Homeಮುಖಪುಟ"ಯಾವುದೇ ಕಾರಣಗಳಿದ್ದರೂ ಸಹ ಜನರು ಹಸಿವಿನಿಂದ ಸಾಯುವಂತೆ ಮಾಡಬಾರದು" : ಕೇಂದ್ರಕ್ಕೆ ಸುಪ್ರೀಂ ತರಾಟೆ

“ಯಾವುದೇ ಕಾರಣಗಳಿದ್ದರೂ ಸಹ ಜನರು ಹಸಿವಿನಿಂದ ಸಾಯುವಂತೆ ಮಾಡಬಾರದು” : ಕೇಂದ್ರಕ್ಕೆ ಸುಪ್ರೀಂ ತರಾಟೆ

- Advertisement -
- Advertisement -

ತ್ರಿಪುರದ ಶಿಬಿರಗಳಲ್ಲಿ ಆಶ್ರಯ ಪಡೆದಿರುವ ಬ್ರೂ ನಿರಾಶ್ರಿತರಿಗೆ ಪಡಿತರವನ್ನು ಕಡಿತಗೊಳಿಸಿರುವ ಕೇಂದ್ರ ಸರ್ಕಾರದ ಕ್ರಮಕ್ಕೆ ಸುಪ್ರೀಂ ಕೋರ್ಟ್‌ ತೀವ್ರ ಆಕ್ಷೇಪ ವ್ಯಕ್ತಪಡಿಸಿದೆ. ಅಲ್ಲದೇ ಇನ್ನು 15 ದಿನಗಳಲ್ಲಿ ಇದಕ್ಕೆ ಕಾರಣ ನೀಡುವಂತೆ ಆದೇಶಿಸಿದೆ.

“ಈ ಕುರಿತು ಎರಡು ವಾರದಲ್ಲಿ ವರದಿ ನೀಡಿ. ಈ ರೀತಿ ಮಾಡುವುದು ಸರಿಯಲ್ಲ. ಯಾವುದೇ ಕಾರಣಗಳಿದ್ದರೂ ಸಹ ಜನರು ಹಸಿವಿನಿಂದ ಸಾಯುವಂತೆ ಮಾಡಬಾರದು” ಎಂದು ಮುಖ್ಯ ನ್ಯಾಯಮೂರ್ತಿಗಳಾದ ಶರತ್‌ ಅರವಿಂದ್‌ ಬೊಬ್ಡೆ ನೇತೃತ್ವದ ನ್ಯಾಯಪೀಠ ಕೇಂದ್ರ ಸರ್ಕಾರಕ್ಕೆ ಆದೇಶಿಸಿದೆ.

ಹಲವು ಕಾರಣಗಳಿಗಾಗಿ ತಮ್ಮ ಸಂಬಂಧಿಕರನ್ನು ಕಳೆದುಕೊಂಡ 32,000 ಕ್ಕೂ ಹೆಚ್ಚು ಬ್ರೂ ನಿರಾಶ್ರಿತರು ತ್ರಿಪುರದ ಶಿಬಿರಗಳಲ್ಲಿ ವಾಸಿಸುತ್ತಿದ್ದಾರೆ. ಇವರೆಲ್ಲರೂ ಮಿಝೋರಾಂಗೆ ತೆರಳಬೇಕು ಎನ್ನುವುದು ಕೇಂದ್ರ ಸರ್ಕಾರದ ವಾದ.

