Homeಮುಖಪುಟಉಡುಪಿ ಪ್ರಕರಣ ರಾಜಕೀಕರಣಗೊಳಿಸಬೇಡಿ, ಪೊಲೀಸರು ಕಾನೂನಿನಂತೆ ನಡೆದುಕೊಂಡಿದ್ದಾರೆ: ಖುಷ್ಬೂ ಸುಂದರ್

ಉಡುಪಿ ಪ್ರಕರಣ ರಾಜಕೀಕರಣಗೊಳಿಸಬೇಡಿ, ಪೊಲೀಸರು ಕಾನೂನಿನಂತೆ ನಡೆದುಕೊಂಡಿದ್ದಾರೆ: ಖುಷ್ಬೂ ಸುಂದರ್

- Advertisement -
- Advertisement -

ಉಡುಪಿ ಪ್ರಕರಣವನ್ನು ರಾಜಕೀಕರಣಗೊಳಿಸಬೇಡಿ, ಪೊಲೀಸರು ಕಾನೂನಿನಂತೆ ನಡೆದುಕೊಂಡಿದ್ದಾರೆ ಎಂದು ರಾಷ್ಟ್ರೀಯ ಮಹಿಳಾ ಆಯೋಗದ ಸದಸ್ಯೆ ಖುಷ್ಬೂ ಸುಂದರ್ ತಿಳಿಸಿದ್ದಾರೆ.

ಇಂದು ಉಡುಪಿಗೆ ಭೇಟಿ ನೀಡಿ ಕಾಲೇಜು ಆಡಳಿತ ಮಂಡಳಿ ಮತ್ತು ಪೊಲೀಸರ ಜೊತೆ ಮಾತುಕತೆ ನಡೆಸಿದ ಬಳಿಕೆ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಅವರು, “ಇದು ಒಂದು ಸೂಕ್ಷ್ಮ ವಿಚಾರವಾಗಿದ್ದು, ಇದನ್ನು ಯಾರು ರಾಜಕೀಕರಣಗೊಳಿಸಬಾರದು. ಪೊಲೀಸರಿಂದ ಮಾಹಿತಿ ಪಡೆದಿದ್ದೇನೆ. ತನಿಖೆ ಇನ್ನು ಮುಗಿದಿಲ್ಲ. ಇದು ತುಂಬಾ ಸಮಯ ತೆಗೆದುಕೊಳ್ಳುತ್ತದೆ. ಒಂದು ದಿನದಲ್ಲಿ ನಿರ್ಧಾರ ಮಾಡಲು ಆಗಲ್ಲ. ಪೊಲೀಸರು ಕಾನೂನಿನಂತೆ ನಡೆದುಕೊಂಡಿದ್ದಾರೆ” ಎಂದು ಹೇಳಿದರು.

ಯಾರು ವದಂತಿಗಳನ್ನು ಹರಡಬಾರದು. ಯುವತಿಯರ ರಕ್ಷಣೆ ನಮಗೆ ಮುಖ್ಯ. ಯುವತಿಯರು ನಮ್ಮ ಕುಟುಂಬದವರು. ಅವರ ಸಮಸ್ಯೆಗಳನ್ನು ಬಗೆಹರಿಸಬೇಕಾಗಿರುವುದು ಮುಖ್ಯ. ನಾನು ಧಾರ್ಮಿಕ ಅಥವಾ ರಾಜಕೀಯ ಮಾಡಲು ಇಲ್ಲಿ ಬಂದಿಲ್ಲ, ಒಬ್ಬ ಪೋಷಕರಾಗಿ ಇದನ್ನು ಬಗೆಹರಿಸಬೇಕು. ರಾಜಕಾರಣಿಗಳು ರಾಜಕೀಯ ಪಕ್ಷಗಳು ಇದನ್ನು ರಾಜಕೀಯವಾಗಿ ಬಳಸಿಕೊಳ್ಳಬಾರದು ಎಂದರು.

