Homeಮುಖಪುಟ"ಯಾವುದೇ ಕಾರಣಗಳಿದ್ದರೂ ಸಹ ಜನರು ಹಸಿವಿನಿಂದ ಸಾಯುವಂತೆ ಮಾಡಬಾರದು" : ಕೇಂದ್ರಕ್ಕೆ ಸುಪ್ರೀಂ ತರಾಟೆ

“ಯಾವುದೇ ಕಾರಣಗಳಿದ್ದರೂ ಸಹ ಜನರು ಹಸಿವಿನಿಂದ ಸಾಯುವಂತೆ ಮಾಡಬಾರದು” : ಕೇಂದ್ರಕ್ಕೆ ಸುಪ್ರೀಂ ತರಾಟೆ

- Advertisement -
- Advertisement -

ತ್ರಿಪುರದ ಶಿಬಿರಗಳಲ್ಲಿ ಆಶ್ರಯ ಪಡೆದಿರುವ ಬ್ರೂ ನಿರಾಶ್ರಿತರಿಗೆ ಪಡಿತರವನ್ನು ಕಡಿತಗೊಳಿಸಿರುವ ಕೇಂದ್ರ ಸರ್ಕಾರದ ಕ್ರಮಕ್ಕೆ ಸುಪ್ರೀಂ ಕೋರ್ಟ್‌ ತೀವ್ರ ಆಕ್ಷೇಪ ವ್ಯಕ್ತಪಡಿಸಿದೆ. ಅಲ್ಲದೇ ಇನ್ನು 15 ದಿನಗಳಲ್ಲಿ ಇದಕ್ಕೆ ಕಾರಣ ನೀಡುವಂತೆ ಆದೇಶಿಸಿದೆ.

“ಈ ಕುರಿತು ಎರಡು ವಾರದಲ್ಲಿ ವರದಿ ನೀಡಿ. ಈ ರೀತಿ ಮಾಡುವುದು ಸರಿಯಲ್ಲ. ಯಾವುದೇ ಕಾರಣಗಳಿದ್ದರೂ ಸಹ ಜನರು ಹಸಿವಿನಿಂದ ಸಾಯುವಂತೆ ಮಾಡಬಾರದು” ಎಂದು ಮುಖ್ಯ ನ್ಯಾಯಮೂರ್ತಿಗಳಾದ ಶರತ್‌ ಅರವಿಂದ್‌ ಬೊಬ್ಡೆ ನೇತೃತ್ವದ ನ್ಯಾಯಪೀಠ ಕೇಂದ್ರ ಸರ್ಕಾರಕ್ಕೆ ಆದೇಶಿಸಿದೆ.

ಹಲವು ಕಾರಣಗಳಿಗಾಗಿ ತಮ್ಮ ಸಂಬಂಧಿಕರನ್ನು ಕಳೆದುಕೊಂಡ 32,000 ಕ್ಕೂ ಹೆಚ್ಚು ಬ್ರೂ ನಿರಾಶ್ರಿತರು ತ್ರಿಪುರದ ಶಿಬಿರಗಳಲ್ಲಿ ವಾಸಿಸುತ್ತಿದ್ದಾರೆ. ಇವರೆಲ್ಲರೂ ಮಿಝೋರಾಂಗೆ ತೆರಳಬೇಕು ಎನ್ನುವುದು ಕೇಂದ್ರ ಸರ್ಕಾರದ ವಾದ.

ಇದಕ್ಕೆ ಪ್ರತಿಯಾಗಿ ಬ್ರೂ ನಿರಾಶ್ರಿತರು ಭಾರತ ದೇಶದಲ್ಲಿ ಎಲ್ಲಿ ಬೇಕಾದರೂ ವಾಸಿಸಲು ಸಂವಿಧಾನ ನಮಗೆ ಹಕ್ಕುಗಳನ್ನು ನೀಡಿದೆ. ನಾವು ಒಳ್ಳೆಯ ನಾಗರಿಕರಾಗಿದ್ದು ನಾವು ಇಲ್ಲಿ ಶಾಂತಿಯಿಂದ ನೆಲೆಸಿದ್ದೇವೆ. ದೇಶದ ನಾಗರಿಕರಿಗೆ ಸಿಗಬೇಕಾದ ಎಲ್ಲಾ ಹಕ್ಕುಗಳು ನಮಗೂ ಸಹ ದಕ್ಕಬೇಕು. ನಮ್ಮ ಸಮಸ್ಯೆಯನ್ನು ಬಗೆಹರಿಸದೇ ಒಂದು ರಾಜ್ಯದಿಂದ ಇನ್ನೊಂದು ರಾಜ್ಯಕ್ಕೆ ನಮ್ಮನ್ನು ದಬ್ಬುವುದು ಸಾವಿನ ಬಾಯಿಗೆ ದೂಡಿದಂತೆಯೇ ಹೊರತು ಮತ್ತೇನಲ್ಲ ಎಂದು ತಮ್ಮ ಅಳಲು ತೋಡಿಕೊಂಡಿದ್ದಾರೆ.

