Homeಮುಖಪುಟಉಡುಪಿ ಪ್ರಕರಣ ರಾಜಕೀಕರಣಗೊಳಿಸಬೇಡಿ, ಪೊಲೀಸರು ಕಾನೂನಿನಂತೆ ನಡೆದುಕೊಂಡಿದ್ದಾರೆ: ಖುಷ್ಬೂ ಸುಂದರ್

ಉಡುಪಿ ಪ್ರಕರಣ ರಾಜಕೀಕರಣಗೊಳಿಸಬೇಡಿ, ಪೊಲೀಸರು ಕಾನೂನಿನಂತೆ ನಡೆದುಕೊಂಡಿದ್ದಾರೆ: ಖುಷ್ಬೂ ಸುಂದರ್

- Advertisement -
- Advertisement -

ಉಡುಪಿ ಪ್ರಕರಣವನ್ನು ರಾಜಕೀಕರಣಗೊಳಿಸಬೇಡಿ, ಪೊಲೀಸರು ಕಾನೂನಿನಂತೆ ನಡೆದುಕೊಂಡಿದ್ದಾರೆ ಎಂದು ರಾಷ್ಟ್ರೀಯ ಮಹಿಳಾ ಆಯೋಗದ ಸದಸ್ಯೆ ಖುಷ್ಬೂ ಸುಂದರ್ ತಿಳಿಸಿದ್ದಾರೆ.

ಇಂದು ಉಡುಪಿಗೆ ಭೇಟಿ ನೀಡಿ ಕಾಲೇಜು ಆಡಳಿತ ಮಂಡಳಿ ಮತ್ತು ಪೊಲೀಸರ ಜೊತೆ ಮಾತುಕತೆ ನಡೆಸಿದ ಬಳಿಕೆ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಅವರು, “ಇದು ಒಂದು ಸೂಕ್ಷ್ಮ ವಿಚಾರವಾಗಿದ್ದು, ಇದನ್ನು ಯಾರು ರಾಜಕೀಕರಣಗೊಳಿಸಬಾರದು. ಪೊಲೀಸರಿಂದ ಮಾಹಿತಿ ಪಡೆದಿದ್ದೇನೆ. ತನಿಖೆ ಇನ್ನು ಮುಗಿದಿಲ್ಲ. ಇದು ತುಂಬಾ ಸಮಯ ತೆಗೆದುಕೊಳ್ಳುತ್ತದೆ. ಒಂದು ದಿನದಲ್ಲಿ ನಿರ್ಧಾರ ಮಾಡಲು ಆಗಲ್ಲ. ಪೊಲೀಸರು ಕಾನೂನಿನಂತೆ ನಡೆದುಕೊಂಡಿದ್ದಾರೆ” ಎಂದು ಹೇಳಿದರು.

ಯಾರು ವದಂತಿಗಳನ್ನು ಹರಡಬಾರದು. ಯುವತಿಯರ ರಕ್ಷಣೆ ನಮಗೆ ಮುಖ್ಯ. ಯುವತಿಯರು ನಮ್ಮ ಕುಟುಂಬದವರು. ಅವರ ಸಮಸ್ಯೆಗಳನ್ನು ಬಗೆಹರಿಸಬೇಕಾಗಿರುವುದು ಮುಖ್ಯ. ನಾನು ಧಾರ್ಮಿಕ ಅಥವಾ ರಾಜಕೀಯ ಮಾಡಲು ಇಲ್ಲಿ ಬಂದಿಲ್ಲ, ಒಬ್ಬ ಪೋಷಕರಾಗಿ ಇದನ್ನು ಬಗೆಹರಿಸಬೇಕು. ರಾಜಕಾರಣಿಗಳು ರಾಜಕೀಯ ಪಕ್ಷಗಳು ಇದನ್ನು ರಾಜಕೀಯವಾಗಿ ಬಳಸಿಕೊಳ್ಳಬಾರದು ಎಂದರು.

