Homeಕರ್ನಾಟಕರಾಜ್ಯವನ್ನು ಜಂಗಲ್ ರಾಜ್ಯ ಮಾಡಬೇಡಿ; ರಾಜೀನಾಮೆ ಕೊಟ್ಟು ಮನೆಗೆ ಹೋಗಿ: ಸಿದ್ದರಾಮಯ್ಯ

ರಾಜ್ಯವನ್ನು ಜಂಗಲ್ ರಾಜ್ಯ ಮಾಡಬೇಡಿ; ರಾಜೀನಾಮೆ ಕೊಟ್ಟು ಮನೆಗೆ ಹೋಗಿ: ಸಿದ್ದರಾಮಯ್ಯ

- Advertisement -
- Advertisement -

ಪುಂಡರು ಕಾನೂನನ್ನು ಕೈಗೆತ್ತಿಕೊಳ್ಳುವ ಅನೈತಿಕ ಪೊಲೀಸ್ ಗಿರಿಯನ್ನು ಸಮರ್ಥಿಸುವ ಮೂಲಕ ಕಾನೂನು ಪಾಲನೆ ನಿಮ್ಮಿಂದ ಸಾಧ್ಯವಿಲ್ಲ ಎಂದು ನಿಮ್ಮ ಅಸಾಮರ್ಥ್ಯವನ್ನು ತೋಡಿಕೊಂಡಿದ್ದೀರಿ. ದಯವಿಟ್ಟು ರಾಜೀನಾಮೆ ಕೊಟ್ಟು ಮನೆಗೆ ಹೋಗಿ. ರಾಜ್ಯವನ್ನು ಜಂಗಲ್ ರಾಜ್ಯ ಮಾಡಬೇಡಿ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಬುಧವಾರ ಹೇಳಿದ್ದಾರೆ.

ರಾಜ್ಯದಲ್ಲಿ ನೈತಿಕ ಪೊಲೀಸ್ ಗಿರಿ ಪ್ರಕರಣಗಳು ಹೆಚ್ಚುತ್ತಿರುವ ಮಧ್ಯೆ ಬುಧವಾರದಂದು ಮಂಗಳೂರಿನಲ್ಲಿ ಮಾತನಾಡಿದ್ದ ಸಿಎಂ ನೈತಿಕ ಪೊಲೀಸ್‌ ಗಿರಿಯನ್ನು ಸಮರ್ಥಿಸಿಕೊಂಡಿದ್ದರು. “ಸಮಾಜದಲ್ಲಿ ಹಲವಾರು ಭಾವನೆಗಳಿವೆ. ಆ ಭಾವನೆಗಳಿಗೆ ಧಕ್ಕೆ ಬಾರದ ರೀತಿಯಲ್ಲಿ ನಡೆದುಕೊಳ್ಳಬೇಕಾಗಿದೆ. ನೈತಿಕತೆ ಇಲ್ಲದೇ ನಾವು ಬದುಕಲು ಸಾಧ್ಯವೇ?” ಎಂದು ಅವರು ಹೇಳಿದ್ದರು.

ಇದನ್ನೂ ಓದಿ: ನೈತಿಕತೆ ಇಲ್ಲದೇ ಬದುಕಲಾಗದು: ಮಾರಲ್ ಪೊಲೀಸಿಂಗ್ ಸಮರ್ಥಿಸಿಕೊಂಡ ಸಿಎಂ ಬಸವರಾಜ ಬೊಮ್ಮಾಯಿ

ಮುಖ್ಯಮಂತ್ರಿಯ ಹೇಳಿಕೆಯನ್ನು ವಿರೋಧಿಸಿರುವ ಸಿದ್ದರಾಮಯ್ಯ, “ಮುಖ್ಯಮಂತ್ರಿ ಬೊಮ್ಮಾಯಿಯವರೇ, ಪುಂಡರು ಕಾನೂನನ್ನು ಕೈಗೆತ್ತಿಕೊಳ್ಳುವ ಅನೈತಿಕ ಪೊಲೀಸ್ ಗಿರಿಯನ್ನು ಸಮರ್ಥಿಸುವ ಮೂಲಕ ಕಾನೂನು ಪಾಲನೆ ನಿಮ್ಮಿಂದ ಸಾಧ್ಯವಿಲ್ಲ ಎಂದು ನಿಮ್ಮ ಅಸಾಮರ್ಥ್ಯವನ್ನು ತೋಡಿಕೊಂಡಿದ್ದೀರಿ. ದಯವಿಟ್ಟು ರಾಜೀನಾಮೆ ಕೊಟ್ಟು ಮನೆಗೆ ಹೋಗಿ. ರಾಜ್ಯವನ್ನು ಜಂಗಲ್ ರಾಜ್ಯ ಮಾಡಬೇಡಿ” ಎಂದು ಹೇಳಿದ್ದಾರೆ.

