Homeಚಳವಳಿಜೈಲಿನಲ್ಲಿ ಕವಿ ವರವರ ರಾವ್‌ರನ್ನು ಕೊಲ್ಲಬೇಡಿ! ಕುಟುಂಬ ಸದಸ್ಯರ ಮನವಿ

ಜೈಲಿನಲ್ಲಿ ಕವಿ ವರವರ ರಾವ್‌ರನ್ನು ಕೊಲ್ಲಬೇಡಿ! ಕುಟುಂಬ ಸದಸ್ಯರ ಮನವಿ

- Advertisement -
- Advertisement -

ಭೀಮಾ ಕೋರೆಗಾಂವ್ ಪ್ರಕರಣದಲ್ಲಿ ಜೈಲಿನಲ್ಲಿರುವ ಖ್ಯಾತ ತೆಲುಗು ಕ್ರಾಂತಿಕಾರಿ ಕವಿ ವರವರ ರಾವ್ (79) ಅವರ ಜೀವಕ್ಕೆ ಅಪಾಯವಿದ್ದು, ದಯವಿಟ್ಟು ಅವರನ್ನು ಜೈಲಿನಲ್ಲಿ ಕೊಲ್ಲಬೇಡಿ ಎಂದು ಕುಟುಂಬವು ಮನವಿ ಮಾಡಿದೆ.

ಆನ್‌ಲೈನ್‌ನಲ್ಲಿ ಪತ್ರಿಕಾಗೊಷ್ಟಿ ನಡೆಸಿದ ಅವರ ಪತ್ನಿ ಹೇಮಲತಾ ಮಾತನಾಡಿ ರಾವ್ ಒಬ್ಬ ಶಿಕ್ಷಕ, ವಾಗ್ಮಿ ಮತ್ತು ಕವಿ. ತನ್ನ ಜೀವನದಲ್ಲಿ ಪದಗಳು ಅಥವಾ ಆಲೋಚನೆಗಳಿಗಾಗಿ ಎಂದಿಗೂ ಮುಗ್ಗರಿಸಿಲ್ಲ. ಆದರೆ ಈಗ ಅವರು ಮಾತನಾಡಲು ಪದಗಳಿಗಾಗಿ ಹುಡುಕುತ್ತಿರುವುದು ಭಯಾನಕವಾಗಿದೆ. ಕೂಡಲೇ ಅವರಿಗೆ ಚಿಕಿತ್ಸೆ ಮತ್ತು ಹಾರೈಕೆಯ ಅಗತ್ಯವಿದೆ ಎಂದು ಹೇಳಿದ್ದಾರೆ.

ಜುಲೈ 11 ರಂದು ಫೋನ್ ಮೂಲಕ ವರವರ ರಾವ್‌ರೊಂದಿಗೆ ಮಾತನಾಡಿದ ಸಮಯದಲ್ಲಿ, ಅವರು ಸ್ಪಷ್ಟವಾಗಿ ಮಾತನಾಡಿಲ್ಲ. ಅವರ ಆರೋಗ್ಯದ ಬಗೆಗಿ ಪ್ರಶ್ನೆಗಳಿಗೆ ಉತ್ತರಿಸಲಿಲ್ಲ. 70 ವರ್ಷಗಳ ಹಿಂದೆ ಮತ್ತು 40 ವರ್ಷಗಳ ಹಿಂದೆಯೇ ನಿಧನ ಹೊಂದಿರುವ ತಮ್ಮ ತಂದೆ ಮತ್ತು ತಾಯಿಯ ಅಂತ್ಯಕ್ರಿಯೆಯ ಬಗ್ಗೆ ಒಂದು ರೀತಿಯ ಭ್ರಮನಿರಸನ ಮತ್ತು ಭ್ರಮೆಯ ಮಾತುಕತೆ ನಡೆಸಿದ್ದಾರೆ. ಅಲ್ಲದೇ ಮಾತನಾಡಲು ಪದಗಳಿಗಾಗಿ ಅವರು ಹುಡುಕಾಡುತ್ತಿದ್ದರು. ಇದೆಲ್ಲವೂ ಅವರ ಆರೋಗ್ಯ ಸಂಪೂರ್ಣ ಹದಗೆಟ್ಟಿರುವುದನ್ನು ತೋರಿಸುತ್ತದೆ ಎಂದು ಅವರ ಪತ್ನಿ ದೂರಿದ್ದಾರೆ.

