Homeಮುಖಪುಟ"ಯಾವುದೇ ಕಾರಣಗಳಿದ್ದರೂ ಸಹ ಜನರು ಹಸಿವಿನಿಂದ ಸಾಯುವಂತೆ ಮಾಡಬಾರದು" : ಕೇಂದ್ರಕ್ಕೆ ಸುಪ್ರೀಂ ತರಾಟೆ

“ಯಾವುದೇ ಕಾರಣಗಳಿದ್ದರೂ ಸಹ ಜನರು ಹಸಿವಿನಿಂದ ಸಾಯುವಂತೆ ಮಾಡಬಾರದು” : ಕೇಂದ್ರಕ್ಕೆ ಸುಪ್ರೀಂ ತರಾಟೆ

- Advertisement -
- Advertisement -

ತ್ರಿಪುರದ ಶಿಬಿರಗಳಲ್ಲಿ ಆಶ್ರಯ ಪಡೆದಿರುವ ಬ್ರೂ ನಿರಾಶ್ರಿತರಿಗೆ ಪಡಿತರವನ್ನು ಕಡಿತಗೊಳಿಸಿರುವ ಕೇಂದ್ರ ಸರ್ಕಾರದ ಕ್ರಮಕ್ಕೆ ಸುಪ್ರೀಂ ಕೋರ್ಟ್‌ ತೀವ್ರ ಆಕ್ಷೇಪ ವ್ಯಕ್ತಪಡಿಸಿದೆ. ಅಲ್ಲದೇ ಇನ್ನು 15 ದಿನಗಳಲ್ಲಿ ಇದಕ್ಕೆ ಕಾರಣ ನೀಡುವಂತೆ ಆದೇಶಿಸಿದೆ.

“ಈ ಕುರಿತು ಎರಡು ವಾರದಲ್ಲಿ ವರದಿ ನೀಡಿ. ಈ ರೀತಿ ಮಾಡುವುದು ಸರಿಯಲ್ಲ. ಯಾವುದೇ ಕಾರಣಗಳಿದ್ದರೂ ಸಹ ಜನರು ಹಸಿವಿನಿಂದ ಸಾಯುವಂತೆ ಮಾಡಬಾರದು” ಎಂದು ಮುಖ್ಯ ನ್ಯಾಯಮೂರ್ತಿಗಳಾದ ಶರತ್‌ ಅರವಿಂದ್‌ ಬೊಬ್ಡೆ ನೇತೃತ್ವದ ನ್ಯಾಯಪೀಠ ಕೇಂದ್ರ ಸರ್ಕಾರಕ್ಕೆ ಆದೇಶಿಸಿದೆ.

ಹಲವು ಕಾರಣಗಳಿಗಾಗಿ ತಮ್ಮ ಸಂಬಂಧಿಕರನ್ನು ಕಳೆದುಕೊಂಡ 32,000 ಕ್ಕೂ ಹೆಚ್ಚು ಬ್ರೂ ನಿರಾಶ್ರಿತರು ತ್ರಿಪುರದ ಶಿಬಿರಗಳಲ್ಲಿ ವಾಸಿಸುತ್ತಿದ್ದಾರೆ. ಇವರೆಲ್ಲರೂ ಮಿಝೋರಾಂಗೆ ತೆರಳಬೇಕು ಎನ್ನುವುದು ಕೇಂದ್ರ ಸರ್ಕಾರದ ವಾದ.

ಇದಕ್ಕೆ ಪ್ರತಿಯಾಗಿ ಬ್ರೂ ನಿರಾಶ್ರಿತರು ಭಾರತ ದೇಶದಲ್ಲಿ ಎಲ್ಲಿ ಬೇಕಾದರೂ ವಾಸಿಸಲು ಸಂವಿಧಾನ ನಮಗೆ ಹಕ್ಕುಗಳನ್ನು ನೀಡಿದೆ. ನಾವು ಒಳ್ಳೆಯ ನಾಗರಿಕರಾಗಿದ್ದು ನಾವು ಇಲ್ಲಿ ಶಾಂತಿಯಿಂದ ನೆಲೆಸಿದ್ದೇವೆ. ದೇಶದ ನಾಗರಿಕರಿಗೆ ಸಿಗಬೇಕಾದ ಎಲ್ಲಾ ಹಕ್ಕುಗಳು ನಮಗೂ ಸಹ ದಕ್ಕಬೇಕು. ನಮ್ಮ ಸಮಸ್ಯೆಯನ್ನು ಬಗೆಹರಿಸದೇ ಒಂದು ರಾಜ್ಯದಿಂದ ಇನ್ನೊಂದು ರಾಜ್ಯಕ್ಕೆ ನಮ್ಮನ್ನು ದಬ್ಬುವುದು ಸಾವಿನ ಬಾಯಿಗೆ ದೂಡಿದಂತೆಯೇ ಹೊರತು ಮತ್ತೇನಲ್ಲ ಎಂದು ತಮ್ಮ ಅಳಲು ತೋಡಿಕೊಂಡಿದ್ದಾರೆ.