ಇದಕ್ಕೆ ಪ್ರತಿಯಾಗಿ ಬ್ರೂ ನಿರಾಶ್ರಿತರು ಭಾರತ ದೇಶದಲ್ಲಿ ಎಲ್ಲಿ ಬೇಕಾದರೂ ವಾಸಿಸಲು ಸಂವಿಧಾನ ನಮಗೆ ಹಕ್ಕುಗಳನ್ನು ನೀಡಿದೆ. ನಾವು ಒಳ್ಳೆಯ ನಾಗರಿಕರಾಗಿದ್ದು ನಾವು ಇಲ್ಲಿ ಶಾಂತಿಯಿಂದ ನೆಲೆಸಿದ್ದೇವೆ. ದೇಶದ ನಾಗರಿಕರಿಗೆ ಸಿಗಬೇಕಾದ ಎಲ್ಲಾ ಹಕ್ಕುಗಳು ನಮಗೂ ಸಹ ದಕ್ಕಬೇಕು. ನಮ್ಮ ಸಮಸ್ಯೆಯನ್ನು ಬಗೆಹರಿಸದೇ ಒಂದು ರಾಜ್ಯದಿಂದ ಇನ್ನೊಂದು ರಾಜ್ಯಕ್ಕೆ ನಮ್ಮನ್ನು ದಬ್ಬುವುದು ಸಾವಿನ ಬಾಯಿಗೆ ದೂಡಿದಂತೆಯೇ ಹೊರತು ಮತ್ತೇನಲ್ಲ ಎಂದು ತಮ್ಮ ಅಳಲು ತೋಡಿಕೊಂಡಿದ್ದಾರೆ.

ನಮಗೆ ರೇಷನ್ ನೀಡುವುದನ್ನು ನಿಲ್ಲಿಸಿದ್ದಾರೆ. ವೈದ್ಯಕೀಯ ಸೌಲಭ್ಯವೂ ಇಲ್ಲ. ಒಂದು ವಾರದಲ್ಲಿಯೇ ಸುಮಾರು 7 ಜನ ಹಸಿವಿನಿಂದ ಮಡಿದಿದ್ದಾರೆ. ನಾವು ಕೂಡ ಇಲ್ಲಿಯೇ ಸಾಯಲು ಸಿದ್ದರಿದ್ದೇವೆಯೇ ಹೊರತು ಮಿಝೋರಾಂಗೆ ತೆರಳಿ ಸಾಮಾಜಿಕ, ಧಾರ್ಮಿಕ ಕಿರುಕುಳಕ್ಕೆ ಒಳಗಾಗಲು ಸಿದ್ದರಿಲ್ಲ ಎಂದು ಬ್ರೂ ನಿರಾಶ್ರಿತರು ಪಟ್ಟು ಹಿಡಿದಿದ್ದಾರೆ.

ಬ್ರೂ ನಿರಾಶ್ರಿತರನ್ನು ವಾಪಸ್ ಕಳುಹಿಸಲು ಕೇಂದ್ರದ ಗಡುವು ಮುಗಿದ ಒಂದು ದಿನದ ನಂತರ ಡಿಸೆಂಬರ್‌ 1ರ ಭಾನುವಾರದಿಂದ ಪಡಿತರ ಸರಬರಾಜನ್ನು ನಿಲ್ಲಿಸಲಾಯಿತು. ಒಂಬತ್ತನೇ ಮತ್ತು ಅಂತಿಮ ಹಂತದ ವಾಪಸಾತಿ ಪಂತದಲ್ಲಿ 4,000 ಕ್ಕೂ ಹೆಚ್ಚು ಸ್ಥಳಾಂತರಗೊಂಡ ಕುಟುಂಬಗಳಲ್ಲಿ ಕೇವಲ 171 ಜನರನ್ನು ಮಾತ್ರ ಮಿಜೋರಾಂಗೆ ಕಳುಹಿಸಬಹುದಾಗಿದೆ ಎಂದು ಸ್ಥಳೀಯ ಅಧಿಕಾರಿಗಳು ತಿಳಿಸಿದ್ದಾರೆ.

ಮಿಜೋರಾಂಗೆ ವಾಪಸಾಗುವ ಬದಲು ತ್ರಿಪುರದಲ್ಲಿ ಪುನರ್ವಸತಿ ಕಲ್ಪಿಸುವ ಬಗ್ಗೆ ಇನ್ನೂ ಯಾವುದೇ ನಿರ್ಧಾರ ತೆಗೆದುಕೊಳ್ಳದ ಕಾರಣ 32,000 ಕ್ಕೂ ಹೆಚ್ಚು ಬ್ರೂ ಸ್ಥಳಾಂತರಗೊಂಡವರಿಗೆ ಪಡಿತರ ಸರಬರಾಜನ್ನು ಮತ್ತೆ ನಿಲ್ಲಿಸಲಾಗಿದೆ ಎಂದು ಹೇಳಲಾಗುತ್ತಿದೆ.

