Homeಚಳವಳಿರೈತರನ್ನು ರಾಷ್ಟ್ರ ವಿರೋಧಿಗಳಂತೆ ಬಿಂಬಿಸಬೇಡಿ: ಮಾಧ್ಯಮಗಳಿಗೆ ಎಡಿಟರ್ಸ್ ಗಿಲ್ಡ್ ಸಲಹೆ

ರೈತರನ್ನು ರಾಷ್ಟ್ರ ವಿರೋಧಿಗಳಂತೆ ಬಿಂಬಿಸಬೇಡಿ: ಮಾಧ್ಯಮಗಳಿಗೆ ಎಡಿಟರ್ಸ್ ಗಿಲ್ಡ್ ಸಲಹೆ

ಟ್ವಿಟ್ಟರ್‌ ಬಳಕೆದಾರರು "ಮಾಧ್ಯಮಗಳಿಗೆ ಸಲಹೆ ನೀಡಿದ್ದು ಸಾಕು, ಇನ್ನಾದರೂ ಶಿಕ್ಷೆ ನೀಡಿ" ಎಂದು ಎಡಿಟರ್ಸ್ ಗಿಲ್ಡ್ ಆಫ್ ಇಂಡಿಯಾದ ಕಾಲೆಳೆದಿದ್ದಾರೆ.

- Advertisement -
- Advertisement -

ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಮೂರು ವಿವಾದಾತ್ಮಕ ಕೃಷಿ ಕಾನೂನುಗಳ ವಿರುದ್ಧ ಪ್ರತಿಭಟನೆ ನಡೆಸುತ್ತಿರುವ ರೈತರನ್ನು ‘ಖಲಿಸ್ತಾನಿಗಳು’ ಮತ್ತು ರಾಷ್ಟ್ರ ವಿರೋಧಿಗಳು ಎಂದು ಲೇಬಲ್ ಮಾಡದಂತೆ ಎಡಿಟರ್ಸ್ ಗಿಲ್ಡ್ ಆಫ್ ಇಂಡಿಯಾ ಮಾಧ್ಯಮಗಳಿಗೆ ಸಲಹೆ ನೀಡಿದೆ.

ಪ್ರಜಾಪ್ರಭುತ್ವದ ನಾಲ್ಕನೇ ಅಂಗವಾದ ಮಾಧ್ಯಮ, ಯಾವುದೇ ಭಿನ್ನಾಭಿಪ್ರಾಯವನ್ನು ಅವಹೇಳನ ಮಾಡುವಂತಹ ನಿರೂಪಣೆಗೆ ಸಹಕರಿಸಬಾರದು ಎಂದು ತನ್ನ ಹೇಳಿಕೆಯಲ್ಲಿ ತಿಳಿಸಿದೆ.

ರೈತ ಪ್ರತಿಭಟನಾಕಾರರನ್ನು, ಅದರಲ್ಲೂ ಹೆಚ್ಚಾಗಿ ಪಂಜಾಬ್‌ನ ಸಿಖ್ ಸಮುದಾಯದ ರೈತರನ್ನು ಪ್ರತ್ಯೇಕತಾವಾದಿಗಳಾದ ಖಲಿಸ್ತಾನಿಗಳು ಮತ್ತು ರಾಷ್ಟ್ರ ವಿರೋಧಿಗಳು ಎಂದು ಸುದ್ದಿ ವಾಹಿನಿಗಳು ಸೇರಿದಂತೆ ಕೆಲವು ಮಾಧ್ಯಮಗಳು ಹೇಳುತ್ತಿವೆ. ಈ ಹಿನ್ನೆಲೆಯಲ್ಲಿ ಎಡಿಟರ್ಸ್ ಗಿಲ್ಡ್ ಆಫ್ ಇಂಡಿಯಾ ಇಂದು ಮಾಧ್ಯಮಗಳಿಗೆ ಸಲಹೆ ನೀಡಿದೆ.

