Homeಮುಖಪುಟಉಡುಪಿ ಪ್ರಕರಣ ರಾಜಕೀಕರಣಗೊಳಿಸಬೇಡಿ, ಪೊಲೀಸರು ಕಾನೂನಿನಂತೆ ನಡೆದುಕೊಂಡಿದ್ದಾರೆ: ಖುಷ್ಬೂ ಸುಂದರ್

ಉಡುಪಿ ಪ್ರಕರಣ ರಾಜಕೀಕರಣಗೊಳಿಸಬೇಡಿ, ಪೊಲೀಸರು ಕಾನೂನಿನಂತೆ ನಡೆದುಕೊಂಡಿದ್ದಾರೆ: ಖುಷ್ಬೂ ಸುಂದರ್

- Advertisement -
- Advertisement -

ಉಡುಪಿ ಪ್ರಕರಣವನ್ನು ರಾಜಕೀಕರಣಗೊಳಿಸಬೇಡಿ, ಪೊಲೀಸರು ಕಾನೂನಿನಂತೆ ನಡೆದುಕೊಂಡಿದ್ದಾರೆ ಎಂದು ರಾಷ್ಟ್ರೀಯ ಮಹಿಳಾ ಆಯೋಗದ ಸದಸ್ಯೆ ಖುಷ್ಬೂ ಸುಂದರ್ ತಿಳಿಸಿದ್ದಾರೆ.

ಇಂದು ಉಡುಪಿಗೆ ಭೇಟಿ ನೀಡಿ ಕಾಲೇಜು ಆಡಳಿತ ಮಂಡಳಿ ಮತ್ತು ಪೊಲೀಸರ ಜೊತೆ ಮಾತುಕತೆ ನಡೆಸಿದ ಬಳಿಕೆ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಅವರು, “ಇದು ಒಂದು ಸೂಕ್ಷ್ಮ ವಿಚಾರವಾಗಿದ್ದು, ಇದನ್ನು ಯಾರು ರಾಜಕೀಕರಣಗೊಳಿಸಬಾರದು. ಪೊಲೀಸರಿಂದ ಮಾಹಿತಿ ಪಡೆದಿದ್ದೇನೆ. ತನಿಖೆ ಇನ್ನು ಮುಗಿದಿಲ್ಲ. ಇದು ತುಂಬಾ ಸಮಯ ತೆಗೆದುಕೊಳ್ಳುತ್ತದೆ. ಒಂದು ದಿನದಲ್ಲಿ ನಿರ್ಧಾರ ಮಾಡಲು ಆಗಲ್ಲ. ಪೊಲೀಸರು ಕಾನೂನಿನಂತೆ ನಡೆದುಕೊಂಡಿದ್ದಾರೆ” ಎಂದು ಹೇಳಿದರು.

ಯಾರು ವದಂತಿಗಳನ್ನು ಹರಡಬಾರದು. ಯುವತಿಯರ ರಕ್ಷಣೆ ನಮಗೆ ಮುಖ್ಯ. ಯುವತಿಯರು ನಮ್ಮ ಕುಟುಂಬದವರು. ಅವರ ಸಮಸ್ಯೆಗಳನ್ನು ಬಗೆಹರಿಸಬೇಕಾಗಿರುವುದು ಮುಖ್ಯ. ನಾನು ಧಾರ್ಮಿಕ ಅಥವಾ ರಾಜಕೀಯ ಮಾಡಲು ಇಲ್ಲಿ ಬಂದಿಲ್ಲ, ಒಬ್ಬ ಪೋಷಕರಾಗಿ ಇದನ್ನು ಬಗೆಹರಿಸಬೇಕು. ರಾಜಕಾರಣಿಗಳು ರಾಜಕೀಯ ಪಕ್ಷಗಳು ಇದನ್ನು ರಾಜಕೀಯವಾಗಿ ಬಳಸಿಕೊಳ್ಳಬಾರದು ಎಂದರು.