ಎಫ್ಐಆರ್ ವಿಳಂಬ ವಿಚಾರಕ್ಕೆ ಪ್ರತಿಕ್ರಿಯಿಸಿದ ಅವರು ಕಾಲೇಜು ಆಡಳಿತ ಮಂಡಳಿ ನಿನ್ನೆ ಈ ಬಗ್ಗೆ ಪತ್ರಿಕಾಗೋಷ್ಠಿ ಮಾಡಿದೆ. ಯಾವುದೇ ದೂರು ಬಾರದ ಕಾರಣ ಪೊಲೀಸರು ದೂರು ದಾಖಲಿಸಿಲ್ಲ ಅಲ್ಲದೆ ತಾನು ದೂರ ನೀಡಲು ಬಯಸುವುದಿಲ್ಲ ಎಂದು ಸಂತ್ರಸ್ತೆ ಪತ್ರದ ಮೂಲಕ ಹೇಳಿದ್ದಾರೆ. ಕಾಲೇಜು ಆಡಳಿತ ಮಂಡಳಿ ಪತ್ರಿಕಾಗೋಷ್ಠಿಯ ನಂತರ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. ʼವಿಡಿಯೋ ಡಿಲೀಟ್ ಆಗಿದೆ ಎಂಬ ವಿಚಾರ ಬೆಳಕಿಗೆ ಬಂದ ನಂತರ ಪ್ರಕರಣ ದಾಖಲಿಸಲಾಗಿದೆ. ಯಾವುದೇ ಸುಳಿವು ಇಲ್ಲದೆ, ವಿಡಿಯೋ ಇಲ್ಲದೆ ಪೊಲೀಸರು ಪ್ರಕರಣ ದಾಖಲಿಸುವುದು ಹೇಗೆ? ಹಿಂದೆ ನಿಂತು ಪೊಲೀಸರನ್ನು ದೂರುವುದು ಸುಲಭ. ಪೊಲೀಸರು ತನಿಖೆ ಆರಂಭಿಸಿದ್ದಾರೆ ಅವರಿಗೆ ಸ್ವಾತಂತ್ರ್ಯ ನೀಡಬೇಕು. ಪ್ರಕರಣದ ತನಿಖೆಯಲ್ಲಿ ವಿಳಂಬವಾದರೆ ಮಹಿಳಾ ಆಯೋಗ ಕ್ರಮ ಕೈಗೊಳ್ಳುತ್ತದೆ. ಸದ್ಯ ನಾವು ಸುಮೋಟೋ ಪ್ರಕರಣ ದಾಖಲಿಸಲು ನಿರ್ಧರಿಸಿಲ್ಲ. ಮಾಹಿತಿ ಸಂಗ್ರಹದ ಬಳಿಕ ನಿರ್ಧಾರ ತಿಳಿಸುತ್ತೇವೆʼ ಎಂದು ಅವರು ತಿಳಿಸಿದರು.

ಸದ್ಯ ಸಾಮಾಜಿಕ ಜಾಲತಾಣ ತಾಂತ್ರಿಕತೆಯಿಂದ ಪ್ರತಿಯೊಬ್ಬರು ತನಿಖಾಧಿಕಾರಿ ನ್ಯಾಯಾಧೀಶರಾಗಲು ಮುಂದಾಗಿದ್ದಾರೆ. ಇದನ್ನು ಯಾರು ಮಾಡಬೇಡಿ. ವದಂತಿಗಳನ್ನು ಯಾರು ಹರಡಬೇಡಿ. ಕಾನೂನಿಗೆ ಅದರ ಕೆಲಸ ಮಾಡಲು ಬಿಡಿ ಎಂದು ಖುಷ್ಬೂ ಸುಂದರ್ ತಿಳಿಸಿದರು.

ಇನ್ನು ಬಿಜೆಪಿ ಪಕ್ಷ ಉಡುಪಿ ಪ್ರಕರಣ ಖಂಡಿಸಿ ಇಂದು ರಾಜ್ಯದ ಹಲವೆಡೆ ಪ್ರತಿಭಟನೆಗಳನ್ನು ಹಮ್ಮಿಕೊಂಡಿದೆ. ಎಬಿವಿಪಿ ಕೂಡ ಬೀದಿಗಿಳಿದಿದೆ.