ಇದನ್ನೂ ಓದಿ: ಅರ್ನಾಬ್ ಬಂಧನ ಖಂಡಿಸಿ ಟ್ರೋಲ್‌ಗೊಳಗಾದ ಬೆಂಗಳೂರು ಎಡಿಟರ್ಸ್‌ ಗಿಲ್ಡ್!

ದೆಹಲಿ ಗಡಿಯಲ್ಲಿ ನಡೆಯುತ್ತಿರುವ ಪ್ರತಿಭಟನೆ ಕುರಿತ ಸುದ್ದಿ ಪ್ರಸಾರದ ಬಗ್ಗೆ ಕಳವಳ ವ್ಯಕ್ತಪಡಿಸಿರುವ  ಸಂಪಾದಕರ ಸಂಘ, ಯಾವುದೇ ಸಾಕ್ಷಿಗಳು ಮತ್ತು ಪುರಾವೆಗಳಿಲ್ಲದೆ ಪ್ರತಿಭಟನೆಗಳಲ್ಲಿ ಭಾಗವಹಿಸುತ್ತಿರುವವರನ್ನು ಕೆಲವು ಮಾಧ್ಯಮಗಳು ಅವರನ್ನು ‘ಖಲಿಸ್ತಾನಿಗಳು’, ‘ರಾಷ್ಟ್ರ ವಿರೋಧಿಗಳು’ ಎಂಬ ಪದ ಬಳಸುತ್ತಿವೆ ಎಂದಿದೆ.

“ಇಂತಹ ಪದ ಬಳಕೆ ಮತ್ತು ವಿವರಣೆ ಜವಾಬ್ದಾರಿಯುತ ಮತ್ತು ನೈತಿಕ ಪತ್ರಿಕೋದ್ಯಮದ ಸಿದ್ಧಾಂತಗಳಿಗೆ ವಿರುದ್ಧವಾಗಿದೆ. ಇಂತಹ ಕ್ರಮಗಳು ಮಾಧ್ಯಮದ ವಿಶ್ವಾಸಾರ್ಹತೆಗೆ ಧಕ್ಕೆಯುಂಟುಮಾಡುತ್ತವೆ” ಎಂದು ಹೇಳಿದೆ.

ಇದನ್ನೂ ಓದಿ: ಮುನ್ಸೂಚನೆಯಿಲ್ಲದೆ ’ಕಾಶ್ಮೀರ ಟೈಮ್ಸ್’‌‌ ಕಚೇರಿಗೆ ಸೀಲ್- ಎಡಿಟರ್ಸ್ ಗಿಲ್ಡ್‌ ಖಂಡನೆ

ರೈತರ ಪ್ರತಿಭಟನೆಯನ್ನು ವರದಿ ಮಾಡುವವರು “ಸಾಂವಿಧಾನಿಕ ಹಕ್ಕುಗಳ ಮೂಲಕ ಪ್ರತಿಭಟನೆ ಮಾಡುವವರ ವಿರುದ್ಧ ಪಕ್ಷಪಾತ ಮಾಡದೇ, ನ್ಯಾಯಯುತ, ವಸ್ತುನಿಷ್ಠವಾಗಿ ವರದಿ ಮಾಡಬೇಕು ಎಂದು ಮಾಧ್ಯಮ ಸಂಸ್ಥೆಗಳಿಗೆ ಸಲಹೆ ನೀಡಿದೆ.

ಪ್ರತಿಭಟನೆ ಶುರುವಾಗಿ ಇಷ್ಟು ದಿನಗಳಾದ ಮೇಲೆ, ಅದರಲ್ಲೂ ಮಾಧ್ಯಮಗಳು ರೈತರನ್ನು ಖಲಿಸ್ತಾನಿಗಳು, ರಾಷ್ಟ್ರ ವಿರೋಧಿಗಳು ಎಂದೆಲ್ಲಾ ಕರೆದ ಮೇಲೆ ಇಂತಹ ಸಲಹೆಯ ಅವಶ್ಯಕತೆ ಇರಲಿಲ್ಲ ಎಂದು ಎಡಿಟರ್ಸ್ ಗಿಲ್ಡ್‌ ವಿರುದ್ಧ ಸಾಮಾಜಿಕ ಜಾಲತಾಣಗಳಲ್ಲಿ ಟೀಕೆ ವ್ಯಕ್ತವಾಗುತ್ತಿದೆ.