ಎಫ್ಐಆರ್ ವಿಳಂಬ ವಿಚಾರಕ್ಕೆ ಪ್ರತಿಕ್ರಿಯಿಸಿದ ಅವರು ಕಾಲೇಜು ಆಡಳಿತ ಮಂಡಳಿ ನಿನ್ನೆ ಈ ಬಗ್ಗೆ ಪತ್ರಿಕಾಗೋಷ್ಠಿ ಮಾಡಿದೆ. ಯಾವುದೇ ದೂರು ಬಾರದ ಕಾರಣ ಪೊಲೀಸರು ದೂರು ದಾಖಲಿಸಿಲ್ಲ ಅಲ್ಲದೆ ತಾನು ದೂರ ನೀಡಲು ಬಯಸುವುದಿಲ್ಲ ಎಂದು ಸಂತ್ರಸ್ತೆ ಪತ್ರದ ಮೂಲಕ ಹೇಳಿದ್ದಾರೆ. ಕಾಲೇಜು ಆಡಳಿತ ಮಂಡಳಿ ಪತ್ರಿಕಾಗೋಷ್ಠಿಯ ನಂತರ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. ʼವಿಡಿಯೋ ಡಿಲೀಟ್ ಆಗಿದೆ ಎಂಬ ವಿಚಾರ ಬೆಳಕಿಗೆ ಬಂದ ನಂತರ ಪ್ರಕರಣ ದಾಖಲಿಸಲಾಗಿದೆ. ಯಾವುದೇ ಸುಳಿವು ಇಲ್ಲದೆ, ವಿಡಿಯೋ ಇಲ್ಲದೆ ಪೊಲೀಸರು ಪ್ರಕರಣ ದಾಖಲಿಸುವುದು ಹೇಗೆ? ಹಿಂದೆ ನಿಂತು ಪೊಲೀಸರನ್ನು ದೂರುವುದು ಸುಲಭ. ಪೊಲೀಸರು ತನಿಖೆ ಆರಂಭಿಸಿದ್ದಾರೆ ಅವರಿಗೆ ಸ್ವಾತಂತ್ರ್ಯ ನೀಡಬೇಕು. ಪ್ರಕರಣದ ತನಿಖೆಯಲ್ಲಿ ವಿಳಂಬವಾದರೆ ಮಹಿಳಾ ಆಯೋಗ ಕ್ರಮ ಕೈಗೊಳ್ಳುತ್ತದೆ. ಸದ್ಯ ನಾವು ಸುಮೋಟೋ ಪ್ರಕರಣ ದಾಖಲಿಸಲು ನಿರ್ಧರಿಸಿಲ್ಲ. ಮಾಹಿತಿ ಸಂಗ್ರಹದ ಬಳಿಕ ನಿರ್ಧಾರ ತಿಳಿಸುತ್ತೇವೆʼ ಎಂದು ಅವರು ತಿಳಿಸಿದರು.

ಸದ್ಯ ಸಾಮಾಜಿಕ ಜಾಲತಾಣ ತಾಂತ್ರಿಕತೆಯಿಂದ ಪ್ರತಿಯೊಬ್ಬರು ತನಿಖಾಧಿಕಾರಿ ನ್ಯಾಯಾಧೀಶರಾಗಲು ಮುಂದಾಗಿದ್ದಾರೆ. ಇದನ್ನು ಯಾರು ಮಾಡಬೇಡಿ. ವದಂತಿಗಳನ್ನು ಯಾರು ಹರಡಬೇಡಿ. ಕಾನೂನಿಗೆ ಅದರ ಕೆಲಸ ಮಾಡಲು ಬಿಡಿ ಎಂದು ಖುಷ್ಬೂ ಸುಂದರ್ ತಿಳಿಸಿದರು.

ಇನ್ನು ಬಿಜೆಪಿ ಪಕ್ಷ ಉಡುಪಿ ಪ್ರಕರಣ ಖಂಡಿಸಿ ಇಂದು ರಾಜ್ಯದ ಹಲವೆಡೆ ಪ್ರತಿಭಟನೆಗಳನ್ನು ಹಮ್ಮಿಕೊಂಡಿದೆ. ಎಬಿವಿಪಿ ಕೂಡ ಬೀದಿಗಿಳಿದಿದೆ.

