Homeಮುಖಪುಟ'ಈ ರೀತಿ'ಯ ಪದಗಳಿಂದ ಮಹಿಳೆಯರನ್ನು ಉಲ್ಲೇಖಿಸಬೇಡಿ: ಮಹತ್ವದ ಕೈಪಿಡಿ ಬಿಡುಗಡೆಗೊಳಿಸಿದ ಸಿಜೆಐ ಚಂದ್ರಚೂಡ್

‘ಈ ರೀತಿ’ಯ ಪದಗಳಿಂದ ಮಹಿಳೆಯರನ್ನು ಉಲ್ಲೇಖಿಸಬೇಡಿ: ಮಹತ್ವದ ಕೈಪಿಡಿ ಬಿಡುಗಡೆಗೊಳಿಸಿದ ಸಿಜೆಐ ಚಂದ್ರಚೂಡ್

- Advertisement -
- Advertisement -

ನ್ಯಾಯಾಲಯದ ಆದೇಶಗಳು ಮತ್ತು ಕಾನೂನು ಭಾಷೆಯಲ್ಲಿ ಅನುಚಿತ ಲಿಂಗ ಪದಗಳ ಬಳಕೆಯನ್ನು ತಪ್ಪಿಸಲು ನ್ಯಾಯಾಧೀಶರಿಗೆ ಮಾರ್ಗದರ್ಶನ ನೀಡುವ ಮಹತ್ವದ ಕೈಪಿಡಿಯೊಂದನ್ನು ಸುಪ್ರೀಂ ಕೋರ್ಟ್‌ ಮುಖ್ಯ ನ್ಯಾಯಮೂರ್ತಿ ಇಂದು ಬಿಡುಗಡೆ ಮಾಡಿದ್ದಾರೆ.

ನ್ಯಾಯಾಲಯದ ಆದೇಶಗಳು ಮತ್ತು ಕಾನೂನು ಭಾಷೆಯೊಳಗೆ ಲಿಂಗ ಪಕ್ಷಪಾತವನ್ನು ಹೊಂದಿರುವ ಪದಗಳು ಮತ್ತು ಪದಗುಚ್ಛಗಳ ಬಳಕೆಯನ್ನು ಗುರುತಿಸಲು ಮತ್ತು ತೆಗೆದುಹಾಕಲು ಈ ಮಾರ್ಗದರ್ಶಿ ಪುಸ್ತಕ ಅನಕೂಲ ಆಗಲಿದೆ. ಇಂತಹ ಲಿಂಗದವರು ಹೀಗ್ಹೀಗೆ ಎನ್ನುವ ದೃಷ್ಟಿಕೋನ (ಜೆಂಡರ್ ಸ್ಟೀರಿಯೊಟೈಪ್‌)ಗಳಿಂದ ತುಂಬಿದ ಪದಗಳು ಮತ್ತು ಪದಗುಚ್ಛಗಳನ್ನು ಪಟ್ಟಿ ಮಾಡಲಾಗಿದೆ ಎಂದು ಭಾರತದ ಮುಖ್ಯ ನ್ಯಾಯಮೂರ್ತಿ ಡಿವೈ ಚಂದ್ರಚೂಡ್ ಹೇಳಿದರು.

ಲಿಂಗ ಸ್ಟೀರಿಯೊಟೈಪ್‌ಗಳನ್ನು ಉತ್ತೇಜಿಸುವ ಭಾಷೆಯನ್ನು ಮೊದಲು ಗುರುತಿಸುವ ಮೂಲಕ ಮತ್ತು ಪರ್ಯಾಯ ಪದಗಳು ಮತ್ತು ನುಡಿಗಟ್ಟುಗಳನ್ನು ನೀಡುವ ಮೂಲಕ ನ್ಯಾಯಾಧೀಶರು ಅಂತಹ ಸ್ಟೀರಿಯೊಟೈಪ್‌ಗಳನ್ನು ಗುರುತಿಸಲು ಮತ್ತು ತಪ್ಪಿಸಲು ಸಹಾಯ ಮಾಡುತ್ತದೆ ಎಂದು ಸಿಜೆಐ ಹೇಳಿದರು.

