Homeಮುಖಪುಟಉಡುಪಿ ಪ್ರಕರಣ ರಾಜಕೀಕರಣಗೊಳಿಸಬೇಡಿ, ಪೊಲೀಸರು ಕಾನೂನಿನಂತೆ ನಡೆದುಕೊಂಡಿದ್ದಾರೆ: ಖುಷ್ಬೂ ಸುಂದರ್

ಉಡುಪಿ ಪ್ರಕರಣ ರಾಜಕೀಕರಣಗೊಳಿಸಬೇಡಿ, ಪೊಲೀಸರು ಕಾನೂನಿನಂತೆ ನಡೆದುಕೊಂಡಿದ್ದಾರೆ: ಖುಷ್ಬೂ ಸುಂದರ್

- Advertisement -
- Advertisement -

ಉಡುಪಿ ಪ್ರಕರಣವನ್ನು ರಾಜಕೀಕರಣಗೊಳಿಸಬೇಡಿ, ಪೊಲೀಸರು ಕಾನೂನಿನಂತೆ ನಡೆದುಕೊಂಡಿದ್ದಾರೆ ಎಂದು ರಾಷ್ಟ್ರೀಯ ಮಹಿಳಾ ಆಯೋಗದ ಸದಸ್ಯೆ ಖುಷ್ಬೂ ಸುಂದರ್ ತಿಳಿಸಿದ್ದಾರೆ.

ಇಂದು ಉಡುಪಿಗೆ ಭೇಟಿ ನೀಡಿ ಕಾಲೇಜು ಆಡಳಿತ ಮಂಡಳಿ ಮತ್ತು ಪೊಲೀಸರ ಜೊತೆ ಮಾತುಕತೆ ನಡೆಸಿದ ಬಳಿಕೆ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಅವರು, “ಇದು ಒಂದು ಸೂಕ್ಷ್ಮ ವಿಚಾರವಾಗಿದ್ದು, ಇದನ್ನು ಯಾರು ರಾಜಕೀಕರಣಗೊಳಿಸಬಾರದು. ಪೊಲೀಸರಿಂದ ಮಾಹಿತಿ ಪಡೆದಿದ್ದೇನೆ. ತನಿಖೆ ಇನ್ನು ಮುಗಿದಿಲ್ಲ. ಇದು ತುಂಬಾ ಸಮಯ ತೆಗೆದುಕೊಳ್ಳುತ್ತದೆ. ಒಂದು ದಿನದಲ್ಲಿ ನಿರ್ಧಾರ ಮಾಡಲು ಆಗಲ್ಲ. ಪೊಲೀಸರು ಕಾನೂನಿನಂತೆ ನಡೆದುಕೊಂಡಿದ್ದಾರೆ” ಎಂದು ಹೇಳಿದರು.

ಯಾರು ವದಂತಿಗಳನ್ನು ಹರಡಬಾರದು. ಯುವತಿಯರ ರಕ್ಷಣೆ ನಮಗೆ ಮುಖ್ಯ. ಯುವತಿಯರು ನಮ್ಮ ಕುಟುಂಬದವರು. ಅವರ ಸಮಸ್ಯೆಗಳನ್ನು ಬಗೆಹರಿಸಬೇಕಾಗಿರುವುದು ಮುಖ್ಯ. ನಾನು ಧಾರ್ಮಿಕ ಅಥವಾ ರಾಜಕೀಯ ಮಾಡಲು ಇಲ್ಲಿ ಬಂದಿಲ್ಲ, ಒಬ್ಬ ಪೋಷಕರಾಗಿ ಇದನ್ನು ಬಗೆಹರಿಸಬೇಕು. ರಾಜಕಾರಣಿಗಳು ರಾಜಕೀಯ ಪಕ್ಷಗಳು ಇದನ್ನು ರಾಜಕೀಯವಾಗಿ ಬಳಸಿಕೊಳ್ಳಬಾರದು ಎಂದರು.