ಎಫ್ಐಆರ್ ವಿಳಂಬ ವಿಚಾರಕ್ಕೆ ಪ್ರತಿಕ್ರಿಯಿಸಿದ ಅವರು ಕಾಲೇಜು ಆಡಳಿತ ಮಂಡಳಿ ನಿನ್ನೆ ಈ ಬಗ್ಗೆ ಪತ್ರಿಕಾಗೋಷ್ಠಿ ಮಾಡಿದೆ. ಯಾವುದೇ ದೂರು ಬಾರದ ಕಾರಣ ಪೊಲೀಸರು ದೂರು ದಾಖಲಿಸಿಲ್ಲ ಅಲ್ಲದೆ ತಾನು ದೂರ ನೀಡಲು ಬಯಸುವುದಿಲ್ಲ ಎಂದು ಸಂತ್ರಸ್ತೆ ಪತ್ರದ ಮೂಲಕ ಹೇಳಿದ್ದಾರೆ. ಕಾಲೇಜು ಆಡಳಿತ ಮಂಡಳಿ ಪತ್ರಿಕಾಗೋಷ್ಠಿಯ ನಂತರ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. ʼವಿಡಿಯೋ ಡಿಲೀಟ್ ಆಗಿದೆ ಎಂಬ ವಿಚಾರ ಬೆಳಕಿಗೆ ಬಂದ ನಂತರ ಪ್ರಕರಣ ದಾಖಲಿಸಲಾಗಿದೆ. ಯಾವುದೇ ಸುಳಿವು ಇಲ್ಲದೆ, ವಿಡಿಯೋ ಇಲ್ಲದೆ ಪೊಲೀಸರು ಪ್ರಕರಣ ದಾಖಲಿಸುವುದು ಹೇಗೆ? ಹಿಂದೆ ನಿಂತು ಪೊಲೀಸರನ್ನು ದೂರುವುದು ಸುಲಭ. ಪೊಲೀಸರು ತನಿಖೆ ಆರಂಭಿಸಿದ್ದಾರೆ ಅವರಿಗೆ ಸ್ವಾತಂತ್ರ್ಯ ನೀಡಬೇಕು. ಪ್ರಕರಣದ ತನಿಖೆಯಲ್ಲಿ ವಿಳಂಬವಾದರೆ ಮಹಿಳಾ ಆಯೋಗ ಕ್ರಮ ಕೈಗೊಳ್ಳುತ್ತದೆ. ಸದ್ಯ ನಾವು ಸುಮೋಟೋ ಪ್ರಕರಣ ದಾಖಲಿಸಲು ನಿರ್ಧರಿಸಿಲ್ಲ. ಮಾಹಿತಿ ಸಂಗ್ರಹದ ಬಳಿಕ ನಿರ್ಧಾರ ತಿಳಿಸುತ್ತೇವೆʼ ಎಂದು ಅವರು ತಿಳಿಸಿದರು.

ಸದ್ಯ ಸಾಮಾಜಿಕ ಜಾಲತಾಣ ತಾಂತ್ರಿಕತೆಯಿಂದ ಪ್ರತಿಯೊಬ್ಬರು ತನಿಖಾಧಿಕಾರಿ ನ್ಯಾಯಾಧೀಶರಾಗಲು ಮುಂದಾಗಿದ್ದಾರೆ. ಇದನ್ನು ಯಾರು ಮಾಡಬೇಡಿ. ವದಂತಿಗಳನ್ನು ಯಾರು ಹರಡಬೇಡಿ. ಕಾನೂನಿಗೆ ಅದರ ಕೆಲಸ ಮಾಡಲು ಬಿಡಿ ಎಂದು ಖುಷ್ಬೂ ಸುಂದರ್ ತಿಳಿಸಿದರು.

