Homeಮುಖಪುಟ'ಶಿಬಿರ ತೊರೆಯದಿರಿ' | ಸಿಆರ್‌ಪಿಎಫ್ ಸಿಬ್ಬಂದಿಗೆ ತಾಕೀತು ಮಾಡಿದ ಕುಕಿ ಸಂಘಟನೆ!

‘ಶಿಬಿರ ತೊರೆಯದಿರಿ’ | ಸಿಆರ್‌ಪಿಎಫ್ ಸಿಬ್ಬಂದಿಗೆ ತಾಕೀತು ಮಾಡಿದ ಕುಕಿ ಸಂಘಟನೆ!

- Advertisement -
- Advertisement -

“ಯಾವುದೇ ಸಿಆರ್‌ಪಿಎಫ್ ಸಿಬ್ಬಂದಿಯನ್ನು ತಮ್ಮ ಶಿಬಿರದ ಆವರಣದಿಂದ ಹೊರಹೋಗಲು ಅನುಮತಿಸುವುದಿಲ್ಲ” ಎಂದು ಮಣಿಪುರದ ಜಿರಿಬಾಮ್ ಜಿಲ್ಲೆಯಲ್ಲಿ ಸೋಮವಾರ ನಡೆದ ಗುಂಡಿನ ಚಕಮಕಿಗೆ ಪ್ರತಿಕ್ರಿಯೆಯಾಗಿ, ಕುಕಿ ವಿದ್ಯಾರ್ಥಿಗಳ ಸಂಘಟನೆ (ಕೆಎಸ್‌ಒ) ಎಚ್ಚರಿಕೆ ನೀಡಿದೆ. ಗುಂಡಿನ ಚಕಮಕಿಯಲ್ಲಿ ಹತ್ತು ಶಂಕಿತ ಕುಕಿ-ಜೋ ಉಗ್ರಗಾಮಿಗಳು ಮತ್ತು ಇಬ್ಬರು ಸಿಆರ್‌ಪಿಎಫ್ ಯೋಧರು ಹತರಾಗಿದ್ದಾರೆ ಎಂದು ಸೇನೆಯು ಹೇಳಿದೆ. ಘಟನೆಯ ಒಂದು ದಿನದ ನಂತರ, ಇಬ್ಬರು ಹಿರಿಯ ನಾಗರಿಕ ಶವಗಳನ್ನು ಪತ್ತೆ ಮಾಡಲಾಗಿದೆ. ಶಿಬಿರ ತೊರೆಯದಿರಿ

ಕುಕಿ-ಜೋ ಸಂಘಟನೆಯಾದ, ಸ್ಥಳೀಯ ಬುಡಕಟ್ಟು ನಾಯಕರ ವೇದಿಕೆ (ITLF)ಯು, CRPF ನಿಂದ ಗುಂಡಿಕ್ಕಿ ಕೊಲ್ಲಲ್ಪಟ್ಟ 10 ವ್ಯಕ್ತಿಗಳು ಉಗ್ರಗಾಮಿಗಳಲ್ಲ, ಬದಲಾಗಿ ಕುಕಿ-ಜೋ “ಗ್ರಾಮ ಸ್ವಯಂಸೇವಕರು” ಎಂದು ಪ್ರತಿಪಾದಿಸಿದೆ. ಸೇನೆಯು ಅವರನ್ನು ಹೊಂಚು ಹಾಕಿ ಹತ್ಯೆ ಮಾಡಿದೆ ಎಂದು ಐಟಿಎಲ್‌ಎಫ್ ಹೇಳಿಕೊಂಡಿದೆ. ಶಿಬಿರ ತೊರೆಯದಿರಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

