Homeಕರ್ನಾಟಕಪ್ರೊಫೈಲ್‌ನಲ್ಲಿ ರಾಷ್ಟ್ರಧ್ವಜ: ಮೋದಿ ಮನವಿ ಆರ್‌ಎಸ್‌ಎಸ್‌ಗೆ ಮುಜುಗರ ತಂದಿತೇ?

ಪ್ರೊಫೈಲ್‌ನಲ್ಲಿ ರಾಷ್ಟ್ರಧ್ವಜ: ಮೋದಿ ಮನವಿ ಆರ್‌ಎಸ್‌ಎಸ್‌ಗೆ ಮುಜುಗರ ತಂದಿತೇ?

“ರಾಷ್ಟ್ರಧ್ವಜ ಪ್ರೊಫೈಲ್ ವಿಚಾರದಲ್ಲಿ ರಾಜಕೀಯ ಮಾಡಬೇಡಿ” ಎಂದು ಆರ್‌ಎಸ್‌ಎಸ್‌ ಪ್ರಚಾರ್ ಪ್ರಮುಖ್ ಸುನೀಲ್ ಅಂಬೇಕರ್ ಪ್ರತಿಕ್ರಿಯೆ ನೀಡಿದ್ದಾರೆ.

- Advertisement -
- Advertisement -

ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್‌ಎಸ್‌ಎಸ್‌) ತನ್ನ ಸಾಮಾಜಿಕ ಮಾಧ್ಯಮ ಖಾತೆಗಳ ಪ್ರೊಫೈಲ್ ಚಿತ್ರವಾಗಿ ತ್ರಿವರ್ಣ ಧ್ವಜವನ್ನು ಏಕೆ ಹಾಕಿಕೊಂಡಿಲ್ಲ ಎಂಬ ಪ್ರಶ್ನೆಯನ್ನು ಜನರು ಕೇಳುತ್ತಿದ್ದಾರೆ.

ಈ ಕುರಿತು ಪ್ರತಿಕ್ರಿಯೆ ನೀಡಿರುವ ಆರ್‌ಎಸ್‌ಎಸ್ ಅಖಿಲ ಭಾರತೀಯ ಪ್ರಚಾರ್ ಪ್ರಮುಖ್ ಸುನೀಲ್ ಅಂಬೇಕರ್, “ಇಂತಹ ವಿಷಯಗಳನ್ನು ರಾಜಕೀಯಗೊಳಿಸಬಾರದು. ಆರ್‌ಎಸ್‌ಎಸ್ ಈಗಾಗಲೇ ‘ಹರ್ ಘರ್ ತಿರಂಗ’ ಮತ್ತು ‘ಆಜಾದಿ ಕಾ ಅಮೃತ್ ಮಹೋತ್ಸವ’ ಕಾರ್ಯಕ್ರಮಗಳಿಗೆ ತನ್ನ ಬೆಂಬಲವನ್ನು ನೀಡಿದೆ. ಸರ್ಕಾರ, ಖಾಸಗಿ ಸಂಸ್ಥೆಗಳು ಮತ್ತು ಆರ್‌ಎಸ್‌ಎಸ್ ಅಂಗ ಸಂಸ್ಥೆಗಳು ಆಯೋಜಿಸುವ ಕಾರ್ಯಕ್ರಮಗಳಲ್ಲಿ ಜನ ಮತ್ತು ಸ್ವಯಂಸೇವಕರು ಸಂಪೂರ್ಣವಾಗಿ ಪಾಲ್ಗೊಳ್ಳುವಂತೆ ಆರ್‌ಎಸ್‌ಎಸ್‌ ಜುಲೈನಲ್ಲೇ ಮನವಿ ಮಾಡಿದೆ” ಎಂದು ಸಮರ್ಥಿಸಿಕೊಂಡಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ತ್ರಿವರ್ಣ ಧ್ವಜದ ಚಿತ್ರವನ್ನು ಸಾಮಾಜಿಕ ಮಾಧ್ಯಮಗಳ ಪ್ರೊಫೈಲ್‌ನಲ್ಲಿ ಹಾಕಿಕೊಳ್ಳುವಂತೆ ಪ್ರಧಾನಿ ನರೇಂದ್ರ ಮೋದಿಯವರು ಮನವಿ ಮಾಡಿದ ನಂತರವೂ ಆರ್‌ಎಸ್‌ಎಸ್‌ ಮುಖಂಡರು ತಮ್ಮ ಖಾತೆಗಳಲ್ಲಿ ಏಕೆ ತ್ರಿವರ್ಣ ಧ್ವಜದ ಚಿತ್ರವನ್ನು ಹಾಕಿಕೊಂಡಿಲ್ಲ ಎಂಬ ವಿವಾದ ಮುನ್ನೆಲೆಗೆ ಬಂದಿದೆ.

