Homeಮುಖಪುಟ‘ರೈತರ ತಂಟೆಗೆ ಹೋಗಬೇಡಿ!’: ಮೋದಿ ಸರ್ಕಾರಕ್ಕೆ ಮತ್ತೆ ಎಚ್ಚರಿಕೆ ನೀಡಿದ ಮೇಘಾಲಯದ ರಾಜ್ಯಪಾಲ

‘ರೈತರ ತಂಟೆಗೆ ಹೋಗಬೇಡಿ!’: ಮೋದಿ ಸರ್ಕಾರಕ್ಕೆ ಮತ್ತೆ ಎಚ್ಚರಿಕೆ ನೀಡಿದ ಮೇಘಾಲಯದ ರಾಜ್ಯಪಾಲ

- Advertisement -
- Advertisement -

ರೈತರ ಭಾರಿ ಪ್ರತಿಭಟನೆಗೆ ಮಂಡಿಯೂರಿ ಒಕ್ಕೂಟ ಸರ್ಕರ ಇತ್ತೀಚೆಗೆ ಮೂರು ಕೃಷಿ ಕಾನೂನುಗಳನ್ನು ರದ್ದು ಮಾಡಿತ್ತು. ಈ ಕೃಷಿ ಕಾನೂನು ಮತ್ತು ಪ್ರಧಾನಿ ನರೇಂದ್ರ ಮೋದಿಯ ಬಗ್ಗೆ ಆಗಾಗ್ಗೆ ಟೀಕೆಗಳನ್ನು ಮಾಡುತ್ತಿದ್ದ ಮೇಘಾಲಯದ ರಾಜ್ಯಪಾಲ ಸತ್ಯಪಾಲ್ ಮಲಿಕ್ ಅವರು ಇದೀಗ ಮತ್ತೇ ಒಕ್ಕೂಟ ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ದು, “ರೈತರ ತಂಟೆಗೆ ಹೋಗಬೇಡಿ” ಎಂದು ಹೇಳಿದ್ದಾರೆ.

ಶುಕ್ರವಾರದಂದು ರಾಜಸ್ಥಾನದ ಜೋಧಪುರದಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಸತ್ಯಪಾಲ್‌ ಮಲಿಕ್, “ದೆಹಲಿ ಸರ್ಕಾರವು ರೈತರ ತಂಟೆಗೆ ಹೋಗಬಾರದು ಎಂಬುವುದು ನನ್ನ ಸಲಹೆ. ರೈತರು ಅಪಾಯಕಾರಿ ಜನರಾಗಿದ್ದು, ತಮಗೆ ಬೇಕಾದುದನ್ನು ಮಾತುಕತೆ ಅಥವಾ ಹೋರಾಟದ ಮೂಲಕ ಪಡೆಯುತ್ತಾರೆ. ಒಂದು ವೇಳೆ ಅಗತ್ಯವಿದ್ದರೆ, ಅವರು ಹಿಂಸಾತ್ಮಕವಾಗಿ ತಾವು ಬಯಸಿದ್ದನ್ನು ಸಾಧಿಸುತ್ತಾರೆ” ಎಂದು  ಹೇಳಿದ್ದಾರೆ.

ಬಿಹಾರ, ಗೋವಾ ಮತ್ತು ಜಮ್ಮು ಕಾಶ್ಮೀರ ರಾಜ್ಯಗಳಲ್ಲಿ ರಾಜ್ಯಪಾಲರಾಗಿ ಕಾರ್ಯನಿರ್ವಹಿಸಿದ್ದ ಅವರು ರೈತರ ಸಮಸ್ಯೆಗಳ ಬಗ್ಗೆ ಧ್ವನಿ ಎತ್ತಿದ್ದಕ್ಕಾಗಿ ತಾನು ಹುದ್ದೆಯನ್ನು ಕಳೆದುಕೊಳ್ಳಬಹುದಾದರೂ, ಅದಕ್ಕೆ ಹೆದರುವುದಿಲ್ಲ ಎಂದು ಅವರು ಈ ಹಿಂದೆ ಹೇಳಿದ್ದರು.

ಇದನ್ನೂ ಓದಿ: ‘ದೇಶದಲ್ಲಿ ರಾಜ್ಯಪಾಲರು ದುರ್ಬಲರಾಗಿದ್ದು, ಮಾತನಾಡಲಾಗದ ಸ್ಥಿತಿಯಿದೆ’: ರಾಜ್ಯಪಾಲ ಸತ್ಯಪಾಲ್ ಮಲಿಕ್

