Homeಕರ್ನಾಟಕಪ್ರೊಫೈಲ್‌ನಲ್ಲಿ ರಾಷ್ಟ್ರಧ್ವಜ: ಮೋದಿ ಮನವಿ ಆರ್‌ಎಸ್‌ಎಸ್‌ಗೆ ಮುಜುಗರ ತಂದಿತೇ?

ಪ್ರೊಫೈಲ್‌ನಲ್ಲಿ ರಾಷ್ಟ್ರಧ್ವಜ: ಮೋದಿ ಮನವಿ ಆರ್‌ಎಸ್‌ಎಸ್‌ಗೆ ಮುಜುಗರ ತಂದಿತೇ?

“ರಾಷ್ಟ್ರಧ್ವಜ ಪ್ರೊಫೈಲ್ ವಿಚಾರದಲ್ಲಿ ರಾಜಕೀಯ ಮಾಡಬೇಡಿ” ಎಂದು ಆರ್‌ಎಸ್‌ಎಸ್‌ ಪ್ರಚಾರ್ ಪ್ರಮುಖ್ ಸುನೀಲ್ ಅಂಬೇಕರ್ ಪ್ರತಿಕ್ರಿಯೆ ನೀಡಿದ್ದಾರೆ.

- Advertisement -
- Advertisement -

ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್‌ಎಸ್‌ಎಸ್‌) ತನ್ನ ಸಾಮಾಜಿಕ ಮಾಧ್ಯಮ ಖಾತೆಗಳ ಪ್ರೊಫೈಲ್ ಚಿತ್ರವಾಗಿ ತ್ರಿವರ್ಣ ಧ್ವಜವನ್ನು ಏಕೆ ಹಾಕಿಕೊಂಡಿಲ್ಲ ಎಂಬ ಪ್ರಶ್ನೆಯನ್ನು ಜನರು ಕೇಳುತ್ತಿದ್ದಾರೆ.

ಈ ಕುರಿತು ಪ್ರತಿಕ್ರಿಯೆ ನೀಡಿರುವ ಆರ್‌ಎಸ್‌ಎಸ್ ಅಖಿಲ ಭಾರತೀಯ ಪ್ರಚಾರ್ ಪ್ರಮುಖ್ ಸುನೀಲ್ ಅಂಬೇಕರ್, “ಇಂತಹ ವಿಷಯಗಳನ್ನು ರಾಜಕೀಯಗೊಳಿಸಬಾರದು. ಆರ್‌ಎಸ್‌ಎಸ್ ಈಗಾಗಲೇ ‘ಹರ್ ಘರ್ ತಿರಂಗ’ ಮತ್ತು ‘ಆಜಾದಿ ಕಾ ಅಮೃತ್ ಮಹೋತ್ಸವ’ ಕಾರ್ಯಕ್ರಮಗಳಿಗೆ ತನ್ನ ಬೆಂಬಲವನ್ನು ನೀಡಿದೆ. ಸರ್ಕಾರ, ಖಾಸಗಿ ಸಂಸ್ಥೆಗಳು ಮತ್ತು ಆರ್‌ಎಸ್‌ಎಸ್ ಅಂಗ ಸಂಸ್ಥೆಗಳು ಆಯೋಜಿಸುವ ಕಾರ್ಯಕ್ರಮಗಳಲ್ಲಿ ಜನ ಮತ್ತು ಸ್ವಯಂಸೇವಕರು ಸಂಪೂರ್ಣವಾಗಿ ಪಾಲ್ಗೊಳ್ಳುವಂತೆ ಆರ್‌ಎಸ್‌ಎಸ್‌ ಜುಲೈನಲ್ಲೇ ಮನವಿ ಮಾಡಿದೆ” ಎಂದು ಸಮರ್ಥಿಸಿಕೊಂಡಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ತ್ರಿವರ್ಣ ಧ್ವಜದ ಚಿತ್ರವನ್ನು ಸಾಮಾಜಿಕ ಮಾಧ್ಯಮಗಳ ಪ್ರೊಫೈಲ್‌ನಲ್ಲಿ ಹಾಕಿಕೊಳ್ಳುವಂತೆ ಪ್ರಧಾನಿ ನರೇಂದ್ರ ಮೋದಿಯವರು ಮನವಿ ಮಾಡಿದ ನಂತರವೂ ಆರ್‌ಎಸ್‌ಎಸ್‌ ಮುಖಂಡರು ತಮ್ಮ ಖಾತೆಗಳಲ್ಲಿ ಏಕೆ ತ್ರಿವರ್ಣ ಧ್ವಜದ ಚಿತ್ರವನ್ನು ಹಾಕಿಕೊಂಡಿಲ್ಲ ಎಂಬ ವಿವಾದ ಮುನ್ನೆಲೆಗೆ ಬಂದಿದೆ.

