸಭೆ ಮಾತ್ರ ಎಂದು ಭಾವಿಸಲಾಗಿತ್ತು. ಆದ್ದರಿಂದ, ನಾವು ನಮ್ಮ ವರದಿಯನ್ನು ಪ್ರಧಾನಮಂತ್ರಿಗೆ ಸಲ್ಲಿಸಲು ನಿರ್ಧರಿಸಿದೆವು ಮತ್ತು ನಂತರ ಪ್ರಧಾನ ಮಂತ್ರಿಯ ಅನುಮತಿಯೊಂದಿಗೆ ನಾವು ದಿಘಾಗೆ ಹೋದೆವು. ನಾನು ಮೂರು ಬಾರಿ ಪ್ರಧಾನಮಂತ್ರಿಯ ಅನುಮತಿಯನ್ನು ಕೋರಿದೆ” ಎಂದು ಅವರು ಹೇಳಿದರು.

“ಪ್ರಧಾನಮಂತ್ರಿ ತಮ್ಮ ಅಹಂಕಾರವನ್ನು ಶಮನಗೊಳಿಸಿದರೆ ಅವರ ಪಾದಗಳನ್ನು ಮುಟ್ಟಲು ಸಿದ್ಧ’ ಎಂದು ಮಮತಾ ಹೇಳಿದರು. ಏಕೆಂದರೆ ಬಂಗಾಳದ ಜನರಿಗೆ ಉತ್ತಮವಾದದ್ದನ್ನು ನೀಡಲು ಬಯಸಿದ್ದೇನೆ ಎಂದ ಅವರು, ಮುಖ್ಯ ಕಾರ್ಯದರ್ಶಿ ವರ್ಗಾವಣೆ ಆದೇಶವನ್ನು ಹಿಂತೆಗೆದುಕೊಳ್ಳುವಂತೆ ವಿನಂತಿಸಿದರು ಮತ್ತು ಇದನ್ನು ದೇಶಾದ್ಯಂತದ ಅಧಿಕಾರಿಗಳಿಗೆ ಮಾಡಿದ ಅವಮಾನ ಎಂದು ಕರೆದರು.

ಏಪ್ರಿಲ್-ಮೇ ವಿಧಾನಸಭಾ ಚುನಾವಣೆಯ ನಂತರ ಶುಕ್ರವಾರ ನಡೆದ ಪ್ರಧಾನ ಮಂತ್ರಿ ಮೋದಿ ಮತ್ತು ಮಮತಾ ಬ್ಯಾನರ್ಜಿ ನಡುವೆ ನಡೆದ ಮೊದಲ ಮುಖಾಮುಖಿಯಾಗಿದೆ.


ಇದನ್ನೂ ಓದಿ: ಎನ್‌ಟಿಆರ್‌ 98 ನೇ ಜನ್ಮದಿನ ಮತ್ತು ಕಮರುತ್ತಿರುವ ತೆಲಗು ದೇಶಂ ಪಕ್ಷದ ಮರುಸಂಘಟನೆಯ ಕನಸು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...