ಇನ್ನು ಬಿಜೆಪಿ ಪಕ್ಷ ಉಡುಪಿ ಪ್ರಕರಣ ಖಂಡಿಸಿ ಇಂದು ರಾಜ್ಯದ ಹಲವೆಡೆ ಪ್ರತಿಭಟನೆಗಳನ್ನು ಹಮ್ಮಿಕೊಂಡಿದೆ. ಎಬಿವಿಪಿ ಕೂಡ ಬೀದಿಗಿಳಿದಿದೆ.

ಈ ಕುರಿತು ಪ್ರತಿಕ್ರಿಯಸಿರುವ ಕಾಂಗ್ರೆಸ್, “ಇರುವೆಯನ್ನು ಆನೆ ಎಂದು ನಂಬಿಸಲು ಹೊರಟಿದ್ದ ಬಿಜೆಪಿ
ಹಾಗೂ ಬಿಜೆಪಿಯ ಟೂಲ್ ಕಿಟ್ ಗ್ಯಾಂಗಿನ ಕನಸಿಗೆ ಮತ್ತೊಮ್ಮೆ ತಣ್ಣೀರು ಎರಚಿದ್ದಾರೆ ರಾಷ್ಟ್ರೀಯ ಮಹಿಳಾ ಆಯೋಗದ ಸದಸ್ಯೆ ಹಾಗೂ ಬಿಜೆಪಿ ನಾಯಕಿ ಖುಷ್ಬು. ಉಡುಪಿ ಕಾಲೇಜಿನ ಘಟನೆಯು ಷಡ್ಯಂತ್ರವಲ್ಲ, ವಿದ್ಯಾರ್ಥಿನೀಯರ ಮೊಬೈಲ್ ಗಳಲ್ಲಿ ಯಾವುದೇ ವಿಡಿಯೋಗಳು ಪತ್ತೆಯಾಗಿಲ್ಲ, ಸಾಮಾಜಿಕ ಜಾಲತಾಣದಲ್ಲಿ ನಕಲಿ ವಿಡಿಯೋ ಹರಿಬಿಡಲಾಗಿದೆ, ಪೊಲೀಸರು ಸಮರ್ಪಕ ತನಿಖೆ ನಡೆಸಿದ್ದಾರೆ, ಸುಳ್ಳು ಸುದ್ದಿ ಹಬ್ಬಿಸುವುದನ್ನು ಬಿಡಬೇಕು. ಇದನ್ನು ಕೇವಲ ಹುಡುಗಾಟಿಕೆಯ ಘಟನೆಯಾಗಿಯಷ್ಟೇ ನೋಡಬೇಕು ಹೊರತು ರಾಜಕೀಯಕ್ಕೆ ಬಳಸಬಾರದು ಎಂಬ ಸ್ವತಃ ಬಿಜೆಪಿ ನಾಯಕಿಯ ಸಂದೇಶವನ್ನು ಬಿಜೆಪಿಗರು ಅರಗಿಸಿಕೊಳ್ಳಲು ಸಾಧ್ಯವೇ! ಸರ್ಕಾರವನ್ನು ವಿರೋಧಿಸಲು ವಿಷಯಗಳಿಲ್ಲದೆ ಕಂಗಲಾಗಿರುವ ಬಿಜೆಪಿ ಈಗ ಬಾತ್ ರೂಮಿನ ರಾಜಕೀಯಕ್ಕೆ ಹೊರಟಿದೆ!” ಎಂದು ಕಿಡಿಕಾರಿದೆ.

ಇದನ್ನೂ ಓದಿ: ತಿ.ನರಸೀಪುರ ವೇಣುಗೋಪಾಲ್ ಕೊಲೆಗೆ ಸಂಘ ಪರಿವಾರ ಕೋಮು ತಿರುವು ನೀಡಲೆತ್ನಿಸಿ ವಿಫಲವಾದದ್ದು..