“ಆರ್‌ಎಸ್‌ಎಸ್‌ ಎಂದಿಗೂ ಭಗವಾಧ್ವಜವನ್ನು ಒಪ್ಪುತ್ತದೆಯೇ ಹೊರತು, ತ್ರಿವರ್ಣ ಧ್ವಜವನ್ನಲ್ಲ” ಎಂಬ ಟೀಕೆಗಳು ವ್ಯಕ್ತವಾಗುತ್ತಿವೆ. ಆರ್‌ಎಸ್‌ಎಸ್‌ ಸಂಸ್ಥಾಪಕ ಕೇಶವ ಬಲಿರಾಮ ಹೆಡಗೇವಾರ್‌ ಕಾಲದಿಂದಲೂ ಸ್ವಾತಂತ್ರ್ಯ ನಂತರದಲ್ಲೂ ಆರ್‌‌ಎಸ್‌ಎಸ್‌ ತ್ರಿವರ್ಣ ಧ್ವಜವನ್ನು ಒಪ್ಪಿಲ್ಲ. ರಾಜಕೀಯ ಕಾರಣಗಳಿಗಷ್ಟೇ ಇತ್ತೀಚಿನ ವರ್ಷಗಳಲ್ಲಿ ಆರ್‌ಎಸ್‌ಎಸ್‌ ರಾಷ್ಟ್ರಧ್ವಜವನ್ನು ಗೌರವಿಸುತ್ತಿದೆ” ಎಂಬ ಆರೋಪಗಳು ಬಂದಿವೆ.

ಮಾಜಿ ಸಚಿವ ಕೆ.ಎಸ್‌.ಈಶ್ವರಪ್ಪ ಅವರು ಕೆಲವು ತಿಂಗಳ ಹಿಂದೆ, “ನಾವು ಕೆಂಪುಕೋಟೆಯ ಮೇಲೆ ಭಗವಾಧ್ವಜ ಹಾರಿಸುತ್ತೇವೆ” ಎಂದು ಹೇಳಿಕೆ ನೀಡಿದ್ದು ವಿವಾದ ಉಂಟಾಗಿತ್ತು. ಅಲ್ಲದೆ ‘ಭಗವಾಧ್ವಜ’ದ ಕುರಿತು ಹೆಗಡೇವಾರ್‌ ಮಾತನಾಡಿರುವುದನ್ನು ‘ಧ್ವಜ’ ಎಂದು ತಿರುಚಿ ಕರ್ನಾಟಕ ಸರ್ಕಾರ ಪಠ್ಯಪುಸ್ತಕದಲ್ಲಿ ಸೇರಿಸಿದೆ.

ಈ ಎಲ್ಲ ಬೆಳವಣಿಗೆಗಳ ನಡುವೆ ಮೋದಿ ಹೇಳಿಕೆ ಹೊರಬಿದ್ದಿದೆ. ಬಹುತೇಕ ಆರ್‌ಎಸ್‌ಎಸ್ ನಾಯಕರು ಮೋದಿಯವರ ಮನವಿಗೆ ಸೊಪ್ಪು ಹಾಕಿಲ್ಲ. ಈ  ಕುರಿತು ಟೀಕೆಗಳು ವ್ಯಕ್ತವಾದ ಬಳಿಕ ಕೆಲವು ನಾಯಕರು ತಮ್ಮ ಪ್ರೊಫೈಲ್ ಬದಲಿಸಿದ್ದಾರೆ.

