Homeಮುಖಪುಟ"ಯಾವುದೇ ಕಾರಣಗಳಿದ್ದರೂ ಸಹ ಜನರು ಹಸಿವಿನಿಂದ ಸಾಯುವಂತೆ ಮಾಡಬಾರದು" : ಕೇಂದ್ರಕ್ಕೆ ಸುಪ್ರೀಂ ತರಾಟೆ

“ಯಾವುದೇ ಕಾರಣಗಳಿದ್ದರೂ ಸಹ ಜನರು ಹಸಿವಿನಿಂದ ಸಾಯುವಂತೆ ಮಾಡಬಾರದು” : ಕೇಂದ್ರಕ್ಕೆ ಸುಪ್ರೀಂ ತರಾಟೆ

- Advertisement -
- Advertisement -

ತ್ರಿಪುರದ ಶಿಬಿರಗಳಲ್ಲಿ ಆಶ್ರಯ ಪಡೆದಿರುವ ಬ್ರೂ ನಿರಾಶ್ರಿತರಿಗೆ ಪಡಿತರವನ್ನು ಕಡಿತಗೊಳಿಸಿರುವ ಕೇಂದ್ರ ಸರ್ಕಾರದ ಕ್ರಮಕ್ಕೆ ಸುಪ್ರೀಂ ಕೋರ್ಟ್‌ ತೀವ್ರ ಆಕ್ಷೇಪ ವ್ಯಕ್ತಪಡಿಸಿದೆ. ಅಲ್ಲದೇ ಇನ್ನು 15 ದಿನಗಳಲ್ಲಿ ಇದಕ್ಕೆ ಕಾರಣ ನೀಡುವಂತೆ ಆದೇಶಿಸಿದೆ.

“ಈ ಕುರಿತು ಎರಡು ವಾರದಲ್ಲಿ ವರದಿ ನೀಡಿ. ಈ ರೀತಿ ಮಾಡುವುದು ಸರಿಯಲ್ಲ. ಯಾವುದೇ ಕಾರಣಗಳಿದ್ದರೂ ಸಹ ಜನರು ಹಸಿವಿನಿಂದ ಸಾಯುವಂತೆ ಮಾಡಬಾರದು” ಎಂದು ಮುಖ್ಯ ನ್ಯಾಯಮೂರ್ತಿಗಳಾದ ಶರತ್‌ ಅರವಿಂದ್‌ ಬೊಬ್ಡೆ ನೇತೃತ್ವದ ನ್ಯಾಯಪೀಠ ಕೇಂದ್ರ ಸರ್ಕಾರಕ್ಕೆ ಆದೇಶಿಸಿದೆ.

ಹಲವು ಕಾರಣಗಳಿಗಾಗಿ ತಮ್ಮ ಸಂಬಂಧಿಕರನ್ನು ಕಳೆದುಕೊಂಡ 32,000 ಕ್ಕೂ ಹೆಚ್ಚು ಬ್ರೂ ನಿರಾಶ್ರಿತರು ತ್ರಿಪುರದ ಶಿಬಿರಗಳಲ್ಲಿ ವಾಸಿಸುತ್ತಿದ್ದಾರೆ. ಇವರೆಲ್ಲರೂ ಮಿಝೋರಾಂಗೆ ತೆರಳಬೇಕು ಎನ್ನುವುದು ಕೇಂದ್ರ ಸರ್ಕಾರದ ವಾದ.

ಇದಕ್ಕೆ ಪ್ರತಿಯಾಗಿ ಬ್ರೂ ನಿರಾಶ್ರಿತರು ಭಾರತ ದೇಶದಲ್ಲಿ ಎಲ್ಲಿ ಬೇಕಾದರೂ ವಾಸಿಸಲು ಸಂವಿಧಾನ ನಮಗೆ ಹಕ್ಕುಗಳನ್ನು ನೀಡಿದೆ. ನಾವು ಒಳ್ಳೆಯ ನಾಗರಿಕರಾಗಿದ್ದು ನಾವು ಇಲ್ಲಿ ಶಾಂತಿಯಿಂದ ನೆಲೆಸಿದ್ದೇವೆ. ದೇಶದ ನಾಗರಿಕರಿಗೆ ಸಿಗಬೇಕಾದ ಎಲ್ಲಾ ಹಕ್ಕುಗಳು ನಮಗೂ ಸಹ ದಕ್ಕಬೇಕು. ನಮ್ಮ ಸಮಸ್ಯೆಯನ್ನು ಬಗೆಹರಿಸದೇ ಒಂದು ರಾಜ್ಯದಿಂದ ಇನ್ನೊಂದು ರಾಜ್ಯಕ್ಕೆ ನಮ್ಮನ್ನು ದಬ್ಬುವುದು ಸಾವಿನ ಬಾಯಿಗೆ ದೂಡಿದಂತೆಯೇ ಹೊರತು ಮತ್ತೇನಲ್ಲ ಎಂದು ತಮ್ಮ ಅಳಲು ತೋಡಿಕೊಂಡಿದ್ದಾರೆ.