ಭೀಮಾ ಕೋರೆಗಾಂವ್ ಹಿಂಸಾಚಾರ ಪ್ರಕರಣದಲ್ಲಿ ಪ್ರಸ್ತುತ ನವೀ ಮುಂಬಯಿಯ ತಾಲೋಜ ಜೈಲಿನಲ್ಲಿರುವ ತೆಲುಗು ಕವಿ ಮತ್ತು ಹೋರಾಟಗಾರ ವರವರ ರಾವ್‌ 2018ರಿಂದ ಜೈಲಿನಲ್ಲಿದ್ದಾರೆ. ಜೈಲಿನಲ್ಲಿ ಕೋವಿಡ್ -19 ಗೆ ಒಳಗಾಗುವ ಸಾಧ್ಯತೆಯನ್ನು ಉಲ್ಲೇಖಿಸಿ ರಾವ್ ಅವರ ಮಧ್ಯಂತರ ಜಾಮೀನು ಅರ್ಜಿಯನ್ನು ಜೂನ್ 27 ರಂದು ವಿಶೇಷ ನ್ಯಾಯಾಲಯ ತಿರಸ್ಕರಿಸಿದೆ.

“ರಾಜ್ಯ ಅವರನ್ನು ಕೊಲ್ಲಲು ಪ್ರಯತ್ನಿಸುತ್ತಿದೆ. ಅವರ ಮೆದುಳಿಗೆ ಹಾನಿಯಾಗುತ್ತಿದೆ. ಈ ಸಮಯದಲ್ಲಿ ನಮ್ಮ ಏಕೈಕ ಬೇಡಿಕೆಯೆಂದರೆ ಅವರಿಗೆ ವೈದ್ಯಕೀಯ ಆರೈಕೆ ನೀಡುವುದು ಇಲ್ಲವೇ ಜಾಮೀನು ನೀಡಿ ಅವರನ್ನು ಕುಟುಂಬಕ್ಕೆ ನೀಡುವುದು. ನಾವು ಅವರನ್ನು ನೋಡಿಕೊಳ್ಳುತ್ತೇವೆ. ಭಾರತದ ಸಂವಿಧಾನವು ಪ್ರತಿಯೊಬ್ಬರಿಗೂ ಬದುಕುವ ಹಕ್ಕನ್ನು ನೀಡುತ್ತದೆ. ವರವರ ರಾವ್ ಅವರ ಜೀವನ ಅಪಾಯದಲ್ಲಿದೆ. ದಯವಿಟ್ಟು ಅವರನ್ನು ಜೈಲಿನಲ್ಲಿ ಕೊಲ್ಲಬೇಡಿ” ಎಂದು ರಾವ್ ಅವರ ಸೋದರಳಿಯ ಎನ್ ವೇಣುಗೋಪಾಲ್ ರಾವ್ ಹೇಳಿದ್ದಾರೆ.

ಕುಟುಂಬ ಸದಸ್ಯರ ಪ್ರಕಾರ, ರಾವ್ ಅವರನ್ನು ಮೇ 28, 2020 ರಂದು ಪ್ರಜ್ಞಾಹೀನ ಸ್ಥಿತಿಯಲ್ಲಿದ್ದಾಗ ತಲೋಜಾ ಜೈಲಿನಿಂದ ಜೆಜೆ ಆಸ್ಪತ್ರೆಗೆ ಸ್ಥಳಾಂತರಿಸಿದಾಗಿನಿಂದ ಅವರ ಆರೋಗ್ಯ ಸ್ಥಿತಿ ಹದಗೆಟ್ಟಿದೆ. ಅವರನ್ನು ಆಸ್ಪತ್ರೆಯಿಂದ ಬಿಡುಗಡೆ ಮಾಡಿ ಮೂರು ದಿನಗಳ ನಂತರ ಜೈಲಿಗೆ ಕಳುಹಿಸಲಾಗಿದ್ದರೂ ಸಹ, ಅಲ್ಲಿ ಅವರ ಆರೋಗ್ಯದಲ್ಲಿ ಯಾವುದೇ ಸುಧಾರಣೆಯಾಗಿಲ್ಲ ಮತ್ತು ಅವರಿಗೆ ಇನ್ನೂ ತುರ್ತು ಆರೋಗ್ಯ ರಕ್ಷಣೆಯ ಅವಶ್ಯಕತೆಯಿದೆ ಎಂದು ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದ್ದಾರೆ.

1969 ರಿಂದ ಪ್ರತ್ಯೇಕ ತೆಲಂಗಾಣ ರಾಜ್ಯಕ್ಕಾಗಿ ನಡೆದ ಹೋರಾಟದಲ್ಲಿ ರಾವ್‌ ಮುಂಚೂಣಿಯಲ್ಲಿದ್ದಾರೆ. ಆದರೆ ತೆಲಂಗಾಣ ಮುಖ್ಯಮಂತ್ರಿ ಕೆ ಚಂದ್ರಶೇಖರ್ ರಾವ್ ಅಥವಾ ಸರ್ಕಾರದ ಯಾವುದೇ ಅಧಿಕಾರಿಗಳು ಕುಟುಂಬದ ಮನವಿಗೆ ಸ್ಪಂದಿಸಿಲ್ಲ ಎಂದು ರಾವ್ ಪತ್ನಿ ಹೇಮಲತಾ ದೂರಿದ್ದಾರೆ.