ಆರ್‌ಎಸ್‌ಎಸ್ ಸರಸಂಚಾಲಕ ಮೋಹನ್‌ ಭಾಗವತ್‌, ರಾಷ್ಟ್ರೀಯ ಕಾರ್ಯದರ್ಶಿ ದತ್ತಾತ್ರೇಯ ಹೊಸಬಾಳೆ ಮೊದಲಾದ ನಾಯಕರು ಈಗಲೂ ತಮ್ಮ ಟ್ಟಿಟರ್‌ ಪ್ರೊಫೈಲ್‌ನಲ್ಲಿ ತ್ರಿವರ್ಣಧ್ವಜದ ಚಿತ್ರವನ್ನು ಹಾಕಿಕೊಂಡಿಲ್ಲ.

‘ಆರ್‌ಎಸ್‌ಎಸ್‌’ನ ಅಧಿಕೃತ ಟ್ವಿಟರ್‌ ಹಾಗೂ ಫೇಸ್‌ಬುಕ್‌ ಖಾತೆಯಲ್ಲಿ ಈವರೆಗೂ ಭಗವಾಧ್ವಜವೇ ಪ್ರೊಫೈಲ್‌ ಚಿತ್ರವಾಗಿದೆ. ಪ್ರಧಾನಿ ನರೇಂದ್ರ ಮೋದಿಯವರು ಮಾಡಿರುವ ಮನವಿಯು ಆರ್‌ಎಸ್‌ಎಸ್‌ಗೆ ಮುಜುಗರ ತಂದಿದಿಯೇ ಎಂಬ ಚರ್ಚೆಗಳು ಶುರುವಾಗಿವೆ.

ಈ ಹಿನ್ನೆಲೆಯಲ್ಲಿ ಪ್ರತಿಕ್ರಿಯೆ ನೀಡಿರುವ ಆರ್‌ಎಸ್‌ಎಸ್‌ ಪ್ರಮುಖ್‌ ಸುನೀಲ್‌, “ಇಂತಹ ವಿಷಯಗಳಲ್ಲಿ ರಾಜಕೀಯ ಮಾಡಬಾರದು” ಎಂದು ಅಭಿಪ್ರಾಯಪಟ್ಟಿದ್ದಾರೆ.

ಸಾಮಾಜಿಕ ಮಾಧ್ಯಮದಲ್ಲಿ ಎದ್ದಿರುವ ಪ್ರಶ್ನೆಗಳ ಬಗ್ಗೆ ಸ್ಪಷ್ಟವಾಗಿ ಉತ್ತರಿಸದ ಅವರು, “ಇದು ಒಂದು ಪ್ರಕ್ರಿಯೆ. ಅದನ್ನು ನಮ್ಮದೇ ರೀತಿಯಲ್ಲಿ ನಿಭಾಯಿಸುತ್ತೇವೆ. ಹೇಗೆ ಆಚರಿಸಬೇಕು ಎಂದು ಯೋಚಿಸುತ್ತಿದ್ದೇವೆ. ಸಂಘವು ಈಗಾಗಲೇ ತನ್ನ ನಿಲುವನ್ನು ಸ್ಪಷ್ಟಪಡಿಸಿದೆ. ಅಮೃತ ಮಹೋತ್ಸವಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರ ಪ್ರಾರಂಭಿಸಿದ ಎಲ್ಲಾ ಕಾರ್ಯಕ್ರಮಗಳನ್ನು ಸಂಘವು ಬೆಂಬಲಿಸಿದೆ” ಎಂದಿದ್ದಾರೆ.

