Homeಮುಖಪುಟ''ಆತುರದ ನಿರ್ಧಾರ ತೆಗೆದುಕೊಳ್ಳಬೇಡಿ: ಕುಸ್ತಿಪಟುಗಳಿಗೆ ಕಪಿಲ್ ದೇವ್ ಸಲಹೆ; ಪ್ರತಿಭಟನೆಗೆ 1983ರ ವಿಶ್ವಕಪ್ ವಿಜೇತ ಕ್ರಿಕೆಟ್...

”ಆತುರದ ನಿರ್ಧಾರ ತೆಗೆದುಕೊಳ್ಳಬೇಡಿ: ಕುಸ್ತಿಪಟುಗಳಿಗೆ ಕಪಿಲ್ ದೇವ್ ಸಲಹೆ; ಪ್ರತಿಭಟನೆಗೆ 1983ರ ವಿಶ್ವಕಪ್ ವಿಜೇತ ಕ್ರಿಕೆಟ್ ತಂಡದಿಂದ ಬೆಂಬಲ

- Advertisement -
- Advertisement -

ಪ್ರತಿಭಟನಾ ನಿರತ ಕುಸ್ತಿಪಟುಗಳ ಜೊತೆಗೆ ಕೇಂದ್ರ ಸರ್ಕಾರ ಹಾಗೂ ದೆಹಲಿ ಪೊಲೀಸರು ನಡೆದುಕೊಳ್ಳುತ್ತಿರುವ ನಡೆಯ ವಿರುದ್ಧ 1983ರ ವಿಶ್ವಕಪ್ ವಿಜೇತ ಕ್ರಿಕೆಟ್ ತಂಡದ ಸದಸ್ಯರು ಶುಕ್ರವಾರ ತಮ್ಮ ಅಸಮ್ಮತಿಯನ್ನು ವ್ಯಕ್ತಪಡಿಸಿದರು. ಅದರ ಜೊತೆಗೆ ಕ್ರೀಡಾಪಟುಗಳಿಗೆ ಯಾವುದೇ ಹಠಾತ್ ನಿರ್ಧಾರಗಳನ್ನು ತೆಗೆದುಕೊಳ್ಳದಂತೆ ಸಲಹೆ ನೀಡಿದರು.

ಲೈಂಗಿಕ ಕಿರುಕುಳದ ವಿರುದ್ಧ ನಡೆಯುತ್ತಿರುವ ಪ್ರತಿಭಟನೆಯ ಭಾಗವಾಗಿ ಮಂಗಳವಾರ ನೊಂದ ಕುಸ್ತಿಪಟುಗಳು ತಮ್ಮ ಪದಕಗಳನ್ನು ಪವಿತ್ರ ಗಂಗಾ ನದಿಗೆ ಎಸೆಯಲು ಯೋಜಿಸಿದ್ದರು, ಆದರೆ ಷರತ್ತಿನ ಮೇಲೆ ರೈತ ನಾಯಕ ನರೇಶ್ ಟಿಕಾಯತ್ ಅವರು ಕ್ರೀಡಾಪಟುಗಳನ್ನು ತಡೆದರು. ಇದೀಗ ವಿಶ್ವಕಪ್ ವಿಜೇತ ತಂಡ ಕೂಡ ಕುಸ್ತಿಪಟುಗಳ ಪ್ರತಿಭಟನೆಗೆ ಬೆಂಬಲ ನೀಡಿದ್ದಾರೆ.