”ಇದು ನ್ಯಾಯಾಧೀಶರು ಮತ್ತು ವಕೀಲರು ಕಾನೂನು ಪ್ರಕ್ರಿಯೆಯಲ್ಲಿ ಮಹಿಳೆಯರ ಬಗ್ಗೆ ಸ್ಟೀರಿಯೊಟೈಪ್‌ಗಳನ್ನು ಗುರುತಿಸಲು, ಅರ್ಥಮಾಡಿಕೊಳ್ಳಲು ಮತ್ತು ಹೋರಾಡಲು ಇದು ವಕೀಲರು ಮತ್ತು ನ್ಯಾಯಾಧೀಶರಿಗೆ ಸಹಾಯ ಮಾಡುತ್ತದೆ. ಇದು ಲಿಂಗ ಅನ್ಯಾಯದ ಪದಗಳ ಗ್ಲಾಸರಿಯನ್ನು ಒಳಗೊಂಡಿದೆ ಮತ್ತು ಮನವಿಗಳನ್ನು ಮತ್ತು ಆದೇಶಗಳು ಮತ್ತು ತೀರ್ಪುಗಳನ್ನು ರಚಿಸುವಾಗ ಬಳಸಬಹುದಾದ ಪರ್ಯಾಯ ಪದಗಳು ಮತ್ತು ಪದಗುಚ್ಛಗಳನ್ನು ಸೂಚಿಸುತ್ತದೆ” ಎಂದು ಸಿಜೆಐ ತಿಳಿಸಿದ್ದಾರೆ.

‘Handbook On Combating Gender Stereotypes’ ಬಿಡುಗಡೆ ಸಮಾರಂಭದಲ್ಲಿ, ಭಾರತದ ಮುಖ್ಯ ನ್ಯಾಯಮೂರ್ತಿ ಡಿ ವೈ ಚಂದ್ರಚೂಡ್ ಅವರು ಹಿಂದಿನ ನ್ಯಾಯಾಲಯದ ತೀರ್ಪುಗಳಲ್ಲಿ ಮಹಿಳೆಯರ ಬಗ್ಗೆ ಬಳಸಲಾದ ಹಲವಾರು ಆಕ್ಷೇಪಾರ್ಹ ಪದಗಳಾಗಿವೆ ಮತ್ತು ಅವು ಕಾನೂನಿನ ಅನ್ವಯವನ್ನು ಹೇಗೆ ವಿರೂಪಗೊಳಿಸಬಹುದು ಎಂಬುದನ್ನು ತೋರಿಸುತ್ತದೆ ಸಿಜೆಐ ಚಂದ್ರಚೂಡ್ ಹೇಳಿದ್ದಾರೆ.

“ನಿರ್ಣಯಗಳನ್ನು ಟೀಕಿಸುವುದು ಅಥವಾ ಅನುಮಾನಗಳನ್ನು ಉಂಟುಮಾಡುವುದು ಉದ್ದೇಶವಲ್ಲ ಆದರೆ ಸ್ಟೀರಿಯೊಟೈಪ್‌ಗಳನ್ನು ತಿಳಿಯದೆ ಹೇಗೆ ಬಳಸಿಕೊಳ್ಳಬಹುದು ಎಂಬುದನ್ನು ತೋರಿಸುವುದು ನಮ್ಮ ಉದ್ದೇಶವಾಗಿದೆ” ಎಂದರು.

”ಹಾನಿಕಾರಕ ಸ್ಟೀರಿಯೊಟೈಪ್‌ಗಳ ಬಳಕೆಯ ವಿರುದ್ಧ ಜಾಗೃತಿ ಮೂಡಿಸಲು, ವಿಶೇಷವಾಗಿ ಮಹಿಳೆಯರ ವಿರುದ್ಧ, ಸ್ಟೀರಿಯೊಟೈಪ್‌ಗಳು ಯಾವುವು ಎಂಬುದನ್ನು ವಿವರಿಸುವ ಗುರಿಯನ್ನು ಈ ಹ್ಯಾಂಡ್‌ಬುಕ್ ಹೊಂದಿದೆ” ಎಂದು ಸಿಜೆಐ ಸೇರಿಸಲಾಗಿದೆ.

ಇ-ಫೈಲಿಂಗ್‌ಗಾಗಿ ಕೈಪಿಡಿ ಮತ್ತು ಟ್ಯುಟೋರಿಯಲ್‌ನ್ನು ಸುಪ್ರೀಂ ಕೋರ್ಟ್‌ನ ವೆಬ್‌ಸೈಟ್‌ನಲ್ಲಿ ಅಪ್‌ಲೋಡ್ ಮಾಡಲಾಗಿದೆ ಮತ್ತು ಕೈಪಿಡಿಯನ್ನು ಅನುಸರಿಸಲಾಗುವುದು ಎಂದು ಅವರು ಬಹಿರಂಗಪಡಿಸಿದರು.