ನಮಗೆ ರೇಷನ್ ನೀಡುವುದನ್ನು ನಿಲ್ಲಿಸಿದ್ದಾರೆ. ವೈದ್ಯಕೀಯ ಸೌಲಭ್ಯವೂ ಇಲ್ಲ. ಒಂದು ವಾರದಲ್ಲಿಯೇ ಸುಮಾರು 7 ಜನ ಹಸಿವಿನಿಂದ ಮಡಿದಿದ್ದಾರೆ. ನಾವು ಕೂಡ ಇಲ್ಲಿಯೇ ಸಾಯಲು ಸಿದ್ದರಿದ್ದೇವೆಯೇ ಹೊರತು ಮಿಝೋರಾಂಗೆ ತೆರಳಿ ಸಾಮಾಜಿಕ, ಧಾರ್ಮಿಕ ಕಿರುಕುಳಕ್ಕೆ ಒಳಗಾಗಲು ಸಿದ್ದರಿಲ್ಲ ಎಂದು ಬ್ರೂ ನಿರಾಶ್ರಿತರು ಪಟ್ಟು ಹಿಡಿದಿದ್ದಾರೆ.

ಬ್ರೂ ನಿರಾಶ್ರಿತರನ್ನು ವಾಪಸ್ ಕಳುಹಿಸಲು ಕೇಂದ್ರದ ಗಡುವು ಮುಗಿದ ಒಂದು ದಿನದ ನಂತರ ಡಿಸೆಂಬರ್‌ 1ರ ಭಾನುವಾರದಿಂದ ಪಡಿತರ ಸರಬರಾಜನ್ನು ನಿಲ್ಲಿಸಲಾಯಿತು. ಒಂಬತ್ತನೇ ಮತ್ತು ಅಂತಿಮ ಹಂತದ ವಾಪಸಾತಿ ಪಂತದಲ್ಲಿ 4,000 ಕ್ಕೂ ಹೆಚ್ಚು ಸ್ಥಳಾಂತರಗೊಂಡ ಕುಟುಂಬಗಳಲ್ಲಿ ಕೇವಲ 171 ಜನರನ್ನು ಮಾತ್ರ ಮಿಜೋರಾಂಗೆ ಕಳುಹಿಸಬಹುದಾಗಿದೆ ಎಂದು ಸ್ಥಳೀಯ ಅಧಿಕಾರಿಗಳು ತಿಳಿಸಿದ್ದಾರೆ.

ಮಿಜೋರಾಂಗೆ ವಾಪಸಾಗುವ ಬದಲು ತ್ರಿಪುರದಲ್ಲಿ ಪುನರ್ವಸತಿ ಕಲ್ಪಿಸುವ ಬಗ್ಗೆ ಇನ್ನೂ ಯಾವುದೇ ನಿರ್ಧಾರ ತೆಗೆದುಕೊಳ್ಳದ ಕಾರಣ 32,000 ಕ್ಕೂ ಹೆಚ್ಚು ಬ್ರೂ ಸ್ಥಳಾಂತರಗೊಂಡವರಿಗೆ ಪಡಿತರ ಸರಬರಾಜನ್ನು ಮತ್ತೆ ನಿಲ್ಲಿಸಲಾಗಿದೆ ಎಂದು ಹೇಳಲಾಗುತ್ತಿದೆ.

ನಿಷೇದಾಜ್ಞೆ, ಲಾಠಿ ಚಾರ್ಜ್‌ ಮೂಲಕ ಅವರನ್ನು ಸ್ಥಳಾಂತರಿಸಲು ಸರ್ಕಾರ ಮೊದಲು ಪ್ರಯತ್ನಿಸಿತು. ಆದರೆ ಅದು ಸಫಲವಾಗಲಿಲ್ಲ. ನಂತರ ಸರ್ಕಾರ ಇಲ್ಲಿಂದ ಸ್ಥಳಾಂತರಗೊಂಡವರ ಖಾತೆಗೆ 25 ಸಾವಿರ ಹಣ ಹಾಕುವುದಾಗಿಯೂ ಭರವಸೆ ನೀಡಿತ್ತು. ಆದರೂ ಅವರು ಜಗ್ಗಲಿಲ್ಲ. ಹಾಗಾಗಿ ಸರ್ಕಾರ ಈಗ ಅವರಿಗೆ ಮೂಲಭೂತವಾಗಿ ಸಿಗಬೇಕಾದ ಆಹಾರ ಮತ್ತು ವೈದ್ಯಕೀಯ ಸೇವೆಯನ್ನು ನಿಲ್ಲಿಸಿದೆ. ಹಾಗಾಗಿಯೇ ಸುಪ್ರೀಂ ಕೋರ್ಟ್‌ ಸರ್ಕಾರವನ್ನು ಜಾಡಿಸಿದೆ. ಮುಂದೆ ಏನಾಗುತ್ತದೆಯೋ ಗೊತ್ತಿಲ್ಲ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....