Homeಕರ್ನಾಟಕರಾಜ್ಯವನ್ನು ಜಂಗಲ್ ರಾಜ್ಯ ಮಾಡಬೇಡಿ; ರಾಜೀನಾಮೆ ಕೊಟ್ಟು ಮನೆಗೆ ಹೋಗಿ: ಸಿದ್ದರಾಮಯ್ಯ

ರಾಜ್ಯವನ್ನು ಜಂಗಲ್ ರಾಜ್ಯ ಮಾಡಬೇಡಿ; ರಾಜೀನಾಮೆ ಕೊಟ್ಟು ಮನೆಗೆ ಹೋಗಿ: ಸಿದ್ದರಾಮಯ್ಯ

- Advertisement -
- Advertisement -

ಪುಂಡರು ಕಾನೂನನ್ನು ಕೈಗೆತ್ತಿಕೊಳ್ಳುವ ಅನೈತಿಕ ಪೊಲೀಸ್ ಗಿರಿಯನ್ನು ಸಮರ್ಥಿಸುವ ಮೂಲಕ ಕಾನೂನು ಪಾಲನೆ ನಿಮ್ಮಿಂದ ಸಾಧ್ಯವಿಲ್ಲ ಎಂದು ನಿಮ್ಮ ಅಸಾಮರ್ಥ್ಯವನ್ನು ತೋಡಿಕೊಂಡಿದ್ದೀರಿ. ದಯವಿಟ್ಟು ರಾಜೀನಾಮೆ ಕೊಟ್ಟು ಮನೆಗೆ ಹೋಗಿ. ರಾಜ್ಯವನ್ನು ಜಂಗಲ್ ರಾಜ್ಯ ಮಾಡಬೇಡಿ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಬುಧವಾರ ಹೇಳಿದ್ದಾರೆ.

ರಾಜ್ಯದಲ್ಲಿ ನೈತಿಕ ಪೊಲೀಸ್ ಗಿರಿ ಪ್ರಕರಣಗಳು ಹೆಚ್ಚುತ್ತಿರುವ ಮಧ್ಯೆ ಬುಧವಾರದಂದು ಮಂಗಳೂರಿನಲ್ಲಿ ಮಾತನಾಡಿದ್ದ ಸಿಎಂ ನೈತಿಕ ಪೊಲೀಸ್‌ ಗಿರಿಯನ್ನು ಸಮರ್ಥಿಸಿಕೊಂಡಿದ್ದರು. “ಸಮಾಜದಲ್ಲಿ ಹಲವಾರು ಭಾವನೆಗಳಿವೆ. ಆ ಭಾವನೆಗಳಿಗೆ ಧಕ್ಕೆ ಬಾರದ ರೀತಿಯಲ್ಲಿ ನಡೆದುಕೊಳ್ಳಬೇಕಾಗಿದೆ. ನೈತಿಕತೆ ಇಲ್ಲದೇ ನಾವು ಬದುಕಲು ಸಾಧ್ಯವೇ?” ಎಂದು ಅವರು ಹೇಳಿದ್ದರು.

ಇದನ್ನೂ ಓದಿ: ನೈತಿಕತೆ ಇಲ್ಲದೇ ಬದುಕಲಾಗದು: ಮಾರಲ್ ಪೊಲೀಸಿಂಗ್ ಸಮರ್ಥಿಸಿಕೊಂಡ ಸಿಎಂ ಬಸವರಾಜ ಬೊಮ್ಮಾಯಿ