“ಯಾವುದೇ ಸಿಆರ್‌ಪಿಎಫ್ ಸಿಬ್ಬಂದಿ ಈ ಸೂಚನೆಯನ್ನು ಉಲ್ಲಂಘಿಸಿದರೆ ಅದಕ್ಕೆ ಅವರೇ ಜವಾಬ್ದಾರರಾಗಿದ್ದಾರೆ. ಈ ಸೂಚನೆ ನೀಡಿದ ತಕ್ಷಣವೇ ಈ ನಿರ್ದೇಶನ ಜಾರಿಯಲ್ಲಿರುತ್ತದೆ. ಸಿಆರ್‌ಪಿಎಫ್ ಜಿರಿಬಾಮ್‌ನಲ್ಲಿ ನಡೆಸಿದ ಅನಾಗರಿಕ ಕ್ರಮಗಳನ್ನು ಸಾರ್ವಜನಿಕವಾಗಿ ಅಂಗೀಕರಿಸಿ ಅದಕ್ಕಾಗಿ ಕ್ಷಮೆಯಾಚಿಸುವವರೆಗೆ ಇದು ಜಾರಿಯಲ್ಲಿರುತ್ತದೆ” ಎಂದು ಕೆಎಸ್‌ಒ ಹೊರಡಿಸಿದ ನೋಟಿಸ್ ಹೇಳಿದೆ.

ಮಡಿದವರಿಗೆ ಗೌರವ ಸಲ್ಲಿಸಲು ಮಂಗಳವಾರ ಕುಕಿ-ಜೋ ಪ್ರದೇಶಗಳಲ್ಲಿ “ಸಂಪೂರ್ಣ ಬಂದ್” ಆಚರಿಸಲಾಗುತ್ತಿದೆ. ಜಕುರಾಧೋರ್ ಮತ್ತು ಬೊರೊಬೆಕ್ರಾ ಪೊಲೀಸ್ ಠಾಣೆಯ ಸಮೀಪದಲ್ಲಿರುವ ಸಿಆರ್‌ಪಿಎಫ್ ಪೋಸ್ಟ್ ಮೇಲೆ “ಶಸ್ತ್ರಸಜ್ಜಿತ ಉಗ್ರರು” ದಾಳಿ ನಡೆಸಿದ್ದಾರೆ ಎಂದು ಮಣಿಪುರ ಪೊಲೀಸರು ಸೋಮವಾರ ಆರೋಪಿಸಿದ್ದಾರೆ. ಈ ದಾಳಿಗೆ ಪ್ರತಿಯಾಗಿ ಸಿಆರ್‌ಪಿಎಫ್ ಮತ್ತು ಪೊಲೀಸರು ತೀವ್ರ ಪ್ರತಿದಾಳಿ ನಡೆಸಿದ್ದಾರೆ ಎಂದು ಅವರು ತಿಳಿಸಿದ್ದಾರೆ.

ಗುಂಡಿನ ಚಕಮಕಿ ನಿಲ್ಲಿಸಿದ ನಂತರ ಆ ಪ್ರದೇಶದಲ್ಲಿ ಶೋಧ ನಡೆಸಲಾಗಿದ್ದು, 10 ಉಗ್ರರ ಶವಗಳನ್ನು ಶಸ್ತ್ರಾಸ್ತ್ರ ಮತ್ತು ಮದ್ದುಗುಂಡುಗಳೊಂದಿಗೆ ವಶಪಡಿಸಿಕೊಳ್ಳಲಾಗಿದೆ ಎಂದು ಪೊಲೀಸರು ಹೇಳಿಕೆಯಲ್ಲಿ ತಿಳಿಸಿದ್ದಾರೆ. ಘಟನೆಯಲ್ಲಿ ಒಬ್ಬ ಸಿಆರ್‌ಪಿಎಫ್ ಯೋಧ ಗಾಯಗೊಂಡಿದ್ದು, ಅವರನ್ನು ಅಸ್ಸಾಂನ ಸಿಲ್ಚಾರ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ.

“ಅಮಾನುಷವಾಗಿ ಗುಂಡಿಕ್ಕಿ ಕೊಲ್ಲಲ್ಪಟ್ಟವರಿಗೆ ಸಾಮೂಹಿಕ ದುಃಖ ವ್ಯಕ್ತಪಡಿಸುವ ಮತ್ತು ಬೆಂಬಲ ವ್ಯಕ್ತಪಡಿಸಲು” ಕುಕಿ-ಝೋ ಕೌನ್ಸಿಲ್ ಮಂಗಳವಾರ ಬೆಳಿಗ್ಗೆ 5 ರಿಂದ ಸಂಜೆ 6 ರವರೆಗೆ ರಾಜ್ಯದ ಗುಡ್ಡಗಾಡು ಪ್ರದೇಶಗಳಲ್ಲಿ ಸಂಪೂರ್ಣ ಬಂದ್‌ಗೆ ಕರೆ ನೀಡಿದೆ.