”ನಮ್ಮ ಚಾಂಪಿಯನ್ ಕುಸ್ತಿಪಟುಗಳನ್ನು ಅಮಾನುಷವಾಗಿ ನಡೆಸುತ್ತಿರುವ ದೃಶ್ಯಗಳನ್ನು ನೀಓಡಿದ ಮೇಲೆ ನಮಗೆ ತುಂಬಾ ದುಖಃವಾಗಿದೆ. ಇದರಿಂದ ನಾವು ವಿಚಲಿತರಾಗಿದ್ದೇವೆ. ಅವರು ಕಷ್ಟಪಟ್ಟು ಗಳಿಸಿದ ಪದಕಗಳನ್ನು ಗಂಗಾ ನದಿಗೆ ಎಸೆಯಲು ಯೋಚಿಸುತ್ತಿದ್ದಾರೆ ಎಂದು ನಾವು ಹೆಚ್ಚು ಕಾಳಜಿ ವಹಿಸುತ್ತೇವೆ” ಎಂದು 1983 ರ ವಿಶ್ವಕಪ್ ವಿಜೇತ ತಂಡವು ಹೇಳಿದೆ.

“ಆ ಪದಕಗಳು ವರ್ಷಗಳ ಪ್ರಯತ್ನ, ತ್ಯಾಗ, ಸಂಕಲ್ಪ ಮತ್ತು ಶ್ರದ್ಧೆಗಳನ್ನು ಒಳಗೊಂಡಿವೆ ಮತ್ತು ಅವು ಕೇವಲ ನಿಮಗೆ ಮಾತ್ರ ಸಂಬಂಧಸಿದ್ದಲ್ಲ, ಅವು ರಾಷ್ಟ್ರದ ಹೆಮ್ಮೆ ಮತ್ತು ಸಂತೋಷವಾಗಿವೆ. ಈ ವಿಷಯದಲ್ಲಿ ಯಾವುದೇ ಆತುರದ ನಿರ್ಧಾರವನ್ನು ತೆಗೆದುಕೊಳ್ಳದಂತೆ ನಾವು ಅವರನ್ನು ಒತ್ತಾಯಿಸುತ್ತೇವೆ ಮತ್ತು ಅವರ ಕುಂದುಕೊರತೆಗಳನ್ನು ಕೇಳುತ್ತೇವೆ. ನೆಲದ ಕಾನೂನು ಮೇಲುಗೈ ಸಾಧಿಸಲಿ” ಎಂದು ಹೇಳಿದೆ.

“ಈ ವಿಷಯದಲ್ಲಿ ಯಾವುದೇ ಆತುರದ ನಿರ್ಧಾರ ತೆಗೆದುಕೊಳ್ಳದಂತೆ ನಾವು ಅವರನ್ನು ಒತ್ತಾಯಿಸುತ್ತೇವೆ ಮತ್ತು ಅವರ ಕುಂದುಕೊರತೆಗಳನ್ನು ಆಲಿಸಿ ಶೀಘ್ರವಾಗಿ ಪರಿಹರಿಸಲಾಗುತ್ತದೆ. ನೆಲದ ಕಾನೂನು ಮೇಲುಗೈ ಸಾಧಿಸಲಿ” ಎಂದು ಲೆಜೆಂಡರಿ ನಾಯಕ ಕಪಿಲ್ ದೇವ್ ನೇತೃತ್ವದ ಕ್ರಿಕೆಟ್ ತಂಡ ಮತ್ತು ಐಕಾನ್‌ಗಳು ಸೇರಿದಂತೆ ಸುನಿಲ್ ಗವಾಸ್ಕರ್ ಮತ್ತು ಮೊಹಿಂದರ್ ಅಮರನಾಥ್ ಮನವಿ ಮಾಡಿದರು.

ಇದನ್ನೂ ಓದಿ: ಬಿಜೆಪಿ ಸಂಸದನ ವಿರುದ್ಧ ಗಂಭೀರ ಆರೋಪಗಳಿದ್ದರೂ ಕ್ರಮ ಏಕೆ ಕೈಗೊಂಡಿಲ್ಲ?: ಪ್ರಧಾನಿ ಮೋದಿಗೆ ಪ್ರಿಯಾಂಕಾ ಗಾಂಧಿ ಪ್ರಶ್ನೆ

