Homeಮುಖಪುಟ"ಯಾವುದೇ ಕಾರಣಗಳಿದ್ದರೂ ಸಹ ಜನರು ಹಸಿವಿನಿಂದ ಸಾಯುವಂತೆ ಮಾಡಬಾರದು" : ಕೇಂದ್ರಕ್ಕೆ ಸುಪ್ರೀಂ ತರಾಟೆ

“ಯಾವುದೇ ಕಾರಣಗಳಿದ್ದರೂ ಸಹ ಜನರು ಹಸಿವಿನಿಂದ ಸಾಯುವಂತೆ ಮಾಡಬಾರದು” : ಕೇಂದ್ರಕ್ಕೆ ಸುಪ್ರೀಂ ತರಾಟೆ

- Advertisement -
- Advertisement -

ತ್ರಿಪುರದ ಶಿಬಿರಗಳಲ್ಲಿ ಆಶ್ರಯ ಪಡೆದಿರುವ ಬ್ರೂ ನಿರಾಶ್ರಿತರಿಗೆ ಪಡಿತರವನ್ನು ಕಡಿತಗೊಳಿಸಿರುವ ಕೇಂದ್ರ ಸರ್ಕಾರದ ಕ್ರಮಕ್ಕೆ ಸುಪ್ರೀಂ ಕೋರ್ಟ್‌ ತೀವ್ರ ಆಕ್ಷೇಪ ವ್ಯಕ್ತಪಡಿಸಿದೆ. ಅಲ್ಲದೇ ಇನ್ನು 15 ದಿನಗಳಲ್ಲಿ ಇದಕ್ಕೆ ಕಾರಣ ನೀಡುವಂತೆ ಆದೇಶಿಸಿದೆ.

“ಈ ಕುರಿತು ಎರಡು ವಾರದಲ್ಲಿ ವರದಿ ನೀಡಿ. ಈ ರೀತಿ ಮಾಡುವುದು ಸರಿಯಲ್ಲ. ಯಾವುದೇ ಕಾರಣಗಳಿದ್ದರೂ ಸಹ ಜನರು ಹಸಿವಿನಿಂದ ಸಾಯುವಂತೆ ಮಾಡಬಾರದು” ಎಂದು ಮುಖ್ಯ ನ್ಯಾಯಮೂರ್ತಿಗಳಾದ ಶರತ್‌ ಅರವಿಂದ್‌ ಬೊಬ್ಡೆ ನೇತೃತ್ವದ ನ್ಯಾಯಪೀಠ ಕೇಂದ್ರ ಸರ್ಕಾರಕ್ಕೆ ಆದೇಶಿಸಿದೆ.

ಹಲವು ಕಾರಣಗಳಿಗಾಗಿ ತಮ್ಮ ಸಂಬಂಧಿಕರನ್ನು ಕಳೆದುಕೊಂಡ 32,000 ಕ್ಕೂ ಹೆಚ್ಚು ಬ್ರೂ ನಿರಾಶ್ರಿತರು ತ್ರಿಪುರದ ಶಿಬಿರಗಳಲ್ಲಿ ವಾಸಿಸುತ್ತಿದ್ದಾರೆ. ಇವರೆಲ್ಲರೂ ಮಿಝೋರಾಂಗೆ ತೆರಳಬೇಕು ಎನ್ನುವುದು ಕೇಂದ್ರ ಸರ್ಕಾರದ ವಾದ.

