Homeಮುಖಪುಟಉಡುಪಿ ಪ್ರಕರಣ ರಾಜಕೀಕರಣಗೊಳಿಸಬೇಡಿ, ಪೊಲೀಸರು ಕಾನೂನಿನಂತೆ ನಡೆದುಕೊಂಡಿದ್ದಾರೆ: ಖುಷ್ಬೂ ಸುಂದರ್

ಉಡುಪಿ ಪ್ರಕರಣ ರಾಜಕೀಕರಣಗೊಳಿಸಬೇಡಿ, ಪೊಲೀಸರು ಕಾನೂನಿನಂತೆ ನಡೆದುಕೊಂಡಿದ್ದಾರೆ: ಖುಷ್ಬೂ ಸುಂದರ್

- Advertisement -
- Advertisement -

ಉಡುಪಿ ಪ್ರಕರಣವನ್ನು ರಾಜಕೀಕರಣಗೊಳಿಸಬೇಡಿ, ಪೊಲೀಸರು ಕಾನೂನಿನಂತೆ ನಡೆದುಕೊಂಡಿದ್ದಾರೆ ಎಂದು ರಾಷ್ಟ್ರೀಯ ಮಹಿಳಾ ಆಯೋಗದ ಸದಸ್ಯೆ ಖುಷ್ಬೂ ಸುಂದರ್ ತಿಳಿಸಿದ್ದಾರೆ.

ಇಂದು ಉಡುಪಿಗೆ ಭೇಟಿ ನೀಡಿ ಕಾಲೇಜು ಆಡಳಿತ ಮಂಡಳಿ ಮತ್ತು ಪೊಲೀಸರ ಜೊತೆ ಮಾತುಕತೆ ನಡೆಸಿದ ಬಳಿಕೆ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಅವರು, “ಇದು ಒಂದು ಸೂಕ್ಷ್ಮ ವಿಚಾರವಾಗಿದ್ದು, ಇದನ್ನು ಯಾರು ರಾಜಕೀಕರಣಗೊಳಿಸಬಾರದು. ಪೊಲೀಸರಿಂದ ಮಾಹಿತಿ ಪಡೆದಿದ್ದೇನೆ. ತನಿಖೆ ಇನ್ನು ಮುಗಿದಿಲ್ಲ. ಇದು ತುಂಬಾ ಸಮಯ ತೆಗೆದುಕೊಳ್ಳುತ್ತದೆ. ಒಂದು ದಿನದಲ್ಲಿ ನಿರ್ಧಾರ ಮಾಡಲು ಆಗಲ್ಲ. ಪೊಲೀಸರು ಕಾನೂನಿನಂತೆ ನಡೆದುಕೊಂಡಿದ್ದಾರೆ” ಎಂದು ಹೇಳಿದರು.

ಯಾರು ವದಂತಿಗಳನ್ನು ಹರಡಬಾರದು. ಯುವತಿಯರ ರಕ್ಷಣೆ ನಮಗೆ ಮುಖ್ಯ. ಯುವತಿಯರು ನಮ್ಮ ಕುಟುಂಬದವರು. ಅವರ ಸಮಸ್ಯೆಗಳನ್ನು ಬಗೆಹರಿಸಬೇಕಾಗಿರುವುದು ಮುಖ್ಯ. ನಾನು ಧಾರ್ಮಿಕ ಅಥವಾ ರಾಜಕೀಯ ಮಾಡಲು ಇಲ್ಲಿ ಬಂದಿಲ್ಲ, ಒಬ್ಬ ಪೋಷಕರಾಗಿ ಇದನ್ನು ಬಗೆಹರಿಸಬೇಕು. ರಾಜಕಾರಣಿಗಳು ರಾಜಕೀಯ ಪಕ್ಷಗಳು ಇದನ್ನು ರಾಜಕೀಯವಾಗಿ ಬಳಸಿಕೊಳ್ಳಬಾರದು ಎಂದರು.

ಎಫ್ಐಆರ್ ವಿಳಂಬ ವಿಚಾರಕ್ಕೆ ಪ್ರತಿಕ್ರಿಯಿಸಿದ ಅವರು ಕಾಲೇಜು ಆಡಳಿತ ಮಂಡಳಿ ನಿನ್ನೆ ಈ ಬಗ್ಗೆ ಪತ್ರಿಕಾಗೋಷ್ಠಿ ಮಾಡಿದೆ. ಯಾವುದೇ ದೂರು ಬಾರದ ಕಾರಣ ಪೊಲೀಸರು ದೂರು ದಾಖಲಿಸಿಲ್ಲ ಅಲ್ಲದೆ ತಾನು ದೂರ ನೀಡಲು ಬಯಸುವುದಿಲ್ಲ ಎಂದು ಸಂತ್ರಸ್ತೆ ಪತ್ರದ ಮೂಲಕ ಹೇಳಿದ್ದಾರೆ. ಕಾಲೇಜು ಆಡಳಿತ ಮಂಡಳಿ ಪತ್ರಿಕಾಗೋಷ್ಠಿಯ ನಂತರ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. ʼವಿಡಿಯೋ ಡಿಲೀಟ್ ಆಗಿದೆ ಎಂಬ ವಿಚಾರ ಬೆಳಕಿಗೆ ಬಂದ ನಂತರ ಪ್ರಕರಣ ದಾಖಲಿಸಲಾಗಿದೆ. ಯಾವುದೇ ಸುಳಿವು ಇಲ್ಲದೆ, ವಿಡಿಯೋ ಇಲ್ಲದೆ ಪೊಲೀಸರು ಪ್ರಕರಣ ದಾಖಲಿಸುವುದು ಹೇಗೆ? ಹಿಂದೆ ನಿಂತು ಪೊಲೀಸರನ್ನು ದೂರುವುದು ಸುಲಭ. ಪೊಲೀಸರು ತನಿಖೆ ಆರಂಭಿಸಿದ್ದಾರೆ ಅವರಿಗೆ ಸ್ವಾತಂತ್ರ್ಯ ನೀಡಬೇಕು. ಪ್ರಕರಣದ ತನಿಖೆಯಲ್ಲಿ ವಿಳಂಬವಾದರೆ ಮಹಿಳಾ ಆಯೋಗ ಕ್ರಮ ಕೈಗೊಳ್ಳುತ್ತದೆ. ಸದ್ಯ ನಾವು ಸುಮೋಟೋ ಪ್ರಕರಣ ದಾಖಲಿಸಲು ನಿರ್ಧರಿಸಿಲ್ಲ. ಮಾಹಿತಿ ಸಂಗ್ರಹದ ಬಳಿಕ ನಿರ್ಧಾರ ತಿಳಿಸುತ್ತೇವೆʼ ಎಂದು ಅವರು ತಿಳಿಸಿದರು.