ಹಲವು ಮಂದಿ ಎಡಿಟರ್ಸ್ ಗಿಲ್ಡ್ ಆಫ್ ಇಂಡಿಯಾ ಟ್ವಿಟ್ ಅನ್ನು ರಿಟ್ವಿಟ್ ಮಾಡಿ, “ನೀವು ಚಲನಚಿತ್ರಗಳಲ್ಲಿ ಎಲ್ಲಾ ಮುಗಿದ ಮೇಲೆ ಬರುವ ಪೊಲೀಸರಂತೆ, ಯಾವುದೇ ಪ್ರಯೋಜನ ಇಲ್ಲ” ಎಂದಿದ್ದಾರೆ.

ಮತ್ತೊಬ್ಬ ಟ್ವಿಟ್ಟರ್‌ ಬಳಕೆದಾರರು “ಮಾಧ್ಯಮಗಳಿಗೆ ಸಲಹೆ ನೀಡಿದ್ದು ಸಾಕು, ಇನ್ನಾದರೂ ಶಿಕ್ಷೆ ನೀಡಿ” ಎಂದು ಎಡಿಟರ್ಸ್ ಗಿಲ್ಡ್ ಆಫ್ ಇಂಡಿಯಾದ ಕಾಲೆಳೆದಿದ್ದಾರೆ.

ಕೆಲವು ಮಾಧ್ಯಮಗಳು ರೈತರ ಪ್ರತಿಭಟನೆ ಶುರುವಾದಾಗಿನಿಂದಲೂ, ರೈತರನ್ನು ಖಲಿಸ್ತಾನಿಗಳು ಎಂದು ಬಿಂಬಿಸುತ್ತಿದ್ದಾರೆ. ಪ್ರತಿಭಟನೆಯಲ್ಲಿ ಪಂಜಾಬ್, ರಾಜಸ್ತಾನ ಮೂಲದ ರೈತರು ಹೆಚ್ಚಾಗಿ ಕಂಡು ಬರುತ್ತಿರುವುದು ಇದಕ್ಕೆ ಕಾರಣ. ಇಷ್ಟೇ ಅಲ್ಲದೇ ರೈತ ಪ್ರತಿಭಟನೆಯಲ್ಲಿ ಇರುವವರು ರೈತರಲ್ಲ, ಅವರು ಬಡವರಲ್ಲ, ಪೊಲೀಸರನ್ನು ರೈತರೇ ಹೊಡೆಯುತ್ತಿದ್ದಾರೆ ಎಂಬಂತಹ ನಕಲಿ ಸುದ್ದಿಗಳನ್ನು ಪ್ರಚುರ ಪಡಿಸುತ್ತಿದ್ದಾರೆ. ಇಂತಹವರ ವಿರುದ್ಧ ಕ್ರಮ ಕೈಗೊಳ್ಳದೇ, ಕೆವಲ ಸಲಹೆ ನಿಡಲು ಮಾತ್ರ ಸೀಮಿತವಾಗಿರುವ ಎಡಿಟರ್ಸ್ ಗಿಲ್ಡ್ ಆಫ್ ಇಂಡಿಯಾ  ಮೇಲೆ ಸಾಮಾಜಿಕ ಹೋರಾಟಗಾರರು, ರೈತ ಮುಖಂಡರು ಆಕ್ರೋಶ ಹೊರಹಾಕಿದ್ದಾರೆ.


ಇದನ್ನೂ ಓದಿ: ರೈತರ ಪರವಾಗಿ ನಿಲ್ಲುವುದನ್ನೇ ರಾಜಕಾರಣವೆನ್ನುವುದಾದರೆ, ಹೌದು ನಾವು ತಪ್ಪಿತಸ್ಥರೇ..!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...