ಎಫ್ಐಆರ್ ವಿಳಂಬ ವಿಚಾರಕ್ಕೆ ಪ್ರತಿಕ್ರಿಯಿಸಿದ ಅವರು ಕಾಲೇಜು ಆಡಳಿತ ಮಂಡಳಿ ನಿನ್ನೆ ಈ ಬಗ್ಗೆ ಪತ್ರಿಕಾಗೋಷ್ಠಿ ಮಾಡಿದೆ. ಯಾವುದೇ ದೂರು ಬಾರದ ಕಾರಣ ಪೊಲೀಸರು ದೂರು ದಾಖಲಿಸಿಲ್ಲ ಅಲ್ಲದೆ ತಾನು ದೂರ ನೀಡಲು ಬಯಸುವುದಿಲ್ಲ ಎಂದು ಸಂತ್ರಸ್ತೆ ಪತ್ರದ ಮೂಲಕ ಹೇಳಿದ್ದಾರೆ. ಕಾಲೇಜು ಆಡಳಿತ ಮಂಡಳಿ ಪತ್ರಿಕಾಗೋಷ್ಠಿಯ ನಂತರ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. ʼವಿಡಿಯೋ ಡಿಲೀಟ್ ಆಗಿದೆ ಎಂಬ ವಿಚಾರ ಬೆಳಕಿಗೆ ಬಂದ ನಂತರ ಪ್ರಕರಣ ದಾಖಲಿಸಲಾಗಿದೆ. ಯಾವುದೇ ಸುಳಿವು ಇಲ್ಲದೆ, ವಿಡಿಯೋ ಇಲ್ಲದೆ ಪೊಲೀಸರು ಪ್ರಕರಣ ದಾಖಲಿಸುವುದು ಹೇಗೆ? ಹಿಂದೆ ನಿಂತು ಪೊಲೀಸರನ್ನು ದೂರುವುದು ಸುಲಭ. ಪೊಲೀಸರು ತನಿಖೆ ಆರಂಭಿಸಿದ್ದಾರೆ ಅವರಿಗೆ ಸ್ವಾತಂತ್ರ್ಯ ನೀಡಬೇಕು. ಪ್ರಕರಣದ ತನಿಖೆಯಲ್ಲಿ ವಿಳಂಬವಾದರೆ ಮಹಿಳಾ ಆಯೋಗ ಕ್ರಮ ಕೈಗೊಳ್ಳುತ್ತದೆ. ಸದ್ಯ ನಾವು ಸುಮೋಟೋ ಪ್ರಕರಣ ದಾಖಲಿಸಲು ನಿರ್ಧರಿಸಿಲ್ಲ. ಮಾಹಿತಿ ಸಂಗ್ರಹದ ಬಳಿಕ ನಿರ್ಧಾರ ತಿಳಿಸುತ್ತೇವೆʼ ಎಂದು ಅವರು ತಿಳಿಸಿದರು.

ಸದ್ಯ ಸಾಮಾಜಿಕ ಜಾಲತಾಣ ತಾಂತ್ರಿಕತೆಯಿಂದ ಪ್ರತಿಯೊಬ್ಬರು ತನಿಖಾಧಿಕಾರಿ ನ್ಯಾಯಾಧೀಶರಾಗಲು ಮುಂದಾಗಿದ್ದಾರೆ. ಇದನ್ನು ಯಾರು ಮಾಡಬೇಡಿ. ವದಂತಿಗಳನ್ನು ಯಾರು ಹರಡಬೇಡಿ. ಕಾನೂನಿಗೆ ಅದರ ಕೆಲಸ ಮಾಡಲು ಬಿಡಿ ಎಂದು ಖುಷ್ಬೂ ಸುಂದರ್ ತಿಳಿಸಿದರು.

ಇನ್ನು ಬಿಜೆಪಿ ಪಕ್ಷ ಉಡುಪಿ ಪ್ರಕರಣ ಖಂಡಿಸಿ ಇಂದು ರಾಜ್ಯದ ಹಲವೆಡೆ ಪ್ರತಿಭಟನೆಗಳನ್ನು ಹಮ್ಮಿಕೊಂಡಿದೆ. ಎಬಿವಿಪಿ ಕೂಡ ಬೀದಿಗಿಳಿದಿದೆ.