ಇದಕ್ಕೆ ಪ್ರತಿಯಾಗಿ ಬ್ರೂ ನಿರಾಶ್ರಿತರು ಭಾರತ ದೇಶದಲ್ಲಿ ಎಲ್ಲಿ ಬೇಕಾದರೂ ವಾಸಿಸಲು ಸಂವಿಧಾನ ನಮಗೆ ಹಕ್ಕುಗಳನ್ನು ನೀಡಿದೆ. ನಾವು ಒಳ್ಳೆಯ ನಾಗರಿಕರಾಗಿದ್ದು ನಾವು ಇಲ್ಲಿ ಶಾಂತಿಯಿಂದ ನೆಲೆಸಿದ್ದೇವೆ. ದೇಶದ ನಾಗರಿಕರಿಗೆ ಸಿಗಬೇಕಾದ ಎಲ್ಲಾ ಹಕ್ಕುಗಳು ನಮಗೂ ಸಹ ದಕ್ಕಬೇಕು. ನಮ್ಮ ಸಮಸ್ಯೆಯನ್ನು ಬಗೆಹರಿಸದೇ ಒಂದು ರಾಜ್ಯದಿಂದ ಇನ್ನೊಂದು ರಾಜ್ಯಕ್ಕೆ ನಮ್ಮನ್ನು ದಬ್ಬುವುದು ಸಾವಿನ ಬಾಯಿಗೆ ದೂಡಿದಂತೆಯೇ ಹೊರತು ಮತ್ತೇನಲ್ಲ ಎಂದು ತಮ್ಮ ಅಳಲು ತೋಡಿಕೊಂಡಿದ್ದಾರೆ.

ನಮಗೆ ರೇಷನ್ ನೀಡುವುದನ್ನು ನಿಲ್ಲಿಸಿದ್ದಾರೆ. ವೈದ್ಯಕೀಯ ಸೌಲಭ್ಯವೂ ಇಲ್ಲ. ಒಂದು ವಾರದಲ್ಲಿಯೇ ಸುಮಾರು 7 ಜನ ಹಸಿವಿನಿಂದ ಮಡಿದಿದ್ದಾರೆ. ನಾವು ಕೂಡ ಇಲ್ಲಿಯೇ ಸಾಯಲು ಸಿದ್ದರಿದ್ದೇವೆಯೇ ಹೊರತು ಮಿಝೋರಾಂಗೆ ತೆರಳಿ ಸಾಮಾಜಿಕ, ಧಾರ್ಮಿಕ ಕಿರುಕುಳಕ್ಕೆ ಒಳಗಾಗಲು ಸಿದ್ದರಿಲ್ಲ ಎಂದು ಬ್ರೂ ನಿರಾಶ್ರಿತರು ಪಟ್ಟು ಹಿಡಿದಿದ್ದಾರೆ.

ಬ್ರೂ ನಿರಾಶ್ರಿತರನ್ನು ವಾಪಸ್ ಕಳುಹಿಸಲು ಕೇಂದ್ರದ ಗಡುವು ಮುಗಿದ ಒಂದು ದಿನದ ನಂತರ ಡಿಸೆಂಬರ್‌ 1ರ ಭಾನುವಾರದಿಂದ ಪಡಿತರ ಸರಬರಾಜನ್ನು ನಿಲ್ಲಿಸಲಾಯಿತು. ಒಂಬತ್ತನೇ ಮತ್ತು ಅಂತಿಮ ಹಂತದ ವಾಪಸಾತಿ ಪಂತದಲ್ಲಿ 4,000 ಕ್ಕೂ ಹೆಚ್ಚು ಸ್ಥಳಾಂತರಗೊಂಡ ಕುಟುಂಬಗಳಲ್ಲಿ ಕೇವಲ 171 ಜನರನ್ನು ಮಾತ್ರ ಮಿಜೋರಾಂಗೆ ಕಳುಹಿಸಬಹುದಾಗಿದೆ ಎಂದು ಸ್ಥಳೀಯ ಅಧಿಕಾರಿಗಳು ತಿಳಿಸಿದ್ದಾರೆ.

ಮಿಜೋರಾಂಗೆ ವಾಪಸಾಗುವ ಬದಲು ತ್ರಿಪುರದಲ್ಲಿ ಪುನರ್ವಸತಿ ಕಲ್ಪಿಸುವ ಬಗ್ಗೆ ಇನ್ನೂ ಯಾವುದೇ ನಿರ್ಧಾರ ತೆಗೆದುಕೊಳ್ಳದ ಕಾರಣ 32,000 ಕ್ಕೂ ಹೆಚ್ಚು ಬ್ರೂ ಸ್ಥಳಾಂತರಗೊಂಡವರಿಗೆ ಪಡಿತರ ಸರಬರಾಜನ್ನು ಮತ್ತೆ ನಿಲ್ಲಿಸಲಾಗಿದೆ ಎಂದು ಹೇಳಲಾಗುತ್ತಿದೆ.