ಈ ಕುರಿತು ಪ್ರತಿಕ್ರಿಯಸಿರುವ ಕಾಂಗ್ರೆಸ್, “ಇರುವೆಯನ್ನು ಆನೆ ಎಂದು ನಂಬಿಸಲು ಹೊರಟಿದ್ದ ಬಿಜೆಪಿ
ಹಾಗೂ ಬಿಜೆಪಿಯ ಟೂಲ್ ಕಿಟ್ ಗ್ಯಾಂಗಿನ ಕನಸಿಗೆ ಮತ್ತೊಮ್ಮೆ ತಣ್ಣೀರು ಎರಚಿದ್ದಾರೆ ರಾಷ್ಟ್ರೀಯ ಮಹಿಳಾ ಆಯೋಗದ ಸದಸ್ಯೆ ಹಾಗೂ ಬಿಜೆಪಿ ನಾಯಕಿ ಖುಷ್ಬು. ಉಡುಪಿ ಕಾಲೇಜಿನ ಘಟನೆಯು ಷಡ್ಯಂತ್ರವಲ್ಲ, ವಿದ್ಯಾರ್ಥಿನೀಯರ ಮೊಬೈಲ್ ಗಳಲ್ಲಿ ಯಾವುದೇ ವಿಡಿಯೋಗಳು ಪತ್ತೆಯಾಗಿಲ್ಲ, ಸಾಮಾಜಿಕ ಜಾಲತಾಣದಲ್ಲಿ ನಕಲಿ ವಿಡಿಯೋ ಹರಿಬಿಡಲಾಗಿದೆ, ಪೊಲೀಸರು ಸಮರ್ಪಕ ತನಿಖೆ ನಡೆಸಿದ್ದಾರೆ, ಸುಳ್ಳು ಸುದ್ದಿ ಹಬ್ಬಿಸುವುದನ್ನು ಬಿಡಬೇಕು. ಇದನ್ನು ಕೇವಲ ಹುಡುಗಾಟಿಕೆಯ ಘಟನೆಯಾಗಿಯಷ್ಟೇ ನೋಡಬೇಕು ಹೊರತು ರಾಜಕೀಯಕ್ಕೆ ಬಳಸಬಾರದು ಎಂಬ ಸ್ವತಃ ಬಿಜೆಪಿ ನಾಯಕಿಯ ಸಂದೇಶವನ್ನು ಬಿಜೆಪಿಗರು ಅರಗಿಸಿಕೊಳ್ಳಲು ಸಾಧ್ಯವೇ! ಸರ್ಕಾರವನ್ನು ವಿರೋಧಿಸಲು ವಿಷಯಗಳಿಲ್ಲದೆ ಕಂಗಲಾಗಿರುವ ಬಿಜೆಪಿ ಈಗ ಬಾತ್ ರೂಮಿನ ರಾಜಕೀಯಕ್ಕೆ ಹೊರಟಿದೆ!” ಎಂದು ಕಿಡಿಕಾರಿದೆ.

ಇದನ್ನೂ ಓದಿ: ತಿ.ನರಸೀಪುರ ವೇಣುಗೋಪಾಲ್ ಕೊಲೆಗೆ ಸಂಘ ಪರಿವಾರ ಕೋಮು ತಿರುವು ನೀಡಲೆತ್ನಿಸಿ ವಿಫಲವಾದದ್ದು..