ಈ ಕುರಿತು ಪ್ರತಿಕ್ರಿಯಸಿರುವ ಕಾಂಗ್ರೆಸ್, “ಇರುವೆಯನ್ನು ಆನೆ ಎಂದು ನಂಬಿಸಲು ಹೊರಟಿದ್ದ ಬಿಜೆಪಿ
ಹಾಗೂ ಬಿಜೆಪಿಯ ಟೂಲ್ ಕಿಟ್ ಗ್ಯಾಂಗಿನ ಕನಸಿಗೆ ಮತ್ತೊಮ್ಮೆ ತಣ್ಣೀರು ಎರಚಿದ್ದಾರೆ ರಾಷ್ಟ್ರೀಯ ಮಹಿಳಾ ಆಯೋಗದ ಸದಸ್ಯೆ ಹಾಗೂ ಬಿಜೆಪಿ ನಾಯಕಿ ಖುಷ್ಬು. ಉಡುಪಿ ಕಾಲೇಜಿನ ಘಟನೆಯು ಷಡ್ಯಂತ್ರವಲ್ಲ, ವಿದ್ಯಾರ್ಥಿನೀಯರ ಮೊಬೈಲ್ ಗಳಲ್ಲಿ ಯಾವುದೇ ವಿಡಿಯೋಗಳು ಪತ್ತೆಯಾಗಿಲ್ಲ, ಸಾಮಾಜಿಕ ಜಾಲತಾಣದಲ್ಲಿ ನಕಲಿ ವಿಡಿಯೋ ಹರಿಬಿಡಲಾಗಿದೆ, ಪೊಲೀಸರು ಸಮರ್ಪಕ ತನಿಖೆ ನಡೆಸಿದ್ದಾರೆ, ಸುಳ್ಳು ಸುದ್ದಿ ಹಬ್ಬಿಸುವುದನ್ನು ಬಿಡಬೇಕು. ಇದನ್ನು ಕೇವಲ ಹುಡುಗಾಟಿಕೆಯ ಘಟನೆಯಾಗಿಯಷ್ಟೇ ನೋಡಬೇಕು ಹೊರತು ರಾಜಕೀಯಕ್ಕೆ ಬಳಸಬಾರದು ಎಂಬ ಸ್ವತಃ ಬಿಜೆಪಿ ನಾಯಕಿಯ ಸಂದೇಶವನ್ನು ಬಿಜೆಪಿಗರು ಅರಗಿಸಿಕೊಳ್ಳಲು ಸಾಧ್ಯವೇ! ಸರ್ಕಾರವನ್ನು ವಿರೋಧಿಸಲು ವಿಷಯಗಳಿಲ್ಲದೆ ಕಂಗಲಾಗಿರುವ ಬಿಜೆಪಿ ಈಗ ಬಾತ್ ರೂಮಿನ ರಾಜಕೀಯಕ್ಕೆ ಹೊರಟಿದೆ!” ಎಂದು ಕಿಡಿಕಾರಿದೆ.

ಇದನ್ನೂ ಓದಿ: ತಿ.ನರಸೀಪುರ ವೇಣುಗೋಪಾಲ್ ಕೊಲೆಗೆ ಸಂಘ ಪರಿವಾರ ಕೋಮು ತಿರುವು ನೀಡಲೆತ್ನಿಸಿ ವಿಫಲವಾದದ್ದು..

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಆಪರೇಷನ್ ಡೆಮಾಲಿಶ್‌ಮೆಂಟ್ ಅಡಿಯಲ್ಲಿ 200ಕ್ಕೂ ಹೆಚ್ಚು ನಕ್ಸಲ್ ಸ್ಮಾರಕಗಳನ್ನು ನೆಲಸಮಗೊಳಿಸಿದ ಭದ್ರತಾ ಪಡೆಗಳು 

