Homeಮುಖಪುಟ''ಆತುರದ ನಿರ್ಧಾರ ತೆಗೆದುಕೊಳ್ಳಬೇಡಿ: ಕುಸ್ತಿಪಟುಗಳಿಗೆ ಕಪಿಲ್ ದೇವ್ ಸಲಹೆ; ಪ್ರತಿಭಟನೆಗೆ 1983ರ ವಿಶ್ವಕಪ್ ವಿಜೇತ ಕ್ರಿಕೆಟ್...

”ಆತುರದ ನಿರ್ಧಾರ ತೆಗೆದುಕೊಳ್ಳಬೇಡಿ: ಕುಸ್ತಿಪಟುಗಳಿಗೆ ಕಪಿಲ್ ದೇವ್ ಸಲಹೆ; ಪ್ರತಿಭಟನೆಗೆ 1983ರ ವಿಶ್ವಕಪ್ ವಿಜೇತ ಕ್ರಿಕೆಟ್ ತಂಡದಿಂದ ಬೆಂಬಲ

- Advertisement -
- Advertisement -

ಪ್ರತಿಭಟನಾ ನಿರತ ಕುಸ್ತಿಪಟುಗಳ ಜೊತೆಗೆ ಕೇಂದ್ರ ಸರ್ಕಾರ ಹಾಗೂ ದೆಹಲಿ ಪೊಲೀಸರು ನಡೆದುಕೊಳ್ಳುತ್ತಿರುವ ನಡೆಯ ವಿರುದ್ಧ 1983ರ ವಿಶ್ವಕಪ್ ವಿಜೇತ ಕ್ರಿಕೆಟ್ ತಂಡದ ಸದಸ್ಯರು ಶುಕ್ರವಾರ ತಮ್ಮ ಅಸಮ್ಮತಿಯನ್ನು ವ್ಯಕ್ತಪಡಿಸಿದರು. ಅದರ ಜೊತೆಗೆ ಕ್ರೀಡಾಪಟುಗಳಿಗೆ ಯಾವುದೇ ಹಠಾತ್ ನಿರ್ಧಾರಗಳನ್ನು ತೆಗೆದುಕೊಳ್ಳದಂತೆ ಸಲಹೆ ನೀಡಿದರು.

ಲೈಂಗಿಕ ಕಿರುಕುಳದ ವಿರುದ್ಧ ನಡೆಯುತ್ತಿರುವ ಪ್ರತಿಭಟನೆಯ ಭಾಗವಾಗಿ ಮಂಗಳವಾರ ನೊಂದ ಕುಸ್ತಿಪಟುಗಳು ತಮ್ಮ ಪದಕಗಳನ್ನು ಪವಿತ್ರ ಗಂಗಾ ನದಿಗೆ ಎಸೆಯಲು ಯೋಜಿಸಿದ್ದರು, ಆದರೆ ಷರತ್ತಿನ ಮೇಲೆ ರೈತ ನಾಯಕ ನರೇಶ್ ಟಿಕಾಯತ್ ಅವರು ಕ್ರೀಡಾಪಟುಗಳನ್ನು ತಡೆದರು. ಇದೀಗ ವಿಶ್ವಕಪ್ ವಿಜೇತ ತಂಡ ಕೂಡ ಕುಸ್ತಿಪಟುಗಳ ಪ್ರತಿಭಟನೆಗೆ ಬೆಂಬಲ ನೀಡಿದ್ದಾರೆ.