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ: ಆರು ಜನ ಹಿರಿಯರು ಸೇರಿದಂತೆ 41 ಜನ ನಕ್ಸಲ್ ಕಾರ್ಯಕರ್ತರು ಪೊಲೀಸರಿಗೆ ಶರಣು

ದೇಶದಲ್ಲಿ ಮಾವೋವಾದಿ ವಿರೋಧಿ ಕಾರ್ಯಾಚರಣೆಗಳಲ್ಲಿ ಪ್ರಮುಖ ಬೆಳವಣಿಗೆಯಲ್ಲಿ, ಆರು ಜನ ಹಿರಿಯರು ಸೇರಿದಂತೆ 41 ಜನ ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾವೋವಾದಿ) ಕಾರ್ಯಕರ್ತರು ತೆಲಂಗಾಣ ಪೊಲೀಸರ ಮುಂದೆ ಇಂದು ಶರಣಾಗಿದ್ದಾರೆ. ಶರಣಾಗತಿ ಪ್ರಕ್ರಿಯೆಯ...

‘ವೀಸಾ ಅವಧಿ ಮುಗಿಯುವ ಮೊದಲು ಪಾಕ್ ಮಹಿಳೆಯ ಪೌರತ್ವ ಅರ್ಜಿ ಪರಿಗಣಿಸಿ..’; ಕೇಂದ್ರ ಸರ್ಕಾರಕ್ಕೆ ಕರ್ನಾಟಕ ಹೈಕೋರ್ಟ್‌ ಸೂಚನೆ

ಭಾರತದಲ್ಲಿ ವಾಸಿಸುತ್ತಿರುವ ಪಾಕಿಸ್ತಾನಿ ಪ್ರಜೆಯ ಹೊಸ ಪೌರತ್ವ ಅರ್ಜಿಯನ್ನು ಸಕ್ರಿಯವಾಗಿ ಪರಿಗಣಿಸುವ ಜೊತೆಗೆ ಅವರ ದೀರ್ಘಾವಧಿಯ ವೀಸಾ ಅವಧಿ ಮುಗಿಯುವ ಮೊದಲೇ ಪ್ರಕ್ರಿಯೆಯನ್ನು ಪೂರ್ಣಗೊಳಿಸಬೇಕು ಎಂದು, ವಿದೇಶಾಂಗ ಸಚಿವಾಲಯ, ಗೃಹ ಸಚಿವಾಲಯ ಮತ್ತು...

ಎಚ್‌ಐವಿ ಪಾಸಿಟಿವ್ ಎಂದು ವಜಾಗೊಳಿಸಲಾದ ಬಿಎಸ್‌ಎಫ್ ಯೋಧನನ್ನು ಮತ್ತೆ ನೇಮಿಸುವಂತೆ ಹೈಕೋರ್ಟ್ ಆದೇಶ

ಜುಲೈ 2017 ರಲ್ಲಿ ಎಚ್‌ಐವಿ ಪಾಸಿಟಿವ್ ಎಂಬ ಕಾರಣಕ್ಕೆ ಸೇವೆಯಿಂದ ವಜಾಗೊಳಿಸಲಾದ ಗಡಿ ಭದ್ರತಾ ಪಡೆಯ ಕಾನ್‌ಸ್ಟೆಬಲ್‌ ಒಬ್ಬರನ್ನು ಮರುನೇಮಕ ಮಾಡುವಂತೆ ದೆಹಲಿ ಹೈಕೋರ್ಟ್ ಆದೇಶಿಸಿದೆ.  ನ್ಯಾಯಮೂರ್ತಿಗಳಾದ ಸಿ ಹರಿಶಂಕರ್ ಮತ್ತು ಓಂ ಪ್ರಕಾಶ್...

ವೈದ್ಯೆ ಬುರ್ಖಾ ಎಳೆದ ನಿತೀಶ್‌ಕುಮಾರ್: ಶ್ರೀನಗರದಲ್ಲಿ ದೂರು ದಾಖಲಿಸಿದ ಇಲ್ತಿಜಾ ಮುಫ್ತಿ

ಪಾಟ್ನಾದಲ್ಲಿ ನಡೆದ ಸರ್ಕಾರಿ ಕಾರ್ಯಕ್ರಮದ ಸಂದರ್ಭದಲ್ಲಿ ಮುಸ್ಲಿಂ ಮಹಿಳಾ ವೈದ್ಯರ ನಿಖಾಬ್ (ಬುರ್ಖಾ) ಎಳೆಯುತ್ತಿರುವುದನ್ನು ತೋರಿಸುವ ವೈರಲ್ ವೀಡಿಯೊದ ಕುರಿತು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ವಿರುದ್ಧ ಎಫ್ಐಆರ್ ದಾಖಲಿಸಲು ಪೀಪಲ್ಸ್ ಡೆಮಾಕ್ರಟಿಕ್...