ಡಿಸೆಂಬರ್ 29, 2017 ರಂದು ಪುಣೆಯ ಭೀಮಾ ಕೋರೆಗಾಂವ್ ಗ್ರಾಮದಲ್ಲಿ ಎಲ್ಗಾರ್ ಪರಿಷತ್ ಕಾರ್ಯಕ್ರಮ ಆರೋಜಿಸಿ ಪ್ರಚೋದನಾಕಾರಿ ಭಾಷಣ ಮಾಡಿ, ಆ ಮೂಲಕ ದಲಿತರ ಮೇಲಿನ ಹಲ್ಲೆಗೆ ಕಾರಣರಾಗಿದ್ದಾರೆ. ಇದು ಕೇಂದ್ರ ಸರ್ಕಾರವನ್ನು ಉರುಳಿಸುವ ಕ್ರಿಮಿನಲ್ ಪಿತೂರಿಯ ಭಾಗವಾಗಿದೆ ಎಂಬ ಆರೋಪದ ಮೇಲೆ 11 ಜನರ ವಿರುದ್ಧ ಪ್ರಕರಣ ದಾಖಲಾಗಿತ್ತು. ಅವರಲ್ಲಿ ವರವರ ರಾವ್‌ ಕೂಡ ಒಬ್ಬರಾಗಿದ್ದಾರೆ.


ಇದನ್ನೂ ಓದಿ; ಭೀಮಾ ಕೋರೆಗಾಂವ್- ಕೇಂದ್ರದ ಹಸ್ತಕ್ಷೇಪ ದುರುದ್ದೇಶಪೂರಿತ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶಾಲೆ, ಪೂಜಾ ಸ್ಥಳ, ಬಸ್ ನಿಲ್ದಾಣಗಳ ಬಳಿ ಇರುವ 717 ಮದ್ಯದಂಗಡಿಗಳನ್ನು ಮುಚ್ಚಲು ತಮಿಳುನಾಡು ಸಿಎಂ ಜೋಸೆಫ್ ವಿಜಯ್ ಆದೇಶ 

ಅಧಿಕಾರ ವಹಿಸಿಕೊಂಡ ನಂತರ ತಮ್ಮ ಮೊದಲ ಪ್ರಮುಖ ಆಡಳಿತಾತ್ಮಕ ನಿರ್ದೇಶನದಲ್ಲಿ, ಸಿ. ಜೋಸೆಫ್ ವಿಜಯ್ ಸೋಮವಾರ, ತಮಿಳುನಾಡು ಸರ್ಕಾರವು ಪೂಜಾ ಸ್ಥಳಗಳು, ಶಿಕ್ಷಣ ಸಂಸ್ಥೆಗಳು ಮತ್ತು ಬಸ್ ನಿಲ್ದಾಣಗಳಿಂದ 500 ಮೀಟರ್ ಒಳಗೆ...

FACT CHECK: ಭಾರತೀಯರು ಚಿನ್ನ ಖರೀದಿಸಬೇಡಿ ಎಂದು 1967ರಲ್ಲೇ ಇಂದಿರಾ ಗಾಂಧಿ ಹೇಳಿದ್ರಾ?

ಪ್ರಧಾನಿ ನರೇಂದ್ರ ಮೋದಿಯವರು ಇತ್ತೀಚೆಗೆ ತೆಲಂಗಾಣದ ಸಿಕಂದರಾಬಾದ್ ರ‍್ಯಾಲಿಯಲ್ಲಿ ಮಾತನಾಡುತ್ತಾ, ಆರ್ಥಿಕ ಬಿಕ್ಕಟ್ಟು ತಪ್ಪಿಸಲು "ಒಂದು ವರ್ಷ ಚಿನ್ನ ಖರೀದಿಸಬೇಡಿ" ಎಂದು ಜನರಲ್ಲಿ ಮನವಿ ಮಾಡಿದ್ದರು. ಇದರ ಬೆನ್ನಲ್ಲೇ, 1967ರಲ್ಲಿ ಅಂದಿನ ಪ್ರಧಾನಿ...

