Homeಚಳವಳಿರೈತರನ್ನು ರಾಷ್ಟ್ರ ವಿರೋಧಿಗಳಂತೆ ಬಿಂಬಿಸಬೇಡಿ: ಮಾಧ್ಯಮಗಳಿಗೆ ಎಡಿಟರ್ಸ್ ಗಿಲ್ಡ್ ಸಲಹೆ

ರೈತರನ್ನು ರಾಷ್ಟ್ರ ವಿರೋಧಿಗಳಂತೆ ಬಿಂಬಿಸಬೇಡಿ: ಮಾಧ್ಯಮಗಳಿಗೆ ಎಡಿಟರ್ಸ್ ಗಿಲ್ಡ್ ಸಲಹೆ

ಟ್ವಿಟ್ಟರ್‌ ಬಳಕೆದಾರರು "ಮಾಧ್ಯಮಗಳಿಗೆ ಸಲಹೆ ನೀಡಿದ್ದು ಸಾಕು, ಇನ್ನಾದರೂ ಶಿಕ್ಷೆ ನೀಡಿ" ಎಂದು ಎಡಿಟರ್ಸ್ ಗಿಲ್ಡ್ ಆಫ್ ಇಂಡಿಯಾದ ಕಾಲೆಳೆದಿದ್ದಾರೆ.

- Advertisement -
- Advertisement -

ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಮೂರು ವಿವಾದಾತ್ಮಕ ಕೃಷಿ ಕಾನೂನುಗಳ ವಿರುದ್ಧ ಪ್ರತಿಭಟನೆ ನಡೆಸುತ್ತಿರುವ ರೈತರನ್ನು ‘ಖಲಿಸ್ತಾನಿಗಳು’ ಮತ್ತು ರಾಷ್ಟ್ರ ವಿರೋಧಿಗಳು ಎಂದು ಲೇಬಲ್ ಮಾಡದಂತೆ ಎಡಿಟರ್ಸ್ ಗಿಲ್ಡ್ ಆಫ್ ಇಂಡಿಯಾ ಮಾಧ್ಯಮಗಳಿಗೆ ಸಲಹೆ ನೀಡಿದೆ.

ಪ್ರಜಾಪ್ರಭುತ್ವದ ನಾಲ್ಕನೇ ಅಂಗವಾದ ಮಾಧ್ಯಮ, ಯಾವುದೇ ಭಿನ್ನಾಭಿಪ್ರಾಯವನ್ನು ಅವಹೇಳನ ಮಾಡುವಂತಹ ನಿರೂಪಣೆಗೆ ಸಹಕರಿಸಬಾರದು ಎಂದು ತನ್ನ ಹೇಳಿಕೆಯಲ್ಲಿ ತಿಳಿಸಿದೆ.

ರೈತ ಪ್ರತಿಭಟನಾಕಾರರನ್ನು, ಅದರಲ್ಲೂ ಹೆಚ್ಚಾಗಿ ಪಂಜಾಬ್‌ನ ಸಿಖ್ ಸಮುದಾಯದ ರೈತರನ್ನು ಪ್ರತ್ಯೇಕತಾವಾದಿಗಳಾದ ಖಲಿಸ್ತಾನಿಗಳು ಮತ್ತು ರಾಷ್ಟ್ರ ವಿರೋಧಿಗಳು ಎಂದು ಸುದ್ದಿ ವಾಹಿನಿಗಳು ಸೇರಿದಂತೆ ಕೆಲವು ಮಾಧ್ಯಮಗಳು ಹೇಳುತ್ತಿವೆ. ಈ ಹಿನ್ನೆಲೆಯಲ್ಲಿ ಎಡಿಟರ್ಸ್ ಗಿಲ್ಡ್ ಆಫ್ ಇಂಡಿಯಾ ಇಂದು ಮಾಧ್ಯಮಗಳಿಗೆ ಸಲಹೆ ನೀಡಿದೆ.

ಇದನ್ನೂ ಓದಿ: ಅರ್ನಾಬ್ ಬಂಧನ ಖಂಡಿಸಿ ಟ್ರೋಲ್‌ಗೊಳಗಾದ ಬೆಂಗಳೂರು ಎಡಿಟರ್ಸ್‌ ಗಿಲ್ಡ್!

