Homeಮುಖಪುಟ‘ರೈತರ ತಂಟೆಗೆ ಹೋಗಬೇಡಿ!’: ಮೋದಿ ಸರ್ಕಾರಕ್ಕೆ ಮತ್ತೆ ಎಚ್ಚರಿಕೆ ನೀಡಿದ ಮೇಘಾಲಯದ ರಾಜ್ಯಪಾಲ

‘ರೈತರ ತಂಟೆಗೆ ಹೋಗಬೇಡಿ!’: ಮೋದಿ ಸರ್ಕಾರಕ್ಕೆ ಮತ್ತೆ ಎಚ್ಚರಿಕೆ ನೀಡಿದ ಮೇಘಾಲಯದ ರಾಜ್ಯಪಾಲ

- Advertisement -
- Advertisement -

ರೈತರ ಭಾರಿ ಪ್ರತಿಭಟನೆಗೆ ಮಂಡಿಯೂರಿ ಒಕ್ಕೂಟ ಸರ್ಕರ ಇತ್ತೀಚೆಗೆ ಮೂರು ಕೃಷಿ ಕಾನೂನುಗಳನ್ನು ರದ್ದು ಮಾಡಿತ್ತು. ಈ ಕೃಷಿ ಕಾನೂನು ಮತ್ತು ಪ್ರಧಾನಿ ನರೇಂದ್ರ ಮೋದಿಯ ಬಗ್ಗೆ ಆಗಾಗ್ಗೆ ಟೀಕೆಗಳನ್ನು ಮಾಡುತ್ತಿದ್ದ ಮೇಘಾಲಯದ ರಾಜ್ಯಪಾಲ ಸತ್ಯಪಾಲ್ ಮಲಿಕ್ ಅವರು ಇದೀಗ ಮತ್ತೇ ಒಕ್ಕೂಟ ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ದು, “ರೈತರ ತಂಟೆಗೆ ಹೋಗಬೇಡಿ” ಎಂದು ಹೇಳಿದ್ದಾರೆ.

ಶುಕ್ರವಾರದಂದು ರಾಜಸ್ಥಾನದ ಜೋಧಪುರದಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಸತ್ಯಪಾಲ್‌ ಮಲಿಕ್, “ದೆಹಲಿ ಸರ್ಕಾರವು ರೈತರ ತಂಟೆಗೆ ಹೋಗಬಾರದು ಎಂಬುವುದು ನನ್ನ ಸಲಹೆ. ರೈತರು ಅಪಾಯಕಾರಿ ಜನರಾಗಿದ್ದು, ತಮಗೆ ಬೇಕಾದುದನ್ನು ಮಾತುಕತೆ ಅಥವಾ ಹೋರಾಟದ ಮೂಲಕ ಪಡೆಯುತ್ತಾರೆ. ಒಂದು ವೇಳೆ ಅಗತ್ಯವಿದ್ದರೆ, ಅವರು ಹಿಂಸಾತ್ಮಕವಾಗಿ ತಾವು ಬಯಸಿದ್ದನ್ನು ಸಾಧಿಸುತ್ತಾರೆ” ಎಂದು  ಹೇಳಿದ್ದಾರೆ.

ಬಿಹಾರ, ಗೋವಾ ಮತ್ತು ಜಮ್ಮು ಕಾಶ್ಮೀರ ರಾಜ್ಯಗಳಲ್ಲಿ ರಾಜ್ಯಪಾಲರಾಗಿ ಕಾರ್ಯನಿರ್ವಹಿಸಿದ್ದ ಅವರು ರೈತರ ಸಮಸ್ಯೆಗಳ ಬಗ್ಗೆ ಧ್ವನಿ ಎತ್ತಿದ್ದಕ್ಕಾಗಿ ತಾನು ಹುದ್ದೆಯನ್ನು ಕಳೆದುಕೊಳ್ಳಬಹುದಾದರೂ, ಅದಕ್ಕೆ ಹೆದರುವುದಿಲ್ಲ ಎಂದು ಅವರು ಈ ಹಿಂದೆ ಹೇಳಿದ್ದರು.

ಇದನ್ನೂ ಓದಿ: ‘ದೇಶದಲ್ಲಿ ರಾಜ್ಯಪಾಲರು ದುರ್ಬಲರಾಗಿದ್ದು, ಮಾತನಾಡಲಾಗದ ಸ್ಥಿತಿಯಿದೆ’: ರಾಜ್ಯಪಾಲ ಸತ್ಯಪಾಲ್ ಮಲಿಕ್