‘‘ಅನೈತಿಕ ಪೊಲೀಸ್ ಗಿರಿಗೆ ಬಲಿಯಾಗುತ್ತಿರುವವರು ಅಸಹಾಯಕ, ಅಮಾಯಕ ಹೆಣ್ಣುಮಕ್ಕಳು. ಸ್ತ್ರಿಪೀಡಕರ ಹೆಡೆಮುರಿ ಕಟ್ಟಿ ಜೈಲಿಗೆ ತಳ್ಳಬೇಕಾದ ನೀವು ಅದನ್ನು ಮಾಡದೆ ಆ ದುಷ್ಕರ್ಮಿಗಳ ರಕ್ಷಣೆಗೆ ನಿಂತಿದ್ದೀರಿ. ಕುರ್ಚಿಯ ರಕ್ಷಣೆಗಾಗಿ ಸಂಘ ಪರಿವಾರದ ಓಲೈಕೆ ನಿಮಗೆ ಅನಿವಾರ್ಯವಾಗಿರಬಹುದು. ಇದಕ್ಕಾಗಿ ಇಷ್ಟೊಂದು ಕೆಳ ಮಟ್ಟಕ್ಕೆ ಇಳಿಯುವುದೇ?” ಎಂದು ಕೇಳಿದ್ದಾರೆ.

ಇದನ್ನೂ ಓದಿ: ‘ನಾನು ಬೂಟ್‌ ನೆಕ್ಕುವ ಮೂಲಕ ಮಂತ್ರಿಯಾಗಿಲ್ಲ’ – ಸಿಎಂ ಬೊಮ್ಮಾಯಿಗೆ ಬಿಜೆಪಿ ಸಂಸದ

“ನಾಳೆಯಿಂದ ರಾಜ್ಯದಲ್ಲಿ ಹೆಣ್ಣುಮಕ್ಕಳ ಮೇಲೆ ಅನೈತಿಕ ಪೊಲೀಸ್ ಗಿರಿಯನ್ನು ಯಾರೇ ನಡೆಸಲಿ, ಅವರದ್ದು ಮುಖವಾಡ ಮಾತ್ರ, ಅಸಲಿ ಮುಖ ಅಂತಹ ಕೃತ್ಯಕ್ಕೆ ಪ್ರಚೋದನೆ,ಉತ್ತೇಜನ ಮತ್ತು ರಕ್ಷಣೆ ನೀಡುವ ನಿಮ್ಮದು ಎಂದು ತಿಳಿದುಕೊಳ್ಳಬಹುದೇ ಮುಖ್ಯಮಂತ್ರಿಗಳೇ?” ಎಂದು ಸಿದ್ದರಾಮಯ್ಯ ಅವರು ಪ್ರಶ್ನಿಸಿದ್ದಾರೆ.

“ಆ್ಯಕ್ಷನ್‌ಗೆ ರಿಯಾಕ್ಷನ್ ಇರುತ್ತೆ ಎಂದು ಹೇಳುವ ಮೂಲಕ ಯಾವ ಕಾಡಿನ ನ್ಯಾಯವನ್ನು ಪಾಠ ಮಾಡುತ್ತಿದ್ದೀರಿ ಮುಖ್ಯಮಂತ್ರಿಗಳೇ.? ಪೊಲೀಸ್ ಇಲಾಖೆಯನ್ನು ರದ್ದು ಮಾಡಿ ನಿಮ್ಮ ಪರಿವಾರಕ್ಕೆ ಕಾನೂನು ಪಾಲನೆಯ ಕೆಲಸವನ್ನು ವಹಿಸಿಕೊಡುವ ದುಷ್ಟ ಉದ್ದೇಶವೇನಾದರೂ ನಿಮಗಿದೆಯೇ?” ಎಂದು ಅವರು ಅನುಮಾನ ವ್ಯಕ್ತಪಡಿಸಿದ್ದಾರೆ.

