Homeಮುಖಪುಟನನ್ನನ್ನು ಮತ್ತೆ ನಕ್ಸಲನನ್ನಾಗಿ ಮಾಡಬೇಡಿ : ನಿತಿನ್ ಗಡ್ಕರಿ ಕಿಡಿ..

ನನ್ನನ್ನು ಮತ್ತೆ ನಕ್ಸಲನನ್ನಾಗಿ ಮಾಡಬೇಡಿ : ನಿತಿನ್ ಗಡ್ಕರಿ ಕಿಡಿ..

- Advertisement -
- Advertisement -

ನಾನು ಮೊದಲು ನಕ್ಸಲನಾಗಿದ್ದೆ. ನಂತರ ನಾನು ಆರ್‌ಎಸ್‍ಎಸ್ ಸೇರಿಕೊಂಡಿದ್ದು, ನೀವು ಮತ್ತೆ ನನ್ನ ನಕ್ಸಲನನ್ನಾಗಿ ಮಾಡಬೇಡಿ ಎಂದು ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಇಂದು ಅಧಿಕಾರಿಗಳಿಗೆ ಖಡಕ್ ವಾರ್ನಿಂಗ್ ನೀಡಿದ್ದಾರೆ.

ಕೇರಳದ ಹೆದ್ದಾರಿ ಯೋಜನೆಯು ಅಧಿಕಾರಿಗಳ ನಿರ್ಲಕ್ಷ್ಯದಿಂದಾಗಿ ಪದೇ ಪದೇ ತಡವಾಗಿರುವುದರಿಂದ ಇದರ ಕುರಿತು ಚರ್ಚಿಸಲು ಇಂದು ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ನಿತಿನ್ ಗಡ್ಕರಿಯನ್ನು ಭೇಟಿಯಾಗಿದ್ದರು. ಆಗ ಗಡ್ಕರಿಯವರು, ಇದೇ ವಿಚಾರಕ್ಕೆ ಪಿಣರಾಯಿ ವಿಜಯನ್ ಅವರು ಐದು ಬಾರಿ ನನ್ನ ಬಳಿ ಬಂದಿದ್ದಾರೆ. ನೀವು ಮಾಡಿದ ಕೆಲಸಕ್ಕೆ ನನಗೆ ನಾಚಿಕೆಯಾಗುತ್ತಿದೆ. ಈ ವಿಚಾರದಲ್ಲಿ ನಿಮಗೆ ತೊಂದರೆ ಕೊಡುವವರು ಯಾರು ಎಂದು ನನಗೆ ಗೊತ್ತಿದೆ. ಈ ಇಲಾಖೆಗೆ ನಾನು ಮುಖ್ಯಸ್ಥ. ಇಂದು ಸಂಜೆಯೊಳಗೆ ಆ ಕೆಲಸ ಆಗಬೇಕು ಎಂದು ಅಧಿಕಾರಿಗಳಿಗೆ ಎಚ್ಚರಿಕೆ ಕೊಟ್ಟಿದ್ದಾರೆ.

ನಿತಿನ್ ಗಡ್ಕರಿಯವರ ಕೋಪವನ್ನು ಅರಿತ ತಕ್ಷಣ ಅಧಿಕಾರಿಗಳು ಎಚ್ಚೆತ್ತುಕೊಂಡಿದ್ದು ಕೇರಳದ ರಾಷ್ಟ್ರೀಯ ಹೆದ್ದಾರಿ ವಿಸ್ತರಣೆಗೆ ಭೂಸ್ವಾಧೀನಕ್ಕೆ ಇದ್ದ ಅಡೆತಡೆಗಳನ್ನು ತೆಗೆದುಹಾಕಿದ್ದಾರೆ.

ನಕ್ಸಲರು ಯಾರು? ಗಡ್ಕರಿ ಹೀಗೆ ಹೇಳಿದ್ದೇಕೆ?

ಸಮಾಜದಲ್ಲಿ ಮೂಲಭೂತ ಬದಲಾವಣೆ ಬಯಸುವವರು ನಕ್ಸಲರಾಗಿದ್ದಾರೆ. ಅದಕ್ಕಾಗಿ ಹಿಂಸಾಮಾರ್ಗವಾದರು ಸರಿಯೇ ಸೈನ್ಯಕಟ್ಟಿ ಕ್ರಾಂತಿ ಮಾಡಬೇಕೆಂಬುದು ಅವರ ಗುರಿ. ಅವರು ಸದಾ ವ್ಯವಸ್ಥೆಯ ವಿರುದ್ಧವಿರುತ್ತಾರೆ. ಏಕೆಂದರೆ ಅವರು ಈ ವ್ಯವಸ್ಥೇಯನ್ನು ಅಸಮಾನತೆಯಿಂದ ಕೂಡಿದೆ ಎಂದು ಭಾವಿಸುತ್ತಾರೆ. ಹಾಗಾಗಿ ಅವರು ಸದಾ ಸಮಾನತೆಯ ಪರವಾಗಿ ಮತ್ತು ಶೋಷಣೆಯ ವಿರುದ್ಧದ ಚಟುವಟಿಕೆಗಳಲ್ಲಿ ತೊಡಗಿರುತ್ತಾರೆ. ಅಷ್ಟೇ ಮುಖ್ಯವಾಗಿ ಅವರು ಸಂಘಪರಿವಾರ ಮತ್ತು ಎಲ್ಲಾ ರಾಜಕೀಯ ಪಕ್ಷಗಳನ್ನು ತೀವ್ರವಾಗಿ ವಿರೋಧಿಸುತ್ತಾರೆ. ನಕ್ಸಲರ ಪ್ರಕಾರ ಸಂಘಪರಿವಾರವೂ ಸಮಾನತೆಯ ವಿರೋಧಿ ಮತ್ತು ವರ್ಣ ವ್ಯವಸ್ಥೆಯನ್ನು ಜಾರಿಗೆ ತರಲು ಶ್ರಮಿಸುತ್ತದೆ ಎಂಬುದಾಗಿದೆ.