”ನಮ್ಮ ಚಾಂಪಿಯನ್ ಕುಸ್ತಿಪಟುಗಳನ್ನು ಅಮಾನುಷವಾಗಿ ನಡೆಸುತ್ತಿರುವ ದೃಶ್ಯಗಳನ್ನು ನೀಓಡಿದ ಮೇಲೆ ನಮಗೆ ತುಂಬಾ ದುಖಃವಾಗಿದೆ. ಇದರಿಂದ ನಾವು ವಿಚಲಿತರಾಗಿದ್ದೇವೆ. ಅವರು ಕಷ್ಟಪಟ್ಟು ಗಳಿಸಿದ ಪದಕಗಳನ್ನು ಗಂಗಾ ನದಿಗೆ ಎಸೆಯಲು ಯೋಚಿಸುತ್ತಿದ್ದಾರೆ ಎಂದು ನಾವು ಹೆಚ್ಚು ಕಾಳಜಿ ವಹಿಸುತ್ತೇವೆ” ಎಂದು 1983 ರ ವಿಶ್ವಕಪ್ ವಿಜೇತ ತಂಡವು ಹೇಳಿದೆ.

“ಆ ಪದಕಗಳು ವರ್ಷಗಳ ಪ್ರಯತ್ನ, ತ್ಯಾಗ, ಸಂಕಲ್ಪ ಮತ್ತು ಶ್ರದ್ಧೆಗಳನ್ನು ಒಳಗೊಂಡಿವೆ ಮತ್ತು ಅವು ಕೇವಲ ನಿಮಗೆ ಮಾತ್ರ ಸಂಬಂಧಸಿದ್ದಲ್ಲ, ಅವು ರಾಷ್ಟ್ರದ ಹೆಮ್ಮೆ ಮತ್ತು ಸಂತೋಷವಾಗಿವೆ. ಈ ವಿಷಯದಲ್ಲಿ ಯಾವುದೇ ಆತುರದ ನಿರ್ಧಾರವನ್ನು ತೆಗೆದುಕೊಳ್ಳದಂತೆ ನಾವು ಅವರನ್ನು ಒತ್ತಾಯಿಸುತ್ತೇವೆ ಮತ್ತು ಅವರ ಕುಂದುಕೊರತೆಗಳನ್ನು ಕೇಳುತ್ತೇವೆ. ನೆಲದ ಕಾನೂನು ಮೇಲುಗೈ ಸಾಧಿಸಲಿ” ಎಂದು ಹೇಳಿದೆ.

“ಈ ವಿಷಯದಲ್ಲಿ ಯಾವುದೇ ಆತುರದ ನಿರ್ಧಾರ ತೆಗೆದುಕೊಳ್ಳದಂತೆ ನಾವು ಅವರನ್ನು ಒತ್ತಾಯಿಸುತ್ತೇವೆ ಮತ್ತು ಅವರ ಕುಂದುಕೊರತೆಗಳನ್ನು ಆಲಿಸಿ ಶೀಘ್ರವಾಗಿ ಪರಿಹರಿಸಲಾಗುತ್ತದೆ. ನೆಲದ ಕಾನೂನು ಮೇಲುಗೈ ಸಾಧಿಸಲಿ” ಎಂದು ಲೆಜೆಂಡರಿ ನಾಯಕ ಕಪಿಲ್ ದೇವ್ ನೇತೃತ್ವದ ಕ್ರಿಕೆಟ್ ತಂಡ ಮತ್ತು ಐಕಾನ್‌ಗಳು ಸೇರಿದಂತೆ ಸುನಿಲ್ ಗವಾಸ್ಕರ್ ಮತ್ತು ಮೊಹಿಂದರ್ ಅಮರನಾಥ್ ಮನವಿ ಮಾಡಿದರು.

ಇದನ್ನೂ ಓದಿ: ಬಿಜೆಪಿ ಸಂಸದನ ವಿರುದ್ಧ ಗಂಭೀರ ಆರೋಪಗಳಿದ್ದರೂ ಕ್ರಮ ಏಕೆ ಕೈಗೊಂಡಿಲ್ಲ?: ಪ್ರಧಾನಿ ಮೋದಿಗೆ ಪ್ರಿಯಾಂಕಾ ಗಾಂಧಿ ಪ್ರಶ್ನೆ