“ಆರ್‌ಎಸ್‌ಎಸ್‌ ಎಂದಿಗೂ ಭಗವಾಧ್ವಜವನ್ನು ಒಪ್ಪುತ್ತದೆಯೇ ಹೊರತು, ತ್ರಿವರ್ಣ ಧ್ವಜವನ್ನಲ್ಲ” ಎಂಬ ಟೀಕೆಗಳು ವ್ಯಕ್ತವಾಗುತ್ತಿವೆ. ಆರ್‌ಎಸ್‌ಎಸ್‌ ಸಂಸ್ಥಾಪಕ ಕೇಶವ ಬಲಿರಾಮ ಹೆಡಗೇವಾರ್‌ ಕಾಲದಿಂದಲೂ ಸ್ವಾತಂತ್ರ್ಯ ನಂತರದಲ್ಲೂ ಆರ್‌‌ಎಸ್‌ಎಸ್‌ ತ್ರಿವರ್ಣ ಧ್ವಜವನ್ನು ಒಪ್ಪಿಲ್ಲ. ರಾಜಕೀಯ ಕಾರಣಗಳಿಗಷ್ಟೇ ಇತ್ತೀಚಿನ ವರ್ಷಗಳಲ್ಲಿ ಆರ್‌ಎಸ್‌ಎಸ್‌ ರಾಷ್ಟ್ರಧ್ವಜವನ್ನು ಗೌರವಿಸುತ್ತಿದೆ” ಎಂಬ ಆರೋಪಗಳು ಬಂದಿವೆ.

ಮಾಜಿ ಸಚಿವ ಕೆ.ಎಸ್‌.ಈಶ್ವರಪ್ಪ ಅವರು ಕೆಲವು ತಿಂಗಳ ಹಿಂದೆ, “ನಾವು ಕೆಂಪುಕೋಟೆಯ ಮೇಲೆ ಭಗವಾಧ್ವಜ ಹಾರಿಸುತ್ತೇವೆ” ಎಂದು ಹೇಳಿಕೆ ನೀಡಿದ್ದು ವಿವಾದ ಉಂಟಾಗಿತ್ತು. ಅಲ್ಲದೆ ‘ಭಗವಾಧ್ವಜ’ದ ಕುರಿತು ಹೆಗಡೇವಾರ್‌ ಮಾತನಾಡಿರುವುದನ್ನು ‘ಧ್ವಜ’ ಎಂದು ತಿರುಚಿ ಕರ್ನಾಟಕ ಸರ್ಕಾರ ಪಠ್ಯಪುಸ್ತಕದಲ್ಲಿ ಸೇರಿಸಿದೆ.

ಈ ಎಲ್ಲ ಬೆಳವಣಿಗೆಗಳ ನಡುವೆ ಮೋದಿ ಹೇಳಿಕೆ ಹೊರಬಿದ್ದಿದೆ. ಬಹುತೇಕ ಆರ್‌ಎಸ್‌ಎಸ್ ನಾಯಕರು ಮೋದಿಯವರ ಮನವಿಗೆ ಸೊಪ್ಪು ಹಾಕಿಲ್ಲ. ಈ  ಕುರಿತು ಟೀಕೆಗಳು ವ್ಯಕ್ತವಾದ ಬಳಿಕ ಕೆಲವು ನಾಯಕರು ತಮ್ಮ ಪ್ರೊಫೈಲ್ ಬದಲಿಸಿದ್ದಾರೆ.

ಆರ್‌ಎಸ್‌ಎಸ್ ಸರಸಂಚಾಲಕ ಮೋಹನ್‌ ಭಾಗವತ್‌, ರಾಷ್ಟ್ರೀಯ ಕಾರ್ಯದರ್ಶಿ ದತ್ತಾತ್ರೇಯ ಹೊಸಬಾಳೆ ಮೊದಲಾದ ನಾಯಕರು ಈಗಲೂ ತಮ್ಮ ಟ್ಟಿಟರ್‌ ಪ್ರೊಫೈಲ್‌ನಲ್ಲಿ ತ್ರಿವರ್ಣಧ್ವಜದ ಚಿತ್ರವನ್ನು ಹಾಕಿಕೊಂಡಿಲ್ಲ.

