Homeಚಳವಳಿರೈತರನ್ನು ರಾಷ್ಟ್ರ ವಿರೋಧಿಗಳಂತೆ ಬಿಂಬಿಸಬೇಡಿ: ಮಾಧ್ಯಮಗಳಿಗೆ ಎಡಿಟರ್ಸ್ ಗಿಲ್ಡ್ ಸಲಹೆ

ರೈತರನ್ನು ರಾಷ್ಟ್ರ ವಿರೋಧಿಗಳಂತೆ ಬಿಂಬಿಸಬೇಡಿ: ಮಾಧ್ಯಮಗಳಿಗೆ ಎಡಿಟರ್ಸ್ ಗಿಲ್ಡ್ ಸಲಹೆ

ಟ್ವಿಟ್ಟರ್‌ ಬಳಕೆದಾರರು "ಮಾಧ್ಯಮಗಳಿಗೆ ಸಲಹೆ ನೀಡಿದ್ದು ಸಾಕು, ಇನ್ನಾದರೂ ಶಿಕ್ಷೆ ನೀಡಿ" ಎಂದು ಎಡಿಟರ್ಸ್ ಗಿಲ್ಡ್ ಆಫ್ ಇಂಡಿಯಾದ ಕಾಲೆಳೆದಿದ್ದಾರೆ.

- Advertisement -
- Advertisement -

ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಮೂರು ವಿವಾದಾತ್ಮಕ ಕೃಷಿ ಕಾನೂನುಗಳ ವಿರುದ್ಧ ಪ್ರತಿಭಟನೆ ನಡೆಸುತ್ತಿರುವ ರೈತರನ್ನು ‘ಖಲಿಸ್ತಾನಿಗಳು’ ಮತ್ತು ರಾಷ್ಟ್ರ ವಿರೋಧಿಗಳು ಎಂದು ಲೇಬಲ್ ಮಾಡದಂತೆ ಎಡಿಟರ್ಸ್ ಗಿಲ್ಡ್ ಆಫ್ ಇಂಡಿಯಾ ಮಾಧ್ಯಮಗಳಿಗೆ ಸಲಹೆ ನೀಡಿದೆ.

ಪ್ರಜಾಪ್ರಭುತ್ವದ ನಾಲ್ಕನೇ ಅಂಗವಾದ ಮಾಧ್ಯಮ, ಯಾವುದೇ ಭಿನ್ನಾಭಿಪ್ರಾಯವನ್ನು ಅವಹೇಳನ ಮಾಡುವಂತಹ ನಿರೂಪಣೆಗೆ ಸಹಕರಿಸಬಾರದು ಎಂದು ತನ್ನ ಹೇಳಿಕೆಯಲ್ಲಿ ತಿಳಿಸಿದೆ.

ರೈತ ಪ್ರತಿಭಟನಾಕಾರರನ್ನು, ಅದರಲ್ಲೂ ಹೆಚ್ಚಾಗಿ ಪಂಜಾಬ್‌ನ ಸಿಖ್ ಸಮುದಾಯದ ರೈತರನ್ನು ಪ್ರತ್ಯೇಕತಾವಾದಿಗಳಾದ ಖಲಿಸ್ತಾನಿಗಳು ಮತ್ತು ರಾಷ್ಟ್ರ ವಿರೋಧಿಗಳು ಎಂದು ಸುದ್ದಿ ವಾಹಿನಿಗಳು ಸೇರಿದಂತೆ ಕೆಲವು ಮಾಧ್ಯಮಗಳು ಹೇಳುತ್ತಿವೆ. ಈ ಹಿನ್ನೆಲೆಯಲ್ಲಿ ಎಡಿಟರ್ಸ್ ಗಿಲ್ಡ್ ಆಫ್ ಇಂಡಿಯಾ ಇಂದು ಮಾಧ್ಯಮಗಳಿಗೆ ಸಲಹೆ ನೀಡಿದೆ.