ಈ ಕುರಿತು ಪ್ರತಿಕ್ರಿಯಸಿರುವ ಕಾಂಗ್ರೆಸ್, “ಇರುವೆಯನ್ನು ಆನೆ ಎಂದು ನಂಬಿಸಲು ಹೊರಟಿದ್ದ ಬಿಜೆಪಿ
ಹಾಗೂ ಬಿಜೆಪಿಯ ಟೂಲ್ ಕಿಟ್ ಗ್ಯಾಂಗಿನ ಕನಸಿಗೆ ಮತ್ತೊಮ್ಮೆ ತಣ್ಣೀರು ಎರಚಿದ್ದಾರೆ ರಾಷ್ಟ್ರೀಯ ಮಹಿಳಾ ಆಯೋಗದ ಸದಸ್ಯೆ ಹಾಗೂ ಬಿಜೆಪಿ ನಾಯಕಿ ಖುಷ್ಬು. ಉಡುಪಿ ಕಾಲೇಜಿನ ಘಟನೆಯು ಷಡ್ಯಂತ್ರವಲ್ಲ, ವಿದ್ಯಾರ್ಥಿನೀಯರ ಮೊಬೈಲ್ ಗಳಲ್ಲಿ ಯಾವುದೇ ವಿಡಿಯೋಗಳು ಪತ್ತೆಯಾಗಿಲ್ಲ, ಸಾಮಾಜಿಕ ಜಾಲತಾಣದಲ್ಲಿ ನಕಲಿ ವಿಡಿಯೋ ಹರಿಬಿಡಲಾಗಿದೆ, ಪೊಲೀಸರು ಸಮರ್ಪಕ ತನಿಖೆ ನಡೆಸಿದ್ದಾರೆ, ಸುಳ್ಳು ಸುದ್ದಿ ಹಬ್ಬಿಸುವುದನ್ನು ಬಿಡಬೇಕು. ಇದನ್ನು ಕೇವಲ ಹುಡುಗಾಟಿಕೆಯ ಘಟನೆಯಾಗಿಯಷ್ಟೇ ನೋಡಬೇಕು ಹೊರತು ರಾಜಕೀಯಕ್ಕೆ ಬಳಸಬಾರದು ಎಂಬ ಸ್ವತಃ ಬಿಜೆಪಿ ನಾಯಕಿಯ ಸಂದೇಶವನ್ನು ಬಿಜೆಪಿಗರು ಅರಗಿಸಿಕೊಳ್ಳಲು ಸಾಧ್ಯವೇ! ಸರ್ಕಾರವನ್ನು ವಿರೋಧಿಸಲು ವಿಷಯಗಳಿಲ್ಲದೆ ಕಂಗಲಾಗಿರುವ ಬಿಜೆಪಿ ಈಗ ಬಾತ್ ರೂಮಿನ ರಾಜಕೀಯಕ್ಕೆ ಹೊರಟಿದೆ!” ಎಂದು ಕಿಡಿಕಾರಿದೆ.

ಇದನ್ನೂ ಓದಿ: ತಿ.ನರಸೀಪುರ ವೇಣುಗೋಪಾಲ್ ಕೊಲೆಗೆ ಸಂಘ ಪರಿವಾರ ಕೋಮು ತಿರುವು ನೀಡಲೆತ್ನಿಸಿ ವಿಫಲವಾದದ್ದು..

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

NEET: ದೇಶಾದ್ಯಂತ ಪ್ರತಿಭಟನಾಕಾರರ ವಿರುದ್ದ ದಾಖಲಾಗಿದ್ದ ಎಲ್ಲಾ FIRಗಳನ್ನು ರದ್ದುಗೊಳಿಸಿದ ಸುಪ್ರೀಂ ಕೋರ್ಟ್

ಮರುಪರೀಕ್ಷೆ ಮತ್ತು ಪ್ರಶ್ನೆ ಪತ್ರಿಕೆ ಸೋರಿಕೆ ವಿರೋಧಿ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ಯ (CJP) ಪ್ರತಿಭಟನಾಕಾರರ ವಿರುದ್ಧ ದಾಖಲಾಗಿದ್ದ ಎಲ್ಲಾ FIR ಗಳನ್ನು ಸುಪ್ರೀಂ ಕೋರ್ಟ್ ಮಂಗಳವಾರ ರದ್ದುಗೊಳಿಸಿದೆ. ಕೇಂದ್ರ ಸರ್ಕಾರವು ಈ...

ಚುನಾವಣಾ ಆಯೋಗ ಚಲೋ: ನಟ ಪ್ರಕಾಶ್ ರಾಜ್ ಸೇರಿದಂತೆ ನೂರಾರು SIR ಸಂತ್ರಸ್ತರು, ಹೋರಾಟಗಾರರನ್ನು ವಶಕ್ಕೆ ಪಡೆದ ಪೊಲೀಸರು

ಕರ್ನಾಟಕ ರಾಜ್ಯದ ಅರ್ಹ ಮತದಾರರ ‘ಮತಹರಣ’ ಖಂಡಿಸಿ ‘ಎಸ್‌ಐಆರ್ ವಿರೋಧಿ ಒಕ್ಕೂಟ’ ಹಮ್ಮಿಕೊಂಡಿದ್ದ ‘ಚುನಾವಣಾ ಆಯೋಗ ಚಲೋ’ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ಬಹುಭಾಷಾ ನಟ ಪ್ರಕಾಶ್ ರಾಜ್, ಕಿಶೋರ್ ಹಾಗೂ ಪ್ರಮುಖ ನಾಯಕರು ಸೇರಿದಂತೆ...