‘ಆರ್‌ಎಸ್‌ಎಸ್‌’ನ ಅಧಿಕೃತ ಟ್ವಿಟರ್‌ ಹಾಗೂ ಫೇಸ್‌ಬುಕ್‌ ಖಾತೆಯಲ್ಲಿ ಈವರೆಗೂ ಭಗವಾಧ್ವಜವೇ ಪ್ರೊಫೈಲ್‌ ಚಿತ್ರವಾಗಿದೆ. ಪ್ರಧಾನಿ ನರೇಂದ್ರ ಮೋದಿಯವರು ಮಾಡಿರುವ ಮನವಿಯು ಆರ್‌ಎಸ್‌ಎಸ್‌ಗೆ ಮುಜುಗರ ತಂದಿದಿಯೇ ಎಂಬ ಚರ್ಚೆಗಳು ಶುರುವಾಗಿವೆ.

ಈ ಹಿನ್ನೆಲೆಯಲ್ಲಿ ಪ್ರತಿಕ್ರಿಯೆ ನೀಡಿರುವ ಆರ್‌ಎಸ್‌ಎಸ್‌ ಪ್ರಮುಖ್‌ ಸುನೀಲ್‌, “ಇಂತಹ ವಿಷಯಗಳಲ್ಲಿ ರಾಜಕೀಯ ಮಾಡಬಾರದು” ಎಂದು ಅಭಿಪ್ರಾಯಪಟ್ಟಿದ್ದಾರೆ.

ಸಾಮಾಜಿಕ ಮಾಧ್ಯಮದಲ್ಲಿ ಎದ್ದಿರುವ ಪ್ರಶ್ನೆಗಳ ಬಗ್ಗೆ ಸ್ಪಷ್ಟವಾಗಿ ಉತ್ತರಿಸದ ಅವರು, “ಇದು ಒಂದು ಪ್ರಕ್ರಿಯೆ. ಅದನ್ನು ನಮ್ಮದೇ ರೀತಿಯಲ್ಲಿ ನಿಭಾಯಿಸುತ್ತೇವೆ. ಹೇಗೆ ಆಚರಿಸಬೇಕು ಎಂದು ಯೋಚಿಸುತ್ತಿದ್ದೇವೆ. ಸಂಘವು ಈಗಾಗಲೇ ತನ್ನ ನಿಲುವನ್ನು ಸ್ಪಷ್ಟಪಡಿಸಿದೆ. ಅಮೃತ ಮಹೋತ್ಸವಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರ ಪ್ರಾರಂಭಿಸಿದ ಎಲ್ಲಾ ಕಾರ್ಯಕ್ರಮಗಳನ್ನು ಸಂಘವು ಬೆಂಬಲಿಸಿದೆ” ಎಂದಿದ್ದಾರೆ.

‘ಆಜಾದಿ ಕಾ ಅಮೃತ್ ಮಹೋತ್ಸವ’ವನ್ನು ಉತ್ಸಾಹದಿಂದ ಆಚರಿಸಲು ಜನರು ಮತ್ತು ಸ್ವಯಂಸೇವಕರನ್ನು ಆರ್‌ಎಸ್‌ಎಸ್ ಕೇಳಿಕೊಂಡಿದೆ. ಸಿದ್ಧತೆಗಳು ನಡೆಯುತ್ತಿವೆ ಎಂದಿದ್ದಾರೆ.

ಇದನ್ನೂ ಓದಿರಿ: ಬೊಮ್ಮಾಯಿ ಆಡಳಿತದ ಒಂದು ವರ್ಷದಲ್ಲಿ ರಾಜ್ಯ ಕಂಡ ಕೋಮುದ್ವೇಷ ಪ್ರಕರಣಗಳಿವು

“ಇದು ಸಂಘದ ನಿಲುವು. ಇದನ್ನು ರಾಜಕೀಯ ವಿಷಯ ಮಾಡುವುದು ತಪ್ಪು. ಈ ರೀತಿಯ ತೀಕ್ಷ್ಣವಾದ ಪ್ರಶ್ನೆಗಳು ಇರಬಾರದು. ಇಂತಹ ಪ್ರಶ್ನೆಗಳನ್ನು ಎತ್ತುತ್ತಿರುವ ಪಕ್ಷವೇ ದೇಶ ವಿಭಜನೆಗೆ ಕಾರಣವಾಗಿತ್ತು” ಎಂದು ಕಾಂಗ್ರೆಸ್‌ ಮೇಲೆ ಆರೋಪ ಹೊರಿಸಿದ್ದಾರೆ.