ಪ್ರಶ್ನೆಗಾಗಿ ಕಾಸು ಪ್ರಕರಣ: ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್‌ ಸಲ್ಲಿಸಲು ಅನುಮತಿಸಿದ್ದ ಲೋಕಪಾಲ್ ಆದೇಶ ರದ್ದು ಪಡಿಸಿದ ದೆಹಲಿ ಹೈಕೋರ್ಟ್

‘ಪ್ರಶ್ನೆಗಾಗಿ ಕಾಸು’ ಪ್ರಕರಣದಲ್ಲಿ ತೃಣಮೂಲ ಕಾಂಗ್ರೆಸ್(ಟಿಎಂಸಿ) ಸಂಸದೆ ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್ ಸಲ್ಲಿಸಲು ಸಿಬಿಐಗೆ ಅನುಮತಿ ನೀಡಿದ್ದ ಲೋಕಪಾಲ್ ಆದೇಶವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ರದ್ದುಗೊಳಿಸಿದೆ. ಇದರಿಂದಾಗಿ ಮೊಯಿತ್ರಾ ಅವರಿಗೆ ಈ...

ಜಮ್ಮು-ಕಾಶ್ಮೀರ: ಪತ್ರಕರ್ತನ ಮೊಬೈಲ್ ಫೋನ್ ವಶಪಡಿಸಿಕೊಂಡ ಪೊಲೀಸರು

ಕಿಶ್ತ್ವಾರ್‌ನಲ್ಲಿನ ವಿದ್ಯುತ್ ಯೋಜನೆಯಲ್ಲಿ ಸ್ವಜನಪಕ್ಷಪಾತ ಮತ್ತು ಭ್ರಷ್ಟಾಚಾರದ ಆರೋಪಗಳ ಕುರಿತು ವರದಿ ಮಾಡುತ್ತಿದ್ದಾಗ, ದಿ ವೈರ್ ಸುದ್ದಿ ಪೋರ್ಟಲ್‌ನ ಪತ್ರಕರ್ತ ಜೆಹಾಂಗೀರ್ ಅಲಿ ಅವರ ಮೊಬೈಲ್ ಫೋನ್ ಅನ್ನು ಬುಧವಾರ (ಡಿಸೆಂಬರ್ 17)...

ಕೇರಳದಲ್ಲಿ ಗುಂಪುಹತ್ಯೆ: ಛತ್ತೀಸ್‌ಗಢ ವಲಸೆ ಕಾರ್ಮಿಕನನ್ನು ‘ಕಳ್ಳ’ ಎಂದು ಥಳಿಸಿ ಕೊಂದ ಗುಂಪು 

ಕೇರಳದ ಪಾಲಕ್ಕಾಡ್ ಜಿಲ್ಲೆಯಲ್ಲಿ ಗುರುವಾರ ಛತ್ತೀಸ್‌ಗಢದಿಂದ ಬಂದ ವಲಸೆ ಕಾರ್ಮಿಕನೊಬ್ಬನನ್ನು ಕಳ್ಳನೆಂದು ಶಂಕಿಸಿ ಗುಂಪೊಂದು ಥಳಿಸಿ ಕೊಂದಿದೆ. ಕೊಲೆಯಾದ ವ್ಯಕ್ತಿಯನ್ನು ರಾಮನಾರಾಯಣ್ ಭಯಾರ್ (31) ಎಂದು ಗುರುತಿಸಲಾಗಿದ್ದು, ಕಳೆದ ಒಂದು ತಿಂಗಳಿನಿಂದ ಪಾಲಕ್ಕಾಡ್‌ನ ಕಾಂಜಿಕೋಡ್‌ನಲ್ಲಿರುವ...