ನಿಷೇದಾಜ್ಞೆ, ಲಾಠಿ ಚಾರ್ಜ್‌ ಮೂಲಕ ಅವರನ್ನು ಸ್ಥಳಾಂತರಿಸಲು ಸರ್ಕಾರ ಮೊದಲು ಪ್ರಯತ್ನಿಸಿತು. ಆದರೆ ಅದು ಸಫಲವಾಗಲಿಲ್ಲ. ನಂತರ ಸರ್ಕಾರ ಇಲ್ಲಿಂದ ಸ್ಥಳಾಂತರಗೊಂಡವರ ಖಾತೆಗೆ 25 ಸಾವಿರ ಹಣ ಹಾಕುವುದಾಗಿಯೂ ಭರವಸೆ ನೀಡಿತ್ತು. ಆದರೂ ಅವರು ಜಗ್ಗಲಿಲ್ಲ. ಹಾಗಾಗಿ ಸರ್ಕಾರ ಈಗ ಅವರಿಗೆ ಮೂಲಭೂತವಾಗಿ ಸಿಗಬೇಕಾದ ಆಹಾರ ಮತ್ತು ವೈದ್ಯಕೀಯ ಸೇವೆಯನ್ನು ನಿಲ್ಲಿಸಿದೆ. ಹಾಗಾಗಿಯೇ ಸುಪ್ರೀಂ ಕೋರ್ಟ್‌ ಸರ್ಕಾರವನ್ನು ಜಾಡಿಸಿದೆ. ಮುಂದೆ ಏನಾಗುತ್ತದೆಯೋ ಗೊತ್ತಿಲ್ಲ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...

ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು ಬಿಸಿಯೂಟ ಯೋಜನೆಯಿಂದ ಹೊರಕ್ಕೆ : ಸಂಸತ್ತಿಗೆ ತಿಳಿಸಿದ ಕೇಂದ್ರ

ಕಳೆದ ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು 'ಪ್ರಧಾನಮಂತ್ರಿ ಪೋಷಣ್ ಯೋಜನೆ'ಯಿಂದ (ಮಧ್ಯಾಹ್ನದ ಬಿಸಿಯೂಟ) ಹೊರ ಬಿದ್ದಿವೆ. 2020-21ರಲ್ಲಿ 11.19 ಲಕ್ಷ ಇದ್ದ ಶಾಲೆಗಳ ಸಂಖ್ಯೆ 2024-25ರಲ್ಲಿ 10.35ಕ್ಕೆ ಕುಸಿದಿದೆ ಎಂದು...

ಭೀಮಾ ಕೋರೆಗಾಂವ್ ಪ್ರಕರಣ: ಗೌತಮ್ ನವಲಖಾಗೆ ಜಾಮೀನಿನ ಮೇಲೆ ದೆಹಲಿಗೆ ತೆರಳಲು ಅನುಮತಿ ನೀಡಿದ ಬಾಂಬೆ ಹೈಕೋರ್ಟ್

ಭೀಮಾ ಕೋರೆಗಾಂವ್ ಯುಎಪಿಎ ಪ್ರಕರಣದಲ್ಲಿ ಜಾಮೀನಿನ ಮೇಲೆ ಹೊರಗಿರುವ ಮಾನವ ಹಕ್ಕುಗಳ ಕಾರ್ಯಕರ್ತ ಗೌತಮ್ ನವಲಖಾ ಅವರಿಗೆ ಪ್ರಕರಣದ ವಿಚಾರಣೆ ನಡೆಯುತ್ತಿರುವಾಗ ನವದೆಹಲಿಯಲ್ಲಿ ವಾಸಿಸಲು ಬಾಂಬೆ ಹೈಕೋರ್ಟ್ ಬುಧವಾರ ಅನುಮತಿ ನೀಡಿದೆ. ಆದಾಗಲೂ, ಮಾನವ...