ಸದ್ಯಕ್ಕೆ ಅಭಿವೃದ್ದಿ ಕಾರ್ಯಗಳಿಗೆ ಅಡ್ಡಿಯಾಗಿರುವ ಅಧಿಕಾರಿಗಳಿಗೆ ಬಿಸಿಮುಟ್ಟಿಸಲು ನಿತಿನ್ ಗಡ್ಕರಿ ನಾನು ನಕ್ಸಲನಾಗಿದ್ದೆ ಎಂದು ಹೇಳಿಕೆ ನೀಡಿದ್ದಾರೆ. ಹಾಗಾಗಿ ಅಧಿಕಾರಿಗಳು ಸಮರ್ಪಕವಾಗಿ ಕೆಲಸ ಮಾಡದಿದ್ದರೆ ಮತ್ತೆ ನಕ್ಸಲನಾಗಬೇಕಾಗುತ್ತದೆ ಎಂಬ ಎಚ್ಚರಿಕೆಯನ್ನು ನೀಡಿದ್ದಾರೆ. ಇವರ ಈ ಹೇಳಿಕೆಯು ಒಂದು ರೀತಿಯಲ್ಲಿ ನಕ್ಸಲರ ಪರ ಇರುವಂತೆಯೂ ಕಾಣುತ್ತದೆ.

ಆದರೆ ನಿತಿನ್‌ ಗಡ್ಕರಿ ಪ್ರತಿನಿಧಿಸುವ ಬಿಜೆಪಿ ಪಕ್ಷ ಮತ್ತು ಆರ್‌.ಎಸ್‌.ಎಸ್‌ ಸಂಘಟನೆಯು ನಕ್ಸಲರನ್ನು ನಖಾಶಿಖಾಂತ ವಿರೋಧಿಸುತ್ತಾರೆ. ಅಷ್ಟೇ ಏಕೆ ಜನಪರ ಹೋರಾಟಗಾರರನ್ನು ಸಹ ಅವರು ಅರ್ಬನ್‌ ನಕ್ಸಲ್ ಎಂದು ಕರೆಯುತ್ತಾರೆ. ಅಂತಹ ಪಕ್ಷದ ನಿತಿನ್ ಗಡ್ಕರಿಯವರು ನಾನು ನಕ್ಸಲನಾಗಬೇಕಾಗುತ್ತದೆ ಎಂದಿರುವುದು ಆಶ್ಚರ್‍ಯಕರವಾಗಿದೆ.

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರಾವಳಿ ಸಮಸ್ಯೆಗೆ ಶಾಶ್ವತ ಪರಿಹಾರದ ಭರವಸೆ: ಸಚಿವ ಕೆ.ಎಸ್.ಬಸವಂತಪ್ಪ

ರಾಜ್ಯದ ಕರಾವಳಿ ಭಾಗದಲ್ಲಿ ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗುತ್ತಿರುವ ಕುರಿತು ಕಳವಳ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಮುಂದಾಗಿದೆ. ಕರಾವಳಿ ವ್ಯಾಪ್ತಿಯ ಬಂದರುಗಳು, ಮೀನು ಮಾರುಕಟ್ಟೆಗಳು, ಬ್ರೇಕ್‌ವಾಟರ್‌ಗಳು ಹಾಗೂ ಜೆಟ್ಟಿಗಳಿಗೆ...

SIR ಪ್ರಕ್ರಿಯೆಯಲ್ಲಿ ಯಾರ ಹೆಸರು ಬಿಟ್ಟುಹೋಗಬಾರದು: PRC ನೀಡಲು ವಿಳಂಬ ಬೇಡ ಡಾ. ಜಿ. ಪರಮೇಶ್ವರ್

ಉದ್ಯೋಗ ಅಥವಾ ವಿವಿಧ ಕಾರಣಗಳಿಂದಾಗಿ ತಮ್ಮ ಸ್ವಂತ ಊರು ತೊರೆದು ಬೇರೆಡೆಗೆ ಸ್ಥಳಾಂತರಗೊಂಡು ನೆಲೆಸಿರುವ ರಾಜ್ಯದ ಯಾವುದೇ ನಾಗರಿಕರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ...

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...