“ನಿಮ್ಮ ಆರೋಗ್ಯ ಸಚಿವರು ಇತ್ತೀಚೆಗೆ ಹೆಣ್ಣುಮಕ್ಕಳ ಬದುಕುವ ಸ್ವಾತಂತ್ರ್ಯವನ್ನು ಪ್ರಶ್ನಿಸಿ ಅವಮಾನ ಮಾಡಿದ್ದರು. ಇದೀಗ ನೀವು ಮಹಿಳೆಯರ ಮೆಲೆ ದೌರ್ಜನ್ಯ ನಡೆಸುತ್ತಿರುವವರ ರಕ್ಷಣೆಗೆ ಇಳಿದಿದ್ದೀರಿ.
ನಿಮ್ಮ ಸರ್ಕಾರದ ನಿಷ್ಠೆ ಸಂವಿಧಾನಕ್ಕೋ? ಮನುಸ್ಮೃತಿಗೋ?” ಎಂದು ಸಿದ್ದರಾಮಯ್ಯ ಕೇಳಿದ್ದಾರೆ.

ಇದನ್ನೂ ಓದಿ: ಮುಖ್ಯಮಂತ್ರಿ ಬೊಮ್ಮಾಯಿ ‘ಕೇಶವ ಕೃಪಾ’ದ ಗುಲಾಮ: ಮಾವಳ್ಳಿ ಶಂಕರ್‌ ಆಕ್ರೋಶ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. ಸಿದ್ದರಾಮಯ್ಯ ನವರ ಸರ್ಕಾರವು ಇದ್ದಾಗ ,ಹಿಂಧೂ ಕಾರ್ಯಕರ್ತರ ಕೊಲೆ,ನಿಷ್ಠಾವಂತ ಅಧಿಕಾರಿಗಳ ಮಾರಣ ಹೋಮ ,ಲೋಕಾಯುಕ್ತದ ನಿರ್ನಾಮ ,ಜಾರ್ಜ್ ,ಡಿಕೆಶಿ ಅವರ ಭ್ರಷ್ಟಾಚಾರ ,ಸಿದ್ದರಾಮಯ್ಯ ರ ವಾಚ್ ಹಗರಣ ಹೀಗೆ ಹನುಮಂತನ ಬಾಲದ ತರ ದುರಾಡಳಿತ ದ ಪಟ್ಟಿಯೇ ಇದೆ . ಇಂಥವರಿಗೆ ಬಿಜೆಪಿಯ ಬಗ್ಗೆ ಮಾತಾಡೋ ಯೋಗ್ಯತೆ ಇದಿಯಾ ಸಿದ್ದರಾಮಯ್ಯ ನವರೇ…..

LEAVE A REPLY

Please enter your comment!
Please enter your name here

- Advertisment -

ಗುಜರಾತ್: ‘ಲವ್ ಜಿಹಾದ್’ ತಡೆಗೆ ವಿವಾಹ ನೋಂದಣಿ ಪ್ರಕ್ರಿಯೆಯಲ್ಲಿ ಗಮನಾರ್ಹ ಬದಲಾವಣೆಗಳನ್ನು ಮಾಡುತ್ತೇವೆ; ಡಿಸಿಎಂ ಹರ್ಷ ಸಾಂಘವಿ ಘೋಷಣೆ

ಅಹಮದಾಬಾದ್: ಗುಜರಾತ್‌ನ ಉಪಮುಖ್ಯಮಂತ್ರಿ ಹರ್ಷ ಸಾಂಘವಿ ಶುಕ್ರವಾರ, ರಾಜ್ಯ ಸರ್ಕಾರವು ವಿವಾಹ ನೋಂದಣಿ ಕಾರ್ಯವಿಧಾನದಲ್ಲಿ ಬದಲಾವಣೆಗಳನ್ನು ತರಲಿದೆ ಎಂದು ಘೋಷಿಸಿದ್ದು, "ಸಮಾಜ ವಿರೋಧಿ ಶಕ್ತಿಗಳು", ವಿಶೇಷವಾಗಿ ಗುಜರಾತ್‌ನ ಹೆಣ್ಣುಮಕ್ಕಳನ್ನು "ಲವ್ ಜಿಹಾದ್" ಗಾಗಿ...