ನಮಗೆ ರೇಷನ್ ನೀಡುವುದನ್ನು ನಿಲ್ಲಿಸಿದ್ದಾರೆ. ವೈದ್ಯಕೀಯ ಸೌಲಭ್ಯವೂ ಇಲ್ಲ. ಒಂದು ವಾರದಲ್ಲಿಯೇ ಸುಮಾರು 7 ಜನ ಹಸಿವಿನಿಂದ ಮಡಿದಿದ್ದಾರೆ. ನಾವು ಕೂಡ ಇಲ್ಲಿಯೇ ಸಾಯಲು ಸಿದ್ದರಿದ್ದೇವೆಯೇ ಹೊರತು ಮಿಝೋರಾಂಗೆ ತೆರಳಿ ಸಾಮಾಜಿಕ, ಧಾರ್ಮಿಕ ಕಿರುಕುಳಕ್ಕೆ ಒಳಗಾಗಲು ಸಿದ್ದರಿಲ್ಲ ಎಂದು ಬ್ರೂ ನಿರಾಶ್ರಿತರು ಪಟ್ಟು ಹಿಡಿದಿದ್ದಾರೆ.

ಬ್ರೂ ನಿರಾಶ್ರಿತರನ್ನು ವಾಪಸ್ ಕಳುಹಿಸಲು ಕೇಂದ್ರದ ಗಡುವು ಮುಗಿದ ಒಂದು ದಿನದ ನಂತರ ಡಿಸೆಂಬರ್‌ 1ರ ಭಾನುವಾರದಿಂದ ಪಡಿತರ ಸರಬರಾಜನ್ನು ನಿಲ್ಲಿಸಲಾಯಿತು. ಒಂಬತ್ತನೇ ಮತ್ತು ಅಂತಿಮ ಹಂತದ ವಾಪಸಾತಿ ಪಂತದಲ್ಲಿ 4,000 ಕ್ಕೂ ಹೆಚ್ಚು ಸ್ಥಳಾಂತರಗೊಂಡ ಕುಟುಂಬಗಳಲ್ಲಿ ಕೇವಲ 171 ಜನರನ್ನು ಮಾತ್ರ ಮಿಜೋರಾಂಗೆ ಕಳುಹಿಸಬಹುದಾಗಿದೆ ಎಂದು ಸ್ಥಳೀಯ ಅಧಿಕಾರಿಗಳು ತಿಳಿಸಿದ್ದಾರೆ.

ಮಿಜೋರಾಂಗೆ ವಾಪಸಾಗುವ ಬದಲು ತ್ರಿಪುರದಲ್ಲಿ ಪುನರ್ವಸತಿ ಕಲ್ಪಿಸುವ ಬಗ್ಗೆ ಇನ್ನೂ ಯಾವುದೇ ನಿರ್ಧಾರ ತೆಗೆದುಕೊಳ್ಳದ ಕಾರಣ 32,000 ಕ್ಕೂ ಹೆಚ್ಚು ಬ್ರೂ ಸ್ಥಳಾಂತರಗೊಂಡವರಿಗೆ ಪಡಿತರ ಸರಬರಾಜನ್ನು ಮತ್ತೆ ನಿಲ್ಲಿಸಲಾಗಿದೆ ಎಂದು ಹೇಳಲಾಗುತ್ತಿದೆ.

ನಿಷೇದಾಜ್ಞೆ, ಲಾಠಿ ಚಾರ್ಜ್‌ ಮೂಲಕ ಅವರನ್ನು ಸ್ಥಳಾಂತರಿಸಲು ಸರ್ಕಾರ ಮೊದಲು ಪ್ರಯತ್ನಿಸಿತು. ಆದರೆ ಅದು ಸಫಲವಾಗಲಿಲ್ಲ. ನಂತರ ಸರ್ಕಾರ ಇಲ್ಲಿಂದ ಸ್ಥಳಾಂತರಗೊಂಡವರ ಖಾತೆಗೆ 25 ಸಾವಿರ ಹಣ ಹಾಕುವುದಾಗಿಯೂ ಭರವಸೆ ನೀಡಿತ್ತು. ಆದರೂ ಅವರು ಜಗ್ಗಲಿಲ್ಲ. ಹಾಗಾಗಿ ಸರ್ಕಾರ ಈಗ ಅವರಿಗೆ ಮೂಲಭೂತವಾಗಿ ಸಿಗಬೇಕಾದ ಆಹಾರ ಮತ್ತು ವೈದ್ಯಕೀಯ ಸೇವೆಯನ್ನು ನಿಲ್ಲಿಸಿದೆ. ಹಾಗಾಗಿಯೇ ಸುಪ್ರೀಂ ಕೋರ್ಟ್‌ ಸರ್ಕಾರವನ್ನು ಜಾಡಿಸಿದೆ. ಮುಂದೆ ಏನಾಗುತ್ತದೆಯೋ ಗೊತ್ತಿಲ್ಲ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...