ನಿಷೇದಾಜ್ಞೆ, ಲಾಠಿ ಚಾರ್ಜ್‌ ಮೂಲಕ ಅವರನ್ನು ಸ್ಥಳಾಂತರಿಸಲು ಸರ್ಕಾರ ಮೊದಲು ಪ್ರಯತ್ನಿಸಿತು. ಆದರೆ ಅದು ಸಫಲವಾಗಲಿಲ್ಲ. ನಂತರ ಸರ್ಕಾರ ಇಲ್ಲಿಂದ ಸ್ಥಳಾಂತರಗೊಂಡವರ ಖಾತೆಗೆ 25 ಸಾವಿರ ಹಣ ಹಾಕುವುದಾಗಿಯೂ ಭರವಸೆ ನೀಡಿತ್ತು. ಆದರೂ ಅವರು ಜಗ್ಗಲಿಲ್ಲ. ಹಾಗಾಗಿ ಸರ್ಕಾರ ಈಗ ಅವರಿಗೆ ಮೂಲಭೂತವಾಗಿ ಸಿಗಬೇಕಾದ ಆಹಾರ ಮತ್ತು ವೈದ್ಯಕೀಯ ಸೇವೆಯನ್ನು ನಿಲ್ಲಿಸಿದೆ. ಹಾಗಾಗಿಯೇ ಸುಪ್ರೀಂ ಕೋರ್ಟ್‌ ಸರ್ಕಾರವನ್ನು ಜಾಡಿಸಿದೆ. ಮುಂದೆ ಏನಾಗುತ್ತದೆಯೋ ಗೊತ್ತಿಲ್ಲ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಮುಂಬೈ ಮಹಾರಾಷ್ಟ್ರ ನಗರವಲ್ಲ’: ಅಣ್ಣಾಮಲೈ ಹೇಳಿಕೆಗೆ ಶಿವಸೇನೆಯಿಂದ ತೀವ್ರ ಆಕ್ರೋಶ

ಮುಂಬೈ: ಐಪಿಎಸ್ ಅಧಿಕಾರಿಯಿಂದ ರಾಜಕಾರಣಿಯಾಗಿ ಬದಲಾದ ಕೆ.ಅಣ್ಣಾಮಲೈ ಅವರು "ಬಾಂಬೆ ಮಹಾರಾಷ್ಟ್ರ ನಗರವಲ್ಲ, ಅಂತರರಾಷ್ಟ್ರೀಯ ನಗರ" ಎಂದು ಹೇಳಿದ್ದು, ಇದು ಮುಂಬೈನಲ್ಲಿ ವಿವಾದ ಸೃಷ್ಟಿಸಿದೆ.  ಇದಕ್ಕೆ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ (ಯುಬಿಟಿ)...

ಮೂರನೇ ಅತ್ಯಾಚಾರ ಪ್ರಕರಣ ದಾಖಲು : ಉಚ್ಛಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಬಂಧನ

ಅತ್ಯಾಚಾರ ಆರೋಪ ಕೇಳಿ ಬಂದ ಬಳಿಕ ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿರುವ ಕೇರಳದ ಪಾಲಕ್ಕಾಡ್‌ನ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಭಾನುವಾರ (ಜ.11) ಬಂಧಿಸಲಾಗಿದೆ. ಪಾಲಕ್ಕಾಡ್‌ನ ಕೆಪಿಎಂ ರೀಜೆನ್ಸಿ ಹೋಟೆಲ್‌ನಿಂದ ಬೆಳಗಿನ ಜಾವ 12.30ರ ಸುಮಾರಿಗೆ ಮಾಂಕೂಟತ್ತಿಲ್...

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...