ಬಂಗಾಳ ಎಸ್ಐಆರ್ ಪ್ರಕ್ರಿಯೆ: ಚುನಾವಣಾ ಆಯೋಗದ ಸಹಾಯಕ್ಕೆ ನ್ಯಾಯಾಂಗ ಅಧಿಕಾರಿಗಳನ್ನು ನೇಮಿಸಲು ಕಲ್ಕತ್ತಾ ಹೈಕೋರ್ಟ್‌ಗೆ ಸುಪ್ರೀಂ ಸೂಚನೆ

ನವದೆಹಲಿ: ಪಶ್ಚಿಮ ಬಂಗಾಳ ಸರ್ಕಾರ ಮತ್ತು ಚುನಾವಣಾ ಆಯೋಗದ ನಡುವೆ ಮತದಾರರ ಪಟ್ಟಿ ಶುದ್ಧೀಕರಣ ಅಭಿಯಾನಕ್ಕೆ ಸಂಬಂಧಿಸಿದಂತೆ ದುರದೃಷ್ಟಕರ ಆರೋಪದ ಆಟ ನಡೆಯುತ್ತಿದೆ ಎಂದು ಪ್ರತಿಕ್ರಿಯಿಸಿರುವ ಸುಪ್ರೀಂ ಕೋರ್ಟ್, ವಿಶೇಷ ತೀವ್ರ ಪರಿಷ್ಕರಣೆ...

ಬಾಲಿವುಡ್ ನಟ ರಣವೀರ್ ಸಿಂಗ್ ಗೆ ಬಿಷ್ಣೋಯಿ ಗ್ಯಾಂಗ್ ನಿಂದ ಜೀವಬೆದರಿಕೆ: ಅಮೆರಿಕಾ ನಂಬರ್ ನಿಂದ 10ಕೋಟಿ ರೂ. ಬೇಡಿಕೆ 

ಬಿಷ್ಣೋಯ್ ಗ್ಯಾಂಗ್ ಬಾಲಿವುಡ್ ನಟ ರಣವೀರ್ ಸಿಂಗ್ ಅವರಿಂದ 10 ಕೋಟಿ ರೂ.ಗೆ ಬೇಡಿಕೆ ಇಟ್ಟಿದೆ ಎನ್ನಲಾಗಿದೆ. ಅಮೆರಿಕದ ಸಂಖ್ಯೆಯಿಂದ ಬಂದ ವಾಯ್ಸ್ ನೋಟ್ ಮೂಲಕ ಬೆದರಿಕೆ ಹಾಕಲಾಗಿದೆ ಎಂದು ವರದಿಯಾಗಿದೆ. ಮುಂಬೈ ಪೊಲೀಸ್...

‘ರಾಜಿ ಮಾಡಿಕೊಂಡ ಪ್ರಧಾನಿ’: ಎಐ ಇಂಪ್ಯಾಕ್ಟ್ ಶೃಂಗಸಭೆಯಲ್ಲಿ ಯುವ ಕಾಂಗ್ರೆಸ್‌ ಕಾರ್ಯಕರ್ತರಿಂದ ಶರ್ಟ್‌ ಬಿಚ್ಚಿ ಪ್ರತಿಭಟನೆ

ಎಐ ಇಂಪ್ಯಾಕ್ಟ್ ಶೃಂಗಸಭೆಗೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿಯವರನ್ನು ಗುರಿಯಾಗಿಸಿಕೊಂಡು ಮತ್ತು ಪ್ರಧಾನಿ "ರಾಜಿ ಮಾಡಿಕೊಂಡಿದ್ದಾರೆ" ಎಂದು ಆರೋಪಿಸಿ ಭಾರತೀಯ ಯುವ ಕಾಂಗ್ರೆಸ್ ಕಾರ್ಯಕರ್ತರು ಶುಕ್ರವಾರ ಭಾರತ್ ಮಂಟಪದಲ್ಲಿ ಶರ್ಟ್ ಧರಿಸದೆ ಪ್ರತಿಭಟನೆ...