ನವದೆಹಲಿ: ನಕ್ಸಲ್ ಚಟುವಟಿಕೆಗಳ ವಿರುದ್ಧ ತೀವ್ರಗೊಂಡ ಕಾರ್ಯಾಚರಣೆ ನಿರ್ಣಾಯಕ ಹಂತವನ್ನು ಪ್ರವೇಶಿಸಿರುವುದಾಗಿ ಭದ್ರತಾಪಡೆಯ ಅಧಿಕಾರಿಗಳು ತಿಳಿಸಿದ್ದಾರೆ.  ಆಪರೇಷನ್ ಡೆಮಾಲಿಶ್‌ಮೆಂಟ್ ಎಂದು ಕರೆಯಲ್ಪಡುವ ಇತ್ತೀಚಿನ ಕಾರ್ಯಾಚರಣೆಯ ಅಡಿಯಲ್ಲಿ ನಕ್ಸಲ್ ಕಾರ್ಯಕರ್ತರು ತಮ್ಮ ನಾಯಕರನ್ನು ಸ್ಮರಿಸಲು ಮತ್ತು...

ಮುಸ್ಲಿಮರಿಗೆ ನೀಡಿದ್ದ 5% ಮೀಸಲಾತಿ ರದ್ದುಗೊಳಿಸಿದ ಮಹಾರಾಷ್ಟ್ರ ಸರ್ಕಾರದ ಕ್ರಮ ಪ್ರಶ್ನಿಸಿ ಬಾಂಬೆ ಹೈಕೋರ್ಟ್ ಗೆ ಅರ್ಜಿ 

ಶಿಕ್ಷಣ ಮತ್ತು ಸರ್ಕಾರಿ ಉದ್ಯೋಗಗಳಲ್ಲಿ ಮುಸ್ಲಿಮರಿಗೆ 5% ಮೀಸಲಾತಿಯನ್ನು ರದ್ದುಗೊಳಿಸಿದ ಮಹಾರಾಷ್ಟ್ರ ಸರ್ಕಾರದ ಇತ್ತೀಚಿನ ನಿರ್ಧಾರವನ್ನು ಮುಂಬೈ ಮೂಲದ ವಕೀಲರು ಬಾಂಬೆ ಹೈಕೋರ್ಟ್‌ನಲ್ಲಿ ಪ್ರಶ್ನಿಸಿದ್ದಾರೆ. ವಕೀಲ ಸೈಯದ್ ಎಜಾಜ್ ಅಬ್ಬಾಸ್ ನಖ್ವಿ ಅವರು ವಕೀಲ...

ವಿಧಾನಸಭಾ ಚುನಾವಣೆಯಲ್ಲಿ ನೇಮಮ್ ನಿಂದ ಸ್ಪರ್ಧಿಸುವ ಬಯಕೆಯನ್ನು ಪುನರುಚ್ಚರಿಸಿದ ಬಿಜೆಪಿ ಕೇರಳ ಅಧ್ಯಕ್ಷ ರಾಜೀವ್ ಚಂದ್ರಶೇಖರ್ 

ತಿರುವನಂತಪುರಂ: ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಕೇರಳದ ನೇಮಮ್ ಕ್ಷೇತ್ರದಿಂದ ಸ್ಪರ್ಧಿಸುವ ತಮ್ಮ ಇಚ್ಛೆಯನ್ನು ಬಿಜೆಪಿ ರಾಜ್ಯಾಧ್ಯಕ್ಷ ರಾಜೀವ್ ಚಂದ್ರಶೇಖರ್ ಭಾನುವಾರ ಪುನರುಚ್ಚರಿಸಿದ್ದಾರೆ. ನೇಮಮ್‌ನಲ್ಲಿ ಬಿಜೆಪಿಯ ಚುನಾವಣಾ ಗೋಡೆ ಬರಹ ಅಭಿಯಾನಕ್ಕೆ ಚಾಲನೆ ನೀಡಿದ ನಂತರ...