ನೋಯ್ಡಾ ಪೊಲೀಸ್ ಠಾಣೆಯೊಳಗೆ ವಕೀಲೆ ಮೇಲೆ ಲೈಂಗಿಕ ದೌರ್ಜನ್ಯ ಆರೋಪ; ಸಿಸಿಟಿವಿ ದೃಶ್ಯಾವಳಿ ಕೇಳಿದ ಸುಪ್ರೀಂ ಕೋರ್ಟ್

ಮಹಿಳಾ ವಕೀಲೆಯೊಬ್ಬರನ್ನು 14 ಗಂಟೆಗಳ ಕಾಲ ಅಕ್ರಮವಾಗಿ ಬಂಧಿಸಿ ಪೊಲೀಸರು ಲೈಂಗಿಕ ದೌರ್ಜನ್ಯ esgi, ಕಸ್ಟಡಿಯಲ್ಲಿ ಚಿತ್ರಹಿಂಸೆ ನೀಡಿದ ಆರೋಪದ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಸುಪ್ರೀಂ ಕೋಡರ್ಟ್, ಮುಚ್ಚಿದ ಕವರ್‌ನಲ್ಲಿ ಸಿಸಿಟಿವಿ ದೃಶ್ಯಾವಳಿಗಳನ್ನು...

ಹಾಲು ಉತ್ಪಾದಕರಿಗೆ 1 ಲೀಟರ್ ಹಾಲಿನ ಪ್ರೋತ್ಸಾಹಧನ 5 ರಿಂದ 7 ರೂಗೆ ಏರಿಕೆ: ಅಧಿವೇಶನದಲ್ಲಿ ಸಿದ್ದರಾಮಯ್ಯ ಘೋಷಣೆ

ರೈತರ ಹಿತದೃಷ್ಠಿಯಿಂದ 1 ಲೀಟರ್ ಹಾಲಿಗೆ ಪ್ರೋತ್ಸಾಹಧನವನ್ನು 7 ರೂಪಾಯಿಗೆ ಏರಿಕೆ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ಡಿಸೆಂಬರ್ 19ರಂದು ಬೆಳಗಾವಿ ಅಧಿವೇಶನದ ಕೊನೆಯ ದಿನ ಮಾತನಾಡಿದ ಅವರು, ರೈತರಿಗೆ ಹಸುಗಳನ್ನು ಸಾಕಿ...

ಬಾಂಗ್ಲಾ ದಂಗೆ: ಮಾಧ್ಯಮ ಸಂಸ್ಥೆಗಳಿಗೆ ಬೆಂಕಿ ಹಚ್ಚಿದ ಪ್ರತಿಭಟನಾಕಾರರು, ಉರಿಯುತ್ತಿದ್ದ ಕಚೇರಿಗಳಿಂದ 25 ಕ್ಕೂ ಹೆಚ್ಚು ಪತ್ರಕರ್ತರ ರಕ್ಷಣೆ

ಜುಲೈ ದಂಗೆಯ ನಾಯಕ ಷರೀಫ್ ಉಸ್ಮಾನ್ ಹಾದಿ ಅವರ ನಿಧನದ ಸುದ್ದಿ ಕೇಳಿದ ಬೆನ್ನಲ್ಲೇ ಶುಕ್ರವಾರ ಬಾಂಗ್ಲಾದೇಶದ ವಿವಿಧ ಭಾಗಗಳಲ್ಲಿ ತೀವ್ರ ಪ್ರತಿಭಟನೆಗಳು ಆರಂಭವಾಗಿದ್ದು ಹಿಂಸಾಚಾರಕ್ಕೆ ನಾಂದಿ ಹಾಡಿವೆ. ಅನೇಕ ಪ್ರತಿಭಟನಾಕಾರರು ಬೀದಿಗಿಳಿದಿದ್ದು,...