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಐದು ರಾಜ್ಯಗಳ ವಿಧಾನಸಭೆ ಚುನಾವಣೆ ದಿನಾಂಕ ಪ್ರಕಟ; ಬಂಗಾಳದಲ್ಲಿ ಮಾತ್ರ ಎರಡು ಹಂತದ ಮತದಾನ

ಅಸ್ಸಾಂ, ಪಶ್ಚಿಮ ಬಂಗಾಳ, ತಮಿಳುನಾಡು, ಕೇರಳ ಮತ್ತು ಪುದುಚೇರಿ ವಿಧಾನಸಭಾ ಚುನಾವಣೆಗಳ ವೇಳಾಪಟ್ಟಿಯನ್ನು ಭಾರತೀಯ ಚುನಾವಣಾ ಆಯೋಗದ (ಇಸಿಐ) ಮುಖ್ಯಸ್ಥರಾದ ಜ್ಞಾನೇಶ್ ಕುಮಾರ್ ಪ್ರಕಟಿಸಿದರು. ದೆಹಲಿಯಲ್ಲಿ ಇಂದು ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಮುಖ್ಯ...

ಫ್ಲಿಪ್‌ಕಾರ್ಟ್‌ನಿಂದ 1 ರೂ.ಗೆ ಹಾಲು ಮಾರಾಟ; ಪ್ರಧಾನಿ ಮೋದಿ ಮಧ್ಯಸ್ಥಿಕೆಗೆ ಬಮುಲ್‌ ಆಗ್ರಹ

ಫ್ಲಿಪ್‌ಕಾರ್ಟ್‌ ಸಂಸ್ಥೆಯು ಆನ್‌ಲೈನ್‌ ಮೂಲಕ 1 ರೂ.ಗೆ ಲೀಟರ್‌ ಹಾಲನ್ನು ಮಾರಾಟ ಮಾಡಿರುವುದು ಭಾರಿ ಜನಾಕ್ರೋಶಕ್ಕೆ ಕಾರಣವಾಗಿದೆ. ಈ ಬಗ್ಗೆ, ಬೆಂಗಳೂರು ನಗರ, ಗ್ರಾಮೀಣ ಮತ್ತು ರಾಮನಗರ ಜಿಲ್ಲಾ ಸಹಕಾರಿ ಹಾಲು ಉತ್ಪಾದಕರ...

“ಮಕ್ಕಳ ಹಂತಕನನ್ನು ಹುಡುಕಿ ಹತ್ಯೆ ಮಾಡುತ್ತೇವೆ” : ನೆತನ್ಯಾಹು ಸುರಕ್ಷಿತವಾಗಿದ್ದಾರೆ ಎಂಬ ಇಸ್ರೇಲ್ ಸ್ಪಷ್ಟನೆ ಬೆನ್ನಲ್ಲೆ ಐಆರ್‌ಜಿಸಿ ಹೇಳಿಕೆ

ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರನ್ನು ಹುಡುಕಿ ಹತ್ಯೆ ಮಾಡುತ್ತೇವೆ ಎಂದು ಇರಾನ್‌ನ ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ (ಐಆರ್‌ಜಿಸಿ) ಹೇಳಿರುವುದಾಗಿ ವರದಿಯಾಗಿದೆ. ನೆತನ್ಯಾಹು ಅವರ ಹತ್ಯೆಯ ವದಂತಿಗಳನ್ನು ಇಸ್ರೇಲ್ ನಿರಾಕರಿಸಿದ ಬೆನ್ನಲ್ಲೇ, ಐಆರ್‌ಜಿಸಿ ಈ...

ಮಹಾರಾಷ್ಟ್ರ| ಇಫ್ತಾರ್ ಕೂಟಕ್ಕೆ ಸೇರಿದ್ದ ಮುಸ್ಲಿಮರ ಮೇಲೆ ಹಿಂದುತ್ವವಾದಿ ಗುಂಪಿನಿಂದ ದಾಳಿ

ರಂಜಾನ್‌ ಮಾಸದ ಉಪವಾಸ ಮುರಿಯಲು ನೆರೆದಿದ್ದ ಜನರ ಮೇಲೆ ಅಪರಿಚಿತ ವ್ಯಕ್ತಿಗಳ ಗುಂಪೊಂದು ದಾಳಿ ನಡೆಸಿರುವ ಘಟನೆ ಮಹಾರಾಷ್ಟ್ರದ ಪುಣೆಯಲ್ಲಿ ನಡೆದಿದೆ. ಇಫ್ತಾರ್ ಕೂಟಕ್ಕೆ ಸಿದ್ಧತೆ ನಡೆಸುತ್ತಿದ್ದಾಗ, ಸುಮಾರು 100 ಕ್ಕೂ ಹೆಚ್ಚು...