ಮುಖ್ಯಮಂತ್ರಿಯ ಹೇಳಿಕೆಯನ್ನು ವಿರೋಧಿಸಿರುವ ಸಿದ್ದರಾಮಯ್ಯ, “ಮುಖ್ಯಮಂತ್ರಿ ಬೊಮ್ಮಾಯಿಯವರೇ, ಪುಂಡರು ಕಾನೂನನ್ನು ಕೈಗೆತ್ತಿಕೊಳ್ಳುವ ಅನೈತಿಕ ಪೊಲೀಸ್ ಗಿರಿಯನ್ನು ಸಮರ್ಥಿಸುವ ಮೂಲಕ ಕಾನೂನು ಪಾಲನೆ ನಿಮ್ಮಿಂದ ಸಾಧ್ಯವಿಲ್ಲ ಎಂದು ನಿಮ್ಮ ಅಸಾಮರ್ಥ್ಯವನ್ನು ತೋಡಿಕೊಂಡಿದ್ದೀರಿ. ದಯವಿಟ್ಟು ರಾಜೀನಾಮೆ ಕೊಟ್ಟು ಮನೆಗೆ ಹೋಗಿ. ರಾಜ್ಯವನ್ನು ಜಂಗಲ್ ರಾಜ್ಯ ಮಾಡಬೇಡಿ” ಎಂದು ಹೇಳಿದ್ದಾರೆ.

‘‘ಅನೈತಿಕ ಪೊಲೀಸ್ ಗಿರಿಗೆ ಬಲಿಯಾಗುತ್ತಿರುವವರು ಅಸಹಾಯಕ, ಅಮಾಯಕ ಹೆಣ್ಣುಮಕ್ಕಳು. ಸ್ತ್ರಿಪೀಡಕರ ಹೆಡೆಮುರಿ ಕಟ್ಟಿ ಜೈಲಿಗೆ ತಳ್ಳಬೇಕಾದ ನೀವು ಅದನ್ನು ಮಾಡದೆ ಆ ದುಷ್ಕರ್ಮಿಗಳ ರಕ್ಷಣೆಗೆ ನಿಂತಿದ್ದೀರಿ. ಕುರ್ಚಿಯ ರಕ್ಷಣೆಗಾಗಿ ಸಂಘ ಪರಿವಾರದ ಓಲೈಕೆ ನಿಮಗೆ ಅನಿವಾರ್ಯವಾಗಿರಬಹುದು. ಇದಕ್ಕಾಗಿ ಇಷ್ಟೊಂದು ಕೆಳ ಮಟ್ಟಕ್ಕೆ ಇಳಿಯುವುದೇ?” ಎಂದು ಕೇಳಿದ್ದಾರೆ.

ಇದನ್ನೂ ಓದಿ: ‘ನಾನು ಬೂಟ್‌ ನೆಕ್ಕುವ ಮೂಲಕ ಮಂತ್ರಿಯಾಗಿಲ್ಲ’ – ಸಿಎಂ ಬೊಮ್ಮಾಯಿಗೆ ಬಿಜೆಪಿ ಸಂಸದ

“ನಾಳೆಯಿಂದ ರಾಜ್ಯದಲ್ಲಿ ಹೆಣ್ಣುಮಕ್ಕಳ ಮೇಲೆ ಅನೈತಿಕ ಪೊಲೀಸ್ ಗಿರಿಯನ್ನು ಯಾರೇ ನಡೆಸಲಿ, ಅವರದ್ದು ಮುಖವಾಡ ಮಾತ್ರ, ಅಸಲಿ ಮುಖ ಅಂತಹ ಕೃತ್ಯಕ್ಕೆ ಪ್ರಚೋದನೆ,ಉತ್ತೇಜನ ಮತ್ತು ರಕ್ಷಣೆ ನೀಡುವ ನಿಮ್ಮದು ಎಂದು ತಿಳಿದುಕೊಳ್ಳಬಹುದೇ ಮುಖ್ಯಮಂತ್ರಿಗಳೇ?” ಎಂದು ಸಿದ್ದರಾಮಯ್ಯ ಅವರು ಪ್ರಶ್ನಿಸಿದ್ದಾರೆ.