ಇದನ್ನೂ ಓದಿ: ಅರ್ನಾಬ್ ಬಂಧನ ಖಂಡಿಸಿ ಟ್ರೋಲ್‌ಗೊಳಗಾದ ಬೆಂಗಳೂರು ಎಡಿಟರ್ಸ್‌ ಗಿಲ್ಡ್!

ದೆಹಲಿ ಗಡಿಯಲ್ಲಿ ನಡೆಯುತ್ತಿರುವ ಪ್ರತಿಭಟನೆ ಕುರಿತ ಸುದ್ದಿ ಪ್ರಸಾರದ ಬಗ್ಗೆ ಕಳವಳ ವ್ಯಕ್ತಪಡಿಸಿರುವ  ಸಂಪಾದಕರ ಸಂಘ, ಯಾವುದೇ ಸಾಕ್ಷಿಗಳು ಮತ್ತು ಪುರಾವೆಗಳಿಲ್ಲದೆ ಪ್ರತಿಭಟನೆಗಳಲ್ಲಿ ಭಾಗವಹಿಸುತ್ತಿರುವವರನ್ನು ಕೆಲವು ಮಾಧ್ಯಮಗಳು ಅವರನ್ನು ‘ಖಲಿಸ್ತಾನಿಗಳು’, ‘ರಾಷ್ಟ್ರ ವಿರೋಧಿಗಳು’ ಎಂಬ ಪದ ಬಳಸುತ್ತಿವೆ ಎಂದಿದೆ.

“ಇಂತಹ ಪದ ಬಳಕೆ ಮತ್ತು ವಿವರಣೆ ಜವಾಬ್ದಾರಿಯುತ ಮತ್ತು ನೈತಿಕ ಪತ್ರಿಕೋದ್ಯಮದ ಸಿದ್ಧಾಂತಗಳಿಗೆ ವಿರುದ್ಧವಾಗಿದೆ. ಇಂತಹ ಕ್ರಮಗಳು ಮಾಧ್ಯಮದ ವಿಶ್ವಾಸಾರ್ಹತೆಗೆ ಧಕ್ಕೆಯುಂಟುಮಾಡುತ್ತವೆ” ಎಂದು ಹೇಳಿದೆ.

ಇದನ್ನೂ ಓದಿ: ಮುನ್ಸೂಚನೆಯಿಲ್ಲದೆ ’ಕಾಶ್ಮೀರ ಟೈಮ್ಸ್’‌‌ ಕಚೇರಿಗೆ ಸೀಲ್- ಎಡಿಟರ್ಸ್ ಗಿಲ್ಡ್‌ ಖಂಡನೆ

ರೈತರ ಪ್ರತಿಭಟನೆಯನ್ನು ವರದಿ ಮಾಡುವವರು “ಸಾಂವಿಧಾನಿಕ ಹಕ್ಕುಗಳ ಮೂಲಕ ಪ್ರತಿಭಟನೆ ಮಾಡುವವರ ವಿರುದ್ಧ ಪಕ್ಷಪಾತ ಮಾಡದೇ, ನ್ಯಾಯಯುತ, ವಸ್ತುನಿಷ್ಠವಾಗಿ ವರದಿ ಮಾಡಬೇಕು ಎಂದು ಮಾಧ್ಯಮ ಸಂಸ್ಥೆಗಳಿಗೆ ಸಲಹೆ ನೀಡಿದೆ.

ಪ್ರತಿಭಟನೆ ಶುರುವಾಗಿ ಇಷ್ಟು ದಿನಗಳಾದ ಮೇಲೆ, ಅದರಲ್ಲೂ ಮಾಧ್ಯಮಗಳು ರೈತರನ್ನು ಖಲಿಸ್ತಾನಿಗಳು, ರಾಷ್ಟ್ರ ವಿರೋಧಿಗಳು ಎಂದೆಲ್ಲಾ ಕರೆದ ಮೇಲೆ ಇಂತಹ ಸಲಹೆಯ ಅವಶ್ಯಕತೆ ಇರಲಿಲ್ಲ ಎಂದು ಎಡಿಟರ್ಸ್ ಗಿಲ್ಡ್‌ ವಿರುದ್ಧ ಸಾಮಾಜಿಕ ಜಾಲತಾಣಗಳಲ್ಲಿ ಟೀಕೆ ವ್ಯಕ್ತವಾಗುತ್ತಿದೆ.