ಯುವತಿಯನ್ನು ಬಂಧಿಸಿಟ್ಟು ಚಿತ್ರಹಿಂಸೆ : ಆರೋಪಿಯ ಬಂಧನ

ಯುವಕನೋರ್ವ ತನ್ನ ಲಿವ್-ಇನ್ ಸಂಗಾತಿಯಾದ 19 ವರ್ಷದ ಯುವತಿಯನ್ನು ಕೊಠಡಿಯಲ್ಲಿ ಬಂಧಿಸಿಟ್ಟು ಚಿತ್ರಹಿಂಸೆ ನೀಡಿರುವ ಘಟನೆ ಗುರುಗಾಂವ್‌ನ ಸೆಕ್ಟರ್ 69ರಲ್ಲಿ ನಡೆದಿದೆ. ಆರೋಪಿಯನ್ನು ದೆಹಲಿಯ ನರೇಲಾ ನಿವಾಸಿ 19 ವರ್ಷದ ಶಿವಂ ಎಂದು ಗುರುತಿಸಲಾಗಿದೆ....

ಕೋಝಿಕ್ಕೋಡ್‌: ಆಹಾರ ಸೇವಿಸಿ, ಬಿಲ್ ಪಾವತಿಸಲು ನಿರಾಕರಿಸಿದ ಮೂವರ ತಂಡದಿಂದ ರೆಸ್ಟೋರೆಂಟ್ ಧ್ವಂಸ

ಕೋಝಿಕ್ಕೋಡ್ (ಕೇರಳ): ಆಹಾರ ಸೇವಿಸಿ, ಹಣ ನೀಡಲು ನಿರಾಕರಿಸಿದ ಮೂವರು ಸದಸ್ಯರ ಗುಂಪೊಂದು ಬಿಲ್ ಕೇಳಿದ್ದಕ್ಕೆ ರೆಸ್ಟೋರೆಂಟ್ ಅನ್ನು ಧ್ವಂಸಗೊಳಿಸಿದೆ ಎಂದು ಪೊಲೀಸರು ಭಾನುವಾರ ತಿಳಿಸಿದ್ದಾರೆ. ಪ್ರಕರಣ ಸಂಬಂಧ ಒಬ್ಬ ವ್ಯಕ್ತಿಯನ್ನು ವಶಕ್ಕೆ ತೆಗೆದುಕೊಳ್ಳಲಾಗಿದ್ದು,...

ಲೈಂಗಿಕ ದೌರ್ಜನ್ಯ ಆರೋಪ : ಸ್ವಾಮಿ ಅವಿಮುಕ್ತೇಶ್ವರಾನಂದ ವಿರುದ್ಧ ಎಫ್‌ಐಆರ್ ದಾಖಲಿಸಲು ಕೋರ್ಟ್ ಆದೇಶ

ಇಬ್ಬರು ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಜ್ಯೋತಿಷ್ ಪೀಠದ ಸ್ವಾಮಿ ಅವಿಮುಕ್ತೇಶ್ವರಾನಂದ ಸರಸ್ವತಿ ಮತ್ತು ಅವರ ಶಿಷ್ಯ ಮುಕುಂದಾನಂದ ಬ್ರಹ್ಮಚಾರಿ ವಿರುದ್ಧ ಎಫ್‌ಐಆರ್ ದಾಖಲಿಸಲು ಉತ್ತರ ಪ್ರದೇಶದ ಪ್ರಯಾಗ್‌ರಾಜ್‌ನ ವಿಶೇಷ ಪೋಕ್ಸೋ ನ್ಯಾಯಾಲಯ...

ಶೌಚಾಲಯ ತೊಳೆಯಲು ನಿರಾಕರಿಸಿದ ದಲಿತ ಬಾಲಕಿ ಮೇಲೆ ಶಿಕ್ಷಕಿಯಿಂದ ಹಲ್ಲೆ

ಶಾಲಾ ಶೌಚಾಲಯ ತೊಳೆಯಲು ನಿರಾಕರಿಸಿದ ದಲಿತ ಬಾಲಕಿ ಮೇಲೆ ಹಲ್ಲೆ ನಡೆಸಿದ ಶಿಕ್ಷಕಿ, ಆಕೆಯ ಹೆಸರನ್ನು ದಾಖಲಾತಿಯಿಂದ ತೆಗೆದು ಹಾಕುವುದಾಗಿ ಬೆದರಿಕೆ ಹಾಕಿರುವ ಆರೋಪ ಕೇಳಿ ಬಂದಿದೆ. ಉತ್ತರ ಪ್ರದೇಶದ ಅಲೀಗಢ ಜಿಲ್ಲೆಯ...