ದೆಹಲಿ ಗಡಿಯಲ್ಲಿ ನಡೆಯುತ್ತಿರುವ ಪ್ರತಿಭಟನೆ ಕುರಿತ ಸುದ್ದಿ ಪ್ರಸಾರದ ಬಗ್ಗೆ ಕಳವಳ ವ್ಯಕ್ತಪಡಿಸಿರುವ  ಸಂಪಾದಕರ ಸಂಘ, ಯಾವುದೇ ಸಾಕ್ಷಿಗಳು ಮತ್ತು ಪುರಾವೆಗಳಿಲ್ಲದೆ ಪ್ರತಿಭಟನೆಗಳಲ್ಲಿ ಭಾಗವಹಿಸುತ್ತಿರುವವರನ್ನು ಕೆಲವು ಮಾಧ್ಯಮಗಳು ಅವರನ್ನು ‘ಖಲಿಸ್ತಾನಿಗಳು’, ‘ರಾಷ್ಟ್ರ ವಿರೋಧಿಗಳು’ ಎಂಬ ಪದ ಬಳಸುತ್ತಿವೆ ಎಂದಿದೆ.

“ಇಂತಹ ಪದ ಬಳಕೆ ಮತ್ತು ವಿವರಣೆ ಜವಾಬ್ದಾರಿಯುತ ಮತ್ತು ನೈತಿಕ ಪತ್ರಿಕೋದ್ಯಮದ ಸಿದ್ಧಾಂತಗಳಿಗೆ ವಿರುದ್ಧವಾಗಿದೆ. ಇಂತಹ ಕ್ರಮಗಳು ಮಾಧ್ಯಮದ ವಿಶ್ವಾಸಾರ್ಹತೆಗೆ ಧಕ್ಕೆಯುಂಟುಮಾಡುತ್ತವೆ” ಎಂದು ಹೇಳಿದೆ.

ಇದನ್ನೂ ಓದಿ: ಮುನ್ಸೂಚನೆಯಿಲ್ಲದೆ ’ಕಾಶ್ಮೀರ ಟೈಮ್ಸ್’‌‌ ಕಚೇರಿಗೆ ಸೀಲ್- ಎಡಿಟರ್ಸ್ ಗಿಲ್ಡ್‌ ಖಂಡನೆ

ರೈತರ ಪ್ರತಿಭಟನೆಯನ್ನು ವರದಿ ಮಾಡುವವರು “ಸಾಂವಿಧಾನಿಕ ಹಕ್ಕುಗಳ ಮೂಲಕ ಪ್ರತಿಭಟನೆ ಮಾಡುವವರ ವಿರುದ್ಧ ಪಕ್ಷಪಾತ ಮಾಡದೇ, ನ್ಯಾಯಯುತ, ವಸ್ತುನಿಷ್ಠವಾಗಿ ವರದಿ ಮಾಡಬೇಕು ಎಂದು ಮಾಧ್ಯಮ ಸಂಸ್ಥೆಗಳಿಗೆ ಸಲಹೆ ನೀಡಿದೆ.

ಪ್ರತಿಭಟನೆ ಶುರುವಾಗಿ ಇಷ್ಟು ದಿನಗಳಾದ ಮೇಲೆ, ಅದರಲ್ಲೂ ಮಾಧ್ಯಮಗಳು ರೈತರನ್ನು ಖಲಿಸ್ತಾನಿಗಳು, ರಾಷ್ಟ್ರ ವಿರೋಧಿಗಳು ಎಂದೆಲ್ಲಾ ಕರೆದ ಮೇಲೆ ಇಂತಹ ಸಲಹೆಯ ಅವಶ್ಯಕತೆ ಇರಲಿಲ್ಲ ಎಂದು ಎಡಿಟರ್ಸ್ ಗಿಲ್ಡ್‌ ವಿರುದ್ಧ ಸಾಮಾಜಿಕ ಜಾಲತಾಣಗಳಲ್ಲಿ ಟೀಕೆ ವ್ಯಕ್ತವಾಗುತ್ತಿದೆ.