ದ್ವೇಷ ಭಾಷಣ ಮಸೂದೆ ರಾಜ್ಯಪಾಲರಿಂದ ತಿರಸ್ಕೃತವಾಗಿಲ್ಲ: ಸಿಎಂ ಸಿದ್ದರಾಮಯ್ಯ

ದ್ವೇಷ ಭಾಷಣ ಮಸೂದೆ ಸರ್ವಾನುಮತದಿಂದ ಅಂಗೀಕಾರವಾಗಿದ್ದು, ರಾಜ್ಯಪಾಲರು ಅದನ್ನು ವಾಪಸ್ ಕಳಿಸಿಲ್ಲ, ತಿರಸ್ಕರಿಸಿಲ್ಲ, ಅಂಕಿತವನ್ನೂ ಹಾಕಿಲ್ಲ. ಅವರು ಕರೆದಾಗ ಈ ಬಗ್ಗೆ ವಿವರಣೆ ನೀಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಭಾನುವಾರ (ಜ.11) ಮಂಗಳೂರಿನಲ್ಲಿ...

ಐಸಿಸ್ ಗುರಿ ಮಾಡಿ ಸಿರಿಯಾ ಮೇಲೆ ವೈಮಾನಿಕ ದಾಳಿ ನಡೆಸಿದ ಅಮೆರಿಕ

ಸಿರಿಯಾದ ಇಸ್ಲಾಮಿಕ್ ಸ್ಟೇಟ್ (ಐಎಸ್) ಗುಂಪಿನ ತಾಣಗಳ ಮೇಲೆ ಅಮೆರಿಕ ಮತ್ತು ಅದರ ಪಾಲುದಾರ ಪಡೆಗಳು ದೊಡ್ಡ ಪ್ರಮಾಣದ ದಾಳಿಗಳನ್ನು ನಡೆಸಿವೆ ಎಂದು ಅಮೆರಿಕದ ಸೆಂಟ್ರಲ್ ಕಮಾಂಡ್ (ಸೆಂಟ್‌ಕಾಮ್) ಘೋಷಿಸಿದೆ. ಡಿಸೆಂಬರ್ 13ರಂದು ಸಿರಿಯಾದಲ್ಲಿ...

ವೆನೆಜುವೆಲಾದ ತೈಲ ಖರೀದಿಗೆ ಅಮೆರಿಕದ ಅನುಮತಿ ಪಡೆಯಲು ರಿಲಯನ್ಸ್ ಮಾತುಕತೆ : ವರದಿ

ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ವೆನೆಜುವೆಲಾದ ಕಚ್ಚಾ ತೈಲ ಖರೀದಿಯನ್ನು ಪುನರಾರಂಭಿಸಲು ಅಮೆರಿಕದ ಅನುಮೋದನೆಯನ್ನು ಕೋರುತ್ತಿದೆ ಎಂದು ಈ ವಿಷಯದ ಬಗ್ಗೆ ಗೊತ್ತಿರುವ ಎರಡು ಮೂಲಗಳು ಶುಕ್ರವಾರ ತಿಳಿಸಿವೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್...

ಐ-ಪ್ಯಾಕ್‌ ಮೇಲೆ ದಾಳಿ | ಇಡಿ ಅಧಿಕಾರಿಗಳ ವಿರುದ್ಧ ತನಿಖೆ ಪ್ರಾರಂಭಿಸಿದ ಕೋಲ್ಕತ್ತಾ ಪೊಲೀಸರು : ಸುಪ್ರೀಂ ಕೋರ್ಟ್‌ನಲ್ಲಿ ಕೇವಿಯಟ್ ಸಲ್ಲಿಸಿದ ಪ. ಬಂಗಾಳ ಸರ್ಕಾರ

ಐ-ಪ್ಯಾಕ್ ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿದ ಸಂದರ್ಭದಲ್ಲಿ ದಾಖಲೆಗಳ ಕಳ್ಳತನದ ಆರೋಪದ ಮೇಲೆ ಕೋಲ್ಕತ್ತಾ ಪೊಲೀಸರು ಶನಿವಾರ (ಜ.10)...

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...