“ಆ್ಯಕ್ಷನ್‌ಗೆ ರಿಯಾಕ್ಷನ್ ಇರುತ್ತೆ ಎಂದು ಹೇಳುವ ಮೂಲಕ ಯಾವ ಕಾಡಿನ ನ್ಯಾಯವನ್ನು ಪಾಠ ಮಾಡುತ್ತಿದ್ದೀರಿ ಮುಖ್ಯಮಂತ್ರಿಗಳೇ.? ಪೊಲೀಸ್ ಇಲಾಖೆಯನ್ನು ರದ್ದು ಮಾಡಿ ನಿಮ್ಮ ಪರಿವಾರಕ್ಕೆ ಕಾನೂನು ಪಾಲನೆಯ ಕೆಲಸವನ್ನು ವಹಿಸಿಕೊಡುವ ದುಷ್ಟ ಉದ್ದೇಶವೇನಾದರೂ ನಿಮಗಿದೆಯೇ?” ಎಂದು ಅವರು ಅನುಮಾನ ವ್ಯಕ್ತಪಡಿಸಿದ್ದಾರೆ.

“ನಿಮ್ಮ ಆರೋಗ್ಯ ಸಚಿವರು ಇತ್ತೀಚೆಗೆ ಹೆಣ್ಣುಮಕ್ಕಳ ಬದುಕುವ ಸ್ವಾತಂತ್ರ್ಯವನ್ನು ಪ್ರಶ್ನಿಸಿ ಅವಮಾನ ಮಾಡಿದ್ದರು. ಇದೀಗ ನೀವು ಮಹಿಳೆಯರ ಮೆಲೆ ದೌರ್ಜನ್ಯ ನಡೆಸುತ್ತಿರುವವರ ರಕ್ಷಣೆಗೆ ಇಳಿದಿದ್ದೀರಿ.
ನಿಮ್ಮ ಸರ್ಕಾರದ ನಿಷ್ಠೆ ಸಂವಿಧಾನಕ್ಕೋ? ಮನುಸ್ಮೃತಿಗೋ?” ಎಂದು ಸಿದ್ದರಾಮಯ್ಯ ಕೇಳಿದ್ದಾರೆ.

ಇದನ್ನೂ ಓದಿ: ಮುಖ್ಯಮಂತ್ರಿ ಬೊಮ್ಮಾಯಿ ‘ಕೇಶವ ಕೃಪಾ’ದ ಗುಲಾಮ: ಮಾವಳ್ಳಿ ಶಂಕರ್‌ ಆಕ್ರೋಶ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. ಸಿದ್ದರಾಮಯ್ಯ ನವರ ಸರ್ಕಾರವು ಇದ್ದಾಗ ,ಹಿಂಧೂ ಕಾರ್ಯಕರ್ತರ ಕೊಲೆ,ನಿಷ್ಠಾವಂತ ಅಧಿಕಾರಿಗಳ ಮಾರಣ ಹೋಮ ,ಲೋಕಾಯುಕ್ತದ ನಿರ್ನಾಮ ,ಜಾರ್ಜ್ ,ಡಿಕೆಶಿ ಅವರ ಭ್ರಷ್ಟಾಚಾರ ,ಸಿದ್ದರಾಮಯ್ಯ ರ ವಾಚ್ ಹಗರಣ ಹೀಗೆ ಹನುಮಂತನ ಬಾಲದ ತರ ದುರಾಡಳಿತ ದ ಪಟ್ಟಿಯೇ ಇದೆ . ಇಂಥವರಿಗೆ ಬಿಜೆಪಿಯ ಬಗ್ಗೆ ಮಾತಾಡೋ ಯೋಗ್ಯತೆ ಇದಿಯಾ ಸಿದ್ದರಾಮಯ್ಯ ನವರೇ…..