ಇದನ್ನೂ ಓದಿ: ಕೇರಳ | ‘ಮಲ್ಲು ಹಿಂದೂ ಆಫೀಸರ್ಸ್’ ವಾಟ್ಸಾಪ್ ಗ್ರೂಪ್ ರಚಿಸಿದವರು ಸೇರಿದಂತೆ ಇಬ್ಬರು ಐಎಎಸ್ ಅಧಿಕಾರಿಗಳು ಅಮಾನತು

ಕೇರಳ | ‘ಮಲ್ಲು ಹಿಂದೂ ಆಫೀಸರ್ಸ್’ ವಾಟ್ಸಾಪ್ ಗ್ರೂಪ್ ರಚಿಸಿದವರು ಸೇರಿದಂತೆ ಇಬ್ಬರು ಐಎಎಸ್ ಅಧಿಕಾರಿಗಳು ಅಮಾನತು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಂಗಳೂರು: ಚುನಾವಣಾ ಆಯೋಗ ಕೇಂದ್ರ ಸರ್ಕಾರದ ಮುಖವಾಣಿಯಾಗಿ ಕಾರ್ಯನಿರ್ವಹಿಸುತ್ತಿದೆ: ವಿ.ಎಸ್. ಶ್ರೀಧರ್ 

ರಾಜ್ಯದ ಆರು ಜಿಲ್ಲೆಗಳಲ್ಲಿ ಪ್ರಗತಿಪರ ಸಂಘಟನೆಗಳು, ಎದ್ದೇಳು ಕರ್ನಾಟಕ ಹಾಗೂ ಜಾತ್ಯತೀತ ಪಕ್ಷಗಳ ಒಕ್ಕೂಟವಾದ ‘ಎಸ್‌ಐಆರ್ ವಿರೋಧಿ ಕರ್ನಾಟಕ’ ನೇತೃತ್ವದಲ್ಲಿ ಹಮ್ಮಿಕೊಳ್ಳಲಾಗಿರುವ ಎಸ್‌ಐಆರ್ ಜನಜಾಗೃತಿ ಜಾಥಾದ ಭಾಗವಾಗಿ ಇಂದು (ಜೂನ್-14) ಮಂಗಳೂರಿನಲ್ಲಿ ಸಭೆ...

ಬಿಸಿಲ ನಾಡು ಕಲಬುರಗಿಯಲ್ಲಿ ಮೊಳಗಿದ SIR ವಿರೋಧಿ ಘೋಷಣೆ.

ಕೇಂದ್ರ ಚುನಾವಣಾ ಆಯೋಗ ಜಾರಿಗೆ ತಂದಿರುವ ವಿಶೇಷ ತೀವ್ರ ಮತ ಪರಿಷ್ಕರಣೆ SIR ಅನ್ನು ಕರ್ನಾಟಕದಲ್ಲಿ ಜಾರಿ ಮಾಡಬಾರದು ಎಂದು ಆಗ್ರಹಿಸಿ ಕರ್ನಾಟಕದಾದ್ಯಂತ ಎದ್ದೇಳು ಕರ್ನಾಟಕ ಹಾಗಾ SIR ವಿರೋಧಿ ಕರ್ನಾಟಕ ವೇದಿಕೆಯು...

ವಿಜಯಪುರ : ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾಗೆ ಚಾಲನೆ

ರಾಜ್ಯದ ಆರು ಜಿಲ್ಲೆಗಳಲ್ಲಿ ನಡೆಯಲಿರುವ ಎಸ್‌ಐಆರ್‌ ವಿರೋಧಿ ಜನಜಾಗೃತಿ ಜಾಥಾಗೆ ವಿಜಯಪುರದ ಅಂಬೇಡ್ಕರ್ ವೃತ್ತದಲ್ಲಿ ಶನಿವಾರ (ಜೂ.13) ಸಂಜೆ ಚಾಲನೆ ದೊರೆಯಿತು. ಜಾಥಾವನ್ನು ಉದ್ಘಾಟಿಸಿ ಮಾತನಾಡಿದ ಅಹಿಂದ ಮುಖಂಡ ಎಸ್ ಎಂ ಪಾಟೀಲ...