ಮಂಗಳವಾರ, ಅಂತರಾಷ್ಟ್ರೀಯ ಕುಸ್ತಿ ಸಂಸ್ಥೆ ಯುನೈಟೆಡ್ ವರ್ಲ್ಡ್ ವ್ರೆಸ್ಲಿಂಗ್ (UWW) ಫೆಡರೇಶನ್ ಮುಖ್ಯಸ್ಥರ ವಿರುದ್ಧ ‘ತನಿಖೆ ಬಗ್ಗೆ ನಿರಾಶೆ’ ವ್ಯಕ್ತಪಡಿಸಿದೆ ಮತ್ತು 45 ದಿನಗಳಲ್ಲಿ ಅದರ ಅಧ್ಯಕ್ಷ ಸ್ಥಾನಕ್ಕೆ  ಚುನಾವಣೆಗಳನ್ನು ನಡೆಸದಿದ್ದರೆ ಫೆಡರೇಶನ್ ಅನ್ನು ಅಮಾನತುಗೊಳಿಸುವುದಾಗಿ ಬೆದರಿಕೆ ಹಾಕಿದೆ.

ಮಹಿಳಾ ಕುಸ್ತಿಪಟುಗಳ ಮೇಲೆ ಲೈಂಗಿಕ ಶೋಷಣೆ ಮಾಡಿದ ಆರೋಪದ ಮೇಲೆ ಕುಸ್ತಿಪಟುಗಳು ಭಾರತೀಯ ಕುಸ್ತಿ ಫೆಡರೇಶನ್ (ಡಬ್ಲ್ಯುಎಫ್‌ಐ) ಮುಖ್ಯಸ್ಥ ಬಿರ್ಜ್ ಭೂಷಣ್ ಶರಣ್ ಸಿಂಗ್ ಅವರನ್ನು ಬಂಧಿಸಬೇಕೆಂದು ಅಂತರಾಷ್ಟ್ರೀಯ ಕುಸ್ತಿ ಸಂಸ್ಥೆ ಯುನೈಟೆಡ್ ವರ್ಲ್ಡ್ ವ್ರೆಸ್ಲಿಂಗ್ ಒತ್ತಾಯಿಸಿದ್ದಾರೆ.

ಮೇ 28ರಂದು, ದೆಹಲಿ ಪೊಲೀಸರು ಅನುಮತಿಯಿಲ್ಲದೆ ಹೊಸ ಸಂಸತ್ ಭವನದ ಕಡೆಗೆ ಮೆರವಣಿಗೆ ನಡೆಸಿದಾಗ ಕಾನೂನು ಮತ್ತು ಸುವ್ಯವಸ್ಥೆ ಉಲ್ಲಂಘನೆಗಾಗಿ ಕುಸ್ತಿಪಟುಗಳನ್ನು ಬಂಧಿಸಿದ್ದರು. ಅಷ್ಟೇ ಅಲ್ಲದೇ ಕ್ರೀಡಾಪಟುಗಳ ವಿರುದ್ದ ಪ್ರಕರಣ ದಾಖಲಿಸಿದ್ದಾರೆ.

ದೆಹಲಿಯ ಜಂತರ್‌ಮಂತರ್‌ ನಲ್ಲಿ ಕ್ರೀಡಾಪಟುಗಳು ಪ್ರತಿಭಟನೆ ನಡೆಸುತ್ತಿದ್ದರು ಆದರೆ ಈ ಬೆಳವಳಿಗೆ ನಂತರ ಇದೀಗ ಅವರಿಗೆ ಅಲ್ಲಿ ಪ್ರತಿಭಟನೆ ನಡೆಸಲು ಪೊಲೀಸರು ಬಿಡುವುದಿಲ್ಲ ಎಂದು ಹೇಳಿದ್ದಾರೆ.

ಕುಸ್ತಿಪಟುಗಳ ವಿರುದ್ಧ ಪೊಲೀಸರ ಕ್ರಮಕ್ಕೆ ವಿವಿಧ ವಲಯಗಳಿಂದ ಟೀಕೆ ವ್ಯಕ್ತವಾಗಿತ್ತು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...