LEAVE A REPLY

Please enter your comment!
Please enter your name here

- Advertisment -

ಸ್ವಕ್ಷೇತ್ರ ತಿರುವನಂತಪುರದಲ್ಲಿ ಬಿಜೆಪಿ ಭರ್ಜರಿ ಗೆಲುವು : ‘ಪ್ರಜಾಪ್ರಭುತ್ವದ ಸೌಂದರ್ಯ’ ಎಂದ ಕಾಂಗ್ರೆಸ್ ಸಂಸದ ಶಶಿ ತರೂರ್

ಕೇರಳದ ಸ್ಥಳೀಯ ಸಂಸ್ಥೆ ಚುನಾವಣೆಯ ಫಲಿತಾಂಶ ಇಂದು (ಡಿ.13) ಪ್ರಕಟಗೊಂಡಿದ್ದು, ತಿರುವನಂತಪುರಂ ಮಹಾನಗರ ಪಾಲಿಕೆಯಲ್ಲಿ ಬಿಜೆಪಿ ನೇತೃತ್ವದ ಎನ್‌ಡಿಎ ಭರ್ಜರಿ ಗೆಲುವು ದಾಖಲಿಸಿದೆ. ಈ ಮೂಲಕ 45 ವರ್ಷಗಳ ಸಿಪಿಐ(ಎಂ) ನೇತೃತ್ವದ ಎಲ್‌ಡಿಎಫ್‌...

ಕೇರಳ ಸ್ಥಳೀಯ ಸಂಸ್ಥೆ ಚುನಾವಣೆ : ಯುಡಿಎಫ್‌ ಸ್ಪಷ್ಟ ಮೇಲುಗೈ

ಇಂದು (2025 ಡಿಸೆಂಬರ್ 13, ಶನಿವಾರ) ಪ್ರಕಟಗೊಂಡ ಕೇರಳದ ಸ್ಥಳೀಯ ಸಂಸ್ಥೆಗಳ ಚುನಾವಣಾ ಫಲಿತಾಂಶದಲ್ಲಿ ವಿರೋಧ ಪಕ್ಷಗಳ ಒಕ್ಕೂಟವಾದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್) ಸ್ಪಷ್ಟ ಮೇಲುಗೈ ಸಾಧಿಸಿದೆ. ಈ ಮೂಲಕ ರಾಜ್ಯ...

ಕೋಲ್ಕತ್ತಾ ಮೆಸ್ಸಿ ಕಾರ್ಯಕ್ರಮದಲ್ಲಿ ಗಲಾಟೆ | ಕ್ಷಮೆ ಯಾಚಿಸಿದ ಸಿಎಂ ಮಮತಾ ಬ್ಯಾನರ್ಜಿ, ತನಿಖೆಗೆ ಸಮಿತಿ ರಚನೆ; ಆಯೋಜಕನ ಬಂಧನ

ಫುಟ್ಬಾಲ್ ತಾರೆ ಲಿಯೋನೆಲ್ ಮೆಸ್ಸಿ ಭೇಟಿಯ ವೇಳೆ ಶನಿವಾರ (ಡಿಸೆಂಬರ್ 13) ಕೋಲ್ಕತ್ತಾದ ಸಾಲ್ಟ್ ಲೇಕ್ ಕ್ರೀಡಾಂಗಣದಲ್ಲಿ ಉಂಟಾದ ಗಲಾಟೆಗೆ ಸಂಬಂಧಿಸಿದಂತೆ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಕ್ಷಮೆಯಾಚಿಸಿದ್ದು, ನಿವೃತ್ತ ನ್ಯಾಯಮೂರ್ತಿ...

ಮೆಸ್ಸಿ ನೋಡಲು 25 ಸಾವಿರ ರೂ. ಪಾವತಿಸಿದವರಿಗೆ ನಿರಾಶೆ; ಕೋಪಗೊಂಡ ಅಭಿಮಾನಿಗಳಿಂದ ಕ್ರೀಡಾಂಗಣದಲ್ಲಿ ದಾಂಧಲೆ

ಶನಿವಾರ ನಡೆದ ಲಿಯೋನೆಲ್ ಮೆಸ್ಸಿ ಅವರ ಬಹು ನಿರೀಕ್ಷಿತ "ಗೋಟ್ ಇಂಡಿಯಾ ಟೂರ್" ಕೋಲ್ಕತ್ತಾದಲ್ಲಿ ಅಸ್ತವ್ಯಸ್ತವಾಯಿತು. ಯುವ ಭಾರತಿ ಕ್ರಿರಂಗನ್‌ನಲ್ಲಿ ರೊಚ್ಚಿಗೆದ್ದ ಅಭಿಮಾನಿಗಳ ದಾಂಧಲೆಯಿಂದ ಕ್ರೀಡಾಂಗಣ ಅವ್ಯವಸ್ಥೆಗೆ ಒಳಗಾಯಿತು. ಸಾವಿರಾರು ಅಭಿಮಾನಿಗಳು ಅರ್ಜೆಂಟೀನಾದ...