ಕಳೆದ ವರ್ಷ ಡಿಸೆಂಬರ್‌ನಲ್ಲಿ ರೈತರಿಗೆ ನೀಡಿದ ಭರವಸೆಗಳನ್ನು ಈಡೇರಿಸುವಂತೆ ಮಲಿಕ್ ಅವರು ಒಕ್ಕೂಟ ಸರ್ಕಾರಕ್ಕೆ ಸಲಹೆ ನೀಡಿದ್ದಾರೆ. ಕಳೆದ ವರ್ಷ ಡಿಸೆಂಬರ್‌ನಲ್ಲಿ ಕೃಷಿ ಕಾನೂನುಗಳನ್ನು ವಾಪಾಸು ಪಡೆದು ರೈತರ ಬೇಡಿಕೆಗಳನ್ನು ಈಡೇರಿಸುವುದಾಗಿ ಒಕ್ಕೂಟ ಸರ್ಕಾರ ಭರವಸೆ ನೀಡಿತ್ತು. ಹೀಗಾಗಿ ರೈತರು ತಮ್ಮ ಒಂದು ವರ್ಷಗಳ ಸುಧೀರ್ಘ ಪ್ರತಿಭಟನೆಯನ್ನು ಕೊನೆಗೊಳಿಸಿದ್ದರು.

“ಕೃಷಿಕರನ್ನು ದಾರಿ ತಪ್ಪಿಸಲು ಆಗುವುದಿಲ್ಲ. ತಮ್ಮ ಬೇಡಿಕೆಗಳನ್ನು ಈಡೇರಿಸುವುದು ಹೇಗೆ ಎಂದು ಅವರಿಗೆ ತಿಳಿದಿದೆ. ಅವರಿಗೆ ನೀಡಿದ ಭರವಸೆಗಳನ್ನು ಈಡೇರಿಸದಿದ್ದರೆ, ಅವರು ತಮ್ಮ ಪ್ರತಿಭಟನೆಯನ್ನು ಮತ್ತೆ ಪ್ರಾರಂಭಿಸುತ್ತಾರೆ” ಎಂದು ಮಲಿಕ್ ಹೇಳಿದ್ದಾರೆ.

ತನಗೆ ಒಕ್ಕೂಟ ಸರ್ಕಾರ ವಿರುದ್ದ ಯಾವುದೇ ‘ಹಗೆತನ’ ಹೊಂದಿಲ್ಲ ಎಂದು ಸ್ಪಷ್ಟಪಡಿಸಿರುವ ಮಲಿಕ್‌ ಅವರು, “ನಾನು ದೆಹಲಿಯಲ್ಲಿ ಒಂದೂವರೆ ಕೋಣೆಯ ಮನೆಯಲ್ಲಿ ವಾಸಿಸುತ್ತಿದ್ದೇನೆ. ಹಾಗಾಗಿಯೆ ಪ್ರಧಾನಿ ಮೋದಿಯನ್ನು ಎದುರಿಸಿ ರೈತರ ಸಮಸ್ಯೆಯ ಬಗ್ಗೆ ಮಾತನಾಡಲು ಸಾಧ್ಯವಾಯಿತು” ಎಂದು ಹೇಳಿದ್ದಾರೆ.

ಕಳೆದ ಜನವರಿಯಲ್ಲಿ ಹೇಳಿಕೆ ನೀಡಿದ್ದ ಮಲಿಕ್ ಅವರು, ರೈತರ ಸಮಸ್ಯೆಗೆ ಸಂಬಂಧಿಸಿದಂತೆ ಇಬ್ಬರ ನಡುವೆ ನಡೆದ ಮಾತುಕತೆಯಲ್ಲಿ ಪ್ರಧಾನಿ ‘ಅಹಂಕಾರದಿಂದ’ ವರ್ತಿಸಿದರು ಎಂದು ಹೇಳಿದ್ದರು. ಅಲ್ಲದೆ, ಅಮಿತ್ ಶಾ ಅವರೊಂದಿಗೆ ಪ್ರಧಾನಿ ಮೋದಿಯ ವರ್ತನೆಯ ಬಗ್ಗೆ ಕೇಳಿದ್ದಾಗ, ಅಮಿತ್‌ ಶಾ ಅವರು, ‘ಪ್ರಧಾನಿ ಮೋದಿ ತನ್ನ ಮಾನಸಿಕ ಸ್ಥಿಮಿತತೆ ಕಳೆದುಕೊಂಡಿದ್ದಾರೆ’ ಎಂದು ಟೀಕಿಸಿದ್ದರು ಎಂದು ಮಲಿಕ್ ಹೇಳಿದ್ದರು.

ಇದನ್ನೂ ಓದಿ:  ಮೋದಿ ಸ್ಥಿಮಿತತೆ ಕಳೆದುಕೊಂಡಿದ್ದಾರೆ ಎಂದು ಅಮಿತ್ ಶಾ ಹೇಳಿದ್ದರು: ಮೇಘಾಲಯ ರಾಜ್ಯಪಾಲರ ಸ್ಫೋಟಕ ಹೇಳಿಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...