ಹಲವು ಮಂದಿ ಎಡಿಟರ್ಸ್ ಗಿಲ್ಡ್ ಆಫ್ ಇಂಡಿಯಾ ಟ್ವಿಟ್ ಅನ್ನು ರಿಟ್ವಿಟ್ ಮಾಡಿ, “ನೀವು ಚಲನಚಿತ್ರಗಳಲ್ಲಿ ಎಲ್ಲಾ ಮುಗಿದ ಮೇಲೆ ಬರುವ ಪೊಲೀಸರಂತೆ, ಯಾವುದೇ ಪ್ರಯೋಜನ ಇಲ್ಲ” ಎಂದಿದ್ದಾರೆ.

ಮತ್ತೊಬ್ಬ ಟ್ವಿಟ್ಟರ್‌ ಬಳಕೆದಾರರು “ಮಾಧ್ಯಮಗಳಿಗೆ ಸಲಹೆ ನೀಡಿದ್ದು ಸಾಕು, ಇನ್ನಾದರೂ ಶಿಕ್ಷೆ ನೀಡಿ” ಎಂದು ಎಡಿಟರ್ಸ್ ಗಿಲ್ಡ್ ಆಫ್ ಇಂಡಿಯಾದ ಕಾಲೆಳೆದಿದ್ದಾರೆ.

ಕೆಲವು ಮಾಧ್ಯಮಗಳು ರೈತರ ಪ್ರತಿಭಟನೆ ಶುರುವಾದಾಗಿನಿಂದಲೂ, ರೈತರನ್ನು ಖಲಿಸ್ತಾನಿಗಳು ಎಂದು ಬಿಂಬಿಸುತ್ತಿದ್ದಾರೆ. ಪ್ರತಿಭಟನೆಯಲ್ಲಿ ಪಂಜಾಬ್, ರಾಜಸ್ತಾನ ಮೂಲದ ರೈತರು ಹೆಚ್ಚಾಗಿ ಕಂಡು ಬರುತ್ತಿರುವುದು ಇದಕ್ಕೆ ಕಾರಣ. ಇಷ್ಟೇ ಅಲ್ಲದೇ ರೈತ ಪ್ರತಿಭಟನೆಯಲ್ಲಿ ಇರುವವರು ರೈತರಲ್ಲ, ಅವರು ಬಡವರಲ್ಲ, ಪೊಲೀಸರನ್ನು ರೈತರೇ ಹೊಡೆಯುತ್ತಿದ್ದಾರೆ ಎಂಬಂತಹ ನಕಲಿ ಸುದ್ದಿಗಳನ್ನು ಪ್ರಚುರ ಪಡಿಸುತ್ತಿದ್ದಾರೆ. ಇಂತಹವರ ವಿರುದ್ಧ ಕ್ರಮ ಕೈಗೊಳ್ಳದೇ, ಕೆವಲ ಸಲಹೆ ನಿಡಲು ಮಾತ್ರ ಸೀಮಿತವಾಗಿರುವ ಎಡಿಟರ್ಸ್ ಗಿಲ್ಡ್ ಆಫ್ ಇಂಡಿಯಾ  ಮೇಲೆ ಸಾಮಾಜಿಕ ಹೋರಾಟಗಾರರು, ರೈತ ಮುಖಂಡರು ಆಕ್ರೋಶ ಹೊರಹಾಕಿದ್ದಾರೆ.