ಕೈಪಿಡಿಯನ್ನು ಸುಪ್ರೀಂ ಕೋರ್ಟ್ ವೆಬ್‌ಸೈಟ್‌ಗೆ ಅಪ್‌ಲೋಡ್ ಮಾಡಲಾಗಿದೆ. ಕೈಪಿಡಿಗೆ ಈ ಲಿಂಕ್ https://main.sci.gov.in/pdf/LU/16082023_073106.pdf ಮೇಲೆ ಕ್ಲಿಕ್ ಮಾಡಿ…

”ಈ ಪದಗಳು ಸರಿಯಲ್ಲ. ಈ ಕೈಪಿಡಿಯ ಉದ್ದೇಶವು ಆ ತೀರ್ಪುಗಳನ್ನು ಟೀಕಿಸುವುದು ಅಥವಾ ಅವುಗಳನ್ನು ಅನುಮಾನಿಸುವುದು ಅಲ್ಲ. ಇದು ‘ಜೆಂಡರ್ ಸ್ಟೀರಿಯೊಟೈಪ್‌’ಗಳು ಅಜಾಗರೂಕತೆಯಿಂದ ಹೇಗೆ ನಮ್ಮ ನ್ಯಾಯಾಲಯಗಳ ಆದೇಶದ ಪ್ರತಿಗಳಲ್ಲೂ ಒಳಹೊಕ್ಕಿವೆ ಎಂಬುದನ್ನು ತಿಳಿಸಲು” ಎಂದು ಅವರು ಹೇಳಿದರು.

”ಈ ‘ಸ್ಟೀರಿಯೊಟೈಪ್‌’ ಪದಗಳನ್ನು ವ್ಯಾಖ್ಯಾನಿಸುವುದು ಮತ್ತು ಈ ಬಗ್ಗೆ ಜಾಗೃತಿ ಮೂಡಿಸುವುದು ಕೈಪಿಡಿಯ ಗುರಿ. ಮಹಿಳೆಯರ ಬಗ್ಗೆ ರೂಢಿಗತವಾಗಿರುವ ಪದಗಳನ್ನು ಗುರುತಿಸಲು ನ್ಯಾಯಾಧೀಶರಿಗೆ ಇದು ಸಹಾಯ ಮಾಡುತ್ತದೆ. ಕೈಪಿಡಿಯನ್ನು ಸುಪ್ರೀಂಕೋರ್ಟ್‌ನ ವೆಬ್‌ಸೈಟ್‌ನಲ್ಲಿ ಅಪ್‌ಲೋಡ್ ಮಾಡಲಾಗುತ್ತದೆ. ಅದನ್ನು ಗಮನಿಸಬಹುದು” ಎಂದು ಮುಖ್ಯ ನ್ಯಾಯಮೂರ್ತಿ ಹೇಳಿದ್ದಾರೆ.

ಕಳೆದ ಮಾರ್ಚ್‌ನಲ್ಲಿ ‘ಜೆಂಡರ್ ಸ್ಟೀರಿಯೊಟೈಪ್‌’ ಪದಗಳನ್ನು ಉಪಯೋಗಿಸದಂತೆ ಎಚ್ಚರಿಸುವ ಕೈಪಿಡಿ ತರುವ ಬಗ್ಗೆಯೂ ಅವರು ಮಾಹಿತಿ ನೀಡಿದ್ದರು. ”ಉದಾಹರಣೆಗೆ, ಮಹಿಳೆಯು ಇನ್ನೊಬ್ಬನ ಜತೆ ಸಂಬಂಧದಲ್ಲಿರುವಾಗ ಆಕೆಯನ್ನು ‘ಉಪಪತ್ನಿ’ ಎಂದು ಉಲ್ಲೇಖಿಸಿರುವ ತೀರ್ಪುಗಳನ್ನು ನಾನು ನೋಡಿದ್ದೇನೆ. ಕೌಟುಂಬಿಕ ಹಿಂಸಾಚಾರ ಕಾಯ್ದೆ ಮತ್ತು ಭಾರತೀಯ ದಂಡ ಸಂಹಿತೆಯ ಸೆಕ್ಷನ್ 498ಎ ಅಡಿಯಲ್ಲಿ ಎಫ್‌ಐಆರ್‌ಗಳನ್ನು ರದ್ದುಗೊಳಿಸಲು ಇದ್ದ ಅರ್ಜಿಗಳಲ್ಲಿ ನೀಡಿದ ತೀರ್ಪುಗಳಲ್ಲಿ ಮಹಿಳೆಯರನ್ನು ‘ಕೀಪ್ಸ್’ ಎಂದು ಕರೆಯಲಾಗಿದೆ” ಎಂದು ಕೈಪಿಡಿಯನ್ನು ಸಿದ್ಧಪಡಿಸಲು ಇದ್ದ ಕಾರಣಗಳನ್ನು ಚಂದ್ರಚೂಡ್ ತಿಳಿಸಿದ್ದಾರೆ.