‘ಚುನಾವಣಾ ಆಯೋಗ ಚಲೋ’: ‘ಮುಚ್ಚಿದ ಬಾಗಿಲಿನ ಮಾತುಕತೆ ಬೇಡ, ಎಲ್ಲವೂ ಸಾರ್ವಜನಿಕರ ಮುಂದೆಯೇ ಇತ್ಯರ್ಥವಾಗಬೇಕು’: ನೂರ್ ಶ್ರೀಧರ್ ಆಗ್ರಹ

ಬೆಂಗಳೂರು: ಕರ್ನಾಟಕದಲ್ಲಿ ನಡೆದ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ರಾಜ್ಯದ ಪ್ರಜಾಸತ್ತಾತ್ಮಕ ವ್ಯವಸ್ಥೆಯಲ್ಲಿ ಬೃಹತ್ ಕಳವಳವನ್ನು ಸೃಷ್ಟಿಸಿದೆ. ಕೇಂದ್ರ ಚುನಾವಣಾ ಆಯೋಗವು ಬಿಡುಗಡೆ ಮಾಡಿರುವ ನೂತನ ಕರಡು ಮತದಾರರ...

SIR ಎಂಬುದು ಪ್ರಜಾಪ್ರಭುತ್ವವನ್ನು ಹಾಳುಮಾಡುವ ದೊಡ್ಡ ಸಂಚು ಮತ್ತು ಮೋಸ: ಪ್ರಕಾಶ್ ರಾಜ್

"ನಾನು ಸಣ್ಣವನಿದ್ದಾಗ ಮುಕ್ಕೂಟಿ ಕನ್ನಡಿಗರು ಎನ್ನುತ್ತಿದ್ದರು. ದಶಕಗಳ ನಂತರ ಪಂಚಕೋಟಿ ಕನ್ನಡಿಗರಾಗಿ, ಈಗ ಶತಕೋಟಿ ಆಗಬೇಕಿತ್ತು. ಆದರೆ ಮತದಾರರ ಪಟ್ಟಿ ವಿಶೇಷ ಸಾಂದ್ರ ಪರಿಷ್ಕರಣೆ (SIR) ಹೆಸರಿನಲ್ಲಿ ಮತ್ತೆ ಮುಕ್ಕೂಟಿಗೆ ತಂದು ನಿಲ್ಲಿಸಲಾಗುತ್ತಿದೆ....

‘ಚುನಾವಣಾ ಆಯೋಗ ಚಲೋ’: ಎಸ್ಐಆರ್ ಅನ್ಯಾಯವನ್ನು ಪ್ರಶ್ನಿಸಲು ನಾವು ಚುನಾವಣಾ ಆಯೋಗಕ್ಕೆ ಮುತ್ತಿಗೆ ಹಾಕುತ್ತಿದ್ದೇವೆ: ಯೂಸುಫ್ ಕನ್ನಿ

ಬೆಂಗಳೂರು: ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಹೆಸರಿನಲ್ಲಿ ಅರ್ಹ ನಾಗರಿಕರ ಮತದಾನದ ಹಕ್ಕನ್ನು ಕಸಿದುಕೊಳ್ಳಲಾಗುತ್ತಿದೆ ಎಂದು ಆರೋಪಿಸಿ ‘ಎಸ್‌ಐಆರ್ ವಿರೋಧಿ ಕರ್ನಾಟಕ’ ವೇದಿಕೆಯು 2026 ಸೆಪ್ಟಂಬರ್ 01, ಮಂಗಳವಾರ ಹಮ್ಮಿಕೊಂಡಿದ್ದ...

SIR:‘ನಾವು ಕಳ್ಳರಲ್ಲ, ಈ ದೇಶದ ಮೂಲ ನಿವಾಸಿಗಳು’ SIR ಸಂತ್ರಸ್ತರ ಜೊತೆ ಪ್ರಕಾಶ್ ರಾಜ್ ಸಂವಾದ

"ನಾವು ಈ ದೇಶದ ನಾಗರಿಕರು, ಕಳ್ಳರಲ್ಲ. ಮತದಾರರ ಪಟ್ಟಿಯಿಂದ ಹೆಸರು ಡಿಲೀಟ್ ಮಾಡಿ ನಮ್ಮ ಸ್ವಾಭಿಮಾನಕ್ಕೆ ಧಕ್ಕೆ ತರಲಾಗುತ್ತಿದೆ. ನಮ್ಮ ಹಕ್ಕನ್ನು ಉಳಿಸಿಕೊಳ್ಳಲು ನಾವು ಹೋರಾಟ ನಡೆಸುತ್ತಿದ್ದೇವೆ," ಎಂದು ಬಹುಭಾಷಾ ನಟ ಹಾಗೂ...