ಇದನ್ನೂ ಓದಿ: ರೈತರ ಪರವಾಗಿ ನಿಲ್ಲುವುದನ್ನೇ ರಾಜಕಾರಣವೆನ್ನುವುದಾದರೆ, ಹೌದು ನಾವು ತಪ್ಪಿತಸ್ಥರೇ..!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶಾಲೆ, ಪೂಜಾ ಸ್ಥಳ, ಬಸ್ ನಿಲ್ದಾಣಗಳ ಬಳಿ ಇರುವ 717 ಮದ್ಯದಂಗಡಿಗಳನ್ನು ಮುಚ್ಚಲು ತಮಿಳುನಾಡು ಸಿಎಂ ಜೋಸೆಫ್ ವಿಜಯ್ ಆದೇಶ 

ಅಧಿಕಾರ ವಹಿಸಿಕೊಂಡ ನಂತರ ತಮ್ಮ ಮೊದಲ ಪ್ರಮುಖ ಆಡಳಿತಾತ್ಮಕ ನಿರ್ದೇಶನದಲ್ಲಿ, ಸಿ. ಜೋಸೆಫ್ ವಿಜಯ್ ಸೋಮವಾರ, ತಮಿಳುನಾಡು ಸರ್ಕಾರವು ಪೂಜಾ ಸ್ಥಳಗಳು, ಶಿಕ್ಷಣ ಸಂಸ್ಥೆಗಳು ಮತ್ತು ಬಸ್ ನಿಲ್ದಾಣಗಳಿಂದ 500 ಮೀಟರ್ ಒಳಗೆ...

FACT CHECK: ಭಾರತೀಯರು ಚಿನ್ನ ಖರೀದಿಸಬೇಡಿ ಎಂದು 1967ರಲ್ಲೇ ಇಂದಿರಾ ಗಾಂಧಿ ಹೇಳಿದ್ರಾ?

ಪ್ರಧಾನಿ ನರೇಂದ್ರ ಮೋದಿಯವರು ಇತ್ತೀಚೆಗೆ ತೆಲಂಗಾಣದ ಸಿಕಂದರಾಬಾದ್ ರ‍್ಯಾಲಿಯಲ್ಲಿ ಮಾತನಾಡುತ್ತಾ, ಆರ್ಥಿಕ ಬಿಕ್ಕಟ್ಟು ತಪ್ಪಿಸಲು "ಒಂದು ವರ್ಷ ಚಿನ್ನ ಖರೀದಿಸಬೇಡಿ" ಎಂದು ಜನರಲ್ಲಿ ಮನವಿ ಮಾಡಿದ್ದರು. ಇದರ ಬೆನ್ನಲ್ಲೇ, 1967ರಲ್ಲಿ ಅಂದಿನ ಪ್ರಧಾನಿ...

ಪಶ್ಚಿಮ ಬಂಗಾಳ| ಧ್ವನಿವರ್ಧಕಗಳ ನಿಯಂತ್ರಣಕ್ಕೆ ಆದೇಶಿಸಿದ ನೂತನ ಸಿಎಂ ಅಧಿಕಾರಿ; ಧಾರ್ಮಿಕ ಸಭೆ ನೆಪದಲ್ಲಿ ರಸ್ತೆ ತಡೆಗೆ ನಿಷೇಧ

ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ನೇತೃತ್ವದ ಸರ್ಕಾರವು ಧಾರ್ಮಿಕ ಸ್ಥಳಗಳಲ್ಲಿ ಧ್ವನಿವರ್ಧಕಗಳ ಬಳಕೆಯನ್ನು ನಿಯಂತ್ರಿಸಲು ಮತ್ತು ಪ್ರಾರ್ಥನೆ ಅಥವಾ ಧಾರ್ಮಿಕ ಸಭೆ ನೆಪದಲ್ಲಿ ಸಾರ್ವಜನಿಕ ರಸ್ತೆಗಳನ್ನು ನಿರ್ಬಂಧಿಸದಂತೆ ನೋಡಿಕೊಳ್ಳಲು ಪೊಲೀಸ್ ಅಧಿಕಾರಿಗಳಿಗೆ ಹೊಸ ಸೂಚನೆಗಳನ್ನು...