ಹಲವು ಮಂದಿ ಎಡಿಟರ್ಸ್ ಗಿಲ್ಡ್ ಆಫ್ ಇಂಡಿಯಾ ಟ್ವಿಟ್ ಅನ್ನು ರಿಟ್ವಿಟ್ ಮಾಡಿ, “ನೀವು ಚಲನಚಿತ್ರಗಳಲ್ಲಿ ಎಲ್ಲಾ ಮುಗಿದ ಮೇಲೆ ಬರುವ ಪೊಲೀಸರಂತೆ, ಯಾವುದೇ ಪ್ರಯೋಜನ ಇಲ್ಲ” ಎಂದಿದ್ದಾರೆ.

ಮತ್ತೊಬ್ಬ ಟ್ವಿಟ್ಟರ್‌ ಬಳಕೆದಾರರು “ಮಾಧ್ಯಮಗಳಿಗೆ ಸಲಹೆ ನೀಡಿದ್ದು ಸಾಕು, ಇನ್ನಾದರೂ ಶಿಕ್ಷೆ ನೀಡಿ” ಎಂದು ಎಡಿಟರ್ಸ್ ಗಿಲ್ಡ್ ಆಫ್ ಇಂಡಿಯಾದ ಕಾಲೆಳೆದಿದ್ದಾರೆ.

ಕೆಲವು ಮಾಧ್ಯಮಗಳು ರೈತರ ಪ್ರತಿಭಟನೆ ಶುರುವಾದಾಗಿನಿಂದಲೂ, ರೈತರನ್ನು ಖಲಿಸ್ತಾನಿಗಳು ಎಂದು ಬಿಂಬಿಸುತ್ತಿದ್ದಾರೆ. ಪ್ರತಿಭಟನೆಯಲ್ಲಿ ಪಂಜಾಬ್, ರಾಜಸ್ತಾನ ಮೂಲದ ರೈತರು ಹೆಚ್ಚಾಗಿ ಕಂಡು ಬರುತ್ತಿರುವುದು ಇದಕ್ಕೆ ಕಾರಣ. ಇಷ್ಟೇ ಅಲ್ಲದೇ ರೈತ ಪ್ರತಿಭಟನೆಯಲ್ಲಿ ಇರುವವರು ರೈತರಲ್ಲ, ಅವರು ಬಡವರಲ್ಲ, ಪೊಲೀಸರನ್ನು ರೈತರೇ ಹೊಡೆಯುತ್ತಿದ್ದಾರೆ ಎಂಬಂತಹ ನಕಲಿ ಸುದ್ದಿಗಳನ್ನು ಪ್ರಚುರ ಪಡಿಸುತ್ತಿದ್ದಾರೆ. ಇಂತಹವರ ವಿರುದ್ಧ ಕ್ರಮ ಕೈಗೊಳ್ಳದೇ, ಕೆವಲ ಸಲಹೆ ನಿಡಲು ಮಾತ್ರ ಸೀಮಿತವಾಗಿರುವ ಎಡಿಟರ್ಸ್ ಗಿಲ್ಡ್ ಆಫ್ ಇಂಡಿಯಾ  ಮೇಲೆ ಸಾಮಾಜಿಕ ಹೋರಾಟಗಾರರು, ರೈತ ಮುಖಂಡರು ಆಕ್ರೋಶ ಹೊರಹಾಕಿದ್ದಾರೆ.


ಇದನ್ನೂ ಓದಿ: ರೈತರ ಪರವಾಗಿ ನಿಲ್ಲುವುದನ್ನೇ ರಾಜಕಾರಣವೆನ್ನುವುದಾದರೆ, ಹೌದು ನಾವು ತಪ್ಪಿತಸ್ಥರೇ..!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...

‘ಮೋದಿ ಟ್ರಂಪ್‌ಗೆ ಕರೆ ಮಾಡದ ಕಾರಣ ಭಾರತ-ಯುಎಸ್ ವ್ಯಾಪಾರ ಒಪ್ಪಂದ ನಡೆಯಲಿಲ್ಲ’: ಹೊವಾರ್ಡ್ ಲುಟ್ನಿಕ್ 

ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಸರಿಯಾದ ಸಮಯಕ್ಕೆ ಕರೆ ಮಾಡದ ಕಾರಣ ಭಾರತದೊಂದಿಗಿನ ವ್ಯಾಪಾರ ಒಪ್ಪಂದ ನಡೆಯಲಿಲ್ಲ ಎಂದು ಅಮೆರಿಕದ ವಾಣಿಜ್ಯ ಕಾರ್ಯದರ್ಶಿ ಹೊವಾರ್ಡ್ ಲುಟ್ನಿಕ್...