ಕಳೆದ ವರ್ಷ ಡಿಸೆಂಬರ್‌ನಲ್ಲಿ ರೈತರಿಗೆ ನೀಡಿದ ಭರವಸೆಗಳನ್ನು ಈಡೇರಿಸುವಂತೆ ಮಲಿಕ್ ಅವರು ಒಕ್ಕೂಟ ಸರ್ಕಾರಕ್ಕೆ ಸಲಹೆ ನೀಡಿದ್ದಾರೆ. ಕಳೆದ ವರ್ಷ ಡಿಸೆಂಬರ್‌ನಲ್ಲಿ ಕೃಷಿ ಕಾನೂನುಗಳನ್ನು ವಾಪಾಸು ಪಡೆದು ರೈತರ ಬೇಡಿಕೆಗಳನ್ನು ಈಡೇರಿಸುವುದಾಗಿ ಒಕ್ಕೂಟ ಸರ್ಕಾರ ಭರವಸೆ ನೀಡಿತ್ತು. ಹೀಗಾಗಿ ರೈತರು ತಮ್ಮ ಒಂದು ವರ್ಷಗಳ ಸುಧೀರ್ಘ ಪ್ರತಿಭಟನೆಯನ್ನು ಕೊನೆಗೊಳಿಸಿದ್ದರು.

“ಕೃಷಿಕರನ್ನು ದಾರಿ ತಪ್ಪಿಸಲು ಆಗುವುದಿಲ್ಲ. ತಮ್ಮ ಬೇಡಿಕೆಗಳನ್ನು ಈಡೇರಿಸುವುದು ಹೇಗೆ ಎಂದು ಅವರಿಗೆ ತಿಳಿದಿದೆ. ಅವರಿಗೆ ನೀಡಿದ ಭರವಸೆಗಳನ್ನು ಈಡೇರಿಸದಿದ್ದರೆ, ಅವರು ತಮ್ಮ ಪ್ರತಿಭಟನೆಯನ್ನು ಮತ್ತೆ ಪ್ರಾರಂಭಿಸುತ್ತಾರೆ” ಎಂದು ಮಲಿಕ್ ಹೇಳಿದ್ದಾರೆ.

ತನಗೆ ಒಕ್ಕೂಟ ಸರ್ಕಾರ ವಿರುದ್ದ ಯಾವುದೇ ‘ಹಗೆತನ’ ಹೊಂದಿಲ್ಲ ಎಂದು ಸ್ಪಷ್ಟಪಡಿಸಿರುವ ಮಲಿಕ್‌ ಅವರು, “ನಾನು ದೆಹಲಿಯಲ್ಲಿ ಒಂದೂವರೆ ಕೋಣೆಯ ಮನೆಯಲ್ಲಿ ವಾಸಿಸುತ್ತಿದ್ದೇನೆ. ಹಾಗಾಗಿಯೆ ಪ್ರಧಾನಿ ಮೋದಿಯನ್ನು ಎದುರಿಸಿ ರೈತರ ಸಮಸ್ಯೆಯ ಬಗ್ಗೆ ಮಾತನಾಡಲು ಸಾಧ್ಯವಾಯಿತು” ಎಂದು ಹೇಳಿದ್ದಾರೆ.

ಕಳೆದ ಜನವರಿಯಲ್ಲಿ ಹೇಳಿಕೆ ನೀಡಿದ್ದ ಮಲಿಕ್ ಅವರು, ರೈತರ ಸಮಸ್ಯೆಗೆ ಸಂಬಂಧಿಸಿದಂತೆ ಇಬ್ಬರ ನಡುವೆ ನಡೆದ ಮಾತುಕತೆಯಲ್ಲಿ ಪ್ರಧಾನಿ ‘ಅಹಂಕಾರದಿಂದ’ ವರ್ತಿಸಿದರು ಎಂದು ಹೇಳಿದ್ದರು. ಅಲ್ಲದೆ, ಅಮಿತ್ ಶಾ ಅವರೊಂದಿಗೆ ಪ್ರಧಾನಿ ಮೋದಿಯ ವರ್ತನೆಯ ಬಗ್ಗೆ ಕೇಳಿದ್ದಾಗ, ಅಮಿತ್‌ ಶಾ ಅವರು, ‘ಪ್ರಧಾನಿ ಮೋದಿ ತನ್ನ ಮಾನಸಿಕ ಸ್ಥಿಮಿತತೆ ಕಳೆದುಕೊಂಡಿದ್ದಾರೆ’ ಎಂದು ಟೀಕಿಸಿದ್ದರು ಎಂದು ಮಲಿಕ್ ಹೇಳಿದ್ದರು.

ಇದನ್ನೂ ಓದಿ:  ಮೋದಿ ಸ್ಥಿಮಿತತೆ ಕಳೆದುಕೊಂಡಿದ್ದಾರೆ ಎಂದು ಅಮಿತ್ ಶಾ ಹೇಳಿದ್ದರು: ಮೇಘಾಲಯ ರಾಜ್ಯಪಾಲರ ಸ್ಫೋಟಕ ಹೇಳಿಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...