ಬಸವಣ್ಣನ ಕಲ್ಯಾಣದಲ್ಲಿ SIR ವಿರೋಧಿ ಜಾಥಾ.

ಬಸವಕಲ್ಯಾಣSIR ವಿರೋಧಿಸಿ ಕರ್ನಾಟಕದಾದ್ಯಂತ ನಡೆಯುತ್ತಿರುವ ಜಾಗೃತಿ ಜಾತಾವು ಬಸವಕಲ್ಯಾಣಕ್ಕೆ ತಲುಪಿತು. ಬಸವಕಲ್ಯಾಣದ ಅಂಬೇಡ್ಕರ್ ವೃತ್ತದಲ್ಲಿ ನೂರಾರು ಸಂಖ್ಯೆಯಲ್ಲಿ ಸೇರಿದ ಜನರು ಜನವಿರೋಧಿ SIR ನ್ನೂ ವಿರೋಧಿಸಿ ನಿರ್ಣಯ ಕೈಗೊಂಡರು. ಸಭೆಯಲ್ಲಿ ಮಾತನಾಡಿದ ಜಾಥಾದ ಮುಖ್ಯಸ್ಥ...

ಸಂಸದ ಬಿ.ವೈ ರಾಘವೇಂದ್ರ ನಡೆಸುತ್ತಿದ್ದ ಸಾರ್ವಜನಿಕ ಕುಂದುಕೊರತೆ ಸಭೆಯಲ್ಲಿ SIR ವಿರೋಧಿ ಜನಜಾಗೃತಿ ಜಾಥಾ ಕರಪತ್ರ ಹಂಚಿದ ಕಾರ್ಯಕರ್ತರು

ಶಿವಮೊಗ್ಗ : ಬಿಜೆಪಿ ಸಂಸದ ಬಿ.ವೈ.ರಾಘವೇಂದ್ರ ಅವರು ಜಿಲ್ಲೆಯ ಸಾಗರ ತಾಲ್ಲೂಕಿನ ರೈಲು ನಿಲ್ದಾಣದಲ್ಲಿ ಕುಂದುಕೊರತೆಗಳ ಸಭೆ ನಡೆಸುತ್ತಿದ್ದ ವೇಳೆ ಎಸ್‌ಐಆರ್ ವಿರುದ್ಧ ’ಎದ್ದೇಳು ಕರ್ನಾಟಕ’ ಮತ್ತು ’ಎಸ್‌ಐಆರ್ ವಿರೋಧಿ ಒಕ್ಕೂಟ’ದ ಮುಖಂಡರು...

ಬೀದರ್‌ ನಿಂದ ಶುರವಾದ SIR ವಿರೋಧಿ ಜನಜಾಗೃತಿ ಜಾಥಾ

SIR ವಿರೋಧಿ ಕರ್ನಾಟಕ ಹಾಗೂ ಎದ್ದೇಳು ಕರ್ನಾಟಕವು ಕರ್ನಾಟಕದಲ್ಲಿ SIR ಜಾರಿಯನ್ನು ವಿರೋಧಿಸಿ ರಾಜ್ಯದ 5 ಸ್ಥಳಗಳಿಂದ ಜನಜಾಗೃತಿ ಜಾಥಾ ಆಯೋಜಿಸಿದೆ. ಇಂದು ಬೀದರ್‌ ನ ಅಂಬೇಡ್ಕರ್‌ ಸರ್ಕಲ್‌ ನಿಂದ ಆರಂಭವಾದ ಜಾಥಾವು...

ಒಬ್ಬರೇ ಒಬ್ಬ ಅರ್ಹ ಮತದಾರರ ಹೊರಗಿಡುವುದನ್ನು ಒಪ್ಪುವುದಿಲ್ಲ : ಯೂಸುಫ್ ಕನ್ನಿ

ಮತದಾರರ ಪಟ್ಟಿಯ ಪರಿಷ್ಕರಣೆ ಮಾಡಲಿ, ಆದರೆ, ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಬೇಡವೇ ಬೇಡ. ಎಸ್‌ಐಆರ್‌ ಮೂಲಕ ಒಬ್ಬರೇ ಒಬ್ಬರು ಅರ್ಹ ಮತದಾರರನ್ನೂ ಪಟ್ಟಿಯಿಂದ ಹೊರಗಿಡುವುದನ್ನು ನಾವು ಒಪ್ಪುವುದಿಲ್ಲ ಎಂದು ಜಮಾಅತೆ ಇಸ್ಲಾಮಿ...