ಆಸ್ಕರ್‌ ಅಂತಿಮ ಪಟ್ಟಿಗೆ ಆಯ್ಕೆಯಾದ ‘ದಿ ವಾಯ್ಸ್ ಆಫ್ ಹಿಂದ್ ರಜಬ್’

ಗಾಝಾದ ಆರು ವರ್ಷದ ಬಾಲಕಿ ಹಿಂದ್ ರಜಬ್‌ ಮತ್ತು ಆಕೆಯ ಸಂಬಂಧಿಕರನ್ನು ಇಸ್ರೇಲಿ ಸೈನಿಕರು ಭೀಕರವಾಗಿ ಹತ್ಯೆ ಮಾಡಿದ ಕಥೆಯನ್ನು ಹೇಳುವ 'ದಿ ವಾಯ್ಸ್ ಆಫ್ ಹಿಂದ್ ರಜಬ್' ಚಲನಚಿತ್ರವು 2026ರ ಆಸ್ಕರ್...

ಉತ್ತರ ಪ್ರದೇಶ| ದಲಿತ ಕುಟುಂಬದ ಮದುವೆ ಮನೆಯಲ್ಲಿ ಸವರ್ಣಿಯರಿಂದ ಹಲ್ಲೆ; ಬಂದೂಕಿನಿಂದ ಬೆದರಿಕೆ

ಮಾರ್ಚ್ 10 ರಂದು ಉತ್ತರ ಪ್ರದೇಶದ ಲಖಿಂಪುರ ಖೇರಿ ಜಿಲ್ಲೆಯ ಟಿಕುನಿಯಾ ಪೊಲೀಸ್ ಠಾಣೆ ಪ್ರದೇಶದಲ್ಲಿ ಜಾತಿ ಆಧಾರಿತ ಹಿಂಸಾಚಾರದ ತೀವ್ರ ಆತಂಕಕಾರಿ ಘಟನೆ ಬೆಳಕಿಗೆ ಬಂದಿದೆ. 24 ಗಂಟೆಗಳ ಒಳಗೆ ಎಫ್‌ಐಆರ್...

’70 ಲಕ್ಷ ಬಂಗಾಳಿ ಮುಸ್ಲಿಮರನ್ನು ಹೊರದಬ್ಬಲು ಸಾಧ್ಯವಿಲ್ಲ..ಅವರೇ ದೇಶ ಬಿಡುವಂತಹ ಪರಿಸ್ಥಿತಿ ಸೃಷ್ಟಿಸುತ್ತೇವೆ’: ಅಸ್ಸಾಂ ಸಿಎಂ ಹಿಮಂತ ಬಿಸ್ವಾ ಶರ್ಮಾ

ಸುಮಾರು 70 ಲಕ್ಷ 'ಬಂಗಾಳಿ ಮುಸ್ಲಿಮರ'ನ್ನು ಭಾರತದಿಂದ ಹೊರಹಾಕುವುದು 'ಮಾನವೀಯವಾಗಿ ಸಾಧ್ಯವಿಲ್ಲ'. ಹಾಗಾಗಿ, ಅವರಾಗಿಯೇ ದೇಶ ತೊರೆಯುವಂತಹ ಪರಿಸ್ಥಿತಿಯನ್ನು ನಾವು ಸೃಷ್ಟಿಸುತ್ತೇವೆ ಎಂದು ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಹೇಳಿದ್ದಾರೆ. ಈ...