ನಮಗೆ ರೇಷನ್ ನೀಡುವುದನ್ನು ನಿಲ್ಲಿಸಿದ್ದಾರೆ. ವೈದ್ಯಕೀಯ ಸೌಲಭ್ಯವೂ ಇಲ್ಲ. ಒಂದು ವಾರದಲ್ಲಿಯೇ ಸುಮಾರು 7 ಜನ ಹಸಿವಿನಿಂದ ಮಡಿದಿದ್ದಾರೆ. ನಾವು ಕೂಡ ಇಲ್ಲಿಯೇ ಸಾಯಲು ಸಿದ್ದರಿದ್ದೇವೆಯೇ ಹೊರತು ಮಿಝೋರಾಂಗೆ ತೆರಳಿ ಸಾಮಾಜಿಕ, ಧಾರ್ಮಿಕ ಕಿರುಕುಳಕ್ಕೆ ಒಳಗಾಗಲು ಸಿದ್ದರಿಲ್ಲ ಎಂದು ಬ್ರೂ ನಿರಾಶ್ರಿತರು ಪಟ್ಟು ಹಿಡಿದಿದ್ದಾರೆ.

ಬ್ರೂ ನಿರಾಶ್ರಿತರನ್ನು ವಾಪಸ್ ಕಳುಹಿಸಲು ಕೇಂದ್ರದ ಗಡುವು ಮುಗಿದ ಒಂದು ದಿನದ ನಂತರ ಡಿಸೆಂಬರ್‌ 1ರ ಭಾನುವಾರದಿಂದ ಪಡಿತರ ಸರಬರಾಜನ್ನು ನಿಲ್ಲಿಸಲಾಯಿತು. ಒಂಬತ್ತನೇ ಮತ್ತು ಅಂತಿಮ ಹಂತದ ವಾಪಸಾತಿ ಪಂತದಲ್ಲಿ 4,000 ಕ್ಕೂ ಹೆಚ್ಚು ಸ್ಥಳಾಂತರಗೊಂಡ ಕುಟುಂಬಗಳಲ್ಲಿ ಕೇವಲ 171 ಜನರನ್ನು ಮಾತ್ರ ಮಿಜೋರಾಂಗೆ ಕಳುಹಿಸಬಹುದಾಗಿದೆ ಎಂದು ಸ್ಥಳೀಯ ಅಧಿಕಾರಿಗಳು ತಿಳಿಸಿದ್ದಾರೆ.

ಮಿಜೋರಾಂಗೆ ವಾಪಸಾಗುವ ಬದಲು ತ್ರಿಪುರದಲ್ಲಿ ಪುನರ್ವಸತಿ ಕಲ್ಪಿಸುವ ಬಗ್ಗೆ ಇನ್ನೂ ಯಾವುದೇ ನಿರ್ಧಾರ ತೆಗೆದುಕೊಳ್ಳದ ಕಾರಣ 32,000 ಕ್ಕೂ ಹೆಚ್ಚು ಬ್ರೂ ಸ್ಥಳಾಂತರಗೊಂಡವರಿಗೆ ಪಡಿತರ ಸರಬರಾಜನ್ನು ಮತ್ತೆ ನಿಲ್ಲಿಸಲಾಗಿದೆ ಎಂದು ಹೇಳಲಾಗುತ್ತಿದೆ.