ಚಿಕ್ಕಮಗಳೂರಿನಲ್ಲಿ ಒಂದೇ ವಾರದಲ್ಲಿ ಕಾಡಾನೆ ದಾಳಿಗೆ ಎರಡನೇ ಸಾವು; ಆನೆ ಸೆರೆ; ಸರ್ಕಾರದ ವಿರುದ್ಧ ಸ್ಥಳೀಯರ ಪ್ರತಿಭಟನೆ

ಚಿಕ್ಕಮಗಳೂರಿನ ವ್ಯಾಪ್ತಿಯಲ್ಲಿ ದಿನದಿಂದ ದಿನಕ್ಕೆ ಮಾನವ ಹಾಗೂ ಪ್ರಾಣಿಗಳ ಸಂಘರ್ಷ ಹೆಚ್ಚಾಗುತ್ತಿದ್ದು, ಒಂದೇ ವಾರದಲ್ಲಿ ಕಾಡಾನೆ ದಾಳಿಯಿಂದ ಇಬ್ಬರು ಮೃತಪಟ್ಟಿದ್ದಾರೆ. ಭಾನುವಾರ ಬೆಳಗ್ಗೆ ತೋಟದ ಕೆಲಸಕ್ಕೆ ತೆರಳಿದಾಗ ಹೊಸಪೇಟೆ ಮೂಲದ ಬೋರಮ್ಮ(34), ಕಾಡಾನೆ...

ಬಿಜೆಪಿ ಸೇರ್ಪಡೆಯಾದ ಅಸ್ಸಾಂ ಕಾಂಗ್ರೆಸ್ ಮಾಜಿ ಅಧ್ಯಕ್ಷ ಭೂಪೇನ್ ಬೋರಾ

ವಿಧಾನಸಭೆ ಚುನಾವಣೆಯ ಹೊಸ್ತಿಲಲ್ಲಿ ಅಸ್ಸಾಂ ಕಾಂಗ್ರೆಸ್‌ನ ಮಾಜಿ ರಾಜ್ಯಾಧ್ಯಕ್ಷ ಭೂಪೇನ್ ಬೋರಾ ಭಾನುವಾರ (ಫೆ.22) ಬಿಜೆಪಿಗೆ ಸೇರ್ಪಡೆಗೊಂಡಿದ್ದಾರೆ. ಬೋರಾ ಫೆ. 16ರಂದು ಕಾಂಗ್ರೆಸ್ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದರು. ಪಕ್ಷದಲ್ಲಿ ತಮ್ಮನ್ನು ನಿರ್ಲಕ್ಷಿಸಲಾಗುತ್ತಿದೆ...

ದೆಹಲಿಯಲ್ಲಿ ಭಯೋತ್ಪಾದನಾ ಸಂಚು ಆರೋಪ: ಬಾಂಗ್ಲಾದೇಶಿ ಪ್ರಜೆಗಳು ಸೇರಿ ಎಂಟು ಮಂದಿ ಬಂಧನ

ನವದೆಹಲಿ: ಪಾಕಿಸ್ತಾನದ ಐಎಸ್‌ಐ ಮತ್ತು ಬಾಂಗ್ಲಾದೇಶ ಮೂಲದ ಉಗ್ರಗಾಮಿ ಸಂಘಟನೆಗಳ ಸೂಚನೆಯ ಮೇರೆಗೆ ದೆಹಲಿಯಲ್ಲಿ ಪ್ರಮುಖ ಭಯೋತ್ಪಾದಕ ಪಿತೂರಿ ನಡೆಸಲು ಸಂಚು ರೂಪಿಸಿದ್ದ ಆರೋಪದ ಮೇಲೆ ಎಂಟು ಶಂಕಿತರನ್ನು ಬಂಧಿಸಲಾಗಿದೆ ಎಂದು ಪೊಲೀಸ್...