ಇದನ್ನೂ ಓದಿ: ಸರ್ಕಾರಿ ನೌಕರರ ವಿರುದ್ಧ ಪ್ರಕರಣ ದಾಖಲಿಸಲು ಅನುಮತಿ ಕಡ್ಡಾಯ: ಸುಪ್ರೀಂ ಕೋರ್ಟ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸ್ವಕ್ಷೇತ್ರ ತಿರುವನಂತಪುರದಲ್ಲಿ ಬಿಜೆಪಿ ಭರ್ಜರಿ ಗೆಲುವು : ‘ಪ್ರಜಾಪ್ರಭುತ್ವದ ಸೌಂದರ್ಯ’ ಎಂದ ಕಾಂಗ್ರೆಸ್ ಸಂಸದ ಶಶಿ ತರೂರ್

ಕೇರಳದ ಸ್ಥಳೀಯ ಸಂಸ್ಥೆ ಚುನಾವಣೆಯ ಫಲಿತಾಂಶ ಇಂದು (ಡಿ.13) ಪ್ರಕಟಗೊಂಡಿದ್ದು, ತಿರುವನಂತಪುರಂ ಮಹಾನಗರ ಪಾಲಿಕೆಯಲ್ಲಿ ಬಿಜೆಪಿ ನೇತೃತ್ವದ ಎನ್‌ಡಿಎ ಭರ್ಜರಿ ಗೆಲುವು ದಾಖಲಿಸಿದೆ. ಈ ಮೂಲಕ 45 ವರ್ಷಗಳ ಸಿಪಿಐ(ಎಂ) ನೇತೃತ್ವದ ಎಲ್‌ಡಿಎಫ್‌...

ಕೇರಳ ಸ್ಥಳೀಯ ಸಂಸ್ಥೆ ಚುನಾವಣೆ : ಯುಡಿಎಫ್‌ ಸ್ಪಷ್ಟ ಮೇಲುಗೈ

ಇಂದು (2025 ಡಿಸೆಂಬರ್ 13, ಶನಿವಾರ) ಪ್ರಕಟಗೊಂಡ ಕೇರಳದ ಸ್ಥಳೀಯ ಸಂಸ್ಥೆಗಳ ಚುನಾವಣಾ ಫಲಿತಾಂಶದಲ್ಲಿ ವಿರೋಧ ಪಕ್ಷಗಳ ಒಕ್ಕೂಟವಾದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್) ಸ್ಪಷ್ಟ ಮೇಲುಗೈ ಸಾಧಿಸಿದೆ. ಈ ಮೂಲಕ ರಾಜ್ಯ...

ಕೋಲ್ಕತ್ತಾ ಮೆಸ್ಸಿ ಕಾರ್ಯಕ್ರಮದಲ್ಲಿ ಗಲಾಟೆ | ಕ್ಷಮೆ ಯಾಚಿಸಿದ ಸಿಎಂ ಮಮತಾ ಬ್ಯಾನರ್ಜಿ, ತನಿಖೆಗೆ ಸಮಿತಿ ರಚನೆ; ಆಯೋಜಕನ ಬಂಧನ

ಫುಟ್ಬಾಲ್ ತಾರೆ ಲಿಯೋನೆಲ್ ಮೆಸ್ಸಿ ಭೇಟಿಯ ವೇಳೆ ಶನಿವಾರ (ಡಿಸೆಂಬರ್ 13) ಕೋಲ್ಕತ್ತಾದ ಸಾಲ್ಟ್ ಲೇಕ್ ಕ್ರೀಡಾಂಗಣದಲ್ಲಿ ಉಂಟಾದ ಗಲಾಟೆಗೆ ಸಂಬಂಧಿಸಿದಂತೆ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಕ್ಷಮೆಯಾಚಿಸಿದ್ದು, ನಿವೃತ್ತ ನ್ಯಾಯಮೂರ್ತಿ...