ಡ್ರಗ್‌ ಪೆಡ್ಲರ್‌ಗಳ ಮನೆ ಒಡೆದು ಹಾಕುವ ಹೇಳಿಕೆ : ಪರಮೇಶ್ವರ್ ಮಾತಿಗೆ ಆತಂಕ ವ್ಯಕ್ತಪಡಿಸಿದ ಕಾಂಗ್ರೆಸ್ ಹಿರಿಯ ನಾಯಕ ಚಿದಂಬರಂ

"ಡ್ರಗ್‌ ಪೆಡ್ಲರ್‌ಗಳ ಬಾಡಿಗೆ ಮನೆಗಳನ್ನು ಒಡೆದು ಹಾಕುವ ಹಂತಕ್ಕೆ ಹೋಗಿದ್ದೇವೆ" ಎಂಬ ಗೃಹ ಸಚಿವ ಜಿ.ಪರಮೇಶ್ವರ್ ಹೇಳಿಕೆಗೆ ಕಾಂಗ್ರೆಸ್ ಹಿರಿಯ ನಾಯಕ, ಮಾಜಿ ಕೇಂದ್ರ ಸಚಿವ ಪಿ. ಚಿದಂಬರಂ ಆತಂಕ ವ್ಯಕ್ತಪಡಿಸಿದ್ದಾರೆ. ಸಾಮಾಜಿಕ...

ಕೇರಳ ಸ್ಥಳೀಯ ಸಂಸ್ಥೆಗಳ ಚುನಾವಣೆ: ಶಶಿ ತರೂರ್ ಕ್ಷೇತ್ರ ತಿರುವನಂತಪುರಂನಲ್ಲಿ ಬಿಜೆಪಿ ಮುನ್ನಡೆ

ಕೇರಳ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ, ವಿಶೇಷವಾಗಿ ತಿರುವನಂತಪುರಂನಲ್ಲಿ ಭಾರತೀಯ ಜನತಾ ಪಕ್ಷದ ಸಾಧನೆಯನ್ನು ಹಿರಿಯ ಕಾಂಗ್ರೆಸ್ ನಾಯಕ ಶಶಿ ತರೂರ್ ಶನಿವಾರ ಅಭಿನಂದಿಸಿದ್ದಾರೆ. ಜನರ ತೀರ್ಪನ್ನು ಗೌರವಿಸಬೇಕು ಎಂದು ಹೇಳಿದ್ದಾರೆ. ಎಕ್ಸ್‌ನಲ್ಲಿ ದೀರ್ಘ...

ಆಳಂದ ಮತಗಳ್ಳತನ | ಬಿಜೆಪಿ ಮಾಜಿ ಶಾಸಕ ಸುಭಾಷ್ ಗುತ್ತೇದಾರ್ ಸೇರಿ 7 ಮಂದಿ ವಿರುದ್ಧ ಎಸ್‌ಐಟಿ ಚಾರ್ಜ್‌ಶೀಟ್‌

ಕಲಬುರಗಿಯ ಆಳಂದ ವಿಧಾನಸಭಾ ಕ್ಷೇತ್ರದಲ್ಲಿ ನಡೆದ ಮತಗಳ್ಳತನ (ಚುನಾವಣಾ ಆಕ್ರಮ) ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ) ನ್ಯಾಯಾಲಯಕ್ಕೆ ಆರೋಪಪಟ್ಟಿ ಸಲ್ಲಿಸಿದ್ದು, ಆಳಂದದ ಬಿಜೆಪಿ ಮಾಜಿ ಶಾಸಕ ಸುಭಾಷ್ ಗುತ್ತೇದಾರ್...