ಸದ್ಯ ಸಾಮಾಜಿಕ ಜಾಲತಾಣ ತಾಂತ್ರಿಕತೆಯಿಂದ ಪ್ರತಿಯೊಬ್ಬರು ತನಿಖಾಧಿಕಾರಿ ನ್ಯಾಯಾಧೀಶರಾಗಲು ಮುಂದಾಗಿದ್ದಾರೆ. ಇದನ್ನು ಯಾರು ಮಾಡಬೇಡಿ. ವದಂತಿಗಳನ್ನು ಯಾರು ಹರಡಬೇಡಿ. ಕಾನೂನಿಗೆ ಅದರ ಕೆಲಸ ಮಾಡಲು ಬಿಡಿ ಎಂದು ಖುಷ್ಬೂ ಸುಂದರ್ ತಿಳಿಸಿದರು.

ಇನ್ನು ಬಿಜೆಪಿ ಪಕ್ಷ ಉಡುಪಿ ಪ್ರಕರಣ ಖಂಡಿಸಿ ಇಂದು ರಾಜ್ಯದ ಹಲವೆಡೆ ಪ್ರತಿಭಟನೆಗಳನ್ನು ಹಮ್ಮಿಕೊಂಡಿದೆ. ಎಬಿವಿಪಿ ಕೂಡ ಬೀದಿಗಿಳಿದಿದೆ.

ಈ ಕುರಿತು ಪ್ರತಿಕ್ರಿಯಸಿರುವ ಕಾಂಗ್ರೆಸ್, “ಇರುವೆಯನ್ನು ಆನೆ ಎಂದು ನಂಬಿಸಲು ಹೊರಟಿದ್ದ ಬಿಜೆಪಿ
ಹಾಗೂ ಬಿಜೆಪಿಯ ಟೂಲ್ ಕಿಟ್ ಗ್ಯಾಂಗಿನ ಕನಸಿಗೆ ಮತ್ತೊಮ್ಮೆ ತಣ್ಣೀರು ಎರಚಿದ್ದಾರೆ ರಾಷ್ಟ್ರೀಯ ಮಹಿಳಾ ಆಯೋಗದ ಸದಸ್ಯೆ ಹಾಗೂ ಬಿಜೆಪಿ ನಾಯಕಿ ಖುಷ್ಬು. ಉಡುಪಿ ಕಾಲೇಜಿನ ಘಟನೆಯು ಷಡ್ಯಂತ್ರವಲ್ಲ, ವಿದ್ಯಾರ್ಥಿನೀಯರ ಮೊಬೈಲ್ ಗಳಲ್ಲಿ ಯಾವುದೇ ವಿಡಿಯೋಗಳು ಪತ್ತೆಯಾಗಿಲ್ಲ, ಸಾಮಾಜಿಕ ಜಾಲತಾಣದಲ್ಲಿ ನಕಲಿ ವಿಡಿಯೋ ಹರಿಬಿಡಲಾಗಿದೆ, ಪೊಲೀಸರು ಸಮರ್ಪಕ ತನಿಖೆ ನಡೆಸಿದ್ದಾರೆ, ಸುಳ್ಳು ಸುದ್ದಿ ಹಬ್ಬಿಸುವುದನ್ನು ಬಿಡಬೇಕು. ಇದನ್ನು ಕೇವಲ ಹುಡುಗಾಟಿಕೆಯ ಘಟನೆಯಾಗಿಯಷ್ಟೇ ನೋಡಬೇಕು ಹೊರತು ರಾಜಕೀಯಕ್ಕೆ ಬಳಸಬಾರದು ಎಂಬ ಸ್ವತಃ ಬಿಜೆಪಿ ನಾಯಕಿಯ ಸಂದೇಶವನ್ನು ಬಿಜೆಪಿಗರು ಅರಗಿಸಿಕೊಳ್ಳಲು ಸಾಧ್ಯವೇ! ಸರ್ಕಾರವನ್ನು ವಿರೋಧಿಸಲು ವಿಷಯಗಳಿಲ್ಲದೆ ಕಂಗಲಾಗಿರುವ ಬಿಜೆಪಿ ಈಗ ಬಾತ್ ರೂಮಿನ ರಾಜಕೀಯಕ್ಕೆ ಹೊರಟಿದೆ!” ಎಂದು ಕಿಡಿಕಾರಿದೆ.

ಇದನ್ನೂ ಓದಿ: ತಿ.ನರಸೀಪುರ ವೇಣುಗೋಪಾಲ್ ಕೊಲೆಗೆ ಸಂಘ ಪರಿವಾರ ಕೋಮು ತಿರುವು ನೀಡಲೆತ್ನಿಸಿ ವಿಫಲವಾದದ್ದು..

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...