ಮೆಸ್ಸಿ ನೋಡಲು 25 ಸಾವಿರ ರೂ. ಪಾವತಿಸಿದವರಿಗೆ ನಿರಾಶೆ; ಕೋಪಗೊಂಡ ಅಭಿಮಾನಿಗಳಿಂದ ಕ್ರೀಡಾಂಗಣದಲ್ಲಿ ದಾಂಧಲೆ

ಶನಿವಾರ ನಡೆದ ಲಿಯೋನೆಲ್ ಮೆಸ್ಸಿ ಅವರ ಬಹು ನಿರೀಕ್ಷಿತ "ಗೋಟ್ ಇಂಡಿಯಾ ಟೂರ್" ಕೋಲ್ಕತ್ತಾದಲ್ಲಿ ಅಸ್ತವ್ಯಸ್ತವಾಯಿತು. ಯುವ ಭಾರತಿ ಕ್ರಿರಂಗನ್‌ನಲ್ಲಿ ರೊಚ್ಚಿಗೆದ್ದ ಅಭಿಮಾನಿಗಳ ದಾಂಧಲೆಯಿಂದ ಕ್ರೀಡಾಂಗಣ ಅವ್ಯವಸ್ಥೆಗೆ ಒಳಗಾಯಿತು. ಸಾವಿರಾರು ಅಭಿಮಾನಿಗಳು ಅರ್ಜೆಂಟೀನಾದ...

ಡ್ರಗ್‌ ಪೆಡ್ಲರ್‌ಗಳ ಮನೆ ಒಡೆದು ಹಾಕುವ ಹೇಳಿಕೆ : ಪರಮೇಶ್ವರ್ ಮಾತಿಗೆ ಆತಂಕ ವ್ಯಕ್ತಪಡಿಸಿದ ಕಾಂಗ್ರೆಸ್ ಹಿರಿಯ ನಾಯಕ ಚಿದಂಬರಂ

"ಡ್ರಗ್‌ ಪೆಡ್ಲರ್‌ಗಳ ಬಾಡಿಗೆ ಮನೆಗಳನ್ನು ಒಡೆದು ಹಾಕುವ ಹಂತಕ್ಕೆ ಹೋಗಿದ್ದೇವೆ" ಎಂಬ ಗೃಹ ಸಚಿವ ಜಿ.ಪರಮೇಶ್ವರ್ ಹೇಳಿಕೆಗೆ ಕಾಂಗ್ರೆಸ್ ಹಿರಿಯ ನಾಯಕ, ಮಾಜಿ ಕೇಂದ್ರ ಸಚಿವ ಪಿ. ಚಿದಂಬರಂ ಆತಂಕ ವ್ಯಕ್ತಪಡಿಸಿದ್ದಾರೆ. ಸಾಮಾಜಿಕ...

ಕೇರಳ ಸ್ಥಳೀಯ ಸಂಸ್ಥೆಗಳ ಚುನಾವಣೆ: ಶಶಿ ತರೂರ್ ಕ್ಷೇತ್ರ ತಿರುವನಂತಪುರಂನಲ್ಲಿ ಬಿಜೆಪಿ ಮುನ್ನಡೆ

ಕೇರಳ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ, ವಿಶೇಷವಾಗಿ ತಿರುವನಂತಪುರಂನಲ್ಲಿ ಭಾರತೀಯ ಜನತಾ ಪಕ್ಷದ ಸಾಧನೆಯನ್ನು ಹಿರಿಯ ಕಾಂಗ್ರೆಸ್ ನಾಯಕ ಶಶಿ ತರೂರ್ ಶನಿವಾರ ಅಭಿನಂದಿಸಿದ್ದಾರೆ. ಜನರ ತೀರ್ಪನ್ನು ಗೌರವಿಸಬೇಕು ಎಂದು ಹೇಳಿದ್ದಾರೆ. ಎಕ್ಸ್‌ನಲ್ಲಿ ದೀರ್ಘ...