ರಾಜಸ್ಥಾನದಲ್ಲಿ ನೀಟ್‌-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ; ಸಿಬಿಐ ತನಿಖೆಗೆ ಆದೇಶಿಸಿದ ಸರ್ಕಾರ

ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ ದಿನಾಂಕಗಳಲ್ಲಿ ಮರು ಪರೀಕ್ಷೆಯನ್ನು ನಡೆಸಲಾಗುವುದು, ಪರೀಕ್ಷೆಗೆ...

ಇತ್ಯರ್ಥವಾಗದ ಚುನಾವಣಾ ತಕರಾರು : ಮತ ಹಾಕಿದ ಜನರಿಗೆ ದಿನಕ್ಕೊಬ್ಬ ಶಾಸಕ

ರಾಜ್ಯದಲ್ಲಿ ಪ್ರಸ್ತುತ ಆಡಳಿತ ನಡೆಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಮೂರು ವರ್ಷಗಳನ್ನು ಪೂರೈಸಿದೆ. ಚುನಾವಣೆ ನಡೆಯಲು ಇನ್ನು ಎರಡು ವರ್ಷಗಳು ಬಾಕಿಯಿದೆ. ಅಂದರೆ, ಸರ್ಕಾರದ ಐದು ವರ್ಷಗಳ ಅವಧಿಯಲ್ಲಿ ಮುಕ್ಕಾಲು...

“ಸನಾತನವನ್ನು ನಿರ್ಮೂಲನೆ ಮಾಡಬೇಕು…”; ವಿಧಾನಸಭೆಯಲ್ಲೇ ತನ್ನ ಹಿಂದಿನ ಹೇಳಿಕೆ ಪುನರುಚ್ಚರಿಸಿದ ಉದಯನಿಧಿ ಸ್ಟಾಲಿನ್

ತಮಿಳುನಾಡು ವಿರೋಧ ಪಕ್ಷದ ನಾಯಕ ಮತ್ತು ಡಿಎಂಕೆ ನಾಯಕ ಉದಯನಿಧಿ ಸ್ಟಾಲಿನ್ ಮಂಗಳವಾರ ತಮಿಳುನಾಡು ವಿಧಾನಸಭೆಯಲ್ಲಿ ನಡೆದ ಅಧಿವೇಶನದಲ್ಲಿ, ಸನಾತನ ಧರ್ಮದ ನಿರ್ಮೂಲನೆಗೆ ಮತ್ತೊಮ್ಮೆ ಕರೆ ನೀಡಿದ್ದಾರೆ. ಸದನದಲ್ಲಿ ಮಾತನಾಡಿದ ಅವರು, "ಜನರನ್ನು ವಿಭಜಿಸುವ...

‘ಅಮೃತಕಾಲ’ದ ಸ್ವಪ್ನದಿಂದ ‘ಬಿಕ್ಕಟ್ಟಿನ ಕಾಲ’ಕ್ಕೆ: ಕಳಚಿಕೊಳ್ಳುತ್ತಿರುವ ಮೋದಿಯವರ ‘ಆತ್ಮನಿರ್ಭರ’ ಮುಖವಾಡ 

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗೂ ಮುನ್ನ ದೇಶವು ಎಲ್‌ಪಿಜಿ ಸಿಲಿಂಡರ್‌ಗಳ ಕೊರತೆಯಿಂದ ಬಳಲುತ್ತಿದ್ದಾಗ, ಬಿಜೆಪಿ ನಾಯಕರು ಮತ್ತು ಕೇಂದ್ರ ಸರ್ಕಾರದ ಮಂತ್ರಿಗಳು ಮೋದಿಯವರ ‘ದಯೆ’ಯಿಂದ ಭಾರತಕ್ಕೆ ಯಾವುದೇ...

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...