‘ಆಜಾದಿ ಕಾ ಅಮೃತ್ ಮಹೋತ್ಸವ’ವನ್ನು ಉತ್ಸಾಹದಿಂದ ಆಚರಿಸಲು ಜನರು ಮತ್ತು ಸ್ವಯಂಸೇವಕರನ್ನು ಆರ್‌ಎಸ್‌ಎಸ್ ಕೇಳಿಕೊಂಡಿದೆ. ಸಿದ್ಧತೆಗಳು ನಡೆಯುತ್ತಿವೆ ಎಂದಿದ್ದಾರೆ.

ಇದನ್ನೂ ಓದಿರಿ: ಬೊಮ್ಮಾಯಿ ಆಡಳಿತದ ಒಂದು ವರ್ಷದಲ್ಲಿ ರಾಜ್ಯ ಕಂಡ ಕೋಮುದ್ವೇಷ ಪ್ರಕರಣಗಳಿವು

“ಇದು ಸಂಘದ ನಿಲುವು. ಇದನ್ನು ರಾಜಕೀಯ ವಿಷಯ ಮಾಡುವುದು ತಪ್ಪು. ಈ ರೀತಿಯ ತೀಕ್ಷ್ಣವಾದ ಪ್ರಶ್ನೆಗಳು ಇರಬಾರದು. ಇಂತಹ ಪ್ರಶ್ನೆಗಳನ್ನು ಎತ್ತುತ್ತಿರುವ ಪಕ್ಷವೇ ದೇಶ ವಿಭಜನೆಗೆ ಕಾರಣವಾಗಿತ್ತು” ಎಂದು ಕಾಂಗ್ರೆಸ್‌ ಮೇಲೆ ಆರೋಪ ಹೊರಿಸಿದ್ದಾರೆ.

ಪಿಎಂ ಮೋದಿ ಮತ್ತು ಹಲವಾರು ಬಿಜೆಪಿ ನಾಯಕರು ಸಾಮಾಜಿಕ ಮಾಧ್ಯಮದಲ್ಲಿ ತ್ರಿವರ್ಣ ಧ್ವಜವನ್ನು ತಮ್ಮ ಪ್ರೊಫೈಲ್ ಚಿತ್ರವನ್ನಾಗಿ ಅಪ್‌ಲೋಡ್ ಮಾಡಿದ್ದಾರೆ. ಕಾಂಗ್ರೆಸ್ ನಾಯಕರು ಇದಕ್ಕೆ ವಿಭಿನ್ನ ರೀತಿಯಲ್ಲಿ ಪ್ರತಿಕ್ರಿಯೆ ನೀಡಿದ್ದು, ಭಾರತದ ಮೊದಲ ಪ್ರಧಾನಿ ಜವಹರಲಾಲ್‌ ನೆಹರೂ ಅವರು ತ್ರಿವರ್ಣಧ್ವಜವನ್ನು ಹಿಡಿದಿರುವ ಫೋಟೋವನ್ನು ಪ್ರೊಫೈಲ್‌ ಚಿತ್ರವಾಗಿ ಅಪ್‌ಲೋಡ್ ಮಾಡಿದ್ದಾರೆ. ಆ ಮೂಲಕ ತ್ರಿವರ್ಣಧ್ವಜವನ್ನು ಅಂದಿನ ಕಾಂಗ್ರೆಸ್ ಸರ್ಕಾರ ಅಂಗೀಕರಿಸಿತು ಎಂಬ ಸಂದೇಶವನ್ನು ಕಾಂಗ್ರೆಸ್ ನೀಡಿದೆ.

ದೇಶದ ಸ್ವಾತಂತ್ರ್ಯದ 75ನೇ ವಾರ್ಷಿಕೋತ್ಸವದ ಅಂಗವಾಗಿ ಪ್ರಾರಂಭಿಸಲಾದ “ಹರ್ ಘರ್ ತಿರಂಗ” ಅಭಿಯಾನವು ಈಗ ಆರ್‌ಎಸ್‌ಎಸ್‌ ಅಂಗಳದಲ್ಲಿ ಸದ್ದು ಮಾಡುತ್ತಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...