‘ವಿದೇಶದಲ್ಲಿ ಚಿನ್ನ ಖರೀದಿಸಬೇಡಿ, ವಿವಾಹವಾಗಬೇಡಿ’: ಭಾರತೀಯರಿಗೆ ಮೋದಿ ಮನವಿ

ಭಾರತೀಯರು ಅನಗತ್ಯವಾಗಿ ವಿದೇಶಿ ಪ್ರವಾಸ ಕೈಗೊಳ್ಳುವುದನ್ನು, ವಿದೇಶಗಳಲ್ಲಿ ವಿವಾಹವಾಗುವುದನ್ನು ಹಾಗೂ ಅಗತ್ಯವಿಲ್ಲದಿದ್ದರೆ ವಿದೇಶದಿಂದ ಚಿನ್ನ ಖರೀದಿಸುವುದನ್ನು ಸಂಪೂರ್ಣವಾಗಿ ತಪ್ಪಿಸಬೇಕು ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಮನವಿ ಮಾಡಿದ್ದಾರೆ. ಸ್ವಾವಲಂಬನೆಗೆ ಉತ್ತೇಜನ ನೀಡುವುದರ...

ಧಾರವಾಡ | ಪ್ರಕಾಶ್ ರಾಜ್ ಭಾಗವಹಿಸಿದ್ದ ಸಮುದಾಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನ : ದೂರು ದಾಖಲು

ಭಾನುವಾರ (ಆ.30) ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದ ಸಭಾ ಭವನದಲ್ಲಿ ಆಯೋಜಿಸಿದ್ದ ಸಮುದಾಯ ಸಂಘಟನೆಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನಿಸಿ ಗಲಾಟೆ ಎಬ್ಬಿಸಿದ ಬಿಜೆಪಿ-ಸಂಘಪರಿವಾರದ ಬೆಂಬಲಿಗರ ವಿರುದ್ಧ ದೂರು ದಾಖಲಿಸಲಾಗಿದೆ. ಸಮುದಾಯ ಸಂಘಟನೆಯ ಧಾರವಾಡದ...

ಚಲಿಸುತ್ತಿದ್ದ ಸ್ಲೀಪರ್ ಬಸ್‌ನಲ್ಲಿ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ : ಚಾಲಕ, ಕಂಡಕ್ಟರ್ ಬಂಧನ

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ 2012ರಲ್ಲಿ ನಡೆದ ನಿರ್ಭಯಾ ಪ್ರಕರಣವನ್ನು ನೆನಪಿಸುವಂತಹ ಆಘಾತಕಾರಿ ಘಟನೆಯೊಂದು ನಡೆದಿದೆ. ಸ್ಲೀಪರ್‌ ಬಸ್‌ನಲ್ಲಿ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಲಾಗಿದೆ. indiatoday.in ವರದಿಯ ಪ್ರಕಾರ, ಈ ಘಟನೆಯು ಆಗಸ್ಟ್ 4ರ...

ಜಗತ್ತಿನ ಪ್ರತಿಯೊಬ್ಬರಿಗೂ ಲ್ಯಾಪ್‌ಟಾಪ್ ಕೊಳ್ಳುವಷ್ಟು ಕಪ್ಪು ಹಣ ಪ್ರಪಂಚದಲ್ಲಿದೆ: ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್

ಅಕ್ರಮ ಹಣ ವರ್ಗಾವಣೆ (Money Laundering) ಮತ್ತು 'ಡಿಜಿಟಲ್ ಅರೆಸ್ಟ್' ನಂತಹ ಆನ್‌ಲೈನ್ ವಂಚನೆಗಳ ಪ್ರಮಾಣದ ಕುರಿತು ಭಾರತದ ಮುಖ್ಯ ನ್ಯಾಯಮೂರ್ತಿ (CJI) ಸೂರ್ಯ ಕಾಂತ್ ತೀವ್ರ ಕಳವಳ ವ್ಯಕ್ತಪಡಿಸಿದ್ದಾರೆ. ಈ ರೀತಿಯ...