ಪಿಎಂ ಮೋದಿ ಮತ್ತು ಹಲವಾರು ಬಿಜೆಪಿ ನಾಯಕರು ಸಾಮಾಜಿಕ ಮಾಧ್ಯಮದಲ್ಲಿ ತ್ರಿವರ್ಣ ಧ್ವಜವನ್ನು ತಮ್ಮ ಪ್ರೊಫೈಲ್ ಚಿತ್ರವನ್ನಾಗಿ ಅಪ್‌ಲೋಡ್ ಮಾಡಿದ್ದಾರೆ. ಕಾಂಗ್ರೆಸ್ ನಾಯಕರು ಇದಕ್ಕೆ ವಿಭಿನ್ನ ರೀತಿಯಲ್ಲಿ ಪ್ರತಿಕ್ರಿಯೆ ನೀಡಿದ್ದು, ಭಾರತದ ಮೊದಲ ಪ್ರಧಾನಿ ಜವಹರಲಾಲ್‌ ನೆಹರೂ ಅವರು ತ್ರಿವರ್ಣಧ್ವಜವನ್ನು ಹಿಡಿದಿರುವ ಫೋಟೋವನ್ನು ಪ್ರೊಫೈಲ್‌ ಚಿತ್ರವಾಗಿ ಅಪ್‌ಲೋಡ್ ಮಾಡಿದ್ದಾರೆ. ಆ ಮೂಲಕ ತ್ರಿವರ್ಣಧ್ವಜವನ್ನು ಅಂದಿನ ಕಾಂಗ್ರೆಸ್ ಸರ್ಕಾರ ಅಂಗೀಕರಿಸಿತು ಎಂಬ ಸಂದೇಶವನ್ನು ಕಾಂಗ್ರೆಸ್ ನೀಡಿದೆ.

ದೇಶದ ಸ್ವಾತಂತ್ರ್ಯದ 75ನೇ ವಾರ್ಷಿಕೋತ್ಸವದ ಅಂಗವಾಗಿ ಪ್ರಾರಂಭಿಸಲಾದ “ಹರ್ ಘರ್ ತಿರಂಗ” ಅಭಿಯಾನವು ಈಗ ಆರ್‌ಎಸ್‌ಎಸ್‌ ಅಂಗಳದಲ್ಲಿ ಸದ್ದು ಮಾಡುತ್ತಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಪೊಲೀಸರನ್ನು ನಿಯಂತ್ರಿಸದಿದ್ದರೆ ಜರ್ಮನಿಯ ನಾಜಿಗಳಂತೆ ಆಗಬಹುದು’: ದಲಿತ ವ್ಯಕ್ತಿಯ ಮೇಲಿನ ದೌರ್ಜನ್ಯ ಪ್ರಕರಣದಲ್ಲಿ ಪಾಟ್ನಾ ಹೈಕೋರ್ಟ್ ಕಳವಳ

ದಲಿತ ವ್ಯಕ್ತಿಯೊಬ್ಬರ ಜಾತಿ ತಿಳಿದ ನಂತರ ಅವರ ಮೇಲೆ ಕ್ರೂರವಾಗಿ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಬಿಹಾರದ ಮಾಜಿ ಪೊಲೀಸ್ ಅಧಿಕಾರಿಯ ವಿರುದ್ಧ ತಕ್ಷಣವೇ ಎಫ್‌ಐಆರ್ (FIR) ದಾಖಲಿಸುವಂತೆ ಪಾಟ್ನಾ ಹೈಕೋರ್ಟ್ ನಿರ್ದೇಶಿಸಿದೆ....

“ಎಷ್ಟೊಂದು ದುರಹಂಕಾರ!”: ಜೆ.ಪಿ.ನಡ್ಡಾ ಹೇಳಿಕೆಗೆ ಕಪಿಲ್ ಸಿಬಲ್ ತೀವ್ರ ಆಕ್ಷೇಪ; ಪ್ರತಿಭಟನಾನಿರತ ಸಿಜೆಪಿ ಬೆಂಬಲಿಸಿ ವೀಡಿಯೋ ಸಂದೇಶ

ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಕ್ರಾಂತಿಕಾರಿ ಜಿರಳೆ ಜನತಾ ಪಕ್ಷ (ಸಿಜೆಪಿ) ನಡೆಸುತ್ತಿರುವ ವಿದ್ಯಾರ್ಥಿ ಪ್ರತಿಭಟನೆಯ ವಿಚಾರದಲ್ಲಿ ಕೇಂದ್ರ ಸರ್ಕಾರದ ನಡೆಗೆ ದೇಶಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದೆ. ಈ ನಡುವೆ ಕೇಂದ್ರ ಸಚಿವ ಜೆ.ಪಿ....