‘ರೈಲ್ವೆ ಸಚಿವಾಲಯವನ್ನು ವೈಯಕ್ತಿಕ ಆಸ್ತಿಯಾಗಿ ಬಳಸಿಕೊಳ್ಳಲಾಗಿದೆ’: ಲಾಲು ಮತ್ತು ಕುಟುಂಬದ ವಿರುದ್ಧ ದೆಹಲಿ ನ್ಯಾಯಾಲಯ ಆರೋಪ

ನವದೆಹಲಿ: ಉದ್ಯೋಗಕ್ಕಾಗಿ ಭೂಮಿ ಹಗರಣದಲ್ಲಿ ಆರ್‌ಜೆಡಿ ಮುಖ್ಯಸ್ಥ ಮತ್ತು ಮಾಜಿ ರೈಲ್ವೆ ಸಚಿವ ಲಾಲು ಪ್ರಸಾದ್ ಯಾದವ್, ಅವರ ಕುಟುಂಬದ ಸದಸ್ಯರು ಮತ್ತು ಇತರರ ವಿರುದ್ಧ ದೆಹಲಿ ನ್ಯಾಯಾಲಯ ಗಂಭೀರ ಆರೋಪಗಳನ್ನು ಮಾಡಿದೆ.  ಯಾದವ್...

‘ಕೇರಳದ ಮಲಯಾಳಂ ಮಸೂದೆಯನ್ನು ವಿರೋಧಿಸಲು ಸಾಧ್ಯವಿರುವ ಎಲ್ಲವನ್ನೂ ಮಾಡುತ್ತೇವೆ’: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕನ್ನಡ ಮಾಧ್ಯಮ ಶಾಲೆಗಳಲ್ಲಿಯೂ ಮಲಯಾಳಂ ಅನ್ನು ಪ್ರಥಮ ಭಾಷೆಯನ್ನಾಗಿ ಮಾಡುವ ಕೇರಳದ ಪ್ರಸ್ತಾವಿತ ಕಾನೂನನ್ನು ವಿರೋಧಿಸಲು ಕರ್ನಾಟಕ "ಸಾಧ್ಯವಾದಷ್ಟು ಪ್ರಯತ್ನಿಸುತ್ತದೆ" ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.   ಪ್ರಸ್ತಾವಿತ ಮಲಯಾಳಂ ಭಾಷಾ ಮಸೂದೆಯು "ಕೇರಳದ...

ಜಾರ್ಖಂಡ್‌ನಲ್ಲಿ ಮತ್ತೊಂದು ಗುಂಪುಹತ್ಯೆ: ದನ ಕಳ್ಳತನದ ಶಂಕೆಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಬುಧವಾರ ದನಗಳನ್ನು ಕದ್ದಿದ್ದಾನೆ ಎಂಬ ಶಂಕೆಯಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಅಪರಿಚಿತ ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪಿಟಿಐ ವರದಿ ಮಾಡಿದೆ. ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ...

ನ್ಯಾಷನಲ್ ಹೆರಾಲ್ಡ್ ಜಾಹೀರಾತು ವಿವಾದ: ಹಣಕಾಸಿನ ದಾಖಲೆ ಕೇಳಿ ಡಿಕೆ ಸಹೋದರರಿಗೆ ನೋಟಿಸ್  

ಕಾಂಗ್ರೆಸ್ ನೇತೃತ್ವದ ಕರ್ನಾಟಕ ಸರ್ಕಾರದಿಂದ ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಬೇರೆ ಯಾವುದೇ ರಾಷ್ಟ್ರೀಯ ದಿನಪತ್ರಿಕೆಗಿಂತ ಹೆಚ್ಚಿನ ಜಾಹೀರಾತು ನಿಧಿ ದೊರೆತಿದೆ ಎಂದು ವರದಿಯಾಗಿದೆ, ಇದು ಸಾರ್ವಜನಿಕ ಹಣದ ಬಳಕೆಯ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ....