Homeಚಳವಳಿಜೈಲಿನಲ್ಲಿ ಕವಿ ವರವರ ರಾವ್‌ರನ್ನು ಕೊಲ್ಲಬೇಡಿ! ಕುಟುಂಬ ಸದಸ್ಯರ ಮನವಿ

ಜೈಲಿನಲ್ಲಿ ಕವಿ ವರವರ ರಾವ್‌ರನ್ನು ಕೊಲ್ಲಬೇಡಿ! ಕುಟುಂಬ ಸದಸ್ಯರ ಮನವಿ

- Advertisement -
- Advertisement -

ಭೀಮಾ ಕೋರೆಗಾಂವ್ ಪ್ರಕರಣದಲ್ಲಿ ಜೈಲಿನಲ್ಲಿರುವ ಖ್ಯಾತ ತೆಲುಗು ಕ್ರಾಂತಿಕಾರಿ ಕವಿ ವರವರ ರಾವ್ (79) ಅವರ ಜೀವಕ್ಕೆ ಅಪಾಯವಿದ್ದು, ದಯವಿಟ್ಟು ಅವರನ್ನು ಜೈಲಿನಲ್ಲಿ ಕೊಲ್ಲಬೇಡಿ ಎಂದು ಕುಟುಂಬವು ಮನವಿ ಮಾಡಿದೆ.

ಆನ್‌ಲೈನ್‌ನಲ್ಲಿ ಪತ್ರಿಕಾಗೊಷ್ಟಿ ನಡೆಸಿದ ಅವರ ಪತ್ನಿ ಹೇಮಲತಾ ಮಾತನಾಡಿ ರಾವ್ ಒಬ್ಬ ಶಿಕ್ಷಕ, ವಾಗ್ಮಿ ಮತ್ತು ಕವಿ. ತನ್ನ ಜೀವನದಲ್ಲಿ ಪದಗಳು ಅಥವಾ ಆಲೋಚನೆಗಳಿಗಾಗಿ ಎಂದಿಗೂ ಮುಗ್ಗರಿಸಿಲ್ಲ. ಆದರೆ ಈಗ ಅವರು ಮಾತನಾಡಲು ಪದಗಳಿಗಾಗಿ ಹುಡುಕುತ್ತಿರುವುದು ಭಯಾನಕವಾಗಿದೆ. ಕೂಡಲೇ ಅವರಿಗೆ ಚಿಕಿತ್ಸೆ ಮತ್ತು ಹಾರೈಕೆಯ ಅಗತ್ಯವಿದೆ ಎಂದು ಹೇಳಿದ್ದಾರೆ.

ಜುಲೈ 11 ರಂದು ಫೋನ್ ಮೂಲಕ ವರವರ ರಾವ್‌ರೊಂದಿಗೆ ಮಾತನಾಡಿದ ಸಮಯದಲ್ಲಿ, ಅವರು ಸ್ಪಷ್ಟವಾಗಿ ಮಾತನಾಡಿಲ್ಲ. ಅವರ ಆರೋಗ್ಯದ ಬಗೆಗಿ ಪ್ರಶ್ನೆಗಳಿಗೆ ಉತ್ತರಿಸಲಿಲ್ಲ. 70 ವರ್ಷಗಳ ಹಿಂದೆ ಮತ್ತು 40 ವರ್ಷಗಳ ಹಿಂದೆಯೇ ನಿಧನ ಹೊಂದಿರುವ ತಮ್ಮ ತಂದೆ ಮತ್ತು ತಾಯಿಯ ಅಂತ್ಯಕ್ರಿಯೆಯ ಬಗ್ಗೆ ಒಂದು ರೀತಿಯ ಭ್ರಮನಿರಸನ ಮತ್ತು ಭ್ರಮೆಯ ಮಾತುಕತೆ ನಡೆಸಿದ್ದಾರೆ. ಅಲ್ಲದೇ ಮಾತನಾಡಲು ಪದಗಳಿಗಾಗಿ ಅವರು ಹುಡುಕಾಡುತ್ತಿದ್ದರು. ಇದೆಲ್ಲವೂ ಅವರ ಆರೋಗ್ಯ ಸಂಪೂರ್ಣ ಹದಗೆಟ್ಟಿರುವುದನ್ನು ತೋರಿಸುತ್ತದೆ ಎಂದು ಅವರ ಪತ್ನಿ ದೂರಿದ್ದಾರೆ.

ಭೀಮಾ ಕೋರೆಗಾಂವ್ ಹಿಂಸಾಚಾರ ಪ್ರಕರಣದಲ್ಲಿ ಪ್ರಸ್ತುತ ನವೀ ಮುಂಬಯಿಯ ತಾಲೋಜ ಜೈಲಿನಲ್ಲಿರುವ ತೆಲುಗು ಕವಿ ಮತ್ತು ಹೋರಾಟಗಾರ ವರವರ ರಾವ್‌ 2018ರಿಂದ ಜೈಲಿನಲ್ಲಿದ್ದಾರೆ. ಜೈಲಿನಲ್ಲಿ ಕೋವಿಡ್ -19 ಗೆ ಒಳಗಾಗುವ ಸಾಧ್ಯತೆಯನ್ನು ಉಲ್ಲೇಖಿಸಿ ರಾವ್ ಅವರ ಮಧ್ಯಂತರ ಜಾಮೀನು ಅರ್ಜಿಯನ್ನು ಜೂನ್ 27 ರಂದು ವಿಶೇಷ ನ್ಯಾಯಾಲಯ ತಿರಸ್ಕರಿಸಿದೆ.