ವಿದ್ಯಾರ್ಥಿಗಳ ಮೇಲೆ ಪೊಲೀಸ್ ದೌರ್ಜನ್ಯ: ಮೋದಿ-ಅಮಿತ್ ಶಾ ರಾಜೀನಾಮೆಗೆ ರಾಹುಲ್ ಗಾಂಧಿ ಆಗ್ರಹ

ನೀಟ್‌ ಪ್ರಶ್ನೆ ಪತ್ರಿಕೆ ಸೋರಿಕೆ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿ 'ಸಂಸತ್ ಚಲೋ' ಹಮ್ಮಿಕೊಂಡಿದ್ದ ವಿದ್ಯಾರ್ಥಿಗಳ ಮೇಲೆ ನಡೆದ ಪೊಲೀಸ್ ದೌರ್ಜನ್ಯವನ್ನು ಕಾಂಗ್ರೆಸ್ ನಾಯಕ ರಾಹುಲ್...

ಕೇಂದ್ರ ಸಚಿವ ಜೆ.ಪಿ.ನಡ್ಡಾ ಅವರನ್ನು ಭೇಟಿಯಾದ ಸಿಜೆಪಿ ನಿಯೋಗ; ಮನವಿ ಪತ್ರ ಸಲ್ಲಿಕೆ

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಆಗ್ರಹಿಸಿ ನವದೆಹಲಿಯಲ್ಲಿ ಪ್ರತಿಭಟನೆ ತೀವ್ರಗೊಂಡಿರುವ ಬೆನ್ನಲ್ಲೇ ಇಂದು ಕೇಂದ್ರ ಸಚಿವ ಜೆಪಿ ನಡ್ಡಾ ಅವರನ್ನು ಸಿಜೆಪಿ ಸದಸ್ಯರಾದ ಸೌರವ್ ದಾಸ್ ಮತ್ತು ಅಶುತೋಷ್ ರಂಕಾ...

‘ಸಂಸತ್ ಚಲೋ’: ‘ಸೋನಮ್ ವಾಂಗ್ಚುಕ್ ಪತ್ನಿ ಮೇಲೆ ದೆಹಲಿ ಪೊಲೀಸರಿಂದ ಹಲ್ಲೆ’: ವಿದ್ಯಾರ್ಥಿಗಳ ಮೇಲೂ ಲಾಠಿ ಚಾರ್ಜ್  

ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ಆಯೋಜಿಸಲಾಗಿದ್ದ ‘ಸಂಸದ್ ಚಲೋ’ ಮೆರವಣಿಗೆಯ ವೇಳೆ ಶಿಕ್ಷಣ ತಜ್ಞ ಹಾಗೂ ಲಡಾಖ್ ಹೋರಾಟಗಾರ ಸೋನಮ್ ವಾಂಗ್ಚುಕ್ ಅವರ ಪತ್ನಿ ಗೀತಾಂಜಲಿ ಜೆ. ಆಂಗ್ಮೋ ಸೇರಿದಂತೆ ಹಲವಾರು ಪ್ರತಿಭಟನಾಕಾರರ ಮೇಲೆ...

ಕನಿಷ್ಠ 20 ಸಾವಿರ ‘ಕಾಕ್ರೋಚ್‌’ಗಳಿಂದ ಸಂಸತ್ತಿಗೆ ಮೆರವಣಿಗೆ; ವಿದ್ಯಾರ್ಥಿಗಳ ಮೇಲೆ ಪೊಲೀಸರಿಂದ ಲಾಠಿಚಾರ್ಜ್ – ಅಶ್ರುವಾಯು

ಧರ್ಮೇಂದ್ರ ಪ್ರಧಾನ್ ರಾಜೀನಾಮಗೆ ಒತ್ತಾಯಿಸಿ ಮುಂಗಾರು ಅಧಿವೇಶನದ ಮೊದಲ ದಿನದಂದು ಸಂಸತ್ತಿಗೆ ಮೆರವಣಿಗೆ ನಡೆಸಲು ದೆಹಲಿಯಲ್ಲಿ ಜಮಾಯಿಸಿದ್ದ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ಸಾವಿರಾರು ಬೆಂಬಲಿಗರನ್ನು ಚದುರಿಸಲು ದೆಹಲಿ ಪೊಳಿಸರು ಅಶ್ರುವಾಯು ಶೆಲ್‌ಗಳನ್ನು...