ಮಂಗಳವಾರ, ಅಂತರಾಷ್ಟ್ರೀಯ ಕುಸ್ತಿ ಸಂಸ್ಥೆ ಯುನೈಟೆಡ್ ವರ್ಲ್ಡ್ ವ್ರೆಸ್ಲಿಂಗ್ (UWW) ಫೆಡರೇಶನ್ ಮುಖ್ಯಸ್ಥರ ವಿರುದ್ಧ ‘ತನಿಖೆ ಬಗ್ಗೆ ನಿರಾಶೆ’ ವ್ಯಕ್ತಪಡಿಸಿದೆ ಮತ್ತು 45 ದಿನಗಳಲ್ಲಿ ಅದರ ಅಧ್ಯಕ್ಷ ಸ್ಥಾನಕ್ಕೆ  ಚುನಾವಣೆಗಳನ್ನು ನಡೆಸದಿದ್ದರೆ ಫೆಡರೇಶನ್ ಅನ್ನು ಅಮಾನತುಗೊಳಿಸುವುದಾಗಿ ಬೆದರಿಕೆ ಹಾಕಿದೆ.

ಮಹಿಳಾ ಕುಸ್ತಿಪಟುಗಳ ಮೇಲೆ ಲೈಂಗಿಕ ಶೋಷಣೆ ಮಾಡಿದ ಆರೋಪದ ಮೇಲೆ ಕುಸ್ತಿಪಟುಗಳು ಭಾರತೀಯ ಕುಸ್ತಿ ಫೆಡರೇಶನ್ (ಡಬ್ಲ್ಯುಎಫ್‌ಐ) ಮುಖ್ಯಸ್ಥ ಬಿರ್ಜ್ ಭೂಷಣ್ ಶರಣ್ ಸಿಂಗ್ ಅವರನ್ನು ಬಂಧಿಸಬೇಕೆಂದು ಅಂತರಾಷ್ಟ್ರೀಯ ಕುಸ್ತಿ ಸಂಸ್ಥೆ ಯುನೈಟೆಡ್ ವರ್ಲ್ಡ್ ವ್ರೆಸ್ಲಿಂಗ್ ಒತ್ತಾಯಿಸಿದ್ದಾರೆ.

ಮೇ 28ರಂದು, ದೆಹಲಿ ಪೊಲೀಸರು ಅನುಮತಿಯಿಲ್ಲದೆ ಹೊಸ ಸಂಸತ್ ಭವನದ ಕಡೆಗೆ ಮೆರವಣಿಗೆ ನಡೆಸಿದಾಗ ಕಾನೂನು ಮತ್ತು ಸುವ್ಯವಸ್ಥೆ ಉಲ್ಲಂಘನೆಗಾಗಿ ಕುಸ್ತಿಪಟುಗಳನ್ನು ಬಂಧಿಸಿದ್ದರು. ಅಷ್ಟೇ ಅಲ್ಲದೇ ಕ್ರೀಡಾಪಟುಗಳ ವಿರುದ್ದ ಪ್ರಕರಣ ದಾಖಲಿಸಿದ್ದಾರೆ.

ದೆಹಲಿಯ ಜಂತರ್‌ಮಂತರ್‌ ನಲ್ಲಿ ಕ್ರೀಡಾಪಟುಗಳು ಪ್ರತಿಭಟನೆ ನಡೆಸುತ್ತಿದ್ದರು ಆದರೆ ಈ ಬೆಳವಳಿಗೆ ನಂತರ ಇದೀಗ ಅವರಿಗೆ ಅಲ್ಲಿ ಪ್ರತಿಭಟನೆ ನಡೆಸಲು ಪೊಲೀಸರು ಬಿಡುವುದಿಲ್ಲ ಎಂದು ಹೇಳಿದ್ದಾರೆ.

ಕುಸ್ತಿಪಟುಗಳ ವಿರುದ್ಧ ಪೊಲೀಸರ ಕ್ರಮಕ್ಕೆ ವಿವಿಧ ವಲಯಗಳಿಂದ ಟೀಕೆ ವ್ಯಕ್ತವಾಗಿತ್ತು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...