ಪಶ್ಚಿಮ ಬಂಗಾಳ| ಧ್ವನಿವರ್ಧಕಗಳ ನಿಯಂತ್ರಣಕ್ಕೆ ಆದೇಶಿಸಿದ ನೂತನ ಸಿಎಂ ಅಧಿಕಾರಿ; ಧಾರ್ಮಿಕ ಸಭೆ ನೆಪದಲ್ಲಿ ರಸ್ತೆ ತಡೆಗೆ ನಿಷೇಧ

ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ನೇತೃತ್ವದ ಸರ್ಕಾರವು ಧಾರ್ಮಿಕ ಸ್ಥಳಗಳಲ್ಲಿ ಧ್ವನಿವರ್ಧಕಗಳ ಬಳಕೆಯನ್ನು ನಿಯಂತ್ರಿಸಲು ಮತ್ತು ಪ್ರಾರ್ಥನೆ ಅಥವಾ ಧಾರ್ಮಿಕ ಸಭೆ ನೆಪದಲ್ಲಿ ಸಾರ್ವಜನಿಕ ರಸ್ತೆಗಳನ್ನು ನಿರ್ಬಂಧಿಸದಂತೆ ನೋಡಿಕೊಳ್ಳಲು ಪೊಲೀಸ್ ಅಧಿಕಾರಿಗಳಿಗೆ ಹೊಸ ಸೂಚನೆಗಳನ್ನು...

ರಾಜಸ್ಥಾನದಲ್ಲಿ ನೀಟ್‌-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ; ಸಿಬಿಐ ತನಿಖೆಗೆ ಆದೇಶಿಸಿದ ಸರ್ಕಾರ

ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ ದಿನಾಂಕಗಳಲ್ಲಿ ಮರು ಪರೀಕ್ಷೆಯನ್ನು ನಡೆಸಲಾಗುವುದು, ಪರೀಕ್ಷೆಗೆ...

ಇತ್ಯರ್ಥವಾಗದ ಚುನಾವಣಾ ತಕರಾರು : ಮತ ಹಾಕಿದ ಜನರಿಗೆ ದಿನಕ್ಕೊಬ್ಬ ಶಾಸಕ

ರಾಜ್ಯದಲ್ಲಿ ಪ್ರಸ್ತುತ ಆಡಳಿತ ನಡೆಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಮೂರು ವರ್ಷಗಳನ್ನು ಪೂರೈಸಿದೆ. ಚುನಾವಣೆ ನಡೆಯಲು ಇನ್ನು ಎರಡು ವರ್ಷಗಳು ಬಾಕಿಯಿದೆ. ಅಂದರೆ, ಸರ್ಕಾರದ ಐದು ವರ್ಷಗಳ ಅವಧಿಯಲ್ಲಿ ಮುಕ್ಕಾಲು...

“ಸನಾತನವನ್ನು ನಿರ್ಮೂಲನೆ ಮಾಡಬೇಕು…”; ವಿಧಾನಸಭೆಯಲ್ಲೇ ತನ್ನ ಹಿಂದಿನ ಹೇಳಿಕೆ ಪುನರುಚ್ಚರಿಸಿದ ಉದಯನಿಧಿ ಸ್ಟಾಲಿನ್

ತಮಿಳುನಾಡು ವಿರೋಧ ಪಕ್ಷದ ನಾಯಕ ಮತ್ತು ಡಿಎಂಕೆ ನಾಯಕ ಉದಯನಿಧಿ ಸ್ಟಾಲಿನ್ ಮಂಗಳವಾರ ತಮಿಳುನಾಡು ವಿಧಾನಸಭೆಯಲ್ಲಿ ನಡೆದ ಅಧಿವೇಶನದಲ್ಲಿ, ಸನಾತನ ಧರ್ಮದ ನಿರ್ಮೂಲನೆಗೆ ಮತ್ತೊಮ್ಮೆ ಕರೆ ನೀಡಿದ್ದಾರೆ. ಸದನದಲ್ಲಿ ಮಾತನಾಡಿದ ಅವರು, "ಜನರನ್ನು ವಿಭಜಿಸುವ...

‘ಅಮೃತಕಾಲ’ದ ಸ್ವಪ್ನದಿಂದ ‘ಬಿಕ್ಕಟ್ಟಿನ ಕಾಲ’ಕ್ಕೆ: ಕಳಚಿಕೊಳ್ಳುತ್ತಿರುವ ಮೋದಿಯವರ ‘ಆತ್ಮನಿರ್ಭರ’ ಮುಖವಾಡ 

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗೂ ಮುನ್ನ ದೇಶವು ಎಲ್‌ಪಿಜಿ ಸಿಲಿಂಡರ್‌ಗಳ ಕೊರತೆಯಿಂದ ಬಳಲುತ್ತಿದ್ದಾಗ, ಬಿಜೆಪಿ ನಾಯಕರು ಮತ್ತು ಕೇಂದ್ರ ಸರ್ಕಾರದ ಮಂತ್ರಿಗಳು ಮೋದಿಯವರ ‘ದಯೆ’ಯಿಂದ ಭಾರತಕ್ಕೆ ಯಾವುದೇ...

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...