ಸಿಜೆಪಿ ಪ್ರತಿಭಟನೆಗೆ ನಡುಗಿದ ಕೇಂದ್ರ ಸರ್ಕಾರ; ತರಾತುರಿಯಲ್ಲಿ ಸಂಸತ್ತಿನ ಗೇಟ್ ಮುಚ್ಚಿದ ಭದ್ರತಾ ಸಿಬ್ಬಂದಿ

ನೀಟ್‌ ಪರೀಕ್ಷೆಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳನ್ನು ವಿರೋಧಿಸಿ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಒತ್ತಾಯಿಸಿ ಇಂದು ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಹಮ್ಮಿಕೊಂಡಿರುವ ಸಂಸತ್ ಮೆರವಣಿಗೆಗೆ ಕೇಂದ್ರ ಸರ್ಕಾರ...

ಹಕ್ಕುಗಳ ಕಾಯ್ದೆಗೆ 7 ವರ್ಷ: ಕಾಗದದಲ್ಲಷ್ಟೇ ಸಮಾನತೆ, ಉದ್ಯೋಗ ಸಿಗದೆ ಬೀದಿಗೆ ತಳ್ಳಲ್ಪಡುತ್ತಿರುವ ಟ್ರಾನ್ಸ್‌ಜೆಂಡರ್‌ ಸಮುದಾಯ

ಬೆಂಗಳೂರು: ರಾಷ್ಟ್ರೀಯ ಮಟ್ಟದಲ್ಲಿ ‘ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ಕಾಯ್ದೆ-2019’ ಜಾರಿಗೆ ಬಂದು ಏಳು ವರ್ಷಗಳು ಕಳೆದಿದ್ದರೂ, ಸಮುದಾಯದ ಆರ್ಥಿಕ ಸಬಲೀಕರಣ ಇನ್ನೂ ಕನಸಾಗಿಯೇ ಉಳಿದಿದೆ. ಬೆಂಗಳೂರಿನ ಸಾಮಾಜಿಕ ಮತ್ತು ಆರ್ಥಿಕ ಬದಲಾವಣೆ...

ಸಂಸತ್‌ ಚಲೋ: ಕಾಕ್ರೋಚ್ ಜನತಾ ಪಾರ್ಟಿ ಪ್ರತಿಭಟನೆಗೆ ಭಾರೀ ಬೆಂಬಲ

ದೇಶಾದ್ಯಂತ ಭಾರಿ ಸಂಚಲನ ಸೃಷ್ಟಿಸಿರುವ ನೀಟ್‌ (NEET) ಪ್ರಶ್ನೆಪತ್ರಿಕೆ ಸೋರಿಕೆ, ಸಾಲು ಸಾಲು ವಿದ್ಯಾರ್ಥಿಗಳ ಆತ್ಮಹತ್ಯೆ ಹಾಗೂ ದೇಶದ ಪರೀಕ್ಷಾ ವ್ಯವಸ್ಥೆಯ ಸರಣಿ ವೈಫಲ್ಯಗಳನ್ನು ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ (CJP) ಆಯೋಜಿಸಿರುವ...

ಡಿಜಿಟಲೀಕರಣಗೊಂಡ 2002ರ ಮತದಾರರ ಪಟ್ಟಿಯಿಂದ ಬೆಂಗಳೂರಿನ ಮತಗಟ್ಟೆಗಳೇ ಮಾಯ: ಮಾಹಿತಿ ಸಿಗದೆ ಆತಂಕದಲ್ಲಿ ನೂರಾರು ಮತದಾರರು

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನ ಹಲವು ಭಾಗಗಳಲ್ಲಿ 2002ರ ಡಿಜಿಟಲೀಕರಣಗೊಂಡ ಮತದಾರರ ಪಟ್ಟಿಯಿಂದ ಇಡೀ ಮತಗಟ್ಟೆಗಳೇ ಕಾಣೆಯಾಗಿರುವ ಗಂಭೀರ ಪ್ರಕರಣವೊಂದು ಬೆಳಕಿಗೆ ಬಂದಿದೆ. ಇದರಿಂದಾಗಿ ನೂರಾರು ಮತದಾರರು ಆತಂಕ ಮತ್ತು ಗೊಂದಲಕ್ಕೊಳಗಾಗಿದ್ದಾರೆ ಎಂದು...