ನಿಷೇದಾಜ್ಞೆ, ಲಾಠಿ ಚಾರ್ಜ್‌ ಮೂಲಕ ಅವರನ್ನು ಸ್ಥಳಾಂತರಿಸಲು ಸರ್ಕಾರ ಮೊದಲು ಪ್ರಯತ್ನಿಸಿತು. ಆದರೆ ಅದು ಸಫಲವಾಗಲಿಲ್ಲ. ನಂತರ ಸರ್ಕಾರ ಇಲ್ಲಿಂದ ಸ್ಥಳಾಂತರಗೊಂಡವರ ಖಾತೆಗೆ 25 ಸಾವಿರ ಹಣ ಹಾಕುವುದಾಗಿಯೂ ಭರವಸೆ ನೀಡಿತ್ತು. ಆದರೂ ಅವರು ಜಗ್ಗಲಿಲ್ಲ. ಹಾಗಾಗಿ ಸರ್ಕಾರ ಈಗ ಅವರಿಗೆ ಮೂಲಭೂತವಾಗಿ ಸಿಗಬೇಕಾದ ಆಹಾರ ಮತ್ತು ವೈದ್ಯಕೀಯ ಸೇವೆಯನ್ನು ನಿಲ್ಲಿಸಿದೆ. ಹಾಗಾಗಿಯೇ ಸುಪ್ರೀಂ ಕೋರ್ಟ್‌ ಸರ್ಕಾರವನ್ನು ಜಾಡಿಸಿದೆ. ಮುಂದೆ ಏನಾಗುತ್ತದೆಯೋ ಗೊತ್ತಿಲ್ಲ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಭಾಗ-2: ಎಸ್‌ಐಆರ್ ಜಾರಿಯಿಂದ ಕಾಂಗ್ರೆಸ್‌ ಕಳೆದುಕೊಳ್ಳುವ ಕ್ಷೇತ್ರಗಳೆಷ್ಟು?

30 ಸಾವಿರದಿಂದ ಒಂದು ಸಾವಿರದ ಒಳಗಿನ ಮತಗಳ ಅಂತರದಿಂದ ಗೆದ್ದಿರುವ ಕರ್ನಾಟಕದ 97 ಕ್ಷೇತ್ರಗಳನ್ನು ನಾವು ಪಟ್ಟಿ ಮಾಡಿದ್ದೇವೆ. ಪಶ್ಚಿಮ ಬಂಗಾಳದಲ್ಲಿ ಆದಂತೆಯೇ ರಾಜ್ಯದಲ್ಲಿ ಚುನಾವಣೆ ಸಮೀಪಿಸಿದಾಗ ಎಸ್‌ಐಆರ್ ಜಾರಿಯಾದರೆ ಬಿಜೆಪಿಗೆ ಅನುಕೂಲವಾಗುವ...

ತಮಿಳುನಾಡಿನಲ್ಲಿ ಮೊದಲ ಬಾರಿಗೆ ಸ್ಪರ್ಧಿಸಿ ಗೆದ್ದ 60 ನೂತನ ಶಾಸಕರು

ತಮಿಳುನಾಡು ರಾಜಕಾರಣ ಎಂದರೆ ಅದು ಐದು ದಶಕಗಳಿಂದ ಕೇವಲ ಡಿಎಂಕೆ ಮತ್ತು ಎಐಎಡಿಎಂಕೆ ನಡುವಿನ ಜಿದ್ದಾಜಿದ್ದಿ. ಆದರೆ 2026ರ ಫಲಿತಾಂಶವು ಈ "ದ್ವಿಪಕ್ಷೀಯ" ಸಂಪ್ರದಾಯವನ್ನು ಮುರಿದುಹಾಕಿದೆ. ನಟ ವಿಜಯ್ ನೇತೃತ್ವದ ತಮಿಳಗ ವೆಟ್ರಿ...

‘ಪ್ರಜಾತಂತ್ರಕ್ಕೆ ಬೆದರಿಕೆ ಒಡ್ಡುತ್ತಿರುವ ಎಸ್ಐಆರ್’: ಬಿಜೆಪಿಯ (ಕು)ತಂತ್ರ ಫಲಿಸಿದರೇ ಭಾರತವೇ ಇರುವುದಿಲ್ಲ..!