“ರಾಜ್ಯ ಅವರನ್ನು ಕೊಲ್ಲಲು ಪ್ರಯತ್ನಿಸುತ್ತಿದೆ. ಅವರ ಮೆದುಳಿಗೆ ಹಾನಿಯಾಗುತ್ತಿದೆ. ಈ ಸಮಯದಲ್ಲಿ ನಮ್ಮ ಏಕೈಕ ಬೇಡಿಕೆಯೆಂದರೆ ಅವರಿಗೆ ವೈದ್ಯಕೀಯ ಆರೈಕೆ ನೀಡುವುದು ಇಲ್ಲವೇ ಜಾಮೀನು ನೀಡಿ ಅವರನ್ನು ಕುಟುಂಬಕ್ಕೆ ನೀಡುವುದು. ನಾವು ಅವರನ್ನು ನೋಡಿಕೊಳ್ಳುತ್ತೇವೆ. ಭಾರತದ ಸಂವಿಧಾನವು ಪ್ರತಿಯೊಬ್ಬರಿಗೂ ಬದುಕುವ ಹಕ್ಕನ್ನು ನೀಡುತ್ತದೆ. ವರವರ ರಾವ್ ಅವರ ಜೀವನ ಅಪಾಯದಲ್ಲಿದೆ. ದಯವಿಟ್ಟು ಅವರನ್ನು ಜೈಲಿನಲ್ಲಿ ಕೊಲ್ಲಬೇಡಿ” ಎಂದು ರಾವ್ ಅವರ ಸೋದರಳಿಯ ಎನ್ ವೇಣುಗೋಪಾಲ್ ರಾವ್ ಹೇಳಿದ್ದಾರೆ.

ಕುಟುಂಬ ಸದಸ್ಯರ ಪ್ರಕಾರ, ರಾವ್ ಅವರನ್ನು ಮೇ 28, 2020 ರಂದು ಪ್ರಜ್ಞಾಹೀನ ಸ್ಥಿತಿಯಲ್ಲಿದ್ದಾಗ ತಲೋಜಾ ಜೈಲಿನಿಂದ ಜೆಜೆ ಆಸ್ಪತ್ರೆಗೆ ಸ್ಥಳಾಂತರಿಸಿದಾಗಿನಿಂದ ಅವರ ಆರೋಗ್ಯ ಸ್ಥಿತಿ ಹದಗೆಟ್ಟಿದೆ. ಅವರನ್ನು ಆಸ್ಪತ್ರೆಯಿಂದ ಬಿಡುಗಡೆ ಮಾಡಿ ಮೂರು ದಿನಗಳ ನಂತರ ಜೈಲಿಗೆ ಕಳುಹಿಸಲಾಗಿದ್ದರೂ ಸಹ, ಅಲ್ಲಿ ಅವರ ಆರೋಗ್ಯದಲ್ಲಿ ಯಾವುದೇ ಸುಧಾರಣೆಯಾಗಿಲ್ಲ ಮತ್ತು ಅವರಿಗೆ ಇನ್ನೂ ತುರ್ತು ಆರೋಗ್ಯ ರಕ್ಷಣೆಯ ಅವಶ್ಯಕತೆಯಿದೆ ಎಂದು ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದ್ದಾರೆ.

1969 ರಿಂದ ಪ್ರತ್ಯೇಕ ತೆಲಂಗಾಣ ರಾಜ್ಯಕ್ಕಾಗಿ ನಡೆದ ಹೋರಾಟದಲ್ಲಿ ರಾವ್‌ ಮುಂಚೂಣಿಯಲ್ಲಿದ್ದಾರೆ. ಆದರೆ ತೆಲಂಗಾಣ ಮುಖ್ಯಮಂತ್ರಿ ಕೆ ಚಂದ್ರಶೇಖರ್ ರಾವ್ ಅಥವಾ ಸರ್ಕಾರದ ಯಾವುದೇ ಅಧಿಕಾರಿಗಳು ಕುಟುಂಬದ ಮನವಿಗೆ ಸ್ಪಂದಿಸಿಲ್ಲ ಎಂದು ರಾವ್ ಪತ್ನಿ ಹೇಮಲತಾ ದೂರಿದ್ದಾರೆ.

ಡಿಸೆಂಬರ್ 29, 2017 ರಂದು ಪುಣೆಯ ಭೀಮಾ ಕೋರೆಗಾಂವ್ ಗ್ರಾಮದಲ್ಲಿ ಎಲ್ಗಾರ್ ಪರಿಷತ್ ಕಾರ್ಯಕ್ರಮ ಆರೋಜಿಸಿ ಪ್ರಚೋದನಾಕಾರಿ ಭಾಷಣ ಮಾಡಿ, ಆ ಮೂಲಕ ದಲಿತರ ಮೇಲಿನ ಹಲ್ಲೆಗೆ ಕಾರಣರಾಗಿದ್ದಾರೆ. ಇದು ಕೇಂದ್ರ ಸರ್ಕಾರವನ್ನು ಉರುಳಿಸುವ ಕ್ರಿಮಿನಲ್ ಪಿತೂರಿಯ ಭಾಗವಾಗಿದೆ ಎಂಬ ಆರೋಪದ ಮೇಲೆ 11 ಜನರ ವಿರುದ್ಧ ಪ್ರಕರಣ ದಾಖಲಾಗಿತ್ತು. ಅವರಲ್ಲಿ ವರವರ ರಾವ್‌ ಕೂಡ ಒಬ್ಬರಾಗಿದ್ದಾರೆ.


ಇದನ್ನೂ ಓದಿ; ಭೀಮಾ ಕೋರೆಗಾಂವ್- ಕೇಂದ್ರದ ಹಸ್ತಕ್ಷೇಪ ದುರುದ್ದೇಶಪೂರಿತ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...