ಆಳಂದ ಮತಗಳ್ಳತನ | ಬಿಜೆಪಿ ಮಾಜಿ ಶಾಸಕ ಸುಭಾಷ್ ಗುತ್ತೇದಾರ್ ಸೇರಿ 7 ಮಂದಿ ವಿರುದ್ಧ ಎಸ್‌ಐಟಿ ಚಾರ್ಜ್‌ಶೀಟ್‌

ಕಲಬುರಗಿಯ ಆಳಂದ ವಿಧಾನಸಭಾ ಕ್ಷೇತ್ರದಲ್ಲಿ ನಡೆದ ಮತಗಳ್ಳತನ (ಚುನಾವಣಾ ಆಕ್ರಮ) ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ) ನ್ಯಾಯಾಲಯಕ್ಕೆ ಆರೋಪಪಟ್ಟಿ ಸಲ್ಲಿಸಿದ್ದು, ಆಳಂದದ ಬಿಜೆಪಿ ಮಾಜಿ ಶಾಸಕ ಸುಭಾಷ್ ಗುತ್ತೇದಾರ್...

ಉತ್ತರ ಪ್ರದೇಶ| ಗಸ್ತು ವಾಹನ ಹಳ್ಳಕ್ಕೆ ಉರುಳಿಸಿದ ಪಾನಮತ್ತ ಪೊಲೀಸರು; ಕ್ರೇನ್ ಚಾಲಕನ ಮೇಲೆ ಹಲ್ಲೆ

ಶುಕ್ರವಾರ (ಡಿಸೆಂಬರ್ 12) ರಾತ್ರಿ ಪೊಲೀಸರೊಬ್ಬರು ಕಾರಿನ ನಿಯಂತ್ರಣ ಕಳೆದುಕೊಂಡ ಬಳಿಕ '112' ಪೊಲೀಸ್ ಪ್ರತಿಕ್ರಿಯೆ ವಾಹನ (ಪಿಆರ್‌ವಿ) ಹಳ್ಳಕ್ಕೆ ಉರುಳಿದೆ. ವರದಿಗಳ ಪ್ರಕಾರ, ಘಟನೆಯ ಸಮಯದಲ್ಲಿ ಪೊಲೀಸರು ಪಾನಮತ್ತರಾಗಿದ್ದರು. ಕಾರ್ ಕಂದಕಕ್ಕೆ...

ಲಿಯೋನೆಲ್ ಮೆಸ್ಸಿ ಇಂಡಿಯಾ ಪ್ರವಾಸ; ಅಭೂತಪೂರ್ವ ಸ್ವಾಗತ ಕೋರಿದ ಕೋಲ್ಕತ್ತಾ ಅಭಿಮಾನಿಗಳು

ಇಂಡಿಯಾ ಪ್ರವಾಸ ಪ್ರಾರಂಭಿಸಿರುವ ಅರ್ಜೆಂಟೀನಾದ ಪುಟ್‌ಬಾಲ್‌ ತಾರೆ ಲಿಯೋನೆಲ್ ಮೆಸ್ಸಿ ಕೋಲ್ಕತ್ತಾಗೆ ಬಂದಿಳಿದಿದ್ದಾರೆ. ಶನಿವಾರ ಬೆಳಗಿನ ಜಾವ ವಿಮಾನ ನಿಲ್ದಾಣದಲ್ಲಿ ನೆರೆದಿದ್ದ ಸಾವಿರಾರು ಅಭಿಮಾನಿಗಳಿಂದ ಅವರಿಗೆ ಅಭೂತಪೂರ್ವ ಸ್ವಾಗತ ಕೋರಿದರು. ಅರ್ಜೆಂಟೀನಾದ ಸೂಪರ್‌ಸ್ಟಾರ್ ದುಬೈ...

ನಟಿಯ ಅಪಹರಣ, ಅತ್ಯಾಚಾರ ಪ್ರಕರಣ : ಆರು ಅಪರಾಧಿಗಳಿಗೆ 20 ವರ್ಷ ಕಠಿಣ ಜೈಲು ಶಿಕ್ಷೆ

ಮಲಯಾಳಂ ಮೂಲದ ಬಹುಭಾಷಾ ನಟಿಯ ಅಪಹರಣ ಮತ್ತು ಅತ್ಯಾಚಾರ ಪ್ರಕರಣದ (2017ರ ಪ್ರಕರಣ) ಆರು ಅಪರಾಧಿಗಳಿಗೆ ಇಪ್ಪತ್ತು ವರ್ಷಗಳ ಕಠಿಣ ಜೈಲು ಶಿಕ್ಷೆ ವಿಧಿಸಿ ಶುಕ್ರವಾರ (ಡಿಸೆಂಬರ್ 12) ಕೇರಳ ನ್ಯಾಯಾಲಯ ಆದೇಶಿಸಿದೆ. ಡಿಸೆಂಬರ್...