ಪಂಚರಾಜ್ಯ ಚುನಾವಣಾ ಫಲಿತಾಂಶಗಳು 2026 ಮೇ 4ರಂದು ಹೊರಬಿದ್ದಿದ್ದು, ಭಾರತೀಯ ಜನತಾ ಪಾರ್ಟಿ ಪಶ್ಚಿಮ ಬಂಗಾಳವನ್ನು ತನ್ನ ತೆಕ್ಕೆಗೆ ತೆಗೆದುಕೊಂಡಿದೆ. ಆದರೆ ಈ ಗೆಲುವು ಕೇವಲ ಜನರ ಆದರ್ಶವಲ್ಲ, ಬದಲಿಗೆ ಚುನಾವಣಾ ವ್ಯವಸ್ಥೆಯೇ...

ಬಿಹಾರ-ಬಂಗಾಳದ ಬಳಿಕ ಕರ್ನಾಟಕದ ಸರತಿ; ಎಸ್‌ಐಆರ್ ಜಾರಿಯಿಂದ ಕಾಂಗ್ರೆಸ್‌ ಕಳೆದುಕೊಳ್ಳುವ ಕ್ಷೇತ್ರಗಳೆಷ್ಟು?

ಭಾಗ-1 ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ತರಾತುರಿಯಲ್ಲಿ ಮತದಾರರ ಪಟ್ಟಿ ತೀವ್ರ ಪರಿಷ್ಕರಣೆ (ಎಸ್‌ಐಆರ್) ಜಾರಿ ಮಾಡಿದ ಹಿಂದಿನ ದುರುದ್ದೇಶ ಬಿಹಾರದ ಬಳಿಕ ಈಗ ಪಶ್ಚಿಮ ಬಂಗಾಳದಲ್ಲಿ ಸಾಬೀತಾಗಿದೆ. ಹಿಂದಿನ ಚುನಾವಣೆಗಳಲ್ಲಿ ಕಡಿಮೆ...

ವಿಜಯ್ ಪಕ್ಷದ ಗೆಲುವಿಗೆ ಕಾರಣವಾದ ಡಿಎಂಕೆ-ಎಐಎಡಿಎಂಕೆ ಪಕ್ಷದ ವಲಸೆ ನಾಯಕರು

50 ವರ್ಷಗಳಿಂದ ಡಿಎಂಕೆ (DMK) ಮತ್ತು ಎಐಎಡಿಎಂಕೆ (AIADMK) ಎಂಬ ಎರಡು ದ್ರಾವಿಡ ಪಕ್ಷಗಳ ಅಧಿಪತ್ಯದಲ್ಲಿದ್ದ ತಮಿಳು ಮಣ್ಣಿನಲ್ಲಿ ಈಗ ಮಹತ್ವದ ಬದಲಾವಣೆ ಗಾಳಿ ಬೀಸಿದೆ. ನಟ ವಿಜಯ್ ನೇತೃತ್ವದ 'ತಮಿಳಗ ವೆಟ್ರಿ...

ಪಶ್ಚಿಮ ಬಂಗಾಳದ ಬಿಜೆಪಿ ಗೆಲುವು ಎಸ್‌ಐಆರ್‌ ಕುತಂತ್ರದ ಫಲ?

ಕಳೆದ 15 ವರ್ಷದಿಂದ ಪಶ್ಚಿಮ ಬಂಗಾಳದ ಅಧಿಕಾರದ ಚುಕ್ಕಾಣಿ ಹಿಡಿದಿದ್ದ ಮಮತಾ ಬ್ಯಾನರ್ಜಿ ಆಡಳಿತಕ್ಕೆ 2026ರ ಚುನಾವಣಾ ಫಲಿತಾಂಶ ಬ್ರೇಕ್ ನೀಡಿದೆ.  ಪಶ್ಚಿಮ ಬಂಗಾಳದ ಒಟ್ಟು 293 ಕ್ಷೇತ್ರಗಳ ಪೈಕಿ 200ರಲ್ಲಿ ಬಿಜಿಪಿ...