ಮೋದಿಯವರ ವಿದೇಶಾಂಗ ನೀತಿ ಸಂಪೂರ್ಣವಾಗಿ ದಿಕ್ಕು ತಪ್ಪಿದೆ, ನಗೆಪಾಟಲಿಗೆ ಈಡಾಗಿದೆ, ಅನೈತಿಕತೆಯಿಂದ ಕೂಡಿದೆ. ಇದು ಜಗಜ್ಜಾಹೀರಾಗಿದೆ – ಶ್ರೀಪಾದ್‌ ಭಟ್

ತಮ್ಮ ಸ್ಥಳೀಯ ಮತಬ್ಯಾಂಕ್ ರಾಜಕಾರಣದ ಜೊತೆಗೆ ವಿದೇಶಿ ನೀತಿಯನ್ನು ತಳುಕು ಹಾಕುವುದು. ಉದಾಹರಣೆಗೆ ಅಮೆರಿಕ-ಇಸ್ರೇಲ್ ಜಂಟಿಯಾಗಿ ನಡೆಸುತ್ತಿರುವ ಇರಾನ್ ಮೇಲಿನ ಯುದ್ಧದ ಸಮಯದಲ್ಲಿ ಮೋದಿ ನೇತೃತ್ವದ ಸರ್ಕಾರವು ತಾನು ಇರಾನ್ ಪರ ನಿಲುವು ತಾಳಿದರೆ...

ದೆಹಲಿ ಪೊಲೀಸರಿಂದ 10 ಮಂದಿ ಹೋರಾಟಗಾರರ ಅಪಹರಣ ಆರೋಪ : ಹೈಕೋರ್ಟ್‌ಗೆ ಹೇಬಿಯಸ್ ಕಾರ್ಪಸ್ ಅರ್ಜಿ

ಸಿವಿಲ್ ಸೊಸೈಟಿಯ ಹತ್ತು ಮಂದಿ ಹೋರಾಟಗಾರರನ್ನು ದೆಹಲಿ ಪೊಲೀಸರು ಅಪಹರಿಸಿದ್ದಾರೆ ಅಥವಾ ಅಕ್ರಮವಾಗಿ ಬಂಧಿಸಿದ್ದಾರೆ ಎಂದು ಮಾನವ ಹಕ್ಕುಗಳ ಗುಂಪುಗಳು ಆರೋಪಿಸಿವೆ. ಹತ್ತು ಮಂದಿಯನ್ನು ದೆಹಲಿ ಪೊಲೀಸರು ಮತ್ತು ಇತರ ರಾಜ್ಯಗಳ ಏಜೆನ್ಸಿಗಳು ಅಪಹರಿಸಿವೆ...

ಗುಜರಾತ್‌: 34 ಜಿಲ್ಲೆಗಳ ಪೈಕಿ 20 ಜಿಲ್ಲೆಗಳಲ್ಲಿ 2 ಲಕ್ಷಕ್ಕೂ ಹೆಚ್ಚು ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ: ವಿಧಾನಸಭೆಗೆ ಮಾಹಿತಿ ನೀಡಿದ ಸರ್ಕಾರ

ಗಾಂಧಿನಗರ: ರಾಜ್ಯದ 34 ಜಿಲ್ಲೆಗಳ ಪೈಕಿ 20 ಜಿಲ್ಲೆಗಳಲ್ಲಿ 2 ಲಕ್ಷಕ್ಕೂ ಹೆಚ್ಚು ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ ಮತ್ತು ಪರಿಸ್ಥಿತಿಯನ್ನು ಸುಧಾರಿಸಲು ವಿವಿಧ ಕ್ರಮಗಳನ್ನು ತೆಗೆದುಕೊಳ್ಳಲಾಗುತ್ತಿದೆ ಎಂದು ಗುಜರಾತ್ ಸರ್ಕಾರ ಶನಿವಾರ ವಿಧಾನಸಭೆಗೆ...