ಪ್ರಜಾಪ್ರಭುತ್ವದ ರಕ್ಷಣೆಗೆ ಎಸ್‌ಐಆರ್ (SIR) ವಿರುದ್ಧ ಜನಜಾಗೃತಿ ಜಾಥಾಕ್ಕೆ ಶಿವಮೊಗ್ಗದಲ್ಲಿ ಚಾಲನೆ

ಕೇಂದ್ರ ಸರ್ಕಾರದ ಎಸ್‌ಐಆರ್ (SIR) ನೀತಿಯ ವಿರುದ್ಧ ರಾಜ್ಯಾದ್ಯಂತ ಜನವಿರೋಧಿ ಅಲೆ ಎದ್ದಿದೆ. "ಸಂತ-ಶರಣರ ಈ ನಾಡಿನಲ್ಲಿ ಯಾವುದೇ ರೀತಿಯ ದುಷ್ಟ ಆಟ, ಮೋಸ, ವಂಚನೆಗೆ ಅವಕಾಶವಿಲ್ಲ" ಎಂಬ ದೃಢ ಸಂಕಲ್ಪದೊಂದಿಗೆ 'ಎಸ್‌ಐಆರ್...

ಜೂನ್ 13 ರಿಂದ ಕರ್ನಾಟಕದಲ್ಲಿ ‘SIR ವಿರೋಧಿ’ ಜನಜಾಗೃತಿ ಜಾಥ

ರಾಜ್ಯ ಚುನಾವಣಾ ಆಯೋಗವು ಎಸ್‌ಐಆರ್ (SIR) ಪ್ರಕ್ರಿಯೆಗೆ ಸಂಬಂಧಿಸಿದಂತೆ ನಾಗರಿಕರ ಆಕ್ಷೇಪಣೆಗಳಿಗೆ ಸ್ಪಂದಿಸದಿರುವ ನಿರ್ಲಕ್ಷ್ಯ ಧೋರಣೆಯನ್ನು ಖಂಡಿಸಿ ‘ಎಸ್‌ಐಆರ್ ವಿರೋಧಿ ಒಕ್ಕೂಟ’ ಹಾಗೂ ‘ಎದ್ದೇಳು ಕರ್ನಾಟಕ’ ಸಂಘಟನೆಯ ವತಿಯಿಂದ ಜೂನ್ 13 ರಿಂದ...

‘ಕಾನೂನು ಪ್ರಕ್ರಿಯೆಯದುರುಪಯೋಗ’: ನ್ಯೂಸ್‌ಕ್ಲಿಕ್ ವಿರುದ್ಧದ ದೆಹಲಿ ಪೊಲೀಸ್, ಇಡಿ ಪ್ರಕರಣಗಳನ್ನು ರದ್ದುಗೊಳಿಸಿದ ಹೈಕೋರ್ಟ್

ವಿದೇಶಿ ನೇರ ಹೂಡಿಕೆ (ಎಫ್‌ಡಿಐ) ನಿಯಮಗಳ ಉಲ್ಲಂಘನೆ ಆರೋಪಕ್ಕೆ ಸಂಬಂಧಿಸಿದಂತೆ ನ್ಯೂಸ್‌ಕ್ಲಿಕ್ ಸುದ್ದಿ ಸಂಸ್ಥೆ ಮತ್ತು ಅದರ ಮುಖ್ಯ ಸಂಪಾದಕ ಪ್ರಬೀರ್ ಪುರಕಾಯಸ್ಥ ವಿರುದ್ಧ ದೆಹಲಿ ಪೊಲೀಸರು ಹಾಗೂ ಜಾರಿ ನಿರ್ದೇಶನಾಲಯ (ಇಡಿ) ದಾಖಲಿಸಿದ್ದ ಪ್ರಕರಣಗಳನ್ನು ದೆಹಲಿ...