ಗೋಮಾಂಸ ಸಾಗಣೆ ಆರೋಪದ ಮೇಲೆ ವಾಹನ ಮುಟ್ಟುಗೋಲು: ಉತ್ತರ ಪ್ರದೇಶ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಹೈಕೋರ್ಟ್

ಗೋಮಾಂಸ ಸಾಗಣೆ ಮಾಡುತ್ತಿದ್ದಾರೆ ಎಂದು ಕೇವಲ ಅನುಮಾನದ ಮೇಲೆ ವ್ಯಕ್ತಿಯ ವಿರುದ್ಧ ಕ್ರಮ ಕೈಗೊಳ್ಳುವುದು ಕಾನೂನುಬಾಹಿರ ಎಂದು ಅಲಹಾಬಾದ್ ಹೈಕೋರ್ಟ್ ಅಭಿಪ್ರಾಯಪಟ್ಟಿದ್ದು, ಅಂತಹ ಯಾವುದೇ ಕ್ರಮ ತೆಗೆದುಕೊಳ್ಳುವ ಮೊದಲು ವೈಜ್ಞಾನಿಕ ದೃಢೀಕರಣ ಅಗತ್ಯ...

ಎಕ್ಸಿಟ್‌ ಪೋಲ್ಸ್‌ಗಳು ‘ಹಣ-ಒತ್ತಡ’ದಿಂದ ಕೂಡಿವೆ; ಟಿಎಂಸಿ 226 ಸ್ಥಾನಗಳನ್ನು ಮೀರಲಿದೆ: ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದಲ್ಲಿ ಎರಡನೇ ಹಂತದ ಮತದಾನದ ನಂತರ ಇತ್ತೀಚಿನ ಚುನಾವಣೋತ್ತರ ಸಮೀಕ್ಷೆಗಳ ವಿಶ್ವಾಸಾರ್ಹತೆಯನ್ನು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಬಲವಾಗಿ ತಳ್ಳಿಹಾಕಿದ್ದಾರೆ. ಅವರ ಪಕ್ಷವಾದ ತೃಣಮೂಲ ಕಾಂಗ್ರೆಸ್ (ಟಿಎಂಸಿ) 294 ಸದಸ್ಯರ ವಿಧಾನಸಭೆಯಲ್ಲಿ 226...

ಗುಜರಾತ್‌| ರಾಮ ಮಂದಿರ ಕಾರ್ಯಕ್ರಮದಲ್ಲಿ ದಲಿತರಿಗೆ ಪ್ರತ್ಯೇಕ ಊಟದ ವ್ಯವಸ್ಥೆ; ಅಸ್ಪೃಶ್ಯತೆ ಆಚರಣೆ ಆರೋಪ

ಗುಜರಾತ್‌ನ ಜುನಾಗಢ್ ಜಿಲ್ಲೆಯಲ್ಲಿ ಜಾತಿ ತಾರತಮ್ಯದ ಆರೋಪ ಹೊರಿಸಲಾಗಿದ್ದು, ಧಾರ್ಮಿಕ ಕಾರ್ಯಕ್ರಮದ ಸಂದರ್ಭದಲ್ಲಿ ದೇವಾಲಯದ ಆಯೋಜಕರು ಅಸ್ಪೃಶ್ಯತೆ ಆಚರಿಸುತ್ತಿದ್ದಾರೆ ಎಂದು ದಲಿತ ಸಮುದಾಯದ ಸದಸ್ಯರು ಆರೋಪಿಸಿದ್ದಾರೆ. ಭುಟ್ಡಿ ಗ್ರಾಮದ ನಿವಾಸಿ 25 ವರ್ಷದ ಅಜಯ್...

ಕೋಗಿಲು ಬಡಾವಣೆ ಮನೆಗಳ ನೆಲಸಮ: ಹದಿನೈದು ದಿನಗಳೊಳಗೆ ಪುನರ್ವಸತಿ ಕಲ್ಪಿಸದಿದ್ದರೆ ತೀವ್ರ ಹೋರಾಟದ ಎಚ್ಚರಿಕೆ

ಬೆಂಗಳೂರು ಉತ್ತರ ತಾಲ್ಲೂಕಿನ ಯಲಹಂಕ ಪ್ರದೇಶದ ಕೋಗಿಲು ಲೇಔಟ್‌ನ ಫಕೀರ್ ಕಾಲೋನಿ ಮತ್ತು ಮಹಾನಾಯಕ ಅಂಬೇಡ್ಕರ್ ನಗರ (ವಾಸಿಂ ಲೇಔಟ್‌) ಪ್ರದೇಶದ ಬಡ ನಿವಾಸಿಗಳ ಮನೆಗಳನ್ನು 2025 ಡಿಸೆಂಬರ್ 20ರಂದು ಬೆಳಿಗ್ಗೆ ಸುಮಾರು...