ಕಾರವಾರ ನೌಕಾ ಪ್ರದೇಶದ ಸುತ್ತಮುತ್ತ ಆತಂಕ ಮೂಡಿಸಿದ ‘ಸೀಗಲ್‌’ ಪಕ್ಷಿ; ಚೀನಾ ನಿರ್ಮಿತ ಜಿಪಿಎಸ್ ಸಾಧನ ಪತ್ತೆ

ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಕರಾವಳಿ ಪ್ರದೇಶದ ಬಳಿ, ಸೂಕ್ಷ್ಮ ನೌಕಾ ವಲಯದ ಬಳಿ ಚೀನಾ ನಿರ್ಮಿತ ಜಿಪಿಎಸ್ ಟ್ರ್ಯಾಕಿಂಗ್ ಸಾಧನವೊಂದು 'ಸೀಗಲ್' (ಸಮುದ್ರಹಕ್ಕಿ) ಪಕ್ಷಿಗೆ ಅಳವಡಿಸಿರುವುದು ಕಂಡುಬಂದ ನಂತರ ಭದ್ರತಾ ಸಂಸ್ಥೆಗಳು...

ಅಣು ಶಕ್ತಿಯ ಖಾಸಗೀಕರಣ : ‘ಶಾಂತಿ’ ಮಸೂದೆಗೆ ಲೋಕಸಭೆ ಅಸ್ತು

ಭಾರತದ ಅಣು ವಿದ್ಯುತ್ ಕ್ಷೇತ್ರದಲ್ಲಿ ಖಾಸಗಿ ವಲಯದ ಪ್ರವೇಶಕ್ಕೆ ದಾರಿ ಮಾಡಿಕೊಡುವ, 'ಭಾರತದ ಪ್ರಗತಿಗಾಗಿ ಅಣು ಶಕ್ತಿಯ ಸುಸ್ಥಿರ ಉತ್ಪಾದನೆ (ಎಸ್‌ಎಚ್‌ಎಎನ್‌ಟಿಐ– ಶಾಂತಿ ಮಸೂದೆ) ಮಸೂದೆಯನ್ನು ಲೋಕಸಭೆ ಬುಧವಾರ (ಡಿ.17) ಅಂಗೀಕರಿಸಿತು. ವಿಪಕ್ಷಗಳ ಸದಸ್ಯರು...

ಮಾದಕ ದ್ರವ್ಯ ಸೇವನೆ, ಲೈಂಗಿಕ ಕಿರುಕುಳಕ್ಕೆ 3 ಲಕ್ಷ ರೂ. ದಂಡ ವಸೂಲಿ: ಬೆಂಗಳೂರಿನ ಅಪಾರ್ಟ್‌ಮೆಂಟ್ ಅಸೋಸಿಯೇಷನ್ ​​ವಿರುದ್ಧ ಪ್ರಕರಣ ದಾಖಲು

ಬೆಂಗಳೂರು: ಪಶ್ಚಿಮ ಬೆಂಗಳೂರಿನ ದೊಡ್ಡಬೆಲೆ ಬಳಿಯ ವಸತಿ ಸಂಕೀರ್ಣವೊಂದರ ಅಪಾರ್ಟ್‌ಮೆಂಟ್ ಮಾಲೀಕರ ಸಂಘದ ವಿರುದ್ಧ ಅಪರಾಧ ಚಟುವಟಿಕೆಗಳಲ್ಲಿ ತೊಡಗಿರುವ ನಿವಾಸಿಗಳಿಂದ ದಂಡ ವಸೂಲಿ ಮಾಡಿದ ಮತ್ತು ಅಪರಾಧಗಳನ್ನು ಮುಚ್ಚಿಟ್ಟ ಆರೋಪದ ಮೇಲೆ ಕುಂಬಳಗೋಡು...

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...