ಉತ್ತರ ಪ್ರದೇಶ| ಗಸ್ತು ವಾಹನ ಹಳ್ಳಕ್ಕೆ ಉರುಳಿಸಿದ ಪಾನಮತ್ತ ಪೊಲೀಸರು; ಕ್ರೇನ್ ಚಾಲಕನ ಮೇಲೆ ಹಲ್ಲೆ

ಶುಕ್ರವಾರ (ಡಿಸೆಂಬರ್ 12) ರಾತ್ರಿ ಪೊಲೀಸರೊಬ್ಬರು ಕಾರಿನ ನಿಯಂತ್ರಣ ಕಳೆದುಕೊಂಡ ಬಳಿಕ '112' ಪೊಲೀಸ್ ಪ್ರತಿಕ್ರಿಯೆ ವಾಹನ (ಪಿಆರ್‌ವಿ) ಹಳ್ಳಕ್ಕೆ ಉರುಳಿದೆ. ವರದಿಗಳ ಪ್ರಕಾರ, ಘಟನೆಯ ಸಮಯದಲ್ಲಿ ಪೊಲೀಸರು ಪಾನಮತ್ತರಾಗಿದ್ದರು. ಕಾರ್ ಕಂದಕಕ್ಕೆ...

ಲಿಯೋನೆಲ್ ಮೆಸ್ಸಿ ಇಂಡಿಯಾ ಪ್ರವಾಸ; ಅಭೂತಪೂರ್ವ ಸ್ವಾಗತ ಕೋರಿದ ಕೋಲ್ಕತ್ತಾ ಅಭಿಮಾನಿಗಳು

ಇಂಡಿಯಾ ಪ್ರವಾಸ ಪ್ರಾರಂಭಿಸಿರುವ ಅರ್ಜೆಂಟೀನಾದ ಪುಟ್‌ಬಾಲ್‌ ತಾರೆ ಲಿಯೋನೆಲ್ ಮೆಸ್ಸಿ ಕೋಲ್ಕತ್ತಾಗೆ ಬಂದಿಳಿದಿದ್ದಾರೆ. ಶನಿವಾರ ಬೆಳಗಿನ ಜಾವ ವಿಮಾನ ನಿಲ್ದಾಣದಲ್ಲಿ ನೆರೆದಿದ್ದ ಸಾವಿರಾರು ಅಭಿಮಾನಿಗಳಿಂದ ಅವರಿಗೆ ಅಭೂತಪೂರ್ವ ಸ್ವಾಗತ ಕೋರಿದರು. ಅರ್ಜೆಂಟೀನಾದ ಸೂಪರ್‌ಸ್ಟಾರ್ ದುಬೈ...

ನಟಿಯ ಅಪಹರಣ, ಅತ್ಯಾಚಾರ ಪ್ರಕರಣ : ಆರು ಅಪರಾಧಿಗಳಿಗೆ 20 ವರ್ಷ ಕಠಿಣ ಜೈಲು ಶಿಕ್ಷೆ

ಮಲಯಾಳಂ ಮೂಲದ ಬಹುಭಾಷಾ ನಟಿಯ ಅಪಹರಣ ಮತ್ತು ಅತ್ಯಾಚಾರ ಪ್ರಕರಣದ (2017ರ ಪ್ರಕರಣ) ಆರು ಅಪರಾಧಿಗಳಿಗೆ ಇಪ್ಪತ್ತು ವರ್ಷಗಳ ಕಠಿಣ ಜೈಲು ಶಿಕ್ಷೆ ವಿಧಿಸಿ ಶುಕ್ರವಾರ (ಡಿಸೆಂಬರ್ 12) ಕೇರಳ ನ್ಯಾಯಾಲಯ ಆದೇಶಿಸಿದೆ. ಡಿಸೆಂಬರ್...