ಬಾಗಲಕೋಟೆ: ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲು ತೂರಾಟ, ಉದ್ವಿಗ್ನ ಪರಿಸ್ಥಿತಿ: ಫೆ.24ರವರೆಗೆ ನಿಷೇಧಾಜ್ಞೆ ಜಾರಿ

ಬಾಗಲಕೋಟೆಯಲ್ಲಿ ಗುರುವಾರ ಛತ್ರಪತಿ ಶಿವಾಜಿ ಮಹಾರಾಜರ ಜಯಂತಿಯಂದು ನಡೆದ ಪ್ರತಿಮೆ ಮೆರವಣಿಗೆಯ ಸಂದರ್ಭದಲ್ಲಿ ಕಲ್ಲು ತೂರಾಟ ನಡೆದ ಘಟನೆ ವರದಿಯಾಗಿದೆ. ಹಳೆಯ ನಗರ ಪ್ರದೇಶದ ಪಂಕ ಮಸೀದಿ ಬಳಿ ಮೆರವಣಿಗೆ ಸಾಗುತ್ತಿದ್ದಾಗ ಈ...

ನಿಯಮಿತವಾಗಿ ಎಸ್‌ಸಿ/ಎಸ್‌ಟಿ ಕಾಯ್ದೆ ಕೋಶದ ಸಭೆ ನಡೆಸುತ್ತಿಲ್ಲ ಎಂದು ಆರೋಪಿಸಿದ ಮೇವಾನಿ; ಗುಜರಾತ್ ವಿಧಾನಸಭೆಯಲ್ಲಿ ಕಾಂಗ್ರೆಸ್- ಬಿಜೆಪಿ ನಡುವೆ ವಾಗ್ವಾದ

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯ್ದೆಯಡಿಯಲ್ಲಿ ರಚಿಸಲಾದ ರಾಜ್ಯ ಮೇಲ್ವಿಚಾರಣಾ ಕೋಶದ (ಎಸ್‌ಎಂಸಿ) ನಿಯಮಿತ ಸಭೆಗಳನ್ನು ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ಕರೆಯುತ್ತಿಲ್ಲ ಎಂದು ವಡ್ಗಾಮ್‌ನ ಕಾಂಗ್ರೆಸ್ ಶಾಸಕ ಜಿಗ್ನೇಶ್...

ನೆಲಮಂಗಲದಲ್ಲಿ ಹಾಸಿಗೆ ಹಿಡಿದ ಪತಿಯ ಎದುರೇ 60ವರ್ಷದ ಮಹಿಳೆಯ ಕೊಲೆ; ಐದು ಗಂಟೆಗಳಲ್ಲಿ ಆರೋಪಿ ಬಂಧನ

ಬೆಂಗಳೂರು: ಬೆಂಗಳೂರು ಹೊರವಲಯ ನೆಲಮಂಗಲದ ಪೇಟೆ ಬೀದಿಯಲ್ಲಿ ವೀಲ್‌ಚೇರ್‌ನಲ್ಲಿ ಕುಳಿತಿದ್ದ ಗಂಡನ ಮುಂದೆಯೇ ಮಹಿಳೆಯೊಬ್ಬಳ ಕೊಲೆಯಾದ ಐದು ಗಂಟೆಗಳಲ್ಲಿ ನೆಲಮಂಗಲ ಪಟ್ಟಣ ಪೊಲೀಸರು 45 ವರ್ಷದ ದಿನಸಿ ಅಂಗಡಿ ಮಾಲೀಕನನ್ನು ಬಂಧಿಸಿದ್ದಾರೆ. ಫೆಬ್ರವರಿ...

‘ದಿ ಕೇರಳ ಸ್ಟೋರಿ 2’ ಚಿತ್ರ ನಿರ್ಮಾಪಕರು, ಸಿಬಿಎಫ್‌ಸಿ ಮಂಡಳಿಗೆ ನೋಟಿಸ್ ಜಾರಿ ಮಾಡಿದ ಕೇರಳ ಹೈಕೋರ್ಟ್

ಕೊಚ್ಚಿ: 'ದಿ ಕೇರಳ ಸ್ಟೋರಿ 2 - ಗೋಸ್ ಬಿಯಾಂಡ್' ಚಿತ್ರದ ಪ್ರಮಾಣೀಕರಣವನ್ನು ರದ್ದುಗೊಳಿಸುವಂತೆ ಮತ್ತು ಅದರ ಶೀರ್ಷಿಕೆಯ ಮರುಪರಿಶೀಲನೆ ಸೇರಿದಂತೆ ಮಾರ್ಪಾಡುಗಳಿಗೆ ನಿರ್ದೇಶನ ನೀಡಬೇಕೆಂದು ಕೋರಿ ಕಣ್ಣೂರು ಮೂಲದವರು ಸಲ್ಲಿಸಿದ ಅರ್ಜಿಯ...

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...